International Yoga Day 2024: ಈ ಉಸಿರಾಟದ ತಂತ್ರಗಳು ಮಾನಸಿಕ ಒತ್ತಡ ನಿವಾರಿಸುತ್ತವೆ! - Vistara News

ಯೋಗ ದಿನ

International Yoga Day 2024: ಈ ಉಸಿರಾಟದ ತಂತ್ರಗಳು ಮಾನಸಿಕ ಒತ್ತಡ ನಿವಾರಿಸುತ್ತವೆ!

International Yoga Day 2024: ಇದು ಒತ್ತಡದ ಜಗತ್ತು. ಈ ಒತ್ತಡದಿಂದ ಬಿಡುಗಡೆಯ ನಿಟ್ಟುಸಿರೊಂದು ಬರಬೇಡವೇ? ಅದಕ್ಕಾಗಿ ಉಸಿರನ್ನೇ ನೆಚ್ಚಿಕೊಳ್ಳಿ ಎನ್ನುತ್ತಾರೆ ಯೋಗಾಸಕ್ತರು. ಹೌದು, ಕೆಲವು ಉಸಿರಾಟದ ತಂತ್ರಗಳಿಂದ ಒತ್ತಡ ನಿವಾರಣೆ ಮಾಡಿ, ಮನಸಿಗೆ ನೆಮ್ಮದಿಯನ್ನೂ ದೇಹಕ್ಕೆ ಆರೋಗ್ಯವನ್ನೂ ತಂದುಕೊಳ್ಳಬಹುದು. ಏನು ತಂತ್ರಗಳವು? ಸ್ವಾಸ್ಥ್ಯ ಹೆಚ್ಚಳಕ್ಕೆ ಹೇಗೆ ಉಸಿರಾಡಬೇಕು- ಎಂಬೆಲ್ಲ ಮಾಹಿತಿಗಳು ಇಲ್ಲಿವೆ. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಪ್ರಾಣಾಯಾಮದ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Benefits of Bhramari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಸಿರನ್ನು ನಾನಾ ಅವಧಿಗಳು, ಆವರ್ತನಗಳು (Breathing Exercises) ಮತ್ತು ಪ್ರಮಾಣಗಳಲ್ಲಿ ಹಿಡಿಯುವ ಮತ್ತು ಬಿಡುವ ಮೂಲಕ ಮನಸ್ಸು ಮತ್ತು ದೇಹವನ್ನು ಏಕತ್ರಗೊಳಿಸುವ ಕ್ರಮವೆಂದೇ ಪ್ರಾಣಾಯಾಮ ಪ್ರಖ್ಯಾತವಾಗಿದೆ. ಬೇಡದ ವಸ್ತು ಮತ್ತು ಶಕ್ತಿಗಳಿಂದ ದೇಹ-ಮನಸ್ಸುಗಳನ್ನು ಮುಕ್ತಗೊಳಿಸುವುದರ ಜೊತೆಗೆ, ದೇಹಕ್ಕೆ ಆಮ್ಲಜನಕದ ಹರಿವನ್ನು ಹೆಚ್ಚಿಸಿ, ಒತ್ತಡ ನಿವಾರಿಸುವ ಗುಣವನ್ನು ಇದು ಹೊಂದಿದೆ. ಎತ್ತಣವೂ ಇರುವುದು ಒತ್ತಡವೊಂದೇ ಈ ಲೋಕದಲ್ಲಿ. ಹಾಗೆಂದು ಉಬ್ಬೆ ಹಾಕಿದಂಥ ಬದುಕನ್ನು ಬದುಕಲಾದೀತೆ? ಈ ಒತ್ತಡದಿಂದ ಬಿಡುಗಡೆಯ ನಿಟ್ಟುಸಿರೊಂದು ಬರಬೇಡವೇ? ಅದಕ್ಕಾಗಿ ಉಸಿರನ್ನೇ ನೆಚ್ಚಿಕೊಳ್ಳಿ ಎನ್ನುತ್ತಾರೆ ಯೋಗಾಸಕ್ತರು. ಹೌದು, ಕೆಲವು ಉಸಿರಾಟದ ತಂತ್ರಗಳಿಂದ ಒತ್ತಡ ನಿವಾರಣೆ ಮಾಡಿ, ಮನಸಿಗೆ ನೆಮ್ಮದಿಯನ್ನೂ ದೇಹಕ್ಕೆ ಆರೋಗ್ಯವನ್ನೂ ತಂದುಕೊಳ್ಳಬಹುದು. ಏನು ತಂತ್ರಗಳವು? ಸ್ವಾಸ್ಥ್ಯ ಹೆಚ್ಚಳಕ್ಕೆ ಹೇಗೆ ಉಸಿರಾಡಬೇಕು- ಎಂಬೆಲ್ಲ ಮಾಹಿತಿಗಳು (International Yoga Day 2024) ಇಲ್ಲಿವೆ.

Benefits of Bhramari

ಭ್ರಾಮರಿ

ಹೊರಗಿನ ಶಬ್ದಗಳು ಅತಿಯಾದಾಗ ಒಳಗಿನ ಧ್ವನಿ ಕೇಳುವುದಿಲ್ಲ. ಆಗ ಹೊರಗದ್ದಲವನ್ನು ಲಯ ಮಾಡುವ ಇನ್ನೊಂದು ಧ್ವನಿ ಒಳಗಿನಿಂದ ಬೇಕಾಗುತ್ತದೆ. ಇದಕ್ಕೆ ಭ್ರಾಮರಿ ಪ್ರಾಣಾಯಾಮವನ್ನು ಉದಾಹರಿಸಬಹುದು. ಅಂದರೆ, ದುಂಬಿ ಝೇಂಕಾರದಂಥ ದನಿಯನ್ನು ಮಾಡುವ ಉಸಿರಾಟದ ಕ್ರಮವಿದು. ಹೊರಗಿನ ಗಲಾಟೆಯನ್ನು ಕೇಳದಂತೆ ಮಾಡಿ, ನಮ್ಮ ಆಂತರ್ಯದ ದನಿಗೆ ಕಿವಿಯಾಗಿಸುವ ತಂತ್ರವಿದು.

