Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ - Vistara News

Latest

Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment ಕೆಲಸದ ಅಗತ್ಯ ಎಲ್ಲರಿಗೂ ಇರುತ್ತದೆ. ಜೀವನ ನಡೆಸುವುದಕ್ಕೆ ಕೈಯಲ್ಲಿ ಒಂದು ಉದ್ಯೋಗವಿಲ್ಲದಿದ್ದರೆ ಅವರ ಸಂಸಾರವೇ ಕಷ್ಟದ ಸುರಿಮಳೆಗೆ ಸಿಗಬೇಕಾಗುತ್ತದೆ. ಇನ್ನು ಕಷ್ಟಪಟ್ಟು ಓದಿರುತ್ತೇವೆ. ಅದಕ್ಕೆ ಸೂಕ್ತವಾದ ಕೆಲಸ ಸಿಕ್ಕಿರುವುದಿಲ್ಲ. ಕನಸುಕಂಗಳಿಂದ ಉದ್ಯೋಗ ಹುಡುಕುತ್ತಿರುವವರಿಗೆ ಹೆಚ್ಎಎಲ್ ಬಂಪರ್ ಆಫರ್ ನೀಡಿದೆ. ತಡಮಾಡಬೇಡಿ, ನಾಳೆಯೇ ಸಂದರ್ಶನವಿದೆ.

VISTARANEWS.COM


on

Job Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಬೆಂಗಳೂರು ವರದಾನ ಎನ್ನಬಹುದು. ಇಲ್ಲಿ ಹೇಗೆ ಆದರೂ ಒಂದು ಕೆಲಸ ಗಿಟ್ಟಿಸಿಕೊಳ್ಳಬಹುದು ಎಂಬ ಆಸೆ ಕಣ್ಣಿನಿಂದ ರಾಜ್ಯದ ಎಲ್ಲ ಭಾಗಗಳ ಜನ ಧಾವಿಸಿ ಬರುತ್ತಾರೆ. ಇದೀಗ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬಂಪರ್ ಆಫರ್ ನೀಡಿದೆ.

ಎಚ್‌ಎಎಲ್‌ನಲ್ಲಿ ಅನೇಕ ಹುದ್ದೆಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಅದನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 22, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಶೈಕ್ಷಣಿಕ ಅರ್ಹತೆ ಏನು?

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭದ ತರಬೇತಿ ಹಂತದಲ್ಲಿ ತಿಂಗಳಿಗೆ 7000-7700 ರೂ. ವೇತನ ನೀಡಲಾಗುತ್ತದೆ. ಜತೆಗೆ ಇತರ ಭತ್ಯೆ ಇರುತ್ತದೆ.
ಉದ್ಯೋಗ ಸ್ಥಳ

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ. ಹಾಗಾಗಿ ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಇದು ಅನುಕೂಲವಾಗಲಿದೆ.

ಇದನ್ನೂ ಓದಿ: Murder Case: ಹುಡುಗಿ ಜೊತೆ ಕುಳಿತವನ ಮೇಲೆ ಗುಂಡಿನ ಸುರಿಮಳೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆಯ್ಕೆ ಪ್ರಕ್ರಿಯೆ ಹೇಗೆ?

ಪ್ರತಿಯೊಂದು ಹುದ್ದೆಗೂ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕ: ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜನದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017
ದಿನಾಂಕ ಜೂನ್ 22, 2024ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Viral Video ಮಗುವೊಂದು ಮನೆಯ ಟಿವಿ ಸ್ಟ್ಯಾಂಡ್ ಬಿದ್ದು ಮೃತಪಟ್ಟ ಘಟನೆ ಇನ್ನೂ ಮಾಸಿಲ್ಲ ಈಗ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಕ್ಕಳನ್ನು ಕಣ್ಣರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಏನಾದರೊಂದು ಅವಘಡಗಳು ನಡೆಯುತ್ತಲೇ ಇರುತ್ತದೆ.

VISTARANEWS.COM


on

Viral Video
Koo

ನೋಯ್ಡಾ : ಚಿಕ್ಕಮಕ್ಕಳು ಆಟವಾಡುತ್ತಿರುವಾಗ ಪೋಷಕರು ಅವರ ಗಮನಕೊಡುವ ಬದಲು ಮೊಬೈಲ್ ನೋಡುವುದರಲ್ಲಿ, ಬೇರೆಯವರ ಜೊತೆ ಮಾತನಾಡುವುದರಲ್ಲೇ ಕಾಲ ಕಳೆಯುತ್ತಿರುತ್ತಾರೆ. ಆದರೆ ಚಿಕ್ಕಮಕ್ಕಳು ಹೊರಗಡೆ ಅಥವಾ ಮನೆಯ ಒಳಗಡೆ ಆಟವಾಡುವಾಗ ಪೋಷಕರು ಮಕ್ಕಳ ಬಗ್ಗೆ ಗಮನಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ಅಪಾಯ ಸಂಭವಿಸಬಹುದು. ಆದರೆ ಕೆಲವೊಮ್ಮೆ ಮಕ್ಕಳು ಪಾಪ ತಮ್ಮ ಪಾಡಿಗೆ ಮನೆಯ ಬಳಿ ಆಟವಾಡುತ್ತಿದ್ದರೂ ಅವರದಲ್ಲದ ತಪ್ಪಿಗೆ ಬಲಿಪಶು ಆಗುತ್ತಿದ್ದಾರೆ. ಚಾಲಕರ ಬೇಜವಾಬ್ದಾರಿ ಚಾಲನೆ ಇದಕ್ಕೆ ಕಾರಣ. ಅಂತಹದೊಂದು ಘಟನೆ ಇದೀಗ ನೋಯ್ಡಾದಲ್ಲಿ ಸಂಭವಿಸಿದ್ದು, ವಿಡಿಯೋ ವೈರಲ್ (Viral Video )ಆಗಿದೆ.

ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಾಗ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.

ವರದಿಗಳ ಪ್ರಕಾರ, ಗಾಯಗೊಂಡ ಬಾಲಕಿಯನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ವಿಡಿಯೊದಲ್ಲಿ ಕಂಡುಬರುವ ಮಹಿಳೆಯನ್ನು ರಿಂಕಿ ಎಂದು ಗುರುತಿಸಲಾಗಿದ್ದು, ಅವರು ಕನೌಜಿಯಾ ಎಂಬ ವ್ಯಕ್ತಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಸೆಕ್ಟರ್ -63 ಠಾಣೆಯ ಪೊಲೀಸರು ಸೋಶಿಯಲ್ ಮೀಡಿಯಾಗಳ ಮೂಲಕ ಮಾಹಿತಿ ಪಡೆದರು. ಘಟನೆಯ ಬಗ್ಗೆ ತಕ್ಷಣ ಗಮನ ಹರಿಸಿದ ಪೊಲೀಸರು ಗಂಭೀರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವಾಹನವನ್ನು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಬಾಲಕಿಯ ಸರಿಯಾದ ಚಿಕಿತ್ಸೆಗಾಗಿ ಆಸ್ಪತ್ರೆಯ ಆಡಳಿತವನ್ನು ಸಂಪರ್ಕಿಸಲಾಗಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ಇಂತಹದೊಂದು ಘಟನೆ ಈ ವರ್ಷದ ಏಪ್ರಿಲ್ ನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನ ಅಗರ ಗ್ರಾಮದಲ್ಲಿ ನಡೆದಿದ್ದು, ಮನೆಯ ಮುಂದೆ ನಿಂತಿದ್ದ ಒಂದೂವರೆ ವರ್ಷದ ಮಗುವಿಗೆ ತಂದೆಯ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿತ್ತು. ಮಗುವಿನ ಕುಟುಂಬದವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಗು ತನ್ನ ಹೆತ್ತವರೊಂದಿಗೆ ಸಂಜೆ ಚನ್ನಪಟ್ಟಣದಿಂದ ಹಿಂದಿರುಗಿತ್ತು.ಆಕೆಯ ತಂದೆ ವಾಹನದಿಂದ ಸಾಮಾನುಗಳನ್ನು ಹೊರತೆಗೆದು, ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮಗು ವಾಹನದ ಹಿಂಭಾಗದ ಚಕ್ರದ ಅಡಿಯಲ್ಲಿ ಬಂದು ಚಕ್ರಕ್ಕೆ ಸಿಲುಕಿ ನಜ್ಜುಗುಜ್ಜಾಗಿ ಸಾವನಪ್ಪಿದೆ.

Continue Reading

ಶಿಕ್ಷಣ

Parenting Tips: ಕಾಲೇಜಿಗೆ ಹೊರಡಲು ಸಿದ್ಧವಾಗಿರುವ ಮಕ್ಕಳಿಗೆ ಪೋಷಕರು ತಿಳಿಸಲೇಬೇಕಾದ ಸಂಗತಿಗಳಿವು!

10, 12ನೇ ತರಗತಿ ಪರೀಕ್ಷೆ ಮುಗಿದ ತಕ್ಷಣ ಮಕ್ಕಳಲ್ಲಿ ತಾವು ಇನ್ನು ಸ್ವತಂತ್ರರು ಎಂಬ ಭಾವನೆ ಬರುವುದು ಸಹಜ. ಬದುಕಿನಲ್ಲಿ ಗಂಭೀರತೆ ಅರಿಯದೇ ಇದ್ದರೆ ಅವರು ದಾರಿ ತಪ್ಪುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಅವರಿಗೆ ಪೋಷಕರು (Parenting Tips) ತಿಳಿಸಲೇಬೇಕಾದ ಕೆಲವು ಸಂಗತಿಗಳಿವೆ. ಇದರಿಂದ ಅವರು ಜೀವನ ಮತ್ತು ಶಿಕ್ಷಣ ಎರಡರಲ್ಲೂ ಯಶಸ್ಸು ಸಾಧಿಸಬಹುದು. ಪೋಷಕರು ಗಮನ ಹರಿಸಬೇಕಾದ ಸಂಗತಿಗಳ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Parenting Tips
Koo

ಎಸ್ ಎಸ್ ಎಲ್ ಸಿ (SSLC) ಮತ್ತು ಸೆಕೆಂಡ್ ಪಿಯುಸಿ (PUC) ಪರೀಕ್ಷೆಗಳ (Exam) ಫಲಿತಾಂಶದ ಅನಂತರ ಮಕ್ಕಳು ಜೀವನದ ಹೊಸ ಪ್ರಯಾಣವನ್ನು (new life) ಪ್ರಾರಂಭಿಸಲು ಸಿದ್ಧರಾಗುತ್ತಾರೆ. ಕೆಲವರು ಕಾಲೇಜಿನತ್ತ (collage) ಹೆಜ್ಜೆ ಹಾಕಿದರೆ ಇನ್ನು ಕೆಲವರು ಸ್ವಂತ ಬಿಸ್ ನೆಸ್ ಪ್ರಾರಂಭ ಅಥವಾ ತಂದೆ ತಾಯಿಯಿಂದ (Parenting Tips) ಕಲಿತ ಕೆಲಸಗಳನ್ನು ವೃತ್ತಿಯಾಗಿ ಪಡೆಯಲು ಸಿದ್ಧತೆ ನಡೆಸುತ್ತಾರೆ. ಒಂದು ಅರ್ಥದಲ್ಲಿ 12ನೇ ತರಗತಿಯ ಅನಂತರ ಮಕ್ಕಳು ತಮ್ಮ ವೃತ್ತಿಜೀವನವನ್ನು ನಿರ್ಧರಿಸುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡುತ್ತಾರೆ. ವಿಷಯ ಮತ್ತು ವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಮತ್ತು ಪ್ರವೇಶ ಪ್ರಕ್ರಿಯೆ ನಡೆಯುತ್ತದೆ. ಈ ಸಮಯದಲ್ಲಿ ಮಗುವೂ ಶಾಲೆಯನ್ನು ತೊರೆದು ಕಾಲೇಜಿಗೆ ಹೋಗುವ ವಯಸ್ಸಾಗಿದ್ದರೆ, ಪೋಷಕರಾಗಿ ಅವರ ವೃತ್ತಿ ಮತ್ತು ಭವಿಷ್ಯದ ಬಗ್ಗೆ ಕಾಳಜಿಯನ್ನು ತೋರುವುದು ಒಳ್ಳೆಯದು.

