Actor Darshan: ದರ್ಶನ್‌ಗೆ ಇಂದು ಮತ್ತೊಂದು ಅಗ್ನಿ ಪರೀಕ್ಷೆ; ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರುತ್ತಾರಾ ಚಾಲೆಂಜಿಂಗ್‌ ಸ್ಟಾರ್‌? - Vistara News

ಕ್ರೈಂ

Actor Darshan: ದರ್ಶನ್‌ಗೆ ಇಂದು ಮತ್ತೊಂದು ಅಗ್ನಿ ಪರೀಕ್ಷೆ; ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರುತ್ತಾರಾ ಚಾಲೆಂಜಿಂಗ್‌ ಸ್ಟಾರ್‌?

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌  ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅಂತ್ಯವಾಗುತ್ತಿದ್ದು, ಇಂದು (ಜೂನ್‌ 22) ಪೊಲೀಸರು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ. ಇಲ್ಲಿ ದರ್ಶನ್‌ ಭವಿಷ್ಯ ನಿರ್ಧಾರವಾಗಲಿದೆ.

ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

ಒಂದುವೇಳೆ ನ್ಯಾಯಾಂಗ ಬಂಧನವಾದರೆ ದರ್ಶನ್‌ ಬೆಂಗಳೂರಿನ‌ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈಗಾಗಲೇ ಪ್ರಕರಣದ ಎ1 ಆರೋಪಿ, ದರ್ಶನ್‌ ಸ್ನೇಹಿತೆ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮೀ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ‌ ದರ್ಶನ್ ಜೈಲು ಸೇರಿದ್ದರು. ಇಂದು ಮತ್ತೆ ನ್ಯಾಯಾಂಗ ಬಂಧನವಾದರೆ ಅವರು ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದಂತಾಗುತ್ತದೆ.

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿತ್ರದುರ್ಗ

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Theft Case : ಚಿತ್ರದುರ್ಗದಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಬೊಲೆರೋ ವಾಹನವನ್ನು ಅಡ್ಡಗಟ್ಟಲು ಮುಂದಾದ ಪೊಲೀಸ್‌ ಜೀಪ್‌ ಮೇಲೆ ಕಳ್ಳರು ಕಲ್ಲು ತೂರಿ ಎಸ್ಕೇಪ್‌ ಆಗಿದ್ದರು. ಇದೀಗ ಪರಾರಿ ಆಗಿದ್ದ ಆಂಧ್ರ ಗ್ಯಾಂಗ್‌ನ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

theft case
Koo

ಚಿತ್ರದುರ್ಗ : ಪೊಲೀಸರ ಮೇಲೆ (Theft Case) ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ವೊಂದು ಎಸ್ಕೇಪ್‌ ಆಗಿತ್ತು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಘಟನೆ ನಡೆದಿತ್ತು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಇದೀಗ ಒಂದೇ ವಾರದಲ್ಲಿ ಪ್ರಕರಣ ಭೇದಿಸಿದ ನಾಯಕನಹಟ್ಟಿ ಪೊಲೀಸರು, ಆಂಧ್ರ ಗ್ಯಾಂಗ್‌ನ ಓರ್ವನನ್ನು ಸೆರೆಹಿಡಿದಿದ್ದಾರೆ. ‌

ಆಂಧ್ರ ಗ್ಯಾಂಗ್‌ವೊಂದು ಕಳೆದ ಶನಿವಾರ ರಾತ್ರಿ ನಾಯಕನಹಟ್ಟಿಯಲ್ಲಿ ಹಂದಿ ಕಳ್ಳತನಕ್ಕೆ ಬಂದಿತ್ತು. ಹಂದಿ ಕಳ್ಳತನಕ್ಕೆ ಬಂದಿದ್ದ ಒರ್ವ ಶಂಕಿತ ಆರೋಪಿ ಅರೆಸ್ಟ್ ಆಗಿದ್ದ. ಆಂಧ್ರ ಮೂಲದ ಆನಂತಪುರ ನಗರದ ರಮಣ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುದಾಪುರ ಗ್ರಾಮದಲ್ಲಿ ಸ್ಥಳ ಮಹಜರ್ ನಡೆಸಿದ್ದಾರೆ.

