EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ? - Vistara News

ವಾಣಿಜ್ಯ

EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ?

ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಶೀಘ್ರದಲ್ಲೇ ಬಡ್ಡಿ ಮೊತ್ತ (EPFO Balance Check) ಜಮೆಯಾಗಲಿದೆ. ಜುಲೈ ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ ಸದಸ್ಯರ ಖಾತೆಗೆ ತಲುಪೂವ ನಿರೀಕ್ಷೆ ಇದೆ. ಬಡ್ಡಿ ಹಣ ಖಾತೆಗೆ ಬಂದಿದೆಯೇ ಇಲ್ಲವೇ, ಎಷ್ಟು ಬಂದಿದೆ ಎಂಬುದನ್ನು ಪರಿಶೀಲಿಸಲು ಸಾಕಷ್ಟು ದಾರಿಗಳಿವೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

EPFO Balance Check
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭವಿಷ್ಯ ನಿಧಿ (Employees’ Provident Fund) ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಬಡ್ಡಿ (interest) ಮೊತ್ತ ಜಮೆಯಾಗುವುದನ್ನು (EPFO Balance Check) ಕಾಯುತ್ತಿದ್ದಾರೆ. ಅಂತವರಿಗೆ ಇದೀಗ ಸಿಹಿ ಸುದ್ದಿ. ಜುಲೈ (july) ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ (EPFO) ಸದಸ್ಯರ ಖಾತೆಗೆ ತಲುಪಬಹುದು. ಇದಕ್ಕಾಗಿ ಶೀಘ್ರದಲ್ಲೇ ಹಣಕಾಸು ಸಚಿವಾಲಯ (Finance Ministry) ಅಧಿಕೃತ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆ ಇದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು ಫೆಬ್ರವರಿಯಲ್ಲಿ ಆರ್ಥಿಕ ವರ್ಷ 2024 ಕ್ಕೆ ಶೇ. 8.25ರ ಬಡ್ಡಿ ದರವನ್ನು ಅನುಮೋದಿಸಿದೆ. ಆದರೆ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲು ಹಣಕಾಸು ಸಚಿವಾಲಯವು ಇನ್ನೂ ಕಾಯುತ್ತಿದೆ. ಸಾರ್ವತ್ರಿಕ ಚುನಾವಣೆಗಳಿಂದಾಗಿ ಇದು ವಿಳಂಬವಾಗಿದೆ. ಇದು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಹಣ ಬಂದಿದೆಯೇ ತಿಳಿಯುವುದು ಹೇಗೆ?

ಇಪಿಎಫ್ ಖಾತೆಯ ಪಾಸ್‌ಬುಕ್ ಅನ್ನು ಪರಿಶೀಲಿಸುತ್ತಿದ್ದರೆ ನಿಮ್ಮ ಇಪಿಎಫ್ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಎಂಬುದು ನಿಮಗೆ ತಿಳಿಯುತ್ತದೆ. ಮಿಸ್ಡ್ ಕಾಲ್ ಅಥವಾ ಎಸ್ ಎಂಎಸ್ ನಂತಹ ಸೌಲಭ್ಯಗಳ ಮೂಲಕ ಇಪಿಎಫ್ ಒ ​​ಪೋರ್ಟಲ್ ಮೂಲಕ ನೀವು ಇಪಿಎಫ್ ಪಾಸ್‌ಬುಕ್ ಅನ್ನು ಪರಿಶೀಲಿಸಬಹುದು.

EPFO Balance Check

ಇಪಿಎಫ್‌ಒ ​​ಪೋರ್ಟಲ್‌ನಲ್ಲಿ ಹೇಗೆ ಪರಿಶೀಲಿಸುವುದು?

