NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ - Vistara News

ಪ್ರಮುಖ ಸುದ್ದಿ

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

NEET-UG:

VISTARANEWS.COM


on

NEET UG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ.

ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದವು, ಏಕೆಂದರೆ 67 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು (720ಕ್ಕೆ 720) ಗಳಿಸಿದ್ದರು. ಅವರಲ್ಲಿ ಕೆಲವರು ಒಂದೇ ಪರೀಕ್ಷಾ ಕೇಂದ್ರಗಳಿಂದ ಬಂದವರು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಿಹಾರದಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕಂಡುಬಂದಿದೆ. ಕೆಲವು ಅಭ್ಯರ್ಥಿಗಳು ಪರೀಕ್ಷೆಯ ಮುನ್ನಾದಿನದಂದು ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ: NEET PG : ಪರೀಕ್ಷಾ ಅಕ್ರಮ; ನಾಳೆ ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ಈ ಆರೋಪಗಳು ಹಲವಾರು ನಗರಗಳಲ್ಲಿ ಪ್ರತಿಭಟನೆಗೆ ಕಾರಣವಾಗಿವೆ. ಕೋರ್ಟ್​ಗಳಲ್ಲಿ ಅರ್ಜಿಗಳನ್ನು ಸಲ್ಲಿಕೆಯಾಗಿವೆ. ಈ ವರ್ಷದ ಜೂನ್ 18 ರಂದು ನಡೆದ ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಿಬಿಐ ಜೂನ್ 20ರಂದು ಎಫ್ಐಆರ್ ದಾಖಲಾಗಿದೆ.

ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Suryakumar Yadav:

VISTARANEWS.COM


on

Suryakumar Yadav
Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ 2024ರ (T20 World Cup 2024) ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಆಟಗಾರರ ಸಂತಸಕ್ಕೆ ಪಾರವೇ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅಂತೆಯೇ ಪಂದ್ಯದ 19ನೇ ಓವರ್​ನಲ್ಲಿ ಅದ್ಬುತ ಕ್ಯಾಚ್​ ಹಿಡಿದು ಪಂದ್ಯಕ್ಕೆ ನಿರ್ಣಾಯ ತಿರುವು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ರಾತ್ರಿಯಲ್ಲಿ ಟಿ 0 ವಿಶ್ವಕಪ್ ಟ್ರೋಫಿ ಬೆಡ್​ ಮೇಲೆ ಇಟ್ಟು ಮಲಗಿದ್ದಾರೆ. ಅದರ ವಿಡಿಯೊ ವೈರಲ್​ ಆಗಿದೆ.

ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಬೌಂಡರಿ ಲೈನ್​ನಲ್ಲಿ ಕ್ಯಾಚ್​ ಹಿಡಿದು ಔಟ್ ಮಾಡಿದ ಸೂರ್ಯ ಕುಮಾರ್​ ಯಾದವ್​ ಅತ್ಯಂತ ಸಂಭ್ರಮದಲ್ಲಿದ್ದರು. ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಇದನ್ನು ಆಟದ ಗತಿ ಬದಲಾವಣೆ ಮಾಡಿದ ಕ್ಷಣ ಎಂದು ಕರೆದಿದ್ದಾರೆ. ಏಕೆಂದರೆ ವಿಜಯದ ನಂತರ ಸೂರ್ಯ ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿ ಅತ್ಯುತ್ತಮ ಫೀಲ್ಡರ್ ಪದಕ ಕೂಡ ಪಡೆದಿದ್ದಾರೆ.

ಅದಕ್ಕಿಂತ ಮೊದಲು ಕುಲದೀಪ್ ಯಾದವ್ ಕ್ವಿಂಟನ್ ಡಿ ಕಾಕ್ ಅವರ ಪ್ರಮುಖ ಕ್ಯಾಚ್ ಪಡೆದಿದ್ದರು. ಆದರೆ ಸೂರ್ಯಕಮಾರ್​ ಯಾದವ್ ಅವರ ಕ್ಯಾಚ್ ಇನ್ನೂ ಅತ್ಯುತ್ತಮವಾಗಿತ್ತು ಎಂದು ಟಿ ದಿಲೀಪ್ ಹೇಳಿದ್ದಾರೆ. ಆದ್ದರಿಂದ, ಅವರು ಟ್ರೋಫಿಯನ್ನು ಪಕ್ಕದಲ್ಲೇ ಇಟ್ಟುಕೊಂಡಿರುವುದು ಸರಿಯಾಗಿಯೇ ಇದೆ.