ಬೊಲೆರೋ ವಾಹನದಲ್ಲಿ ಹಂದಿ ಕಳ್ಳತನಕ್ಕೆ ಬಂದಿದ್ದ 7 ಮಂದಿ ಕಳ್ಳರು ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ ಎಸ್ಕೇಪ್‌ ಆಗಿದ್ದರು. ಮಾತ್ರವಲ್ಲ ಹಿಡಿಯಲು ಬಂದ ಪೊಲೀಸರಿಗೆ ಕಲ್ಲು ತೂರಿದ್ದರು. ಈ ವೇಳೆ ಪಿಎಸ್‌ಐ ಶಿವಕುಮಾರ್ 4 ಸುತ್ತು ಏರ್ ಫೈರ್ ಮಾಡಿ, 25 ಕಿ.ಮೀ ದೂರ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದರು. ಕೊನೆಗೂ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸಿದ್ದ ಬೊಲೆರೋ ಪಿಕಪ್ ವಾಹನ ಸೀಸ್ ಮಾಡಿದ್ದಾರೆ. ಉಳಿದ 7 ಮಂದಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಂದಿ ಕಳ್ಳರು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪೊಲೀಸ್‌ ಜೀಪ್ ಮೇಲೆ ಕಲ್ಲು ತೂರಿ ಕಳ್ಳರು ಕಾಲ್ಕಿತ್ತಿದ್ದರು. ಪೊಲೀಸರು ಏರ್ ಫೈರ್ ಮಾಡಿದರೂ ಜಗ್ಗದೆ ತಪ್ಪಿಸಿಕೊಂಡಿದ್ದರು. ಚಳ್ಳಕೆರೆ ತಾಲ್ಲೂಕಿನ ಕುದಾಪುರ ಬಳಿ ಕಳ್ಳರನ್ನು ಹಿಡಿಯಲು ಪೊಲೀಸರು ಬೊಲೆರೋ ವಾಹನವನ್ನು ಅಡ್ಡ ಹಾಕಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಕಲ್ಲು ತೂರಿದ್ದರು. ಏಕಾಏಕಿ ಕಳ್ಳರು ದಾಳಿ ಮಾಡಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಏರ್ ಫೈರಿಂಗ್ ಮಾಡಿದ್ದರು.

ಇನ್ನೂ ಕಳ್ಳರು ಕಲ್ಲು ತೂರಿದ್ದರಿಂದ ಪೊಲೀಸರ ಜೀಪಿನ ಗ್ಲಾಸ್ ಡ್ಯಾಮೇಜ್ ಆಗಿತ್ತು. ಸುಮಾರು 7 ಮಂದಿ ಗ್ಯಾಂಗ್‌ ಆಂಧ್ರಪ್ರದೇಶದ ರಿಜಿಸ್ಟ್ರೇಷನ್‌ ಹೊಂದಿದ್ದ ಬೊಲೆರೋ ವಾಹನದಲ್ಲಿ ಬಂದಿದ್ದರು. ಇದನ್ನೂ ಗಮನಿಸಿದ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು, ತಡೆದು ಪರಿಶೀಲನೆಗೆ ಮುಂದಾಗಿದ್ದರು. ಈ ವೇಳೆ ಗಾಡಿ ನಿಲ್ಲಿಸದೇ ಖತರ್ನಾಕ್‌ ಕಳ್ಳರು, ಪೊಲೀಸರಿಗೆ ಕಲ್ಲು ತೂರಿದ್ದರು.