ಮೊದಲನೆಯದಾಗಿ ಇಪಿಎಫ್ ಒ ​​ಪೋರ್ಟಲ್ https://www.epfindia.gov.in/site_en/index.php ಗೆ ಹೋಗಿ. ಇದಕ್ಕಾಗಿ ನಿಮ್ಮ ಯುಎಎನ್ (ಯುನಿವರ್ಸಲ್ ಖಾತೆ ಸಂಖ್ಯೆ) ಅನ್ನು ಸಕ್ರಿಯಗೊಳಿಸಬೇಕು. ಸೈಟ್ ತೆರೆದಾಗ, ನಮ್ಮ ಸೇವೆಗಳು ಟ್ಯಾಬ್‌ಗೆ ಹೋಗಿ ಮತ್ತು ಅನಂತರ ಡ್ರಾಪ್-ಡೌನ್ ಮೆನು ‘ಉದ್ಯೋಗಿಗಳಿಗಾಗಿ’ ಆಯ್ಕೆ ಮಾಡಿ. ಸೇವಾ ಕಾಲಂ ಅಡಿಯಲ್ಲಿ ಸದಸ್ಯರ ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ. ಮುಂದಿನ ಪುಟದಲ್ಲಿ ಯುಎಎನ್ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಬೇಕು. ಕ್ಯಾಪ್ಚಾವನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಿ. ಲಾಗಿನ್ ಆದ ಅನಂತರ ಸದಸ್ಯರ ಐಡಿ ಅನ್ನು ನಮೂದಿಸಿ. ಇದರ ಬಳಿಕ ಇಪಿಎಫ್ ಬ್ಯಾಲೆನ್ಸ್ ಗೋಚರಿಸುತ್ತದೆ.

ಇದನ್ನೂ ಓದಿ: PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಮಿಸ್ಡ್ ಕಾಲ್ ಮೂಲಕ ಹೇಗೆ ಪರಿಶೀಲಿಸುವುದು?

011- 22901406ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಇಪಿಎಫ್ ಬ್ಯಾಲೆನ್ಸ್ ಅನ್ನು ನೀವು ಪರಿಶೀಲಿಸಬಹುದು. ಕರೆ ಮಾಡಿದಾಗ, ಎಸ್ ಎಂಎಸ್ ಅನ್ನು ಪಡೆಯುತ್ತೀರಿ. ಅದರಲ್ಲಿ ಬ್ಯಾಲೆನ್ಸ್ ಗೋಚರಿಸುತ್ತದೆ. ಇದಕ್ಕಾಗಿ ಇಪಿಎಫ್ ಖಾತೆಯೊಂದಿಗೆ ನೋಂದಾಯಿಸಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಪ್ಯಾನ್ ಮತ್ತು ಆಧಾರ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ಸಹ ನಿಮ್ಮ ಯುಎಎನ್ ಗೆ ಲಿಂಕ್ ಮಾಡಬೇಕು.

ಎಸ್‌ಎಂಎಸ್ ಮೂಲಕ ಪರಿಶೀಲಿಸುವುದು ಹೇಗೆ?

ಮಿಸ್ಡ್ ಕಾಲ್ ಸೇವೆಯಂತೆಯೇ ಎಲ್ಲಾ ಪ್ರಮುಖ ದಾಖಲೆಗಳನ್ನು ಯುಎಎನ್‌ಗೆ ಲಿಂಕ್ ಮಾಡಬೇಕು. ಆಗ ಮಾತ್ರ ಈ ಸೇವೆಯನ್ನು ಬಳಸಲು ಸಾಧ್ಯವಾಗುತ್ತದೆ. ಇದಕ್ಕಾಗಿ EPFOHO UAN ENG ಅಥವಾ ENG ಬದಲಿಗೆ ನೀವು ಸಂದೇಶವನ್ನು ಬಯಸುವ ಭಾಷೆಯ ಕೋಡ್ ಅನ್ನು ಬರೆದು 7738299899 ಗೆ SMS ಮಾಡಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಇಂದು ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಜೂನ್‌ 30) ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಇಂದು ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದಿನ ದರದ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,616 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,228 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,000. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,250 ಮತ್ತು ₹ 6,62,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,824 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,280 ಮತ್ತು ₹ 7,22,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ ₹ 6,640 ₹ 7,242
ಮುಂಬೈ₹ 6,625 ₹ 7,228
ಬೆಂಗಳೂರು₹ 6,616₹ 7,228
ಚೆನ್ನೈ₹ 6,685 ₹ 7,293

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯೂ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.25 ಹಾಗೂ 8 ಗ್ರಾಂಗೆ ₹ 722 ಇದೆ. 10 ಗ್ರಾಂಗೆ ₹ 902.50 ಹಾಗೂ 1 ಕಿಲೋಗ್ರಾಂಗೆ ₹ 90,250 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Continue Reading