ಸೂರ್ಯ ಹಾಸಿಗೆ ಒಂದು ಬದಿಯಲ್ಲಿ ಮಲಗಿದ್ದರೆ ಪತ್ನಿ ಇನ್ನೊಂದು ಕಡೆಯಲ್ಲಿ ಮಲಗಿದ್ದರು. ಮಧ್ಯದಲ್ಲಿ ಅವರು ಟ್ರೋಫಿಯನ್ನು ಇಟ್ಟುಕೊಂಡಿದ್ದರು. ಈ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 7 ರನ್ ಗಳ ಜಯ ಸಾಧಿಸಿತು. 2007ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಎಂ.ಎಸ್.ಧೋನಿ ಪಡೆ ಟ್ರೋಫಿ ಪಡೆದ ಬಳಿಕ ಇದು ಎರಡನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ.

ಇದನ್ನೂ ಓದಿ: Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದಾರೆ. ರೋಹಿತ್ ನಾಯಕನಾಗಿ 50 ಗೆಲುವುಗಳನ್ನು ದಾಖಲಿಸಿದ್ದಾರೆ. ಇದು ಟಿ 20 ಪಂದ್ಯಗಳಲ್ಲಿ ಯಾವುದೇ ನಾಯಕನಿಗೆ ಅತಿ ಹೆಚ್ಚು. ಗೆಲುವಾಗಿದೆ.

Continue Reading

ಪ್ರಮುಖ ಸುದ್ದಿ

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

VISTARANEWS.COM


on

Hardik Pandya
Koo

ಬೆಂಗಳೂರು: ಭಾರತ ತಂಡದ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ (Hardik Pandya) 2024ರ ಟಿ 20 ವಿಶ್ವಕಪ್ ಗೆಲುವಿನಲ್ಲಿ (T20 World Cup 2024) ಪ್ರಮುಖ ಪಾತ್ರ ವಹಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಅವರ ಬಗ್ಗೆ ಜೋರು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ತಮ್ಮ ಬಾಲ್ಯದ ದಿನಗಳ ಕ್ರಿಕೆಟ್ ಕನಸನ್ನು ವ್ಯಕ್ತಪಡಿಸುವ​ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಎಕ್ಸ್​ ಪೋಸ್ಟ್​​ನಲ್ಲಿ ಬೌಲಿಂಗ್ ಆಲ್ರೌಂಡರ್ ತಮ್ಮ ದೇಶಕ್ಕಾಗಿ ಆಡುವುದು ತನ್ನ ದೊಡ್ಡ ಗೌರವವಾಗಿ ಉಳಿಯುತ್ತದೆ ಎಂದು ಹೇಳಿಕೊಂಡಿದ್ದಾರೆ.

ಐಪಿಎಲ್ 2024 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿದ್ದ 30 ವರ್ಷದ ಪಾಂಡ್ಯ ಭಾರತದ ವಿಶ್ವಕಪ್ ಗೆಲುವಿನ ರೂವಾರಿಗಳಲ್ಲೊಬ್ಬರು. ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ನಲ್ಲಿ ಅವರು ತಮ್ಮ ಕೊನೇ ಓವರ್​​ನಲ್ಲಿ 16 ರನ್​ಗಳನ್ನು ಕಾಪಾಡಿಕೊಂಡಿದ್ದರು. ಅಲ್ಲಿ ಅವರು ಕೇವಲ 9 ರನ್​ ನೀಡಿದ್ದರು. ಅಂತೆಯೇ ಬರೋಡಾ ಮೂಲದ ಕ್ರಿಕೆಟಿಗ ದಕ್ಷಿಣ ಆಫ್ರಿಕಾ ತಂಡವು ಮುನ್ನಡೆ ಸಾಧಿಸುತ್ತಿದ್ದಾಗ ಹೆನ್ರಿಚ್​​ ಕ್ಲಾಸೆನ್ ಅವರ ವಿಕೆಟ್ ಪಡೆದಿದ್ದರು. ಒಟ್ಟು 3 ವಿಕೆಟ್ ಪಡೆದ ಅವರು ಸಂಭ್ರಮಿಸಿದ್ದರು.

