Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು - Vistara News

ಯಾದಗಿರಿ

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

Drowned in Water : ಪ್ರತ್ಯೇಕ ಕಡೆಗಳಲ್ಲಿ ಬಾಲಕರಿಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕನೊಬ್ಬ ಬಲಿಯಾದರೆ, ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೊಬ್ಬ ಬಾಲಕ ಅಸುನೀಗಿದ್ದಾನೆ.

VISTARANEWS.COM


on

Drowned in water
ಮೃತ ದುರ್ದೈವಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ (Drowned in Water) ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.

ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್‌ ಮೃತದುರ್ದೈವಿ.

ವಸಂತ್‌ ನೀರು ಕುಡಿಯಲು ಕೃಷಿ ಹೊಂಡಕ್ಕೆ‌ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ‌ ಪೊಲೀಸ್ ಠಾಣೆಯಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಚೆನ್ನೈ : ಮಹಿಳೆಯೊಬ್ಬಳನ್ನು ಎಮ್ಮೆಯೊಂದು ರಸ್ತೆಯುದ್ದಕ್ಕೂ 500 ಮೀಗಳಷ್ಟು ದೂರ ತಿವಿದುಕೊಂಡು ಹೋಗಿ ಗಂಭೀರವಾಗಿ ಗಾಯಗೊಳಿಸಿದ ಆಘಾತಕಾರಿ ಘಟನೆ ಚೆನ್ನೈನ ತಿರುವೊಟ್ರಿಯೂರ್‌ನಲ್ಲಿ ನಡೆದಿದೆ. ಈ ಘಟನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಇದೀಗ ಸಿಕ್ಕಾಪಟ್ಟೆ ವೈರಲ್ (Video Viral) ಆಗಿದೆ.

ವಿಡಿಯೊದಲ್ಲಿ ಮಹಿಳೆಯನ್ನು ಎಮ್ಮೆ ಎಳೆದುಕೊಂಡು ಹೋಗುತ್ತಿದ್ದು, ಅನೇಕರು ಮಹಿಳೆಗೆ ಸಹಾಯ ಮಾಡಲು ಅದರ ಹಿಂದೆ ಓಡಿ ಬರುತ್ತಿರುವ ದೃಶ್ಯ ಕಂಡುಬಂದಿದೆ. ಭಾನುವಾರ ಮಧ್ಯಾಹ್ನದ ವೇಳೆ 35 ವರ್ಷದ ಈ ಮಹಿಳೆ ಗ್ರಾಮದ ಕಿರಿದಾದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಎದುರು ಬದಿಯಿಂದ ಓಡಿ ಬರುತ್ತಿರುವ ಎಮ್ಮೆ ಆಕೆಯನ್ನು ತಿವಿದಿದೆ. ಆಗ ಎಮ್ಮೆಯ ಕೊಂಬಿಗೆ ಮಹಿಳೆಯ ಉಡುಪು ಸಿಕ್ಕಿಹಾಕಿಕೊಂಡಿದ್ದ ಪರಿಣಾಮ ಬೀದಿಯಲ್ಲಿ 500 ಮೀಗಳಷ್ಟು ದೂರ ಅದು ಎಳೆದುಕೊಂಡು ಹೋಗಿದೆ. ಕೊನೆಗೆ ಸ್ಥಳೀಯರು ಎಮ್ಮೆಯಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಹಾಗೇ ಆಕೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ ಮತ್ತು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಹಿಳೆಯನ್ನು ಎಮ್ಮೆಯಿಂದ ಬಿಡಿಸಿದ ನಂತರ ಆ ಎಮ್ಮೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಸಿಕ್ಕ ಸಿಕ್ಕ ವಾಹನಗಳನ್ನು ಕೆಡವಿದೆ. ಹಾಗಾಗಿ ಎಮ್ಮೆಯನ್ನು ಸೆರೆ ಹಿಡಿಯಲು ಗ್ರೇಟರ್ ಚೆನ್ನೈ ಕಾರ್ಪೋರೇಷನ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅದನ್ನು ಹಿಡಿದು, ಪುಲಿಯಂಥೋಪ್‌ನಲ್ಲಿರುವ ಗ್ರೇಟರ್ ಚೆನ್ನೈ ಕಾರ್ಪೋರೇಷನ್‌ ಆಶ್ರಯಕ್ಕೆ ಕರೆದೊಯ್ಯಲಾಯಿತು ಎಂಬುದಾಗಿ ತಿಳಿದುಬಂದಿದೆ.

ಈ ವರ್ಷದ ಕಾರ್ಪೋರೇಷನ್ ಬಜೆಟ್ ಮಂಡನೆಯ ವೇಳೆ ಮೇಯರ್ ಆರ್. ಪ್ರಿಯಾ ಅವರು ನಗರದಾದ್ಯಂತ ಹಸುಗಳಿಗೆ ಪರವಾನಗಿ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚುವರಿ ಆಶ್ರಯಗಳ ಸ್ಥಾಪನೆಯ ಯೋಜನೆ ಜಾರಿಗೊಳಿಸಿದ್ದರು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದ ಈ ಎರಡೂ ಯೋಜನೆಗಳಿಗೆ ಕೆಲಸ ಪ್ರಾರಂಭಿಸಲು ಸಾಧ್ಯವಾಗಿಲ್ಲ ಎಂಬುದಾಗಿ ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Karnataka Rain : ಮುಂಗಾರು ಮಳೆ ಅಬ್ಬರಕ್ಕೆ ಹಲವೆಡೆ ಅನಾಹುತಗಳು ಮುಂದುವರಿದಿದ್ದು, ಮೈಸೂರಿನಲ್ಲಿ ಮಳೆಗೆ ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ವೃದ್ಧರೊಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

