Ms/Mrs india Karnataka Audition: ಮಿಸ್‌&ಮಿಸೆಸ್‌ ಇಂಡಿಯಾ ಕರ್ನಾಟಕ 8ನೇ ಆವೃತ್ತಿಗೆ ಆಡಿಷನ್‌ - Vistara News

ಫ್ಯಾಷನ್

Ms/Mrs india Karnataka Audition: ಮಿಸ್‌&ಮಿಸೆಸ್‌ ಇಂಡಿಯಾ ಕರ್ನಾಟಕ 8ನೇ ಆವೃತ್ತಿಗೆ ಆಡಿಷನ್‌

Ms/Mrs india Karnataka Audition: ಮಿಸ್‌ ಮತ್ತು ಮಿಸೆಸ್‌ ಇಂಡಿಯಾ ಕರ್ನಾಟಕ 8ನೇ ಆವೃತ್ತಿಯ ಆಡಿಷನ್‌ ಬೆಂಗಳೂರಿನ ಟುಲಿಪ್‌ ಇನ್‌ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಇದರಲ್ಲಿ, ವಯಸ್ಸಿನ ಭೇದ-ಭಾವವಿಲ್ಲದೇ ನಾನಾ ಯುವತಿಯರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು. ಈ ಕುರಿತಂತೆ ಇಲ್ಲಿದೆ ವರದಿ.

VISTARANEWS.COM


on

Ms or Mrs india Karnataka Audition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಮಿಸ್‌/ಮಿಸೆಸ್‌ ಇಂಡಿಯಾ ಕರ್ನಾಟಕ (Ms/Mrs india Karnataka Audition) ಕೀರೀಟ ತಮ್ಮದಾಗಿಸಿಕೊಳ್ಳಲು ಯುವತಿಯರು ಹಾಗೂ ಮಹಿಳೆಯರು ಮುಂದಾಗಿದ್ದಾರೆ. ಹೌದು, ಫ್ಯಾಷನ್‌ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಕನಸು ಹೊಂದಿದ ಮಹಿಳೆಯರು ಇಂದು ಮಿಸ್‌ ಮತ್ತು ಮಿಸೆಸ್‌ ಇಂಡಿಯಾ ಕರ್ನಾಟಕ 8ನೇ ಆವೃತ್ತಿಯ ಆಡಿಷನ್‌ನಲ್ಲಿ ಸಂತಸದಿಂದ ಪಾಲ್ಗೊಂಡರು. ಉದ್ಯಾನನಗರಿಯ ಟುಲಿಪ್‌ ಇನ್‌ ಹೋಟೆಲ್‌ನಲ್ಲಿ ಬೆಳಗ್ಗೆಯಿಂದಲೇ ಆರಂಭಗೊಂಡ ಆಡಿಷನ್‌ನಲ್ಲಿ ನಾನಾ ವರ್ಗದ, ವಯಸ್ಸಿನ ಮಹಿಳೆಯರು ಅತ್ಯುತ್ಸಾಹದಿಂದ ಭಾಗವಹಿಸಿದರು.

Ms or Mrs india Karnataka Audition

ಪ್ರತಿಭಾ ಸಂಶಿಮಠ್‌ ನೇತೃತ್ವ

ಈ ಪೇಜೆಂಟ್‌ ಆಡಿಷನ್‌ನ ನೇತೃತ್ವವನ್ನು ಪೇಜೆಂಟ್‌ನ ಕರ್ನಾಟಕ ಡೈರೆಕ್ಟರ್ ಪ್ರತಿಭಾ ಸಂಶಿಮಠ್‌ ವಹಿಸಿದ್ದರು. ನಿರೂಪಣೆಯೊಂದಿಗೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

Ms or Mrs india Karnataka Audition

ಮಹಿಳೆಯರಿಗೆ ಪ್ರೋತ್ಸಾಹ

ಪಾಲ್ಗೊಂಡ ಮಹಿಳೆಯರನ್ನು ಪ್ರೋತ್ಸಾಹಿಸುತ್ತಾ, ಅವರ ಕ್ಷೇತ್ರ ಹಾಗೂ ಇತರೇ ವಿಷಯಗಳನ್ನು ಪ್ರಸ್ತಾಪಿಸುತ್ತಾ , ಎಲ್ಲರನ್ನೂ ಪರಿಚಯಿಸಿದರು. ರಾಜ್ಯದ ನಾನಾ ಕಡೆಯಿಂದ ಬಂದಂತಹ ಸ್ಪರ್ಧಾಳುಗಳಿಗೆ ಹುರಿದುಂಬಿಸಿದರು. ಒಬ್ಬೊಬ್ಬರಿಗೂ ಮುಂಬರುವ ಪೇಜೆಂಟ್‌ನ ಬಗ್ಗೆ ಸವಿವರವಾಗಿ ವಿವರಿಸಿದರು.

Ms or Mrs india Karnataka Audition

ಮಿಸ್‌ ಇಂಡಿಯಾ ಕರ್ನಾಟಕ ಟೈಟಲ್‌ಗೂ ನಡೆದ ಆಡಿಷನ್‌

ಹೊಸದಾಗಿ ಸೇರಿಸಲಾಗಿರುವ ಮಿಸ್‌ ಇಂಡಿಯಾ ಕರ್ನಾಟಕ ಟೈಟಲ್‌ ಅನ್ನು ಇದೇ ಮಿಸೆಸ್‌ ಪೇಜೆಂಟ್‌ನಲ್ಲಿ ಸೇರಿಸಲಾಗಿದ್ದು, 16 ವರ್ಷ ಪೂರ್ಣಗೊಳಿಸಿರುವ ಅವಿವಾಹಿತರಿಗೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಪ್ರತಿಭಾ ಸಂಶಿಮಠ್‌ ವಿವರಿಸಿದರು.

Ms or Mrs india Karnataka Audition

ನಾನಾ ವಯೋಮಾನದವರ ಪಾಲ್ಗೊಳ್ಳುವಿಕೆ

ಇನ್ನು, ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಮಿಸೆಸ್‌ ಇಂಡಿಯಾ ಕರ್ನಾಟಕ ಪೇಜೆಂಟ್‌ನಲ್ಲಿ ಭಾಗವಹಿಸಲು ಇಚ್ಛಿಸುವ ನಾನಾ ವಯೋಮಾನದವರಿಗೆ ಪ್ರತ್ಯೇಕ ಗುಂಪುಗಳನ್ನು ರೂಪಿಸಲಾಗಿತ್ತು. 22-40 ರೊಳಗಿನ ವಯೋಮಾನದವರು, 41-60 ಹಾಗೂ 60ರ ಮೇಲ್ಪಟ್ಟವರು ಈ ಅಡಿಷನ್‌ನಲ್ಲಿ ಪಾಲ್ಗೊಂಡಿದ್ದರು.