4-4ರ ಉಸಿರಾಟ

ಉಸಿರಾಟ ಕ್ರಮ ಯಾವುದೇ ಆದರೂ, ನಮ್ಮ ಗಮನ ಸಂಪೂರ್ಣವಾಗಿ ಇರಬೇಕಾದದ್ದು ಉಸಿರಿನ ಮೇಲೆಯೇ. ನಮ್ಮ ಗಮನ ಕೇಂದ್ರೀಕರಿಸಲು ಸೂಕ್ತವಾದಂಥ ಈ 4-4ರ ಕ್ರಮಕ್ಕೆ ಬಾಕ್ಸ್‌ ಕ್ರಮ ಎಂದೂ ಕರೆಯಲಾಗುತ್ತದೆ. ಅಂದರೆ, 4 ಸೆಕೆಂಡ್‌ ಉಸಿರು ಒಳಗೆ ತೆಗೆದುಕೊಳ್ಳಿ (ಪೂರಕ), 4 ಸೆಕೆಂಡ್‌ ಉಸಿರು ನಿಲ್ಲಿಸಿ (ಕುಂಭಕ), 4 ಸೆಕೆಂಡ್‌ ಉಸಿರು ಹೊರಗೆ ಬಿಡಿ (ರೇಚಕ), 4 ಸೆಕೆಂಡ್‌ ನಿಲ್ಲಿಸಿ (ಕುಂಭಕ)- ಇದನ್ನೇ ಪುನರಾವರ್ತಿಸಿ. ಮಂಗನಂತಾಡುವ ಮನಸ್ಸನ್ನು ಒಂದೆಡೆ ನಿಲ್ಲಿಸಲು ಇದು ಸೂಕ್ತ.

Kapalbhati Pranayama Yoga Poses For Bright And Glowing Skin

ಕಪಾಲಭಾತಿ

ಶಬ್ದದ ಅರ್ಥ ತಲೆಬುರುಡೆಯ ಬೆಳಕು ಎಂಬುದಾಗಿ! ಆದರೆ ಸಶಕ್ತವಾಗಿ ಉಸಿರನ್ನು ಒಳಗೆಳೆದುಕೊಳ್ಳುವ ಈ ತಂತ್ರದಿಂದ ದೇಹದ ಯಾವುದೇ ನಾಡಿ ಮತ್ತು ಚಕ್ರಗಳಲ್ಲಿ ಇರಬಹುದಾದ ತಡೆಯನ್ನು ನಿವಾರಿಸುವ ವಿಧಾನವಾಗಿ ಇದು ಬಳಕೆಯಾಗುತ್ತದೆ. ಮಾತ್ರವಲ್ಲ, ಶರೀರವನ್ನು ಡಿಟಾಕ್ಸ್‌ ಮಾಡಿ, ನರ, ಪರಿಚಲನೆ, ಎದೆ ಮತ್ತು ಕಿಬ್ಬೊಟ್ಟೆಗಳನ್ನು ಸಶಕ್ತ ಮಾಡುವಂಥ ಕ್ಲಿಷ್ಟ ಎನ್ನಬಹುದಾದ ಪ್ರಾಣಾಯಾಮವಿದು.

4-7-8ರ ಉಸಿರಾಟ

ಒತ್ತಡ ನಿವಾರಣೆಗೆ ಈ ಉಸಿರಾಟದ ತಂತ್ರ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಈ ಕ್ರಮದಲ್ಲಿ, 4 ಸೆಕೆಂಡ್‌ ಉಸಿರು ಒಳಗೆಳೆದುಕೊಳ್ಳಿ, 7 ಸೆಕೆಂಡ್‌ ನಿಲ್ಲಿಸಿ, 8 ಸೆಕೆಂಡ್‌ಗೆ ಉಸಿರನ್ನು ಬಾಯಿಯಿಂದ ನಿಧಾನಕ್ಕೆ ಹೊರಗೆ ಬಿಡಿ. ಅಂದರೆ 4 ಸೆಕೆಂಡ್‌ ಪೂರಕ, 7 ಸೆಕೆಂಡ್‌ ಕುಂಭಕ, 8 ಸೆಕೆಂಡ್‌ಗಳ ರೇಚಕವನ್ನು ಹಲವಾರು ನಿಮಿಷಗಳ ಕಾಲ ಪುನರಾವರ್ತಿಸುವುದು ಕ್ರಮ.

ಭಸ್ತ್ರಿಕಾ

ಕಿಡಿಗೆ ತಿದಿಯೂದಿದಂತೆ ಉಸಿರಾಡುವ ಕ್ರಮವೆಂದು ಇದನ್ನು ಬಣ್ಣಿಸಬಹುದು. ಏಕೋ ಬೆಳಗ್ಗೆ ಎದ್ದಾಗಿನಿಂದ ಸುಸ್ತು, ಶಕ್ತಿಯೇ ಇಲ್ಲ ಎಂಬಂಥ ಸಮಯದಲ್ಲಿ ಮೂರು ಆವರ್ತ ಭಸ್ತ್ರಿಕಾ ಮಾಡುವುದು ನೆರವಾಗಬಹುದು. ದೀರ್ಘವಾಗಿ ಮತ್ತು ಸಶಕ್ತವಾಗಿ ಉಸಿರನ್ನು ಎಳೆದುಕೊಳ್ಳುವುದು ಮತ್ತು ಬಿಡುವುದು ಇದರ ವೈಶಿಷ್ಟ್ಯ. ದೇಹ ಮತ್ತು ಮನಸ್ಸುಗಳ ಅಗ್ನಿಯನ್ನು ಪ್ರಖರವಾಗಿ ಜ್ವಲಿಸುವಂತೆ ಮಾಡಿ, ಅಜೀರ್ಣದಂಥ ತೊಂದರೆಯನ್ನು ನಿವಾರಣೆ ಮಾಡುತ್ತದೆ.

