NEET-UG Row: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೊಸ ಕಾನೂನು; ತಪ್ಪಿತಸ್ಥರಿಗೆ ಶಿಕ್ಷೆ, ದಂಡ ಪ್ರಮಾಣ ಎಷ್ಟು ಗೊತ್ತಾ? - Vistara News

ದೇಶ

NEET-UG Row: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಹೊಸ ಕಾನೂನು; ತಪ್ಪಿತಸ್ಥರಿಗೆ ಶಿಕ್ಷೆ, ದಂಡ ಪ್ರಮಾಣ ಎಷ್ಟು ಗೊತ್ತಾ?

NEET-UG Row:ಇನ್ನು ಈ ಕಾಯಿದೆ ಪ್ರಕಾರ, ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳು ಪೇಪರ್ ಸೋರಿಕೆ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದಿದ ಆರೋಪದಲ್ಲಿ ತಪ್ಪಿತಸ್ಥರು ಎಂದು ಸಾಬೀತಾದರೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ₹ 10 ಲಕ್ಷದವರೆಗಿನ ದಂಡದೊಂದಿಗೆ ಇದನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು. ಕಾಯಿದೆಯಡಿಯಲ್ಲಿರುವ ಎಲ್ಲಾ ಅಪರಾಧಗಳು ಜಾಮೀನು ರಹಿತವಾಗಿರುತ್ತದೆ

VISTARANEWS.COM


on

NEET-UG Row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹೊಸದಿಲ್ಲಿ : ವೈದ್ಯಕೀಯ ಪ್ರವೇಶ ಪರೀಕ್ಷೆಯ (NEET-UG 2024) ನಡಾವಳಿಯ ಅಕ್ರಮಗಳ ಕುರಿತು ಎದ್ದಿರುವ ಕೋಲಾಹಲದ (NEET-UG Row) ನಡುವೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ವಿರುದ್ಧ ಜಾರಿಗೊಂಡಿರುವ ಕಠಿಣ ಕಾನೂನು ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆ 2024 ಫೆಬ್ರುವರಿಯಲ್ಲಿ ಸಂಸತ್‌ನಲ್ಲಿ ಜಾರಿಗೊಂಡಿತ್ತು. ಇದೀಗ ಅದರ ಅನುಷ್ಠಾನದ ಬಗ್ಗೆ ಕೇಂದ್ರ ಚಿಂತನೆ ನಡೆಸುತ್ತಿದೆ. ನಿನ್ನೆ ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌(Dharmendra Pradhan) ಕಾನೂನು ಸಚಿವಾಲಯ ಈ ಬಗ್ಗೆ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.

ಕಾಯ್ದೆ ಹೇಳೋದೇನು?

ಇನ್ನು ಈ ಕಾಯಿದೆ ಪ್ರಕಾರ, ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳು ಪೇಪರ್ ಸೋರಿಕೆ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದಿದ ಆರೋಪದಲ್ಲಿ ತಪ್ಪಿತಸ್ಥರು ಎಂದು ಸಾಬೀತಾದರೆ ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ₹ 10 ಲಕ್ಷದವರೆಗಿನ ದಂಡದೊಂದಿಗೆ ಇದನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು. ಕಾಯಿದೆಯಡಿಯಲ್ಲಿರುವ ಎಲ್ಲಾ ಅಪರಾಧಗಳು ಜಾಮೀನು ರಹಿತವಾಗಿರುತ್ತದೆ

ಸಂಭವನೀಯ ಅಪರಾಧದ ಬಗ್ಗೆ ಮೊದಲೇ ತಿಳಿದಿದ್ದರೂ ಅದನ್ನು ವರದಿ ಮಾಡದ ಪರೀಕ್ಷಾ ಸೇವಾ ಪೂರೈಕೆದಾರರಿಗೆ ₹ 1 ಕೋಟಿ ವರೆಗೆ ದಂಡ ವಿಧಿಸಬಹುದು. ತನಿಖೆಯ ಸಮಯದಲ್ಲಿ, ಯಾವುದೇ ಹಿರಿಯ ಅಧಿಕಾರಿಗಳು ಅಪರಾಧವನ್ನು ಅನುಮತಿಸಿದ್ದಾರೆ ಅಥವಾ ತೊಡಗಿಸಿಕೊಂಡಿದ್ದಾರೆ ಎಂದು ದೃಢಪಟ್ಟರೆ, ಅವರು ಕನಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ, ಅದನ್ನು 10 ವರ್ಷಗಳವರೆಗೆ ವಿಸ್ತರಿಸಬಹುದಾಗಿದೆ. ಪರೀಕ್ಷಾ ಪ್ರಾಧಿಕಾರ ಅಥವಾ ಸೇವಾ ಪೂರೈಕೆದಾರರು ಸಂಘಟಿತ ಅಪರಾಧವನ್ನು ಎಸಗಿದರೆ, ಕನಿಷ್ಠ ಐದು ವರ್ಷದಿಂದ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವು ₹ 1 ಕೋಟಿ ದಂಡ ವಿಧಿಸಲಾಗುತ್ತದೆ. ಜುಲೈ 1 ರಿಂದ ಈ ಕಾನೂನುಗಳು ಜಾರಿಗೆ ಬರಲಿವೆ.

