Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ! - Vistara News

ಕ್ರೈಂ

Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

Pavithra Gowda: ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ.

VISTARANEWS.COM


on

Pavithra Gowda is restless without proper food and sleep in Parappa Agrahara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಪವಿತ್ರಾಗೌಡಗೆ ಜೈಲಿನಲ್ಲೂ ಡಿ ಬ್ಯಾರಕ್ ಕೊಠಡಿ ನೀಡಲಾಗಿದೆ. ಉಳಿದ ಆರೋಪಿಗಳು ಜೈಲಿನ ಕ್ವಾರೆಂಟೈನ್ ಬ್ಯಾರಕ್‌ಗೆ ಶಿಫ್ಟ್ ಆಗಿದ್ದಾರೆ. ನಿನ್ನೇ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್‌ನಲ್ಲಿ ವಾಕಿಂಗ್ ಕೂಡ ಮಾಡಿದ್ದಾರೆ. ಜೈಲಿನ ಸಿಬ್ಬಂದಿ ನೀಡಿದ ಕಾಪಿಯನ್ನು ಪವಿತ್ರಾ ಕುಡಿದಿದ್ದಾರೆ. ಕಾಫಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದರು ಪವಿತ್ರಾ.

ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಳ ಸಮಪಾಲು- ಸಮಬಾಳು ಪಾಲಿಸಿ! ದರ್ಶನ್ ಪತ್ನಿ ಬಳಿ ಇರುವುದೆಲ್ಲ ಇವಳಿಗೂ ಬೇಕಿತ್ತು!

ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

Road Accident: ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

VISTARANEWS.COM


on

Road Accident
Koo

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Continue Reading

ಬೆಂಗಳೂರು

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Actor Darshan: ನಟ ದರ್ಶನ್‌ ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

Continue Reading

ಕ್ರೈಂ

Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು

Self Harming: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

Self Harming
Koo

ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿರುವುದು (Self Harming) ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

ಧನರಾಜ್ (13) ಮತ್ತು ಛಾಯ (7) ಮೃತಪಟ್ಟ ಮಕ್ಕಳು. ತಾಯಿ ಶೀಲಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ | Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Road Accident

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಶಾಲಾ ವಾಹನ ಹರಿದು 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಶಾಲೆಗೆ ಹೋಗಬೇಕಿದ್ದ ಪುಟ್ಟ ಕಂದಮ್ಮ, ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ ದುರಂತ ಸಾವು ಕಂಡಿದೆ. ಸಂಗಪ್ಪ ಹೊಸೂರ್ ಎಂಬುವವರ ಪುತ್ರ ಅಭಿನಂದನ್ ಹೊಸೂರ್ (4) ಮೃತ ಬಾಲಕ.

ಶಾಲಾ ವಾಹನ ಹರಿದು ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ

Road Accident

ಮಂಡ್ಯ: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿಘಾಟ್ ಶನಿವಾರ ಸರಣಿ ಅಪಘಾತ ನಡೆದಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದಿದೆ. ಹೀಗಾಗಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಸ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

Continue Reading

ಕ್ರೈಂ

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Assault Case: ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

VISTARANEWS.COM


on

assault case bjp worker
Koo

ಮಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬ (BJP Worker) ಬಟ್ಟೆ ಅಂಗಡಿಗೆ ನುಗ್ಗಿ ವಿವಾಹಿತ ಮಹಿಳೆ (Married Woman) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕೃತ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತ, ಹೂವಿನ ವ್ಯಾಪಾರಿ ನವೀನ್ ಕನ್ಯಾಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

ಮಹಿಳೆಯ ಕಪಾಳಕ್ಕೆ ಹೊಡೆಯುವುದು ಸೇರಿ ಇತರೆಡೆ ಮಾರಣಾಂತಿಕ ಹಲ್ಲೆಯನ್ನು ನವೀನ್ ಕನ್ಯಾಡಿ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಅಂಗಡಿಯ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ಪೊಲೀಸರಿಂದ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ!

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Continue Reading
Advertisement
Road Accident
ಕ್ರೈಂ19 mins ago

Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

Virat Kohli (
ಕ್ರೀಡೆ21 mins ago

Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

T20 World Cup 2024 Celebrities Celebrates India ICC Cricket
ಕ್ರಿಕೆಟ್23 mins ago

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024 Netizen Thanking Darshan For India World Cup Win
ಸ್ಯಾಂಡಲ್ ವುಡ್48 mins ago

T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

Rohit Sharma
ಕ್ರೀಡೆ50 mins ago

Rohit Sharma: ಗೆಲುವಿನ ಸವಿ ನೆನಪಿಗಾಗಿ ಪಿಚ್​ನ ಮಣ್ಣು ತಿಂದ ರೋಹಿತ್​; ವಿಡಿಯೊ ವೈರಲ್​

swim benefits
ಆರೋಗ್ಯ1 hour ago

Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

T20 World Cup 2024
ಕ್ರಿಕೆಟ್1 hour ago

T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

tamanna bhatia gold
ಸಿನಿಮಾ2 hours ago

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Viral Video
Latest2 hours ago

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Parenting Tips
ಶಿಕ್ಷಣ2 hours ago

Parenting Tips: ಕಾಲೇಜಿಗೆ ಹೊರಡಲು ಸಿದ್ಧವಾಗಿರುವ ಮಕ್ಕಳಿಗೆ ಪೋಷಕರು ತಿಳಿಸಲೇಬೇಕಾದ ಸಂಗತಿಗಳಿವು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ17 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ23 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