VISTARANEWS.COM


on

By

karnataka Rain
Koo

ಮೈಸೂರು: ಮೈಸೂರಿನಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಎರಡು ಮನೆಗಳ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯೊಳಗೆ ಇದ್ದ ವೃದ್ಧ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೈಸೂರು ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗೋಪಾಲಪುರ ಗ್ರಾಮದ ದೇವಮ್ಮ ಮತ್ತು ಸಣ್ಣ ತಾಯಮ್ಮ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದೆ. ಇದೇ ಗ್ರಾಮದ ರಾಜೇಗೌಡ ಎಂಬುವರ ಮನೆ ಗೋಡೆ ಕೂಡ ಕುಸಿದಿದೆ. ಮನೆ ಗೋಡೆ ಕುಸಿಯುವಾಗ ಒಳಗೆ ಇದ್ದ ರಾಜೇಗೌಡ ಅವರು ಚಾವಣಿ ಅಡಿಯಲ್ಲಿ ಸಿಲುಕಿದ್ದರು. ಸಣ್ಣಪುಟ್ಟ ಗಾಯಗಳಷ್ಟೇ ಆಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮತ್ತು ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಬಿನಿ ಜಲಾಶಯ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ

ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ ಕೇವಲ 9 ಅಡಿಗಳು ಮಾತ್ರ ಬಾಕಿ ಇವೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ತಗ್ಗಿದ್ದು, ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಆಗಿದೆ.

ಸಮುದ್ರ ಮಟ್ಟದಿಂದ 2,284 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 2275.06 ಅಡಿಗಳು ಇದೆ. ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ, ಸದ್ಯ 14.30 ಟಿಎಂಸಿ ನೀರಿದೆ. ಜಲಾಶಯದ ಇಂದಿನ ಒಳಹರಿವು 17873 ಕ್ಯೂಸೆಕ್, ಹೊರಹರಿವು 2000 ಕ್ಯೂಸೆಕ್ ಇದೆ. ಕಬಿನಿ ಜಲಾಶಯ ಸಂಪೂರ್ಣ ಭರ್ತಿಗೆ 9 ಅಡಿಗಳು ಮಾತ್ರ ಬಾಕಿ ಇವೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಯಲ್ಲಿ ವಾಹನ ಓಡಾಟ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಶಿಥಿಲಗೊಂಡಿದೆ. ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿತ್ತು. ಹೀಗಾಗಿ ಶಿಥಿಲಗೊಂಡಿರುವ ಚೆಲ್ಯಡ್ಯ ಸೇತುವೆಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಭೇಟಿ ನೀಡಿದರು. ಸೇತುವೆಯ ಪರಿಸ್ಥಿಯನ್ನು ಗಮನಿಸಿ ಸ್ಥಳೀಯರಲ್ಲಿ ಮಾಹಿತಿ ಪಡೆದುಕೊಂಡರು.

ಸೇತುವೆ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಚೆಲ್ಯಡ್ಕ ಸೇತುವೆಯಲ್ಲಿ ಘನವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಉಳಿದಂತೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 8 ರಿಂದ ಬೆಳಗ್ಗೆ 6ರ ವರೆಗೆ ಸಂಪೂರ್ಣ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಳಗಿನ ಅವಧಿಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಅಂದರು. ಇನ್ನೂ ಮಳೆಗಾಲ ಮುಗಿದ ಬಳಿಕ ಸೇತುವೆಯ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ ಎಂದು ಮಾಹಿತಿ ನೀಡಿದರು, ಜಿಲ್ಲಾಧಿಕಾರಿಗೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ,ತಹಶೀಲ್ದಾರ್ ಪುರಂದರ ಹೆಗ್ಡೆ ಸಾಥ್ ನೀಡಿದ್ದರು.

ಕಾರವಾರದಲ್ಲಿ ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ. ಗುಲಾಬಿ ರಾಮಚಂದ್ರ ಮಾಂಜ್ರೇಕರ್ (70) ಮೃತ ದುರ್ದೈವಿ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ನೆನ್ನೆ ಮಧ್ಯಾಹ್ನ ಮನೆಯ ಪಕ್ಕದ ಹಳೆಯ ಕಟ್ಟಡದ ಬಳಿ ತೆರಳಿದ್ದಾಗ ಮೈಮೇಲೆ ಗೋಡೆ ಕುಸಿದಿದೆ. ಗೋಡೆಯ ಅವಶೇಷಗಳಡಿ ವೃದ್ಧೆ ಮುಚ್ಚಿಹೋಗಿದ್ದರಂದ ಇಂದು ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತಹಸೀಲ್ದಾರ್ ನಿಶ್ಚಲ ನೊರೋನ್ಹಾ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Opposition party leader r ashok latest statement in chikkaballapur
ಕರ್ನಾಟಕ55 seconds ago

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

Video conference meeting with Tehsildars by DC Gangubai Manakar
ಉತ್ತರ ಕನ್ನಡ2 mins ago

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

VSK Media Awards 2024 Programme in Bengaluru on June 30
ಕರ್ನಾಟಕ3 mins ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ19 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ20 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ24 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ29 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ55 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest60 mins ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Chinnamma song from Krishnam Pranaya Sakhi is at 3rd position in All India YouTube trending list
ಕರ್ನಾಟಕ1 hour ago

Kannada New Movie: “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ 3ನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