Atal Setu: "ಅಟಲ್‌ ಸೇತು ಸುಭದ್ರವಾಗಿದೆ..ಯಾವುದೇ ಬಿರುಕಿಲ್ಲ"- ಕಾಂಗ್ರೆಸ್‌ ಆರೋಪಕ್ಕೆ MMRDA ಸ್ಪಷ್ಟನೆ - Vistara News

ದೇಶ

Atal Setu: “ಅಟಲ್‌ ಸೇತು ಸುಭದ್ರವಾಗಿದೆ..ಯಾವುದೇ ಬಿರುಕಿಲ್ಲ”- ಕಾಂಗ್ರೆಸ್‌ ಆರೋಪಕ್ಕೆ MMRDA ಸ್ಪಷ್ಟನೆ

Atal Setu:ಎಕ್ಸ್‌ನಲ್ಲಿ ವಿಡಿಯೋ ಸಮೇತ ಸ್ಪಷ್ಟನೆ ನೀಡಿರುವ MMRDA ಕಾಂಗ್ರೆಸ್‌ ಮಾಡಿರುವ ಆರೋಪಕ್ಕೂ ಅಟಲ್‌ ಸೇತುವೆಗೆ ಯಾವುದೇ ಸಂಬಂಧ ಇಲ್ಲ. ಅವರ ವಿಡಿಯೋದಲ್ಲಿ ತೋರಿಸಿರುವುದು ಉಲ್ವೇಯಿಂದ ಮುಂಬೈಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ರಸ್ತೆಯಾಗಿದೆ. ಬಿರುಕು ಬಿಟ್ಟಿರುವುದು ಆ ರಸ್ತೆಯಲ್ಲೇ ಹೊರತು ಅಟಲ್‌ ಸೇತುವೆಯಲ್ಲಿ ಅಲ್ಲ‌. MTHL ಅನ್ನು ಕೂಡ ಅಟಲ್‌ ಸೇತು ಎಂದೇ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ಕೊಟ್ಟಿದೆ.

VISTARANEWS.COM


on

Atal Setu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ಕಾಂಗ್ರೆಸ್‌ ಆರೋಪದ ಬೆನ್ನಲ್ಲೇ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(MMRDA) ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಎಕ್ಸ್‌ನಲ್ಲಿ ವಿಡಿಯೋ ಸಮೇತ ಸ್ಪಷ್ಟನೆ ನೀಡಿರುವ MMRDA, ಕಾಂಗ್ರೆಸ್‌ ಮಾಡಿರುವ ಆರೋಪಕ್ಕೂ ಅಟಲ್‌ ಸೇತುವೆಗೆ ಯಾವುದೇ ಸಂಬಂಧ ಇಲ್ಲ. ಅವರ ವಿಡಿಯೋದಲ್ಲಿ ತೋರಿಸಿರುವುದು ಉಲ್ವೇಯಿಂದ ಮುಂಬೈಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ರಸ್ತೆಯಾಗಿದೆ. ಬಿರುಕು ಬಿಟ್ಟಿರುವುದು ಆ ರಸ್ತೆಯಲ್ಲೇ ಹೊರತು ಅಟಲ್‌ ಸೇತುವೆಯಲ್ಲಿ ಅಲ್ಲ‌. MTHL ಅನ್ನು ಕೂಡ ಅಟಲ್‌ ಸೇತು ಎಂದೇ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ಕೊಟ್ಟಿದೆ.

ಕಾಂಗ್ರೆಸ್‌ ಆರೋಪ ಏನು?

ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ಗೆ (Mumbai Trans Harbour Link-MTHL) ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಐದೇ ತಿಂಗಳಲ್ಲಿ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಕಾಂಗ್ರೆಸ್‌ ಆರೋಪಿಸಿತ್ತು. ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಳೆ (Nana Patole) ಅವರು ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ಜನರಿಗೆ ತೋರಿಸಿ ರಸ್ತೆ ಸುರಕ್ಷತೆಯನ್ನು ಪರಿಶೀಲಿಸಿದ್ದಾರೆ. ಹಾಗೆಯೇ, ಭಾರಿ ಭ್ರಷ್ಟಾಚಾರ ನಡೆದಿದೆ ಎಂಬುದಾಗಿ ಆರೋಪಿಸಿದ್ದಾರೆ.