Parents moving college student

ಶಾಲಾ ಜೀವನಕ್ಕೂ ಕಾಲೇಜು ಜೀವನಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಶಾಲೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಮೇಲ್ವಿಚಾರಣೆಯಲ್ಲಿ ವಾಸಿಸುತ್ತಿದ್ದ ಮಗು, ವಯಸ್ಸಿನಲ್ಲಿ ಬೆಳೆಯುತ್ತದೆ ಮಾತ್ರವಲ್ಲದೆ ಅಂತಹ ವಾತಾವರಣಕ್ಕೆ ಹೋಗುತ್ತದೆ. ಅಲ್ಲಿ ಬಹುತೇಕ ಸ್ವತಂತ್ರನಾಗಲು ಪ್ರಾರಂಭಿಸುತ್ತದೆ. ಇಲ್ಲಿಂದ ಮಗುವಿನ ಆಲೋಚನೆಗಳು ಬೆಳೆಯಲು ಪ್ರಾರಂಭಿಸುತ್ತವೆ. ಶಾಲಾ ವಾಹನದ ಬದಲು, ಮಕ್ಕಳು ತಮ್ಮ ಬೈಕ್-ಸ್ಕೂಟರ್ ಅಥವಾ ಕಾರನ್ನು ತಾನೇ ಓಡಿಸಿಕೊಂಡು ಕಾಲೇಜಿಗೆ ಹೋಗುವ ಹಾದಿಯಲ್ಲಿರುತ್ತಾರೆ. ಮಕ್ಕಳು ಈ ಸಂದರ್ಭದಲ್ಲಿ ವಿದ್ಯಾಭ್ಯಾಸದ ಜೊತೆಗೆ ಹಲವಾರು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದೆಲ್ಲವೂ ಅವರಿಗೆ ಹೊಸ ಅನುಭವವಾಗಿದೆ. ಅವರು ಇದನ್ನು ಧನಾತ್ಮಕ ಮತ್ತು ಋಣಾತ್ಮಕ ರೀತಿಯಲ್ಲಿ ತೆಗೆದುಕೊಳ್ಳಬಹುದು. ಅಂತಹ ಪರಿಸ್ಥಿತಿಯಲ್ಲಿ ಪೋಷಕರು ತಮ್ಮ ಮಗುವಿಗೆ ಕಾಲೇಜಿಗೆ ಕಳುಹಿಸುವ ಮೊದಲು ಕೆಲವು ಪ್ರಮುಖ ವಿಷಯಗಳನ್ನು ತಿಳಿಸಬೇಕು. ಇದರಿಂದ ಮಗು ಕಾಲೇಜು ಜೀವನದಲ್ಲಿ ಕಳೆದುಹೋಗುವುದಿಲ್ಲ. ಆದರೆ ತನ್ನ ಗುರಿಯನ್ನು ಸಾಧಿಸುವ ಜೊತೆಗೆ ಸಮಾಜದಲ್ಲಿ ಬದುಕಲು ಮತ್ತು ಸ್ವಯಂ ಆಗಲು ತರಬೇತಿಯನ್ನು ಪ್ರಾರಂಭಿಸಬಹುದು. ಮೊದಲ ಬಾರಿಗೆ ಕಾಲೇಜಿಗೆ ಹೋಗಲು ತಯಾರಿ ನಡೆಸುತ್ತಿರುವ ಮಕ್ಕಳು ಹಾಗೂ ಇವರ ಪೋಷಕರು ತಿಳಿದುಕೊಳ್ಳಬೇಕಾದ ಹಲವು ಸಂಗತಿಗಳಿವೆ. ಮುಖ್ಯವಾಗಿ ಪೋಷಕರು ತಮ್ಮ ಮಕ್ಕಳಿಗೆ ಕಲಿಸಬೇಕಾದ ವಿಚಾರಗಳು ಹಲವಾರು ಇದೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

school and collage girl

1. ಶಾಲೆ ಮತ್ತು ಕಾಲೇಜು ನಡುವಿನ ವ್ಯತ್ಯಾಸ

ಶಾಲೆಯಿಂದ ಕಾಲೇಜಿಗೆ ಹೋಗುವುದು ಮಕ್ಕಳಿಗೆ ಒಂದು ಪ್ರಮುಖ ಹಂತವಾಗಿದೆ. ಮಗುವು ನಿಯಮ ಮತ್ತು ಶಿಸ್ತಿನ ಜೀವನದಿಂದ ಸಂಪೂರ್ಣವಾಗಿ ವಿಭಿನ್ನವಾದ ಸ್ಥಳದಲ್ಲಿದ್ದಾಗ ಅವನು ತನ್ನದೇ ಆದ ನಿಯಮಗಳನ್ನು ರೂಪಿಸಿಕೊಂಡು ಬದುಕುವ ಸಮಯ ಇದು. ಕಾಲೇಜು ಮಕ್ಕಳಿಗೆ ಸ್ವಾತಂತ್ರ್ಯ ನೀಡುತ್ತದೆ. ಅದಕ್ಕಾಗಿ ಅವರು ಬಹಳ ಸಮಯದಿಂದ ಕಾಯುತ್ತಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ ಮಗುವು ಈ ಸ್ವಾತಂತ್ರ್ಯವನ್ನು ತಪ್ಪು ರೀತಿಯಲ್ಲಿ ಅಳವಡಿಸಿಕೊಳ್ಳಲು ಪ್ರಾರಂಭಿಸುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಕಾಲೇಜು ಮತ್ತು ಶಾಲೆಯ ನಡುವಿನ ವ್ಯತ್ಯಾಸವನ್ನು ಮಕ್ಕಳಿಗೆ ವಿವರಿಸಿ ಮತ್ತು ಅವನ ವೃತ್ತಿಜೀವನದ ಬಗ್ಗೆ ಅದರ ಗಂಭೀರತೆಯ ಬಗ್ಗೆ ತಿಳಿಸಿ.

