Viral News: 16 ವರ್ಷದ ಬಾಲಕನೊಂದಿಗೆ ಇಬ್ಬರು ಮಕ್ಕಳ ತಾಯಿ ಪರಾರಿ! - Vistara News

ವೈರಲ್ ನ್ಯೂಸ್

Viral News: 16 ವರ್ಷದ ಬಾಲಕನೊಂದಿಗೆ ಇಬ್ಬರು ಮಕ್ಕಳ ತಾಯಿ ಪರಾರಿ!

Viral News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಹಿರೇಮಠ (16) ಹಾಗೂ ಮಲ್ಲಮ್ಮ (28) ಓಡಿಹೋದವರು. ಇವರಿಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಪ್ರೇಮಾಂಕುರವಾಗಿದೆ. ಕಳೆದ ಒಂದು ತಿಂಗಳಿನಿಂದ ಮಲ್ಲಿಕಾರ್ಜುನ್ ಹಾಗೂ ಮಲ್ಲಮ್ಮ ಕಾಣೆಯಾಗಿದ್ದಾರೆ.

VISTARANEWS.COM


on

viral news woman eloped with boy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯಪುರ: 16 ವರ್ಷದ ಯುವಕನೊಬ್ಬನನ್ನು ಪುಸಲಾಯಿಸಿ ಕರೆದುಕೊಂಡು, 28 ವರ್ಷದ ಗೃಹಿಣಿಯೊಬ್ಬಳು ಪರಾರಿಯಾಗಿರುವ (Woman Eloped with boy) ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ವಿವಾಹಿತೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಒಂದು ಮಗುವನ್ನು ಎತ್ತಿಕೊಂಡು (Viral News) ಇನ್ನೊಂದನ್ನು ಬಿಟ್ಟು ಆಕೆ ಪರಾರಿಯಾಗಿದ್ದಾಳೆ!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಹಿರೇಮಠ (16) ಹಾಗೂ ಮಲ್ಲಮ್ಮ (28) ಓಡಿಹೋದವರು. ಇವರಿಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಪ್ರೇಮಾಂಕುರವಾಗಿದೆ. ಕಳೆದ ಒಂದು ತಿಂಗಳಿನಿಂದ ಮಲ್ಲಿಕಾರ್ಜುನ್ ಹಾಗೂ ಮಲ್ಲಮ್ಮ ಕಾಣೆಯಾಗಿದ್ದಾರೆ.

ಕಾಣೆಯಾಗಿರುವ ಮಲ್ಲಿಕಾರ್ಜುನನ ತಾಯಿ ಅಕ್ಕಮಹಾದೇವಿ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದಾರೆ. ಈ ಹಿಂದೆ ಮಲ್ಲಿಕಾರ್ಜುನನಿಗೆ ಬೆಳ್ಳಿಯ ಸರವನ್ನು ಕೂಡ ಮಲ್ಲಮ್ಮ ಕೊಡಿಸಿದ್ದಳಂತೆ. ಮಲ್ಲಿಕಾರ್ಜುನನ ಬಳಿ ಆತನ ತಾಯಿ ಅಕ್ಕಮಹಾದೇವಿ ಈ ಬಗ್ಗೆ ಪ್ರಶ್ನೆ ಮಾಡಿದಾಗ ಆತ ವಿಷ ಕುಡಿದಿದ್ದ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ ಎಂದು ಅಕ್ಕಮಹಾದೇವಿ ತಿಳಿಸಿದ್ದಾರೆ.

ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಮೇ 13ರಂದು ಪ್ರಕರಣ ದಾಖಲಾಗಿದ್ದು, ಅದರಲ್ಲಿ ಮಲ್ಲಿಕಾರ್ಜುನ್ ಕಿಡ್ನಾಪ್ ಆಗಿದ್ದಾನೆ ಎಂದು ದಾಖಲಾಗಿದೆ. ಮಲ್ಲಿಕಾರ್ಜುನನೊಂದಿಗೆ ಕಾಣೆಯಾಗಿರುವ ಮಲ್ಲಮ್ಮಗೆ ಎರಡು ಮಕ್ಕಳಿವೆ. ಇದರಲ್ಲಿ ನಾಲ್ಕು ವರ್ಷದ ಮಗುವನ್ನು ತೆಗೆದುಕೊಂಡು ಮಲ್ಲಮ್ಮ ಕಾಣೆಯಾಗಿದ್ದಾಳೆ. ಈ ವಿಚಾರವಾಗಿ ಮಲ್ಲಮ್ಮನ ಪತಿಯಾಗಲಿ ಆಕೆಯ ಕುಟುಂಬಸ್ಥರಾಗಲಿ ಯಾವುದೇ ದೂರು ನೀಡಿಲ್ಲ.

