Murder Case: ಹುಡುಗಿ ಜೊತೆ ಕುಳಿತವನ ಮೇಲೆ ಗುಂಡಿನ ಸುರಿಮಳೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ - Vistara News

Latest

Murder Case: ಹುಡುಗಿ ಜೊತೆ ಕುಳಿತವನ ಮೇಲೆ ಗುಂಡಿನ ಸುರಿಮಳೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Murder Case: ಯುವಕನೊಬ್ಬನ ಮೇಲೆ 38 ಬಾರಿ ಗುಂಡು ಹಾರಿಸಿ ಭೀಕರವಾಗಿ ಕೊಲೆಮಾಡಿದ ಘಟನೆ ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ನಲ್ಲಿರುವ ಬರ್ಗರ್ ಕಿಂಗ್ ಔಟ್ ಲೆಟ್‌ನಲ್ಲಿ ನಡೆದಿದೆ. ಅಮನ್ ಎಂಬ ಯುವಕ ಕೊಲೆಯಾದವನು. ಆತ ಮಹಿಳೆಯೊಬ್ಬಳ ಜೊತೆ ಕುಳಿತಿದ್ದಾಗ ಈ ಕೃತ್ಯ ನಡೆಸಲಾಗಿದೆ. 2020ರಲ್ಲಿ ಹರ್ಯಾಣದಲ್ಲಿ ನಡೆದ ಕೊಲೆಗೆ ಪ್ರತಿಕಾರವಾಗಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ : ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ ನಲ್ಲಿರುವ ಬರ್ಗರ್ ಕಿಂಗ್ ಔಟ್ ಲೆಟ್‌ನೊಳಗೆ ಯುವಕನೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆ ನಡೆದಿದ್ದು, ಕೊಲೆ(Murder Case )ಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.

ಅಮನ್ (26 ವರ್ಷ) ಗುಂಡಿಗೆ ಬಲಿಯಾದ ಯುವಕ. ಜೂನ್ 18ರಂದು ಜನಪ್ರಿಯ ಫಾಸ್ಟ್ ಫುಡ್ ಜಾಯಿಂಟ್‌ನಲ್ಲಿ ಅಮನ್ ಮಹಿಳೆಯೊಬ್ಬಳ ಜೊತೆ ಕುಳಿತಿದ್ದಾಗ ಆಕೆ ತನ್ನ ಪೋನ್‌ನಲ್ಲಿ ಪೋಟೊ ತೋರಿಸುತ್ತಿದ್ದಳು. ಆ ವೇಳೆ ರಾತ್ರಿ 9.41ಕ್ಕೆ ಅಮನ್ ಹಿಂದೆ ಕುಳಿತಿದ್ದ ಇಬ್ಬರು ವ್ಯಕ್ತಿಗಳು ಆತನ ಮೇಲೆ ಒಂದು ಬಾರಿ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಶಬ್ದಕ್ಕೆ ಭಯ ಬಿದ್ದ ಜನರು ಅಲ್ಲಿಂದ ಓಡಿಹೋಗಿದ್ದಾರೆ. ಅಮನ್ ಬಿಲ್ಲಿಂಗ್ ಕೌಂಟರ್ ಕಡೆಗೆ ಓಡಿದ್ದಾರೆ. ಆಗ ದಾಳಿಕೋರರು ಅಮನ್‌ನನ್ನು ಹಿಂಬಾಲಿಸಿ ಆತನ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾರೆ. ಒಂದು ನಿಮಿಷದಲ್ಲಿ ಇಡೀ ಬರ್ಗರ್ ಕಿಂಗ್ ಔಟ್ ಲೆಟ್ ಜನರ ಸದ್ಬಿದಿಲ್ಲದೇ ಬಿಕೋ ಆಗಿಬಿಟ್ಟಿತು.

ಆದರೆ ಅಮನ್ ಜೊತೆ ಕುಳಿತಿದ್ದ ಮಹಿಳೆ ಮಾತ್ರ ಗುಂಡಿನ ದಾಳಿಗೆ ಸ್ವಲ್ಪವೂ ವಿಚಲಿತಳಾಗದೆ ಫುಡ್ ಜಾಯಿಂಟ್ ನಿಂದ ಹೊರಗೆ ಹೋಗಿದ್ದಾಳೆ! ಬಿಲ್ಲಿಂಗ್ ಕೌಂಟರ್ ಹಿಂದೆ ಅಮನ್ ಶವ ಪತ್ತೆಯಾಗಿದೆ. ಕೊಲೆಗಾರರು 25-30 ವರ್ಷ ವಯಸ್ಸಿನವರಾಗಿರಬಹುದು ಎಂದು ಬರ್ಗರ್ ಕಿಂಗ್ ಸಿಬ್ಬಂದಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ಅಮನ್ ಮೇಲೆ ಮೂರು ವಿಭಿನ್ನ ಪಿಸ್ತೂಲ್ ಗಳಿಂದ ಒಟ್ಟು 38 ಗುಂಡುಗಳನ್ನು ಹಾರಿಸಲಾಗಿದೆ. ಈ ಇಬ್ಬರು ಶೂಟರ್ ಗಳು ಎರಡಕ್ಕಿಂತ ಹೆಚ್ಚು ಪಿಸ್ತೂಲ್ ಗಳನ್ನು ಬಳಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.

2020ರಲ್ಲಿ ಹರ್ಯಾಣದಲ್ಲಿ ನಡೆದ ಕೊಲೆಗೆ ಪ್ರತಿಕಾರ ತೀರಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕ್ರಿಮಿನಲ್‌ಗಳ ಗ್ಯಾಂಗ್ ಪೈಪೋಟಿಯಿಂದ ಇಂತಹ ಘೋರ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಅಮನ್ ಜೊತೆ ಕುಳಿತಿದ್ದ ಮಹಿಳೆಯ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಆಕೆ ಅಮನ್ ನ ಪೋನ್ ಮತ್ತು ವ್ಯಾಲೆಟ್ ನೊಂದಿಗೆ ಕಣ್ಮರೆಯಾಗಿದ್ದಾಳೆ. ಆಕೆ ಈಗಾಗಲೇ ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದು, ಆಕೆಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗೇ ಆಕೆಯೇ ಅಮನ್ ಗೆ ಬರ್ಗರ್ ಕಿಂಗ್ ಬರಲು ಆಮಿಷ ಒಡ್ಡಿರಬಹುದು ಎಂಬುದಾಗಿ ತಿಳಿದುಬಂದಿದೆ.

