Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..! - Vistara News

ಸ್ಯಾಂಡಲ್ ವುಡ್

Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

Actor Darshan: ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದೀಗ ಬಂಧನವಾದ ಬಳಿಕ ದರ್ಶನ್ ಬಿಪಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ನಾರ್ಮಲ್‌ ಆಗಿ ಒಬ್ಬ ವ್ಯಕ್ತಿಗೆ ಬಿಪಿ 124/77 ರಷ್ಟು ಇರುತ್ತದೆ. ಆದರೀಗ ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಪ್ರಕಾರ ದರ್ಶನ್‌ ಅವರಿಗೆ 165/95 ಬಿಪಿ ಇದೆಯಂತೆ.

VISTARANEWS.COM


on

Actor Darshan BP health update but pavithra Gowda In normal Condition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಕಳೆದ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅದೇ ದಿನ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳ ಬಂಧನವಾಗಿತ್ತು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದೀಗ ಬಂಧನವಾದ ಬಳಿಕ ದರ್ಶನ್ ಬಿಪಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ನಾರ್ಮಲ್‌ ಆಗಿ ಒಬ್ಬ ವ್ಯಕ್ತಿಗೆ ಬಿಪಿ 124/77 ರಷ್ಟು ಇರುತ್ತದೆ. ಆದರೀಗ ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಪ್ರಕಾರ ದರ್ಶನ್‌ ಅವರಿಗೆ 165/95 ಬಿಪಿ ಇದೆಯಂತೆ. ಆದರೆ ಪವಿತ್ರಾಗೌಡ ಆರೋಗ್ಯದಲ್ಲಿ ಮಾತ್ರ ಯಾವುದೇ ಏರುಪೇರಾಗಿರಲಿಲ್ಲ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಏನು?

ದರ್ಶನ್‌ಗೆ, ಬಿಪಿ- 165/95 ಇದೆ.
ಸ್ಯಾಚುರೇಶನ್- 97
ಪಲ್ಸ್-72
ತೂಕ- 107 kg
ಎತ್ತರ- 180cm
GRBS- 102 ಎಂದು ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಹುತೇಕ ಆರೋಪಿಗಳ ಬಿಪಿ 130 ಕ್ಕೂ ಜಾಸ್ತಿ ಇದೆ ಎಂದೂ ಮಾಹಿತಿ ನೀಡಿದ್ದಾರೆ. ಆದರೆ ಪವಿತ್ರಾಗೌಡ ಆರೋಗ್ಯದಲ್ಲಿ ಮಾತ್ರ ಯಾವುದೇ ಏರುಪೇರಾಗಿರಲಿಲ್ಲ. ಬಂಧನವಾದ ಸಮಯದಲ್ಲಿ ಸಹಜವಾಗಿಯೇ ಪವಿತ್ರಾಗೌಡ ಇದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಮೃತದೇಹ ಮೊದಲು ಹಾಕಿದ್ದು ಎಲ್ಲಿ? ಬೆಳಕಿಗೆ ಬಂತು ಸ್ಫೋಟಕ ಅಂಶ!

ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ

ಜೂನ್ 11ರ ಮಂಗಳವಾರ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ಸಿನಿಮಾ, ಶೂಟಿಂಗ್ ಎಂದು ಓಡಾಡ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸ. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಪ್ರಕರಣದ ತನಿಖೆ ಸಂಬಂಧ ಪೇಪರ್ ವರ್ಕ್ ಕೂಡ ಪೊಲೀಸರು ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತೆ ಪುನಃ ಕಸ್ಟಡಿಗೆ ಕೇಳದಿರಲು ಪೊಲೀಸರು ನಿರ್ಧಾರ ಮಾಡಿರುವುದಾಗಿ ವರದಿಯಾಗಿದೆ. ಬಹುತೇಕ ನಾಳೆ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Kannada New Movie: ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