Nadi Shodhana Pranayama

ನಾಡಿಶೋಧನ

ನಿಮ್ಮ ಕೆಲಸದಲ್ಲಿ ಶ್ರದ್ಧೆ, ಗಮನವನ್ನು ಕೇಂದ್ರೀಕರಿಸಲಾಗುತ್ತಿಲ್ಲವೇ? ಒಂಬತ್ತು ಸುತ್ತುಗಳ ನಾಡಿಶೋಧನ ಪ್ರಾಣಾಯಾಮ ಇದಕ್ಕೆ ಉಪಶಮನ ನೀಡಬಲ್ಲದು. ನಾಡಿಗಳಲ್ಲಿರುವ ತಡೆಗಳನ್ನು ನಿವಾರಿಸಿ, ಪ್ರಾಣಶಕ್ತಿಯ ಸಂಚಾರವನ್ನು ಸುಸೂತ್ರ ಮಾಡುವ ಅರ್ಥದಲ್ಲೇ ಈ ಪ್ರಾಣಾಯಾಮಕ್ಕೆ ಹೆಸರಿಡಲಾಗಿದೆ. ಮೂಗಿನ ಹೊಳ್ಳೆಗಳಲ್ಲಿ ಒಂದನ್ನು ಮುಚ್ಚಿಕೊಂಡು ಇನ್ನೊಂದರಲ್ಲಿ ಉಸಿರೆಳೆದುಕೊಂಡು, ಉಸಿರು ಬಿಡುವಾಗ ಮುಚ್ಚಿದ ಹೊಳ್ಳೆಯನ್ನು ತೆರೆದು, ತೆರೆದಿದ್ದನ್ನು ಮುಚ್ಚಿಕೊಳ್ಳುವುದು. ದೇಹದ ತ್ರಿದೋಷಗಳನ್ನು ಸಮತೋಲನಕ್ಕೆ ತರುವ ಸಾಧ್ಯತೆ ಈ ರೀತಿಯ ಉಸಿರಾಟಕ್ಕಿದೆ.

ಇದನ್ನೂ ಓದಿ: International Yoga Day 2024: ಅಂತಾರಾಷ್ಟ್ರೀಯ ಯೋಗ ದಿನ ಭಾರತದ ಹೆಮ್ಮೆ; ಈ ವರ್ಷದ ಥೀಮ್‌ ಏನು?

ಶೀತಲಿ

ಬೇಡದ ಯೋಚನೆಗಳಿಂದ ತಲೆ ಕೆಟ್ಟು ಗೊಬ್ಬರವಾಗಿದೆಯೇ? ಮೈಮನಸ್ಸುಗಳನ್ನು ಶೀತಲಗೊಳಿಸುವ ಉಸಿರಾಟದ ತಂತ್ರವಿದು. ನಾಲಿಗೆಯನ್ನು ಹೊರಗೆ ಚಾಚಿ, ಸುರುಳಿ ಸುತ್ತಿ. ಇದರ ಮೂಲಕ ಉಸಿರನ್ನು ದೀರ್ಘವಾಗಿ ಒಳಗೆಳೆದುಕೊಳ್ಳಿ. ನಂತರ ಮೂಗಿನಿಂದ ಉಸಿರನ್ನು ಹೊರಗೆ ಬಿಡಿ. ಇದನ್ನೇ ಪುನರಾವರ್ತಿಸಿ. ಯೋಚನೆಗಳಿಂದ ಕಾದ ದೇಹ-ಮನಸ್ಸಿಗೆ ಈ ಮೂಲಕ ತಂಪೆರೆಯಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Bengaluru News: ಐಟಿಐ ಸೆಂಟ್ರಲ್ ಶಾಲೆಯಲ್ಲಿ ಯೋಗ ದಿನಾಚರಣೆ

Bengaluru News: ಬೆಂಗಳೂರು ನಗರದ ಐ.ಟಿ.ಐ. ಸೆಂಟ್ರಲ್ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಎನ್.ಸಿ.ಸಿ. ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಪ್ರದರ್ಶಿಸಲಾಯಿತು.

VISTARANEWS.COM


on

10th International Yoga Day celebration at ITI Central School Bengaluru
Koo

ಬೆಂಗಳೂರು: ನಗರದ ಐ.ಟಿ.ಐ ಸೆಂಟ್ರಲ್ ಶಾಲೆಯಲ್ಲಿ (Bengaluru News) 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (Yoga Day) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಎನ್.ಸಿ.ಸಿ. ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರಮತಿ ಪೊನ್ಮಲರ್ ಮಾತನಾಡಿ, ಯೋಗಾಭ್ಯಾಸದಿಂದ ಮನಸ್ಸು, ದೇಹ, ಆಲೋಚನೆ ಮತ್ತು ಕ್ರಿಯೆಗಳನ್ನು ಸಮಚಿತ್ತಗೊಳಿಸಲು ಸಹಕಾರಿಯಾಗಿದೆ. ಯೋಗ ಕೇವಲ ವ್ಯಾಯಾಮವಷ್ಟೇ ಅಲ್ಲದೇ ನಮ್ಮೆಲ್ಲರ ನಡುವೆ ಏಕತೆಯನ್ನು ಬಿಂಬಿಸುವ ಚಟುವಟಿಕೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: GST Council Meet : ನಕಲಿ ಬಿಲ್​ ತಡೆಗೆ ಬಯೋಮೆಟ್ರಿಕ್​ ವ್ಯವಸ್ಥೆ; ಜಿಎಸ್​ಟಿ ಕೌನ್ಸಿಲ್​ ಸಭೆಯಲ್ಲಿ ಹಲವು ನಿರ್ಧಾರಗಳು ಪ್ರಕಟ