ಅಡಿಷನ್‌ನಲ್ಲಿ ಭಾಗವಹಿಸಿದ ಸೆಲೆಬ್ರೆಟಿಗಳು

ಈ ಆಡಿಷನ್‌ನಲ್ಲಿ, ಮಿಸ್‌ ಕೆನಡಾ ಸೌತ್‌ ಏಷಿಯಾ 2019 & ಮಿಸ್‌ ಇಂಡಿಯಾ ಗ್ಲೋಬಲ್‌ 2019 ಪೂರ್ಣಿಮಾ ರಮೇಶ್‌ ವಿಶೇ‍ಷ ಅತಿಥಿಯಾಗಿ ಭಾಗವಹಿಸಿದ್ದರು. ಇವರೊಂದಿಗೆ ಬಿಗ್‌ ಬಾಸ್‌ ಸ್ಪರ್ಧಿ ಅವಿನಾಶ್‌ ಶೆಟ್ಟಿ, ಆಕ್ಸೀಸ್‌ ಬ್ಯಾಂಕ್‌ನ ಉಪಾಧ್ಯಕ್ಷೆ ಅನಿತಾ ಹರೀಶ್‌ ಹಾಗೂ ಪೇಜ್‌ ತ್ರೀ ಸೆಲೆಬ್ರೆಟಿ ಸತೀಶ್‌ ಕಡಾಬಮ್‌ ಅವರು ಕೂಡ ಪಾಲ್ಗೊಂಡಿದ್ದರು.

ಇದನ್ನೂ ಓದಿ: Twinning Fashion: ಪರ್ಫೆಕ್ಟ್ ಟ್ವಿನ್ನಿಂಗ್ ಫ್ಯಾಷನ್‌ಗೆ ಇಲ್ಲಿದೆ 5 ಐಡಿಯಾ!

ಆನ್‌ಲೈನ್‌ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್‌ ಸೈಟ್‌ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. www.mrsindiakarnataka.com ಹಾಗೂ ವಾಟ್ಸಪ್‌ ಸಂಖ್ಯೆ: 9886761457

( ಲೇಖಕಿ ಫ್ಯಾಷನ್‌ ಪತ್ರಕರ್ತೆ )

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

Kids Fashion: ಮಕ್ಕಳ ಕ್ಯೂಟ್‌ ಲುಕ್‌ಗೆ ಸಾಥ್‌ ನೀಡುವ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್!

Kids Fashion: : ಚಿಣ್ಣರ ಸೆಲೆಬ್ರೇಷನ್‌ಗೆ ಸಾಥ್‌ ನೀಡುವಂತಹ ನಾನಾ ಬಗೆಯ ಹೆಡ್‌ಬ್ಯಾಂಡ್‌ಗಳು ಕಾಲಿಟ್ಟಿದ್ದು, ಅವುಗಳಲ್ಲಿ ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಟ್ರೆಂಡಿಯಾಗಿವೆ. ಇವುಗಳಲ್ಲಿ ಯಾವ್ಯಾವ ಬಗೆಯವು ದೊರೆಯುತ್ತಿವೆ. ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

Kids Fashion: Bunny Ears Head Bands for Kids' Cute Look!
ಚಿತ್ರಗಳು : ಪಿಕ್ಸೆಲ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಮಕ್ಕಳನ್ನು ಕ್ಯೂಟಾಗಿ ಬಿಂಬಿಸುವ ಪಾರ್ಟಿ ಹಾಗೂ ಸೆಲೆಬ್ರೇಷನ್‌ಗೆ ಸಾಥ್‌ ನೀಡುವಂತಹ ನಾನಾ ಬಗೆಯ ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. “ಹೆಣ್ಣುಮಕ್ಕಳ ಕೂದಲ ಸೌಂದರ್ಯವನ್ನು ಹೆಚ್ಚಿಸುವಂತಹ ಹೇರ್‌ ಆಕ್ಸೆಸರೀಸ್‌ನಲ್ಲಿ, ಇದೀಗ ರ‍್ಯಾಬಿಟ್‌ ಹಾಗೂ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು (kids fashion) ಬಂದಿದ್ದು, ನಾನಾ ಕಲರ್‌ಗಳಲ್ಲಿ ಬಿಡುಗಡೆಗೊಂಡಿವೆ. ತಲೆಯ ಮೇಲೆ ಧರಿಸಿದಾಗ ಮಕ್ಕಳನ್ನು ಮುದ್ದು ಮುದ್ದಾಗಿ ಬಿಂಬಿಸುತ್ತವೆ. ಅಲ್ಲದೇ, ಸೆಲೆಬ್ರೇಷನ್‌ಗೆ ಸಾಥ್‌ ನೀಡುತ್ತವೆ” ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್ ರಿಂಕು. ಅವರ ಪ್ರಕಾರ, ಬನ್ನಿ ಹಾಗೂ ರ‍್ಯಾಬಿಟ್‌ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಲೆಕ್ಕವಿಲ್ಲದಷ್ಟು ವಿನ್ಯಾಸದಲ್ಲಿ ಬಂದಿರುವುದು ಬೇಡಿಕೆ ಹೆಚ್ಚಾಗಲು ಕಾರಣ ಎನ್ನುತ್ತಾರೆ.

kids fashion

ಏನಿದು ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್

ಮೊಲದ ಉದ್ದನಾದ ಕಿವಿಗಳನ್ನು ಹೋಲುವ ವಿನ್ಯಾಸದ ಹೆಡ್‌ ಬ್ಯಾಂಡ್‌ಗಳನ್ನು ಹೀಗೆ ಕರೆಯಲಾಗುತ್ತದೆ. ಕೆಲವು ಫರ್‌ನಂತಹ ಮೆಟಿರಿಯಲ್‌ನಲ್ಲಿ ದೊರೆಯುತ್ತವೆ. ಇನ್ನು ಕೆಲವು ಮಕ್ಕಳ ಬರ್ತ್ ಡೇ ಪಾರ್ಟಿಗೆ ಹೊಂದುವಂತಹ ಮಿರಮಿರ ಮಿನುಗುವ ಡಿಸೈನ್‌ನಲ್ಲಿ ಸಿಗುತ್ತವೆ. ಇನ್ನು, ಕೆಲವು ರಬ್ಬರ್‌ಬ್ಯಾಂಡ್‌ನಂತಹ ವಿನ್ಯಾಸದಲ್ಲೂ ಲಭ್ಯ. ಬ್ಲಾಸಂ ಫ್ಲವರ್ಸ್, ಸ್ಯಾಟಿನ್‌ ಫ್ಯಾಬ್ರಿಕ್‌ನ ಪೋಲ್ಕಾ ಡಾಟ್ಸ್, ಇಯರ್‌ ಮಫ್‌ ಶೈಲಿಯವು, ಎಲ್‌ಇಡಿ ಅಥವಾ ಬ್ಯಾಟರಿ ಶೆಲ್‌ನಿಂದ ಮಿರಮಿರ ಮಿನುಗುವ ಲೈಟ್ಸ್‌ನ ಹೆಡ್‌ ಬ್ಯಾಂಡ್ಸ್, ಕ್ಯಾಂಡಿ ಕಲರ್ಸ್ ಬನ್ನಿ ಹೆಡ್‌ ಬ್ಯಾಂಡ್ಸ್, ನಾಟ್‌ ಬನ್ನಿ ಹೆಡ್‌ ಬ್ಯಾಂಡ್ಸ್, ಮಲ್ಟಿ ಕಲರ್‌ನ ಬನ್ನಿ ಬ್ಯಾಂಡ್ಸ್, ಹಾಲೋಗ್ರಾಫ್‌ನ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್‌ ಚಾಲ್ತಿಯಲ್ಲಿವೆ.