ನವಿ ಮುಂಬೈನ ಉಲ್ವೆ ಕಡೆ ಹೋಗುವ ಸೇತುವೆ ಮಾರ್ಗದಲ್ಲಿ ಬಿರುಕು ಕಾಣಿಸಿಕೊಂಡಿವೆ. “ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ. ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು” ಎಂದು ನಾನಾ ಪಟೋಳೆ ಆರೋಪಿಸಿದ್ದಾರೆ. 2024ರ ಜನವರಿಯಲ್ಲಿ ನರೇಂದ್ರ ಮೋದಿ ಅವರು ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೆಟಿವ್​ ವಿಷ್‌

T20 World Cup 2024:ಎರಡನೇ ಬಾರಿ ಟಿ20 ವಿಶ್ವಕಪ್‌ ಗೆದ್ದುಕೊಂಡ ಟೀಮ್‌ ಇಂಡಿಯಾಕ್ಕೆ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ವಿವಿದ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೇ ವೇಳೆ ದೆಹಲಿ, ಉತ್ತರ ಪ್ರದೇಸ ಮತ್ತು ಮುಂಬೈ ಪೊಲೀಸರು ವಿಶಿಷ್ಟವಾಗಿ ಅಭಿನಂದನೆ ಸಲ್ಲಿಸಿ ಗಮನ ಸೆಳೆದಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್​ 2024 (T20 World Cup 2024ಫೈನಲ್​ನಲ್ಲಿ ಟೀಮ್ ಇಂಡಿಯಾ (Team India) ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಸುಮಾರು 17 ವರ್ಷಗಳ ಬಳಿಕ ಕಪ್‌ ತನ್ನದಾಗಿಸಿಕೊಂಡಿದೆ. ಈ ಸಾಧನೆ ಮಾಡಿದ ರೋಹಿತ್‌ ಶರ್ಮಾ (Rohit Sharma) ಬಳಗಕ್ಕೆ ಅಭಿನಂದನೆಗಳ ಪ್ರವಾಹವೇ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಮಧ್ಯೆ ವಿವಿಧ ಪೊಲೀಸ್‌ ಘಟಕಗಳು ಕಿಯೇಟಿವ್‌ ಆಗಿ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿವೆ. ಟೀಮ್‌ ಇಂಡಿಯಾಕ್ಕೆ ವಿಷ್‌ ಮಾಡುವ ಜತೆಗೆ ಟ್ರಾಫಿಕ್‌ ಜಾಗೃತಿಯನ್ನೂ ಮೂಡಿಸುತ್ತಿವೆ.

ʼʼಟೀಮ್‌ ಇಂಡಿಯಾ ಎರಡನೇ ಬಾರಿ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗುವುದನ್ನು ನೋಡಲು ಸುಮಾರು 16 ವರ್ಷ 9 ತಿಂಗಳು ಮತ್ತು 5 ದಿನ (52,70,40,000 ಸೆಕೆಂಡ್‌) ಕಾದಿದ್ದೇವೆ. ಇದೇ ರೀತಿ ಟ್ರಾಫಿಕ್‌ ಸಿಗ್ನಲ್‌ನಲ್ಲಿಯೂ ಸ್ವಲ್ಪ ಹೊತ್ತು ತಾಳ್ಮೆಯಿಂದ ಕಾಯಿರಿ. ಉತ್ತಮ ಕ್ಷಣಕ್ಕಾಗಿ ಕಾಯುವುದರಲ್ಲಿ ಯಾವುದೇ ತಪ್ಪಿಲ್ಲ. ಏನಂತೀರಾ? ಟೀಮ್‌ ಇಂಡಿಯಾಕ್ಕೆ ಹೃತೂರ್ವಕ ಅಭಿನಂದನೆಗಳುʼʼ ಎಂದು ದೆಹಲಿ ಪೊಲೀಸ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಇನ್ನು ಉತ್ತರ ಪ್ರದೇಶ ಪೊಲೀಸರೂ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಮಜವಾದ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಭಾರತೀಯ ಬೌಲರ್‌ಗಳ ಪ್ರದರ್ಶನವನ್ನು ಕ್ರಿಮಿನಲ್ ಕೃತ್ಯಕ್ಕೆ ಹೋಲಿಸುವ ತಮ್ಮ ಹಾಸ್ಯ ಪ್ರಜ್ಞೆಯನ್ನು ಮೆರೆದಿದ್ದಾರೆ. ʼʼಬ್ರೇಕಿಂಗ್‌ ನ್ಯೂಸ್‌: ದಕ್ಷಿಣ ಆಫ್ರಿಕನ್ನರ ಹೃದಯ ಚೂರು ಮಾಡಿದ ಭಾರತೀಯ ಬೌಲರ್‌ಗಳು ತಪ್ಪಿತಸ್ಥರು ಎಂದು ಸಾಬೀತಾಗಿದೆ. ಇದಕ್ಕಿರುವ ಶಿಕ್ಷೆ: ಕೋಟ್ಯಂತರ ಅಭಿಮಾನಿಗಳಿಂದ ಜೀವಮಾನದ ಪ್ರೀತಿʼʼ ಎಂದು ಬರೆದುಕೊಂಡಿದ್ದಾರೆ.