ದರೋಡೆಕೋರರು ಎಂಬ ಅನುಮಾನದಿಂದ ಪೊಲೀಸರು ಅಲರ್ಟ್ ಆಗಿದ್ದರು. ಬೊಸೇ ದೇವರಹಟ್ಟಿ, ಕೋಟೆ ನಗರ ಒಳ ಮಾರ್ಗದಲ್ಲಿ ಕುದಾಪುರ ಕಡೆ ಬರುತ್ತಿದ್ದ ಕಳ್ಳರಿಗೆ, ಪೊಲೀಸರು ಮನಮಯ್ಯನಹಟ್ಟಿ ಕುದಾಪುರ ಒಳ ಮಾರ್ಗದಲ್ಲಿ ಎದುರಾಗಿದ್ದರು. ನಾಯಕನಹಟ್ಟಿ ಠಾಣೆ ಪಿಎಸ್‌ಐ ಶಿವಕುಮಾರ್ ತಂಡ ಬೊಲೆರೋ ವಾಹನದಲ್ಲಿ ಬಂದಿದ್ದ ಕಳ್ಳರನ್ನು ಹಿಡಿಯಲು ಯತ್ನಿಸಿದ್ದರು. ಆದರೆ ಹಿರೇಹಳ್ಳಿ, ಬೇಡರೆಡ್ಡಿಹಳ್ಳಿ, ಬುಕ್ಕಂಬೂದಿ ಮಾರ್ಗದಲ್ಲಿ ಕಳ್ಳರು ಎಸ್ಕೇಪ್ ಆಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Murder case : ಎರಡು ವಾರಗಳ ಹಿಂದೆ ಮಹಿಳೆಯೊಬ್ಬರು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಅಡವಿಟ್ಟಿದ್ದ ಚಿನ್ನಾಭರಣವನ್ನು ಕೇಳಿದ್ದಕ್ಕೆ ಮಹಿಳೆ ಕೊಲೆಯಾಗಿದ್ದು, ಇದೀಗ ಕೊಲೆಗಾರನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Murder case
Koo

ಕಲಬುರಗಿ: ಕಲಬುರಗಿಯಲ್ಲಿ (Kalaburagi News) ಮಹಿಳೆಯೊಬ್ಬಳ ಕೊಲೆ (Murder case) ಮಾಡಿ ಶವ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ್ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ. ಕಲಬುರಗಿ ನಗರದ ರಾಜ್ ಕುಮಾರ್ ಬಂಧಿತ ಆರೋಪಿ ಆಗಿದ್ದಾನೆ.

ರಾಜ್‌ಕುಮಾರ್‌ ಊಟ ಕೊಡಿಸುವ ನೆಪದಲ್ಲಿ ಬಸ್ಸಮ್ಮ ಎಂಬಾಕೆಯನ್ನು ಕರೆದೊಯ್ದು ಕೊಲೆ ಮಾಡಿದ್ದ. ಕೊಲೆ ಬಳಿಕ ಪೆಟ್ರೋಲ್ ಹಾಕಿ ಸುಟ್ಟು ರಸ್ತೆ ಬದಿಯಲ್ಲಿ ಶವ ಹೂತಿಟ್ಟು ಎಸ್ಕೇಪ್ ಆಗಿದ್ದ. ಬಸ್ಸಮ್ಮ ಈ ರಾಜಕುಮಾರ್ ಬಳಿ ಚಿನ್ನಾಭರಣವನ್ನು ಅಡವಿಟ್ಟಿದ್ದಳು ಜತೆಗೆ ಹಣವನ್ನು ಕೊಟ್ಟಿದ್ದಳು. ಬಸ್ಸಮ್ಮ ಕೊಟ್ಟ ಚಿನ್ನವನ್ನು ರಾಜುಕುಮಾರ್‌ ಮತ್ತೊಬ್ಬರ ಬಳಿ ಅಡವಿಟ್ಟಿದ್ದ. ಕೆಲ ದಿನಗಳ ಬಳಿಕ ಬಸ್ಸಮ್ಮ, ರಾಜಕುಮಾರ್‌ಗೆ ಚಿನ್ನಾಭರಣ ಹಾಗೂ ಹಣವನ್ನು ನೀಡುವಂತೆ ಕೇಳಿದ್ದಳು.

ಆದರೆ ಬೇರೊಬ್ಬರ ಬಳಿ ಚಿನ್ನ ಅಡವಿಟ್ಟ ಕಾರಣಕ್ಕೆ ರಾಜಕುಮಾರ್‌, ಬಸ್ಸಮ್ಮಳನ್ನು ಕೊಂದು ಮುಗಿಸಲು ಸ್ಕೆಚ್‌ ಹಾಕಿದ್ದ. ಅದರಂತೆ ಜುಲೈ 14 ರಂದು ಮಾರ್ಕೆಟ್‌ನಿಂದ ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಗುರುತು ಸಿಗದಂತೆ ಸುಟ್ಟು ಹಾಕಿ ಎಸ್ಕೇಪ್ ಆಗಿದ್ದ.