ಯೋಗ ಪ್ರತಿಯೊಬ್ಬರ ಜೀವನದಲ್ಲೂ ಖಾಯಿಲೆ ಮುಕ್ತ , ಆರೋಗ್ಯವಂತ ಹಾಗೂ ಜೀವನಶೈಲಿಯನ್ನು ಬದಲಾಯಿಸಲು ಇರುವ ಒಂದು ವಿಶಿಷ್ಟ ಮಾರ್ಗ ಎಂದು ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಐ.ಟಿ.ಐ ಸೆಂಟ್ರಲ್ ಶಾಲೆಯ ಎನ್.ಸಿ.ಸಿ ತಂಡ ಹಾಗೂ ವಿದ್ಯಾರ್ಥಿಗಳಿಂದ ಹಲವು ಯೋಗಾಸನಗಳನ್ನು ಎನ್.ಸಿ.ಸಿ. ಅಧಿಕಾರಿ ಬಾಲಕೃಷ್ಣ ವಿ.ಎಚ್. ಅವರ ಮಾರ್ಗದರ್ಶನದಲ್ಲಿ ಪ್ರದರ್ಶಿಸಲಾಯಿತು.

ಈ ವೇಳೆ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ, ತ್ರಿಕೋನಾಸನ, ಅರ್ಧಉಷ್ಟ್ರಾಸನ, ಶಶಾಂಕಾಸನ, ಸೇತುಬಂದಾಸನ, ಶಲಭಾಸನ, ಚಕ್ರಾಸನ, ಭುಜಂಗಾಸನ ಹಾಗೂ ಪ್ರಾಣಾಯಾಮಗಳನ್ನು ಪ್ರದರ್ಶಿಸಲಾಯಿತು. ಐ.ಟಿ.ಐ. ಕಾರ್ಖಾನೆಯ ವಿವಿಧ ಸ್ಥಳಗಳಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾಮಂದಿರ ಶಾಲೆ, ಐ.ಟಿ.ಐ. ಮಹಿಳಾ ಸಬಲೀಕರಣ ಸಮಿತಿಯಿಂದಲೂ ಯೋಗ ಕಾರ್ಯಕ್ರಮ ಜರುಗಿತು.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಲ್ಲಿ 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಐ.ಟಿ.ಐ. ವಿದ್ಯಾಸಮಿತಿಯ ಆಡಳಿತಾಧಿಕಾರಿ ಲತಾ ಹಾಗೂ ಶಿಕ್ಷಕರು ಮತ್ತು ಇತರರು ಪಾಲ್ಗೊಂಡಿದ್ದರು.

Continue Reading

ಆರೋಗ್ಯ

Yoga for Fertility: ಈ 6 ಆಸನಗಳಿಂದ ಸಂತಾನ ಭಾಗ್ಯ ಸಾಧ್ಯ!

ಯೋಗದಿಂದ ರೋಗ ನಾಶ (Yoga for Fertility) ಎಂಬುದನ್ನು ಸಾಕಷ್ಟು ಕೇಳಿದ್ದೇವೆ. ಯೋಗವು ಫಲವಂತಿಕೆಯ ಸಮಸ್ಯೆಗೂ ಮದ್ದಾಗಬಲ್ಲದೇ? ಹಾಗಲ್ಲ, ಕೆಲವು ಆಸನಗಳು ಫಲವಂತಿಕೆಯ ಸಮಸ್ಯೆಯನ್ನು ನಿವಾರಿಸುವಲ್ಲಿ ನೆರವಾಗಬಲ್ಲವು. ಈ ನಿಟ್ಟಿನಲ್ಲಿ ಕೆಲವು ಆಸನಗಳನ್ನು ಇಲ್ಲಿ ಹೇಳಲಾಗಿದೆ.