ದೇಶ

Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Mohan Bhagwat: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ತಮ್ಮ ನಿವಾಸ ಆಂಟಿಲಿಯಾ ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ವೀಕರಿಸಿದರು. ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

VISTARANEWS.COM


on

Mohan Bhagwat
Koo

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರು ತಮ್ಮ ನಿವಾಸ ಆಂಟಿಲಿಯಾ (Antilia)ದಲ್ಲಿ ಶುಕ್ರವಾರ ಆಯೋಜಿಸಿದ್ದ ಆತಿಥ್ಯವನ್ನು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಸ್ವೀಕರಿಸಿದರು. ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಜುಲೈಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌ ಅವರನ್ನು ಖುದ್ದು ಮುಕೇಶ್ ಅಂಬಾನಿ, ನೀತಾ ಅಂಬಾನಿ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸ್ವಾಗತಿಸಿದರು.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಜುಲೈ 12ರಂದ್ ಅದ್ಧೂರಿಯಾಗಿ ನೆರವೇರಲಿದ್ದು, ಗಣ್ಯರನ್ನು ಆಮಂತ್ರಿಸಲಾಗುತ್ತಿದೆ. ಮೋಹನ್‌ ಭಾಗವತ್‌ ಭೇಟಿ ವೇಳೆ ರಾಧಿಕಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರೆ, ಅನಂತ್‌ ಕುರ್ತಾ ಮತ್ತು ಜಾಕೆಟ್‌ ಧರಿಸಿ ಮಿಂಚಿದರು. ನೀತಾ ಅವರು ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡರೆ ಮುಕೇಶ್ ಅಂಬಾನಿ ಸರಳವಾಗಿ ಪ್ಯಾಂಟ್‌-ಷರ್ಟ್‌ ಧರಿಸಿದ್ದರು. ನೀತಾ ಅಂಬಾನಿ ಕೈ ಮುಗಿದು ಮೋಹನ್‌ ಭಾಗವತ್‌ ಅವರನ್ನು ಸ್ವಾಗತಿಸಿದರು.

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರಿಗೆ ಅಂಬಾನಿ ಕುಟುಂಬ ಸದಸ್ಯರು ಆಮಂತ್ರಣ ಪತ್ರಿಕೆ ನೀಡಿದ್ದರು. ಜತೆಗೆ ಸೋಮವಾರ ಬಾಲಿವುಡ್‌ ಸ್ಟಾರ್‌ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ತೆರಳಿದ್ದರು.

ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ

ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದ್ದರು. ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆʼʼ ಎಂದು ಹೇಳಿದ್ದರು.

ʼʼ10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆʼʼ ಎಂದು ತಿಳಿಸಿದ್ದರು.

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Continue Reading

ವಾಣಿಜ್ಯ

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

ಜಗತ್ತಿನಲ್ಲಿ ಇಂದು ಸಾಕಷ್ಟು ಆಧುನಿಕ ತಂತ್ರಜ್ಞಾನವಿದೆ. ಮಕ್ಕಳನ್ನು ಪಡೆಯಲು ನಾವು ಏಕೆ ಇದನ್ನು ಬಳಸಬಾರದು ಎಂದು ಪ್ರಶ್ನಿಸಿರುವ ಉದ್ಯಮಿ ಇಶಾ ಅಂಬಾನಿ (Isha Ambani) ಅವರು, ಇದು ಉತ್ಸುಕರಾಗಿರುವ ವಿಷಯವಾಗಿರಬೇಕು. ಮರೆ ಮಾಚಬೇಕಾದ ಸಂಗತಿಯಲ್ಲ. ಈ ಬಗ್ಗೆ ಮಹಿಳೆಯರು ಮಾತನಾಡಲು ಮುಕ್ತವಾದರೆ ಪ್ರಕ್ರಿಯೆಯು ಹೆಚ್ಚು ಸುಲಭವಾಗಬಹುದು ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

