Viral Video: ಗೆಲುವಿನ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಭಿನ್ನ ಸಂಭ್ರಮಾಚರಣೆ ಮಾಡಿದ ದಕ್ಷಿಣ ಆಫ್ರಿಕಾ ಆಟಗಾರರು - Vistara News

ಕ್ರೀಡೆ

Viral Video: ಗೆಲುವಿನ ಬಳಿಕ ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಭಿನ್ನ ಸಂಭ್ರಮಾಚರಣೆ ಮಾಡಿದ ದಕ್ಷಿಣ ಆಫ್ರಿಕಾ ಆಟಗಾರರು

Viral Video:ಚೇಸಿಂಗ್​ ವೇಳೆ ಇಂಗ್ಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ 53(37 ಎಸೆತ) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ 33(17 ಎಸೆತ) ಬಾರಿಸಿದರೂ ಕೂಡ ಇವರಿಂದ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗ್ರಾಸ್‌ ಐಲೆಟ್‌: ಶುಕ್ರವಾರ ರಾತ್ರಿ ನಡೆದ ಇಂಗ್ಲೆಂಡ್‌ ಎದುರಿನ ಸೂಪರ್‌-8(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್ ಬಾಗಿಲಿಗೆ ಬಂದು ನಿಂತಿದೆ. ಪಂದ್ಯದ ಗೆಲುವಿನ ಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಾಚರಣೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

‘ಬಿ’ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಆರಂಭಕಾರ ಕ್ವಿಂಟನ್‌ ಡಿ ಕಾಕ್‌ ಅವರ ಅರ್ಧಶತಕದ ನೆರವಿನಿಂದ 6 ವಿಕೆಟಿಗೆ 163 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಉತ್ತಮ ಆರಂಭ ಪಡೆದರೂ ಅಂತಿಮ ಹಂತದಲ್ಲಿ ಎಡವಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಚೇಸಿಂಗ್​ ವೇಳೆ ಇಂಗ್ಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ 53(37 ಎಸೆತ) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್ 33(17 ಎಸೆತ) ಬಾರಿಸಿದರೂ ಕೂಡ ಇವರಿಂದ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಕಳೆದ ವಿಂಡೀಸ್​ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿದ್ದ ಆರಂಭಿಕ ಆಟಗಾರ ಫಿಲ್​ ಸಾಲ್ಟ್(11) ಮತ್ತು ಜಾನಿ ಬೇರ್​ಸ್ಟೊ(16) ಈ ಪಂದ್ಯದಲ್ಲಿ ವಿಫಲರಾದರು. ಇದು ತಂಡಕ್ಕೆ ಹಿನ್ನಡೆಯಾಯಿತು.

ಪಂದ್ಯದ ತಿರುವು


ಅಂತಿಮ ಓವರ್​ನಲ್ಲಿ ಇಂಗ್ಲೆಂಡ್​ ಗೆಲುವಿಗೆ 14 ರನ್​ ಬೇಕಿತ್ತು. ಅರ್ಧಶತಕ ಬಾರಿಸಿದ್ದ ಹ್ಯಾರಿ ಬ್ರೂಕ್ ಕ್ರೀಸ್​ನಲ್ಲಿದ್ದರು. ಹೀಗಾಗಿ ಇಂಗ್ಲೆಂಡ್​ಗೆ ಗೆಲುವಿನ ಅವಕಾಶ ಅಧಿಕವಾಗಿತ್ತು. ಅನ್ರಿಚ್​ ನೋರ್ಜೆ ಎಸೆದ ಈ ಓವರ್​ನ ಮೊದಲ ಎಸೆತದಲ್ಲೇ ಬ್ರೂಕ್ ಸ್ಟ್ರೈಟ್​ ಡೆಲಿವರಿ ಕಡೆ ಚೆಂಡನ್ನು ಬಾರಿಸಿದರು. ಗಾಳಿಯಲ್ಲಿದ್ದ ಚೆಂಡನ್ನು ಚಿರತೆ ವೇಗದಲ್ಲಿ ಹಿಮ್ಮುಖವಾಗಿ ಓಡಿ ಐಡೆನ್​ ಮಾರ್ಕ್ರಮ್​ ಸೂಪರ್​ ಮ್ಯಾನ್​ ರೀತಿಯಲ್ಲಿ ಕ್ಯಾಚ್​ ಹಿಡಿಯುವಲ್ಲಿ ಯಶಸ್ವಿಯಾದರು. ಇದು ಪಂದ್ಯಕ್ಕೆ ಮಹತ್ವದ ತಿರುವು ಕೊಟ್ಟಿತು. ಈ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಹರಿಣ ಪಡೆ ಮೇಲುಗೈ ಸಾಧಿಸಿತು. ಅಂತಿಮವಾಗಿ 7 ರನ್​ಗಳ ರೋಚಕ ಗೆಲುವು ಸಾಧಿಸಿತು.