VISTARANEWS.COM


on

Back Benchers film in the Censor
Koo

ಬೆಂಗಳೂರು: ಭಿನ್ನ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’ ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಕಾಲೇಜು ಕೇಂದ್ರಿತ ಕಥೆ ಮತ್ತು ಬೇರೆ ಹೊಸತನದ ನಿರೂಪಣೆಯ ಸುಳಿವಿನೊಂದಿಗೆ ಎಲ್ಲಾ ವರ್ಗದ ಪ್ರೇಕ್ಷಕರನ್ನೂ “ಬ್ಯಾಕ್ ಬೆಂಚರ್ಸ್” ಆಕರ್ಷಿಸಿದ್ದಾರೆ. ಹೀಗೆ ತಾನೇತಾನಾಗಿ ಎಲ್ಲರನ್ನು ಆವರಿಸಿಕೊಂಡಿರುವ ಈ ಚಿತ್ರ ಇದೇ ಜುಲೈ 19ರಂದು ರಾಜ್ಯಾದ್ಯಂತ ತೆರೆಗಾಣಲಿದೆ. ಆರಂಭಿಕ ಹೆಜ್ಜೆಯಲ್ಲಿಯೇ ಸಕಾರಾತ್ಮಕ ವಾತಾವರಣ ಸೃಷ್ಟಿಸಿಕೊಂಡಿರುವ ಈ ಸಿನಿಮಾ (Kannada New Movie) ಈಗ ಸೆನ್ಸಾರ್ ಅಂಗಳ ತಲುಪಿಕೊಂಡಿದೆ.

ಇದು ರಾಜಶೇಖರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ. ನಿರ್ಮಾಪಕರಾಗಿ, ನಿರ್ದೇಶಕರಾಗಿ ಪ್ರೇಕ್ಷಕರ ನಾಡಿಮಿಡಿತವನ್ನು ಅರಿತಿರುವವರು ರಾಜಶೇಖರ್. ಅನುಭವವನ್ನೆಲ್ಲ ಒಟ್ಟುಗೂಡಿಸಿಕೊಂಡು, ಹೊಸಬರ ತಂಡವನ್ನಿಟ್ಟುಕೊಂಡು ರಾಜಶೇಖರ್ ಈ ಚಿತ್ರವನ್ನು ರೂಪಿಸಿದ್ದಾರೆ.

ಸಾಮಾನ್ಯವಾಗಿ ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ರಾಜಶೇಖರ್ ಅವರು ಸಂಪೂರ್ಣವಾಗಿ ಹೊಸಬರ ತಂಡದೊಂದಿಗೆ ಈ ಚಿತ್ರವನ್ನು ತಯಾರಿಸಿದ್ದಾರೆಂದರೆ ಅಚ್ಚರಿ ಮೂಡದಿರುವುದಿಲ್ಲ. ಹೊಸಬರೇ ಸೇರಿರುವುದರಿಂದ ಇಲ್ಲಿ ಹೊಸತನದ ಛಾಯೆಯಿದೆ. ಅದರ ಘಮವೀಗ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿದೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಇದರ ಭಾಗವಾಗಿರುವ ಯುವ ಪಡೆ ಭಿನ್ನ ಶೈಲಿಯಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸೋಶಿಯಲ್ ಮೀಡಿಯಾದಲ್ಲಂತೂ ಈಗ “ಬ್ಯಾಕ್ ಬೆಂಚರ್ಸ್” ಹವಾ ವ್ಯಾಪಿಸಿಕೊಂಡಿದೆ. ಇದು ನಾಯಕ ನಾಯಕಿಯರಾಗಿರುವವರು, ಇತರೇ ಪಾತ್ರಗಳನ್ನು ನಿರ್ವಹಿಸಿದವರು ಸೇರಿದಂತೆ ಒಂದಿಡೀ ತಂಡ ಹೊಸ ಶೈಲಿಯಲ್ಲಿ ಪ್ರೇಕ್ಷಕರನ್ನು ತಲುಪಿಕೊಳ್ಳುತ್ತಿದೆ.

