KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ - Vistara News

ಕರ್ನಾಟಕ

KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

KAS Exam: 2023-24ನೇ ಸಾಲಿನ ಕೆಎಎಸ್ ಪರೀಕ್ಷೆ ಬರೆಯಲು ಈಗಾಗಲೇ ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿತ್ತು. ಆದರೆ, ಇದೀಗ 2017-18 ನೇ ಸಾಲಿನ ಕೆಎಎಸ್‌ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ಹೆಚ್ಚುವರಿ ವಿಶೇಷ ಅವಕಾಶ ನೀಡಲಾಗಿದೆ.

VISTARANEWS.COM


on

KAS Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಎಎಸ್‌ ಹುದ್ದೆ ಆಕಾಂಕ್ಷಿಗಳಿಗೆ ಕೆಪಿಎಸ್‌ಸಿ ಗುಡ್‌ ನ್ಯೂಸ್‌ (Job News) ನೀಡಿದೆ. 2023-24 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (KAS Exam) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದ್ದು, ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದೆ. ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದಾರೆ.

ಈ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24 ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಫೆಬ್ರವರಿ 26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿದೆ ಎಂದು ತಿಳಿಸಿದೆ.

ಕೆಎಎಸ್‌ ಸೇರಿ ಇತರ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಜುಲೈ 21ರಂದು ನಡೆಸಲಾಗುವುದು ಎಂದು ಈಗಾಗಲೇ ಕೆಪಿಎಸ್‌ಸಿ ತಿಳಿಸಿದೆ. ಅಭ್ಯರ್ಥಿಗಳ ಮನವಿ ಮೇರೆಗೆ ಪರೀಕ್ಷಾ ದಿನಾಂಕ ಮುಂದೂಡಲಾಗಿತ್ತು.

ಇದನ್ನೂ ಓದಿ | Job Recruitment: ಎಚ್‌ಎಎಲ್‌ನಲ್ಲಿ ಉದ್ಯೋಗ; ನಾಳೆಯೇ ಕೊನೆಯ ದಿನಾಂಕ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Job Recruitment

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Physical Abuse : 6 ವರ್ಷದ ಪುಟ್ಟ ಬಾಲಕಿಯನ್ನು ಮನೆಗೆ ಕರೆದೊಯ್ದ 17 ವರ್ಷದ ಬಾಲಕ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ನರಳಾಟ ಕಂಡು ಪೋಷಕರು ಗಮನಿಸಿದಾಗ ತೀವ್ರ ರಕ್ತಸ್ರಾವವಾಗಿರುವುದು ಕಂಡಿದೆ. ಆಕೆಯನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

VISTARANEWS.COM


on

By

Physical Abuse
ಸಾಂದರ್ಭಿಕ ಚಿತ್ರ
Koo

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಕರೆದೊಯ್ದ 17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ (Physical Abuse ) ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಒಬ್ಬಳೇ ಆಟವಾಡುತ್ತಿದ್ದನ್ನು ಗಮನಿಸಿದ 17ರ ಪೋರ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದಾನೆ. ತಿಂಡಿ ಆಸೆಗೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಆದರೆ ಅಂಗಡಿ ಕರೆದುಕೊಂಡು ಹೋಗದೇ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ವಾಪಸ್‌ ಬಾಲಕಿಯನ್ನು ಕಳಿಸಿದ್ದಾನೆ.

ಆದರೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಗಮನಿಸಿದ ಪೋಷಕರು ವಿಚಾರಿಸಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದು, ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಮೃತ್ಯುಕೂಪವಾದ ಎನ್‌ಎಚ್‌ 50 ರಸ್ತೆ

ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯುಕೂಪವಾಗಿ (Road Accident) ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ.

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತು ಕೊಯ್ದರೂ ಬದುಕುಳಿದ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

Shawarma: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

VISTARANEWS.COM


on

Shawarma
Koo

ಬೆಂಗಳೂರು: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ (Shawarma) ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ.

ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದ್ದೇನು?