ಕುರ್ಕುರೆ ತರದೇ ಹೋದ ಗಂಡನಿಗೆ ಡೈವೋರ್ಸ್!

ಲಖನೌ: ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು, ಕುರ್ಕುರೆ (Kurkure) ಪ್ಯಾಕೆಟ್‌ ತರಲಿಲ್ಲ ಎಂಬ ಕಾರಣಕ್ಕೆ ರೊಚ್ಚಿಗೆದ್ದು ಪತಿಯಿಂದ ವಿಚ್ಛೇದನ (Divorce) ಬಯಸಿದ್ದಾಳೆ! ಇದು ನಿಜ. ಪ್ರತಿನಿತ್ಯ ಪತಿಯಿಂದ ಕುರ್ಕುರೆ ತರಿಸಿಕೊಂಡು ತಿನ್ನುತ್ತಿದ್ದ ಈಕೆ, ಒಂದು ದಿನ ಅದನ್ನು ತರಲು ಪತಿ ನಿರಾಕರಿಸಿದ್ದಕ್ಕಾಗಿ ಕೋಪಗೊಂಡು ದಾಂಪತ್ಯವನ್ನೇ ಬರ್ಬಾದ್‌ ಮಾಡಿದ್ದಾಳೆ. ಈ ಸುದ್ದಿ ಈಗ ವೈರಲ್‌ (Viral news) ಆಗಿದೆ.

5 ರೂಪಾಯಿ ಚಿಲ್ಲರೆ ಬೆಲೆಯ ಕುರ್ಕುರೆ ಪ್ಯಾಕೆಟ್ ಇವರ ದಾಂಪತ್ಯ ವಿಚ್ಛೇದನಕ್ಕೆ ಕಾರಣವಾಗಿದ್ದು, ಈ ಮಹಿಳೆಯ ಹೆಸರು ಬಹಿರಂಗಪಡಿಸಲಾಗಿಲ್ಲ. ಪತ್ನಿಯ ಈ ವ್ಯಸನ ಪ್ರತಿದಿನ ದಂಪತಿಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು. ಪತಿ ಮನೆಗೆ ಪ್ಯಾಕೆಟ್‌ ತರಲು ಮರೆತಾಗ ಈ ವಿವಾದ ಉಲ್ಬಣಗೊಂಡಿದೆ. ಇದು ತಾರಕಕ್ಕೆ ಹೋಗಿದೆ. ತನ್ನ ದೈನಂದಿನ ಆಸ್ವಾದವನ್ನು ನಿರಾಕರಿಸಿದ್ದರಿಂದ ಕೋಪಗೊಂಡ ಪತ್ನಿ, ಗಂಡನ ಮನೆಯನ್ನು ತೊರೆದು ಹೆತ್ತವರ ಮನೆಗೆ ಹೋಗಿದ್ದಾಳೆ. ಬಳಿಕ ಪತಿಯಿಂದ ವಿಚ್ಛೇದನ ಕೋರಿ ಪೊಲೀಸರ ಮೊರೆ ಹೋಗಿದ್ದಾಳೆ.

