Murder case: 3 ವರ್ಷಗಳ ಹಿಂದಿನ ಉದ್ಯಮಿ ಕೊಲೆಗೆ ಟ್ವಿಸ್ಟ್‌; ಕೊಲೆ ಮಾಡಿಸಿದವಳೇ ಹೆಂಡತಿ! - Vistara News

Latest

Murder case: 3 ವರ್ಷಗಳ ಹಿಂದಿನ ಉದ್ಯಮಿ ಕೊಲೆಗೆ ಟ್ವಿಸ್ಟ್‌; ಕೊಲೆ ಮಾಡಿಸಿದವಳೇ ಹೆಂಡತಿ!

Murder case: ಅನೈತಿಕ ಸಂಬಂಧ ತಪ್ಪು ಎನ್ನುವುದು ಗೊತ್ತಿದ್ದೂ ಮತ್ತೆ ಮತ್ತೆ ಅದೇ ಕೆಲಸಕ್ಕೆ ಮುಂದಾಗುತ್ತಾರೆ. ಇನ್ನು ತಾವು ಮಾಡುತ್ತಿರುವ ತಪ್ಪು ಇತರರಿಗೆ ಗೊತ್ತಾದ ತಕ್ಷಣ ತಮ್ಮ ಜೊತೆ ಜೀವನ ಹಂಚಿಕೊಂಡವರ ಪ್ರಾಣವನ್ನು ತೆಗೆಯುವುದಕ್ಕೂ ಹಿಂದು ಮುಂದು ನೋಡಲ್ಲ. ಇಂತಹ ಘಟನೆ ಸಮಾಜದಲ್ಲಿ ದಿನ ನಿತ್ಯ ನಡೆಯುತ್ತಲೇ ಇರುತ್ತದೆ. ಹೆಂಡತಿಯೊಬ್ಬಳು ಜಿಮ್ ಟ್ರೈನರ್ ಬಲೆಗೆ ಬಿದ್ದು ಗಂಡನ ಜೀವಕ್ಕೆ ಕುತ್ತು ತಂದ ಘಟನೆ ನಡೆದಿದೆ. ಮೂರು ವರ್ಷದ ಬಳಿಕ ಈ ಕೊಲೆಯ ಸಂಚು ಬಯಲಾಗಿದೆ.

VISTARANEWS.COM


on

Murder case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಿಮ್ ಟ್ರೈನರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಸಂಚು ರೂಪಿಸಿ ತನ್ನ ಪತಿಯನ್ನೇ ಕೊಲೆ(Murder case) ಮಾಡಿದ ಘಟನೆಯ ಹಿಂದಿನ ಕತೆ ಕುತೂಹಲಕರವಾಗಿದೆ. ಮೂರು ವರ್ಷಗಳ ಹಿಂದೆ ಹರಿಯಾಣದ ಪಾಣಿಪತ್‌ನಲ್ಲಿ ಕೊಲೆ ನಡೆದಿತ್ತು. ಇದೀಗ ಈ ಘಟನೆಯ ಸತ್ಯಾಂಶ ಬೆಳಕಿಗೆ ಬಂದಿದೆ.

ಹರಿಯಾಣದಲ್ಲಿ ಪಾಣಿಪತ್‌ನಲ್ಲಿ ಡಿಸೆಂಬರ್ 15, 2021ರಂದು ಉದ್ಯಮಿಯೊಬ್ಬರನ್ನು ಅವರ ಮನೆಯಲ್ಲಿಯೇ ಗುಂಡಿಕ್ಕಿ ಕೊಲ್ಲಲಾಗಿತ್ತು. ವಿನೋದ್ ಭರಾರ ಕೊಲೆಯಾದ ವ್ಯಕ್ತಿ, ಶೂಟ್ ಮಾಡಿದ ಟ್ರಕ್ ಚಾಲಕ ದೇವ್ ಸುನರ್ ಎನ್ನಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದರು. ಆರೋಪಿ ಕೂಡ ಜೈಲಿನಲ್ಲಿದ್ದ. ಆದರೆ ಇದೀಗ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸಾಪ್ ಸಂದೇಶವೊಂದು ಬಂದಿದ್ದು, ವಿನೋದ್ ಅವರಿಗೆ ಬಹಳ ಹತ್ತಿರದಲ್ಲಿ ಸಂಬಂಧವಿರುವ ವ್ಯಕ್ತಿ ಅವರ ಕೊಲೆಗೆ ಸಂಚು ರೂಪಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ಮಾಡುವಂತೆ ಮನವಿ ಮಾಡಲಾಗಿತ್ತು. ಪೊಲೀಸರು ಈ ಸಂದೇಶದ ಬಗ್ಗೆ ಮಾಹಿತಿ ಕಲೆಹಾಕಿದಾಗ ಈ ಸಂದೇಶ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ವಿನೋದ್ ಅವರ ಸಹೋದರ ಪ್ರಮೋದ್ ಎಂಬಾತ ಕಳುಹಿಸಿರುವುದಾಗಿ ತಿಳಿದು ಬಂತು.

