Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ - Vistara News

ಕ್ರಿಕೆಟ್

Virat Kohli: ಶ್ರೀಲಂಕಾದ ಮಾಜಿ ಆಟಗಾರನ ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆ್ಯಂಡಿಗುವಾ: ಭಾರತ ತಂಡ ಇಂದು ನಡೆಯುವ ಟಿ20 ವಿಶ್ವಕಪ್​ನ(T20 World Cup 2024) ಸೂಪರ್​-8 ಪಂದ್ಯದಲ್ಲಿ(IND vs BAN Super 8 Match) ಬಾಂಗ್ಲಾದೇಶದ ಸವಾಲು ಎದುರಿಸಲಿದೆ. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ಕಳೆದ 4 ಪಂದ್ಯಗಳಲ್ಲಿ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದ್ದ ಕೊಹ್ಲಿ ಈ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶಿಸುವ ಆತ್ಮವಿಶ್ವಾಸದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಬಾಂಗ್ಲಾ ಎದುರಿನ ಪಂದ್ಯದಲ್ಲಿ 8 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ(most fours in T20 World Cup) ಬಾರಿಸಿರುವ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ದಾಖಲೆಯನ್ನು ಮುರಿಯಲಿದ್ದಾರೆ. ಜಯವರ್ಧನೆ 31 ಟಿ20 ವಿಶ್ವಕಪ್​ ಪಂದ್ಯಗಳನ್ನಾಡಿ 111 ಬೌಂಡರಿ ಬಾರಿಸಿ ಸದ್ಯ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಸದ್ಯ 104* ಬೌಂಡರಿ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ಇದನ್ನೂ ಓದಿ IND vs BAN: ಇಂದಿನ ಪಂದ್ಯಕ್ಕೆ ಟೀಮ್​ ಇಂಡಿಯಾದಲ್ಲಿ ಒಂದು ಮಹತ್ವದ ಬದಲಾವಣೆ

ಅತ್ಯಧಿಕ ಬೌಂಡರಿ ಬಾರಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ31104*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಡೇವಿಡ್​ ವಾರ್ನರ್ಆಸ್ಟ್ರೇಲಿಯಾ3897*
ರೋಹಿತ್​ ಶರ್ಮ​ಭಾರತ4397*
ಜಾಸ್​ ಬಟ್ಲರ್​ಇಂಗ್ಲೆಂಡ್3381*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2971*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. ಇಂದು ನಡೆಯುವ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ತಮ್ಮ ಎಂದಿನ ಬ್ಯಾಟಿಂಗ್​ ಕ್ರಮಾಂಕ 3ನೇ ಸ್ಥಾನದಲ್ಲೇ ಆಡುವ ಸಾಧ್ಯತೆ ಇದೆ. ಯಶಸ್ವಿ ಜೈಸ್ವಾಲ್​ ಈ ಪಂದ್ಯದಲ್ಲಿ ಶಿವಂ ದುಬೆ ಸ್ಥಾನಕ್ಕೆ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆ ಇದೆ. ಬಾಂಗ್ಲಾ ವಿರುದ್ಧ ಕೊಹ್ಲಿ ಉತ್ತಮ ಬ್ಯಾಟಿಂಗ್​ ಎಕಾನಮಿ ಕೂಡ ಹೊಂದಿದ್ದಾರೆ.

ಇಂದಿನ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಎದುರಾಗಿಲ್ಲ. ಹೀಗಾಗಿ ಅಭಿಮಾನಿಗಳು ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು. ಹವಾಮಾನ ಇಲಾಖೆ ವರದಿ ಪ್ರಕಾರ, ಪಂದ್ಯ ನಡೆಯುವ ವೇಳೆ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ. ಮಳೆಯಾಗುವ ಸಾಧ್ಯತೆ ಶೇ.1ರಷ್ಟಿದೆ. ತೇವಾಂಶವು 68% ಆಗಿರುತ್ತದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ಒಟ್ಟು 34 ಟಿ 20 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು 16 ಪಂದ್ಯಗಳನ್ನು ಗೆದ್ದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Rohit Sharma: ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿಕೊಟ್ಟಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Rohit Sharma
Koo