ಕಳೆದ ವರ್ಷ ವಿವಾಹವಾದ ದಂಪತಿಯನ್ನು ಆಗ್ರಾದ ಶಹಾಗಂಜ್ ಪೊಲೀಸರು ಕುಟುಂಬ ಸಮಾಲೋಚನೆಗಾಗಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಪತಿ, ತನ್ನ ಹೇಳಿಕೆಯಲ್ಲಿ, ತನ್ನ ಹೆಂಡತಿಯ ಕುರ್ಕುರೆ ಗೀಳಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾನೆ. ಇದು ಅವರ ನಡುವಿನ ವಿವಾದದ ಬಿಂದುವಾಗಿದೆ. ಮತ್ತೊಂದೆಡೆ, ಪತಿ ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದರಿಂದ ಆತನ ಮನೆಯನ್ನು ತೊರೆಯಬೇಕಾಯಿತು ಎಂದು ಪತ್ನಿ ಆರೋಪಿಸಿದ್ದಾಳೆ. ಈ ಆರೋಪದ ಹಿಂದಿನ ಸತ್ಯಾಸತ್ಯತೆ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಗ್ರಾ ಇನ್ನೊಂದು ದಂಪತಿ ಕೂಡ ಈ ವರ್ಷದ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. “ತುಂಬಾ ಜನಪ್ರಿಯತೆ” ಗಳಿಸಿದ ಹೆಂಡತಿಯ ರಾಜಕೀಯ ಚಟುವಟಿಕೆಗಳು ಪತಿಗೆ ಕಿರಿಕಿರಿ ಉಂಟುಮಾಡಿದ್ದು, ಜೊತೆಗೆ ಇರಲಾರೆ ಎಂದು ಗಂಡ ಹೇಳಿದ್ದ. ಪರಿಸ್ಥಿತಿ ಪೊಲೀಸರಿಗೆ ತಲುಪಿತ್ತು. ಅಪರಿಚಿತರೊಂದಿಗೆ ತನ್ನ ಹೆಂಡತಿ ಮುಖಾಮುಖಿ ಭೇಟಿಯಾಗುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ಗಂಡ ಹೇಳಿದ್ದ. ನಂತರ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

ಇಲ್ಲಿ ಪತಿ ಸಿಕಂದರಾ ಮೂಲದವರಾಗಿದ್ದರೆ, ಮಹಿಳೆ ನ್ಯೂ ಆಗ್ರಾದ ಠಾಣಾದವರು. ಅವರಿಗೆ ಮದುವೆಯಾಗಿ ಎರಡು ವರ್ಷವಾಗಿತ್ತು. ಪತ್ನಿ ರಾಜಕೀಯದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸಿದ್ದು, ಅದನ್ನು ತ್ಯಜಿಸಲು ಸಿದ್ಧರಿರಲಿಲ್ಲ. ಅವಳು ರಾಜಕೀಯ ಕ್ಷೇತ್ರವನ್ನು ಬಿಡದಿದ್ದರೆ ತಾನು ಅವಳ ಜೊತೆಗೆ ಇರುವುದಿಲ್ಲ ಎಂದು ಪತಿ ಹಠ ಹಿಡಿದಿದ್ದ.‌

ಇದನ್ನೂ ಓದಿ: Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Ashika Ranganath: ಪುಷ್ಪ 2 ಸಿನಿಮಾದ ಸೂಸೇನೆ ಹಾಡಿಗೆ ಆಶಿಕಾ ರಂಗನಾಥ್‌ ಅವರು ಹೆಜ್ಜೆ ಹಾಕಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ನವಿಲಿನಂತೆ ಹೆಜ್ಜೆ ಹಾಕಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಲ್ಕಿ ಬ್ಯೂಟಿ ಮಾಡಿದ ಡಾನ್ಸ್‌ನ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Ashika Ranganath
Koo

ಬೆಂಗಳೂರು: ಅಲ್ಲು ಅರ್ಜುನ್‌ (Allu Arjun) ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 (Pushpa 2) ಸಿನಿಮಾದ ಸೂಸೇನೆ ಹಾಡು ಎಲ್ಲರ ಮನೆಮಾತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಹಾಡು ವೈರಲ್‌ ಆಗುವ ಜತೆಗೆ ಯುವತಿಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಈ ಹಾಡಿಗೆ ಡಾನ್ಸ್‌ ಮಾಡಿದ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನಿದರ್ಶನ ಎಂಬಂತೆ, ಸ್ಯಾಂಡಲ್‌ವುಡ್‌ನ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿಯಾದ, ನಟಿ ಆಶಿಕಾ ರಂಗನಾಥ್‌ (Ashika Ranganath) ಅವರು ಕೂಡ ಸೂಸೇನೆ ಹಾಡಿಗೆ ಡಾನ್ಸ್‌ ಮಾಡಿದ್ದಾರೆ. ಡಾನ್ಸ್‌ ಮಾಡಿದ ವಿಡಿಯೊವನ್ನು (Viral Video) ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಕೂಡ ವೈರಲ್‌ ಆಗಿದೆ.

ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ಪುಷ್ಪ 2 ಹಾಡಿಗೆ ಹೆಜ್ಜೆ ಹಾಕಿದ್ದು, ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. “ನಾನು ಈ ಹಾಡಿಗೆ ತುಂಬ ತಡವಾಗಿ ಕುಣಿಯುತ್ತಿರಬಹುದು, ಆದರೆ, ನೀವು ನನ್ನ ನೃತ್ಯವನ್ನು ಇಷ್ಟಪಡುತ್ತೀರಿ ಎಂಬ ಭರವಸೆ ಇದೆ” ಎಂಬುದಾಗಿ ಆಶಿಕಾ ರಂಗನಾಥ್‌ ಅವರು ಬರೆದುಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, “ತುಂಬ ಚೆನ್ನಾಗಿ ಡಾನ್ಸ್‌ ಮಾಡಿದ್ದೀರಿ” ಎಂದಿದ್ದಾರೆ. ಇನ್ನೊಂದಿಷ್ಟು ಕಿಡಿಗೇಡಿಗಳು, “ನೀವು ರಶ್ಮಿಕಾ ಮಂದಣ್ಣ ಅವರಿಗಿಂತ ಚೆನ್ನಾಗಿ ಹೆಜ್ಜೆ ಹಾಕಿದ್ದೀರಿ” ಎಂದಿದ್ದಾರೆ.

ಪುಷ್ಪ 1 ಸಿನಿಮಾದ ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಫಿ ಇದೆ. ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಡಿಸೆಂಬರ್‌ 6ಕ್ಕೆ ಸಿನಿಮಾ ಬಿಡುಗಡೆ

ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ನಟನೆಯ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Continue Reading

ವೈರಲ್ ನ್ಯೂಸ್

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

ಕೇರಳದ ಪಟ್ಟನಂತಿಟ್ಟ ಜಿಲ್ಲೆಯ ತಿರುವಲ್ಲಾ ಪುರಸಭೆ ಪಾಲಿಕೆ ಕಚೇರಿಯಲ್ಲಿ ರೀಲ್ಸ್ ಮಾಡಿರುವ ನೌಕರರು ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಇದು ಭಾರೀ ವೈರಲ್ (Viral Video) ಆಗಿತ್ತು. ರೀಲ್ಸ್ ನಲ್ಲಿ ಕಾಣಿಸಿಕೊಂಡಿರುವ ಎಲ್ಲ ನೌಕರರಿಗೆ ಮೂರು ದಿನಗಳ ಬಳಿಕ ನೋಟಿಸ್‌ ಜಾರಿಗೊಳಿಸಲಾಗಿದೆ.

VISTARANEWS.COM


on

By

Viral Video
Koo

ತಿರುವನಂತಪುರಂ: ನೌಕರರು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಮಾಡಿದ ಬಳಿಕ ಹಿರಿಯ ಅಧಿಕಾರಿಯ ಕೆಂಗಣ್ಣಿಗೆ ಗುರಿಯಾದ ಘಟನೆ ಕೇರಳದಲ್ಲಿ (kerala) ನಡೆದಿದೆ. ಪಟ್ಟನಂತಿಟ್ಟ ಜಿಲ್ಲೆಯ (Pathanamthitta district) ತಿರುವಲ್ಲಾ ಪುರಸಭೆ ಪಾಲಿಕೆ ಕಾರ್ಯದರ್ಶಿ ಅವರು ಇದೀಗ ಎಂಟು ಮಂದಿ ನೌಕರರಿಗೆ ಶೋಕಾಸ್ ನೋಟಿಸ್‌ (notice) ಜಾರಿಗೊಳಿಸಿದ್ದಾರೆ.

ಸರ್ಕಾರಿ ಕಚೇರಿಯಲ್ಲಿ ರೀಲ್ಸ್ ಮಾಡಿರುವ ನೌಕರರು ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಇದು ವೈರಲ್ ಆಗಿದ್ದು, ಮೂರು ದಿನಗಳ ಬಳಿಕ ರೀಲ್ಸ್ ನಲ್ಲಿ ಕಾಣಿಸಿಕೊಂಡಿರುವ ಎಲ್ಲ ನೌಕರರಿಗೆ ನೊಟೀಸ್ ಜಾರಿ ಗೊಳಿಸಲಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ನೌಕರರು ಕಚೇರಿಯಲ್ಲಿ ಹಾಡುವುದು ಮತ್ತು ನೃತ್ಯ ಮಾಡುವುದು ಸೆರೆಯಾಗಿದೆ. ಪುರಸಭೆ ಉದ್ಯೋಗಿಗಳು ರೀಲ್ಸ್ ಗಾಗಿ ಮೊದಲು ಸ್ಕ್ರಿಪ್ಟ್ ಸಿದ್ಧಪಡಿಸಿ ಬಳಿಕ ಅದನ್ನು ಕಚೇರಿಯಲ್ಲಿ ವಿಡಿಯೋ ಮಾಡಿದ್ದಾರೆ. ಹಾಡು ಮತ್ತು ನೃತ್ಯದ ಸಂಯೋಜನೆ ಇದರಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಕೂಡಲೇ ರೀಲ್ಸ್ ಭಾರೀ ವೈರಲ್ ಆಗಿದೆ.