“ಬರೋಡಾದ ಒಬ್ಬ ಹುಡುಗ ತನ್ನ ಕನಸನ್ನು ಸಾಕಾರಗೊಳಿಸಿದ್ದಾನೆ. ಮತ್ತು ತನ್ನ ದಾರಿಯಲ್ಲಿ ಎದುರಾಗಿರುವ ಎಲ್ಲ ರಿಗೂ ಕೃತಜ್ಞನಾಗಿದ್ದಾನೆ. ಇದಕ್ಕಿಂತ ಹೆಚ್ಚಿನದನ್ನು ಕೇಳಲು ಸಾಧ್ಯವಿಲ್ಲ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ದೊಡ್ಡ ಗೌರವ. ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ ಎಂದು ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ ಎಂದು ಪಾಂಡ್ಯ ಬರೆದುಕೊಂಡಿದ್ದಾರೆ. ಅದಕ್ಕೆ ತಾವು ಬಾಲ್ಯದಲ್ಲಿ ಬರೋಡಾ ಹಾಗೂ ಭಾರತಕ್ಕೆ ಆಡುವ ಕನಸು ಹೊಂದಿದ್ದೇನೆ ಎಂದು ಹೇಳುವ ವಿಡಿಯೊವನ್ನು ಅಪ್​ಲೋಡ್​ ಮಾಡಿದ್ದಾರೆ.

ಪಂದ್ಯದ ನಂತರ ಮಾತನಾಡಿದ ಪಾಂಡ್ಯ, ತಮ್ಮನ್ನು ಅವಮಾನ ಮಾಡಿದ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಉತ್ತಮ ಪ್ರದರ್ಶನಗಳೊಂದಿಗೆ ಅವರೆಲ್ಲರನ್ನೂ ಮೌನಗೊಳಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

ನಾನು ಒಳ್ಳೆಯದನ್ನು ನಂಬುತ್ತೇನೆ. ಒಬ್ಬ ವ್ಯಕ್ತಿಯಾಗಿ ನನ್ನ ಬಗ್ಗೆ ಸ್ವಲ್ಪವೂ ತಿಳಿಯದ ಜನರು ಬಹಳಷ್ಟು ಮಾತನಾಡಿದ್ದಾರೆ. ಅದರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆದರೆ ನಾನು ಎಂದಿಗೂ ಪದಗಳಿಂದ ಪ್ರತಿಕ್ರಿಯಿಸುವುದಿಲ್ಲ. ಸಂದರ್ಭಗಳಿಂದ ಪ್ರತಿಕ್ರಿಯಿಸುತ್ತೇನೆ. ನಾನು ಯಾವಾಗಲೂ ಜೀವನದಲ್ಲಿ ನಂಬಿಕೆ ಇಟ್ಟಿದ್ದೇನೆ. ಕಷ್ಟದ ಸಮಯಗಳು ಸಹ ಶಾಶ್ವತವಾಗಿ ಉಳಿಯುವುದಿಲ್ಲ. ಗೆದ್ದರೂ. ಸೋತರೂ ಉತ್ತಮವಾಗಿರುವುದು ಮುಖ್ಯ. ಅಭಿಮಾನಿಗಳು ಮತ್ತು ಪ್ರತಿಯೊಬ್ಬರೂ ಕಲಿಯಬೇಕು ಎಂದು ಪಾಂಡ್ಯ ಹೇಳಿದ್ದಾರೆ.