ಆನ್‌ಲೈನ್‌ನಲ್ಲಿ ಬನ್ನಿಇಯರ್ಸ್ ಹೆಡ್‌ ಬ್ಯಾಂಡ್ಸ್

ಇನ್ನು, ಆನ್‌ಲೈನ್‌ನಲ್ಲಿ ರ‍್ಯಾಬಿಟ್‌ ಅಥವಾ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳ ವಿನ್ಯಾಸಗಳಿಗೆ ಬರವಿಲ್ಲ. ಮ್ಯಾಚಿಂಗ್‌ ಹೆಡ್‌ ಬ್ಯಾಂಡ್‌ನಿಂದಿಡಿದು ಚಿಣ್ಣರ ಪಾರ್ಟಿ ಹೆಡ್‌ ಬ್ಯಾಂಡ್‌ಗಳು ಲಭ್ಯ. ಆ ಮಟ್ಟಿಗೆ ಸಾಕಷ್ಟು ಆಪ್ಷನ್‌ಗಳಿವೆ ಎನ್ನುತ್ತಾರೆ ಮಾರಾಟಗಾರರು.

kids fashion

ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್ ಆಯ್ಕೆಗೆ 5 ಸಿಂಪಲ್‌ ಟಿಪ್ಸ್

  • ಪಾರ್ಟಿಗಾದಲ್ಲಿ ಆದಷ್ಟೂ ಮಿನುಗುವ ಹೆಡ್‌ ಬ್ಯಾಂಡ್ಸ್ ಆಯ್ಕೆ ಮಾಡಿ.
  • ಚಿಕ್ಕ ಮಕ್ಕಳಿಗಾದಲ್ಲಿ ಸಾಫ್ಟ್ ಫ್ಯಾಬ್ರಿಕ್‌ ಅಥವಾ ಫರ್‌ನಂತವನ್ನು ಸೆಲೆಕ್ಟ್ ಮಾಡಿ.
  • ಪುಟ್ಟ ಕಂದಮ್ಮಗಳಿಗೆ ಎಲ್‌ಇಡಿ ಲೈಟ್‌ನಂತವು ಬೇಡ. ಅದೇನಿದ್ದರೂ ಫೋಟೋಶೂಟ್‌ಗೆ ಮಾತ್ರವಿರಲಿ.
  • ಸೆಟ್‌ ಹೆಡ್‌ ಬ್ಯಾಂಡ್‌ಗಳು ದೊರೆಯುತ್ತವೆ.
  • ಕೂದಲಿಗೆ ಸಿಕ್ಕಿ ಹಾಕಿಕೊಳ್ಳದಂತಹ, ಒತ್ತದಂತಹ ಹೆಡ್‌ ಬ್ಯಾಂಡ್‌ ಆಯ್ಕೆ ನಿಮ್ಮದಾಗಿರಲಿ.

( ಲೇಖಕಿ ಫ್ಯಾಷನ್‌ ಪತ್ರಕರ್ತೆ )

ಇದನ್ನೂ ಓದಿ: Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Continue Reading

ಫ್ಯಾಷನ್

Shirt Dress Fashion: ಶರ್ಟ್ ಡ್ರೆಸ್‌ ನ್ಯೂ ಲುಕ್‌ಗೆ 3 ಸಿಂಪಲ್‌ ಐಡಿಯಾ

Shirt Dress Fashion: ನಿಮ್ಮ ಬಳಿಯಿರುವ ಶರ್ಟ್ ಡ್ರೆಸ್‌ಗೆ ಹೊಸ ಲುಕ್‌ ನೀಡಬಹುದು. ಸದಾ ಹಳೇ ಸ್ಟೈಲಿಂಗ್‌ನಲ್ಲೆ ಕಾಣಿಸಿಕೊಳ್ಳುತ್ತಿರುವ ನಿಮಗೆ ಈ ಹೊಸ ಐಡಿಯಾ ಡಿಫರೆಂಟ್‌ ಇಮೇಜ್‌ ನೀಡಬಹುದು. ಯಾವ ಬಗೆಯ ಸ್ಟೈಲಿಂಗ್‌ ನಿಮ್ಮ ಈ ಲುಕ್‌ ಬದಲಿಸಬಹುದು ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು 3 ಸಿಂಪಲ್‌ ಐಡಿಯಾ ನೀಡಿದ್ದಾರೆ.

VISTARANEWS.COM


on

Shirt Dress Fashion
ಚಿತ್ರ ಕೃಪೆ : ಪಿಕ್ಸೆಲ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಸೀಸನ್‌ ಬದಲಾದರೂ ಶರ್ಟ್ ಡ್ರೆಸ್‌ ಫ್ಯಾಷನ್‌ (Shirt Dress Fashion) ಮಾತ್ರ ಸೈಡಿಗೆ ಸರಿಯುವುದಿಲ್ಲ! ಬದಲಿಗೆ ನಾನಾ ಸ್ಟೈಲಿಂಗ್‌ಗಳಲ್ಲಿ ಡಿಫರೆಂಟ್‌ ವಿನ್ಯಾಸದಲ್ಲಿ ಆಗಾಗ್ಗೆ ಲಗ್ಗೆ ಇಡುತ್ತಲೇ ಇರುತ್ತದೆ. ಪ್ರತಿ ಹುಡುಗಿಯ ಬಳಿಯೂ ಒಂದಲ್ಲ ಒಂದು ಶರ್ಟ್ ಡ್ರೆಸ್ ಇದ್ದೇ ಇರುತ್ತದೆ. ಅದು ಸಿಂಪಲ್‌ ಆಗಿರಬಹುದು ಅಥವಾ ಪ್ರಿಂಟೆಡ್‌ ಆಗಿರಬಹುದು, ಇಲ್ಲವೇ ಚೆಕ್ಸ್, ಗಿಂಗ್ನಂ ಹೀಗೆ ನಾನಾ ವಿನ್ಯಾಸದ್ದಾಗಿರಬಹುದು. ಸದಾ ಒಂದೇ ಶೈಲಿಯಲ್ಲಿ ಇವನ್ನು ಧರಿಸಿದಲ್ಲಿ ನೋಡಲು ಒಂದೇ ತರಹದ್ದಾಗಿ ಕಾಣಿಸಬಹುದು. ಇದರ ಬದಲು ಧರಿಸುವ ಶೈಲಿಯನ್ನು ಬದಲಿಸಿದಲ್ಲಿ ನ್ಯೂ ಲುಕ್‌ ನೀಡಬಹುದು ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Shirt Dress Fashion