ನವದೆಹಲಿ: 2022 ಕತಾರ್​ನಲ್ಲಿ ನಡೆದ ಫಿಫಾ ಫುಟ್ಬಾಲ್​​​​​​​​​ ವಿಶ್ವ ಕಪ್(Fifa World Cup 2022) ರೋಮಾಂಚನಕಾರಿ ಫೈನಲ್​ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ(Lionel Messi) ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫ್ರಾನ್ಸ್​ ತಂಡವನ್ನು ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಆಗಿ ಹೊರಮೊಮ್ಮಿತ್ತು. ಲಿಯೋನೆಲ್ ಮೆಸ್ಸಿ ಅವರು ವಿಭಿನ್ನ ಶೈಲಿಯಲ್ಲಿ ಬಂದು ಕಪ್​ ಎತ್ತಿ ಹಿಡಿಯುವ ಮೂಲಕ ಫೋಟೊಗೆ ಫೋಸ್​ ಕೊಟ್ಟಿದ್ದರು. ಶನಿವಾರ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಚಾಂಪಿಯನ್(T20 World Cup final)​ ಪಟ್ಟ ಅಲಂಕರಿಸಿದ ಭಾರತ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಕೂಡ ಮೆಸ್ಸಿಯ ಶೈಲಿಯಲ್ಲೇ ವಿಶ್ವಕಪ್​ ಎತ್ತಿ ಹಿಡಿದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳುತ್ತಾರೆ. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದಾರೆ. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದು ಕಂಡುಬಂತು.

ಇದನ್ನೂ ಓದಿ T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

ಅಂದು ನಡೆದಿದ್ದ ರಣರೋಚಕ ಫುಟ್ಬಾಲ್​ ಫೈನಲ್​ ಪಂದ್ಯದಲ್ಲಿ ಪೂರ್ಣ ಅವಧಿ 90 ನಿಮಿಷ ಹಾಗೂ ಹೆಚ್ಚುವರಿ 30 ನಿಮಿಷಗಳ ಆಟದಲ್ಲಿ ಇತ್ತಂಡಗಳು 3-3 ಗೋಲ್​ಗಳನ್ನು ಬಾರಿಸಿದ ಕಾರಣ ಫಲಿತಾಂಶಕ್ಕೆ ಪೆನಾಲ್ಟಿ ಮೊರೆ ಹೋಗಲಾಯಿತು. ಅಲ್ಲಿ ಅರ್ಜೆಂಟೀನಾ 4-2 ಗೋಲ್​ಗಳ ಅಂತರದಿಂದ ಗೆದ್ದು ವಿಜಯೋತ್ಸವ ಆಚರಿಸಿತ್ತು.

ಮೆಸ್ಸಿ ಸಂಭ್ರಮಿಸಿದ ಕ್ಷಣ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರೀಡೆ

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

T20 World Cup 2024:ಎರಡನೇ ಬಾರಿ ಟಿ20 ವಿಶ್ವಕಪ್‌ ಗೆದ್ದುಕೊಂಡ ಟೀಮ್‌ ಇಂಡಿಯಾಕ್ಕೆ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ವಿವಿದ ಕ್ಷೇತ್ರಗಳ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೇ ವೇಳೆ ದೆಹಲಿ, ಉತ್ತರ ಪ್ರದೇಸ ಮತ್ತು ಮುಂಬೈ ಪೊಲೀಸರು ವಿಶಿಷ್ಟವಾಗಿ ಅಭಿನಂದನೆ ಸಲ್ಲಿಸಿ ಗಮನ ಸೆಳೆದಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್​ 2024 (T20 World Cup 2024ಫೈನಲ್​ನಲ್ಲಿ ಟೀಮ್ ಇಂಡಿಯಾ (Team India) ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಸುಮಾರು 17 ವರ್ಷಗಳ ಬಳಿಕ ಕಪ್‌ ತನ್ನದಾಗಿಸಿಕೊಂಡಿದೆ. ಈ ಸಾಧನೆ ಮಾಡಿದ ರೋಹಿತ್‌ ಶರ್ಮಾ (Rohit Sharma) ಬಳಗಕ್ಕೆ ಅಭಿನಂದನೆಗಳ ಪ್ರವಾಹವೇ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಮಧ್ಯೆ ವಿವಿಧ ಪೊಲೀಸ್‌ ಘಟಕಗಳು ಕ್ರಿಯೇಟಿವ್ ಆಗಿ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿವೆ. ಟೀಮ್‌ ಇಂಡಿಯಾಕ್ಕೆ ವಿಷ್‌ ಮಾಡುವ ಜತೆಗೆ ಟ್ರಾಫಿಕ್‌ ಜಾಗೃತಿಯನ್ನೂ ಮೂಡಿಸುತ್ತಿವೆ.