VISTARANEWS.COM


on

Yoga for Fertility
Koo

ಹಲವು ರೀತಿಯ ಆರೋಗ್ಯ (Yoga for Fertility) ಸಮಸ್ಯೆಗಳಿಗೆ ಯೋಗ ಉತ್ತರ ನೀಡಬಲ್ಲದು. ಉಳಿದೆಲ್ಲ ವ್ಯಾಯಾಮಗಳಂತೆ ಕೇವಲ ದೈಹಿಕ ವಿಷಯಗಳತ್ತ ಗಮನ ನೀಡದ ಯೋಗ, ಮಾನಸಿಕ ಸ್ತರದಿಂದಲೇ ಅಂದರೆ ಮೂಲದಿಂದಲೇ ವಿಷಯಗಳನ್ನು ಉದ್ದೇಶಿಸುತ್ತಾ ಬರುತ್ತದೆ. ಈ ಮೂಲಕ ದೇಹದ ಹಲವಾರು ಗ್ರಂಥಿಗಳು, ಚೋದಕಗಳು, ಅಂಗಗಳು ಸರಿಯಾಗಿ ಕೆಲಸ ಮಾಡಲು ನೆರವು ನೀಡುತ್ತದೆ. ಹೀಗೆ ಸಮತೋಲನಕ್ಕೆ ತರಬಹುದಾದ ಹಲವು ತೊಂದರೆಗಳ ಪೈಕಿ ಫಲವಂತಿಕೆಯ ಸಮಸ್ಯೆಯೂ ಒಂದು.
ದೇಹದ ಒಟ್ಟಾರೆ ಸ್ವಾಸ್ಥ್ಯಕ್ಕೂ ಫಲವಂತಿಕೆಗೂ ನಿಟಕ ಸಂಬಂಧವಿದೆ. ಅದರಲ್ಲೂ ಒತ್ತಡ, ಆತಂಕ ಮುಂತಾದ ಚಿತ್ತ ವಿಕಾರಗಳು ಹೆಚ್ಚಿದಂತೆ ಫಲವಂತಿಕೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಮಹಿಳೆ ಮತ್ತು ಪುರುಷರಿಬ್ಬರ ವಿಷಯದಲ್ಲೂ ಸತ್ಯ. ಮಾನಸಿಕ ಒತ್ತಡಗಳನ್ನು ನಿವಾರಿಸಿಕೊಳ್ಳಲು ಯೋಗ ಬಹುದೊಡ್ಡ ಕೊಡುಗೆಯನ್ನು ನೀಡುತ್ತದೆ. ಜೊತೆಗೆ ಹಾರ್ಮೋನುಗಳ ಸಮತೋಲನಕ್ಕೆ ಮತ್ತು ತೂಕ ಇಳಿಸಿ ಬೊಜ್ಜು ಕಡಿಮೆ ಮಾಡುವಲ್ಲೂ ಯೋಗ ಅನುಕೂಲ ಕಲ್ಪಿಸುತ್ತದೆ. ಹೀಗೆ ಫಲವಂತಿಕೆಯ ಹೆಚ್ಚಳಕ್ಕೆ ಯೋಗಾಭ್ಯಾಸ ನೆರವು ನೀಡಬಲ್ಲದು. ಇದಕ್ಕೆ ಯಾವೆಲ್ಲ ಆಸನಗಳು ಸೂಕ್ತ?

Setubandhasana

ಸೇತುಬಂಧಾಸನ

ಇದು ಎದೆ, ಕುತ್ತಿಗೆ, ಬೆನ್ನುಹುರಿ, ಸೊಂಟ, ಕಿಬ್ಬೊಟ್ಟೆಯ ಭಾಗಗಳಿಗೆ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಹೊಟ್ಟೆಯ ಎಲ್ಲ ಅಂಗಗಳಿಗೂ ರಕ್ತ ಪರಿಚಲನೆಯನ್ನು ಹೆಚ್ಚಿಸಿ, ಫಲವಂತಿಕೆಯ ಸಾಧ್ಯತೆಯನ್ನು ದಟ್ಟವಾಗಿಸುತ್ತದೆ. ಎರಡೂ ಪಾದಗಳನ್ನು ಊರಿ ನೆಲಕ್ಕೆ ಒತ್ತಿ, ಮುಂಡದ ಭಾಗವನ್ನು ಮೇಲಕ್ಕೆತ್ತಿ 5-10 ಬಾರಿ ಉಸಿರಾಡಬಹುದು. ಇದನ್ನು ಹಲವು ಬಾರಿ ಪುನರಾವರ್ತಿಸಬಹುದು.

ವಿಪರೀತ ಕರಣಿ

ಕಿಬ್ಬೊಟ್ಟೆಯ ಭಾಗಕ್ಕೆಲ್ಲ ರಕ್ತ ಪರಿಚಲನೆಯನ್ನು ಸುಧಾರಿಸುವ ಆಸನವಿದು. ಜೊತೆಗೆ ಹೊಟ್ಟೆಯ ಭಾಗವನ್ನೆಲ್ಲ ಸಶಕ್ತಗೊಳಿಸುತ್ತದೆ. ಗೋಡೆಯ ಪಕ್ಕದಲ್ಲಿ ನೇರ ಮಲಗಿ, ನಿಧಾನಕ್ಕೆ ಕಾಲನ್ನು ಮೇಲ್ಮುಖವಾಗಿ ಗೋಡೆಗೆ ಆನಿಸಿ ನೇರವಾಗಿ ಚಾಚಿ. ಇದೀಗ ಶರೀರ ʻಎಲ್‌ʼ ಆಕೃತಿಯಲ್ಲಿ ಕಾಣಬೇಕು. ಈ ಭಂಗಿಯಲ್ಲಿ 5-10 ನಿಮಿಷಗಳವರೆಗೂ ಹಿಡಿಯಬಹುದು.

Veerabhadrasana

ವೀರಭದ್ರಾಸನ

ಈ ಆಸನವನ್ನು ಒಂದಕ್ಕಿಂತ ಹೆಚ್ಚಿನ ಕ್ರಮದಲ್ಲಿ ಅಭ್ಯಾಸ ಮಾಡಲಾಗುತ್ತದೆ. ಈ ಎಲ್ಲಾ ಆಸನಗಳು ಕಾಲು, ತೋಳು ಮತ್ತು ಹೊಟ್ಟೆ, ಬೆನ್ನಿನ ಸ್ನಾಯುಗಳನ್ನು ಬಲಗೊಳಿಸುವಂಥವು. ನಿಯಮಿತವಾಗಿ ಈ ಆಸನ ಅಭ್ಯಾಸ ಮಾಡುವುದರಿಂದ ಬಹಳಷ್ಟು ಕ್ಯಾಲರಿಗಳನ್ನು ಕರಗಿಸಿ, ದೇಹದ ಅದಷ್ಟೂ ಭಾಗಗಳ ಕೊಬ್ಬು ಇಳಿಸಬಹುದು. ತೂಕ ಹೆಚ್ಚಳದಿಂದ ಫಲವಂತಿಕೆಯ ಸಮಸ್ಯೆಯಿದ್ದರೆ ಇಂಥ ಆನಸಗಳು ಸೂಕ್ತ.