ಶರ್ಟ್ ಡ್ರೆಸ್‌ಗೂ ನ್ಯೂ ಲುಕ್‌

ಹೌದು. ನಿಮ್ಮ ಬಳಿಯಿರುವ ಯಾವುದೇ ಬಗೆಯ ಶರ್ಟ್ ಡ್ರೆಸ್‌ಗೆ ಹೊಸ ಲುಕ್‌ ನೀಡಬಹುದು. ಸದಾ ಹಳೇ ಸ್ಟೈಲಿಂಗ್‌ನಲ್ಲೆ ಕಾಣಿಸಿಕೊಳ್ಳುತ್ತಿರುವ ನಿಮಗೆ ಈ ಹೊಸ ಐಡಿಯಾ ಡಿಫರೆಂಟ್‌ ಇಮೇಜ್‌ ನೀಡಬಹುದು ಎನ್ನುವ ಫ್ಯಾಷನಿಸ್ಟ್‌ಗಳು, 3 ಸಿಂಪಲ್‌ ಐಡಿಯಾಗಳನ್ನು ನೀಡಿದ್ದಾರೆ. ಟ್ರೈ ಮಾಡಿ ನೋಡಿ.

ಶರ್ಟ್ ಡ್ರೆಸ್‌ಗೆ ಬಿಗ್‌ ಬಕಲ್‌ ಬೆಲ್ಟ್

ಶರ್ಟ್ ಡ್ರೆಸ್‌ಗೆ ಬಿಗ್‌ ಬೆಲ್ಟ್‌ಗಳನ್ನು ಧರಿಸಿದಲ್ಲಿ ಇಡೀ ಡ್ರೆಸ್‌ನ ಲುಕ್‌ ಬದಲಾಗುವುದು. ಜೊತೆಗೆ ನೋಡಲು ಡಿಫರೆಂಟಾಗಿ ಕಾಣಿಸುವುದು. ನೋಡಲು ಮಿಡಿ ಸ್ಕರ್ಟ್‌ನಂತೆ ಕಾಣಿಸುವುದು. ಇದೀಗ ಮಾರುಕಟ್ಟೆಯಲ್ಲಿ ದೊರೆಯುತ್ತಿರುವ ಬಕಲ್‌ ಬೆಲ್ಟ್‌ಗಳು ಹಾಗೂ ಸ್ಟೇಟ್‌ಮೆಂಟ್‌ ಬೆಲ್ಟ್‌ಗಳು ಈ ಡ್ರೆಸ್‌ಗೆ ಸಖತ್ತಾಗಿ ಮ್ಯಾಚ್‌ ಆಗುತ್ತವೆ. ಬ್ಲ್ಯಾಕ್‌ ಶೇಡ್‌ ಹೊರತುಪಡಿಸಿ, ಇತರೇ ಡಿಸೈನ್‌ ಹಾಗೂ ಕಲರ್‌ಗಳಲ್ಲೂ ಲಭ್ಯವಿರುವ ಇವನ್ನು ಧರಿಸಿದಲ್ಲಿ, ಹೊಸ ಡ್ರೆಸ್‌ನಂತೆ ಕಾಣುವುದು.

Shirt Dress Fashion

ಇನ್ನರ್‌ ಟಾಪ್‌ ಮೇಲೆ ಶರ್ಟ್ ಡ್ರೆಸ್‌

ಇನ್ನರ್‌ ಟಾಪ್‌ ಧರಿಸಿ ಅದರ ಮೇಲೆ ಶರ್ಟ್ ಡ್ರೆಸ್‌ ಧರಿಸಬಹುದು. ಆದರೆ, ಇದಕ್ಕಾಗಿ ಒಂದೆರೆಡು ಬಟನ್‌ಗಳು ಓಪನ್‌ ಆಗಿರಬೇಕು. ಆಗ ಮಾತ್ರ, ಮಿಕ್ಸ್ ಮ್ಯಾಚ್‌ ಆದಂತಿರುವ ಶರ್ಟ್ ಡ್ರೆಸ್‌ ಹೈಲೈಟಾಗುತ್ತದೆ. ಕಾಂಟ್ರಸ್ಟ್ ಶೇಡ್‌ನವನ್ನು ಧರಿಸಬಹುದು. ಬೇಕಿದ್ದಲ್ಲಿ ಶರ್ಟ್ ಡ್ರೆಸ್‌ನ ಬಟನ್‌ ಕೋಟ್‌ನಂತೆ ಅರ್ಧಂಬರ್ಧ ಓಪನ್‌ ಮಾಡಬಹುದು. ಕೋಟ್‌ ಡ್ರೆಸ್‌ನಂತೆ ಕಾಣಿಸುವುದು.

ಇದನ್ನೂ ಓದಿ: Monsoon Footwear Fashion: ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌

ಲೇಯರ್‌ ಲುಕ್‌

ಮಳೆಗಾಲದಲ್ಲೂ ಲೇಯರ್‌ ಲುಕ್‌ ನೀಡಬಹುದು. ಶರ್ಟ್ ಡ್ರೆಸ್‌ ಮೇಲೆ ತೆಳುವಾದ ಅಥವಾ ಶೀರ್‌ ಕೋಟ್‌ನಂತಹ ಲಾಂಗ್‌ ಶ್ರಗ್ಸ್ ಅಥವಾ ಜಾಕೆಟ್‌ ಧರಿಸಿದಲ್ಲಿ ಕಂಪ್ಲೀಟ್‌ ಡಿಫರೆಂಟ್‌ ಲುಕ್‌ ನೀಡುವುದರಲ್ಲಿ ಸಂಶಯವಿಲ್ಲ!