ʼʼಟೀಮ್‌ ಇಂಡಿಯಾ ಎರಡನೇ ಬಾರಿ ಟಿ20 ವಿಶ್ವಕಪ್‌ ಚಾಂಪಿಯನ್‌ ಆಗುವುದನ್ನು ನೋಡಲು ಸುಮಾರು 16 ವರ್ಷ 9 ತಿಂಗಳು ಮತ್ತು 5 ದಿನ (52,70,40,000 ಸೆಕೆಂಡ್‌) ಕಾದಿದ್ದೇವೆ. ಇದೇ ರೀತಿ ಟ್ರಾಫಿಕ್‌ ಸಿಗ್ನಲ್‌ನಲ್ಲಿಯೂ ಸ್ವಲ್ಪ ಹೊತ್ತು ತಾಳ್ಮೆಯಿಂದ ಕಾಯಿರಿ. ಉತ್ತಮ ಕ್ಷಣಕ್ಕಾಗಿ ಕಾಯುವುದರಲ್ಲಿ ಯಾವುದೇ ತಪ್ಪಿಲ್ಲ. ಏನಂತೀರಾ? ಟೀಮ್‌ ಇಂಡಿಯಾಕ್ಕೆ ಹೃತೂರ್ವಕ ಅಭಿನಂದನೆಗಳುʼʼ ಎಂದು ದೆಹಲಿ ಪೊಲೀಸ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಇನ್ನು ಉತ್ತರ ಪ್ರದೇಶ ಪೊಲೀಸರೂ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಮಜವಾದ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಭಾರತೀಯ ಬೌಲರ್‌ಗಳ ಪ್ರದರ್ಶನವನ್ನು ಕ್ರಿಮಿನಲ್ ಕೃತ್ಯಕ್ಕೆ ಹೋಲಿಸುವ ತಮ್ಮ ಹಾಸ್ಯ ಪ್ರಜ್ಞೆಯನ್ನು ಮೆರೆದಿದ್ದಾರೆ. ʼʼಬ್ರೇಕಿಂಗ್‌ ನ್ಯೂಸ್‌: ದಕ್ಷಿಣ ಆಫ್ರಿಕನ್ನರ ಹೃದಯ ಚೂರು ಮಾಡಿದ ಭಾರತೀಯ ಬೌಲರ್‌ಗಳು ತಪ್ಪಿತಸ್ಥರು ಎಂದು ಸಾಬೀತಾಗಿದೆ. ಇದಕ್ಕಿರುವ ಶಿಕ್ಷೆ: ಕೋಟ್ಯಂತರ ಅಭಿಮಾನಿಗಳಿಂದ ಜೀವಮಾನದ ಪ್ರೀತಿʼʼ ಎಂದು ಬರೆದುಕೊಂಡಿದ್ದಾರೆ.

ಮುಂಬೈ ಟ್ರಾಫಿಕ್‌ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ಕ್ರಿಯಾತ್ಮಕತೆಯನ್ನು ಪ್ರದರ್ಶಿಸಿದ್ದಾರೆ. ʼʼIND 29 June 2024ʼʼ ನಂಬರ್‌ ಪ್ಲೇಟ್‌ ಹೊಂದಿರುವ ಕಾರನ್ನು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಲಾಯಿಸುತ್ತಿರುವಂತೆ ಫೋಟೊ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ʼʼನಂಬರ್‌ ಪ್ಲೇಟ್‌ನ ಕನಸು ನನಸಾಗಿದೆʼʼ ಎಂದು ಕ್ಯಾಪ್ಶನ್‌ ನೀಡಿದ್ದಾರೆ. ಒಟ್ಟಿನಲ್ಲಿ ಟೀಮ್‌ ಇಂಡಿಯಾಕ್ಕೆ ವಿಧ ವಿಧ ಮೀಮ್ಸ್‌, ವಿಡಿಯೊ ಮೂಲಕ ಅಭಿನಂದನೆ ಸಲ್ಲಿಸಲಾಗುತ್ತಿದೆ.

