Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್? - Vistara News

ಸ್ಯಾಂಡಲ್ ವುಡ್

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

Actor Darshan: ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

VISTARANEWS.COM


on

Actor Darshan fans turn against D boss
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ದರ್ಶನ್ (Actor Darshan) ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ. ಕೋರ್ಟ್ ವಿಚರಣೆಗೆ ಮೊದಲೇ ಬಹುತೇಕ ದಚ್ಚು ಅಭಿಮಾನಿಗಳು ನಟನ ವಿರುದ್ಧ ತಿರುಗಿ ಬಿದ್ದಿದ್ದಾರೆ.

ನಟ ದರ್ಶನ್ ಹಾಗೂ ಅವರ ತಂಡದ ಕರಾಳ ಮುಖ ಒಂದೊಂದೇ ಬಯಲು ಆಗುತ್ತಿದ್ದಂತೆ ದರ್ಶನ್ ಮೇಲೆ ಅಭಿಮಾನಿಗಳಿಗೆ ಅಭಿಮಾನ ಕಡಿಮೆ ಆದಂತಿದೆ. ದರ್ಶನ್ ಅಂದ್ರೆ ಜೀವ ಬಿಡ್ತಿದ್ದ ಫ್ಯಾನ್ಸ್, ಇದೀಗ ದರ್ಶನ್ ಹೆಸರನ್ನು ಎಲ್ಲಿಯೂ ನೋಡಲು ಇಷ್ಟ ಪಡುತ್ತಿಲ್ಲ. ಬೈಕ್‌ನಲ್ಲಿ, ಎಲ್ಲಾದರೂ ದರ್ಶನ್‌ ಹೆಸರು ಕಂಡರೆ ಅದನ್ನು ಅಳಿಸುತ್ತಿದ್ದಾರೆ. ದಚ್ಚು ಹೆಸರು ತೆಗೆಯುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕೆಲವರು ಈ ವಿಡಿಯೊಗೆ ಸಾಥ್‌ ಕೊಟ್ಟಿದ್ದಾರೆ. ʻʻನಿಮ್ಮ ತಂದೆ ತಾಯಿಗಳು ನಿಜವಾದ ಹಿರೋಗಳು ಅವರೆ ನಿಮಗೆ ಪ್ರೇರಣೆʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಕಷ್ಟದ ಸಮಯದಲ್ಲಿ ಬೆನ್ನ ಹಿಂದೆ ಇರುವರು ನಿಜವಾದ ಅಭಿಮಾನಿಗಳುʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

Actor Darshan : ದರ್ಶನ್‌ ಫ್ಯಾನ್ಸ್‌ಗೆ (Actor Darshan Fans) ಕಾನೂನು ಕಂಟಕ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ನೆಚ್ಚಿನ ನಟ ಜೈಲುಪಾಲಾಗಿದ್ದು, ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ನನ್ನೇ ಸ್ಟಿಕ್ಟರ್‌ ಆಗಿ ಮಾಡಿಕೊಂಡು ಗಾಡಿಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಕೇಸ್‌ ದಾಖಲಿಸಲು ಚಿಂತನೆ ನಡೆದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ (Actor Darshan) ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್‌ ಬ್ರೇಕ್‌ ಮಾಡಿದರೆ ಕೇಸ್‌ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್‌ ಪೊಲೀಸರು (Traffic violation) ನೀಡಿದ್ದಾರೆ.

ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್‌ ಅನ್ನೇ ಸ್ಟಿಕರ್‌ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.

Actor Darshan

ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್‌ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

CM Siddaramaiah: ಈ ಕಾರ್ಯಕ್ರಮದಲ್ಲಿ ಜಗ್ಗೇಶ್‌, ಶಿವರಾಜ್‌ ಕುಮಾರ್‌ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಹೊಂಬಾಳೆ ಫಿಲಂಸ್‍, ಆರ್‌.ಎಸ್‌. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ.

VISTARANEWS.COM


on

CM Siddaramaiah To Inaugurate Film Producers Association Building says build film city
Koo

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ (Inaugurate Film Producers Association Building) ಅವರು ʻʻಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜತೆ ಮಾತನಾಡುತ್ತೇವೆ. ರಾಜ್‌ಕುಮಾರ್‌ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ʼʼಎಂದರು.

ಸಿದ್ದರಾಮಯ್ಯ ಮಾತನಾಡಿ ʻʻನಿನ್ನೆ ದೆಹಲಿಗೆ ಹೋಗಿದ್ದೆ.. ಇವತ್ತು ಈ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರ ಗೌರವ ಇದೆ. ಮಿಸ್ ಮಾಡದೇ ಬರಬೇಕು ಎಂದು ಬಂದೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಇರುತ್ತದೆ. ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜತೆ ಮಾತನಾಡುತ್ತೇವೆ. ಡಾ.ರಾಜ್‍ಕುಮಾರ್ ಕನಸಿನಂತೆ ಖಂಡಿತಾ ಒಂದು ಫಿಲ್ಮ್ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಸಹಾಯ ಮಾಡುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕೆರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ.ʼʼಎಂದರು.