ಮಾಧ್ಯಮಗಳಲ್ಲಿ ಶವರ್ಮಾ ಸೇವಿಸಿ ಫುಡ್‌ ಪಾಯ್ಸನ್‌ ಆಗಿರುವ ಕುರಿತು ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೋರೇಷನ್‌ ವ್ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶವರ್ಮಾದ ಆಹಾರ ಮಾದರಿಗಳನ್ನ್ ವಿಶ್ಲೇಷಣೆಗೊಳಪಡಿಸಲಾಗಿದೆ. ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತವಾಗಿದ್ದರೆ 8 ಮಾದರಿಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ ಕಂಡು ಬಂದಿರುವುದರಿಂದ ಅಸುರಕ್ಷಿತ ಎಂದು ನಿರ್ಧರಿಸಲಾಗಿದೆ. ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ. ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ್ಮ ಉದ್ದಿಮೆಗೆ ಎಫ್‌ಎಸ್‌ಎಸ್‌ಎಐ ನೋಂದಣಿ / ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ್ಮ ವ್ಯಾಪಾರದ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ.

ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ. ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Chemicals in Food: ಗೋಬಿ- ಕಬಾಬ್‌ ಆಯ್ತು‌, ಈಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಿ ವಿಷ ಪತ್ತೆ; ಸದ್ಯದಲ್ಲೇ ಬ್ಯಾನ್?

Continue Reading

ಕ್ರೈಂ

Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

Road Accident: ವಿಜಯನಗರದ ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

VISTARANEWS.COM


on

Road Accident
Koo

ವಿಜಯನಗರ: ಕೂಡ್ಲಿಗಿಯ ಎನ್‌ಎಚ್‌ 50 (NH 50) ರಸ್ತೆ ಮೃತ್ಯಕೂಪವಾಗಿ ಪರಿಣಮಿಸುತ್ತಿದೆ. ಈ ರಸ್ತೆ ಪದೇ ಪದೆ ಅಪಘಾತಗಳಿಂದ ಸದ್ದು ಮಾಡುತ್ತಿದೆ. ಇದೀಗ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ (Road Accident).

ಇತ್ತೀಚೆಗೆ ಕೂಡ್ಲಿಗಿಯ ಎನ್‌ಎಚ್‌ 50ರಲ್ಲಿ ಟಿಟಿ ಟ್ರಾವೆಲರ್‌ ಅಪಘಾತವಾಗಿ ಓರ್ವ ಮೃತಪಟ್ಟಿದ್ದರು. ಅದು ಮಾಸುವ ಮುನ್ನ ಈಗ ಮತ್ತೆ ಅದೇ ರೀತಿಯ ಅಪಫಾತ ನಡೆದು ಇಬ್ಬರನ್ನು ಬಲಿ ಪಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ ನಡೆದಿದ್ದು, ಮೃತರನ್ನು ಕಾರು ಚಾಲಕ ವಿನಯ್ (27) ಮತ್ತು ಚನ್ನವಸವ (27) ಎಂದು ಗುರುತಿಸಲಾಗಿದೆ.

ರಾಯಚೂರಿನ ಲಿಂಗಸೂಗೂರಿನಿಂದ ಕೇರಳದ ವಯನಾಡಿಗೆ ಹೊರಟಿದ್ದ ಗೆಳೆಯರ ತಂಡವಿದ್ದ ಕಾರು ಪಲ್ಟಿ ಹೊಡೆದು ಅವಘಡ ನಡೆದಿದೆ. ಅತೀ ವೇಗದಿಂದ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡ 5 ಮಂದಿಯನ್ನು ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿ ಕುಡಿದು ಗಲಾಟೆ ನಡೆದಿದ್ದು, ವ್ಯಕ್ತಿಯೊಬ್ಬನಿಗೆ ಗಾಯಗಳಾಗಿವೆ. ಕುಡಿದ ಅಮಲಿನಲ್ಲಿ ತೃತೀಯ ಲಿಂಗಿ ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ತೃತೀಯ ಲಿಂಗಿ ಮತ್ತು ವ್ಯಕ್ತಿಯೊಬ್ಬ ಸೇರಿ ಕತ್ತು ಕೊಯ್ದರೂ ಅದೃಷ್ಟವಶಾತ್‌ ನೌಷದ್ ಎನ್ನುವ ವ್ಯಕ್ತಿ ಬದುಕುಳಿದಿದ್ದಾನೆ.

ಆರೋಪಿಗಳಾದ ಶಕೀಲ ಹಾಗೂ ಸಾದಿಕ್.