( ಲೇಖಕಿ ಫ್ಯಾಷನ್‌ ಪತ್ರಕರ್ತೆ )

Continue Reading

ಫ್ಯಾಷನ್

International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

International Mud Day: ಇಂದು ಅಂತಾರಾಷ್ಟ್ರೀಯ ಮಣ್ಣಿನ ದಿನ. ಮಣ್ಣು ಮುಕ್ಕುವುದೆಂದರೆ ಸೋಲುವ, ಮಣ್ಣೆರಚುವುದೆಂದರೆ ಹಾಳು ಮಾಡುವುದೆಂದೇ ಭಾವಿಸುವ ನಮಗೆ, ಮಣ್ಣಿನ ಸಾಂಗತ್ಯದಿಂದ ಬದುಕಿನಲ್ಲಿ ಆಗುವ ಧನಾತ್ಮಕ ಪರಿಣಾಮವನ್ನು ಅರಿಯುವುದಕ್ಕೆ ಇಂಥ ದಿನಗಳು ಅನುವು ಮಾಡಿಕೊಡುತ್ತವೆ.

VISTARANEWS.COM


on

International Mud Day
Koo

ಇಂದು ಅಂತಾರಾಷ್ಟ್ರೀಯ ಮಣ್ಣಿನ ದಿನ (International Mud Day). ಇತ್ತೀಚೆಗೆ ಮಣ್ಣಿನ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಸುದ್ದಿಯನ್ನೇ ಕೇಳುತ್ತಿರುವ ನಮಗೆ ಮಣ್ಣಿನ ದಿನವೆಂದರೆ ಕಣ್‌ ಬಿಡುವಂತಾಗುವುದು ಸಹಜ. ಅಥವಾ ಎಂದಾದರೂ ಮಣ್ಣಲ್ಲಿ ಮಣ್ಣಾಗಿ ಹೋಗುವಂಥ ಆಧ್ಯಾತ್ಮದ ಬಗ್ಗೆ ಯೋಚಿಸಲೂ ಬಹುದು. ಇಂಥ ಯಾವ ವಿಷಯಕ್ಕೂ ಅಲ್ಲ, ಮಣ್ಣಾಟ ಆಡುವುದರಲ್ಲಿರುವ ಸೊಗಸನ್ನು ಎತ್ತಿ ಹಿಡಿಯುವ ಉದ್ದೇಶ ಈ ದಿನಕ್ಕಿದೆಯಂತೆ. ಮಣ್ಣು ಮುಕ್ಕುವುದೆಂದರೆ ಸೋಲುವ, ಮಣ್ಣೆರಚುವುದೆಂದರೆ ಹಾಳು ಮಾಡುವುದೆಂದೇ ಭಾವಿಸುವ ನಮಗೆ, ಮಣ್ಣಿನ ಸಾಂಗತ್ಯದಿಂದ ಬದುಕಿನಲ್ಲಿ ಆಗುವ ಧನಾತ್ಮಕ ಪರಿಣಾಮವನ್ನು ಅರಿಯುವುದಕ್ಕೆ ಇಂಥ ದಿನಗಳು ಅನುವು ಮಾಡಿಕೊಡುತ್ತವೆ. ಮಣ್ಣೆಂದರೆ ಕೃಷಿ ಎನ್ನುವ ಜನಪ್ರಿಯ ಕಲ್ಪನೆಯೇ ಮನಸ್ಸಿಗೆ ಬರುತ್ತದೆ. ಅದು ನಿಜವೂ ಹೌದು. ಅದಲ್ಲದೆ ಮಣ್ಣಿನ ಮಡಿಕೆಗಳಲ್ಲಿ ಆಹಾರ ಬೇಯಿಸುತ್ತಿದ್ದ ದಿನಗಳಿಂದ ಹಿಡಿದು ಮಣ್ಣನ್ನು ಔಷಧಿಯಾಗಿ ಉಪಯೋಗಿಸುವವರೆಗೆ ಬಹಳಷ್ಟು ಬಗೆಯಲ್ಲಿ ಮಣ್ಣಿನೊಂದಿಗೆ ನಮಗೆ ನಂಟಿದೆ. ಮಣ್ಣು ತಿಂದು ಬಾಯಲ್ಲಿ ಬ್ರಹ್ಮಾಂಡವನ್ನೇ ತೋರಿದ ತುಂಟ ಕೃಷ್ಣನಿಂದ ತೊಡಗಿ, ಮಣ್ಣಲ್ಲಾಡುವ ಎಲ್ಲ ಮಕ್ಕಳಿಗೂ ಕಲ್ಲು-ಮಣ್ಣುಗಳೇ ಮಿತ್ರರು. ಆದರೀಗ ಮಕ್ಕಳು ಮಣ್ಣಲ್ಲಾಡುವುದಕ್ಕಿಂತ ಮೊಬೈಲ್‌ನಲ್ಲಿ ಆಡುವುದೇ ಹೆಚ್ಚು. ಅಂದಹಾಗೆ, ಮಣ್ಣನ್ನು ಸೌಂದರ್ಯವರ್ಧಕವಾಗಿಯೂ ಬಳಸಲಾಗುತ್ತದೆ ಎಂಬುದು ಗೊತ್ತೇ?

Mud Girl

ಮಣ್ಣಿಗೂ ಮಹತ್ವವಿದೆ

ಈಜಿಪ್ತ್‌ನ ರಾಣಿ ಕ್ಲಿಯೋಪಾತ್ರ ತನ್ನ ಚೆಲುವಿಗೂ ಹೆಸರಾಗಿದ್ದವಳು. ಅವಳ ಚರ್ಮದ ಕಾಂತಿಯ ದೇಖರೇಖಿಯಲ್ಲಿ ಮೃತ ಸಮುದ್ರದ (ಡೆಡ್‌ ಸೀ) ಮಣ್ಣನ್ನು ಬಳಸುತ್ತಿದ್ದಳಂತೆ. ಇಷ್ಟೇ ಅಲ್ಲ, 19ನೇ ಶತಮಾನದಲ್ಲಿ ಐರೋಪ್ಯ ದೇಶಗಳ ಸ್ಪಾಗಳಲ್ಲಿ ʻಮಡ್‌ ಬಾತ್‌ʼ ಜನಪ್ರಿಯಗೊಂಡಿತು. ನೋವುಗಳಿಂದ ಮುಕ್ತರಾಗುವುದಕ್ಕೆ, ಚರ್ಮದ ಕಾಂತಿಗೆ ಹಾಗೂ ಇನ್ನೂ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಇದೇ ಮದ್ದು ಎಂಬಂತೆ ಇದನ್ನು ಬಿಂಬಿಸಲಾಗುತ್ತಿತ್ತು. ಇವೆಲ್ಲ ನಿಜವೇ? ಮಣ್ಣನ್ನು ಮೈಗೆಲ್ಲ ಮೆತ್ತಿಕೊಳ್ಳುವುದರಿಂದ ಆರೋಗ್ಯ ಚೆನ್ನಾಗಿ ಆಗುವುದೇ ಅಥವಾ ಇದೂ ಗಾಳಿ ಮೇಲಿನ ಗುಳ್ಳೆಯೇ? ಅಂತಾರಾಷ್ಟ್ರೀಯ ಮಣ್ಣಿನ ದಿನದ ಹಿನ್ನೆಲೆಯಲ್ಲಿ ಮಣ್ಣಿನ ಆರೋಗ್ಯ ಮತ್ತು ಸೌಂದರ್ಯವರ್ಧಕ ಅಂಶಗಳ ಬಗ್ಗೆ ಮಾಹಿತಿ.