2. ಕೇವಲ ಶಿಕ್ಷಣದತ್ತ ಗಮನಹರಿಸಬೇಡಿ

ಶಾಲೆಗಿಂತ ಕಾಲೇಜಿನಲ್ಲಿ ಅಧ್ಯಯನವೇ ಮುಖ್ಯವಾಗಿದ್ದರೂ ಕೇವಲ ಶಿಕ್ಷಣದತ್ತ ಗಮನ ಹರಿಸಿ ಇತರ ವಿಷಯಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅಧ್ಯಯನದ ಜೊತೆಗೆ ಉತ್ತಮ ಸ್ನೇಹಿತರೊಂದಿಗೆ ಸಮಯ ಕಳೆಯಲು, ಪ್ರಾಧ್ಯಾಪಕರೊಂದಿಗೆ ಸಂವಹನ ನಡೆಸಲು ಮತ್ತು ಕ್ಯಾಂಟೀನ್ ಅನ್ನು ಅನುಭವಿಸಲು ಮಗುವನ್ನು ಪ್ರೋತ್ಸಾಹಿಸಿ.

3. ಹಣದ ಮೌಲ್ಯ ತಿಳಿಸಿ

ಕಾಲೇಜಿಗೆ ಹೋಗುವ ಮೊದಲು ಮಕ್ಕಳು ಆರ್ಥಿಕ ವ್ಯವಸ್ಥೆಯನ್ನು ಸಹ ಅರ್ಥಮಾಡಿಕೊಳ್ಳಬೇಕು. ಕಾಲೇಜಿಗೆ ಹೋಗುವ ಪ್ರತಿಯೊಂದು ಮಗುವೂ ಪಾಕೆಟ್ ಮನಿಯನ್ನು ಹೇಗೆ ಬುದ್ಧಿವಂತಿಕೆಯಿಂದ ಖರ್ಚು ಮಾಡಬೇಕೆಂದು ತಿಳಿದಿರಬೇಕು. ಹಣದ ಮೌಲ್ಯವನ್ನು ಅವರಿಗೆ ಕಲಿಸಿ. ನಿಗದಿತ ಪಾಕೆಟ್ ಮನಿಯಿಂದ ಅವರ ಕಾಲೇಜು ಖರ್ಚು ಭರಿಸಬೇಕೆಂದು ಹೇಳಿ. ಅಧ್ಯಯನ, ಕ್ಯಾಂಟೀನ್ ಮತ್ತು ಸ್ನೇಹಿತರ ನಡುವೆ ಎಷ್ಟು ಮತ್ತು ಹೇಗೆ ಹಣವನ್ನು ಖರ್ಚು ಮಾಡಬೇಕೆಂದು ಅವರಿಗೆ ತಿಳಿಸಿ.

4. ಅಡುಗೆಯನ್ನು ಕಲಿಸಿ

ಕಾಲೇಜು ಜೀವನಕ್ಕೆ ಪ್ರವೇಶಿಸುವುದು ಎಂದರೆ ಮಗು ಸ್ವಾವಲಂಬಿಯಾಗುವುದು. ಅಂತಹ ಪರಿಸ್ಥಿತಿಯಲ್ಲಿ, ಪೋಷಕರ ಸಹಾಯವಿಲ್ಲದೆ ಏಕಾಂಗಿಯಾಗಿ ಬದುಕಲು ಅಗತ್ಯವಾದ ಕೆಲಸಗಳನ್ನು ಹೇಗೆ ಮಾಡಬೇಕೆಂದು ಮಗುವಿಗೆ ತಿಳಿದಿರಬೇಕು. ನೀರು ಕಾಯಿಸುವುದು, ಅಡುಗೆ ಮಾಡುವುದು ಹೀಗೆ ಕಾಲೇಜಿಗೆ ಬಂದ ಮೇಲೆ ಓದುವ ಮಟ್ಟವೂ ಹೆಚ್ಚುತ್ತದೆ. ಅನೇಕ ಬಾರಿ ಮಕ್ಕಳು ಮನೆಯಿಂದ ದೂರ ಹೋಗಿ ಹಾಸ್ಟೆಲ್ ಅಥವಾ ಪಿಜಿಯಲ್ಲಿ ಇರಬೇಕಾಗುತ್ತದೆ. ಅಂತಹ ಪರಿಸ್ಥಿತಿ ಮಗು ಮೊದಲೇ ಸಿದ್ಧವಾಗಿರುವುದು ಒಳ್ಳೆಯದು.