By

Isha Ambani
Koo

ಭಾರತೀಯ ಬಿಲಿಯನೇರ್ ಉದ್ಯಮಿ ಮುಖೇಶ್ ಅಂಬಾನಿ (Mukesh ambani) ಅವರ ಪುತ್ರಿ ಇಶಾ ಅಂಬಾನಿ (Isha Ambani) ಮಕ್ಕಳನ್ನು ಪಡೆಯಲು ಐವಿಎಫ್ (IVF) ಮೊರೆ ಹೋಗಿದ್ದಾಗಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಈ ಬಗ್ಗೆ ಮುಕ್ತವಾಗಿ ಮಾತನಾಡಿರುವ ಅವರು, ತನ್ನನ್ನು ಮತ್ತು ಸಹೋದರ ಆಕಾಶ್ ಅಂಬಾನಿ (akash ambani) ನನ್ನು ಪಡೆಯಲು ತಾಯಿ ನೀತಾ ಅಂಬಾನಿ (nita ambani) ಕೂಡ ಐವಿಎಫ್ ಮೊರೆ ಹೋಗಿದ್ದರು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

32 ವರ್ಷದ ಅವರು ತಮ್ಮ ಮಾತೃತ್ವದ ಪ್ರಯಾಣದ ಬಗ್ಗೆ ಮಾತನಾಡಿದ್ದು, ಐವಿಎಫ್ ವಿಷಯದ ಸುತ್ತಲಿನ ನಿಷೇಧವನ್ನು ಹೋಗಲಾಡಿಸುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದರು.

ನೀತಾ ಅಂಬಾನಿ ಈ ಹಿಂದೆ ಐವಿಎಫ್ ಸಹಾಯದಿಂದ ಗರ್ಭಧರಿಸುವ ಬಗ್ಗೆ ಮಾತನಾಡಿದ್ದರು. ವೈದ್ಯರು ತನಗೆ ಎಂದಿಗೂ ಮಕ್ಕಳಾಗುವುದಿಲ್ಲ ಎಂದು ಹೇಳಿದಾಗ ಆಘಾತವಾಗಿತ್ತು. ಆಗ ನನಗೆ ಕೇವಲ 23 ವರ್ಷ. ನನ್ನ ಆತ್ಮೀಯ ಸ್ನೇಹಿತರಲ್ಲಿ ಒಬ್ಬರಾದ ಡಾ. ಫಿರೂಜಾ ಪಾರಿಖ್ ಅವರ ಸಹಾಯದಿಂದ ನಾನು ಮೊದಲು ನನ್ನ ಅವಳಿ ಮಕ್ಕಳನ್ನು ಗರ್ಭದಲ್ಲಿ ಧರಿಸಿದೆ ಎಂದು ಅವರು ಅವರು ಕೆಲವು ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇದೀಗ ತಾಯಿ ನೀತಾ ಅಂಬಾನಿಯಂತೆ ಇಶಾ ಕೂಡ ಐವಿಎಫ್ ಮೂಲಕ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಐವಿಎಫ್ ಮೂಲಕ ಅವಳಿ ಮಕ್ಕಳಿಗೆ ನಾನು ತಾಯಿಯಾಗಿದ್ದೇನೆ ಎಂದು ಬಹಳ ಬೇಗ ಹೇಳುತ್ತಿದ್ದೇನೆ. ಈ ಬಗ್ಗೆ ನಾವು ಸಾಮಾನ್ಯವಾಗಿರಬೇಕು. ಇದರ ಬಗ್ಗೆ ನಾಚಿಕೆ ಪಡಬಾರದು. ಇಂತವರನ್ನು ಯಾರೂ ಪ್ರತ್ಯೇಕ ಮಾಡಬಾರದು. ಇದು ಅತ್ಯಂತ ಕಷ್ಟಕರ ಪ್ರಕ್ರಿಯೆ. ಈ ಪ್ರಕ್ರಿಯೆಯಲ್ಲಿ ಸಾಕಷ್ಟು ದಣಿವಾಗುತ್ತದೆ ಎಂದು ಹೇಳಿದರು.