Dhanurasana

ಧನುರಾಸನ

ಈ ಆಸನ ಮಾಡುವ ಲಾಭಗಳು ಬಹಳಷ್ಟಿವೆ. ದೇಹದ ಚಯಾಪಚಯವನ್ನು ಹೆಚ್ಚಿಸಿ, ಹೊಟ್ಟೆ ಮತ್ತು ತೊಡೆಗಳು ಬೊಜ್ಜು ನಿವಾರಿಸಿ, ಜೀರ್ಣಾಂಗಗಳ ಆರೋಗ್ಯ ಸುಧಾರಿಸುತ್ತದೆ. ಮುಟ್ಟಿನ ಹೊಟ್ಟೆ ನೋವಿನ ಉಪಶಮನಕ್ಕೂ ಇದು ಉಪಯುಕ್ತವಾಗಿದೆ. ಬೆನ್ನು ಮತ್ತು ಸೊಂಟದ ಬಲವರ್ಧನೆಗೂ ಇದು ಸಹಾಯಕ. ಮೊದಲಿಗೆ, ಮುಖ ಅಡಿಯಾಗುವಂತೆ ಮಲಗಿ, ಕೈಕಾಲುಗಳನ್ನು ನೇರವಾಗಿ ಚಾಚಬೇಕು. ಕಾಲು ಮಡಿಸಿ, ಗಜ್ಜೆ ಹಾಕುವ ಭಾಗವನ್ನು ಕೈಗಳಿಂದ ಹಿಡಿಯಬೇಕು. ಕಾಲುಗಳನ್ನು ದೇಹದ ಅಗಲಕ್ಕಿಂತ ಹೆಚ್ಚು ಅಗಲ ಇರಿಸುವಂತಿಲ್ಲ. ಈಗ ಕೈಗಳಿಂದ ಕಾಲೆಳೆಯುತ್ತಾ, ಕಾಲುಗಳಿಂದ ಕೈ ಎಳೆಯುತ್ತಾ ಎರಡೂ ಕಾಲುಗಳನ್ನು ಮತ್ತು ಮುಖವನ್ನು ಮೇಲಕ್ಕೆತ್ತಬೇಕು.

ಸುಪ್ತ ಬದ್ಧಕೋನಾಸನ

ಮೊದಲು ನೇರವಾಗಿ ಮಲಗಿ. ನಂತರ, ಮಂಡಿಗಳನ್ನು ಮಡಿಸಿ, ಪಾದಗಳನ್ನು ಒಂದಕ್ಕೊಂದು ಸೇರಿಸಿ ʻನಮಸ್ತೆʼ ಮಾಡುವಂತೆ ಹಿಡಿಯಿರಿ. ಇದರಿಂದ ತೊಡೆ, ಪೃಷ್ಠ ಮತ್ತು ಕಿಬ್ಬೊಟ್ಟೆಯ ಕೆಳಭಾಗದವರೆಗೂ ಸ್ನಾಯುಗಳು ಚುರುಕಾಗುತ್ತದೆ. ಇದನ್ನು ಮೂರ್ನಾಲ್ಕು ನಿಮಿಷಗಳವರೆಗೂ ಹಿಡಿಯಬಹುದು.

ಇದನ್ನೂ ಓದಿ: International Yoga day 2024: ಎಚ್ಚರವಾಗಿದ್ದೇ ನಿದ್ದೆ ಮಾಡಬಹುದೆ? ಯೋಗನಿದ್ರೆ ತಂತ್ರ ಕಲಿಯಿರಿ!

ಭುಜಂಗಾಸನ

ಹೊಟ್ಟೆ ಮತ್ತು ಬೆನ್ನುಹುರಿಯ ಅಕ್ಕಪಕ್ಕದ ಸ್ನಾಯುಗಳು ಇದರಿಂದ ಬಲಗೊಳ್ಳುತ್ತವೆ. ಜೊತೆಗೆ, ಸೊಂಟ, ಕಿಬ್ಬೊಟ್ಟೆ, ಎದೆ, ಭುಜ ಮತ್ತು ತೋಳುಗಳ ಸ್ನಾಯುಗಳ ಮೇಲೂ ಇದು ಕೆಲಸ ಮಾಡುತ್ತದೆ. ಹೆಡೆ ಎತ್ತಿದ ಹಾವಿನಂತೆ ಕಾಣುವ ಭಂಗಿಯಿದು. ಮೊದಲಿಗೆ ಮುಖ ಅಡಿ ಮಾಡಿ ಮಲಗಿ. ಹಸ್ತಗಳನ್ನು ಎದೆಯ ಪಕ್ಕದಲ್ಲಿ ಊರಿ, ಕಟಿಯಿಂದ ಮೇಲೆ ಭಾಗವನ್ನು ನಿಧಾನಕ್ಕೆ ಮೇಲೆತ್ತಿ ನಿಲ್ಲಿಸಿ. ಇದರಿಂದ ಗರ್ಭಾಶಯದ ಭಾಗಕ್ಕೆಲ್ಲ ರಕ್ತ ಪರಿಚಲನೆ ಹೆಚ್ಚುತ್ತದೆ.