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಪ್ರಕರಣದ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಇನ್ವೆಸ್ಟಿಗೇಶನ್ ಏಜೆನ್ಸಿಗೆ ಈ ಪ್ರಕರಣದ ತನಿಖೆಯನ್ನು ವಹಿಸಲಾಯಿತು. ಆಗ ತನಿಖೆಯ ವೇಳೆ, ಕೊಲೆ ಮಾಡಿದ ಆರೋಪಿ ದೇವ್ ಸುನರ್‌ಗೂ ಕೊಲೆಯಾದ ವಿನೋದ್ ಅವರಿಗೂ ಯಾವುದೇ ಸಂಬಂಧವಿರಲಿಲ್ಲ. ಆದರೆ ಆರೋಪಿ ದೇವ್, ಜಿಮ್ ಟ್ರೈನರ್ ಸುಮಿತ್ ಎಂಬಾತನಿಗೆ ಹತ್ತಿರದವನಾಗಿದ್ದ. ವಿನೋದ್ ಭರಾರ ಅವರ ಪತ್ನಿ ನಿಧಿ, ಜಿಮ್ ಟ್ರೈನರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ತನಿಖೆಯ ವೇಳೆ ತಿಳಿದುಬಂತು.

ಈ ಬಗ್ಗೆ ವಿಚಾರಣೆ ನಡೆಸಿದಾಗ ನಿಧಿ ಅವರು ತಮ್ಮ ಮಗಳ ಜೊತೆ ಆಗಾಗ ಜಿಮ್‌ಗೆ ಭೇಟಿ ನೀಡುತ್ತಿದ್ದರು. ಅಲ್ಲಿ ಜಿಮ್ ಟ್ರೈನರ್ ಸುಮಿತ್‌ನನ್ನು ಭೇಟಿಯಾದ ನಿಧಿ ಆತನೊಂದಿಗೆ ಸಲುಗೆ ಬೆಳೆದು ಸಂಬಂಧದಲ್ಲಿದ್ದರು. ಈ ವಿಚಾರ ತಿಳಿದ ವಿನೋದ್ ಅವರು ಆತನಿಂದ ದೂರವಿರುವಂತೆ ಆಗಾಗ ಮನೆಯಲ್ಲಿ ಜಗಳ ಮಾಡುತ್ತಿದ್ದರು. ಹೀಗಾಗಿ ನಿಧಿ ಮತ್ತು ಸುಮಿತ್ ಸೇರಿ ವಿನೋದ್ ಅವರ ಕೊಲೆಗೆ ಸಂಚು ರೂಪಿಸಿದರು.