Continue Reading

ಕ್ರೀಡೆ

Rohit Sharma: ಲಿಯೋನೆಲ್ ಮೆಸ್ಸಿ ಶೈಲಿಯಲ್ಲಿ ವಿಶ್ವಕಪ್​ ಎತ್ತಿ ಹಿಡಿದ ರೋಹಿತ್​; ವಿಡಿಯೊ ವೈರಲ್​

Rohit Sharma: ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿಕೊಟ್ಟಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Rohit Sharma
Koo

ನವದೆಹಲಿ: 2022 ಕತಾರ್​ನಲ್ಲಿ ನಡೆದ ಫಿಫಾ ಫುಟ್ಬಾಲ್​​​​​​​​​ ವಿಶ್ವ ಕಪ್(Fifa World Cup 2022) ರೋಮಾಂಚನಕಾರಿ ಫೈನಲ್​ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿ(Lionel Messi) ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫ್ರಾನ್ಸ್​ ತಂಡವನ್ನು ಮಣಿಸಿ 36 ವರ್ಷಗಳ ಬಳಿಕ ವಿಶ್ವ ಚಾಂಪಿಯನ್ ಆಗಿ ಹೊರಮೊಮ್ಮಿತ್ತು. ಲಿಯೋನೆಲ್ ಮೆಸ್ಸಿ ಅವರು ವಿಭಿನ್ನ ಶೈಲಿಯಲ್ಲಿ ಬಂದು ಕಪ್​ ಎತ್ತಿ ಹಿಡಿಯುವ ಮೂಲಕ ಫೋಟೊಗೆ ಫೋಸ್​ ಕೊಟ್ಟಿದ್ದರು. ಶನಿವಾರ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಚಾಂಪಿಯನ್(T20 World Cup final)​ ಪಟ್ಟ ಅಲಂಕರಿಸಿದ ಭಾರತ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಕೂಡ ಮೆಸ್ಸಿಯ ಶೈಲಿಯಲ್ಲೇ ವಿಶ್ವಕಪ್​ ಎತ್ತಿ ಹಿಡಿದಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ರೋಹಿತ್​ಗೆ ಮೆಸ್ಸಿಯ ಈ ಶೈಲಿಯನ್ನು ಹೇಳಿಕೊಟ್ಟದ್ದು ತಂಡದ ಸಹ ಆಟಗಾರ ಕುಲ್​ದೀಪ್​ ಯಾದವ್​. ಆಟಗಾರರೆಲ್ಲ ಪದಕ ಸ್ವೀಕರಿಸುತ್ತಿದ್ದ ವೇಳೆ ಕುಲ್​ದೀಪ್​ ಅವರು ರೋಹಿತ್​ ಅವರಿಗೆ ಯಾವ ರೀತಿಯಲ್ಲಿ ಬಂದು ಕಪ್​ ಎತ್ತಬೇಕು ಎಂದು ನಟನೆ ಮಾಡಿ ತೋರಿಸಿದರು. ಈ ವೇಳೆ ರೋಹಿತ್​ ಓಕೆ ಓಕೆ.. ಎಂದು ಹೇಳುತ್ತಾರೆ. ಬಳಿಕ ವಿಶ್ವಕಪ್ ಟ್ರೋಫಿಯೊಂದಿಗೆ ಫೋಟೊಗೆ ಫೋಸ್​ ನೀಡಲು ಬರುವ ವೇಳೆ ಕುಲ್​ದೀಪ್​ ಹೇಳಿಕೊಟ್ಟಂತೆ ರೋಹಿತ್ ಅವರು ಅಂದು​ ಮೆಸ್ಸಿ ನಡೆದು ಬಂದು ಟ್ರೋಫಿಯನ್ನು ಎತ್ತಿ ಹಿಡಿದ ರೀತಿಯಲ್ಲೇ ವಿಶ್ವಕಪ್​ ಟ್ರೋಫಿಯನ್ನು ಎತ್ತಿ ಸಂಭ್ರಮಿಸಿದ್ದಾರೆ. ಟೀಮ್​ ಇಂಡಿಯಾ ಆಟಗಾರರು ಕೂಡ ಅರ್ಜೆಂಟೀನಾ ಫುಟ್ಬಾಲ್​ ತಂಡದ ಆಟಗಾರರಂತೆ ಸಂಭ್ರಮಿಸಿದ್ದು ಕಂಡುಬಂತು.