ಇದನ್ನೂ ಓದಿ WI vs USA: ಹೋಪ್‌ ಬ್ಯಾಟಿಂಗ್​ ಆರ್ಭಟಕ್ಕೆ ತಲೆಬಾಗಿದ ಅಮೆರಿಕ; ವಿಂಡೀಸ್​ ಸೆಮಿ ಆಸೆ ಜೀವಂತ

ಈ ಗೆಲುವಿನ ಬಳಿಕ ದಕ್ಷಿಣ ಆಫ್ರಿಕಾ ಆಟಗಾರರು ಡ್ರೆಸ್ಸಿಂಗ್​ ರೂಮ್​ನಲ್ಲಿ ಕೊಂಚ ಅಗ್ರೆಸಿವ್​ ಆಗಿ ಸಂಭ್ರಮಾಚರಣೆ ನಡೆಸಿದರು. ಕಾಗಿಸೊ ರಬಾಡ ಎಸ್…ಎಸ್​​ ಎಂದು ಕಿರುಚುತ್ತಾ ಕೈಗಳನ್ನು ಟೇಬಲ್​ಗೆ ಬಡಿದರು. ಮಾರ್ಕೊ ಜಾನ್ಸೆನ್​ ಟೇಬಲ್​ಗೆ ತಮ್ಮ ಕ್ಯಾಪ್​ ಬಡಿದು ಸಂಭ್ರಮಿಸಿದರು. ಹೀಗೆ ಎಲ್ಲ ಆಟಗಾರರು ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಿದರು. ಈ ಬಾರಿ ತಂಡದ ಪ್ರದರ್ಶನ ಮತ್ತು ಲಕ್​ ನೋಡುವಾಗ ಕಪ್​ ಗೆದ್ದು ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024 : ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಮೊದಲ ದಿನ ಭಾರತದ ಷಟ್ಲರ್​ಗಳು ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ. ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್ ಹಾಗೂ ಡಬಲ್ಸ್​ ಜೋಡಿಯಾಗಿರು ಸಾತ್ವಿಕ್ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ತಮ್ಮ ಮೊಲದ ಪಂದ್ಯಗಳಲ್ಲಿ ಗೆಲುವು ಕಂಡಿದ್ದಾರೆ. ಇದೇ ವೇಳೆ ಟೇಬಲ್ ಟೆನಿಸ್​ನ ಪುರುಷರ ಸಿಂಗಲ್ಸ್​ನಲ್ಲಿ ಹರ್ಮೀತ್ ದೇಸಾಯಿ 64ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಜತೆಗೆ ಹಾಕಿ ತಂಡವೂ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿದೆ.

ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

ಬ್ಯಾಡ್ಮಿಂಟನ್​ ಸಿಂಗಲ್ಸ್ ನಲ್ಲಿ ಲಕ್ಷ್ಯ ಸೇನ್, ಗ್ವಾಟೆಮಾಲಾದ ಕೆವಿನ್ ಕಾರ್ಡನ್ ಅವರನ್ನು ನೇರ ಗೇಮ್‌ಗಳಿಂದ ಮಣಿಸಿದ್ದಾರೆ. 22ರ ಹರೆಯದ ಸೇನ್ 42 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಕಾರ್ಡನ್ ವಿರುದ್ಧ 21-8, 22-20 ಅಂತರದಲ್ಲಿ ಗೆದ್ದರು. ಅಂದ ಹಾಗೆ ಲಕ್ಷ್ಯಗೆ ಇದು ಮೊದಲ ಒಲಿಂಪಿಕ್ಸ್ ಪ್ರವೇಶ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ 2021ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಸೇನ್, ಜುಲೈ 29ರಂದು ತಮ್ಮ ಎರಡನೇ ಗುಂಪು ಹಂತದ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ವಿರುದ್ಧ ಆಡಲಿದ್ದಾರೆ.

ಡಬಲ್ಸ್​ನಲ್ಲಿ ಧಮಾಕ


ಡಬಲ್ಸ್​​ನಲ್ಲಿ ತಮ್ಮ ಮೊದಲ ಗುಂಪು ಹಂತದ ಪಂದ್ಯದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಗೆಲುವು ಕಂಡರು. ಈ ಮುಖಾಮುಖಿಯಲ್ಲಿ ಭಾರತದ ಜೋಡಿ 21-17, 21-14ರ ನೇರ ಗೇಮ್​ಗಳಿಂದ ಗೆದ್ದರು. ಅವರು ಆತಿಥೇಯ ಫ್ರಾನ್ಸ್​ ಜೋಡಿ ಲುಕಾಸ್ ಕಾರ್ವಿ ಮತ್ತು ರೊನಾನ್ ಲ್ಯಾಬರ್ ಅವರನ್ನು ಮಣಿಸಿದರು. ಸಾತ್ವಿಕ್-ಚಿರಾಗ್ ಮುಂದಿನ ಪಂದ್ಯದಲ್ಲಿ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ – ಮಾರ್ವಿನ್ ಸೀಡೆಲ್ ವಿರುದ್ಧ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

ಹರ್ಮಿತ್​ಗೆ ಶುಭ ಸುದ್ದಿ

ಭಾರತದ ಟೆನಿಸ್ ಆಟಗಾರ ಹರ್ಮೀತ್ ದೇಸಾಯಿ ತಮ್ಮ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಸಿಂಗಲ್ಸ್‌ನ ಪ್ರಾಥಮಿಕ ಮೊದಲ ಪಂದ್ಯದಲ್ಲಿ, ಜೋರ್ಡಾನ್‌ನ ಝೈದ್ ಅಬೋ ಯಮನ್‌ ಅವರನ್ನು 4-0 ಅಂತರದಿಂದ (11-7, 11-9, 11-5, 11-5) ಗೆದ್ದರು.

Continue Reading

ಪ್ರಮುಖ ಸುದ್ದಿ

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Paris Olympics 2024 : ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ ಶನಿವಾರ (ಜುಲೈ 27) ನಡೆದ ಗುಂಪು ‘ಬಿ’ ಆರಂಭಿಕ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಸಿಂಗ್ ಪಡೆ ಮೊದಲ ಕ್ವಾರ್ಟರ್​ನಲ್ಲಿ 0-1 ಅಂತರದ ಹಿನ್ನಡೆ ಎದುರಿಸಿದರೂ ಅಂತಿಮವಾಗಿ 3-2 ಅಂತರದಿಂದ ಗೆದ್ದುಕೊಂಡಿತು. ಮೊದಲ ಕ್ವಾರ್ಟರ್ನಲ್ಲಿ ಭಾರತ ತಂಡ ಹಿನ್ನಡೆ ಅನುಭವಿಸಿದರೂ, ಎರಡನೇ ಮತ್ತು ಮೂರನೇ ಕ್ವಾರ್ಟರ್​ನಲ್ಲಿ ಮನ್ದೀಪ್ ಸಿಂಗ್ ಮತ್ತು ವಿವೇಕ್ ಸಾಗರ್ ಪ್ರಸಾದ್ ಗಳಿಸಿದ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು.

ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

ಮುಂದಿನ ಪಂದ್ಯಗಳಲ್ಲಿ ಕಠಿಣ ಪರೀಕ್ಷೆಗಳನ್ನು ಎದುರಿಸಬೇಕಾಗಿರುವುದರಿಂದ ಪೂಲ್ ಬಿ ಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ನಿರ್ಣಾಯಕ ಗೆಲುವಾಗಿದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಅರ್ಜೆಂಟೀನಾ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಭಾರತ ‘ಪೂಲ್’ ನಲ್ಲಿ ಡ್ರಾ ಸಾಧಿಸಿದೆ. ಆರಂಭಿಕ ದಿನದ ಗೆಲುವಿನ ನಂತರ ಭಾರತವು ತಮ್ಮ ಪೂಲ್​ನಲ್ಲಿ ಎರಡನೇ ಸ್ಥಾನಕ್ಕೆ ಏರಿತು.

8ನೇ ನಿಮಿಷಕ್ಕೆ ಹಿನ್ನಡೆ

8ನೇ ನಿಮಿಷದ ಆರಂಭದಲ್ಲೇ ಭಾರತ 0-1ರ ಹಿನ್ನಡೆ ಅನುಭವಿಸಿತ್ತು. ಗ್ರೇಗ್ ಫುಲ್ಟನ್ ಅವರ ನೇತೃತ್ವದ ನ್ಯೂಜಿಲ್ಯಾಂಡ್​ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ಅವರು ಗೋಲ್ ಪೋಸ್ಟ್​​ ಮುಂದೆ ಸ್ಥಿರತೆ ತೋರಲಿಲ್ಲ. ಅಭಿಷೇಕ್ ಭಾರತಕ್ಕೆ ಆರಂಭಿಕ ಮುನ್ನಡೆ ತರು ಭರವಸೆ ಕೊಟ್ಟರೂ ನ್ಯೂಜಿಲೆಂಡ್​ ಅನುಭವಿ ಗೋಲ್​ಕೀಪರ್​ ಡೊಮಿನಿಕ್ ಡಿಕ್ಸನ್ ತಡೆದರು. ಮೊದಲ ಕ್ವಾರ್ಟರ್​ನಲ್ಲಿ ಗುರ್ಜಂತ್ ಸಿಂಗ್​​ಗೆ ಗ್ರೀನ್ ಕಾರ್ಡ್ ಸಿಕ್ಕಿತು. ಇದು ಭಾರತದ ಸಮಬಲ ಸಾಧಿಸುವ ಅವಕಾಶಗಳಿಗೆ ಅಡ್ಡಿಯಾಯಿತು.

ಇದನ್ನೂ ಓದಿ: IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

ನಿಕ್ ವುಡ್ಸ್ ಹಳದಿ ಕಾರ್ಡ್ ನೊಂದಿಗೆ ಐದು ನಿಮಿಷಗಳ ಕಾಲ ಅಮಾನತುಗೊಂಡಿದ್ದರಿಂದ ನ್ಯೂಜಿಲೆಂಡ್ ಗೆ ಎರಡನೇ ಕ್ವಾರ್ಟರ್ ದೊಡ್ಡ ಹೊಡೆತವಾಯಿತು.