ಮುಂಬೈ ಟ್ರಾಫಿಕ್‌ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ಕ್ರಿಯಾತ್ಮಕತೆಯನ್ನು ಪ್ರದರ್ಶಿಸಿದ್ದಾರೆ. ʼʼIND 29 June 2024ʼʼ ನಂಬರ್‌ ಪ್ಲೇಟ್‌ ಹೊಂದಿರುವ ಕಾರನ್ನು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಲಾಯಿಸುತ್ತಿರುವಂತೆ ಫೋಟೊ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ʼʼನಂಬರ್‌ ಪ್ಲೇಟ್‌ನ ಕನಸು ನನಸಾಗಿದೆʼʼ ಎಂದು ಕ್ಯಾಪ್ಶನ್‌ ನೀಡಿದ್ದಾರೆ. ಒಟ್ಟಿನಲ್ಲಿ ಟೀಮ್‌ ಇಂಡಿಯಾಕ್ಕೆ ವಿಧ ವಿಧ ಮೀಮ್ಸ್‌, ವಿಡಿಯೊ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತಿದೆ.

ಭಾರತ ಕಪ್‌ ಜಯಶಾಲಿಯಾಗುತ್ತಿದ್ದಂತೆ ಭಾರತದ ಎಲ್ಲೆಡೆ ಸಡಗರ ಮನೆ ಮಾಡಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಅಭಿಮಾನಿಗಳು ಭಾರತದ ಗೆಲುವನ್ನು ಕೊಂಡಾಡಿದರು. ಬೆಂಗಳೂರು, ಪಾಟ್ನಾ, ಪುಣೆ, ಮುಂಬೈ, ಹೈದರಾಬಾದ್‌, ಜಮ್ಮು ಮತ್ತು ಕಾಶ್ಮೀರ ಮುಂತಾದೆಡೆ ಮಧ್ಯರಾತ್ರಿಯನ್ನೂ ಲೆಕ್ಕಿಸದೆ ಅಭಿಮಾನಿಗಳು ಬೀದಿಗಿಳಿದು ಕುಣಿದು ಕುಪ್ಪಳಿಸಿದರು. ಕೆಲವೆಡೆ ರಸ್ತೆ ತೆರವುಗೊಳಿಸಲು ಪೊಲೀಸರು ಮಧ್ಯೆ ಪ್ರವೇಶಿಸಬೇಕಾಯಿತು.

ಭಾರತ ಮಾತ್ರವಲ್ಲ ವಿದೇಶದಲ್ಲಿಯೂ ಸಂಭ್ರಮಾಚರಣೆ ಕಂಡು ಬಂತು. ಅಮೆರಿಕ, ಇಂಗ್ಲೆಂಡ್‌ ಮುಂತಾದೆಡೆಗಳ ಭಾರತೀಯರು ಒಟ್ಟು ಸೇರಿ ಟೀಮ್‌ ಇಂಡಿಯಾ ಗೆಲುವಿಗೆ ಹರ್ಷಾಚರಣೆ ನಡೆಸಿದರು.