ಘಟನೆ ಹಿನ್ನಲೆ

ಮುರುಗಮಲ್ಲ ಗ್ರಾಮದ ಕೆನರಾ ಬ್ಯಾಂಕ್ ಬಳಿಯ ಬಾರ್‌ನಲ್ಲಿ ಕುಡಿದು ಗ್ಯಾಂಗ್ ಗಲಾಟೆ ಮಾಡಿಕೊಂಡಿತ್ತು. ಈ ವೇಳೆ ಮಂಗಳಮುಖಿ ಶಕೀಲ ಹಾಗೂ ಸಾದಿಕ್ ಸೇರಿ ನೌಷದ್ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದರು. ಅವರು ಹರಿತವಾದ ಚಾಕುವಿನಿಂದ ನೌಷದ್ ಕತ್ತು ಕೊಯ್ದಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸದ್ಯ ನೌಷದ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಕೊಲೆ ಯತ್ನ ನಡೆಸಿದ ಶಕೀಲ ಹಾಗು ಸಾದಿಕ್‌ನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ರಾಜ್ಯದ ವಿವಿಧ ಭಾಗಳಲ್ಲಿ ನಡೆಸಿದ ಸಂಭ್ರಮಾಚರಣೆಯ ಝಳಕ್‌ ಇಲ್ಲಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ಟೀಮ್‌ ಇಂಡಿಯಾ ಗೆಲುವುವನ್ನು ಕೊಂಡಾಡಿದರು.

ಬೆಂಗಳೂರು: ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಬೆಳಗಾವಿ: ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಭಾರತದ ಗೆಲುವನ್ನು ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಭಟ್ಕಳದ ಸಂಶುದ್ದೀನ್ ವೃತ್ತದಲ್ಲಿ ತಡರಾತ್ರಿ ಸಂಭ್ರಮಾಚರಣೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಹೆದ್ದಾರಿಯಲ್ಲಿ ಜಮಾಯಿಸಿದ ಕ್ರಿಕೆಟ್ ಪ್ರೇಮಿಗಳು ಸಂಚರಿಸುತ್ತಿದ್ದ ವಾಹನಗಳ ಎದುರು ಕುಣಿದು ಕುಪ್ಪಳಿಸಿದರು. ಭಾರತದ ಬಾವುಟ ಹಿಡಿದ ಯುವಕರು, ಮಕ್ಕಳು, ಕ್ರಿಕೆಟ್ ಪ್ರೇಮಿಗಳ ಸಂಭ್ರಮ ಮುಗಿಲು ಮುಟ್ಟಿತು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಪ್ರಸಂಗವೂ ನಡೆಯಿತು. ಕ್ರಿಕೆಟ್ ಪ್ರೇಮಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ಕೊನೆಗೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಿಕೆಟ್ ಪ್ರೇಮಿಗಳನ್ನು ಪೊಲೀಸರು ಚದುರಿಸಿದರು.

ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿಯೂ ಸಂಭ್ರಮ ಮನೆ ಮಾಡಿತು. ಹೊಸಪೇಟೆ ನಗರದ ಡಾ. ಪುನೀತ್‌ ರಾಜ್‌ಕುಮಾರ್ ಸರ್ಕಲ್‌ನಲ್ಲಿ ಅಭಿಮಾನಿಗಳು ʼಇಂಡಿಯಾ ಇಂಡಿಯಾʼ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

ಧಾರವಾಡ: ಧಾರವಾಡದ ಶ್ರೀನಗರ ವೃತ್ತದಲ್ಲಿ ಗುಂಪುಗೂಡಿದ ಯುವಕರ ತಂಡ ಭಾರತ ಗೆದ್ದ ತಕ್ಷಣವೇ ಟೀಮ್‌ ಇಂಡಿಯಾಕ್ಕೆ ಜಯಘೋಷ ಮೊಳಗಿಸಿತು. ʼಭಾರತ ಮಾತಾ ಕೀ ಜೈʼ ಎಂದು ಘೋಷಣೆಯೂ ಕೇಳಿ ಬಂತು.