ಶೈಲಿಯಲ್ಲಿ ಪುಟಿದೇಳುವ ಭಾರತ!
ಹರ್ಮನ್ ಪ್ರೀತ್ ಸಿಂಗ್​ಗೆ ಎದುರಾಳಿ ತಂಡ ಪೆನಾಲ್ಟಿ ಕಾರ್ನರ್ ಅವಕಾಶ ನಿರಾಕರಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನ ಬಲಿಷ್ಠ ಡಿಫೆನ್ಸ್ ವಿಭಾಗ ಕುಸಿಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತದ ನಾಯಕನಿಗೆ ಎರಡನೇ ಅವಕಾಶ ಸಿಕ್ಕಿತು. ಈ ವೇಳೆ ಗೋಲ್ ಪೋಸ್ಟ್​​ ಸಮೀಪದಲ್ಲಿದ್ದ ಮನ್ದೀಪ್ ಸಿಂಗ್ ಅವರು ಡಿಕ್ಸನ್ ಅವರನ್ನು ಹಿಂದಿಕ್ಕಿ ಭಾರತಕ್ಕೆ 1-1 ಅಂತರದ ಮುನ್ನಡೆ ತಂದುಕೊಟ್ಟರು. ಭಾರತವು ಮೂರನೇ ಕ್ವಾರ್ಟರ್ ಅನ್ನು ಹೊಸ ಆತ್ಮವಿಶ್ವಾಸದೊಂದಿಗೆ ಪ್ರಾರಂಭಿಸಿತು. ಮನ್ದೀಪ್ ಸಿಂಗ್ ಒಂದು ಗೋಲು ಬಾರಿಸಿದರು. ಆದರೆ, ಸ್ಕಾಟ್ ಬಾಯ್ಡೆ ಅವರ ಪ್ರಯತ್ನದ ಮೂಲಕ ನ್ಯೂಜಿಲೆಂಡ್ ತಿರುಗೇಟು ನೀಡಿತು. ಆದರೆ ಕೊನೆಯಲ್ಲಿ ಪೆನಾಲ್ಟಿ ಸ್ಟ್ರೋಕ್​ ಮೂಲಕ ನಾಯಕ ಹರ್ಮನ್​ ಪ್ರೀತ್ ಸಿಂಗ್ ಗೋಲ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Continue Reading

ಪ್ರಮುಖ ಸುದ್ದಿ

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

IND vs SL: ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ನಾಯಕ ಸೂರ್ಯಕುಮಾರ್​ (58 ರನ್​) ಅರ್ಧ ಶತಕ ಹಾಗೂ ರಿಷಭ್​ ಪಂತ್​ (49 ರನ್​) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ (IND vs SL) ಮೊದಲ ಪಂದ್ಯದಲ್ಲಿ 43 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಭಾರತ ತಂಡದ ಗೆಲುವಿನಲ್ಲಿ ಕೊನೇ ಹಂತದಲ್ಲಿ ಬೌಲರ್​ಗಳು ಕೂಡ ಪ್ರಮುಖ ಪಾತ್ರ ವಹಿಸಿದರು. ಇದರೊಂದಿಗೆ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಶುಭಾರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್ ಕೂಡ ಹೊಸ ಅಧ್ಯಾಯ ಆರಂಭಿಸಿದರು.

ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್​ (21 ಎಸೆತಕ್ಕೆ 40 ರನ್​), ಶುಭ್​ಮನ್​ ಗಿಲ್​ (16 ಎಸೆತಕ್ಕೆ 34 ರನ್​) ಉತ್ತಮ ಆರಂಭ ತಂದುಕೊಟ್ಟರು. ಈ ಜೋಡಿ ಮೊದಲ ವಿಕೆಟ್​ಗೆ 74 ರನ್ ಬಾರಿಸಿತು. ಬಳಿಕ ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ನಾಯಕ ಸೂರ್ಯಕುಮಾರ್ ಉತ್ತಮವಾಗಿ ಆಡಿದರು. ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಲಂಕಾ ಬೌಲರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು. ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು. ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. 26 ಎಸೆತಕ್ಕೆ ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅವರು 58 ರನ್ ಬಾರಿಸಿತು.