ಇದನ್ನೂ ಓದಿ: T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

Continue Reading

ದೇಶ

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Mann Ki Baat: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಆದಿವಾಸಿ ಮಹಿಳೆಯರು ತಯಾರಿಸುವ ಛತ್ರಿಗಳ ಬಗ್ಗೆಯೂ ಮಾತನಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರನ್ನು ಹುರಿದುಂಬಿಸಬೇಕು ಎಂದು ಭಾರತೀಯ ಆಟಗಾರರಿರಗೆ ಪ್ರಧಾನಿಗಳು ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಲೋಕಸಭಾ ಚುನಾವಣೆಯನ್ನು ಶಾಂತಯುತವಾಗಿ ನಡೆಸಿಕೊಟ್ಟ ಎಲ್ಲಾ ಭಾರತೀಯರಿಗೂ ಧನ್ಯವಾದಗಳನ್ನು ತಿಳಿಸಿದರು.

VISTARANEWS.COM


on

Mann Ki Baat
Koo

ಹೊಸದಿಲ್ಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್‌ ಕೀ ಬಾತ್‌(Mann Ki Baat) ಕಾರ್ಯಕ್ರಮ ಇಂದು ಪ್ರಸಾರವಾಗಿದೆ. ಕಾರ್ಯಕ್ರಮದಲ್ಲಿ ಹಲವು ವಿಚಾರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ನೀಡಿದ ದೇಶದ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸಿದರು.

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೇರಳದ ಪಾಲಕಾಡ್‌ನಲ್ಲಿ ಆದಿವಾಸಿ ಮಹಿಳೆಯರು ತಯಾರಿಸುವ ಛತ್ರಿಗಳ ಬಗ್ಗೆಯೂ ಮಾತನಾಡಿದರು. ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರನ್ನು ಹುರಿದುಂಬಿಸಬೇಕು ಎಂದು ಭಾರತೀಯ ಆಟಗಾರರಿರಗೆ ಪ್ರಧಾನಿಗಳು ಶುಭಾಶಯಗಳನ್ನು ತಿಳಿಸಿದರು. ಇದೇ ವೇಳೆ ಲೋಕಸಭಾ ಚುನಾವಣೆಯನ್ನು ಶಾಂತಯುತವಾಗಿ ನಡೆಸಿಕೊಟ್ಟ ಎಲ್ಲಾ ಭಾರತೀಯರಿಗೂ ಧನ್ಯವಾದಗಳನ್ನು ತಿಳಿಸಿದರು. 65 ಕೋಟಿ ಜನರು ಮತ ಚಲಾಯಿಸಿದ ಜಗತ್ತಿನ ಯಾವುದೇ ದೇಶದಲ್ಲಿ ಇಷ್ಟು ದೊಡ್ಡ ಚುನಾವಣೆ ನಡೆದಿಲ್ಲ. ನಾನು ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಪ್ರತಿಯೊಬ್ಬರನ್ನು ಅಭಿನಂದಿಸುತ್ತೇನೆ ಎಂದರು.

ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌

  1. ವಿಶ್ಯಾದ್ಯಂತ 10ನೇ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆದಿರುವ ಬಗ್ಗೆ ಹೆಮ್ಮೆ ಇದೆ. ಅನೇಕರು ಬಹಳ ಉತ್ಸುಕತೆಯಿಂದ ಭಾಗಿಯಾಗಿದ್ದೀರಿ.
  2. ಸ್ನೇಹಿತರೇ, ಭಾರತದ ಹಲವಾರು ಉತ್ಪನ್ನಗಳಿಗೆ ಪ್ರಪಂಚದಾದ್ಯಂತ ಹೆಚ್ಚಿನ ಬೇಡಿಕೆ ಇದೆ. ಅಂತಹ ಒಂದು ಉತ್ಪನ್ನಗಳಲ್ಲಿ ಆಂಧ್ರಪ್ರದೇಶದ ಅರಕು ಕಾಫಿ.
  3. ಈ ವರ್ಷದ ವಿಶ್ವ ಪರಿಸರ ದಿನದಂದು ‘ಏಕ್ ಪೆಡ್ ಮಾ ಕೆ ನಾಮ್’ ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳು ಸೇರಿದಂತೆ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.

