Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​ - Vistara News

ಕ್ರೀಡೆ

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Gully cricket vibes:ಕಳೆದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಕೊಹ್ಲಿ ಬಾಂಗ್ಲಾ ವಿರುದ್ಧ ತುಸು ಚೇತರಿಕೆಯ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಜತೆಗೆ ದಾಖಲೆಯೊಂದನ್ನು ಕೂಡ ತಮ್ಮ ಹೆಸರಿಗೆ ಬರೆದರು. 37 ರನ್‌ ಮಾಡಿದ ಕೊಹ್ಲಿ ವಿಶ್ವಕಪ್​ ಟೂರ್ನಿಯಲ್ಲಿ (ಟಿ20 ಮತ್ತು ಏಕದಿನ) 3 ಸಾವಿರ ರನ್‌ ಪೂರೈಸಿದ ಮೊದಲ ಕ್ರಿಕೆಟಿಗನೆನಿಸಿದರು.

VISTARANEWS.COM


on

Gully cricket vibes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆ್ಯಂಟಿಗುವಾ: ಶನಿವಾರ ರಾತ್ರಿ ನಡೆದ ಬಾಂಗ್ಲಾದೇಶ(India vs Bangladesh) ವಿರುದ್ಧದ ಸೂಪರ್‌-8 ಪಂದ್ಯದಲ್ಲಿ ಭಾರತ 50 ರನ್ ಗಳ ಅಮೋಘ ಜಯ ಸಾಧಿಸಿ ಸೆಮಿಫೈನಲ್​ ಸನಿಹಕ್ಕೆ ಬಂದು ನಿಂತಿದೆ. ಈ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಗಲ್ಲಿ ಕ್ರಿಕೆಟ್​ನಲ್ಲಿ(‘Gully cricket vibes) ಚೆಂಡನ್ನು ಹುಡುಕಿದಂತೆ ಸ್ಟೇಡಿಯಂನ ಸ್ಟ್ಯಾಂಡ್​ವೊಂದರ ಒಳಗಡೆ ನುಗ್ಗಿ ಚೆಂಡು ಹುಡುಕುತ್ತಿರುವ ವಿಡಿಯೊವೊಂದು ವೈರಲ್(viral video)​ ಆಗಿದೆ.


ಬಾಂಗ್ಲಾದೇಶ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ಈ ಘಟನೆ ಸಂಭವಿಸಿದೆ. ಸಿಕ್ಸರ್​ಗೆ ಚಿಮ್ಮಿದ ಚೆಂಡು ಬೌಂಡರಿ ಲೈನ್​ನ ಹೊರ ಭಾಗದಲ್ಲಿ ಇರಿಸಲಾಗಿದ್ದ ಸ್ಟ್ಯಾಂಡ್​ ಒಂದರ ಕೆಳ ಭಾಗಕ್ಕೆ ಹೋಯಿತು. ಬೌಂಡರಿ ಲೈನ್​ ಬಳಿ ಫೀಲ್ಡಿಂಗ್​ ನಡೆಸುತ್ತಿದ್ದ ವಿರಾಟ್​ ಕೊಹ್ಲಿ ಅವರು ಚೆಂಡನ್ನು ತೆಗೆಯಲು ಈ ಸ್ಟ್ಯಾಂಡ್​ ಒಳಗಡೆ ನುಗ್ಗಿ ಕೊನೆಗೂ ಚೆಂಡನ್ನು ಹೊರ ತೆಗೆದಿದ್ದಾರೆ. ಕೊಹ್ಲಿಯ ಈ ಸರಳತೆಗೆ ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೆಲ ನೆಟ್ಟಿಗರು ಗಲ್ಲಿ ಕ್ರಿಕೆಟ್​ನ ನೆನೆಪು ಮತ್ತೆ ಮರುಕಳಿಸಿದ್ದಕ್ಕೆ ಧನ್ಯವಾದಗಳು ಕೊಹ್ಲಿ ಸರ್​…ಎಂದು ಕಮೆಂಟ್​ ಮಾಡಿದ್ದಾರೆ.

ದಾಖಲೆ ಬರೆದ ಕೊಹ್ಲಿ


ಕಳೆದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಕೊಹ್ಲಿ ಬಾಂಗ್ಲಾ ವಿರುದ್ಧ ತುಸು ಚೇತರಿಕೆಯ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಜತೆಗೆ ದಾಖಲೆಯೊಂದನ್ನು ಕೂಡ ತಮ್ಮ ಹೆಸರಿಗೆ ಬರೆದರು. 37 ರನ್‌ ಮಾಡಿದ ಕೊಹ್ಲಿ ವಿಶ್ವಕಪ್​ ಟೂರ್ನಿಯಲ್ಲಿ (ಟಿ20 ಮತ್ತು ಏಕದಿನ) 3 ಸಾವಿರ ರನ್‌ ಪೂರೈಸಿದ ಮೊದಲ ಕ್ರಿಕೆಟಿಗನೆನಿಸಿದರು. ಕಳೆದ ಹಲವು ವರ್ಷಗಳಿಂದ ವಿರಾಟ್ ಕೊಹ್ಲಿ ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ ತಂಡಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಬೆನ್ನೆಲುಬಾಗಿದ್ದಾರೆ.