ಅದಕ್ಕಾಗಿ ಸುಮಿತ್ ಪಂಜಾಬ್‌ನ ಟ್ರಕ್ ಚಾಲಕ ದೇವ್ ಸುನಾರ್‌ನನ್ನು ಈ ಕೆಲಸಕ್ಕೆ ಸಂಪರ್ಕಿಸಿ ಆತನಿಗೆ 10 ಲಕ್ಷ ರೂ. ನೀಡಿ ಜನವರಿ 2, 2021ರಂದು ದೇವ್ ವಿನೋದ್ ಅವರ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಆದರೆ ಈ ಅಪಘಾತದಲ್ಲಿ ವಿನೋದ್ ಗಂಭೀರವಾಗಿ ಗಾಯಗೊಂಡರೂ ಬದುಕುಳಿದಿದ್ದರು. ದೇವ್ ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ವಿನೋದ್ ಮನೆಗೆ ಭೇಟಿ ನೀಡಿದ್ದಾನೆ. ಆಗ ವಿನೋದ್ ಇದಕ್ಕೆ ಒಪ್ಪದಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಮೊದಲು ಕತೆ ಕಟ್ಟಲಾಗಿತ್ತು. ಆದರೆ ಆಳವಾದ ತನಿಖೆ ನಡೆಸಿದಾಗ ಇದು ಕಟ್ಟು ಕತೆ. ದೇವ್‌ ಅಪಘಾತ ಮಾಡಿ ಉದ್ಯಮಿಯನ್ನು ಆಕ್ಸಿಡೆಂಟ್‌ ಮಾಡಿ ಕೊಲ್ಲಲು ಯತ್ನಿಸಿದ್ದ. ಅದು ವಿಫಲವಾದಾಗ ಗುಂಡಿಕ್ಕಿ ಕೊಂದ ಎನ್ನುವುದು ಖಚಿತವಾಯಿತು.

ಇದನ್ನೂ ಓದಿ:Pakistan Begger: ಪಾಕಿಸ್ತಾನವೇ ಒಂದು ಭಿಕ್ಷುಕ ದೇಶ! ಆದರೆ ಅಲ್ಲಿಯ ಈ ಭಿಕ್ಷುಕ ಎಷ್ಟು ಶ್ರೀಮಂತ ನೋಡಿ!

ಪತಿ ಕೊಲೆಯಾದ ಬಳಿಕ ನಿಧಿ ಮಕ್ಕಳನ್ನು ಆಸ್ಟ್ರೇಲಿಯಾದಲ್ಲಿರುವ ವಿನೋದ್ ಸಹೋದರ ಪ್ರಮೋದ್ ಬಳಿಗೆ ಕಳುಹಿಸಿ ಸುಮಿತ್ ಜೊತೆ ಸುತ್ತಾಡಲು ಶುರು ಮಾಡಿದ್ದಳು. ಇದೀಗ ಇವರಿಬ್ಬರು ತಮ್ಮ ತಪ್ಪನ್ನು ಒಪ್ಪಿಕೊಂಡು ಜೈಲು ಪಾಲಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಕೇರಳದಲ್ಲಿ ಸರ್ಕಾರಿ (Kerala Govt) ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮುಸ್ಲಿಂ ಮತ್ತು ಕ್ರಿಶ್ಚಿಯನರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಸರ್ಕಾರಿ ಉದ್ಯೋಗಿಗಳಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಮಾತ್ರ ಕೆಲಸ ಮಾಡುತ್ತಿರುವ ಸಂಗತಿ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ.

VISTARANEWS.COM


on

By

Kerala govt
Koo

ಕೇರಳ ಸರ್ಕಾರದ (Kerala Govt) ಪ್ರತಿ ಮೂರು ಸರ್ಕಾರಿ ಉದ್ಯೋಗಿಗಳಲ್ಲಿ ಒಬ್ಬ (government employee) ಮುಸ್ಲಿಂ (Muslim) ಅಥವಾ ಕ್ರಿಶ್ಚಿಯನ್ (Christian) ಆಗಿದ್ದಾರೆ. ಈ ರಾಜ್ಯದಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂಬುದನ್ನು ಒಪಿಂಡಿಯಾ ಡೇಟಾ ಬಹಿರಂಗಪಡಿಸಿದೆ.

ಕೇರಳ ವಿಧಾನಸಭೆಯಲ್ಲಿ (kerala vidhansabha) ಮಂಡಿಸಲಾದ ಈ ಅಂಕಿ ಅಂಶವು ರಾಜ್ಯದಲ್ಲಿ ಪ್ರಸ್ತುತ 5,45,423 ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 73,774 ಮುಸ್ಲಿಮರಾಗಿದ್ದಾರೆ. ಇದು ರಾಜ್ಯದ ಎಲ್ಲ ಸರ್ಕಾರಿ ನೌಕರರಲ್ಲಿ ಶೇ. 13.5ರಷ್ಟಿದೆ ಎಂದು ಡೇಟಾ ಬಹಿರಂಗಪಡಿಸಿದೆ.