Murder Case

ದೆಹಲಿ ಮತ್ತು ಹರ್ಯಾಣದ ಕುಖ್ಯಾತ ಸುಲಿಗೆಗಾರ ಹಿಮಾಂಶು ಭಾವು ಸಾಮಾಜಿಕ ಮಾಧ್ಯಮದ ಪೋಸ್ಟ್ ನಲ್ಲಿ ಈ ಕೊಲೆಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದಾನೆ. ತನ್ನ ಸಹೋದರ ಶಕ್ತಿ ದಾದಾ ಹತ್ಯೆಯಲ್ಲಿ ಅಮನ್ ಭಾಗಿಯಾಗಿದ್ದು, ಈ ಕೊಲೆ ಮೂಲಕ ಸೇಡು ತೀರಿಸಿಕೊಳ್ಳಲಾಗಿದೆ. ಆತನ ಜೊತೆ ಇರುವವರ ಸರದಿ ಶೀಘ್ರದಲ್ಲಿಯೇ ಬರಲಿದೆ ಎಂದು ಆತ ಪೋಸ್ಟ್ ಮಾಡಿ ಎಚ್ಚರಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

ಈಗಾಗಲೇ ಜೈಲಿನಲ್ಲಿರುವ ದರೋಡೆಕೋರ ನೀರಜ್ ಬವನಾ ಸಹವರ್ತಿ ಹಿಮಾಂಶು ಭಾವು 2022ರಲ್ಲಿ ದೇಶದಿಂದ ಪರಾರಿಯಾಗಿದ್ದಾನೆ. ಇದೀಗ ಆತ ಪೋರ್ಚುಗಲ್‌ನಲ್ಲಿ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Viral Video: ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡುಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಮುಂದೇನಾಯಿತು? ಈ ಸುದ್ದಿ ಓದಿ.

VISTARANEWS.COM


on

Koo

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚು ನಡೆಯುತ್ತಿದ್ದು, ಹಾಡಹಗಲಿನಲ್ಲೇ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಳ್ಳರು ದರೋಡೆ ಶುರು ಮಾಡಿದ್ದಾರೆ. ಇದೀಗ ಇಂತಹದೊಂದು ಘಟನೆ ರಾಜಸ್ಥಾನದ ಉದಯಪುರ ಬೀದಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ (Viral Video )ಆಗಿದೆ.

ಜೂನ್ 28ರಂದು ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ. ಸಂತ್ರಸ್ತೆಯನ್ನು ರೇಖಾ ಜೈನ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ದೆಹಲಿ ಗೇಟ್ ಜಂಕ್ಷನ್ ಬಳಿಯ ವಾಚ್‌ಶಾಪ್ ಹೊರಗಿನ ಬೀದಿಯಲ್ಲಿ ನಡೆದುಹೋಗುವಾಗ ಇಬ್ಬರು ವ್ಯಕ್ತಿಗಳು ಅವಳನ್ನು ತಡೆದರು. ಅವರು ಆಕೆಯ ಬಳಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಮತ್ತು ರೇಖಾ ಅದಕ್ಕೆ ಉತ್ತರಿಸುತ್ತಿದ್ದರು. ನಂತರ ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅವರಿಗೆ ನೀಡಿದಳು.

ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ ಇದ್ದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರೇಖಾ ಪ್ರಜ್ಞೆ ಬಂದ ಬಳಿಕ ತನ್ನ ಪತಿಗೆ ವಿಚಾರ ತಿಳಿಸಿದ್ದು, ಇಬ್ಬರು ಸೇರಿ ನಗರದ ಸೂರಜ್ಪೋಲ್ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ರೇಖಾ, ಆರೋಪಿಗಳು ತಾನು ನಂಬಿದ ದೇವರ ಬಗ್ಗೆ ಕೇಳಿದ್ದು, ಅದಕ್ಕೆ ಆಕೆ ಭಗವಾನ್ ಮಹಾವೀರ ಸ್ವಾಮಿಯ ಬಗ್ಗೆ ಪ್ರಸ್ತಾಪಿಸಿದಾಗ, ಆಕೆಯ ಬಳಿ ಹಣ ಕೇಳಿದ್ದಾರೆ. ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅದನ್ನು ಧಾರ್ಮಿಕ ಕಾರಣಕ್ಕಾಗಿ ಎಂದು ಭಾವಿಸಿ ಅವರಿಗೆ ನೀಡಿದಳು. ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು.

ಇದನ್ನೂ ಓದಿ: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿವನ್ನು ಪರೀಕ್ಷಿಸಿದಾಗ ರೇಖಾ ಪೊಲೀಸರಿಗೆ ನೀಡಿದ ವಿವರಗಳು ಸಿಸಿಟಿವಿ ದೃಶ್ಯಾವಳಿಗಳಿಂದ ದೃಢಪಟ್ಟಿವೆ. ಪೊಲೀಸರು ಈಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಫ್ಯಾಷನ್

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿರುವ ಅನಂತ್ ಅಂಬಾನಿ (Anant Ambani) ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಗಳು ಯಾವುದು, ಇದರ ಬೆಲೆ ಎಷ್ಟು ಗೊತ್ತೇ?

VISTARANEWS.COM


on

By

Anant Ambani
Koo

ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ರಿಲಾಯನ್ಸ್ ಫೌಂಡೇಶನ್ ನ (Reliance Foundation) ಸಂಸ್ಥಾಪಕಿ ನೀತಾ ಅಂಬಾನಿ (nita ambani) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ತಮ್ಮ ಮದುವೆಯ ಕಾರಣದಿಂದ ಕಳೆದ ಒಂದು ವರ್ಷದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಈ ನಡುವೆ ಇದೀಗ ಅನಂತ್ ಅಂಬಾನಿ ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಎಲ್ಲರ ಗಮನ ಸೆಳೆಯುತ್ತಿದೆ.

ಕ್ಯುರೇಟೆಡ್ ಮತ್ತು ಅತ್ಯದ್ಭುತ ದುಬಾರಿ ವಾಚ್ ಸಂಗ್ರಹಣೆಗಾಗಿ ಹೆಸರುವಾಸಿಯಾಗಿರುವ ಅನಂತ್ ಅಂಬಾನಿ ಅವರ ಬಳಿ ಇರುವ ಕೆಲವು ಅಸಾಧಾರಣ ವಾಚ್ ಸಂಗ್ರಹದ ಕುರಿತು ಕಿರು ಮಾಹಿತಿ ಇಲ್ಲಿದೆ.