ನಿರ್ದೇಶಕ ರಾಜಶೇಖರ್ ಸ್ಕ್ರಿಫ್ಟ್ ವರ್ಕ್ ಸೇರಿದಂತೆ ಎಲ್ಲದರಲ್ಲಿಯೂ ಈ ಹುಡುಗ-ಹುಡುಗಿಯರನ್ನು ಸೇರಿಸಿಕೊಂಡಿದ್ದಾರೆ. ಅದರ ಫಲವಾಗಿಯೇ ಈ ಕಾಲೇಜು ಸ್ಟೋರಿ ತಾಜಾ ಅನುಭೂತಿಯೊಂದಿಗೆ ಸೆಳೆದುಕೊಂಡಿದೆ.

ಪಿಪಿ ಪ್ರೊಡಕ್ಷನ್ಸ್ ಅಡಿಯಲ್ಲಿ ಖುದ್ದು ರಾಜಶೇಖರ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಎಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಗಣವಿದೆ.

ಇದನ್ನೂ ಓದಿ: Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನ ಈ ಚಿತ್ರಕ್ಕಿದೆ. ಇದೀಗ ಸೆನ್ಸಾರ್ ಅಂಗಳ ತಲುಪಿರುವ “ಬ್ಯಾಕ್ ಬೆಂಚರ್ಸ್” ಮತ್ತಷ್ಟು ವೇಗದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

Continue Reading

ಕರ್ನಾಟಕ

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

Kannada New Movie: ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡವಾಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರ್‌ ಉಡುಗೊರೆಯಾಗಿ ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

VISTARANEWS.COM


on

Producer who gifted an expensive car to the director of Radhika Kumaraswamy starrer Ajagrata
Koo

ಬೆಂಗಳೂರು: ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ. ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ” ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ. ಈ ಸಂದರ್ಭದಲ್ಲಿ ನಿರ್ಮಾಪಕ ರವಿರಾಜ್, ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ (Kannada New Movie) ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

“ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.

ಇದನ್ನೂ ಓದಿ: VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾ ಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

Actor Darshan: ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದರು. ಇದೀಗ ವಿಸ್ತಾರ ಜತೆ ಶಮಿತಾ ಮಾತನಾಡಿ ʻʻವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆʼʼಎಂದು ಹೇಳಿದ್ದಾರೆ.

VISTARANEWS.COM


on

Actor Darshan does not need counseling says by shamitha malnad
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ ದರ್ಶನ್‌. ದರ್ಶನ್ ಪರ ಒಲವು ತೋರಿದವರ (Actor Darshan) ಸಂಖ್ಯೆ ತೀರಾ ಕಡಿಮೆ. ಹಲವು ನಟ ನಟಿಯರು ದರ್ಶನ್‌ ಪರ ಧ್ವನಿ ಎತ್ತುತ್ತಿದ್ದಾರೆ. ಈ ಸಾಲಿಗೆ ಗಾಯಕಿ ಡಾ.ಶಮಿತಾ ಮಲ್ನಾಡ್ (dr shamitha malnad) ಸೇರ್ಪಡೆಯಾಗಿದ್ದರು. ಇದೀಗ ವಿಸ್ತಾರ ಜತೆ ಶಮಿತಾ ಮಾತನಾಡಿ ʻʻವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆʼʼಎಂದು ಹೇಳಿದ್ದಾರೆ.