ಇದನ್ನೂ ಓದಿ: Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

ಈ ಕುರಿತು ನಗರಸಭೆ ಕಾರ್ಯದರ್ಶಿ ಗಮನಕ್ಕೆ ಬಂದಿದ್ದು, ಅವರು ಕೂಡಲೇ ಎಂಟು ನೌಕರರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿ ಮೂರು ದಿನಗಳಲ್ಲಿ ವಿವರಣೆ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತು ಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಯದರ್ಶಿ, ಅವರು ತಮ್ಮ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ಇದು ನಿರುಪದ್ರವಿ ಕೃತ್ಯವಾಗಿರುವುದರಿಂದ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಿರೀಕ್ಷಿಸಿದ್ದರು. ಆದರೆ, ನೋಟಿಸ್‌ ಜಾರಿ ಮಾಡಿದ ಅನಂತರ ಕಚೇರಿ ಕೆಲಸದ ಬಿಡುವಿನ ಸಮಯದಲ್ಲಿ ರೀಲ್ ಮಾಡಿರುವುದು, ಕೆಲಸ ಮಾಡಲು ಅಥವಾ ತಮ್ಮ ಅಗತ್ಯಗಳಿಗಾಗಿ ಬಂದವರಿಗೆ ಯಾವುದೇ ಅಡ್ಡಿ ಉಂಟುಮಾಡಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

Continue Reading

Latest

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

ಉತ್ತರ ಪ್ರದೇಶದ ಮಹೋಬಾದಲ್ಲಿ ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸಮಾರಂಭಕ್ಕೆ ಆಗಮಿಸಿದ್ದ ದೇವೇಂದ್ರ ಎಂಬ ವ್ಯಕ್ತಿ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಕೆಲವೊಂದು ಸ್ಥಳಗಳಲ್ಲಿ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಆ ಸ್ಥಳದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಬರದಂತೆ ನೋಡಿಕೊಂಡು ಕೆಲಸ ಮಾಡಬೇಕು. ಇಲ್ಲವಾದರೆ ಇದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಅಂಹತದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಬೇಕಾದ ತಯಾರಿ ಮಾಡಲು ಬಿದಿರಿನ ಕೋಲನ್ನು ಸಾಗಿಸುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದ್ದು, ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ.

ಮೃತ ವ್ಯಕ್ತಿ ಚಂದೋನ್ ಗ್ರಾಮದ ನಿವಾಸಿ 35 ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದ್ದು, ವರದಿ ಪ್ರಕಾರ ದೇವೇಂದ್ರ ತನ್ನ ಸೋದರ ಸಂಬಂಧಿ ಸುವೇಂದ್ರ ಸಿಂಗ್ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಸೋಡಾ ನಗರಕ್ಕೆ ಬಂದಿದ್ದರು. ಘಟನೆಯ ಸಮಯದಲ್ಲಿ, ಅವರ ಕುಟುಂಬ ಸದಸ್ಯರು ದೇವಾಲಯಕ್ಕೆ ಹೋಗಲು ತಯಾರಿ ನಡೆಸುತ್ತಿದ್ದರು. ಕೆಲವರು ಪ್ರಸಾದ ತಯಾರಿಸುತ್ತಿದ್ದರೆ, ಇತರರು ದೇವಾಲಯದಲ್ಲಿ ಆಚರಣೆಗಳಿಗೆ ಬೇಕಾದ ತಯಾರಿ ನಡೆಸುತ್ತಿದ್ದರು. ಈ ನಡುವೆ, ದೇವೇಂದ್ರ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ದೇವೆಂದ್ರ ಅವರು ತಮ್ಮ ಸಂಬಂಧಿಕರ ಸಮ್ಮುಖದಲ್ಲಿ ಬಿದಿರಿನ ಕೋಲನ್ನು ಹಿಡಿದುಕೊಂಡು ಮನೆಯೊಳಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ದೇವೇಂದ್ರ ಬಲವಾದ ಆಘಾತದಿಂದ ಬಿದ್ದಾಗ ಅವರ ತಲೆ ಕಬ್ಬಿಣದ ಗೇಟ್‍ಗೆ ತಗುಲಿದೆ.. ಆಗ ಅವರ ಕುಟುಂಬ ಸದಸ್ಯರು ದೇವೇಂದ್ರ ಅವರ ಕೈ ಮತ್ತು ಕಾಲುಗಳನ್ನು ಮಸಾಜ್ ಮಾಡುವ ಮೂಲಕ ಸಹಾಯ ಮಾಡಿದರು. ಆದರೆ ಕೆಲವೇ ಸೆಕೆಂಡುಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬ ಸದಸ್ಯರು ತಿಳಿಸಿದ ಪ್ರಕಾರ, ಈ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ, ಬಿದಿರಿನ ಕೋಲು ಒದ್ದೆಯಾಗಿತ್ತು. ಹಾಗಾಗಿ ದೇವೆಂದ್ರ ಅವರಿಗೆ ಕರೆಂಟ್ ಶಾಕ್ ತಗುಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