Continue Reading

ಕರ್ನಾಟಕ

HD Kumaraswamy: ಯೋಗ ನಮ್ಮ ಜೀವನ ಶೈಲಿಯಾಗಬೇಕು; ಎಚ್.ಡಿ.ಕುಮಾರಸ್ವಾಮಿ

HD Kumaraswamy: ಯೋಗದ ಮೂಲಕ ಮಾಡುವ ಸಾಧನೆ ಭವ್ಯ ಭಾರತಕ್ಕೆ ಪೂರಕ. ವಿಕಾಸಕ್ಕೆ ಪೂರಕ. ಮನುಕುಲಕ್ಕೆ ಪೂರಕ. ಸಾಧನೆಯ ಮೆಟ್ಟಿಲೇರಲು ಕೂಡ ಪೂರಕ. ಒಟ್ಟಾರೆಯಾಗಿ ಯೋಗವು ನಮ್ಮನ್ನು ಸಾಧಕರನ್ನಾಗಿ ಮಾಡಿ ದೇಶವನ್ನು ರಚನಾತ್ಮಕವಾಗಿ ಕಟ್ಟುತ್ತದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Everyone should make yoga a lifestyle says Union Minister HD Kumaraswamy
Koo

ನವದೆಹಲಿ: ಪ್ರತಿಯೊಬ್ಬರೂ ಯೋಗವನ್ನು (Yoga) ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ನವದೆಹಲಿಯ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿಗೆ ಭಾರತ ಕೊಟ್ಟ ಅಮೂಲ್ಯ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತನ್ನು ಭಾರತ ಬೆಸೆದಿದೆ. ಯೋಗವೆಂದರೆ ‘ಜೋಡಿಸು’ ‘ಸೇರಿಸು’ ‘ಕೂಡಿಸು’ ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: T20 World Cup 2024 : ಭಾರತ- ಬಾಂಗ್ಲಾ ಸೂಪರ್​ 8 ಪಂದ್ಯಕ್ಕೆ ಮಳೆ ಅಡಚಣೆ ಇದೆಯೇ?

ಋಷಿ ಮುನಿಗಳು ನಮಗೆ ಯೋಗವನ್ನು ಕೊಟ್ಟು ಹೋದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಿ ಭಾರತದ ನೆಲದಲ್ಲಿ ನಿಂತು ಜಗತ್ತನ್ನು ನೋಡುವ ಹಿರಿಮೆಯನ್ನು ತಂದುಕೊಟ್ಟರು. ಇದಕ್ಕಾಗಿ ನಾನು ಪ್ರಧಾನಿಗಳನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಯೋಗ ವಿಕಾಸಕ್ಕೆ ಪೂರಕ

ಯೋಗದ ಮೂಲಕ ಮಾಡುವ ಸಾಧನೆ ಭವ್ಯ ಭಾರತಕ್ಕೆ ಪೂರಕ. ವಿಕಾಸಕ್ಕೆ ಪೂರಕ. ಮನುಕುಲಕ್ಕೆ ಪೂರಕ. ಸಾಧನೆಯ ಮೆಟ್ಟಿಲೇರಲು ಕೂಡ ಪೂರಕ. ಒಟ್ಟಾರೆಯಾಗಿ ಯೋಗವು ನಮ್ಮನ್ನು ಸಾಧಕರನ್ನಾಗಿ ಮಾಡಿ ದೇಶವನ್ನು ರಚನಾತ್ಮಕವಾಗಿ ಕಟ್ಟುತ್ತದೆ ಎಂದು ಸಚಿವರು ಒತ್ತಿ ಹೇಳಿದರು.

ಯೋಗವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಸನ್ನು ನಿಯಂತ್ರಿಸುತ್ತದೆ. ಯೋಗವು ನಮ್ಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುತ್ತದೆ. ಪ್ರತಿದಿನ ಯೋಗ ಮಾಡುವ ಮೂಲಕ ನಾವೆಲ್ಲರೂ ನಮ್ಮ ದೇಹ, ಮನಸ್ಸು ಚೈತನ್ಯಶೀಲವಾಗಿರುತ್ತದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಮನಸ್ಸು, ದೇಹ ಎರಡೂ ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುವ ಯೋಗಕ್ಕೆ 5,000 ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ಯೋಗದ ಬಗ್ಗೆ ಉಲ್ಲೇಖವಿದೆ ಎಂದು ನಾನು ಕೇಳಿದ್ದೇನೆ. ಅಂತ ಯೋಗ ನಮ್ಮ ದೇಶಕ್ಕೆ ಆರೋಗ್ಯವಂತ ಮಾನವ ಸಂಪನ್ಮೂಲವನ್ನು ಸೃಷ್ಟಿ ಮಾಡುತ್ತಿದೆ. ದೃಢತೆಯ ನಾಯಕತ್ವಕ್ಕೆ ಯೋಗ ದೊಡ್ಡ ಕಾಣಿಕೆ ನೀಡುತ್ತಿದೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.

ಪ್ರಧಾನಿಗಳು ಯುವಕರಿಗೆ ಪ್ರೇರಣೆ

ನಾನು ಕಂಡ ಹಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನೇ ಬದುಕು ಮಾಡಿಕೊಂಡಿರುವ ನಿಜಯೋಗಿ. ಬಹುಶಃ ಅವರ ಜೀವನ ಶೈಲಿ, ಯೋಗದ ಕಡೆಗಿನ ಒಲವು ಈ ತಲೆಮಾರಿನ ಯುವಕರಿಗೆ ಪ್ರೇರಣೆ ಎಂದು ಬಲವಾಗಿ ನಂಬಿದೇನೆ. ಐದು ಸಾವಿರ ವರ್ಷಗಳಿಂದ ಭಾರತ ನೆಲದಲ್ಲಿ ನಮ್ಮ ಜೀವನ ಶೈಲಿಯೇ ಆಗಿರುವ ಯೋಗವನ್ನು ವಿಶ್ವಸಂಸ್ಥೆಗೆ ತೆಗೆದುಕೊಂಡು ಹೋದ ಪ್ರಧಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