ಪಾಟೆಕ್ ಫಿಲಿಪ್ ಗ್ರ್ಯಾಂಡ್ ಮಾಸ್ಟರ್ ಚೈಮ್

ಅನಂತ್ ಅಂಬಾನಿ ಗ್ರ್ಯಾಂಡ್ ಮಾಸ್ಟರ್ ಚೈಮ್ ಸೇರಿದಂತೆ ಪಾಟೆಕ್ ಫಿಲಿಪ್ ಅವರ ಅತ್ಯಂತ ದುಬಾರಿ ಕೈಗಡಿಯಾರಗಳಲ್ಲಿ ಎರಡನ್ನು ಹೊಂದಿದ್ದಾರೆ. ಪಾಟೆಕ್‌ ನ ಅತ್ಯಂತ ದುಬಾರಿ ಕೈಗಡಿಯಾರ ಇದಾಗಿದೆ. ಇದುವರೆಗೆ ಇದರ ಏಳು ವಾಚ್‌ಗಳನ್ನು ಮಾತ್ರ ಮಾಡಲಾಗಿದೆ. ಇದು ಇತ್ತೀಚೆಗೆ ಹರಾಜಿನಲ್ಲಿ 31 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2.58 ಬಿಲಿಯನ್ ರೂ.ಗಳಾಗಿದೆ.


ಆಡೆಮರ್ಸ್ ಪಿಗುಯೆಟ್ ರಾಯಲ್ ಓಕ್ ಕಾನ್ಸೆಪ್ಟ್ ಜಿಎಂಟಿ ಟೂರ್‌ಬಿಲ್ಲನ್

ರಾಯಲ್ ಓಕ್‌ನ 30ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಬಿಡುಗಡೆ ಮಾಡಲಾದ ಈ ದಪ್ಪ ಗಡಿಯಾರವು ಟೈಟಾನಿಯಂ ಕೇಸ್ ಮತ್ತು ಅಸ್ಥಿಪಂಜರ ಮಾದರಿಯ ಡಯಲ್ ಅನ್ನು ಒಳಗೊಂಡಿದೆ. ಅದರ ಸಂಕೀರ್ಣ ಕಾರ್ಯವಿಧಾನ ಮೋಡಿ ಮಾಡುವಂತಿದೆ. ಮೈ ಯ ಶಾಖ ಮತ್ತು ಜಿಎಂಟಿ ಕಾರ್ಯದೊಂದಿಗೆ ಇದು ಕಾರ್ಯ ನಿರ್ವಹಿಸುತ್ತದೆ. ಇದರ ಅಂದಾಜು ಬೆಲೆ 1.9 ಕೋಟಿ ರೂ.


ಪಾಟೆಕ್ ಫಿಲಿಪ್ ನಾಟಿಲಸ್ ಟ್ರಾವೆಲ್ ಟೈಮ್

ಪಾಟೆಕ್ ಫಿಲಿಪ್ ವಾಚ್‌ ನ ಅತ್ಯಂತ ಅಪರೂಪದ ವಾಚ್ ಇದಾಗಿದ್ದು, ಮಾಣಿಕ್ಯ, ವಜ್ರ ಬಿಳಿ ಚಿನ್ನವನ್ನು ಒಳಗೊಂಡಿದೆ. ಅತ್ಯಂತ ಐಷಾರಾಮಿ ಕೈಗಡಿಯಾರವಾದ ಇದು ಕೆಂಪು ಮಾಣಿಕ್ಯ, ಹಸಿರು ಪಚ್ಚೆಗಳಿಂದ ಅಲಂಕರಿಸಲ್ಪಟ್ಟಿದೆ. ಇದರ ಅಂದಾಜು ಬೆಲೆ 8.2 ಕೋಟಿ ರೂ.

ಇದನ್ನೂ ಓದಿ: Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?


ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಟೂರ್‌ಬಿಲ್ಲನ್

ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಶುದ್ಧ, ಸ್ಫಟಿಕದಂತಹ ನೀಲಮಣಿಯನ್ನು ಹೊಂದಿದೆ. ಇದು ಅಸಾಧಾರಣ ಬಾಳಿಕೆ ಮತ್ತು ಸ್ಕ್ರಾಚ್ ಪ್ರತಿರೋಧವನ್ನು ಹೊಂದಿದೆ. ಹಸಿರು ನೀಲಮಣಿಯನ್ನು ಒಳಗೊಂಡಿರುವ ಇದರ ಅಂದಾಜು ಬೆಲೆ 25 ಕೋಟಿ ರೂ.


ಪಾಟೆಕ್ ಫಿಲಿಪ್ ಸ್ಕೈ ಮೂನ್ ಟೂರ್ಬಿಲ್ಲಾನ್

ಪಾಟೆಕ್ ಫಿಲಿಪ್ ರಚಿಸಿದ ಅತ್ಯಂತ ಅಪರೂಪದ ಕೈಗಡಿಯಾರಗಳಲ್ಲಿ ಸ್ಕೈ ಮೂನ್ ಟೂರ್‌ಬಿಲ್ಲನ್ ನಲ್ಲಿ ಕ್ಯಾಲೆಂಡರ್, ಚಂದ್ರನ ಚಲನೆಯ ಸೂಚಕ ಸೇರಿದಂತೆ ಹನ್ನೆರಡು ವಿಶೇಷತೆಗಳನ್ನು ಒಳಗೊಂಡಿದೆ. ಇದರ ಸಂಕೀರ್ಣ ವಿನ್ಯಾಸ ಮತ್ತು ಅಸಾಧಾರಣ ಕರಕುಶಲತೆಯು ಸ್ವಿಸ್ ವಾಚ್‌ಮೇಕಿಂಗ್ ಅನ್ನು ಅತ್ಯುತ್ತಮವಾಗಿಸಿದೆ. ಇದರ ಅಂದಾಜು ಬೆಲೆ 54 ಕೋಟಿ ರೂ.

Continue Reading

Latest

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

Grand Marriage: ಕೆಲವರು ಹಣಕಾಸಿನ ಸಮಸ್ಯೆಯಿಂದ ಮಗ/ಮಗಳ ಮದುವೆ ಮಾಡುವುದಕ್ಕೆ ಆಗದೇ ಒದ್ದಾಡುತ್ತಾರೆ. ಇನ್ನು ಕೆಲವರು ಮದುವೆಯನ್ನು ಹೇಗಲ್ಲಾ ಅದ್ಧೂರಿಯಾಗಿ ಮಾಡಬಹುದು ಎಂದು ತಲೆಕೆಡಿಸಿಕೊಳ್ಳುತ್ತಾರೆ. ಭಾರತದಲ್ಲಿ ಸಾಕಷ್ಟು ಶ್ರೀಮಂತ ಕುಟುಂಬಗಳಿವೆ. ಇವರು ಮದುವೆಗಾಗಿ ಯಥೇಚ್ಛವಾಗಿ ದುಡ್ಡು ಸುರಿದಿದ್ದಾರೆ. ಅದ್ಧೂರಿಯಾಗಿ ನಡೆದ ಮದುವೆಗಳು ಯಾರದ್ದು?ಎಷ್ಟೆಲ್ಲಾ ಖರ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Grand Marriage
Koo