ಇದನ್ನೂ ಓದಿ: Top 5 Engineering Courses: ಇವು ಬಹು ಬೇಡಿಕೆಯ ಟಾಪ್ 5 ಎಂಜಿನಿಯರಿಂಗ್ ಕೋರ್ಸ್‌ಗಳು

5. ವೈಯಕ್ತಿಕ ಸುರಕ್ಷತೆ

ಶಾಲಾ ದಿನಗಳಲ್ಲಿ ಮಗುವಿನ ಸುರಕ್ಷತೆಯ ಜವಾಬ್ದಾರಿ ಪೋಷಕರದ್ದಾಗಿರುತ್ತದೆ. ಆದರೆ ಕಾಲೇಜಿಗೆ ಹೋದ ಅನಂತರ ಮಗುವಿನ ಸುರಕ್ಷತೆಯ ಜವಾಬ್ದಾರಿಯು ಮಗುವಿನ ಮೇಲಿರುತ್ತದೆ. ಅವನು ಒಬ್ಬನೇ ಕಾಲೇಜಿಗೆ ಹೋಗುವುದನ್ನು ಕಲಿಯುತ್ತಾನೆ. ತರಗತಿ ಮುಗಿಸಿ ಒಬ್ಬರೇ ಮನೆಗೆ ಹಿಂದಿರುಗುತ್ತಾರೆ. ಪೋಷಕರ ಮೇಲ್ವಿಚಾರಣೆ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಅವರು ತಮ್ಮ ಮಗುವಿಗೆ ತನ್ನನ್ನು ರಕ್ಷಿಸಿಕೊಳ್ಳಲು ಕಲಿಸಬೇಕು. ಯಾವುದೇ ಅಜ್ಞಾತ ಸ್ಥಳಕ್ಕೆ ಒಂಟಿಯಾಗಿ ಹೋಗಬೇಡಿ ಎಂದು ಮಗುವಿಗೆ ಹೇಳಿ. ಹೊಸ ಸ್ನೇಹಿತರು ಹೇಳುವ ಎಲ್ಲವನ್ನೂ ನಂಬಬೇಡಿ ಅಥವಾ ಸಂಬಂಧದಲ್ಲಿ ತನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ಕಲಿಸಿ. ಯೋಚಿಸದೆ ಯಾರನ್ನೂ ನಂಬಬೇಡಿ ಎಂಬುದನ್ನು ತಿಳಿಸಿ.

6. ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಲು ಕಲಿಸಿ

ಮಗುವಿಗೆ ಕಾಲೇಜಿನಲ್ಲಿ ಹೊಸ ಸ್ನೇಹಿತರು ಸಿಗುತ್ತಾರೆ. ಕಾಲೇಜು ಸ್ನೇಹಿತರು ಹೆಚ್ಚಾಗಿ ನೋಟುಗಳ ವಿನಿಮಯದಿಂದ ಪ್ರಾರಂಭಿಸುತ್ತಾರೆ. ಶಾಲಾ ಸ್ನೇಹಿತರಂತೆ, ಅವರು ಬಾಲಿಶತೆಯನ್ನು ಹೊಂದಿರುವುದಿಲ್ಲ. ಆದರೆ ಇತರ ಅನೇಕ ಸಕಾರಾತ್ಮಕ ಮತ್ತು ನಕಾರಾತ್ಮಕ ಭಾವನೆಗಳನ್ನು ಹೊಂದಿರುತ್ತಾರೆ. ಆದ್ದರಿಂದ, ಅವರು ಕಾಲೇಜಿನಲ್ಲಿ ಬುದ್ಧಿವಂತಿಕೆಯಿಂದ ಸ್ನೇಹಿತರನ್ನು ಆಯ್ಕೆ ಮಾಡಬೇಕು ಎಂಬುದನ್ನು ನಾವು ಮಕ್ಕಳಿಗೆ ತಿಳಿಸಬೇಕು.

Continue Reading

Latest

Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

Railway Rules: ರೈಲಿನ ಪ್ರಯಾಣ ಆರಾಮದಾಯಕವಾಗಿರುತ್ತದೆ. ಇನ್ನು ಖರ್ಚು ಕೂಡ ಕಡಿಮೆ ಎನ್ನಬಹುದು. ಮಕ್ಕಳು, ವಯಸ್ಸಾದವರಿಗೆ ಈ ರೈಲಿನ ಪ್ರಯಾಣ ಉತ್ತಮವಾಗಿರುತ್ತದೆ. ಆದರೆ ಪ್ರತಿಯೊಬ್ಬ ರೈಲ್ವೆ ಪ್ರಯಾಣಿಕರು ತಿಳಿದುಕೊಳ್ಳಬೇಕಾದ 7 ಪ್ರಮುಖ ಭಾರತೀಯ ರೈಲ್ವೆ ನಿಯಮಗಳು ಇಲ್ಲಿವೆ. ಈ ನಿಯಮಗಳ ಬಗ್ಗೆ ಅರಿವಿದ್ದರೆ ಇನ್ಮುಂದೆ ಖುಷಿಯಾಗಿ ರೈಲಿನ ಪ್ರಯಾಣವನ್ನು ಎಂಜಾಯ್ ಮಾಡಬಹುದು.ಆ ನಿಯಮಗಳು ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Railway Rules
Koo

ಬೆಂಗಳೂರು: ರೈಲಿನಲ್ಲಿ ಪ್ರಯಾಣಿಸುವುದೆಂದರೆ ಎಲ್ಲರಿಗೂ ತುಂಬಾ ಇಷ್ಟ. ಯಾಕೆಂದರೆ ಅಲ್ಲಿ ನಿಮಗೆ ಪ್ರಯಾಣದ ವೇಳೆ ವಾಂತಿ, ತಲೆ ಸುತ್ತುವುದು, ಶೌಚಾಲಯದಂತಹ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಮತ್ತು ಇದರ ದರ ಕೂಡ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ನಿಮಗೆ ಇಡೀ ಭಾರತವನ್ನು ಅನ್ವೇಷಣೆ ಮಾಡಲು ಭಾರತೀಯ ರೈಲ್ವೆ ಒಂದು ಅತ್ಯುತ್ತಮ ಮಾರ್ಗವಾಗಿದೆ. ಭಾರತೀಯ ರೈಲ್ವೆ 7,000ಕ್ಕೂ ಹೆಚ್ಚು ನಿಲ್ದಾಣಗಳು ಮತ್ತು ಪ್ರತಿದಿನ 23 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಈ ಸಂಸ್ಥೆ ಪ್ರಯಾಣಿಕರಿಗೆ ಕೆಲವು ನಿಯಮಗಳು ಮತ್ತು ನಿಬಂಧನೆಗಳನ್ನು ಹಾಕುತ್ತದೆ. ಹಾಗಾಗಿ ಪ್ರತಿಯೊಬ್ಬ ಪ್ರಯಾಣಿಕರು ತಿಳಿದುಕೊಳ್ಳಬೇಕಾದ 7 ಪ್ರಮುಖ ಭಾರತೀಯ ರೈಲ್ವೆ ನಿಯಮಗಳು(Railway Rules) ಇಲ್ಲಿವೆ:

ಟಿಕೆಟ್ ಬುಕಿಂಗ್:

ರೈಲಿನಲ್ಲಿ ಪ್ರಯಾಣಿಸುವಾಗ ಎಲ್ಲಾ ಪ್ರಯಾಣಿಕರು ತಮ್ಮ ಟಿಕೆಟ್ ಮರೆಯದೆ ಕೊಂಡೊಯ್ಯಬೇಕು. ಟಿಕೆಟ್‌ಗಳನ್ನು ಆನ್‌ಲೈನ್‌, ರೈಲ್ವೆ ನಿಲ್ದಾಣಗಳಲ್ಲಿ ಅಥವಾ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮೂಲಕ ಕಾಯ್ದಿರಿಸಬಹುದು. ಟಿಕೆಟ್ ಇಲ್ಲದೆ ಪ್ರಯಾಣಿಸುವುದು ದಂಡ ಮತ್ತು ಶಿಕ್ಷೆಗೆ ಕಾರಣವಾಗುತ್ತದೆ.

ಲಗೇಜ್:

ಪ್ರಯಾಣಿಕರು ತಮ್ಮೊಂದಿಗೆ ಸಾಮಾನುಗಳನ್ನು ಲಗೇಜ್‌ನಲ್ಲಿ ಕೊಂಡೊಯ್ಯಲು ಅವಕಾಶವಿದೆ, ಆದರೆ ತೂಕವು ಅನುಮತಿಸಲಾದ ತೂಕದ ಮಿತಿಯನ್ನು ಮೀರಬಾರದು. ಫಸ್ಟ್ ಎಸಿ ಮತ್ತು 2ನೇ ಎಸಿಗೆ 40 ಕೆಜಿ, 3ನೇ ಎಸಿ ಮತ್ತು ಚೇರ್ ಕಾರ್ ಗೆ 35 ಕೆಜಿ, ಸ್ಲೀಪರ್ ಕ್ಲಾಸ್ ಗೆ 15 ಕೆಜಿ ಲಗೇಜ್ ಸಾಗಿಸಲು ಮಿತಿ ಇದೆ. ಪ್ರಯಾಣಿಕರು ಯಾವುದೇ ಅಪಾಯಕಾರಿ ಸರಕುಗಳನ್ನು ಸಾಗಿಸಲು ಅನುಮತಿ ಇಲ್ಲ.

ಮದ್ಯಪಾನ:

ರೈಲಿನಲ್ಲಿ ಮದ್ಯ ಸೇವನೆಗೆ ಅವಕಾಶವಿಲ್ಲ. ರೈಲಿನಲ್ಲಿ ಆಲ್ಕೋಹಾಲ್ ಸೇವನೆಯನ್ನು ನಿಷೇಧಿಸಲಾಗಿದೆ. ಮದ್ಯ ಸೇವಿಸಿ ಸಿಕ್ಕಿ ಬಿದ್ದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಧೂಮಪಾನ:

ರೈಲುಗಳು, ಪ್ಲಾಟ್ ಫಾರ್ಮ್‌ಗಳು ಮತ್ತು ನಿಲ್ದಾಣದ ಆವರಣದಲ್ಲಿ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಆಹಾರ:

ಪ್ರಯಾಣಿಕರು ತಮ್ಮದೇ ಆದ ಆಹಾರವನ್ನು ತೆಗೆದುಕೊಂಡು ಹೋಗಬಹುದು ಅಥವಾ ಪ್ಲಾಟ್‌ಫಾರ್ಮ್‌ನಲ್ಲಿರುವ ಆಹಾರ ಮಳಿಗೆಗಳಿಂದ ಆಹಾರವನ್ನು ಖರೀದಿಸಬಹುದು.

ರದ್ದತಿ ಮತ್ತು ಮರುಪಾವತಿ:

ಪ್ರಯಾಣಿಕರು ತಮ್ಮ ಟಿಕೆಟ್ ಅನ್ನು ರದ್ದುಗೊಳಿಸಲು ಬಯಸಿದರೆ, ಅವರು ಅದನ್ನು ರೈಲು ನಿರ್ಗಮನ ಸಮಯದ ಮೊದಲು ಮಾಡಬೇಕು. ಮತ್ತು ಭಾರತೀಯ ರೈಲ್ವೆಯ ರದ್ದತಿ ನೀತಿಯ ಪ್ರಕಾರ ಮರುಪಾವತಿ ನೀಡಲಾಗುವುದು.

ಸುರಕ್ಷತೆ:

ಪ್ರಯಾಣಿಕರು ತಮ್ಮ ವಸ್ತುಗಳ ಬಗ್ಗೆ ಅವರೇ ಕಾಳಜಿ ವಹಿಸಬೇಕು ಮತ್ತು ಪ್ರಯಾಣಿಸುವಾಗ ಅಮೂಲ್ಯವಾದ ವಸ್ತುಗಳನ್ನು ಒಯ್ಯುವುದನ್ನು ತಪ್ಪಿಸಬೇಕು. ಈ ವಿಚಾರದಲ್ಲಿ ಅವರು ಸಹ ಪ್ರಯಾಣಿಕರೊಂದಿಗೆ ವಾದಗಳು ಅಥವಾ ಜಗಳಗಳಲ್ಲಿ ತೊಡಗುವುದನ್ನು ತಪ್ಪಿಸಬೇಕು.