ಇಂದು ಜಗತ್ತಿನಲ್ಲಿ ಸಾಕಷ್ಟು ಆಧುನಿಕ ತಂತ್ರಜ್ಞಾನವಿದೆ. ಮಕ್ಕಳನ್ನು ಪಡೆಯಲು ನಾವು ಏಕೆ ಇದನ್ನು ಬಳಸಬಾರದು ಎಂದು ಪ್ರಶ್ನಿಸಿದ ಅವರು, ಇದು ಉತ್ಸುಕರಾಗಿರುವ ವಿಷಯವಾಗಿರಬೇಕು. ಮರೆ ಮಾಚಬೇಕಾದ ಸಂಗತಿಯಲ್ಲ. ಈ ಬಗ್ಗೆ ಮಹಿಳೆಯರು ಮಾತನಾಡಲು ಮುಕ್ತವಾದರೆ ಪ್ರಕ್ರಿಯೆಯು ಹೆಚ್ಚು ಸುಲಭವಾಗಬಹುದು ಎಂದು ಅವರು ತಿಳಿಸಿದ್ದಾರೆ.

ಇಶಾ ಅವರು ಆನಂದ್ ಪಿರಾಮಲ್ ಅವರನ್ನು ವಿವಾಹವಾಗಿದ್ದು, ಒಬ್ಬ ಮಗಳು ಮತ್ತು ಮಗನೊಂದಿಗೆ ಅವಳಿ ಮಕ್ಕಳನ್ನು ಹೊಂದಿದ್ದಾರೆ. 2018ರ ಡಿಸೆಂಬರ್ 12 ರಂದು ದಂಪತಿ ಮುಂಬಯಿ ನಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದರು.

ಐವಿಎಫ್ ಎಂದರೇನು?

ಇನ್ ವಿಟ್ರೊ ಫರ್ಟಿಲೈಸೇಶನ್ (ಐವಿಎಫ್) ಮಕ್ಕಳನ್ನು ಪಡೆಯಲು ಒಂದು ವೈದ್ಯಕೀಯ ವಿಧಾನವಾಗಿದೆ. ಪ್ರಯೋಗಾಲಯದಲ್ಲಿ ವೀರ್ಯದಿಂದ ಮೊಟ್ಟೆಯನ್ನು ಫಲವತ್ತಾಗಿಸಲಾಗುತ್ತದೆ. ಇದು ಫಲವತ್ತತೆ ಸಮಸ್ಯೆಗಳಿರುವ ವ್ಯಕ್ತಿಗಳು ಅಥವಾ ದಂಪತಿಗೆ ಸಹಾಯ ಮಾಡಲು ಬಳಸುವ ಸಾಮಾನ್ಯ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನವಾಗಿದೆ.

ಈ ಪ್ರಕ್ರಿಯೆಯು ಬಹು ಮೊಟ್ಟೆಗಳನ್ನು ಉತ್ಪಾದಿಸಲು ಮಹಿಳೆಯ ಅಂಡಾಶಯವನ್ನು ಉತ್ತೇಜಿಸುತ್ತದೆ. ಮೊಟ್ಟೆಗಳನ್ನು ಪಡೆದು ನಿಯಂತ್ರಿತ ವಾತಾವರಣದಲ್ಲಿ ವೀರ್ಯದೊಂದಿಗೆ ಫಲವತ್ತಾಗಿಸುತ್ತದೆ ಮತ್ತು ಅನಂತರ ಭ್ರೂಣಗಳನ್ನು ಗರ್ಭಾಶಯಕ್ಕೆ ವರ್ಗಾಯಿಸಲಾಗುತ್ತದೆ.

ಇದನ್ನೂ ಓದಿ: Elon Musk: ಕೆಲವೇ ವರ್ಷಗಳಲ್ಲಿ ಮೊಬೈಲ್‌ ಫೋನೇ ಇರುವುದಿಲ್ಲ; ಬರಲಿದೆ ಹೊಸ ತಂತ್ರಜ್ಞಾನ!

ನಿರ್ಬಂಧಿಸಲಾದ ಫಾಲೋಪಿಯನ್ ಟ್ಯೂಬ್‌ಗಳು, ಪುರುಷ ಬಂಜೆತನ, ಅಂಡೋತ್ಪತ್ತಿ ಅಸ್ವಸ್ಥತೆಗಳು ಅಥವಾ ವಿವರಿಸಲಾಗದ ಬಂಜೆತನ ಸೇರಿದಂತೆ ವಿವಿಧ ಕಾರಣಗಳಿಗಾಗಿ ಐವಿಎಫ್ ಅನ್ನು ಬಳಸಬಹುದು ಮತ್ತು ಅನೇಕರು ಗರ್ಭಧಾರಣೆ ಮತ್ತು ಪಿತೃತ್ವವನ್ನು ಸಾಧಿಸಲು ಇದು ಸಹಾಯ ಮಾಡಿದೆ.