ಮುಂಬೈ : ಮಕ್ಕಳ ಮದುವೆಯೆಂದರೆ ಎಲ್ಲಾ ತಂದೆ-ತಾಯಿಗೂ ಸಂಭ್ರಮವಿರುತ್ತದೆ. ಇನ್ನು ಶ್ರೀಮಂತ ಮನೆತನದ ಮಕ್ಕಳ ಮದುವೆಯೆಂದರೆ ಕೇಳಬೇಕಾ…? ತಮ್ಮ ಶ್ರೀಮಂತಿಕೆಯನ್ನು ತೋರ್ಪಡಿಸುವುದಕ್ಕಾದರೂ ಅದ್ಧೂರಿಯಿಂದ ಮದುವೆ ಮಾಡುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ಹಲವಾರು ಶ್ರೀಮಂತ ಮನೆತನದವರ ಮದುವೆಗಳು ಬಹಳ ಅದ್ಧೂರಿ (Grand Marriage)ಯಾಗಿ ನಡೆದಿದ್ದು, ಅದರ ಬಗ್ಗೆ ಇಲ್ಲಿದೆ ಮಾಹಿತಿ.

Grand Marriage

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದೆ ಹೆಸರಾದ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಜುಲೈ 12, 2024ರಂದು ಮುಂಬೈನಲ್ಲಿ ರಾಧಿಕಾ ಮರ್ಚೆಂಟ್ ಅವರ ಜೊತೆ ನಿಶ್ಚಯವಾಗಿದ್ದು, ಇದು  ಅತ್ಯಂತ ದುಬಾರಿ ರಿ ಮದುವೆ ಎಂದು ಊಹಿಸಲಾಗಿದೆ.

Grand Marriage

1. ಇಶಾ ಅಂಬಾನಿ ಮತ್ತು ಆನಂದ್ ಪಿರಮಾಲ್: 700 ಕೋಟಿ ರೂ. ಖರ್ಚು

ಬಿಲಿಯನೇರ್ ಮುಖೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಅವರು ಆನಂದ್ ಪಿರಮಾಲ್ ಅವರನ್ನು ವಿವಾಹವಾಗಿದ್ದು, ಸುಮಾರು ಒಂದು ವಾರಗಳ ಕಾಲ ನಡೆದ ಈ ಮದುವೆಗೆ  ಅಂದಾಜು 700 ಕೋಟಿ ರೂ. ಖರ್ಚು ಮಾಡಲಾಗಿದೆ ಎನ್ನಲಾಗಿದೆ. ಉದಯಪುರ, ಇಟಲಿಯ ಲೇಕ್ ಕೊಮೊ ಮತ್ತು ಮುಂಬೈನಲ್ಲಿ ನಡೆದ ಈ ಉತ್ಸವದಲ್ಲಿ ಜಗತ್ತಿನ ಅನೇಕ ಸೂಪರ್ ಸ್ಟಾರ್‌ಗಳು  ಭಾಗವಹಿಸಿದ್ದರು.  ಮತ್ತು ವಿವಾಹ ಸಮಾರಂಭವು ಲೇಕ್ ಪಿಚೋಲಾದ ಖಾಸಗಿ ದ್ವೀಪದಲ್ಲಿ ನಡೆಯಿತು.

Grand Marriage

2. ಸುಶಾಂತ್ ರಾಯ್ ಮತ್ತು ಸೀಮಂತೋ ರಾಯ್: 554 ಕೋಟಿ ರೂ. ಖರ್ಚು

2004ರಲ್ಲಿ ಸಹಾರಾ ಗ್ರೂಪ್‌ನ ಮಾಜಿ ಅಧ್ಯಕ್ಷ ಉದ್ಯಮಿ ಸುಬ್ರತಾ ರಾಯ್ ಅವರ ಪುತ್ರರಾದ ಸುಶಾಂತ್ ರಾಯ್ ಮತ್ತು ಸೀಮಾಂತೋ ರಾಯ್ ಅವರ ವಿವಾಹಕ್ಕೆ ಅಂದಾಜು 554 ಕೋಟಿ ರೂ. ಖರ್ಚುಮಾಡಲಾಗಿದೆ ಎನ್ನಲಾಗಿದೆ. ಲಕ್ನೋದ ಸಹಾರಾ ಕ್ರೀಡಾಂಗಣದಲ್ಲಿ ನಡೆದ ಈ  ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರು ಮತ್ತು ಕ್ರೀಡಾಕೂಟದವರು  ಸೇರಿದಂತೆ 11,000ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು.

Grand Marriage

3. ಬ್ರಹ್ಮಣಿ ರೆಡ್ಡಿ ಮತ್ತು ರಾಜೀವ್ ರೆಡ್ಡಿ: 500 ಕೋಟಿ ರೂ. ಖರ್ಚು

ಮಾಜಿ ರಾಜಕಾರಣಿ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಹ್ಮಣಿ ರೆಡ್ಡಿ ಮತ್ತು ರಾಜೀವ್ ರೆಡ್ಡಿ ಅವರ ವಿವಾಹಕ್ಕೆ ಸುಮಾರು 500 ಕೋಟಿ ರೂಪಾಯಿ (74 ಮಿಲಿಯನ್ ಡಾಲರ್) ವೆಚ್ಚವಾಗಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು ಅರಮನೆಯಲ್ಲಿ ನಡೆದ ಐದು ದಿನಗಳ ಆಚರಣೆಯಲ್ಲಿ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಸುಮಾರು 50,000 ಮಂದಿ ಭಾಗವಹಿಸಿದ್ದರು.