ಇದನ್ನೂ ಓದಿ: Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

ರಿಷಭ್ ಉತ್ತಮ ಆಟ

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಔಟಾಗುವ ಮೊದಲು ಅವರು 33 ಎಸೆತಕ್ಕೆ 6 ಫೋರ್​, 1 ಸಿಕ್ಸರ್ ಸಮೇತ 49 ರನ್ ಬಾರಿಸಿದರು. ಆದರೆ, ಒಂದು ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಲಂಕಾ ಉತ್ತಮ ಆರಂಭ

ಭಾರತದ ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಂಕಾ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 84 ರನ್ ಬಾರಿಸಿತು. ಆರಂಭಿಕ ಬ್ಯಾಟರ್​ ಪಾತುಮ್ ನಿಸ್ಸಾಂಕ 4 ಎಸೆತಕ್ಕೆ 79 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 27 ಎಸೆತಕ್ಕೆ 45 ರನ್ ಗಳಿಸಿದರು. ಹೀಗಾಗಿ ಲಂಕಾ ಗೆಲುವಿನ ಸನಿಹ ಬರುವ ನಿರೀಕ್ಷೆ ಇತ್ತು. ಆದರೆ, ಕೊನೇ ಹಂತದಲ್ಲಿ ಅಕ್ಷರ್ ಪಟೇಲ್​ (3 ರನ್​ಗಳಿಗೆ 2 ವಿಕೆಟ್​), ಅರ್ಶ್​ದೀಪ್ ಸಿಂಗ್ (24 ಎಸೆತಕ್ಕೆ 2 ವಿಕೆಟ್​), ರಿಯಾನ್ ಪರಾಗ್​ 1.2 ಓವರ್​ಗಳಲ್ಲಿ 5 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹೀಗಾಗಿ ಲಂಕಾ ತಂಡಕ್ಕೆ ಯಾವುದೇ ಹಂತದಲ್ಲಿ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. 149 ರನ್​ಗಳಿಗೆ 3 ವಿಕೆಟ್ ಮಾತ್ರ ಕಳೆದುಕೊಂಡಿದ್ದ ಲಂಕಾ ಮುಂದಿನ 21 ರನ್ ಮಾಡುವಷ್ಟರಲ್ಲಿ ಉಳಿದ ಏಳು ವಿಕೆಟ್ ನಷ್ಟ ಮಾಡಿಕೊಂಡು ಸೋಲೊಪ್ಪಿಕೊಂಡಿತು.

Continue Reading

ಪ್ರಮುಖ ಸುದ್ದಿ

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Rishabh Pant : ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

VISTARANEWS.COM


on

Rishabh Pant
Koo

ಬೆಂಗಳೂರು: ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್​ ರಿಷಭ್ ಪಂತ್ (Rishabh Pant) ಬ್ಯಾಟಿಂಗ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯವು ಪಲ್ಲೆಕೆಲೆಯ ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ರಿಷಭ್ ಪಂತ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದರು. ಅವರು ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಉತ್ತಮ ಸಾಥ್ ಕೊಟ್ಟರು.

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು.

ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಆದರೆ ಗಮನ ಸೆಳೆದದ್ದು ಅಸಿತಾ ಫರ್ನಾಂಡೊ ವಿರುದ್ಧ ಆಡಿದ ಹೆಲಿಕಾಪ್ಟರ್ ಶಾಟ್. ಕೀಪರ್-ಬ್ಯಾಟರ್​ ಎಂಎಸ್ ಧೋನಿ ಅವರ ಸಿಗ್ನೇಚರ್ ಶಾಟ್ ಅನ್ನು ಪರಿಪೂರ್ಣವಾಗಿ ಪುನರಾವರ್ತಿಸಿ ಅದ್ಭುತ ಸಿಕ್ಸರ್ ಬಾರಿಸಿದರು.