ಮಣ್ಣಿನ ಸ್ನಾನ

ಹಲವಾರು ಶತಮಾನಗಳಿಂದ ಮಣ್ಣಿನ ಸ್ನಾನವನ್ನು ಚಿಕಿತ್ಸೆಯ ಉದ್ದೇಶಕ್ಕಾಗಿ ಬಳಸಲಾಗುತ್ತಿದೆ. ಹಳೆಯ ಕಾಲದ ಈಜಿಪ್ತ್‌, ಗ್ರೀಕ್‌ ಮತ್ತು ರೋಮನ್ನರು ಇದನ್ನು ಸ್ವಾಸ್ಥ್ಯ ಮತ್ತು ಸೌಂದರ್ಯವನ್ನು ಉದ್ದೀಪಿಸುವ ಮಾರ್ಗವಾಗಿ ಬಳಸುತ್ತಿದ್ದರು. ಬೆಚ್ಚಗಿನ ಮಣ್ಣಿನಲ್ಲಿ ದೇಹವನ್ನು ನೆನೆಸುವುದು, ಆ ಮೂಲಕ ಆರ್ಥರೈಟಿಸ್‌ ನೋವುಗಳನ್ನು ಕಡಿಮೆ ಮಾಡಿಕೊಳ್ಳುವುದು ಅವರ ಕ್ರಮವಾಗಿತ್ತು. ಇದಕ್ಕಾಗಿ ಬಿಸಿನೀರಿನ ಬುಗ್ಗೆಗಳ ಪ್ರದೇಶವನ್ನು ಅವಲಂಬಿಸುತ್ತಿದ್ದರು. ಅದಲ್ಲದೆ, ಮಣ್ಣಿನ ಪುಟ್ಟ ಕೊಳಗಳನ್ನೂ ನಿರ್ಮಿಸಿಕೊಳ್ಳುತ್ತಿದ್ದರು. ಈ ನಿಸರ್ಗ ಚಿಕಿತ್ಸೆ ಇಂದಿಗೂ ಜನಪ್ರಿಯವಾಗಿದೆ. ಇದಕ್ಕಾಗಿ ಹಲವು ರೀತಿಯ ಮಣ್ಣುಗಳನ್ನು ಬಳಸಲಾಗುತ್ತದೆ. ಒಂದೊಂದು ಬಗೆಯ ಮಣ್ಣಿಗೂ ಅದರದ್ದೇ ಆದ ಅನುಕೂಲಗಳಿವೆ.

Dead Sea Mud bath Treatment
  • ಮೃತ ಸಮುದ್ರದ ಮಣ್ಣು: ಖನಿಜಗಳಿಂದ ಭರಿತವಾದ ಮಣ್ಣಿದು. ಮೆಗ್ನೀಶಿಯಂ, ಸೋಡಿಯಂ ಮತ್ತು ಪೊಟಾಶಿಯಂ ಅಂಶಗಳು ಇದರಲ್ಲಿ ಅತ್ಯಂತ ಸಾಂದ್ರವಾಗಿರುತ್ತವೆ. ಇದನ್ನು ಡಿಟಾಕ್ಸ್‌ ಮಾಡುವುದಕ್ಕೆ ಮತ್ತು ಚರ್ಮದ ತೇವ ಹೆಚ್ಚಿಸುವುದಕ್ಕೆ ಉಪಯೋಗಿಸಲಾಗುತ್ತದೆ.
  • ಜ್ವಾಲಾಮುಖಿಯ ಬೂದಿ-ಮಣ್ಣು: ಇದನ್ನು ಜ್ವಾಲಾಮುಖಿ ಇದ್ದಂಥ ಜಾಗಗಳಿಂದ ಮಾತ್ರವೇ ಸಂಗ್ರಹಿಸಬಹುದು. ಇದರ ಬೂದಿಯಲ್ಲಿ ಬಹಳಷ್ಟು ರೀತಿಯ ಖನಿಜಗಳು ಸೇರಿಕೊಂಡಿರುತ್ತವೆ. ಚರ್ಮವನ್ನು ಎಕ್‌ಫಾಲಿಯೇಟ್‌ ಮಾಡುವುದಕ್ಕೆ ಮತ್ತು ಶುದ್ಧೀಕರಿಸುವುದಕ್ಕೆ ಇದಕ್ಕಿಂತ ಒಳ್ಳೆಯದು ಇನ್ನೊಂದಿಲ್ಲ ಎಂಬ ಅಭಿಪ್ರಾಯವಿದೆ.
  • ಬೆಂಟೋನೈಟ್‌ ಮಣ್ಣು: ಇದು ಜೇಡಿಮಣ್ಣಿನಂಥದ್ದು. ಆದರೆ ಇದನ್ನೂ ಜ್ವಾಲಾಮುಖಿಯ ಪ್ರದೇಶದಿಂದಲೇ ಸಂಗ್ರಹಿಸಲಾಗುತ್ತದೆ.
  • ಮುಲ್ತಾನಿ ಮಿಟ್ಟಿ (ಫುಲ್ಲರ್ಸ್‌ ಅರ್ಥ್): ಇದೂ ಸಹ ಜೇಡಿಮಣ್ಣಿನಂಥದ್ದೇ ಆಗಿದ್ದು,‌ ಅತಿಯಾದ ಎಣ್ಣೆ ಸೂಸುವ ಮುಖಕ್ಕೆ ಇದನ್ನು ಬಳಸಲಾಗುತ್ತದೆ.

ಲಾಭಗಳೇನು?

ಮುಖಕ್ಕೆ ಮಣ್ಣಿನ ಲೇಪ ಮಾಡುವುದಕ್ಕೆ ಅದರದ್ದೇ ಆದ ಲಾಭಗಳಿವೆ. ಚರ್ಮದ ಕಶ್ಮಲಗಳನ್ನು ತೆಗೆದು, ಮುಖಕ್ಕೆ ಬೇಕಾದ ತೇವವನ್ನು ನೀಡುವುದು ಇದರ ಉದ್ದೇಶ. ಅದರಲ್ಲೂ ಖನಿಜಯುಕ್ತವಾದ ಮಣ್ಣನ್ನು ಲೇಪಿಸುವುದರಿಂದ ಚರ್ಮಕ್ಕೆ ಕಾಂತಿಯನ್ನು ಮರಳಿಸಬಹುದು. ಚರ್ಮದ ಮೇಲಿನ ಸತ್ತ ಕೋಶಗಳನ್ನು ತೆಗೆದು, ಹೊಳಪು ನೀಡುತ್ತದೆ. ನೋವುಗಳ ಪರಿಹಾರಕ್ಕಾಗಿ ಬೆಚ್ಚಗಿನ ಮಣ್ಣಿನಿಲ್ಲಿ ಹುದುಗಿ ಕೂರುವುದು ಜನಪ್ರಿಯ ಕ್ರಮ. ಇದರಿಂದ ಶರೀರಕ್ಕೆ ಬೇಕಾದ ವಿಶ್ರಾಂತಿಯನ್ನು ನೀಡಿ, ಒತ್ತಡವನ್ನೂ ನಿವಾರಿಸಿಕೊಳ್ಳಬಹುದು.