ಇಶಾ ಅಂಬಾನಿ ಅವರ ಕಿರಿಯ ಸಹೋದರ ಅನಂತ್ ಅಂಬಾನಿ ಜುಲೈ 12ರಂದು ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ. ಈ ಕಾರಣದಿಂದ ಇಶಾ ಮತ್ತು ಅವರ ಕುಟುಂಬ ವರ್ಷವಿಡೀ ಸುದ್ದಿಯಲ್ಲಿದೆ.

Continue Reading

ದೇಶ

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

Vodafone Idea: ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ.

VISTARANEWS.COM


on

Vodafone Idea
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕಳೆದ ಕೆಲ ದಿನಗಳಿಂದ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸುತ್ತಿವೆ. ರಿಲಯನ್ಸ್‌ ಜಿಯೋ (Reliance Jio) ಹಾಗೂ ಏರ್‌ಟೆಲ್‌ (Airtel) ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿದ ಬೆನ್ನಲ್ಲೇ ವೋಡಾಫೋನ್‌ ಐಡಿಯಾ (Vodafone Idea) ಸಂಸ್ಥೆಯೂ ಬೆಲೆಯೇರಿಕೆಗೆ ಮುಂದಾಗಿದೆ. ಇದು ಕೂಡ ಕೋಟ್ಯಂತರ ಗ್ರಾಹಕರಿಗೆ ಮೊಬೈಲ್‌ ರಿಚಾರ್ಜ್‌ ಮಾಡಿಸಿಕೊಳ್ಳುವಲ್ಲಿ ಹೊರೆ ಎನಿಸಲಿದೆ.

ಹೌದು, ಜುಲೈ 4ರಿಂದ ವೋಡಾಫೋನ್‌ ಐಡಿಯಾ ಶುಲ್ಕಗಳನ್ನು ಶೇ. 10ರಷ್ಟು ಹಾಗೂ ಶೇ.23ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ. 28 ದಿನಗಳ ಪ್ಲಾನ್‌ಗೆ 179 ರೂ. ಬದಲಾಗಿ 199 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, 84 ದಿನಗಳವರೆಗೆ 1.5 ಜಿಬಿ ಪ್ಲಾನ್‌ಗೆ 719ರ ಬದಲಾಗಿ 859 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ವಾರ್ಷಿಕ ಯೋಜನೆಯ ಮೊತ್ತವನ್ನು 2,899 ರೂ.ನಿಂದ 3,499 ರೂ.ಗೆ ಏರಿಕೆ ಮಾಡಿದೆ. ಆದರೆ, 365 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು ಹಾಗೂ 24 ಜಿಬಿ (ಪ್ರತಿದಿನ ಅಲ್ಲ) ಇಂಟರ್‌ನೆಟ್‌ ಪ್ಲಾನ್‌ ಬೆಲೆಯೇರಿಕೆ ಮಾಡಿಲ್ಲ. ಅದು ಮೊದಲಿನಂತೆ ಶೇ.1,799 ರೂ. ಇರಲಿದೆ.

ಜಿಯೋ ಪ್ಲಾನ್‌ ಬೆಲೆಯೇರಿಕೆ ಎಷ್ಟು?

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಇದನ್ನೂ ಓದಿ: 5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Continue Reading
Advertisement
Actor Darshan case Shivaraj Kumar reaction
ಸ್ಯಾಂಡಲ್ ವುಡ್5 mins ago

Actor Darshan: ಎಲ್ಲಾ ಹಣೆಬರಹ ಸ್ವಾಮಿ ಏನು ಮಾಡೋದು? ದರ್ಶನ್‌ ಕೇಸ್‌ ಬಗ್ಗೆ ಶಿವಣ್ಣ ಮಾತು!

Rohit Sharma
ಕ್ರೀಡೆ49 mins ago

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Karave Protest
ಕರ್ನಾಟಕ49 mins ago

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

T20 World Cup 2024
ಕ್ರೀಡೆ1 hour ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

Road Accident
ಮೈಸೂರು2 hours ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ2 hours ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್2 hours ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ2 hours ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ2 hours ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು2 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು2 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ22 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