ರಾಜ್ಯ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಕ್ರಿಶ್ಚಿಯನ್‌ ನೌಕರರಿದ್ದಾರೆ. ಲ್ಯಾಟಿನ್ ಚರ್ಚ್‌ನ ಸದಸ್ಯರಾಗಿರುವ 22,452 ಕಾರ್ಮಿಕರು ಕೇರಳ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. 2,399 ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 929 ಕಾರ್ಮಿಕರನ್ನು ನಾಡಾರ್ ಕ್ರಿಶ್ಚಿಯನ್ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಎಲ್ಲಾ ಕ್ರಿಶ್ಚಿಯನ್ ಸಮುದಾಯಗಳ ಸಂಖ್ಯೆ 99,494. ಅವರ ಶೇಕಡಾವಾರು ಪ್ರಮಾಣವು ಶೇ. 18.25 ರಷ್ಟಾಗಿದೆ. ಅಂದರೆ ಈ ಸಂಖ್ಯೆ ಮುಸ್ಲಿಮರಿಗಿಂತ ಹೆಚ್ಚು.


ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸುಮಾರು ಮೂರನೇ ಒಂದು ಭಾಗದಷ್ಟು ರಾಜ್ಯ ಕಾರ್ಮಿಕರನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading

ದೇಶ

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

Stampede Tips and Tricks: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂಥ ಕಾಲ್ತುಳಿತ ಉಂಟಾದಾಗ ನಮ್ಮನ್ನು ನಾನು ರಕ್ಷಿಸಿಕೊಳ್ಳುವುದು ಹೇಗೆ? ಪ್ರಾಣಾಪಾಯದಿಂದ ಪಾರಾಗುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ.

VISTARANEWS.COM


on

By

Stampede Tips and Tricks
Koo

ಹತ್ರಾಸ್‌ನಲ್ಲಿ (Hathras) ಇತ್ತೀಚೆಗೆ (Stampede Tips and Tricks) ಬಾಬಾ ಭೋಲೆ (Baba Bhole) ಅವರ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 121 ಮಂದಿ ಸಾವನ್ನಪ್ಪಿದ್ದು, 31 ಮಂದಿ ಗಾಯಗೊಂಡಿದ್ದರು. ಇಂತಹ ಕಾಲ್ತುಳಿತ ಸಂದರ್ಭಗಳಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬಹುದು ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ (Viral Video) ಶೇರ್‌ ಆಗುತ್ತಿದೆ.

ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ (satsang) ಮುಖ್ಯ ಭಾಷಣಕಾರರಾಗಿ ಭೋಲೆ ಬಾಬಾ ಆಗಮಿಸಿದ್ದರು. ಭೋಲೆ ಬಾಬಾ ಅವರು ಅವರು ಅಲ್ಲಿಗೆ ಆಗಮಿಸಿದಾಗ ಭಕ್ತರು ಆ ಪ್ರದೇಶದ ಮಣ್ಣನ್ನು ಸಂಗ್ರಹಿಸಲು ಪ್ರಾರಂಭಿಸಲು ತೊಡಗಿದಾಗ ಕಾಲ್ತುಳಿತ ಉಂಟಾಗಿತ್ತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಜನರು ಕಾಲ್ತುಳಿತದಿಂದ ಹೇಗೆ ಬದುಕಬಹುದು ಎಂಬುದನ್ನು ವಿವರಿಸಲು ತಜ್ಞರು ಸ್ವಯಂಸೇವಕರ ಗುಂಪಿನ ಸಹಾಯವನ್ನು ಬಳಸಿದ್ದಾರೆ.
ಜನರು ಕಾಲ್ತುಳಿತದಲ್ಲಿ ಹೇಗೆ ಸಿಲುಕಿಕೊಂಡರು ಎಂಬುದನ್ನು ಪ್ರದರ್ಶಿಸುವ ದೃಶ್ಯವೂ ಇದರಲ್ಲಿದೆ. ಇದಲ್ಲದೆ ಇಂತಹ ಸಂದರ್ಭಗಳು ಜನಸಮೂಹದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನೂ ವಿವರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಜನರು ಎಂದಾದರೂ ಇಂತಹ ಪರಿಸ್ಥಿತಿಯಲ್ಲಿ ಸಿಲುಕಿಕೊಂಡರೆ ಬದುಕುಳಿಯಬಹುದು ಎಂಬುದನ್ನು ತಜ್ಞರು ವಿವರಿಸಿದ್ದಾರೆ. ಇದಕ್ಕಾಗಿ ಪರಿಣಿತರು ಸಹಾಯಕವಾದ ಸಲಹೆಗಳು ಮತ್ತು ಭಂಗಿಗಳನ್ನು ಹೇಳಿದ್ದಾರೆ. ಇಂಥ ಕಾಲ್ತುಳಿತ ಸಂದರ್ಭದಲ್ಲಿ ಅಡ್ಡಲಾಗಿ ಮಲಗುವ ಮೂಲಕ ಮತ್ತು ಎರಡೂ ಕೈಗಳಿಂದ ತಲೆ ಮತ್ತು ಮುಖವನ್ನು ರಕ್ಷಿಸಿಕೊಳ್ಳುವ ಮೂಲಕ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ವಿಡಿಯೊದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಗಿದೆ.