Grand Marriage

4. ಸೃಷ್ಟಿ ಮಿತ್ತಲ್ ಮತ್ತು ಗುಲ್ರಾಜ್ ಬೆಹ್ಲ್: 500 ಕೋಟಿ

ಸ್ಟೀಲ್  ಉದ್ಯಮಿ ಪ್ರಮೋದ್ ಮಿತ್ತಲ್ ಅವರ ಪುತ್ರಿ ಸೃಷ್ಟಿ ಮಿತ್ತಲ್ ಅವರು ಇನ್‌ವೆಸ್ಟ್‌ಮೆಂಟ್ ಬ್ಯಾಂಕರ್ ಗುಲ್ರಾಜ್ ಬೆಹ್ಲ್ ಅವರನ್ನು 2013 ರಲ್ಲಿ ಸ್ಪೇನ್‌ನ ಬಾರ್ಸಿಲೋನಾದಲ್ಲಿ ಮದುವೆಯಾದರು. ಇದು  ಮೂರು ದಿನಗಳ ಅದ್ದೂರಿ ಮದುವೆಯಾಗಿದ್ದು, ಈ ಕಾರ್ಯಕ್ರಮಕ್ಕೆ ಸುಮಾರು 500 ಕೋಟಿ ರೂ. ಖರ್ಚುಮಾಡಲಾಗಿದೆ ಎನ್ನಲಾಗಿದೆ. ಮದುವೆಯಲ್ಲಿ 500 ಅತಿಥಿಗಳು ಭಾಗವಹಿಸಿದ್ದರು ಮತ್ತು ಪ್ರಸಿದ್ಧ ಸ್ಪ್ಯಾನಿಷ್ ಪ್ರಸಿದ್ಧ ಬಾಣಸಿಗ ಸೆರ್ಗಿ ಅರೋಲಾ ಸಿದ್ಧಪಡಿಸಿದ ಮೆನು ಮತ್ತು 60 ಕೆಜಿ, ಬೃಹತ್ ವಿವಾಹ ಕೇಕ್ ಅನ್ನು ಕತ್ತರಿಸಲಾಗಿತ್ತು. ಈ ವಿವಾಹ ಸಮಾರಂಭವು ಬೆಟ್ಟದ ಮೇಲಿರುವ ನ್ಯಾಷನಲ್ ಮ್ಯೂಸಿಯಂ ಆಫ್ ಕ್ಯಾಟಲಾನ್ ಆರ್ಟ್‌ನಲ್ಲಿ ನಡೆಯಿತು.

Grand Marriage

5. ವಾಣಿಶಾ ಮಿತ್ತಲ್ ಮತ್ತು ಅಮಿತ್ ಭಾಟಿಯಾ: 240 ಕೋಟಿ ರೂ.

2004ರಲ್ಲಿ ಸ್ಟೀಲ್ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಪುತ್ರಿ ವಾಣಿಶಾ ಮಿತ್ತಲ್ ಮತ್ತು ಲಂಡನ್ ಬ್ಯಾಂಕರ್ ಅಮಿತ್ ಭಾಟಿಯಾ ಅವರ ವಿವಾಹವು ಆರು ದಿನಗಳ ಕಾಲ ಪ್ಯಾರಿಸ್‌ನಲ್ಲಿ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ಉತ್ಸವದಲ್ಲಿ ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರು ಆಗಮಿಸಿದ್ದರು. ಪ್ರಸಿದ್ಧ ಕವಿ ಜಾವೇದ್ ಅಖ್ತರ್ ವಿವಾಹಪೂರ್ವ ಸಮಾರಂಭಗಳಿಗಾಗಿ ನಾಟಕವನ್ನು ಸಹ ಬರೆದಿದ್ದಾರೆ. ಮುಖ್ಯ ವಿವಾಹವು 17 ನೇ ಶತಮಾನದ ಚಾಟೌ ಡಿ ವಾಕ್ಸ್-ಲೆ-ವಿಕಾಮ್ಟೆಯಲ್ಲಿ ನಡೆಯಿತು, ಈ ಮದುವೆಗಾಗಿ  ಎಸ್ಟೇಟ್‌ನ  ಉದ್ಯಾನಗಳಲ್ಲಿನ ಕೊಳದ ಮೇಲೆ ಭವ್ಯವಾದ ಮಂಟಪವನ್ನು ನಿರ್ಮಿಸಲಾಗಿತ್ತು.

Grand Marriage

6. ಸೋನಮ್ ವಾಸ್ವಾನಿ ಮತ್ತು ನವೀನ್ ಫ್ಯಾಬಿಯಾನಿ: 210 ಕೋಟಿ ರೂ. ಖರ್ಚು

2017 ರಲ್ಲಿ, ಸ್ಟಾಲಿಯನ್ ಗ್ರೂಪ್ ಸಂಸ್ಥಾಪಕ ಸುನಿಲ್ ವಾಸ್ವಾನಿ ಅವರ ಪುತ್ರಿ ಸೋನಮ್ ವಾಸ್ವಾನಿ  ಮತ್ತು ಮುಂಬೈ ಮೂಲದ ಉದ್ಯಮಿ ನವೀನ್ ಫ್ಯಾಬಿಯಾನಿ ಅವರ ವಿವಾಹವು ಆಸ್ಟ್ರಿಯಾದ ವಿಯೆನ್ನಾದಲ್ಲಿ ಸುಮಾರು 210 ಕೋಟಿ ರೂ.ಗಳ (30 ಮಿಲಿಯನ್ ಡಾಲರ್) ವೆಚ್ಚದಲ್ಲಿ ಅದ್ಧೂರಿಯಾಗಿ ನೇರವೇರಿತ್ತು. ಉತ್ಸವಗಳು ಪಲೈಸ್ ಫೆರ್ಸ್ಟೆಲ್, ಪಲೈಸ್ ಲಿಚೆನ್ಸ್ಟೇನ್ ಪಾರ್ಕ್ ಮತ್ತು ಬೆಲ್ವೆಡೆರೆ ಅರಮನೆಯಲ್ಲಿ ನಡೆದವು.

Grand Marriage

7. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ: 100 ಕೋಟಿ ರೂ. ಖರ್ಚು

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2017ರ ಡಿಸೆಂಬರ್ ನಲ್ಲಿ ಇಟಲಿಯ ಟಸ್ಕನಿಯಲ್ಲಿರುವ ಲೇಕ್ ಕೊಮೊದಲ್ಲಿ ವಿವಾಹವಾದರು. ಕೆಲವು ದಿನಗಳ ನಂತರ ಮುಂಬೈನಲ್ಲಿ ನಡೆದ ಅವರ ವಿವಾಹ ಆರತಕ್ಷತೆ ಕೂಡ ಹೆಚ್ಚು ಅದ್ದೂರಿಯಾಗಿ ನಡೆಯಿತು, ಇದರಲ್ಲಿ ಸೆಲೆಬ್ರಿಟಿಗಳು ಮತ್ತು ಕ್ರಿಕೆಟಿಗರು ಭಾಗವಹಿಸಿದ್ದರು ಮತ್ತು ಪಿಎಂ ಮೋದಿ ಕೂಡ ಇವರ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.