2014ರಲ್ಲಿ ಮೋದಿ ಅವರು ಪ್ರಧಾನಿಯಾದ ನಂತರ ವಿಶ್ವಸಂಸ್ಥೆಯಲ್ಲಿ ಯೋಗ ಜಗತ್ತಿನ ಜೀವನ ಶೈಲಿ ಆಯಿತು. ಅಂದಿನಿಂದ ಯೋಗಾಭ್ಯಾಸ ಇಲ್ಲದೆ ದೇಶವೇ ಇಲ್ಲ. 2015ರಿಂದ ಪ್ರತೀ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ನನ್ನ ಪ್ರಕಾರ ಈ ದಿನ ಯೋಗದ ದಿನವಷ್ಟೇ ಅಲ್ಲ, ಭಾರತದ ಪಾರಂಪರಿಕ ಭವ್ಯತೆಯನ್ನು ಸಾರುವ ಸುದಿನ. ಇಡೀ ಜಗತ್ತೇ ಯೋಗವನ್ನು ಅವಲಂಬಿಸುತ್ತಿದೆ ಎಂದರೆ, ಇಡೀ ಜಗತ್ತು ಭಾರತವನ್ನು ವಿಶ್ವಗುರುವಾಗಿ ಪರಿಭಾವಿಸುತ್ತಿದೆ ಎಂದೇ ಅರ್ಥ. ಇಂಥ ದೇಶದ ಮಕ್ಕಳಾದ ನಾವು ಭಾಗ್ಯಶಾಲಿಗಳು. ನಾವರೆಲ್ಲರೂ ಯೋಗವನ್ನು ಜೀವನ ಶೈಲಿ ಮಾಡಿಕೊಳ್ಳೋಣ. ಎಲ್ಲರೂ ಯೋಗಾಭ್ಯಾಸ ಮಾಡೋಣ. ಯೋಗದಿಂದ ಆರೋಗ್ಯವಂತ ಬದುಕು, ಜೀವನ ಕಟ್ಟಿಕೊಳ್ಳೋಣ ಎಂದು ಸಚಿವರು ಕರೆ ನೀಡಿದರು.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ಭಾರೀ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವೀ, ಬಿಎಚ್‌ಇಎಲ್‌ ಅಧ್ಯಕ್ಷ-ವ್ಯವಸ್ಥಾಪಕ ನಿರ್ದೇಶಕ ಕೆ. ಸದಾಶಿವಮೂರ್ತಿ, ಕಂಪನಿಯ ನಿರ್ದೇಶಕರು, ಹಿರಿಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಅನೇಕರು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಯೋಗವು ದೈನಂದಿನ ಜೀವನದ ಭಾಗವಾಗಲಿ: ಡಿಸಿ ಗಂಗೂಬಾಯಿ ಮಾನಕರ್‌

Uttara Kannada News: ಕಾರವಾರ ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಉದ್ಘಾಟಿಸಿದರು.

VISTARANEWS.COM


on

10th International Yoga Day celebration Programme in karwar
Koo

ಕಾರವಾರ: ಪ್ರತಿನಿತ್ಯ ಯೋಗ (Yoga) ಮಾಡುವ ಮೂಲಕ, ಇಂದಿನ ಧಾವಂತದ ಬದುಕಿನಲ್ಲಿ ಕಾಡುವ ಹಲವು ರೀತಿಯ ಒತ್ತಡಗಳ ನಿವಾರಣೆಯ ಜತೆಗೆ ಉತ್ತಮ ಆರೋಗ್ಯ ಕೂಡ ಲಭಿಸುವುದರಿಂದ, ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ (Uttara Kannada News) ಹೇಳಿದರು.

ನಗರದ ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ & ಗೈಡ್, ಎನ್‌ಸಿಸಿ, ಎನ್.ಎಸ್.ಎಸ್, ರೆಡ್‌ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್, ರೋಟರಿ ಪಶ್ಚಿಮ, ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Top 10 Motar Bike: ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಟಾಪ್ 10 ಬೈಕ್‌ಗಳಿವು

ಮನುಷ್ಯನಿಗೆ ಬಾಹ್ಯ ಸೌಂದರ್ಯದಷ್ಟೇ, ಆಂತರಿಕ ಸೌಂದರ್ಯವೂ ಮುಖ್ಯವಾಗಿರುತ್ತದೆ. ಇವೆರಡನ್ನೂ ಕಾಪಾಡಿಕೊಂಡು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಹಾಗೂ ಏಕಾಗ್ರತೆಯಿಂದ ಇರಲು ಮತ್ತು ಶರೀರದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಯೋಗವು ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಯೋಗ ಬಲ್ಲವನಿಗೆ ರೋಗವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿದಿನ ಕನಿಷ್ಠ 5 ರಿಂದ 10 ನಿಮಿಷವಾದರೂ ಯೋಗ ಮಾಡಬೇಕು. ಇದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್. ಎನ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದ ಹಾಗೂ ಇತರರು ಇದ್ದರು.

ಇದನ್ನೂ ಓದಿ: Yadgiri News: ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಸಲಹೆ

ಯೋಗ ಶಿಕ್ಷಕ ಗಣಪತಿ ಹೆಗಡೆ, ಭಾಗವಹಿಸಿದ್ದ ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ಮೂಲಕ ಯೋಗಾಭ್ಯಾಸ ಮಾಡಿಸಿದರು. ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಕವಿತಾ ಪ್ರಾಣಾಯಾಮ ಮತ್ತು ಧ್ಯಾನದ ಕುರಿತು ತರಬೇತಿ ನೀಡಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಲಿತಾ ಶೆಟ್ಟಿ ಸ್ವಾಗತಿಸಿದರು.

Continue Reading
Advertisement
Murder case
ಬೆಂಗಳೂರು6 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ7 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ8 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು10 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ11 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ12 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ12 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ12 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

karnataka weather Forecast
ಮಳೆ2 ದಿನಗಳು ago

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