ಇದನ್ನೂ ಓದಿ T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕ್ರಿಯೇಟಿವ್​ ವಿಷ್‌

ಅಂದು ನಡೆದಿದ್ದ ರಣರೋಚಕ ಫುಟ್ಬಾಲ್​ ಫೈನಲ್​ ಪಂದ್ಯದಲ್ಲಿ ಪೂರ್ಣ ಅವಧಿ 90 ನಿಮಿಷ ಹಾಗೂ ಹೆಚ್ಚುವರಿ 30 ನಿಮಿಷಗಳ ಆಟದಲ್ಲಿ ಇತ್ತಂಡಗಳು 3-3 ಗೋಲ್​ಗಳನ್ನು ಬಾರಿಸಿದ ಕಾರಣ ಫಲಿತಾಂಶಕ್ಕೆ ಪೆನಾಲ್ಟಿ ಮೊರೆ ಹೋಗಲಾಯಿತು. ಅಲ್ಲಿ ಅರ್ಜೆಂಟೀನಾ 4-2 ಗೋಲ್​ಗಳ ಅಂತರದಿಂದ ಗೆದ್ದು ವಿಜಯೋತ್ಸವ ಆಚರಿಸಿತ್ತು.

ಮೆಸ್ಸಿ ಸಂಭ್ರಮಿಸಿದ ಕ್ಷಣ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

KPCC President: ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಬದಲಾವಣೆ ಮಾಡುವುದು ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

VISTARANEWS.COM


on

KPCC President
Koo

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ (KPCC President) ಬದಲಾವಣೆ ಸುಳಿವು ಸಿಕ್ಕಿದ್ದು, ಅಧಿವೇಶನದ ಬಳಿಕ ಕೆಪಿಸಿಸಿ ನೂತನ ಸಾರಥಿ ಆಯ್ಕೆ ಸಾಧ್ಯತೆ ಇವೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೈ ಹೈಕಮಾಂಡ್ ಇಂಗಿತ ಹೊಂದಿದ್ದು, ಇದರ ಸುಳಿವು ಸಿಗುತ್ತಿದ್ದಂತೆ ಅಧ್ಯಕ್ಷಗಿರಿ ಪಟ್ಟಕ್ಕಾಗಿ ಲಾಬಿ ಜೋರಾಗಿದೆ. ದಲಿತರು, ಬ್ರಾಹ್ಮಣರು, ಒಕ್ಕಲಿಗರ ಕೋಟಾ ಮುಗಿದಿದೆ, ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಜತೆಗೆ ನಮಗೂ ಅವಕಾಶ ಕೊಡಿ ಎಂದು ವಾಲ್ಮೀಕಿ ಸಮುದಾಯದ ನಾಯಕರೂ ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ಬಿ.ಕೆ. ಹರಿಪ್ರಸಾದ್ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ‌, ಕೆ.ಎನ್. ರಾಜಣ್ಣ ಹೆಸರುಗಳು ಮುನ್ನೆಲೆಗೆ ಬಂದಿವೆ. ಈಗಾಗಲೇ ನಾನು ಅಧ್ಯಕ್ಷನಾಗಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮತ್ತೊಂದೆದೆ ಹಿಂದುಳಿದ ವರ್ಗಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಜಾತಿ ಮತ್ತು ಪ್ರಾದೇಶಿಕ ಆಧಾರಿತವಾಗಿ ಅಧ್ಯಕ್ಷರ ಆಯ್ಕೆ ಮಾಡಲು ಹೈ ಕಮಾಂಡ್‌ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಈ ಬಾರಿ ಲಿಂಗಾಯತ ಹಾಗೂ ಕಲ್ಯಾಣ ಕರ್ನಾಟಕದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರ ಹೆಸರು ಮುನ್ನೆಲೆಯಲ್ಲಿದೆ.