ಗಾಯಕಿ ಶಮಿತಾ ಮಲ್ನಾಡ್ ಮಾತನಾಡಿ ʻʻದರ್ಶನ್ ಅರೆಸ್ಟ್ ಆದ ನಂತರ ವಿಜಯಲಕ್ಷ್ಮಿ ಅವರನ್ನು ನಾನು ಭೇಟಿ ಮಾಡಿದ್ದೆ. ವಿಜಯಲಕ್ಷ್ಮಿ ಅವರು ಗಟ್ಟಿಗಿತ್ತಿ, ಇಂತ ಸಂದರ್ಭದಲ್ಲೂ ಮೆಂಟಲಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ. ಪಕ್ಕಾ ಫ್ಯಾಮಿಲಿ ವಿಮೆನ್ ಅವರು. ವಿಜಯಲಕ್ಷ್ಮಿ ಹಾಗೂ ದರ್ಶನ್‌ ನಡುವೆ ಬೆಟ್ಟದಷ್ಟು ಪ್ರೀತಿ ಇದೆ. ಪ್ರೀತಿಸಿ ಮದುವೆ ಆದ ನಂತರ ವಿಜಯಲಕ್ಷ್ಮಿ ಅವರು ದರ್ಶನ್‌ಗಾಗಿ ತಮ್ಮ ಕರಿಯರ್‌ನೇ ತ್ಯಾಗ ಮಾಡಿದ್ದಾರೆ. ವಿಜಯಲಕ್ಷ್ಮಿ ಸಾಮಾನ್ಯ ಹೆಣ್ಣಲ್ಲ, ಆಕೆಯ ಸ್ಟ್ಯಾಂಡರರ್ಡ್‌ಗೆ ಜಾಬ್ ಆಫರ್ ಬಂದಿದ್ದು ರಿಜೆಕ್ಟ್ ಮಾಡಿದ್ಲು. ಗಂಡ, ಮಗ ಇದೇ ಆಕೆಯ ಪ್ರಪಂಚʼʼಎಂದರು.

ದರ್ಶನ್ ಕುರಿತು ಶಮಿತಾ ಮಾತನಾಡಿ ʻʻದರ್ಶನ್ ಅವರನ್ನು ಮೊದಲು ನೋಡಿದ್ದು ಮೆಜೆಸ್ಟಿಕ್ ಸಿನಿಮಾದ ಚಿತ್ರದ ಸೆಟ್‌ನಲ್ಲಿ. ಈ ಹುಡುಗ ಯಾರು, ಇಷ್ಟೊಂದ್ ಹೈಟ್ ಇದಾರೆ ಅನ್ಕೊಂಡಿದೆ. ತುಂಬಾ ಕಷ್ಟ ಪಟ್ಟು ಕಣ್ಣೀರು ಹಾಕಿ ಮೇಲೆ ಬಂದ ವ್ಯಕ್ತಿ. ಸಾರಥಿ ಸಿನಿಮಾದಲ್ಲಿ ನನ್ನ ಕಂಠದ ಎರಡೂ ಟೈಟಲ್ ಟ್ರ್ಯಾಕ್ ಸೆಲೆಕ್ಟ್ ಮಾಡಿದ್ದೆ ದರ್ಶನ್.ಅಂದಿನಿಂದಲೂ ದರ್ಶನ್ ಹಾಗು ನನ್ನ ನಡುವೆ ಅಣ್ಣ ತಂಗಿ ಸಂಬಂಧ ಬೆಳೆದಿದೆ. ವಿಜಯಲಕ್ಷ್ಮಿ ನನ್ನ ಆಪ್ತ ಸ್ನೇಹಿತೆ. ದರ್ಶನ್ ಈ ಪರಿಸ್ಥಿತಿಗೆ ಪವಿತ್ರಾ ಗೌಡ ಕಾರಣ ಅಂತ ದೂಷಿಸೋಕೆ ಆಗಲ್ಲ. ನಾನು ಡಾಕ್ಟರ್ ಆಗಿ ಹೇಳ್ತಿದೀನಿ ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ. ಹಾಗೆ ನೋಡುದ್ರೆ ಪ್ರತಿ ವ್ಯಕ್ತಿಗೂ ಕೌನ್ಸೆಲಿಂಗ್‌ ಅಗತ್ಯವಿದೆ. ಕಷ್ಟ ಬಂದಾಗ ರಕ್ತಸಂಬಂಧಿಗಳು ದೂರ ಆಗ್ತಾರೆʼʼಎಂದರು.