ಭಾರತ ಕಪ್‌ ಜಯಶಾಲಿಯಾಗುತ್ತಿದ್ದಂತೆ ಭಾರತದ ಎಲ್ಲೆಡೆ ಸಡಗರ ಮನೆ ಮಾಡಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಅಭಿಮಾನಿಗಳು ಭಾರತದ ಗೆಲುವನ್ನು ಕೊಂಡಾಡಿದರು. ಬೆಂಗಳೂರು, ಪಾಟ್ನಾ, ಪುಣೆ, ಮುಂಬೈ, ಹೈದರಾಬಾದ್‌, ಜಮ್ಮು ಮತ್ತು ಕಾಶ್ಮೀರ ಮುಂತಾದೆಡೆ ಮಧ್ಯರಾತ್ರಿಯನ್ನೂ ಲೆಕ್ಕಿಸದೆ ಅಭಿಮಾನಿಗಳು ಬೀದಿಗಿಳಿದು ಕುಣಿದು ಕುಪ್ಪಳಿಸಿದರು. ಕೆಲವೆಡೆ ರಸ್ತೆ ತೆರವುಗೊಳಿಸಲು ಪೊಲೀಸರು ಮಧ್ಯೆ ಪ್ರವೇಶಿಸಬೇಕಾಯಿತು.

ಭಾರತ ಮಾತ್ರವಲ್ಲ ವಿದೇಶದಲ್ಲಿಯೂ ಸಂಭ್ರಮಾಚರಣೆ ಕಂಡು ಬಂತು. ಅಮೆರಿಕ, ಇಂಗ್ಲೆಂಡ್‌ ಮುಂತಾದೆಡೆಗಳ ಭಾರತೀಯರು ಒಟ್ಟು ಸೇರಿ ಟೀಮ್‌ ಇಂಡಿಯಾ ಗೆಲುವಿಗೆ ಹರ್ಷಾಚರಣೆ ನಡೆಸಿದರು.

ಇದನ್ನೂ ಓದಿ: T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

Continue Reading

ಕ್ರೀಡೆ

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

T20 World Cup 2024: ಟಿ20 ವಿಶ್ವಕಪ್​ 2024 ಚಾಂಪಿಯನ್‌ ಆಗಿ ಹೊರ ಹೊಮ್ಮಿರುವ ಟೀಮ್‌ ಇಂಡಿಯಾ ತಂಡಕ್ಕೆ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಜತೆಗೆ ವಿಶ್ವದ ನಾನಾ ಕಡೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ವೈರಲ್‌ ಆಗಿದೆ.

VISTARANEWS.COM


on

T20 World Cup 2024
Koo

ಲಂಡನ್‌: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ವಿಶ್ವಾದ್ಯಂತ ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿಯೂ ಭಾರತೀಯರ ಸಡಗರ ಮುಗಿಲು ಮುಟ್ಟಿದ್ದು, ಸಾವಿರಾರು ಮಂದಿ ಜಮಾಯಿಸಿ ಸಂತಸ ಹಂಚಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕ್ವೀನ್ಸ್ಬರಿ ಟ್ಯೂಬ್ ನಿಲ್ದಾಣ (Queensbury tube station)ದ ಹೊರಗಿನ ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ (Viral Video).

ಧ್ವಜ ಕಟ್ಟಲು ಕಂಬ ಏರಿದ ಅಭಿಮಾನಿ ಕೈ ಜಾರಿ ನೆಲಕ್ಕೆ ಬೀಳುವುದು ವಿಡಿಯೊದಲ್ಲಿ ಕಂಡು ಬಂದಿದೆ. ಅವರ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಳಿಕ ಎದ್ದ ಓಡಾಡಿದ್ದಾರೆ. ಆ ಮೂಲಕ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ.