ಮೈಸೂರು: ಮೈಸೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡುವ ಮೂಲಕ ಭಾರತದ ಗೆಲುವನ್ನು ಇನ್ನಷ್ಟು ಸಿಹಿಯಾಗಿಸಿದರು. ಭಾರತ ದ್ವಜವನ್ನು ಹಿಡಿದು ದ್ವಿಚಕ್ರ ವಾಹನದ ಮೂಲಕ ಮುಖ್ಯ ರಸ್ತೆಗಳಲ್ಲಿ ಸಾಗಿ ʼಜಿತಾಗಾ ಭೈ ಜಿತೇಗಾ ಭಾರತ್ ಟೀಂ ಜೀತೇಗಾʼ ಎಂಬ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಕ್ರಂ ಅಯ್ಯಂಗಾರ್, ಕಿರಣ್, ಸುದೀಂದ್ರ, ಬೆಲ್ಲ ರಾಜಣ್ಣ ಮಂಜುನಾಥ್, ಸಚಿನ್ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

ಶಿವಮೊಗ್ಗ: ಶಿವಮೊಗ್ಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಭಾರತದ ಧ್ವಜ ಹಿಡಿದು ಕ್ರೀಡಾಭಿಮಾನಿಗಳು ಸಂಭ್ರಮಿಸಿದರು. ಹೀಗೆ ರಾಜುದ ವಿವಿಧ ಕಡೆ ಅಭಿಮಾನಿಗಳು ಸಂಭ್ರಮಾಚರಿಸಿದರು.

ಕಲಬುರಗಿ: ಕಲಬುರಗಿಯಲ್ಲಿ ಯುವಕರು ಸಂಭ್ರಮಾಚರಿಸಿದರು. ಕಲಬುರಗಿಯ ಸರ್ದಾರ್ ವಲ್ಲಾಭಾಯಿ ಪಟೇಲ್ ವೃತ್ತದಲ್ಲಿ ರಾತ್ರೋರಾತ್ರಿ ರಸ್ತೆಗಿಳಿದು ಕಾರು– ಬೈಕ್‌ಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಸುತ್ತುತ್ತ ‘ಇಂಡಿಯಾ–ಇಂಡಿಯಾ’, ‘ಕೊಹ್ಲಿ–ಕೊಹ್ಲಿ’ ಎಂದು ಘೋಷಣೆ ಕೂಗಿದರು. ನೂರಾರು ಕ್ರಿಕೆಟ್‌ ಅಭಿಮಾನಿಗಳು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ತ್ರಿವರ್ಣ ಧ್ವಜ ಹಿಡಿದು ಜೈಕಾರ ಹಾಕಿದರು.

ಇದನ್ನೂ ಓದಿ: T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

Continue Reading
Advertisement
Sabja Seeds Benefits
ಆರೋಗ್ಯ1 min ago

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Physical Abuse
ಚಿಕ್ಕಬಳ್ಳಾಪುರ10 mins ago

Physical Abuse : ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ

Mann Ki Baat
ದೇಶ19 mins ago

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Rahul Dravid
ಕ್ರೀಡೆ21 mins ago

Rahul Dravid: ನಾಯಕನಾಗಿ ಸೋಲಿನ ಅವಮಾನ ಎದುರಿಸಿದ್ದ ಮೈದಾನದಲ್ಲೇ ಕೋಚ್​ ಆಗಿ ವಿಶ್ವಕಪ್​ ಎತ್ತಿ ಹಿಡಿದ ದ್ರಾವಿಡ್

Shiva Rajkumar Tweet About India's T20 Victory about rahul
ಕ್ರಿಕೆಟ್32 mins ago

Shiva Rajkumar: ರಾಹುಲ್ ದ್ರಾವಿಡ್ ಫೋಟೊ ಶೇರ್‌ ಮಾಡಿ ‘ಗೋಡೆ’ ಮೇಲೆ ವರ್ಲ್ಡ್ ಕಪ್ ಇಡೋರ್ ಆಗ್ಬೇಕು ಎಂದ ಶಿವಣ್ಣ

T20 World Cup 2024 Anushka Sharma reveals Vamika biggest concern
ಕ್ರಿಕೆಟ್49 mins ago

T20 World Cup 2024: ಟೀಮ್​ ಇಂಡಿಯಾ ಗೆದ್ದ ಬಳಿಕ ವಿರಾಟ್‌- ಅನುಷ್ಕಾ ಮಗಳ ವಿಶೇಷ ಕಾಳಜಿ ಏನಾಗಿತ್ತು?

T20 World Cup final
ಕ್ರೀಡೆ54 mins ago

T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

Shawarma
ಕರ್ನಾಟಕ1 hour ago

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

ಕ್ರೀಡೆ1 hour ago

MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಟಾಲಿವುಡ್1 hour ago

Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ18 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