ಪ್ರಶ್ನೆ-ಉತ್ತರಗಳು:

  • ಪ್ರಶ್ನೆ 1: ಭಾರತೀಯ ರೈಲ್ವೆಯಲ್ಲಿ ನಾನು ರೈಲು ಟಿಕೆಟ್ ಗಳನ್ನು ಹೇಗೆ ಕಾಯ್ದಿರಿಸಬಹುದು?
  • ನೀವು ಭಾರತೀಯ ರೈಲ್ವೆಯಲ್ಲಿ ರೈಲು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಕಾಯ್ದಿರಿಸಬಹುದು. ಅದಕ್ಕಾಗಿ ಐಆರ್‌ಟಿಸಿ ವೆಬ್‌ಸೈಟ್‌ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಅಥವಾ ವಿವಿಧ ರೈಲ್ವೆ ನಿಲ್ದಾಣಗಳಲ್ಲಿನ ರೈಲ್ವೆ ಮೀಸಲಾತಿ ಕೌಂಟರ್‌ಗಳಲ್ಲಿ ಟಿಕೆಟ್ ಪಡೆಯಬಹುದು.
  • ಪ್ರಶ್ನೆ 2: ನಾನು ಭಾರತೀಯ ರೈಲ್ವೆಯಲ್ಲಿ ಆಹಾರವನ್ನು ಸಾಗಿಸಬಹುದೇ?
  • ಎ 2: ಹೌದು, ನೀವು ನಿಮ್ಮ ಮನೆಯಲ್ಲಿ ತಯಾರಿಸಿದ ಆಹಾರವನ್ನು ಒಯ್ಯಬಹುದು ಅಥವಾ ಪ್ಯಾಂಟ್ರಿ ಕಾರು ಅಥವಾ ಪ್ಲಾಟ್ ಫಾರ್ಮ್‌ನಲ್ಲಿರುವ ಆಹಾರ ಮಳಿಗೆಗಳಿಂದ ಆಹಾರವನ್ನು ಖರೀದಿಸಬಹುದು.
Continue Reading

Latest

Stop Drinking: ಗಂಡನ ಕುಡಿತ ನಿಲ್ಲಿಸಬೇಕೆ? ಹಾಗಾದ್ರೆ ಬಿಜೆಪಿ ಸಚಿವರೊಬ್ಬರ ಈ ಟಿಪ್ಸ್‌ ಟ್ರೈ ಮಾಡಿ ನೋಡಿ!

Stop Drinking ಪುರುಷರ ಕುಡಿತದ ಅಭ್ಯಾಸವನ್ನು ನಿಗ್ರಹಿಸಲು ಮಹಿಳೆಯರಿಗೆ ಮಧ್ಯಪ್ರದೇಶದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ, ಬಿಜೆಪಿ ನಾಯಕ ನಾರಾಯಣ್ ಸಿಂಗ್ ಕುಶ್ವಾಹ ಸಲಹೆಯೊಂದನ್ನು ನೀಡಿದ್ದಾರೆ. ಹೊರಗೆಲ್ಲೊ ಕುಡಿಯುವ ಬದಲು ಆಲ್ಕೋಹಾಲ್ ಅನ್ನು ಮನೆಗೆ ತಂದು ನಿಮ್ಮ ಮುಂದೆ ಕುಡಿಯಲು ಗಂಡನಿಗೆ ತಿಳಿಸಿ. ಅವರು ತಮ್ಮ ಕುಟುಂಬಗಳ ಮುಂದೆ ಕುಡಿದರೆ, ಅವರ ಆಲ್ಕೋಹಾಲ್ ಸೇವನೆ ಕ್ರಮೇಣ ಕಡಿಮೆಯಾಗುತ್ತದೆ, ಮತ್ತು ಕೊನೆಯಲ್ಲಿ ಅವರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಅವರು ತಮ್ಮ ಹೆಂಡತಿ ಮಕ್ಕಳ ಮುಂದೆ ಕುಡಿಯಲು ನಾಚಿಕೆಪಡುತ್ತಾರೆ ಎಂದಿದ್ದಾರೆ.

VISTARANEWS.COM


on

Stop Drinking
Koo

ಕುಡಿತ ತಮ್ಮ ಜೀವನದ ಜೊತೆಗೆ ನಮ್ಮ ಕುಟುಂಬದವರ ಜೀವನವನ್ನು ಹಾಳು ಮಾಡುತ್ತದೆ ಎಂದು ತಿಳಿದರೂ ಕೂಡ ಹಲವು ಗಂಡಸರು ಕುಡಿತದ ದಾಸರಾಗಿದ್ದಾರೆ. ಕುಡುಕ ಗಂಡನಿಂದ ಕಿರುಕುಳಕ್ಕೆ ಒಳಗಾಗುವಂತಹ ಮಹಿಳೆಯರು ಇನ್ನೂ ನಮ್ಮ ದೇಶದಲ್ಲಿ ಇದ್ದಾರೆ. ಹಾಗಾಗಿ ಇಂತಹ ಕುಡುಕ ಗಂಡನನ್ನು ಸರಿಮಾಡುವುದು ಹೇಗೆ, ಅವರ ಕುಡಿತ ನಿಲ್ಲಿಸುವುದು ಹೇಗೇ (Stop Drinking) ಎಂದು ಒದ್ದಾಡುತ್ತಿರುವ ಮಹಿಳೆಯರಿಗೆ ಮಧ್ಯಪ್ರದೇಶದ ಸಚಿವರೊಬ್ಬರು ಸಲಹೆ ನೀಡಿದ್ದಾರೆ.