ಏನಿದು ಹಗರಣ?

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG Result 2024) ಅಕ್ರಮ ನಡೆದಿದೆ ಎಂದು ನೀಟ್ ಆಕಾಂಕ್ಷಿಗಳು ಒಂದೆಡೆ ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ನೀಟ್ ಯುಜಿ (NEET UG) ಪರೀಕ್ಷೆಯಲ್ಲಿ (exam) ಗ್ರೇಸ್ ಅಂಕಗಳನ್ನು (grace marks) ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ (retest) ನಡೆಸಲು ಕೇಂದ್ರ ಸರ್ಕಾರ (central govt) ಗುರುವಾರ ಪ್ರಸ್ತಾವನೆ ಸಲ್ಲಿಸಿದೆ. ನೀಟ್ ಫಲಿತಾಂಶ ಘೋಷಣೆಯಾದ ಬಳಿಕ ಆಕಾಂಕ್ಷಿಗಳು ಮತ್ತು ಪೋಷಕರು ಕೆಲವು ಕೇಂದ್ರಗಳಲ್ಲಿ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ತನಿಖೆ ಮತ್ತು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.

ನೀಟ್- ಯುಜಿ ಅನ್ನು ಮೊದಲು ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (AIPMT) ಎಂದು ಕರೆಯಲಾಗುತ್ತಿತ್ತು. ಇದು ದೇಶದಾದ್ಯಂತ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನಡೆಯುವ ಏಕೈಕ ಪ್ರವೇಶ ಪರೀಕ್ಷೆಯಾಗಿದೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸುವ ಉಸ್ತುವಾರಿ ವಹಿಸಿಕೊಂಡಿದೆ. ಈ ಹಿಂದೆ ಸೆಂಟ್ರಲ್ ಬೋರ್ಡ್ ಆಫ್ ಸ್ಕೂಲ್ ಎಜುಕೇಶನ್ (CBSE) ಇದನ್ನು ನಡೆಸುತ್ತಿತ್ತು.

ನೀಟ್ ಯುಜಿ ಫಲಿತಾಂಶಗಳ ಸುತ್ತ ವಿವಾದ

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರಿಪೂರ್ಣ ಅಂಕಗಳನ್ನು ಸಾಧಿಸಲು ಪ್ರಶ್ನೆ ಪತ್ರಿಕೆ ಸೋರಿಕೆಯೇ ಕಾರಣ ಎಂಬ ಆರೋಪಗಳೂ ಕೇಳಿ ಬಂದಿದೆ.

ನೀಟ್ ಯುಜಿ ಪರೀಕ್ಷೆ ಬರೆದ 67 ವಿದ್ಯಾರ್ಥಿಗಳು ಒಟ್ಟು 720 ಅಂಕಗಳನ್ನು ಗಳಿಸಿದ್ದಾರೆ ಎಂಬುದು ಫಲಿತಾಂಶ ತೋರಿಸಿವೆ. ಇದು ಹಿಂದಿನ ವರ್ಷಗಳ ಫಲಿತಾಂಶಗಳಿಗೆ ಹೋಲಿಸಿದರೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪೂರ್ಣ ಅಂಕ ಗಳಿಸಿದ್ದರೆ, 2022ರಲ್ಲಿ ಮೂವರು, 2021ರಲ್ಲಿ ಇಬ್ಬರು, 2020ರಲ್ಲಿ ಒಬ್ಬರು ಮಾತ್ರ ಪೂರ್ಣ ಅಂಕ ಗಳಿಸಿದ್ದರು. ಈ ಬಾರಿ ಹರ್ಯಾಣದ ಒಂದೇ ಕೇಂದ್ರದಲ್ಲಿ ಆರು ಮಂದಿ ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಇದು ಸಂಶಯಕ್ಕೆ ಆಸ್ಪದ ಮಾಡಿ ಕೊಟ್ಟಿದೆ.