Continue Reading

ದೇಶ

Mann Ki Baat: ನಾಲ್ಕು ತಿಂಗಳ ನಂತರ ಮೋದಿ ʼಮನ್‌ ಕೀ ಬಾತ್‌ʼ; Live ಲಿಂಕ್ ಇಲ್ಲಿದೆ

Mann Ki Baat:ಇನ್ನು ಈ ಬಗ್ಗೆ ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಮತ್ತೆ ನಿಮ್ಮನ್ನು ಭೇಟಿಯಾಗುತ್ತಿರುವುದು ಸಂತಸದ ವಿಚಾರ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಬೆಳಗ್ಗೆ 11ಗಂಟೆಗೆ ಭೇಟಿಯಾಗೋಣ ಎಂದಿದ್ದಾರೆ.

VISTARANEWS.COM


on

Mann Ki Baat
Koo

ಹೊಸದಿಲ್ಲಿ: ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊಲದ ಬಾರಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್‌ ಕೀ ಬಾತ್‌(Mann Ki Baat) ಕಾರ್ಯಕ್ರಮ ಇಂದು ಪ್ರಸಾರವಾಗಲಿದೆ. ಬರೋಬ್ಬರಿ ಮೂರು ನಾಲ್ಕು ನಂತರ ನಡೆಯುತ್ತಿರುವ ಈ ರೇಡಿಯೋ ಕಾರ್ಯಕ್ರಮದ ಬೆಳಗ್ಗೆ 11 ಗಂಟೆಗೆ ಪ್ರಸಾವಾಗಲಿದೆ. ಈ ಬಾರಿ ಹಲವು ಮಹತ್ವದ ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡುವ ನಿರೀಕ್ಷೆ ಇದೆ.

ಇನ್ನು ಈ ಬಗ್ಗೆ ಪ್ರಧಾನಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದು, ಮತ್ತೆ ನಿಮ್ಮನ್ನು ಭೇಟಿಯಾಗುತ್ತಿರುವುದು ಸಂತಸದ ವಿಚಾರ. ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಬೆಳಗ್ಗೆ 11ಗಂಟೆಗೆ ಭೇಟಿಯಾಗೋಣ ಎಂದಿದ್ದಾರೆ.

ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾದಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳನ್ನು ಹೊರತುಪಡಿಸಿ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.

ಇನ್ನು ನಿನ್ನೆಯಷ್ಟೇ ಐಸಿಸಿ ಟಿ 20 ವಿಶ್ವಕಪ್ (T20 World Cup 2024 ) ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಫೈನಲ್ ನಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು 7 ರನ್ ಗಳಿಂದ ಸೋಲಿಸಿತು. ರೋಹಿತ್ ಶರ್ಮಾ ಮತ್ತು ತಂಡವು 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ದೇಶಕ್ಕೆ ತಂದಿತು ಮತ್ತು 2011 ರ ನಂತರ ಭಾರತದ ಮೊದಲ ವಿಶ್ವಕಪ್ ಗೆಲುವಾಗಿದೆ.

ಚಾಂಪಿಯನ್ಸ್! ನಮ್ಮ ತಂಡವು ಟಿ 20 ವಿಶ್ವಕಪ್ ಅನ್ನು ತನ್ನದೇ ಶೈಲಿಯಲ್ಲಿ ಮನೆಗೆ ತರುತ್ತಿದೆ. ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ದೇಶ

Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Indian Armed Forces: ಜನರಲ್‌ ದ್ವಿವೇದಿ ಅವರ ರೋಲ್‌ ನಂಬರ್‌ 931 ಹಾಗೂ ಅಡ್ಮಿರಲ್‌ ತ್ರಿಪಾಠಿ ಅವರು ರೋಲ್‌ ನಂಬರ್‌ 938. ಶಾಲಾ ದಿನಗಳಿಂದಲೇ ಇವರಿಬ್ಬರೂ ಸ್ನೇಹಿತರಾಗಿದ್ದು, ಇಬ್ಬರೂ ಜೊತೆಯಾಗಿಯೇ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಇದಾದ ಬಳಿಕ ಇಬ್ಬರೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