ಜಮೀನಿನಲ್ಲಿ ಪತ್ತೆಯಾಗಿದ್ದ ಶವ

ಕಲಬುರಗಿಯ (Kalaburagi News) ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಸುಟ್ಟಸ್ಥಿತಿಯಲ್ಲಿ ಮಹಿಳೆಯ ಶವ (Dead Body Found) ಪತ್ತೆಯಾಗಿತ್ತು. ಮಹಿಳೆ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಗುರುತು ಸಿಗಬಾರದೆಂದು ಸುಟ್ಟು ಹಾಕಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಎಸ್ಪಿ ಅಡ್ಡೂರು ‌ಶ್ರೀನಿವಾಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಹಾಗಾವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಚಿನ್ನಾಭರಣ ಹಾಗೂ ಹಣಕಾಸು ವಿಷ್ಯಕ್ಕೆ ಹತ್ಯೆ ನಡೆದಿರುವುದು ಗೊತ್ತಾಗಿದೆ. ಮಹಾಗಾವ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

ಪೊಲೀಸ್‌ ಮನೆಯಲ್ಲಿ ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್‌

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

Theft case : ರಾತ್ರೋರಾತ್ರಿ ಪೊಲೀಸ್‌ವೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದಿದ್ದಾರೆ. ಕಳ್ಳರು ಇರುವಾಗಲೇ ಮನೆ ಮಾಲೀಕರು ಬಂದಾಗ ಚಾಕು ಚೂರಿ ತೋರಿಸಿ ಕಾಲ್ಕಿತ್ತಿದ್ದಾರೆ.

VISTARANEWS.COM


on

By

theft case
Koo

ಮೈಸೂರು: ತಡರಾತ್ರಿ ಮನೆ ಬೀಗ ಮುರಿದ ಕಳ್ಳರು (theft Case) ತಮ್ಮ ಕೈ ಚಳಕ ತೋರಿಸಿದ್ದಾರೆ. ಮೈಸೂರಿನ ಜೆ.ಪಿ ನಗರದ ಎರಡನೇ ಹಂತದಲ್ಲಿ ಘಟನೆ ನಡೆದಿದೆ. ಪೊಲೀಸರ ಮನೆಗೆ ನುಗ್ಗಿದ ಕಳ್ಳರು ಸಿನಿಮೀಯ ರೀತಿಯಲ್ಲಿ ಕದಿಯಲು ಮುಂದಾಗಿದ್ದರು. ಆದರೆ ಅವರ ಟೈಂ ಕೈಕೊಟ್ಟಿತ್ತು ಕಳ್ಳರು ಮನೆಯಲ್ಲಿರುವಾಗಲೇ ಮಾಲೀಕರು ಮನೆಗೆ ವಾಪಸ್‌ ಆಗಿದ್ದರು.

ಮನೆ ಮಾಲೀಕರನ್ನು ಕಂಡು ಗಾಬರಿಗೊಂಡ ಕಳ್ಳರು ಮಾರಾಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆ ಮಂದಿಗೆಲ್ಲ ಚಾಕು ತೋರಿಸಿ ಎಸ್ಕೇಪ್ ಆಗಿದ್ದಾರೆ. ಎಸ್ಕೇಪ್ ಆಗುವ ವೇಳೆ ಕಳ್ಳತನಕ್ಕೆ ಬಳಸಿದ್ದ ಕಬ್ಬಿಣದ ರಾಡ್, ಸಲಾಕೆ ,ಎಲೆಕ್ಟ್ರಿಕ್ ಸಾಮಾನು, ಎರಡು ಬ್ಯಾಗ್ ಸೇರಿದಂತೆ ತಮ್ಮ ಲಗೇಜ್‌ಗಳನ್ನು ಬಿಟ್ಟು ಓಡಿಹೋಗಿದ್ದಾರೆ.