ಇದನ್ನೂ ಓದಿ: Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

ತೊಂದರೆಗಳಿವೆಯೇ?

ಎಲ್ಲಕ್ಕಿಂತ ಮುಖ್ಯವಾಗಿದ್ದು ಅಲರ್ಜಿ. ಮಣ್ಣಲ್ಲಿ ಇರಬಹುದಾದ ಕೆಲವು ಖನಿಜಗಳು ಹಲವರ ಚರ್ಮಕ್ಕೆ ಅಲರ್ಜಿಯನ್ನು ತರಬಹುದು. ಇದಲ್ಲದೆ ಸ್ವಚ್ಛತೆಯ ಬಗ್ಗೆಯೂ ಗಮನ ನೀಡಬೇಕು. ಯಾವುದೇ ಸ್ಪಾದಲ್ಲಿ ಇಂಥವನ್ನು ಬಳಸುವುದಾದರೂ, ಶುಚಿತ್ವದ ಬಗ್ಗೆ ಬಹಳ ಲಕ್ಷ್ಯ ವಹಿಸುವಂಥ ಜಾಗವನ್ನೇ ಆಯ್ಕೆ ಮಾಡಿ. ಈಗಾಗಲೇ ಒಣ ಚರ್ಮದ ಸಮಸ್ಯೆ ಇರುವವರಿಗೆ ಬೆಂಟೋನೈಟ್‌ ಮಣ್ಣಿನ ಪ್ಯಾಕ್‌ ಹಾಕಿದರೆ ಶುಷ್ಕತೆ ಹೆಚ್ಚುತ್ತದೆ. ಹಾಗಾಗಿ ಯಾರಿಗೆ ಯಾವುದು ಎಂಬ ಬಗ್ಗೆ ಮಾಹಿತಿ ಹೊಂದುವುದು ಅಗತ್ಯ.

Continue Reading

ವಾಣಿಜ್ಯ

Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೂ ಮುನ್ನ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿ ಸೀರೆಗಳನ್ನು ಖರೀದಿ ಮಾಡಿ, ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲಿ ಅವರು ಐವತ್ತಕ್ಕೂ ಹೆಚ್ಚು ಸೀರೆಗಳನ್ನು ಖರೀದಿಸಿದ್ದಾರೆ. ಇವು ಯಾವ ಮಾದರಿ ಸೀರೆ, ದರ ಎಷ್ಟು ಇತ್ಯಾದಿ ಮಾಹಿತಿ ಇಲ್ಲಿದೆ.

VISTARANEWS.COM


on

By

Nita Ambani
Koo

ಎಲ್ಲ ಸಂದರ್ಭಕ್ಕೂ ಸೂಕ್ತವಾಗುವ ಬನಾರಸಿ ಸೀರೆಗಳು (Banarasi sari) ಎಲ್ಲರಿಗೂ ಇಷ್ಟವಾಗುತ್ತದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Anant Radhika Wedding) ಅವರ ಮದುವೆಗೂ ಮುನ್ನ ಬನಾರಸಿ ಸೀರೆಗಳನ್ನು ಖರೀದಿ ಮಾಡಲು ರಿಲಯನ್ಸ್ ಫೌಂಡೇಶನ್‌ನ (Reliance Foundation) ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಗೆ (varanasi) ತೆರಳಿ ಐವತ್ತರಿಂದ ಅರವತ್ತು ಸೀರೆಗಳನ್ನು ಖರೀದಿಸಿದರು.

ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿದ ಅವರು ಸೀರೆಗಳನ್ನು ಖರೀದಿ ಮಾಡಿದರು. ಇದಕ್ಕೂ ಮೊದಲು ಹಲವಾರು ಬನಾರಸಿ ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳನ್ನು ಹೊಟೇಲ್ ಗೆ ಕರೆಸಿ ಮಾತನಾಡಿದ ಅವರು ಬಳಿಕ ಸೀರೆಗಳನ್ನು ಸ್ವತಃ ಆಯ್ಕೆ ಮಾಡಿದರು. ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಾಲಿವುಡ್, ಹಾಲಿವುಡ್ ಮತ್ತು ಇತರ ದೇಶಗಳ ಅನೇಕ ಅತಿಥಿಗಳು ಅನಂತ್ ಅಂಬಾನಿ ಅವರ ವಿವಾಹದಲ್ಲಿ ಪಾಲ್ಗೊಳ್ಳುವುದರಿಂದ ಬನಾರಸಿ ಸೀರೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಅಂಬಾನಿ ಕುಟುಂಬ ಸೀರೆಗಳಿಗೆ ಆರ್ಡರ್ ಮಾಡಿದ್ದು, ನೇಕಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಲಕ್ಕಾ ಬೂಟಿ ಸೀರೆ

ನೀತಾ ಅಂಬಾನಿ ಅವರ ಲಕ್ಕಾ ಬೂಟಿ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದು ಬನಾರಸಿ ಕೈಮಗ್ಗ ನೇಕಾರ ಛೋಟೆ ಲಾಲ್ ಪಾಲ್ ತಿಳಿಸಿದ್ದಾರೆ. ಅಂಬಾನಿ ಕುಟುಂಬವು ಭಾರತದ ಪ್ರಸಿದ್ಧ ವ್ಯಾಪಾರ ಕುಟುಂಬವಾಗಿದೆ. ನೀತಾ ಅಂಬಾನಿ ತನ್ನ ಮಗನ ಮದುವೆಯಲ್ಲಿ ನಾನು ತಯಾರಿಸಿದ ಸೀರೆಯನ್ನು ಧರಿಸಿದರೆ ಅನಂತರ ಎಲ್ಲರೂ ಅದನ್ನು ಟಿವಿಯಲ್ಲಿ ನೋಡುತ್ತಾರೆ. ಅವರು ನನ್ನ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದರು.