ಕಾಲ್ತುಳಿತದಲ್ಲಿ ಸಿಲುಕಿಕೊಳ್ಳುವ ಜನರು ವಿವಿಧ ಕಡೆಯಿಂದ ಒಂದೇ ಬಾರಿಗೆ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಆಗ ಉಸಿರು ಕಟ್ಟುತ್ತದೆ. ಪಕ್ಕೆಲುಬುಗಳು, ಹೃದಯ ಮತ್ತು ಪ್ರಮುಖ ಅಂಗಗಳಿಗೆ ಹಾನಿಯುಂಟಾಗುತ್ತದೆ. ಈ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುವ ಭಂಗಿಯನ್ನು ತಜ್ಞರು ವಿವರಿಸಿದ್ದಾರೆ.

ಹತ್ರಾಸ್‌ನಲ್ಲಿ ಏನಾಗಿತ್ತು?

ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನ್‌ಪುರ್ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಲಕ್ಷಾಂತರ ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿತ್ತು. ಧಾರ್ಮಿಕ ಸಭೆ ಮುಗಿದ ಅನಂತರ ಕಾಲ್ತುಳಿತ ಉಂಟಾಗಿತ್ತು.


ಘಟನೆಯ ಬಳಿಕ ಸ್ವಯಂ ಘೋಷಿತ ಬೋಧಕ ಬಾಬಾ ನಾರಾಯಣ ಹರಿ ಅಲಿಯಾಸ್ ಸಾಕರ್ ವಿಶ್ವ ಹರಿ ‘ಭೋಲೆ ಬಾಬಾ’ ಅವರು ಬೆಂಗಾವಲು ಪಡೆಯೊಂದಿಗೆ ಗ್ರಾಮವನ್ನು ತೊರೆದಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ‘ಸೇವಕ್’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಪಡೆ ವಾಹನ ರಸ್ತೆ ದಾಟುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿದ್ದರು.

ಈ ಕುರಿತು ಮಾಹಿತಿ ನೀಡಿರುವ ಪ್ರತ್ಯಕ್ಷದರ್ಶಿ ಗೋಪಾಲ್ ಕುಮಾರ್, ಬಾಬಾ ಅವರು ಬೈಪಾಸ್ ಮಾಡುವ ಮೂಲಕ ಗೊತ್ತುಪಡಿಸಿದ ಮಾರ್ಗದಿಂದ ಆಗಮಿಸಿ, ನಿರ್ಗಮಿಸಿದರು. ಅವರ ಸುತ್ತಲೂ ವಾಹನಗಳಿದ್ದವು ಮತ್ತು ಹೆದ್ದಾರಿಯ ಒಂದು ಭಾಗವು ಭಕ್ತರು ಮತ್ತು ವಾಹನಗಳಿಂದ ತುಂಬಿ ಬಹುತೇಕ ಜಾಮ್ ಆಗಿತ್ತು ಎಂದು ಹೇಳಿದರು.