ದೆಹಲಿ‌ ಮಟ್ಟದಲ್ಲಿ ನಡೆದಿದೆ ಚರ್ಚೆ

ಸಿಎಂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ನವ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದ್ದು, ಡಿ.ಕೆ. ಶಿವಕುಮಾರ್ ಬಳಿಯೇ ಎರಡು ಪ್ರಬಲ ಖಾತೆಗಳಿವೆ, ಇದು ಪಕ್ಷ ಸಂಘಟನೆಗೆ ಅನುಕೂಲವಲ್ಲ. ಹೀಗಾಗಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

ಇನ್ನು ಹೈ ಕಮಾಂಡ್ ನಾಯಕರಿಂದಲೂ ಕೆಪಿಸಿಸಿಗೆ ನೂತನ ಸಾರಥಿ ನೀಡುವ ಬಗ್ಗೆ ಒಲವು ಹೆಚ್ಚಿದೆ ಎನ್ನಲಾಗಿದೆ. ನೂತನ ಅಧ್ಯಕ್ಷರ ಆಯ್ಕೆಯಾದರೇ ಕಾಂಗ್ರೆಸ್ ಒಳಗಿನ ಸಮಸ್ಯೆಗಳಿಗೆ ಇತಿಶ್ರೀ ಹಾಡಬಹುದು ಎಂದು ದೆಹಲಿ ಭೇಟಿ ವೇಳೆ ರಾಜ್ಯ ನಾಯಕರು ಹೇಳಿದ್ದಾರೆ. ಹೀಗಾಗಿ ರಾಜ್ಯ ನಾಯಕರ ಮಾತಿಗೆ ಬಹುತೇಕ ಮನ್ನಣೆ ಸಿಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ | CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ತನಕ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಮುಂದುವರಿಯುವ ಇರಾದೆ ಹೊಂದಿದ್ದಾರೆ. ಆದರೆ, ಮತ್ತೊಂದೆಡೆ ರಾಜ್ಯ ನಾಯಕರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈ ಕಮಾಂಡ್‌ ಒಲವು ಹೊಂದಿದೆ ಎನ್ನಲಾಗಿದ್ದು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

Continue Reading
Advertisement
Leopard attack bike rider and cab driver
ಬೆಂಗಳೂರು8 mins ago

Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

Suryakumar Yadav
ಪ್ರಮುಖ ಸುದ್ದಿ12 mins ago

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Money Guide
ಮನಿ-ಗೈಡ್14 mins ago

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Road Accident
ಬೆಳಗಾವಿ18 mins ago

Road Accident : ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Pradeep Eshwar
ಕರ್ನಾಟಕ26 mins ago

Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

Actor Darshan in Parappana Agrahara Jail special fan who came to visit
ಸ್ಯಾಂಡಲ್ ವುಡ್41 mins ago

Actor Darshan : ಶಂಖ ಊದುತ್ತ, ಜಾಗಟೆ ಬಾರಿಸುತ್ತ ದರ್ಶನ್‌ ಭೇಟಿಗೆ ಬಂದ ವಿಶೇಷ ಚೇತನ ಅಭಿಮಾನಿ!

Hardik Pandya
ಪ್ರಮುಖ ಸುದ್ದಿ43 mins ago

Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

Physical Assault
ಕ್ರೈಂ49 mins ago

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

bike wheeling
ಬೆಂಗಳೂರು ಗ್ರಾಮಾಂತರ59 mins ago

Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

Ex CIA Officer
ವಿದೇಶ1 hour ago

Ex CIA Officer: ಪಾಕಿಸ್ತಾನದಲ್ಲಿ ಉಗ್ರರನ್ನು ತಾಲಿಬಾನ್ ಮೂಲಕ ಕೊಲ್ಲುತ್ತಿರುವ ಭಾರತ; ಅಮೆರಿಕ ಗುಪ್ತಚರ ಇಲಾಖೆ ಮಾಜಿ ಅಧಿಕಾರಿ ಹೇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು4 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ23 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