ಮಾದಕ ದ್ರವ್ಯ ಮತ್ತು ಮದ್ಯಪಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭೋಪಾಲ್‌ನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ, ಬಿಜೆಪಿ ನಾಯಕ ನಾರಾಯಣ್ ಸಿಂಗ್ ಕುಶ್ವಾಹ ಅವರು ಭಾಗವಹಿಸಿದ್ದರು. ಈ ವೇಳೆ ಅವರು ಪುರುಷರ ಕುಡಿತದ ಅಭ್ಯಾಸವನ್ನು ನಿಗ್ರಹಿಸಲು ಮಹಿಳೆಯರಿಗೆ ಅಸಾಮಾನ್ಯ ವಿಧಾನವೊಂದನ್ನು ತಿಳಿಸಿದ್ದಾರೆ. ಅದೇನೆಂದರೆ ಮಹಿಳೆಯರು ತಮ್ಮ ಗಂಡಂದಿರಿಗೆ ಮನೆಯಲ್ಲಿ ಕುಡಿಯಲು ಹೇಳಬೇಕಂತೆ. ಯಾಕೆಂದರೆ ಪುರುಷರು ತಮ್ಮ ಹೆಂಡತಿ ಮತ್ತು ಮಕ್ಕಳ ಮುಂದೆ ಕುಡಿಯಲು ನಾಚಿಕೆಪಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

“ತಾಯಂದಿರು ಮತ್ತು ಸಹೋದರಿಯರು ತಮ್ಮ ಗಂಡಂದಿರು ಕುಡಿಯುವುದನ್ನು ನಿಲ್ಲಿಸಬೇಕೆಂದು ಬಯಸಿದರೆ, ಮೊದಲು ಹೊರಗೆ ಕುಡಿಯಬೇಡಿ ಎಂದು ಹೇಳಿ. ಆಲ್ಕೋಹಾಲ್ ಅನ್ನು ಮನೆಗೆ ತಂದು ನಿಮ್ಮ ಮುಂದೆ ಕುಡಿಯಲು ಅವರಿಗೆ ತಿಳಿಸಿ. ಅವರು ತಮ್ಮ ಕುಟುಂಬಗಳ ಮುಂದೆ ಕುಡಿದರೆ, ಅವರ ಸೇವನೆ ಕ್ರಮೇಣ ಕಡಿಮೆಯಾಗುತ್ತದೆ, ಮತ್ತು ಕೊನೆಯಲ್ಲಿ ಅವರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಅವರು ತಮ್ಮ ಹೆಂಡತಿ ಮಕ್ಕಳ ಮುಂದೆ ಕುಡಿಯಲು ನಾಚಿಕೆಪಡುತ್ತಾರೆ. ಅಲ್ಲದೆ, ಅವರ ಉದಾಹರಣೆಯನ್ನು ಅನುಸರಿಸುವ ಮೂಲಕ ಅವರ ಮಕ್ಕಳು ಕುಡಿಯಲು ಪ್ರಾರಂಭಿಸಬಹುದು ಎಂದು ಅವರಿಗೆ ನೆನಪಿಸಿ. ಈ ವಿಧಾನವು ಪ್ರಾಯೋಗಿಕವಾಗಿದೆ, ಮತ್ತು ಗಂಡಂದಿರು ಕುಡಿತವನ್ನು ತ್ಯಜಿಸುತ್ತಾರೆ” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

ಆದರೆ ಸಚಿವರ ಹೇಳಿಕೆಗೆ ತಕ್ಷಣ ಪ್ರತಿಕ್ರಿಯಿಸಿದ ಕಾಂಗ್ರೆಸ್, ಅವರ ಮಾತನ್ನು ಟೀಕಿಸಿದೆ. ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಮುಖೇಶ್ ನಾಯಕ್, “ಸಚಿವರ ಉದ್ದೇಶ ಸರಿಯಾಗಿದೆ, ಆದರೆ ಅದನ್ನು ತಿಳಿಸುವ ಅವರ ವಿಧಾನ ತಪ್ಪು. ಮನೆಯಲ್ಲಿ ಮದ್ಯಪಾನ ಮಾಡುವುದರಿಂದ ಮನೆಯಲ್ಲಿ ಸಂಘರ್ಷ ಮತ್ತು ಕೌಟುಂಬಿಕ ಹಿಂಸಾಚಾರ ಶುರುವಾಗಬಹುದು. ಅವರು ಜನರಿಗೆ ಕುಡಿಯದಂತೆ ಸಲಹೆ ನೀಡಬೇಕಿತ್ತು” ಎಂದು ಸಚಿವರ ಹೇಳಿಕೆಯನ್ನು ಟೀಕಿಸಿದ್ದಾರೆ.

Continue Reading
Advertisement
Road Accident
ಬೆಂಗಳೂರು38 seconds ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Hardik Pandya
ಕ್ರೀಡೆ2 mins ago

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Kamal Haasan on limited screen time in 'Kalki 2898 AD
ಟಾಲಿವುಡ್21 mins ago

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

T20 World Cup 2024
ಕ್ರೀಡೆ26 mins ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು31 mins ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Jay Shah Promise
ಪ್ರಮುಖ ಸುದ್ದಿ43 mins ago

Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

snake Bite
ಕಲಬುರಗಿ53 mins ago

Snake Bite : ಮರದಡಿ ಕುಳಿತಾಗ ಮಹಿಳೆಯ ಕಿವಿಗೆ ಕುಟುಕಿದ ಹಾವು; ವಿಷವೇರಿ ಸಾವು

T20 World Cup 2024 prize money
ಕ್ರೀಡೆ1 hour ago

T20 World Cup 2024 Prize Money:ಚಾಂಪಿಯನ್​ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

Text Book
ಕರ್ನಾಟಕ1 hour ago

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Virat Kohli video calls Anushka Sharma after winning
ಬಾಲಿವುಡ್1 hour ago

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