ದೇವೇಂದ್ರ ಅವರ ಸಂಬಂಧಿಕರು ತಮ್ಮ ಮನೆಯ ಮೇಲೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಬಗ್ಗೆ ದೂರು ನೀಡಿದ್ದರೂ ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಇಲಾಖೆ ಕ್ರಮ ಕೈಗೊಂಡಿದ್ದರೆ, ತಮ್ಮ ಪ್ರೀತಿಯ ದೇವೇಂದ್ರ ಜೀವಂತವಾಗಿರುತ್ತಿದ್ದರು ಎಂದು ಕುಟುಂಬ ಸದಸ್ಯರು ದುಃಖಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

ಹಾರುತ್ತಿರುವ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Viral Video) ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಘಟನೆ ಇಂಡಿಗೋ ವಿಮಾನದಲ್ಲಿ ನಡೆದಿದ್ದು, ಮಹಿಳೆ ವಿರುದ್ಧ ಕ್ರಮಕ್ಕೆ ಸಾಕಷ್ಟು ಮಂದಿ ಆಗ್ರಹಿಸಿದ್ದಾರೆ. ವಿಮಾನದಲ್ಲಿ ಮತ್ತು ವಿಮಾನ ನಿಲ್ದಾಣಗಳಲ್ಲಿ ನಡೆಯುವ ಇಂಥ ರೀಲ್ಸ್‌ ಹುಚ್ಚಾಟಗಳಿಗೆ ತಡೆ ಹಾಕಬೇಕು ಎಂದು ಜನ ಆಗ್ರಹಿಸುತ್ತಿದ್ದಾರೆ.