ಕಳ್ಳರು ಓಡಿ ಹೋದ ಬಳಿಕ ಮನೆಯೊಳಗೆ ತೆರಳಿ ನೋಡಿದಾಗ 135 ಗ್ರಾಂಗೂ ಅಧಿಕ ಚಿನ್ನಾಭರಣ ದೋಚಿರುವುದು ಖಚಿತವಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡಸಿದ್ದಾರೆ. ಕಳ್ಳರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

ಚಳ್ಳಕೆರೆ ಪೊಲೀಸರ ವಿರುದ್ಧವೇ ದೂರು ಕೊಟ್ಟ ಯುವಕ

ಯುವಕನೊಬ್ಬ ಚಳ್ಳಕೆರೆ ಪೊಲೀಸರ ವಿರುದ್ಧ ದೂರು ಕೊಟ್ಟಿದ್ದಾನೆ. ಚಿತ್ರದುರ್ಗದ ಚಳ್ಳಕೆರೆ ಡಿವೈಎಸ್‌ಪಿ ರಾಜಣ್ಣ ಅವರಿಗೆ ಪೃಥ್ವಿ ಎಂಬಾತ ದೂರು ನೀಡಿದ್ದಾನೆ. ದೂರಿನ ಪ್ರಕಾರ ಪೃಥ್ವಿ ಪ್ರವಾಸಕೆಂದು ಹೋದಾಗ ಆತನ ಫೋನ್‌ ಸ್ವಿಚ್ಡ್‌ ಆಫ್‌ ಆಗಿತ್ತು. ಇದರಿಂದ ಗಾಬರಿಗೊಂಡ ಪೃಥ್ವಿ ತಾಯಿಈ ಸಂಬಂಧ ದೂರು ನೀಡಲು ಹೋದಾಗ ಚಳ್ಳೇಕರೆ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳಿಸಿದ್ದಾರೆ.

ಇತ್ತ ಪೃಥ್ವಿ ಪ್ರವಾಸದಿಂದ ವಾಪಸ್‌ ಬಂದಾಗ ಠಾಣೆಯಲ್ಲಿ ನಡೆದದ್ದನ್ನು ಹೇಳಿದ್ದಾರೆ. ಹೀಗಾಗಿ ಪೃಥ್ವಿ ತನ್ನ ತಾಯಿ ಜತೆಗೆ ವಾಪಸ್‌ ಚಳ್ಳಕೆರೆ ಠಾಣೆಗೆ ತೆರಳಿ, ದೂರು ಸ್ವೀಕರಿಸದ ಸಂಬಂಧ ಪ್ರಶ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಪೃಥ್ವಿ ಮೇಲೆ ಹಲ್ಲೆ ನಡೆಸಿದ್ದಲ್ಲದೇ ತಾಯಿ ಮುಂದೆಯೇ ಅವಾಚ್ಯವಾಗಿ ನಿಂದಿಸಿದ್ದಾರೆ. ಪೊಲೀಸರ ನಡೆಯನ್ನು ರೆಕಾರ್ಡ್‌ ಮಾಡಿಕೊಂಡಿದ್ದಕ್ಕೆ ಮೊಬೈಲ್ ಕಸಿದು, ವಿಡಿಯೋ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಹಲ್ಲೆ ಮಾಡಿದ್ದಲ್ಲದೇ ಮೊಬೈಲ್‌ ಕಸಿದು ಸಾಕ್ಷ್ಯವನ್ನು ನಾಶ ಮಾಡಿದವರ‌ ಮೇಲೆ‌ ಕ್ರಮ ಕೈಗೊಳ್ಳಿ ಎಂದು ಡಿವೈಎಸ್‌ಪಿ ಪೃಥ್ವಿ ದೂರು ನೀಡಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Sexual Harassment : ರಿಕ್ಷಾದಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಚಾಲಕ

Sexual Harassment: ವಿದ್ಯಾರ್ಥಿಯೊಬ್ಬ ಸ್ವೀಮಿಂಗ್ ಕ್ಲಾಸ್‌ಗೆ ಮುಗಿಸಿ ರಾತ್ರಿ 9.45ರ ಸುಮಾರಿಗೆ ಆಟೋರಿಕ್ಷಾದಲ್ಲಿ ಒಬ್ಬಂಟಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ, ಆಟೋ ಚಾಲಕ ವಿಟಾವಾ ಪೆಟ್ರೋಲ್ ಪಂಪ್ ಬಳಿ ವಾಹನವನ್ನು ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅವನ ಈ ದುಷ್ಕೃತ್ಯ ಹುಡುಗನಿಗೆ ಆಘಾತವನ್ನುಂಟುಮಾಡಿದೆ. ನಂತರ ಅವನು ಅದರ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ್ದಾನೆ. ನಂತರ ಅವರೆಲ್ಲರೂ ಪೊಲೀಸರನ್ನು ಸಂಪರ್ಕಿಸಿ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ.