ಬಾಬಾ ಅವರ ವಾಹನವು ಹೆದ್ದಾರಿಯನ್ನು ತಲುಪುತ್ತಿದ್ದಂತೆ ನೂರಾರು ಭಕ್ತರು ಅವರ ಪಾದದ ಅಡಿಯ ಮಣ್ಣು ಪಡೆಯಲು ಅವರ ಕಾರಿನ ಕಡೆಗೆ ಧಾವಿಸಿದರು. ಇದರಲ್ಲಿ ಕೆಲವರು ಬಿದ್ದರು. ಬೃಹತ್ ಜನಸಮೂಹವು ಹೆದ್ದಾರಿಯತ್ತ ಧಾವಿಸಿದ್ದು, ಬಿದ್ದವರಲ್ಲಿ ಕೆಲವರಿಗೆ ಮೇಲಕ್ಕೆ ಎಳಲೂ ಸಾಧ್ಯವಾಗಲಿಲ್ಲ. ಇದು ಕಾಲ್ತುಳಿತಕ್ಕೆ ಕಾರಣವಾಯಿತು. ಅವರಲ್ಲಿ ಕೆಲವರು ಸತ್ತರು ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶ ಪೊಲೀಸರು ಆರು ಜನರು ಸೇರಿ ಎಲ್ಲಾ ಸೇವಾದಾರರನ್ನು ಬಂಧಿಸಿದ್ದರೆ ಎಂದು ತಿಳಿಸಿದರು.

ಪ್ರಮುಖ ಆರೋಪಿ ಪ್ರಕಾಶ್ ಮಧುಕರ್ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ಪೊಲೀಸರು ಬಂಧಿಸಿದ್ದಾರೆ. ಭೋಲೆ ಬಾಬಾ ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕೇಳದ ಕಾರಣ ಎಫ್‌ಐಆರ್‌ನಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಐಜಿ (ಅಲಿಗಢ ರೇಂಜ್) ಶಲಭ್ ಮಾಥುರ್ ತಿಳಿಸಿದ್ದಾರೆ.

Continue Reading

Latest

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Viral Video: ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಅವರು ನಟಿಸಿದ ʼRRR’ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ”ಗೆ ಯುವಕನೊಬ್ಬ ಹುಚ್ಚೆದ್ದು ಡ್ಯಾನ್ಸ್‌ ಮಾಡಿದ್ದಾನೆ. ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ, ಇನ್ನು ಕೆಲವರಿಗೆ ಇದರಿಂದ ಕಿರಿಕಿರಿಯಾಗಿದೆ. ಈ ವಿಡಿಯೊ ಇರುವ ಪೋಸ್ಟ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ಕೆಲವರಿಗೆ ಡ್ಯಾನ್ಸ್‌ ಎಂದರೆ ವಿಪರೀತ ಮೋಹವಿರುತ್ತದೆ. ಹಾಡು ಕಿವಿಗೆ ಬಿದ್ದಾಕ್ಷಣ ಕಾಲು ಕೂಡ ನಿಲ್ಲಲ್ಲ. ಈಗಂತೂ ಸಾರ್ವಜನಿಕ ಸ್ಥಳವೆಂದೂ ನೋಡದೇ ಕುಣಿಯುವುದಕ್ಕೆ ಶುರು ಮಾಡುತ್ತಾರೆ. ಇಲ್ಲೊಬ್ಬ ವ್ಯಕ್ತಿ ಹಾಡೊಂದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಹುಚ್ಚೆದ್ದು ಕುಣಿದಿದ್ದು, ಅವರ ಡ್ಯಾನ್ಸ್ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಸಚಿನ್ ಎಂಬ ವ್ಯಕ್ತಿ ಬ್ಲೂ ಲೈನ್ ದೆಹಲಿ ಮೆಟ್ರೋದಲ್ಲಿ ನಟರಾದ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್‌ ಅವರು ನಟಿಸಿದ ‘ಆರ್‌ಆರ್‌ಆರ್’ ಚಿತ್ರದ ಜನಪ್ರಿಯ ಹಾಡಾದ “ನಾಚೋ ನಾಚೋ” ಗೆ ಉತ್ಸಾಹದಿಂದ ಡ್ಯಾನ್ಸ್ ಮಾಡಿದ್ದಾನೆ.