16ನೇ ಓವರ್​ನ 4ನೇ ಎಸೆತದಲ್ಲಿ ಅಸಿತಾ ಫರ್ನಾಂಡೊ ಯಾರ್ಕರ್ ಎಸೆದರು. ರಿಷಭ್ ಪಂತ್ ತಮ್ಮ ಮಣಿಕಟ್ಟುಗಳನ್ನು ಬಳಸಿ ಆಡಿದರು. ನಂತರ ಹೆಲಿಕಾಪ್ಟರ್ ಶಾಟ್ ಅನ್ನು ಪರಿಪೂರ್ಣವಾಗಿ ಪೂರ್ತಿಗೊಳಿಸಿದರು. ಚೆಂಡು ಮಿಡ್​ ವಿಕೆಟ್​ ಮೂಲಕ ಆಕಾಶಕ್ಕೆ ಹಾರಿ ಬಿತ್ತು.

ಇದನ್ನೂ ಓದಿ: IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

ರಿಷಭ್ ಪಂತ್ ತಮ್ಮ ಇನಿಂಗ್ಸ್​​ನಲ್ಲಿ ಪ್ರಮುಖ ಪಾತ್ರ ವಹಿಸಿದರು. ಭಾರತ ಕ್ರಿಕೆಟ್ ತಂಡವು ಮಧ್ಯದಲ್ಲಿ ಕೆಲವು ತ್ವರಿತವಾಗಿ ವಿಕೆಟ್​ಗಲ್ನು ಕಳೆದುಕೊಂಡ ನಂತರ ನಿರ್ಣಾಯಕ ಸಮಯದಲ್ಲಿ ಅವರ ಶತಕ ಬಂತು. ಅವರು ಬಲವಾಗಿ ಬ್ಯಾಟಿಂಗ್ ಮಾಡುವ ಮೂಲಕ ತಮ್ಮ ತಂಡಕ್ಕೆ ಇನ್ನಿಂಗ್ಸ್ ಅನ್ನು ಉನ್ನತ ಮಟ್ಟದಲ್ಲಿ ಮುಗಿಸಲು ಸಹಾಯ ಮಾಡಿದರು.

ರಿಷಭ್ ಪಂತ್ 33 ಎಸೆತಗಳಲ್ಲಿ 49 ರನ್ ಸಿಡಿಸಿ ಔಟಾದರು. ಅವರು ಸುಮಾರು 130 ಸ್ಟ್ರೈಕ್​ರೇಟ್​ನೊಂದಿಗೆ ಆಡಿದರು ಮತ್ತು ಅವರ ಇನ್ನಿಂಗ್ಸ್​ನಲ್ಲಿ 6 ಬೌಂಡರಿಗಳು ಮತ್ತು 1 ಸಿಕ್ಸರ್ ಸೇರಿಕೋಂಡಿತ್ತು. ಅವರ ಅದ್ಭುತ ಪ್ರದರ್ಶನದ ಹಿನ್ನೆಲೆಯಲ್ಲಿ ಭಾರತವು 213 ರನ್​ಗಳನ್ನು ಬಾರಿಸಿತು.

ನಾಯಕನಾಗಿ ಸೂರ್ಯಕುಮಾರ್ ಯಾದವ್ ಭರ್ಜರಿ ಆಟ

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಬಲಗೈ ಬ್ಯಾಟರ್​ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹೋದರು. ಬೌಳರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು.

ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು ಮತ್ತು ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (34) ಮತ್ತು ಯಶಸ್ವಿ ಜೈಸ್ವಾಲ್ (40) ನೀಡಿದ ಆರಂಭವನ್ನು ಬಲಗೈ ಬ್ಯಾಟರ್​ ಸದುಪಯೋಗಪಡಿಸಿಕೊಂಡರು.

Continue Reading
Advertisement
Pervez Musharraf
ದೇಶ2 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ8 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ36 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ46 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ56 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ3 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