ನಗರದ ಈಲಿಂಗ್ ರಸ್ತೆಯ ಮತ್ತೊಂದು ಭಾಗದಲ್ಲಿಯೂ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಬಂಧನಕ್ಕೆ ಕಾರಣ ತಿಳಿದಿಲ್ಲ. ಇತ್ತ ಹ್ಯಾರೋದಲ್ಲಿ ಅಭಿಮಾನಿಗಳು ಪಟಾಕಿಗಳು ಸಿಡಿಸಿ ಸಂತಸ ಹಂಚಿಕೊಂಡಿದ್ದಾರೆ.

ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸುವ ಮೂಲಕ ಭಾರತವು 17 ವರ್ಷಗಳ ನಂತರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಮತ್ತು ಹಾರ್ದಿಕ್ ಪಾಂಡ್ಯ ಅವರ ನಿರ್ಣಾಯಕ ಮೂರು ವಿಕೆಟ್‌ಗಳು ಭಾರತವು ಎರಡನೇ ಐಸಿಸಿ ಟಿ20 ವಿಶ್ವಕಪ್‌ ಗೆಲ್ಲಲು ನೆರವಾಯಿತು. ಈ ಗೆಲುವಿನ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

ಬಹುಮಾನದ ಮೊತ್ತ

ಭಾರತ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಲಭಿಸಿದೆ. $ 2.45 ಮಿಲಿಯನ್ ಯುಎಸ್‌ಡಿ (20,42,49,000 ರೂ.) ಪಡೆದಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 ಯುಎಸ್‌ಡಿ (10,68,06,400 ರೂ.) ಲಭಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಟೀಮ್​ ಇಂಡಿಯಾಕ್ಕೆ ಧನ್ಯವಾದ ತಿಳಿಸಿದ ಧೋನಿ

ಟೀಮ್​ ಇಂಡಿಯಾಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಕೊಟ್ಟ ನಾಯಕ ಮಹೇಂದ್ರ ಸಿಂಗ್​ ಧೋನಿ ವಿಶೇಷವಾಗಿ ಶುಭ ಹಾರೈಸಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಮುಂಚಿತವಾಗಿಯೇ ಸ್ಮರಣೀಯ ಉಡುಗೊರೆ ನೀಡಿದ್ದಕ್ಕೆ ಟೀಮ್​ ಇಂಡಿಯಾಕ್ಕೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಚಾಂಪಿಯನ್​ ತಂಡದ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಧೋನಿ, ನನ್ನ ಎದೆ ಬಡಿತ ಹೆಚ್ಚಾಗಿತ್ತು. ಆದರೆ ದೃಢ ನಂಬಿಕೆಯೊಂದಿಗೆ ನೀವೆಲ್ಲರೂ ಉತ್ತಮವಾಗಿ ಆಡಿದ್ದೀರಿ. ತವರಿನ ಮತ್ತು ವಿಶ್ವದೆಲ್ಲಡೆ ಇರುವ ಎಲ್ಲಾ ಭಾರತೀಯರಿಂದ, ವಿಶ್ವಕಪ್ ಮರಳಿ ಮನೆಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅಭಿನಂದನೆಗಳು. ಜತೆಗೆ ನನ್ನ ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು” ಎಂದು ಧೋನಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

Continue Reading

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Rohit Sharma: ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ದೈವಾವೇಷದ ದೈವನರ್ತನ ಪಾತ್ರವು ಭಾರಿ ಗಮನ ಸೆಳೆದಿತ್ತು. ಇದೇ ದೈವ ನರ್ತಕನು, 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿಕೊಟ್ಟ ಸಂಭ್ರಮದಲ್ಲಿ ಮೈದಾನದಲ್ಲೇ ಮಲಗಿದ ನಾಯಕ ರೋಹಿತ್​ ಶರ್ಮ ಅವರಿಗೆ ಆಶೀರ್ವಾದ ಮಾಡುವ, ಸ್ಫೂರ್ತಿ ತುಂಬಿ ಬಡಿದೆಬ್ಬಿಸುವ ರೀತಿಯ ಫೋಟೊಗಳನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ

VISTARANEWS.COM


on

Koo

ಬಾರ್ಬಡೋಸ್​: ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕಳೆದ 13 ವರ್ಷಗಳಿಂದ ಶಬರಿ ರಾಮನಿಗೆ ಕಾದಂತೆ ಕಾಯುತ್ತಿದ್ದ ಐಸಿಸಿ ಟ್ರೋಫಿ ಕನಸು ಕೊನೆಗೂ ನನಸಾಗಿದೆ. ಶನಿವಾರ ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(T20 World Cup 2024)​ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು(South Africa vs India) ಮಣಿಸಿ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿತು. ಈ ಸಾಧನೆಗೆ ತಂಡದ ನಾಯಕ ರೋಹಿತ್​ ಶರ್ಮಗೆ(Rohit Sharma) ಕನ್ನಡದ ಕಾಂತಾರ(kantara) ಸಿನಿಮಾದ ಪಂಜುರ್ಲಿ ದೈವ(kantara panjurli) ಆಶೀರ್ವಾದ ಮಾಡಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ.

ಹೌದು, ಕಾಂತಾರ ಸಿನಿಮಾದಲ್ಲಿ ಪಂಜುರ್ಲಿ ದೈವಾವೇಷದ ದೈವನರ್ತನ ಪಾತ್ರವು ಭಾರಿ ಗಮನ ಸೆಳೆದಿತ್ತು. ಇದೇ ದೈವ ನರ್ತಕನು, 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆಲ್ಲಿಸಿಕೊಟ್ಟ ಸಂಭ್ರಮದಲ್ಲಿ ಮೈದಾನದಲ್ಲೇ ಮಲಗಿದ ನಾಯಕ ರೋಹಿತ್​ ಶರ್ಮ ಅವರಿಗೆ ಆಶೀರ್ವಾದ ಮಾಡುವ, ಸ್ಫೂರ್ತಿ ತುಂಬಿ ಬಡಿದೆಬ್ಬಿಸುವ ರೀತಿಯ ಫೋಟೊಗಳನ್ನು ನೆಟ್ಟಿಗರು ಹಂಚಿಕೊಂಡಿದ್ದಾರೆ. “ಕಾಂತಾರದ ಪಂಜುರ್ಲಿ ದೈವವು ಭಾರತ ತಂಡದ ಗೆಲುವಿಗೆ ಮತ್ತು ರೋಹಿತ್​ ಅವರ ಕನಸಿನ ವಿಶ್ವಕಪ್​ ಗೆಲ್ಲುವಲ್ಲಿ ನೆರವಾಯಿತು” ಎಂದೆಲ್ಲ ನೆಟ್ಟಿಗರು ಬರೆದುಕೊಂಡಿದ್ದಾರೆ. ಈ ಫೋಟೊಗಳು ಹಾಗೂ ಪೋಸ್ಟ್‌ಗಳು ಭಾರಿ ವೈರಲ್‌ ಆಗಿವೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಈ ಗೆಲುವಿನ ಸವಿ ನೆನಪಿಗಾಗಿ ರೋಹಿತ್​ ಕೆನ್ಸಿಂಗ್ಟನ್‌ ಓವಲ್​ ಪಿಚ್​ನಿಂದ ಒಂದು ಚಿಟಿಕೆ ಮಣ್ಣು ಬಾಯಿಗೆ ಹಾಕಿದ್ದಾರೆ. ಗೆಲುವಿಗೆ ನೆರವಾದ ಈ ಮೈದಾನದ ಋಣವನ್ನು ತೀರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

Continue Reading
Advertisement
Rohit Sharma
ಕ್ರೀಡೆ3 mins ago

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Karave Protest
ಕರ್ನಾಟಕ4 mins ago

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

T20 World Cup 2024
ಕ್ರೀಡೆ18 mins ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

Road Accident
ಮೈಸೂರು56 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ1 hour ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್1 hour ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ1 hour ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ2 hours ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು2 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್2 hours ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು2 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ22 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