VISTARANEWS.COM


on

Indian Armed Forces
Koo

ಹೊಸದಿಲ್ಲಿ: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಸೇನೆ(Indian Army) ಮತ್ತು ನೌಕಾಪಡೆ(Navy)ಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ(Indian Armed Forces). ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ(Upendra Dwivedi) ಹಾಗೂ ನೌಕಾಪಡೆ ಮುಖ್ಯಸ್ಥರಾಗಿ ಅಡ್ಮಿರಲ್‌ ದಿನೇಶ್‌ ತ್ರಿಪಾಠಿ(Dinesh Tripati) ನೇಮಕಗೊಂಡಿದ್ದಾರೆ. ಇವರಿಬ್ಬರೂ 70ರ ದಶಕದಲ್ಲಿ ಮಧ್ಯಪ್ರದೇಶದ ರೇವಾ ಸೈನಿಕ ಶಾಲೆಯಲ್ಲಿ 5A ತರಗತಿಯಲ್ಲಿ ಜೊತೆಯಲ್ಲಿ ಓದಿದ್ದರು.

ಇವರಿಬ್ಬರೂ ಶಾಲಾ ದಿನಗಳಿಂದ ಬಹಳ ಬಾಂದವ್ಯದಿಂದ ಇದ್ದರು. ಜನರಲ್‌ ದ್ವಿವೇದಿ ಅವರ ರೋಲ್‌ ನಂಬರ್‌ 931 ಹಾಗೂ ಅಡ್ಮಿರಲ್‌ ತ್ರಿಪಾಠಿ ಅವರು ರೋಲ್‌ ನಂಬರ್‌ 938. ಶಾಲಾ ದಿನಗಳಿಂದಲೇ ಇವರಿಬ್ಬರೂ ಸ್ನೇಹಿತರಾಗಿದ್ದು, ಇಬ್ಬರೂ ಜೊತೆಯಾಗಿಯೇ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಇದಾದ ಬಳಿಕ ಇಬ್ಬರೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ರಕ್ಷಣಾ ಸಚಿವರ ಅಧಿಕೃತ ವಕ್ತಾರ ಎ ಭರತ್ ಭೂಷಣ್ ಬಾಬು ಅವರು ಎಕ್ಸ್ ಪೋಸ್ಟ್‌ನಲ್ಲಿ, “ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಮೊದಲ ಬಾರಿಗೆ, ಒಂದೇ ಶಾಲೆಯ ವಿದ್ಯಾರ್ಥಿಗಳು ನೌಕಾಪಡೆ ಮತ್ತು ಸೇನಾ ಮುಖ್ಯಸ್ಥರಾಗಿದ್ದಾರೆ. ಇಬ್ಬರು ಅದ್ಭುತ ವಿದ್ಯಾರ್ಥಿಗಳು ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. 50 ವರ್ಷಗಳ ನಂತರ ಜೊತೆಯಾಗಿ ಇಬ್ಬರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಎರಡು ತಿಂಗಳ ಅಂತರದಲ್ಲಿ ಇಬ್ಬರು ಸಹಪಾಠಿಗಳ ನೇಮಕಾತಿಗಳು ಒಂದೇ ಸಮಯದಲ್ಲಿ ಬಂದಿವೆ. ಅಡ್ಮಿರಲ್ ಅವರು ಮೇ 1 ರಂದು ಭಾರತೀಯ ನೌಕಾಪಡೆಯ ಕಮಾಂಡ್ ಅನ್ನು ವಹಿಸಿಕೊಂಡರು, ಲೆಫ್ಟಿನೆಂಟ್ ಜನರಲ್ ದ್ವಿವೇದಿ ಇಂದು (ಜೂನ್ 30) ತಮ್ಮ ಹೊಸ ನೇಮಕಾತಿಯನ್ನು ವಹಿಸಿಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಯಾರು?