ಇದನ್ನೂ ಓದಿ: Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

ಇದಕ್ಕೂ ಮುಂಚೆ ಶಮಿತಾ ಅವರು ಪೋಸ್ಟ್‌ನನಲ್ಲಿ ʻʻʻʻಮನಸೇ ಮನಸೇ,,, ಸೋಲೋ ಗೆಲುವೋ, ನೋವೋ ನಲಿವೋ, ಏಳೋ ಬೀಳೋ,,ಕಲ್ಲೋ ಮುಳ್ಳೋ ಜೀವನದ ಹಾದಿ ಸುಲಭವಲ್ಲ.. ಯಶಸ್ಸಿನ ಹಾದಿ ಸುಗಮವಲ್ಲ… ಹಸಿವು, ಅವಮಾನ, ನೋವುಂಡು ಯಶಸ್ಸು ಗಳಿಸಿದ ಹೆಸರು
ದರ್ಶನ್ ತೂಗುದೀಪ.. ಸಹಚರ, ಗೆಳೆಯ, ಸೋದರ, ಎಷ್ಟೋ ಜನರಿಗೆ ಸಹಾಯ ಹಸ್ತ ನೀಡಿ ಜೀವನವಾಗಿದ್ದವರು, ಒಳ್ಳೆ ಕೆಲಸಗಳಿಗೆ ಕೈ ಚಾಚಿದ್ದವರು,, ಜಾರಿ ಬಿದ್ದಾಗ ಆಳಿಗೊಂದು ಕಲ್ಲಾಗೋದು ಬೇಡಾ…. ಅವರ ಅಭಿನಯ, ಭೇದವಿಲ್ಲದ ಪ್ರೀತಿ, ಸರಳತೆ, ಸ್ನೇಹ ಅಭಿಮಾನದ ಸಿಹಿ ಉಂಡವರು ನಾವು, ಅಭಿಮಾನಿಯಾಗಿ ಸಿನಿಮಾ ಅಭಿನಯ ನೋಡಿ ಅತ್ತು, ನಕ್ಕು, ಚಪ್ಪಾಳೆ ಶಿಳ್ಳೆ ಹೊಡೆದು ಸಂಭ್ರಮಿಸಿದವರು ನಾವು,, ಆರಡಿ ದೇಹವ ಮೂರಡಿ ಬಗ್ಗಿಸಿ ತಗ್ಗಿ ನಮ್ಮೊಂದಿಗೆ ವಿನಯದಿ ಮಾತಾಡುವಾಗ ಹೆಮ್ಮೆ ಪಟ್ಟವರು ನಾವು,,, ತಪ್ಪಾಗಿದೆಯೋ ಇಲ್ಲವೋ ಏನಾಗಿದೆ ಎಂದು ಅರಿಯದವರು ನಾವು.. ಹಣಕ್ಕೆ ಬಗ್ಗದೆ ಪ್ರೀತಿಗೆ ಬಗ್ಗಿದವರು ಅವರು,,, ತಪ್ಪಾಗಿದ್ದರೆ ನ್ಯಾಯಾಂಗವಿದೆ, ಕಾನೂನಿದೆ,,,
ಶಿಕ್ಷೆ ಇದೇʼʼಎಂದು ಬರೆದುಕೊಂಡಿದ್ದರು.