Grand Marriage

8. ಅಡೆಲ್ ಸಾಜನ್ ಮತ್ತು ಸನಾ ಖಾನ್: 100 ಕೋಟಿ ರೂ. ಖರ್ಚು

ದುಬೈ ಉದ್ಯಮಿ ಅಡೆಲ್ ಸಾಜನ್ ಅವರು ನಟಿ ಸನಾ ಖಾನ್ ಅವರನ್ನು ಕ್ರೂಸ್‌ನಲ್ಲಿ  ಅದ್ದೂರಿಯಾಗಿ ವಿವಾಹವಾದರು. ಇವರ ವಿವಾಹಕ್ಕೆ 100 ಕೋಟಿ ರೂ.ಗಳ ಖರ್ಚಾಗಿದೆ ಎಂದು ಊಹಿಸಲಾಗಿದೆ. ಬಾರ್ಸಿಲೋನಾದಿಂದ ಫ್ರಾನ್ಸ್ ಮೂಲಕ ಇಟಲಿಗೆ ಪ್ರಯಾಣಿಸುತ್ತಿದ್ದ ಕೋಸ್ಟಾ ಫಾಸಿನೋಸಾ ಕ್ರೂಸ್ ಹಡಗಿನಲ್ಲಿ ದಂಪತಿಗಳು ವಿವಾಹ ವಿಧಿಯನ್ನು ಆಚರಿಸಿದ್ದಾರೆ.

Grand Marriage

9. ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ: 77 ಕೋಟಿ ರೂ. ಖರ್ಚು

ಆರು ವರ್ಷಗಳ ಡೇಟಿಂಗ್ ನಂತರ, ಬಾಲಿವುಡ್ ದಂಪತಿಗಳಾದ ರಣವೀರ್‌ಸಿಂಗ್ ಮತ್ತು ದೀಪಿಕಾ ಪಡುಕೋಣೆ 2018 ರ ನವೆಂಬರ್ ನಲ್ಲಿ ಇಟಲಿಯ ಲೇಕ್ ಕ್ಯಾಮೊದಲ್ಲಿ ವಿವಾಹವಾದರು, ಅವರ ವಿವಾಹ ಸಮಾರಂಭಗಳು ಸಿಂಧಿ ಮತ್ತು ಕೊಂಕಣಿ ಸಂಪ್ರದಾಯಗಳಲ್ಲಿ ನಡೆದವು. ಇವರ ಮದುವೆಯ ಖರ್ಚು 77 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

Grand Marriage

10. ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ

ಮುಕೇಶ್ ಅಂಬಾನಿ ಅವರ ಹಿರಿಯ ಮಗ ಆಕಾಶ್ ಅಂಬಾನಿ ಅವರು ವಜ್ರದ ಉದ್ಯಮಿಯ ಪುತ್ರಿ ಶ್ಲೋಕಾ ಮೆಹ್ತಾ ಅವರನ್ನು 2019 ರಲ್ಲಿ ಮುಂಬೈನಲ್ಲಿ ಅದ್ದೂರಿಯಾಗಿ ವಿವಾಹವಾದರು. ಈ ಮದುವೆಯಲ್ಲಿ ಬಹಳ ವರ್ಣರಂಜಿತ ಅಲಂಕಾರಗಳನ್ನು ಮಾಡಲಾಗಿತ್ತು. ಆದರೆ ಮದುವೆಯ ಖರ್ಚಿನ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Continue Reading

ಮನಿ-ಗೈಡ್

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ (ITR Filing) ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಮೊದಲು ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ.

VISTARANEWS.COM


on

By

ITR Filing
Koo

ಆದಾಯ ತೆರಿಗೆ ರಿಟರ್ನ್ (ITR Filing) ಸಲ್ಲಿಸುವ ಮೊದಲು ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ. ಆದಾಯ ತೆರಿಗೆಯು (Income tax) ಜನರು ಮತ್ತು ಸಂಸ್ಥೆಗಳು ಗಳಿಸುವ ಆದಾಯ ಮತ್ತು ಲಾಭದ ಮೇಲೆ ಪಾವತಿಸುವ ತೆರಿಗೆಯಾಗಿದೆ. ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ತೆರಿಗೆದಾರರು ಮಾಡಲೇಬೇಕಾದ ವಾರ್ಷಿಕ ಆಥಿಕ ಕಾರ್ಯವಾಗಿದೆ.

ಭಾರತದಲ್ಲಿ (India) ತೆರಿಗೆದಾರರು (taxpayer) ತಮ್ಮ ಆದಾಯ ಮತ್ತು ತೆರಿಗೆಗಳ ವಾರ್ಷಿಕ ಲೆಕ್ಕಾಚಾರವನ್ನು ಸಲ್ಲಿಸುವ ಮೂಲಕ ಸರ್ಕಾರಕ್ಕೆ ವರದಿ ಮಾಡಬೇಕಾಗುತ್ತದೆ. ಪಾರದರ್ಶಕತೆ, ಹೊಣೆಗಾರಿಕೆ ಮತ್ತು ರಾಷ್ಟ್ರದ ಆರ್ಥಿಕ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಇದು ಅತ್ಯಮೂಲ್ಯವಾಗಿದೆ. 2023– 24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ.

ಗಡುವು ತಿಳಿದಿರಿ

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಮೊದಲು ಎಲ್ಲಾ ತೆರಿಗೆದಾರರು ಗಮನಿಸಬೇಕಾದ ಮೊದಲ ಮತ್ತು ಪ್ರಮುಖ ವಿಷಯವೆಂದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಾಮಾನ್ಯವಾಗಿ ಪ್ರತಿ ಹಣಕಾಸು ವರ್ಷದ ಜುಲೈ 31 ಕೊನೆಯ ದಿನವಾಗಿದೆ. ಈ ವರ್ಷ ಆದಾಯ ತೆರಿಗೆ ಇಲಾಖೆಯು 2023-24ಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ತೆರಿಗೆ ಪದ್ಧತಿಯನ್ನು ಅರ್ಥಮಾಡಿಕೊಳ್ಳಿ

ತೆರಿಗೆದಾರರು ಈಗ ಹಳೆಯ ತೆರಿಗೆ ಪದ್ಧತಿ ಮತ್ತು ಬಜೆಟ್ 2020ರಲ್ಲಿ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯ ನಡುವೆ ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿದ್ದಾರೆ. ಎರಡೂ ತನ್ನದೇ ಆದ ಸಾಧಕ-ಬಾಧಕಗಳನ್ನು ಹೊಂದಿವೆ. ಹೊಸ ಪದ್ದತಿಯು ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆ. ಆದರೆ ಕೆಲವು ವಿಷಯಗಳ ಮೇಲೆ ಕಡಿತ ಮತ್ತು ವಿನಾಯಿತಿಗಳನ್ನು ಮಿತಿಗೊಳಿಸುತ್ತದೆ.