ಜುಲೈ 1, 1964 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಸೆಂಬರ್ 15, 1984 ರಂದು ಭಾರತೀಯ ಸೇನೆಯ ಪದಾತಿ ದಳಕ್ಕೆ (ಜಮ್ಮು ಮತ್ತು ಕಾಶ್ಮೀರ ರೈಫಲ್ಸ್) ನೇಮಕಗೊಂಡರು. ಸುಮಾರು 40 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಉತ್ತರ ಸೇನಾ ಕಮಾಂಡರ್ ಆಗಿ ಸುದೀರ್ಘ ಅಧಿಕಾರಾವಧಿಯನ್ನು ಹೊಂದಿದ್ದರು, ಅಲ್ಲಿ ಅವರು ಪೂರ್ವ ಲಡಾಖ್‌ನಲ್ಲಿನ ಎಲ್‌ಎಸಿಯಲ್ಲಿನ ಮಿಲಿಟರಿ ಸ್ಟ್ಯಾಂಡ್‌ಫ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಿಗೆ ದೀರ್ಘಾವಧಿಯ ಮಾನ್ಯತೆ ಹೊಂದಿದ್ದಾರೆ.

ಅವರು ನ್ಯಾಷನಲ್ ಡಿಫೆನ್ಸ್ ಕಾಲೇಜ್ ಮತ್ತು US ಆರ್ಮಿ ವಾರ್ ಕಾಲೇಜ್‌ನ ಹಳೆಯ ವಿದ್ಯಾರ್ಥಿಯೂ ಆಗಿದ್ದಾರೆ ಮತ್ತು DSSC ವೆಲ್ಲಿಂಗ್‌ಟನ್ ಮತ್ತು ಆರ್ಮಿ ವಾರ್ ಕಾಲೇಜ್, Mhow ನಲ್ಲಿ ಕೋರ್ಸ್‌ಗಳನ್ನು ಪಡೆದಿದ್ದಾರೆ. ಅಧಿಕಾರಿಯು ಡಿಫೆನ್ಸ್ ಮತ್ತು ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಎಂ ಫಿಲ್ ಮತ್ತು ಸ್ಟ್ರಾಟೆಜಿಕ್ ಸ್ಟಡೀಸ್ ಮತ್ತು ಮಿಲಿಟರಿ ಸೈನ್ಸ್‌ನಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ.

ಅಡ್ಮಿರಲ್ ದಿನೇಶ್ ತ್ರಿಪಾಠಿ ಯಾರು?

1985 ರಲ್ಲಿ ಭಾರತೀಯ ನೌಕಾಪಡೆಗೆ ನಿಯೋಜಿಸಲ್ಪಟ್ಟ ಅಡ್ಮಿರಲ್ ತ್ರಿಪಾಠಿ, ವಿವಿಧ ನಿರ್ಣಾಯಕ ಕಾರ್ಯಯೋಜನೆಗಳಲ್ಲಿ ಸೇವೆ ಸಲ್ಲಿಸಿದ, ಸುಮಾರು 40 ವರ್ಷಗಳ ಅನುಭವ ಇರುವ ಹಿರಿಯ ಅಧಿಕಾರಿ. ಅವರು ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ವೆಸ್ಟರ್ನ್ ನೇವಲ್ ಕಮಾಂಡ್ ಮತ್ತು ಕೇರಳದ ಎಝಿಮಲದಲ್ಲಿರುವ ಇಂಡಿಯನ್ ನೇವಲ್ ಅಕಾಡೆಮಿಯ ಕಮಾಂಡೆಂಟ್ ಮುಂತಾದ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿ ಅನುಭವಸ್ಥರು. ಅವರ ವೃತ್ತಿಜೀವನದುದ್ದಕ್ಕೂ, ಅವರು ಐಎನ್‌ಎಸ್ ವಿನಾಶ್, ಕಿರ್ಚ್ ಮತ್ತು ತ್ರಿಶೂಲ್ ಸೇರಿದಂತೆ ಹಲವಾರು ನೌಕಾ ಹಡಗುಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ: Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Continue Reading
Advertisement
T20 World Cup 2024
ಕ್ರೀಡೆ5 mins ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೆಟಿವ್​ ವಿಷ್‌

Road Accident
ಮೈಸೂರು43 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ51 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್55 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ1 hour ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ1 hour ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್2 hours ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ2 hours ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