ʻʻ ಅಕಾಲ ನಿಧನರಾದ ಶ್ರೀ ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ,,, ಅವರ ಕುಟುಂಬ ಹಾಗೂ ಹಲವು ನೊಂದ ಕುಟುಂಬಗಳಿಗೆ ನಮ್ಮೆಲ್ಲರ ಸಾಂತ್ವನ ,, ನೆರವು, ಆಸರೆ, ನ್ಯಾಯ ಬೇಕಿದೆ,, ಹಾಗೆ ಸೋಶಿಯಲ್ ಮೀಡಿಯಾವನ್ನು ದಯವಿಟ್ಟು ಒಳಿತಿಗೆ ಉಪಯೋಗಿಸಿ,, ಎಲ್ಲರ ಮೇಲೆ ಗೌರವವಿರಲಿ,, ಕಾಮೆಂಟ್ಸ್, ಪೋಸ್ಟ್, ಮೇಲೆ ಹಿಡಿತವಿರಲಿ,,
ದರ್ಶನ್ ಅಣ್ಣಾ,, ಕನ್ನಡದ ಕುಟುಂಬ,, ಚಲನಚಿತ್ರದ ಕುಟುಂಬ ನಮ್ಮ ಕುಟುಂಬ,, ಕಲಾವಿದರ ಕುಟುಂಬ,, ಏನೇ ಆದರೂ ನಮ್ಮ ಮನೆಯವರ ಜೊತೆ ನಾವು ಯಾವಾಗ್ಲೂ ಜೊತೆ ಇರುತ್ತೇವೆ,, ಅಲ್ಲವೇ??? ಹಾಗೆ ಪ್ರೀತಿ ಅಭಿಮಾನ ಬದಲಾಗದು,, ತಪ್ಪು ಯಾರು ಮಾಡಿದ್ದರೂ ಶಿಕ್ಷೆ ಆಗಬೇಕು .. ನ್ಯಾಯ ಎಲ್ಲರಿಗೂ ಒಂದೇ,,, ದರ್ಶನ್ ಅವರನ್ನು ಪ್ರೀತಿಸುವ ಎಲ್ಲರಿಗೂ ನೋವಾಗಿದೆ,,ಸಂಕಟವಾಗಿದೆ,, ಇದು ಸಂಯಮ, ತಾಳ್ಮೆ, ಪ್ರಾರ್ಥನೆಯ ಸಮಯ,,
ಸಿಟ್ಟು, ಕೋಪ, ಅಸಹನೆ, ಹತಾಶೆ ದರ್ಶನ್ ಹಾಗೂ ಅವರ ಕುಟುಂಬಕ್ಕೆ ಇನ್ನಷ್ಟು ತೊಂದರೆ ಒಡ್ಡಬಹುದು,,
ಚಿನ್ನ ಕುದಿವ ಕುಲುಮೆಯಲ್ಲಿದೆ, ಕಲ್ಮಶ ಕಳೆದು ಅಪರಂಜಿ ಆಗಿ ಶುದ್ಧವಾಗಿ ಬರಲು ಸಮಯ ಬೇಕು,,, ಕಾಯೋಣ ,, ಸಮಾಧಾನದಿಂದ..ದರ್ಶನ್ ಅಣ್ಣಾ ಅವರಿಗಾಗಿ ಪ್ರಾರ್ಥಿಸೋಣ, ಹಾರೈಸೋಣ…ʼʼಎಂದು ಬರೆದುಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Manvita Kamath: ಮದುವೆ ಆದ ಒಂದು ತಿಂಗಳ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ʻಟಗರು ಪುಟ್ಟಿʼ!

Manvita Kamath: ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್ ಜೊತೆಗೆ ಸಾಧು ಕೋಕಿಲಾ, ಅನಿನಾಶ್, ಸುಚೇಂದ್ರ ಪ್ರಸಾದ್, ‘ಸ್ಪರ್ಶ’ ರೇಖಾ, ಅನಂತು, ಸುಂದರಶ್ರೀ, ‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

VISTARANEWS.COM


on

Manvita Kamath One and Half cinema song out
Koo

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ (Manvita Kamath) ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ ‘ಒನ್ ಅಂಡ್ ಹಾಫ್‘ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪ್ರತಿಕಾಗೋಷ್ಠಿ ಇಡೀ ಚಿತ್ರತಂಡ ಭಾಗಿಯಾಗಿ ಮಾಹಿತಿ ಹಂಚಿಕೊಂಡಿದೆ.