ಹಳೆಯ ಪದ್ದತಿಯು ತುಲನಾತ್ಮಕವಾಗಿ ಹೆಚ್ಚಿನ ತೆರಿಗೆ ದರಗಳನ್ನು ಹೊಂದಿದೆ. ಆದರೆ ಕಡಿತ ಮತ್ತು ತೆರಿಗೆ ಪ್ರಯೋಜನಗಳನ್ನು ಕ್ಲೈಮ್ ಮಾಡುವ ಮೂಲಕ ಹಣವನ್ನು ಉಳಿಸಲು ಜನರಿಗೆ ಅವಕಾಶ ನೀಡುತ್ತದೆ. ಒಬ್ಬರ ಪರಿಸ್ಥಿತಿಗೆ ಅನುಗುಣವಾಗಿ ಯಾವ ಪದ್ಧತಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂಬುದನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಕೊಳ್ಳಬೇಕು.

ಯಾವ ತೆರಿಗೆ ವರ್ಗಕ್ಕೆ ಸೇರುತ್ತೀರಿ?

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ತೆರಿಗೆ ವರ್ಗಕ್ಕೆ ಸೇರುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕು. ತೆರಿಗೆಯ ಆದಾಯವನ್ನು ತಿಳಿದುಕೊಳ್ಳುವುದು ತೆರಿಗೆ ಹೊಣೆಗಾರಿಕೆಯನ್ನು ನಿರ್ಧರಿಸಲು ಸಹಾಯ ಮಾಡುತ್ತದೆ, ಇದು ಭರ್ತಿ ಮಾಡಲು ಅರ್ಹವಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಹಣಕಾಸು ಮತ್ತು ಹೂಡಿಕೆಗಳನ್ನು ಯೋಜಿಸಲು ಆದಾಯ ತೆರಿಗೆ ರಿಟರ್ನ್ ಅನ್ನು ಸಮರ್ಥ ಮತ್ತು ದೋಷ-ಮುಕ್ತ ರೀತಿಯಲ್ಲಿ ಸಲ್ಲಿಸುವುದನ್ನು ಖಚಿತಪಡಿಸುತ್ತದೆ.

ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವೇಳೆ ದಾಖಲೆಗಳನ್ನು ಪರಿಶೀಲಿಸುವುದು ಬಹುಮುಖ್ಯವಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರು ತಮ್ಮ ಆದಾಯ, ಕಡಿತಗಳು ಮತ್ತು ತೆರಿಗೆ ಪಾವತಿಗಳನ್ನು ದೃಢೀಕರಿಸಲು ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಆದ್ದರಿಂದ ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಪ್ರಕ್ರಿಯೆಯು ಹೆಚ್ಚು ಸುವ್ಯವಸ್ಥಿತ ಮತ್ತು ಡಿಜಿಟೈಸ್ ಆಗಿರುವುದರಿಂದ ಡಿಜಿಟಲ್ ಸಾಧನದಲ್ಲಿ ಅಗತ್ಯ ದಾಖಲೆಗಳನ್ನು ಸಂಘಟಿಸುವುದು ಮತ್ತು ಉಳಿಸುವುದು ಫೈಲಿಂಗ್ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಹೆಚ್ಚು ನಿಖರವಾಗಿ ಮಾಡಲು ಸಹಾಯ ಮಾಡುತ್ತದೆ.


ಸರಿಯಾದ ಐಟಿಆರ್ ಅರ್ಜಿಯನ್ನು ಆಯ್ಕೆ ಮಾಡಿ

ಆದಾಯದ ಮೂಲ ಮತ್ತು ಒಟ್ಟು ಆದಾಯದ ಆಧಾರದ ಮೇಲೆ ಅನ್ವಯವಾಗುವ ಐಟಿಆರ್ ಫಾರ್ಮ್ ಅನ್ನು ಗುರುತಿಸುವುದು ಮತ್ತು ಆಯ್ಕೆ ಮಾಡುವುದು ಮುಖ್ಯವಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ತೆರಿಗೆದಾರರಿಂದ ಆರಂಭಿಕ ರಿಟರ್ನ್ ಫೈಲಿಂಗ್ ಅನ್ನು ಉತ್ತೇಜಿಸಲು ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಐಟಿಆರ್ ಫಾರ್ಮ್‌ಗಳು ಲಭ್ಯವಾಗುವಂತೆ ಮಾಡಿತು.

ಐಟಿಆರ್-1 ಆದಾಯದ ಮೂಲ ಸಂಬಳವಾಗಿದ್ದು, ಮನೆ ಆಸ್ತಿ ಮತ್ತು ಇತರ ಮೂಲಗಳಿಂದ ಬಡ್ಡಿ, ಲಾಭಂಶ ಸೇರಿ ಒಟ್ಟು 50 ಲಕ್ಷ ರೂ. ಆದಾಯವಿದ್ದವರು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್ -2 ಬಂಡವಾಳ ಅಥವಾ ವಿದೇಶಿ ಆಸ್ತಿಗಳಿಂದ ಆದಾಯದ ಮೂಲ ಹೊಂದಿರುವ ಹಿಂದೂ ಅವಿಭಜಿತ ಕುಟುಂಬಗಳು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್- 3 ವ್ಯಾಪಾರ ಅಥವಾ ಸ್ವಯಂ ವೃತ್ತಿಯಿಂದ ಆದಾಯ ಹೊಂದಿರುವ ವ್ಯಕ್ತಿಗಳು, ಐಟಿಆರ್- 4 ವ್ಯಾಪಾರ ಅಥವಾ ಸ್ವಂತ ವೃತ್ತಿಯಿಂದ ಆದಾಯ ಹೊಂದಿರುವವರು ಇದರಲ್ಲಿ ಅರ್ಜಿ ಸಲ್ಲಿಸಬಹುದು.

ವೈಯಕ್ತಿಕ ಮತ್ತು ಬ್ಯಾಂಕ್ ಖಾತೆ ವಿವರ ಪರಿಶೀಲಿಸಿ

ಐಟಿಆರ್ ಅನ್ನು ಸಲ್ಲಿಸುವ ಮೊದಲು ತೆರಿಗೆ ಮರುಪಾವತಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಪ್ಪಿಸಲು ತೆರಿಗೆದಾರರು ತಮ್ಮ ವೈಯಕ್ತಿಕ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಪರಿಶೀಲಿಸಬೇಕು. ಹೆಸರು, ವಿಳಾಸ, ಇಮೇಲ್ ಮತ್ತು ಪಾನ್ ನಂತಹ ವಿವರಗಳನ್ನು ಲಿಂಕ್ ಮಾಡಲಾಗಿದೆ ಮತ್ತು ತೆರಿಗೆ ರಿಟರ್ನ್‌ನಲ್ಲಿ ನಿಖರವಾಗಿ ನಮೂದಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸರಿಯಾದ ಮೌಲ್ಯಮಾಪನ ವರ್ಷವನ್ನು ಆಯ್ಕೆ ಮಾಡಿ

ತೆರಿಗೆ ರಿಟರ್ನ್‌ನಲ್ಲಿ ಸರಿಯಾದ ಮೌಲ್ಯಮಾಪನ ವರ್ಷವನ್ನು ನಮೂದಿಸಿ. ಇದರಲ್ಲಿ ತಪ್ಪುಗಳಾದರೆ ಹೆಚ್ಚು ತೆರಿಗೆ ಮತ್ತು ಅನಗತ್ಯ ದಂಡಗಳಿಗೆ ಕಾರಣವಾಗಬಹುದು.