ಇದನ್ನೂ ಓದಿ:Atal Setu: 17 ಸಾವಿರ ಕೋಟಿ ರೂ. ವೆಚ್ಚದ ಅಟಲ್‌ ಸೇತುಗೆ ಚಾಲನೆ ಸಿಕ್ಕ ಐದೇ ತಿಂಗಳಲ್ಲಿ ಬಿರುಕು; ಭಾರಿ ಭ್ರಷ್ಟಾಚಾರ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

VISTARANEWS.COM


on

ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು ಪ್ರವಾಸದ ವೇಳೆ ಭಾರಿ ಭದ್ರತಾ ಲೋಪ ಬೆಳಕಿಗೆ ಬಂದಿದೆ. ರವಿಶಂಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಧ್ಯಾನ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಿದ್ದರು. ಎಚ್‌ಎಎಲ್‌ ನಿಂದ ಕನಕಪುರ ರಸ್ತೆಯ ರವಿಶಂಕರ ಗುರೂಜಿ ಆಶ್ರಮಕ್ಕೆ ಮೋದಿ ತೆರಳಿದ್ದರು. ಇದೇ ವೇಳೆ ಕಗ್ಗಲೀಪುರ ಸಮೀಪದ ತಾತಗುಣಿ ಬಳಿ ಜಿಲೆಟಿನ್‌ ಕಡ್ಡಿಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೋದಿ ತೆರಳುವ ಮಾರ್ಗದಿಂದ 50 ಮೀಟರ್‌ ದೂರದಲ್ಲಿ ಈ ಜಿಲೆಟಿನ್‌ ಕಡ್ಡಿಗಳು ಸಿಕ್ಕಿವೆ. ಮೋದಿ ಆಗಮನದ ವೇಳೆ ಭಾರಿ ಅವಘಡಕ್ಕೆ ಸಂಚು ರೂಪಿಸಲಾಗಿತ್ತೇ ಎಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಈಗಾಗಲೇ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿಗಳು ಎಲ್ಲಿಂದ ಬಂದವು?, ಪ್ರಧಾನಮಂತ್ರಿ ಪ್ರಯಾಣಿಸುವ ಮಾರ್ಗದಲ್ಲಿ ಸ್ಫೋಟಿಸಲು ಇಡಲಾಗಿತ್ತೇ? ಘಟನೆ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಕೋರಮಂಗಲ ಠಾಣೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ವಿವಿಧ ಪ್ರದೇಶಗಳಲ್ಲಿ ಸ್ಫೋಟದ ಬೆದರಿಕೆ ನೀಡಿದ್ದಾರೆ. ಜೊತೆಗೆ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟ ಮಾಡುವುದಾಗಿ ಎಚ್ಚರಿಕೆ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕರೆ ಬಂದ ತಕ್ಷಣವೇ ಪೊಲೀಸರು ಕಾರ್ಯಪ್ರವೃತ್ತರಾಗಿ ಆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. HAL ಪ್ರದೇಶದಲ್ಲಿ ನಡೆಸಿದ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ತನಿಖೆಯ ವೇಳೆ ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

Latest

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಪದಗ್ರಹಣದ ಬಳಿಕ ತಮ್ಮ ಮೊದಲ ಭಾಷಣದಲ್ಲಿ ಜನತೆಗೆ ತಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಸ್ಪಷ್ಟಪಡಿಸಿದರು.

“ನಾನು ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ. ತಮಿಳುನಾಡಿನ 8 ಕೋಟಿ ಜನರೂ ನನ್ನವರೇ. ನಾನು ನಿಮ್ಮಲ್ಲೊಬ್ಬ., ನಿಮ್ಮ ಕುಟುಂಬದ ಸದಸ್ಯ, ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ” ಎಂದು ವಿಜಯ್‌ ಹೇಳಿದರು.

“ಇಲ್ಲಿರುವುದು ಒಂದೇ ಪವರ್‌ ಸೆಂಟರ್‌. ಆ ಕಡೆ ಒಂದು, ಈ ಕಡೆ ಒಂದು ಪವರ್‌ ಸೆಂಟರ್‌ ಇಲ್ಲ. ತಮಿಳುನಾಡಿನಲ್ಲಿ ಹೊಸ ಯುಗಾರಂಭ ಆಗಿದೆ” ಎಂದು ಅವರು ಘೋಷಿಸಿದರು.

ಹಿಂದೂ, ಕ್ರೈಸ್ತ ಹಾಗೂ ಮುಸ್ಲಿಂ ಸೇರಿದಂತೆ ಎಲ್ಲ ಧರ್ಮಗಳ ಜನರ ಹಿತ ಕಾಪಾಡುವುದಾಗಿ ಹೇಳಿದ ವಿಜಯ್‌, “ನಿಜವಾದ ಜಾತ್ಯಾತೀತ ಹಾಗೂ ಸಮಾಜವಾದಿ ಆಡಳಿತ ಆರಂಭವಾಗಿದೆ” ಎಂದು ತಿಳಿಸಿದರು.