ನಟಿ ಮಾನ್ವಿತಾ, ʻʻನನಗೆ ಇದು ಸ್ಪೆಷಲ್ ಸಿನಿಮಾ. ಈ ಸಿನಿಮಾ ಬಂದ ಮೇಲೆ ನನ್ನ ಲೈಫ್ ಗೆ ಹೊಸ ವ್ಯಕ್ತಿ ಬಂದರು. ಸಿನಿಮಾ ತುಂಬಾ ಚೆನ್ನಾಗಿ ಮಾಡಿದ್ದಾರೆ. ಮ್ಯೂಸಿಕ್ ಗೆ ಕುಂತ್ರೆ ಮಣಿ ಅಣ್ಣ ಸೂಪರ್. ಲಿಖಿತಾ ಸಿರಿ ನನ್ನ ಕೋಸ್ಟಾರ್. ನಮ್ಮ 3 ಜನಕ್ಕೂ ಒಳ್ಳೆ ಬಾಂಡಿಂಗ್ ಇತ್ತು. ಶ್ರೇಯಸ್ ಡೈರೆಕ್ಟರ್ ಆಕ್ಟರ್ ಆಗಿ ಒಳ್ಳೆ ಕೆಲಸ ಮಾಡಿದ್ದಾರೆʼʼ ಎಂದರು.

ನಿರ್ದೇಶಕ ಕಂ ನಾಯಕ ಶ್ರೇಯಸ್ ಚಿಂಗಾ ಮಾತನಾಡಿ, ʻʻಇದು ತಂತ್ರಜ್ಞನರ ಸಿನಿಮಾ..ಪ್ರತಿಯೊಬ್ಬ ತಂತ್ರಜ್ಞರು ಕೂಡ ಫ್ಯಾಮಿಲಿ ತರ. ಅವರು ಅವರ ಕರ್ತವ್ಯ ನಿರ್ವಹಿಸಿದ್ದಾರೆ. ನಾನು ಸಿನಿಮಾವನ್ನು ತೆರೆಗೆ ತರಲು ಬೆಂಬಲಿಸಿದ ಇಡೀ ಚಿತ್ರತಂಡಕ್ಕೆ ಧನ್ಯವಾದ. ಈ ಸಮಯದಲ್ಲಿ ಜನ ಥಿಯೇಟರ್ ಗೆ ಬರುತ್ತಿಲ್ಲ. ನಿಮ್ಮ ಬೆಂಬಲ ನಮಗೆ ಇರಬೇಕು. ಇದು ತುಂಬಾ ವಿಭಿನ್ನ ಸಿನಿಮಾ. ಬೇರೆ ಭಾಷೆಯಲ್ಲಿ ಮಾಡುವ ಸಾಧ್ಯತೆ ನೂರಷ್ಟಿದೆʼʼ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

ನಿರ್ಮಾಪಕ ಆರ್.ಚರಣ್ ಸುಬ್ಬಯ್ಯ ಮಾತನಾಡಿ, ʻʻನಾನು ಗಾಂಧಿನಗರದ ಹುಡ್ಗ. ಶ್ರೇಯಸ್ ಮಾಡಿದ ಡೆವಿಡ್ ಸಿನಿಮಾ ನೋಡಿ ಇಷ್ಟವಾಯ್ತು. ನನಗೆ ಊಹೆ ಕೂಡ ಮಾಡಲು ಆಗಲಿಲ್ಲ. ಈ ರೀತಿ ಸಿನಿಮಾ ಮಾಡಿದ್ದಾನೆ ಎಂದು. ಯಾವುದಾದರೂ ಕನ್ಸೆಪ್ಟ್ ಇದ್ದರೆ ಹೇಳು ಎಂದು ಹೇಳಿದೆ. ಅವನು ಹೇಳಿದ ಕೇಳಿದ ಕಥೆ ನನಗೆ ಇಷ್ಟವಾಗಿ ಅಡ್ವಾನ್ಸ್ ಕೊಟ್ಟಿದ್ದೆ. ಒಂದೊಳ್ಳೆ ಬ್ಯೂಟಿಫುಲ್ ಸಬ್ಜೆಕ್ಟ್. ಈ ಸಿನಿಮಾವನ್ನು ಥಿಯೇಟರ್ ಗೆ ಬಂದು ನೋಡಬೇಕುʼʼ ಎಂದರು.