ಈ ಕಾರ್ಯಕ್ರಮದಲ್ಲಿ ಜಗ್ಗೇಶ್‌, ಶಿವರಾಜ್‌ ಕುಮಾರ್‌ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಹೊಂಬಾಳೆ ಫಿಲಂಸ್‍, ಆರ್‌.ಎಸ್‌. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಎಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ತಿಳಿಸಿದರು.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ರಮೇಶ್‍ ಯಾದವ್‍, ಎಂ.ಜಿ. ರಾಮಮೂರ್ತಿ, ಆರ್.ಎಸ್. ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷರಾಗಿ ಸಾರಾ ಗೋವಿಂದು ಅವರು ಕೆಲಸ ಮಾಡಿದ್ದಾರೆ. ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ದ (Kannada Film Producers Association) ನೂತನ ಕಟ್ಟಡ ಶಿವಾನಂದ ಸರ್ಕಲ್ ಬಳಿ ಇದೆ.

Continue Reading

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

T20 World Cup 2024: ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

VISTARANEWS.COM


on

T20 World Cup 2024 Netizen Thanking Darshan For India World Cup Win
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದರ ಬೆನ್ನಲ್ಲೇ  ಭಾರತ ವಿಶ್ವಕಪ್ ಗೆಲ್ಲಲು ಕಾರಣ ದರ್ಶನ್‌ ಎಂದು ಟ್ರೋಲ್‌ ಆಗುತ್ತಿದೆ. ಮಾತ್ರವಲ್ಲ ನೆಟ್ಟಿಗರು ದರ್ಶನ್‌ಗೆ ಧನ್ಯವಾದ ಎಂದು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. 

ಭಾರತ ಕಳೆದ ಬಾರಿ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ ಆ ವರ್ಷವೂ ಸಹ ದರ್ಶನ್ ಜೈಲು ಸೇರಿದ್ದರು. ಅದಾದ 13 ವರ್ಷಗಳ ಬಳಿಕ 2024 ರಲ್ಲಿ ದರ್ಶನ್​ ಮತ್ತೆ ಜೈಲಿಗೆ ಹೋಗಿದ್ದಾರೆ. ಈ ಬಾರಿ ಭಾರತ ಮತ್ತೆ ವಿಶ್ವಕಪ್ ಗೆದ್ದಿದೆ. ಹಾಗಾಗಿ ದರ್ಶನ್ ಜೈಲು ಸೇರಿದ್ದಕ್ಕೆ ಭಾರತ ವಿಶ್ವಕಪ್ ಗೆದ್ದಿದ್ದು ಎಂಬುದು ಕೆಲವರ ಮಾತುಗಳು. ಭಾರತ ವಿಶ್ವಕಪ್ ಗೆದ್ದ ಕೆಲವು ತಿಂಗಳು ಬಳಿಕ ದರ್ಶನ್ ಜೈಲಿಗೆ ಹೋಗಿದ್ದರೆ ಹೊರತು ವಿಶ್ವಕಪ್ ಗೆಲ್ಲುವ ಮೊದಲಲ್ಲ. 2011 ರ ಏಪ್ರಿಲ್ 2 ರಂದು ಭಾರತ ವಿಶ್ವಕಪ್ ಗೆದ್ದಿತ್ತು, ಅದಾದ ಕೆಲವು ತಿಂಗಳ ಬಳಿಕ ಅಂದರೆ ಸೆಪ್ಟೆಂಬರ್ 9 ರಂದು ನಟ ದರ್ಶನ್ ಜೈಲು ಸೇರಿದ್ದರು.

ಹೇಗಿತ್ತು ಸೆಲೆಬ್ರೇಷನ್‌?

ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಟಾಸ್ ಗೆದ್ದ ನಂತರ ಭಾರತವು ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಧಾನವಾಗಿ ರನ್ ಪೇರಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್​ಗಳ ಸವಾಲಿನ ಗುರಿ ನಿಗದಿಪಡಿಸಿತು. ಅಂತೆಯೇ ಅಂತಿಮ ಓವರ್​ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಶಸ್ತಿ ಗೆಲ್ಲಲು 16 ರನ್ಗಳ ಅವಶ್ಯಕತೆಯಿತ್ತು. ಈ ನಿರ್ಣಾಯಕ ಓವರ್​ಗೆ ಎಸೆಯಲು ರೋಹಿತ್ ಶರ್ಮಾ ಪಾಂಡ್ಯಗೆ ಚೆಂಡನ್ನು ನೀಡಿದರು. ಪಾಂಡ್ಯ ಕೇವಲ ಏಳು ರನ್​ಗಳನ್ನು ಬಿಟ್ಟುಕೊಟ್ಟು ಡೇವಿಡ್ ಮಿಲ್ಲರ್ ಮತ್ತು ಕಗಿಸೊ ರಬಾಡ ಅವರ ಎರಡು ಪ್ರಮುಖ ವಿಕೆಟ್​​ಗಳನ್ನು ಪಡೆದು ಭಾರತದ ಗೆಲುವನ್ನು ಖಚಿತಪಡಿಸಿದರು.

Continue Reading
Advertisement
ಕ್ರೀಡೆ5 mins ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು8 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್12 mins ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ31 mins ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ37 mins ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು42 mins ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Hardik Pandya
ಕ್ರೀಡೆ43 mins ago

Hardik Pandya: ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಕರೆ ಮಾಡಿದ್ದು ಯಾರಿಗೆ?; ನೆಟ್ಟಿಗರ ಉತ್ತರವೇನು?

Kamal Haasan on limited screen time in 'Kalki 2898 AD
ಟಾಲಿವುಡ್1 hour ago

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

T20 World Cup 2024
ಕ್ರೀಡೆ1 hour ago

T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Self Harming
ಮೈಸೂರು1 hour ago

Self Harming : ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು8 mins ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ20 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