ಫಾರ್ಮ್ 16ರಲ್ಲಿ ವಿವರಗಳನ್ನು ಪರಿಶೀಲಿಸಿ

ಫಾರ್ಮ್ 16ರಲ್ಲಿನ ಸಂಬಳದ ಭಾಗಗಳು, ಟಿಡಿಎಸ್ ಕಡಿತ ಮತ್ತು ತೆರಿಗೆ-ಉಳಿತಾಯ ಹೂಡಿಕೆಗಳಂತಹ ವಿವರಗಳು ಸರಿಯಾಗಿವೆಯೇ ಎಂದು ಮುಂಚಿತವಾಗಿ ಖಚಿತಪಡಿಸಿಕೊಳ್ಳಿ. ಪೇ ಸ್ಲಿಪ್‌ ಮತ್ತು ಹೂಡಿಕೆ ಹೇಳಿಕೆಗಳೊಂದಿಗೆ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡಿ. ಯಾವುದೇ ವ್ಯತ್ಯಾಸಗಳನ್ನು ಸರಿಪಡಿಸಲು ಉದ್ಯೋಗದಾತರಿಗೆ ವರದಿ ಮಾಡಬೇಕು.

ಹಣಕಾಸು ವರ್ಷದಲ್ಲಿ ಒಬ್ಬರು ಬಹು ಉದ್ಯೋಗದಾತರನ್ನು ಹೊಂದಿದ್ದರೆ ರಿಟರ್ನ್ ಸಲ್ಲಿಸುವ ಮೊದಲು ನಿಮ್ಮ ಎಲ್ಲಾ ಫಾರ್ಮ್ 16ರಿಂದ ಆದಾಯವನ್ನು ಒಟ್ಟುಗೂಡಿಸಿರುವುದು ಖಚಿತಪಡಿಸಿಕೊಳ್ಳಿ. ಸರಿಯಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಒಟ್ಟು ಆದಾಯವನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ನಿಖರ ವರದಿ ಖಚಿತಪಡಿಸಿ

ಫಾರ್ಮ್ 26ಎಎಸ್ (ತೆರಿಗೆ ಕ್ರೆಡಿಟ್ ಸ್ಟೇಟ್‌ಮೆಂಟ್) ಮತ್ತು ಎಐಎಸ್ /ಟಿಐಎಸ್ (ವಾರ್ಷಿಕ ಮಾಹಿತಿ ಹೇಳಿಕೆ/ತೆರಿಗೆ ಮಾಹಿತಿ ಹೇಳಿಕೆ) ನಲ್ಲಿ ಲಭ್ಯವಿರುವ ಮಾಹಿತಿಯೊಂದಿಗೆ ಒಟ್ಟು ಆದಾಯವನ್ನು ಸಂಪೂರ್ಣವಾಗಿ ಸಮನ್ವಯಗೊಳಿಸಿ. ಯಾಕೆಂದರೆ ಇದು ಯಾವುದೇ ವ್ಯತ್ಯಾಸಗಳನ್ನು ಗುರುತಿಸಲು ಮತ್ತು ಎಲ್ಲಾ ಆದಾಯ ಮೂಲಗಳನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

Continue Reading
Advertisement
actor darshan crazy fans
ವೈರಲ್ ನ್ಯೂಸ್1 min ago

Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

Harshika Poonacha
ಸ್ಯಾಂಡಲ್ ವುಡ್12 mins ago

Harshika Poonacha: ಮದುವೆಯಾಗಿ ವರ್ಷದೊಳಗೆ ಸಿಹಿ ಸುದ್ದಿ ಹಂಚಿಕೊಂಡ ಹರ್ಷಿಕಾ ಪೂಣಚ್ಚ–ಭುವನ್

Jasprit Bumrah
ಕ್ರೀಡೆ16 mins ago

Jasprit Bumrah: ವಿಶ್ವಕಪ್​ ಗೆದ್ದ ಖುಷಿಯಲ್ಲಿ ಜಸ್​ಪ್ರೀತ್​ ಬುಮ್ರಾಗೆ ಟ್ರೀಟ್​ ಕೊಡಿಸಿದ ಪತ್ನಿ

Virat Kohli
ಕ್ರಿಕೆಟ್52 mins ago

Virat Kohli: ನನ್ನ ​ಅಹಂಕಾರವೇ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣ ಎಂದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

crimes in karnataka physical abuse
ಕ್ರೈಂ1 hour ago

Physical Abuse: ಎಚ್‌ಐವಿ ಪೀಡಿತ ವ್ಯಕ್ತಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರ, ಚಿನ್ನಾಭರಣ ದರೋಡೆ

Indian Origin Businessman
ವಿದೇಶ1 hour ago

Indian Origin Businessman: 8,300 ಕೋಟಿ ರೂ. ವಂಚನೆ; ಭಾರತೀಯ ಮೂಲದ ಅಮೆರಿಕದ ಉದ್ಯಮಿಗೆ ಜೈಲು

Ms Universal Petite 2024
ಕರ್ನಾಟಕ1 hour ago

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Parliament Sessions
ರಾಜಕೀಯ2 hours ago

Parliament Sessions: ಲೋಕಸಭೆಯಲ್ಲಿ ಇಂದು ಮೋದಿ ಭಾಷಣ; ರಾಹುಲ್‌ ಗಾಂಧಿ ಆರೋಪಗಳಿಗೆ ಪ್ರಧಾನಿ ಉತ್ತರವೇನು? ಇಲ್ಲಿದೆ Live

lovers fight hubli
ವೈರಲ್ ನ್ಯೂಸ್2 hours ago

Lovers Fight: ಫೋನ್‌ಗಾಗಿ ಕಿತ್ತಾಡಿದ ಪ್ರೇಮಿಗಳು, ಲವರ್‌ ಬಾಯ್‌ಗೆ ಸಾರ್ವಜನಿಕರ ಗೂಸಾ

Team India stuck in Barbados
ಕ್ರೀಡೆ2 hours ago

Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