ನಾವು ಬನಾರಸ್‌ನ ಹಳೆಯ ಕುಶಲಕರ್ಮಿಗಳು. ನಾವು ಮೂರನೇ ತಲೆಮಾರಿನವರು. ನಮ್ಮ ಅಜ್ಜ ಮತ್ತು ತಂದೆ ನೇಕಾರರು. ನಾವು ತಯಾರಿಸುವ ಸೀರೆಗೆ ಲಖ ಬೂಟಿ ಎಂದು ಕರೆಯಲಾಗುತ್ತದೆ. ಈ ಸೀರೆಯ ವಿಶೇಷತೆ ಎಂದರೆ ಆಂಚಲ್ ಬಳಿ ಒಂದು ಮೂಲೆ ಇದೆ. ಒಮ್ಮೆ ಮಗ್ಗವನ್ನು ಸ್ಥಾಪಿಸಿದಾಗ, ಸಂಪೂರ್ಣ ಸೀರೆಯನ್ನು ಸಿದ್ಧಪಡಿಸುತ್ತೇವೆ. ಆದರೆ ವಿಶೇಷ ಸೀರೆಯನ್ನು ತಯಾರಿಸಲು ಮಗ್ಗವನ್ನು ಮೂರು ಬಾರಿ ತಯಾರಿಸಲಾಗುತ್ತದೆ/ ಇದನ್ನು ಹಿಂದೂ ಧರ್ಮದ ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ, ಇದನ್ನು ತಯಾರಿಸಲು 60 ರಿಂದ 62 ದಿನಗಳು ಬೇಕಾಗುತ್ತದೆ ಎಂದು ಹೇಳಿದರು.

ನೇಕಾರರ ಜೊತೆಗೆ ಸೀರೆ ತಯಾರಿಸಲು ಸಹಾಯ ಮಾಡಲು ಇನ್ನೂ 20ರಿಂದ 25 ಕಾರ್ಮಿಕರು ಅಗತ್ಯವಿದೆ. ಮೊದಲು ತಯಾರಿ ಇದೆ. ವಿವರಣೆ ಮುಗಿದಿದೆ. ವಿನ್ಯಾಸವನ್ನು ರಚಿಸಲಾಗಿದೆ. ನಕ್ಷೆಯನ್ನು ರಚಿಸಲಾಗಿದೆ. ವಿನ್ಯಾಸ ಮುಗಿದ ಮೇಲೆ ಸೀರೆಯನ್ನು ಕೈಮಗ್ಗಕ್ಕೆ ಕಳುಹಿಸಲಾಗುತ್ತದೆ. ಇಪ್ಪತ್ತೈದು ಜನರ ಕೈಗಳಲ್ಲಿ ಸೀರೆ ಸಂಪೂರ್ಣ ವಿನ್ಯಾಸಗೊಳ್ಳುತ್ತದೆ.


ಪ್ರತಿ ಸೀರೆಯು ಚಿನ್ನ ಮತ್ತು ಬೆಳ್ಳಿಯ ಎಳೆಗಳನ್ನು ಹೊಂದಿರುವ ನಿಜವಾದ ಝರಿಯನ್ನು ಬಳಸಿ ಕೈಯಿಂದ ಮಾಡಲ್ಪಟ್ಟಿದೆ. ಶೇ. 58-60ರಷ್ಟು ಬೆಳ್ಳಿ ಮತ್ತು ಶೇ. 1.5ರಷ್ಟು ಚಿನ್ನದ ಲೇಪನವನ್ನು ಅನ್ವಯಿಸಲಾಗುತ್ತದೆ. ಚಿನ್ನ ಮತ್ತು ಬೆಳ್ಳಿಯ ದಾರಗಳ ಸೀರೆಗಳ ಬೆಲೆ 1.5 – 2 ಲಕ್ಷ ರೂ. ಗಳಿಂದ 5- 6 ಲಕ್ಷ ರೂ. ಗಳವರೆಗೆ ಇರುತ್ತದೆ.

ಈ ಸೀರೆಗಳನ್ನು ತಯಾರಿಸಲು ಬಹಳ ಸಮಯ ಬೇಕಾಗುತ್ತದೆ. ನೀತಾ ಅಂಬಾನಿ ಅವರು ಹಜಾರಾ ಬುಟಿ ಎಂದು ಕರೆಯಲ್ಪಡುವ ವಿಶಿಷ್ಟವಾದ ಸೀರೆಯನ್ನು ಖರೀದಿಸಿದ್ದಾರೆ. ಇದು 35,000 ಬೆಳ್ಳಿಯ ಬೂಟಿಗಳನ್ನು ಒಳಗೊಂಡಿದೆ. ಹಜಾರಾ ಬುಟಿ ಸೀರೆಯನ್ನು 40- 45 ದಿನಗಳಲ್ಲಿ ತಯಾರಿಸಲಾಗುತ್ತದೆ.


ಅನಂತ್-ರಾಧಿಕಾ ಮದುವೆ

ಜುಲೈ 12ರಂದು ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮದುವೆಗೆ ಮುನ್ನ ನೀತಾ ಅಂಬಾನಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ದಿನ ಹತ್ತಿರವಾಗುತ್ತಿದ್ದಂತೆ ಮುಂಬಯಿನಲ್ಲಿ ಪುರಾತನ ಹಿಂದೂ ವೈದಿಕ ಸಂಪ್ರದಾಯದಂತೆ ನಡೆಯಲಿದೆ ಎನ್ನಲಾಗಿದೆ.

ಮಂಗಳಕರ ಶುಭ ವಿವಾಹ ಎಂದೂ ಕರೆಯಲ್ಪಡುವ ವಿವಾಹ ಸಮಾರಂಭವು ಶುಕ್ರವಾರ ಮುಖ್ಯ ಸಮಾರಂಭಗಳ ಮೂಲಕ ಪ್ರಾರಂಭವಾಗಲಿದೆ. ಆಚರಣೆಯ ವಾತಾವರಣವನ್ನು ಸಂಪೂರ್ಣವಾಗಿ ಆನಂದಿಸಲು ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ಅತಿಥಿಗಳಿಗೆ ಸೂಚಿಸಲಾಗಿದೆ. ಜುಲೈ 13ರಂದು ಶುಭ್ ಆಶೀರ್ವಾದ್ , ಕೊನೆಯ ದಿನವಾದ ಜುಲೈ 14ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ.

Continue Reading
Advertisement
Virat kohli
ಪ್ರಮುಖ ಸುದ್ದಿ6 mins ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ವಿವರ ಇಲ್ಲಿದೆ

Drown In Water
ದೇಶ9 mins ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Road Accident
ಕರ್ನಾಟಕ20 mins ago

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Hosur International Airport
ಬೆಂಗಳೂರು41 mins ago

Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Karnataka Politics
ಕರ್ನಾಟಕ54 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ1 hour ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್1 hour ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ2 hours ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ2 hours ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ2 hours ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು7 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