ತಮ್ಮ ಸರ್ಕಾರ ರಚನೆಗೆ ಬೆಂಬಲ ನೀಡಿದ ಕಾಂಗ್ರೆಸ್‌, ವಿಸಿಕೆ ಹಾಗೂ ಎಡಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ವಿಜಯ್‌, “ನನ್ನ ಸಹೋದರ ರಾಹುಲ್‌ ಗಾಂಧಿಗೆ ವಿಶೇಷ ಧನ್ಯವಾದ” ಎಂದರು.

“ನನ್ನ ಜನರ ಹಣ ಲೂಟಿ ಮಾಡಲು ನಾನು ಬಿಡುವುದಿಲ್ಲ” ಎಂದು ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತಾಳುವುದಾಗಿ ಸಿಎಂ ವಿಜಯ್‌ ಸ್ಪಷ್ಟಪಡಿಸಿದರು.

Continue Reading

Latest

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

VISTARANEWS.COM


on

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್‌ ವಿಜಯ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಚೆನ್ನೈನ ನೆಹರೂ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇವರ ಹೆಸರಿನಲ್ಲಿ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.

ಟಿವಿಕೆ ಪಕ್ಷ ಕಾಂಗ್ರೆಸ್‌, ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿದೆ. ಸಚಿವ ಸಂಪುಟದಲ್ಲಿ ಎನ್‌. ಆನಂದ್‌, ಆಥವ್‌ ಅರ್ಜುನ್‌, ಡಾ. ಅರುಣ್‌ ರಾಜ್‌, ಕೆ.ಎ. ಸೆಂಗೋಟ್ಟಿಯ್ಯನ್‌, ಪಿ. ವೆಂಕಟರಮಣನ್‌, ಆರ್‌. ನಿರ್ಮಲ್‌ ಕುಮಾರ್‌, ಎ.ರಾಜ್‌ ಮೋಹನ್‌, ಟಿ.ಕೆ. ಪ್ರಭು, ಸೆಲ್ವಿ ಎಸ್‌. ಕೀರ್ತನಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಚಿತ್ರನಟಿ ತ್ರಿಶಾ, ವಿಜಯ್‌ ತಂದೆತಾಯಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ವಿಜಯ್‌ ಪದಗ್ರಹಣ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು.

Continue Reading

ಪ್ರಮುಖ ಸುದ್ದಿ

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

VISTARANEWS.COM


on

ವಿಜಯ್ ನೇತೃತ್ವದ ಟಿವಿಕೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್‌, ತಮಗೆ ಒಟ್ಟು 120 ಶಾಸಕರ ಬೆಂಬಲವಿರುವುದಾಗಿ ತಿಳಿಸಿದ್ದಾರೆ.

ಟಿವಿಕೆ ಮೈತ್ರಿಗೆ ದೊರೆತ ಶಾಸಕರ ಬೆಂಬಲ ಹೀಗಿದೆ:

  • ಟಿವಿಕೆ – 107
  • ಕಾಂಗ್ರೆಸ್‌ – 5
  • ಸಿಪಿಐ – 2
  • ಸಿಪಿಎಂ – 2
  • ವಿಸಿಕೆ – 2
  • ಐಯುಎಂಎಲ್‌ – 2

ಒಟ್ಟು 120 ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಟಿವಿಕೆ ಮುಂದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ನಾಲ್ಕನೇ ಬಾರಿಗೆ ವಿಜಯ್‌ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನಾಳೆ ಭಾನುವಾರ ಮಧ್ಯಾಹ್ನ 3 ಗಂಟೆಗೆ ವಿಜಯ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಚೆನ್ನೈ ನ ನೆಹರೂ ಮೈದಾನದಲ್ಲಿ ವಿಜಯ್‌ ಪದಗ್ರಹಣ ನಡೆಯುವ ನಿರೀಕ್ಷೆಯಿದೆ.

ಟಿವಿಕೆ ಬೆಂಬಲಿಗರಲ್ಲಿ ಈಗಾಗಲೇ ಸಂಭ್ರಮ ಮನೆಮಾಡಿದ್ದು, ಸಿಎಂ ಆಗಿ ವಿಜಯ್‌ ಪದಗ್ರಹಣದೊಂದಿಗೆ ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.

Continue Reading
Advertisement
Latest8 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ10 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest11 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest12 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ1 day ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest1 day ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest1 day ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