ಈ ಹಿಂದೆ ‘ರಂಗ್‌ಬಿರಂಗಿ’, ‘ಡೆವಿಡ್’, ‘ದಿ ವೆಕೆಂಟ್ ಹೌಸ್’ ಸಿನಿಮಾಗಳಲ್ಲಿ ನಟಿಸಿ ಭರವಸೆ ಮೂಡಿಸಿದ್ದ ನಟ ಶ್ರೇಯಸ್ ಚಿಂಗಾ, ಇದೀಗ ‘ಒನ್ ಅಂಡ್ ಹಾಫ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಅವರು ಅಭಿನಯಿಸುತ್ತಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡವೀಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ‘ಒನ್ ಅಂಡ್ ಹಾಫ್’ ಕಾಮಿಡಿ ಜಾನರ್ ಸಿನಿಮಾವಾಗಿದ್ದು, ಮನರಂಜನೆ ಪಕ್ಕ ಅನ್ನೋದು ಚಿತ್ರತಂಡದ ಭರವಸೆ.ಈ ಚಿತ್ರದ ಮತ್ತೊಂದು ವಿಶೇಷ ಅಂದರೆ ಹೀರೋ ಹೆಸರು ಕನ್ನಡ ಅಂತಾ ಇಡಲಾಗಿದೆ.

ಶ್ರೇಯಸ್ ಚಿಂಗಾ, ಮಾನ್ವಿತಾ ಕಾಮತ್ ಜೊತೆಗೆ ಸಾಧು ಕೋಕಿಲಾ, ಅನಿನಾಶ್, ಸುಚೇಂದ್ರ ಪ್ರಸಾದ್, ‘ಸ್ಪರ್ಶ’ ರೇಖಾ, ಅನಂತು, ಸುಂದರಶ್ರೀ, ‘ಕಾಮಿಡಿ ಕಿಲಾಡಿ’ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ಮುಂತಾದವರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ‘ಒನ್ ಅಂಡ್ ಹಾಫ್’ ಸಿನಿಮಾಗೆ ದೇವೇಂದ್ರ ಛಾಯಾಗ್ರಹಣ ಮಾಡುತ್ತಿದ್ದು, ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥೆಯುಳ್ಳ ಈ ಸಿನಿಮಾಗೆ ಸುಲಕ್ಷ್ಮೀ ಫಿಲ್ಮ್ಸ್‌ ಬ್ಯಾನರ್‌ನಡಿ ಆರ್.ಚರಣ್ ಹಣ ಹಾಕುತ್ತಿದ್ದಾರೆ. ಇಂಪನಾ ಪ್ರಸಾದ್, ಅರ್ಪಿತ್ ನಾರಾಯಣ್, ಸಂತೋಷ್ ನಾಗೇನಹಳ್ಳಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ.

Continue Reading
Advertisement
Virat Kohli
ಪ್ರಮುಖ ಸುದ್ದಿ10 mins ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ37 mins ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ53 mins ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ56 mins ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ1 hour ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ2 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ2 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Hardik Pandya
ಪ್ರಮುಖ ಸುದ್ದಿ3 hours ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ3 hours ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ3 hours ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ13 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