VISTARANEWS.COM


on

By

Viral Video
Koo

ನವದೆಹಲಿ: ಸಾರ್ವಜನಿಕ ಪ್ರದೇಶಗಳಲ್ಲಿ ರೀಲ್ಸ್ (reels) ಮಾಡುವವರ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪವೂ ಕೇಳಿ ಬರುತ್ತಿದೆ. ಆದರೂ ಇದು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇತ್ತೀಚಿಗೆ ವಿಮಾನ ನಿಲ್ದಾಣದಲ್ಲಿ (airport) ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿ ನೆಟ್ಟಿಗರಿಂದ ಆಕ್ರೋಶಕ್ಕೆ ಕೆಲವರು ಗುರಿಯಾಗಿದ್ದರು. ಈಗ ಮಹಿಳೆಯೊಬ್ಬರು ವಿಮಾನದ (Flight) ಒಳಗೆ ರೀಲ್ಸ್ ಮಾಡಿ ಹಂಚಿಕೊಂಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕ ಸಾರಿಗೆ, ಬೀದಿಗಳು, ವಿಮಾನ ನಿಲ್ದಾಣದ ಹೊರಭಾಗ ಮತ್ತು ವಿಮಾನಯಾನದ ವೇಳೆ ನೃತ್ಯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಲೇ ಇದೆ. ಇದೀಗ ಇಂತಹ ಮತ್ತೊಂದು ಘಟನೆ ವರದಿಯಾಗಿದೆ. ಇಂಡಿಗೋ ವಿಮಾನದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ನೆಟ್ಟಿಗರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಲ್ಮಾ ಶೇಕ್ ಎಂಬ ಮಹಿಳೆ ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಕ್ಲಿಪ್ ನಲ್ಲಿ ಮಹಿಳೆ ಕಪ್ಪು ಬಣ್ಣದ ಸೀರೆಯನ್ನು ಧರಿಸಿದ್ದು, ಇತರ ಪ್ರಯಾಣಿಕರು ತಮ್ಮ ಆಸನಗಳಲ್ಲಿ ಕುಳಿತಿದ್ದಾರೆ. ಫ್ಲೈಟ್ ಅಟೆಂಡೆಂಟ್‌ಗಳು ಓವರ್‌ಹೆಡ್ ಬಿನ್ ಅನ್ನು ಮುಚ್ಚುತ್ತಿದ್ದಂತೆ, ಶೇಕ್ ಎ.ಆರ್. ರೆಹಮಾನ್ ಮತ್ತು ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಟೈಲ್ ಸ್ಟೈಲ್ ಥಾನ್ ಹಾಡಿಗೆ ನೃತ್ಯ ಮಾಡಿದ್ದಾರೆ. ಅವರ ಹಿಂದಿದ್ದ ಇತರ ಪ್ರಯಾಣಿಕರು ಆಕೆಯನ್ನು ನೋಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಪೋಸ್ಟ್ ಅನ್ನು ಕೆಲವು ಗಂಟೆಗಳ ಹಿಂದೆಯಷ್ಟೇ ಸಾಮಾಜಿಕ ಮಾಧ್ಯಮವಾದ ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ಅನಂತರ ಇದು ಸಾವಿರಾರು ಲೈಕ್‌ಗಳನ್ನು ಗಳಿಸಿದೆ. ಕೆಲವರು ಹಂಚಿಕೊಂಡಿದ್ದಾರೆ. ಅನೇಕರು ಇದಕ್ಕೆ ಪ್ರತಿಕ್ರಿಯೆಯನ್ನು ಮಾಡಿದ್ದಾರೆ.


ಒಬ್ಬರು, ಇತರರಿಗೆ ಯಾಕೆ ತೊಂದರೆ ಕೊಡುತ್ತೀರಿ ಏನು ಕೇಳಿದ್ದರೆ, ಇನ್ನೊಬ್ಬರು, ಇದು ಯಾವ ರೀತಿಯ ಏರ್‌ಲೈನ್? ಅಂತಹ ಅಸಂಬದ್ಧ ಮತ್ತು ಭಯಭೀತ ವ್ಯಕ್ತಿಯನ್ನು ವಿಮಾನದಲ್ಲಿ ರೀಲ್ ಮಾಡಲು ಅವರು ಹೇಗೆ ಅನುಮತಿಸುತ್ತಿದ್ದಾರೆ? ವಿಮಾನಯಾನ ಸಂಸ್ಥೆಯು ಈ ಮಹಿಳೆಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿದೆ. ಇದರಿಂದ ಇನ್ಯಾರೂ ಮತ್ತೆ ಎಂದಿಗೂ ಹೀಗೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ತಡೆಯಲು ಇಂಡಿಗೋ ವಿಮಾನ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಇನ್ನೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

ಮತ್ತೊಬ್ಬರು ಕಾಮೆಂಟ್ ನಲ್ಲಿ ಗಗನಸಖಿ ಆಕೆಗೆ ರೀಲ್‌ಗಳನ್ನು ಮಾಡಲು ಹೇಗೆ ಅವಕಾಶ ನೀಡಿದರು? ವಿಮಾನ ಹಾರಾಟ ಸಂದರ್ಭದಲ್ಲಿ ಗಗನಸಖಿಯೂ ಸಹ ಭಯಭೀತರಾಗುತ್ತಾರೆ ಎಂದು ತಿಳಿಸಿದ್ದಾರೆ. ಈ ರೀತಿಯ ಜನರು ವಿಮಾನಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಬೇಕು ಎಂದು ಇನ್ನೊಬ್ಬರು ಹೇಳಿದ್ದಾರೆ.

Continue Reading
Advertisement
Team India
ಕ್ರಿಕೆಟ್5 hours ago

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

LK Advani
ದೇಶ5 hours ago

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Ashika Ranganath
ಸ್ಯಾಂಡಲ್ ವುಡ್5 hours ago

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ6 hours ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್6 hours ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ6 hours ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು6 hours ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ7 hours ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ7 hours ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ7 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