ಅವನ ಈ ಡ್ಯಾನ್ಸ್ ಕೆಲವು ಪ್ರಯಾಣಿಕರಿಗೆ ಮನೋರಂಜನೆ ನೀಡಿದರೆ ಕೆಲವರಿಗೆ ಇದರಿಂದ ಅಡ್ಡಿಯಾಗಿದೆ ಎನ್ನಲಾಗಿದೆ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಆಗಿದ್ದು, ವೈರಲ್ ಆಗಿದೆ. ಈ ವೈರಲ್ ವಿಡಿಯೊದಲ್ಲಿ ಸಚಿನ್ ಮೆಟ್ರೋ ರೈಲಿನಲ್ಲಿ ಮಧ್ಯದಲ್ಲಿ ನಿಂತು ಹಾಡಿಗೆ ಉತ್ಸಾಹದಿಂದ ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿರುವುದನ್ನು ಮೊದಲು ಕಾಣಿಸುತ್ತದೆ. ನಂತರ ಇಂದ್ರಪ್ರಸ್ಥ ನಿಲ್ದಾಣದಲ್ಲಿ ಮೆಟ್ರೋ ನಿಂತು ಬಾಗಿಲು ತೆರೆಯುತ್ತಿದ್ದಂತೆ, ಅವನು ಪ್ಲಾಟ್‍ಫಾರ್ಮ್ ನಿಂದ ಹೊರಗೆ ಓಡಿ ಕುಳಿದು ಮತ್ತೆ ಬೋಗಿಗೆ ಪ್ರವೇಶಿಸಿ ಡ್ಯಾನ್ಸ್ ಮಾಡುತ್ತಾನೆ. ನಂತರ ಅವನು ಜಿಗಿದು ತನ್ನ ಡ್ಯಾನ್ಸ್ ಅನ್ನು ಹಂತ ಹಂತವಾಗಿ ಮುಂದುವರಿಸುತ್ತಾನೆ, ಇದು ಅವನ ಸ್ನೇಹಿತರು ಮತ್ತು ಸಹ ಪ್ರಯಾಣಿಕರಿಗೆ ಆಶ್ಚರ್ಯ ಮತ್ತು ಮನರಂಜನೆಯನ್ನು ನೀಡುತ್ತದೆ. ಕೆಲವರು ಈ ಡ್ಯಾನ್ಸ್ ನೋಡಿ ಸುಮ್ಮನಿದ್ದರೆ ಕೆಲವರ ಮುಖದಲ್ಲಿ ನಗು ಮೂಡಿದೆ ಎನ್ನಲಾಗಿದೆ.

ಈ ಪೋಸ್ಟ್ ಕೆಲವು ದಿನಗಳ ಹಿಂದೆ ಹಂಚಿಕೊಳ್ಳಲಾಗಿದ್ದು, ಇದಕ್ಕೆ 13.8 ಮಿಲಿಯನ್ ವೀವ್ಸ್ ಹಾಗೂ ಒಂದು ಮಿಲಿಯನ್ ಲೈಕ್ಸ್ ಬಂದಿದೆ. ಸಚಿನ್ ಡ್ಯಾನ್ಸ್‌ಗೆ ಹಲವು ನೆಟ್ಟಿಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿನ್ ಅವರ ಈ ಕೃತ್ಯಕ್ಕೆ ಜನರು ನಿರಾಶೆಗೊಂಡಿದ್ದಾರೆ.

ಈ ಹಿಂದೆ ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬಳು ಡ್ಯಾನ್ಸ್ ಮಾಡಿದ್ದು, ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಆಗಿದೆ. ವಿಡಿಯೋದಲ್ಲಿ ಆಕೆ ಕಪ್ಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಳು.

ಇದನ್ನೂ ಓದಿ: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

Viral Video

ಅವಳು ವಿಮಾನದ ಮಧ್ಯದಲ್ಲಿ ನಿಂತು ಡ್ಯಾನ್ಸ್‌ ಮಾಡಿದ್ದಳು. ಈಕೆಯ ಡ್ಯಾನ್ಸ್‌ ನೋಡಿ ಇತರ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದರು.

Continue Reading
Advertisement
Mahindra Marazzo
ಪ್ರಮುಖ ಸುದ್ದಿ5 mins ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ31 mins ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ44 mins ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ50 mins ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ1 hour ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ1 hour ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್1 hour ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ1 hour ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ2 hours ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು2 hours ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ6 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ8 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ10 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು11 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು11 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ16 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