VISTARANEWS.COM


on

Sexual Harassment
Koo


ಮುಂಬೈ: ಯುವತಿಯರು, ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣಗಳು ಕೇಳಿಬರುತ್ತಿತ್ತು. ಕಾಮುಕರು ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳಲು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಆದರೆ ಈಗ ಅವರು ಬಾಲಕರ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ 13 ವರ್ಷದ ಅಪ್ರಾಪ್ತ ಬಾಲಕನೊಬ್ಬನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ (Sexual Harassment )ನೀಡಿದ ಘಟನೆ ಮಹಾರಾಷ್ಟ್ರದ ನವೀ ಮುಂಬೈನಲ್ಲಿ ನಡೆದಿದೆ. ಆತನ ವಿರುದ್ಧ ಮಹಾರಾಷ್ಟ್ರದ ನವೀ ಮುಂಬೈನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಂಬೈನ ಮುಲುಂಡ್ ನಲ್ಲಿ ವಾಸಿಸುವ 9 ನೇ ತರಗತಿ ವಿದ್ಯಾರ್ಥಿ ತನ್ನ ಸ್ವೀಮಿಂಗ್ ಕ್ಲಾಸ್‍ಗೆ ಹಾಜರಾಗಲು ಕಲ್ವಾಗೆ ಭೇಟಿ ನೀಡಿದ್ದನು. ನಂತರ ರಾತ್ರಿ 9.45 ರ ಸುಮಾರಿಗೆ ಆಟೋರಿಕ್ಷಾದಲ್ಲಿ ಒಬ್ಬಂಟಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ, ಆಟೋ ಚಾಲಕ ವಿಟಾವಾ ಪೆಟ್ರೋಲ್ ಪಂಪ್ ಬಳಿ ವಾಹನವನ್ನು ನಿಲ್ಲಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅವನ ಈ ದುಷ್ಕೃತ್ಯ ಹುಡುಗನಿಗೆ ಆಘಾತವನ್ನುಂಟುಮಾಡಿದೆ. ನಂತರ ಅವನು ಅದರ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ್ದಾನೆ. ನಂತರ ಅವರೆಲ್ಲರೂ ಪೊಲೀಸರನ್ನು ಸಂಪರ್ಕಿಸಿ ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ನವೀ ಮುಂಬೈನ ಪೊಲೀಸರು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದು, ಚಾಲಕನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಹಿಂದೆ ಈ ವರ್ಷದ ಜೂನ್ ತಿಂಗಳ ಕೊನೆಯಲ್ಲಿ 25 ವರ್ಷದ ರಿಕ್ಷಾ ಚಾಲಕ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಆರೋಪಿಯನ್ನು ಕಂಡಿವಲಿ (ಪೂರ್ವ) ನಿವಾಸಿ ರೋಹಿತ್ ಭೋಸಲೆ (25) ಎಂದು ಗುರುತಿಸಲಾಗಿದೆ. ಪೊಲೀಸ್ ದೂರಿನ ಪ್ರಕಾರ, ದೂರುದಾರ ಬಾಲಕಿ ಶುಕ್ರವಾರ ಮಧ್ಯಾಹ್ನ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಆರೋಪಿ ಆಟೋ ಚಾಲಕ ತನ್ನ ವಾಹನವನ್ನು ಆಕೆಯ ಹತ್ತಿರದಿಂದ ಓಡಿಸಿ, ಹುಡುಗಿಯನ್ನು ತಳ್ಳಿದ್ದಾನೆ.

ಇದನ್ನೂ ಓದಿ: ಕೈದಿಗೆ ಕೈಕೋಳ ಹಾಕಿ ತಾಜ್ ಮಹಲ್‌ ತೋರಿಸಲು ಹೋಗಿದ್ದ ಪೊಲೀಸರು! ವಿಡಿಯೊ ನೋಡಿ

ಅಲ್ಲದೇ ಖಾಂಡಿವಲಿ ಪೂರ್ವದ ಎವರ್ ಶೈನ್ ಕ್ರೌನ್ ಕಟ್ಟಡದ ಮುಂದೆ ಆತ ತನ್ನ ರಿಕ್ಷಾವನ್ನು ಸಂತ್ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಆಕೆಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಾಗಾಗಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Sugar Vs Jaggery In Tea
ಆರೋಗ್ಯ19 mins ago

Sugar Vs Jaggery In Tea: ಸಕ್ಕರೆ ಬದಲು ಬೆಲ್ಲ ಹಾಕಿ ಚಹಾ ಕುಡಿದರೆ ಆರೋಗ್ಯಕ್ಕೆ ನಿಜಕ್ಕೂ ಲಾಭ ಇದೆಯೆ?

Manu Bhaker
ಪ್ರಮುಖ ಸುದ್ದಿ29 mins ago

Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

theft case
ಚಿತ್ರದುರ್ಗ36 mins ago

Theft Case : ಹಂದಿ ಕಳವು ವೇಳೆ ಪೊಲೀಸರಿಗೆ ಕಲ್ಲು ತೂರಿ ಎಸ್ಕೇಪ್‌ ಆಗಿದ್ದ ಆಂಧ್ರ ಗ್ಯಾಂಗ್‌ನ ಸದಸ್ಯ ಅರೆಸ್ಟ್‌

Paris Olympics boxing
ಕ್ರೀಡೆ47 mins ago

Paris Olympics Boxing: 16ರ ಸುತ್ತಿಗೇರಿದ​ ಬಾಕ್ಸರ್​​ ನಿಖತ್ ಜರೀನ್; ಮುಂದಿನ ಪಂದ್ಯದಲ್ಲಿ ಕಠಿಣ ಸವಾಲು

Unveiling of IPT 12 Cricket Trophy, Jersey by N1 Cricket Academy
ಕ್ರಿಕೆಟ್58 mins ago

IPT 12: ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ʻIPT 12ʼ ಕ್ರಿಕೆಟ್ ಟ್ರೋಫಿ, ಜೆರ್ಸಿ ಅನಾವರಣ

Bengaluru South District
ಕರ್ನಾಟಕ1 hour ago

Bengaluru South District: ರಾಮನಗರ ಮರು ನಾಮಕರಣಕ್ಕೆ ಹಿಂದು ಜನಜಾಗೃತಿ ಸಮಿತಿ ತೀವ್ರ ವಿರೋಧ; ಉಗ್ರ ಪ್ರತಿಭಟನೆ ಎಚ್ಚರಿಕೆ

ಪ್ರಮುಖ ಸುದ್ದಿ1 hour ago

UPSC Coaching : ನೈತಿಕತೆಯ ಪಾಲನೆ ವಿಚಾರದಲ್ಲಿ ಶ್ರೀರಾಮನಿಗಿಂತ ಅಕ್ಬರನೇ ಶ್ರೇಷ್ಠ ಎಂದ ಯುಪಿಎಸ್​ಸಿ ಬೋಧಕಿ ಶುಭ್ರಾ ರಂಜನ್; ಕೇಸ್​ ದಾಖಲಾದ ಬಳಿಕ ಕ್ಷಮೆ ಕೋರಿಕೆ

Murder case
ಕಲಬುರಗಿ1 hour ago

Murder case : ಊಟ ಕೊಡಿಸುವ ನೆಪದಲ್ಲಿ ಕರೆದೊಯ್ದು ಮಹಿಳೆಯನ್ನು ಕೊಂದು, ಸುಟ್ಟು ಹಾಕಿದ ಕಿರಾತಕ

Dengue In Pregnancy
ಆರೋಗ್ಯ1 hour ago

Dengue In Pregnancy: ಗರ್ಭಿಣಿಯರಿಗೆ ಡೆಂಗ್ಯೂ ಜ್ವರ ಬಂದರೆ ಡೇಂಜರ್! ಈ ಸಂಗತಿ ತಿಳಿದಿರಲಿ…

Urvashi Rautela Reacts to Her 'Leaked' Bathroom Video That Went Viral: 'I Was Upset...'
ಬಾಲಿವುಡ್2 hours ago

Urvashi Rautela:  ಸ್ನಾನದ ವಿಡಿಯೊ ಲೀಕ್​ ಆಗಿದ್ದು ಹೌದು ಎಂದ  ಊರ್ವಶಿ ರೌಟೇಲಾ; ಆದರೆ….

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack
ಮಳೆ2 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ5 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ23 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

ಟ್ರೆಂಡಿಂಗ್‌