ಇದನ್ನೂ ಓದಿ Virat Kohli : ಐಸಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿ ವಿಶೇಷ ಮೈಲುಗಲ್ಲು ಸ್ಥಾಪಿಸಿದ ವಿರಾಟ್​ ಕೊಹ್ಲಿ

ಐಸಿಸಿ ಸೀಮಿತ ಓವರ್​ಗಳ ಕ್ರಿಕೆಟ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಈಗ ಅಗ್ರಸ್ಥಾನದಲ್ಲಿದ್ದಾರೆ. ಅವರು ಒಟ್ಟು 3500 ರನ್ ಪೂರೈಸಿದ್ದಾರೆ. ರೋಹಿತ್ ಶರ್ಮಾ 3107 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 2942 ರನ್ ಗಳಿಸಿ ಮೂರನೇ ಸ್ಥಾನ ಪಡೆದರೆ, ಶ್ರೀಲಂಕಾದ ಕುಮಾರ ಸಂಗಕ್ಕಾರ ಮತ್ತು ಮಹೇಲ ಜಯವರ್ಧನೆ ಕ್ರಮವಾಗಿ 2876 ಮತ್ತು 2858 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. 

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ಹಾರ್ದಿಕ್‌ ಪಾಂಡ್ಯ ಅವರ ಅಜೇಯ ಅರ್ಧ ಶತಕದ ನೆರವಿನಿಂದ 5 ವಿಕೆಟಿಗೆ 196 ರನ್‌ ಪೇರಿಸಿತು. ದೊಡ್ಡ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಸತತ 2 ಸೋಲು ಕಂಡ ಬಾಂಗ್ಲಾದೇಶದ ಸೆಮಿಫೈನಲ್​ ಹಾದಿ ಬಹುತೇಕ ಅಂತ್ಯ ಕಂಡಿತು.

ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದರು. ಡೆತ್‌ ಓವರ್‌ಗಳಲ್ಲಿ ಸಿಡಿದು ನಿಂತ ಪಾಂಡ್ಯ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಒಳಗೊಂಡಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Jasprit Bumrah : ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

VISTARANEWS.COM


on

Jasprit Bumrah
Koo

ಬೆಂಗಳೂರು: ಭಾರತ ತಂಡದ ವೇಗದ ಬೌಲರ್​ ಜಸ್​ಪ್ರಿತ್​ ಬುಮ್ರಾ (Jasprit Bumrah) ಟಿ20 ವಿಶ್ವಕಪ್​ನಲ್ಲಿ 15 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಅವರು ಭಾರತ ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಫೈನಲ್​ನಲ್ಲಿ ಅವರು ರೀಜಾ ಹೆಂಡ್ರಿಕ್ಸ್ ಮತ್ತು ಮಾರ್ಕೊ ಜೆನ್ಸರ್​ ವಿಕೆಟ್​ಗಳನ್ನು ಉರುಳಿಸಿದ್ದಾರೆ. ಭಾರತದ ಪಾಲಿಗೆ ಎರಡೂ ಪ್ರಮುಖ ವಿಕೆಟ್​ಗಳಾಗಿವೆ. ಬುಮ್ರಾ ವಿಶ್ವಕಪ್​ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಟೂರ್ನಿಯುದ್ದಕ್ಕೂ ರೋಹಿತ್ ಶರ್ಮಾ ಅವರ ಪ್ರಮುಖ ಬೌಲರ್​ ಆಗಿದ್ದರು.

ಫೈನಲ್​​ನಲ್ಲಿ ವಿರಾಟ್ ಕೊಹ್ಲಿ 76 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮತ್ತೊಂದೆಡೆ, ವಿಶ್ವಕಪ್​ನಾದ್ಯಂತ ಬೌಲಿಂಗ್​ ಸ್ಥಿರತೆಗಾಗಿ ಬುಮ್ರಾ ಅವರನ್ನು ಪಂದ್ಯಾವಳಿಯ ಉತ್ತಮ ಆಟಗಾರ ಎಂದು ಹೆಸರಿಸಲಾಯಿತು. ಭಾರತವು ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ನಂತರ ಬುಮ್ರಾ ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಮಾತನಾಡಿದರು. ಈ ಪಂದ್ಯಾವಳಿಯಲ್ಲಿ ಐಸಿಸಿ ಪರವಾಗಿ ಕೆಲಸ ಮಾಡುತ್ತಿರುವ ಗಣೇಶನ್ ಅವರು ವಿಶ್ವಕಪ್ ಗೆದ್ದ ಬಗ್ಗೆ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಬುಮ್ರಾ ಅವರನ್ನು ಕೇಳಿದರು.

“ಇದು ನಿಜವಾಗಿಯೂ ಖುಷಿಯ ವಿಚಾರ. ಇನ್ನಿಂಗ್ಸ್ ನ ಮಧ್ಯದಲ್ಲಿ ನಮಗೆ ಆತ್ಮವಿಶ್ವಾಸವಿತ್ತು. ಆದರೆ ಅದು ಹೇಗೆ ಸಾಗುತ್ತೇವೆ ಎಂದು ನಾವು ಹೆದರಿದ್ದೆವು. ಆದರೆ ಈ ರೀತಿಯ ಗೆಲುವನ್ನು ಪಡೆಯಲು ನಿಜವಾಗಿಯೂ ಸಂತೋಷವಾಗಿದೆ.. ಇದು ಉತ್ತಮ ಟೂರ್ನಿ ಎಂದು ಬುಮ್ರಾ ಹೇಳಿದ್ದಾರೆ. ಪುತ್ರ ಅಂಗದ್​ ಕೂಡ ಜತೆಯಲ್ಲಿರುವ ಕಾರಣ ಆತನೊಂದಿಗೆ ವಿಶ್ವ ಕಪ್​ ಗೆಲುವು ಸಂಭ್ರಮಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದ್ದಾರೆ.

“ನಮ್ಮ ಪುತ್ರ ಅಂಗದ್ ಕೂಡ ಇಲ್ಲಿದ್ದಾನೆ. ಆತ ನಾವು ವಿಶ್ವಕಪ್ ಗೆದ್ದಿರುವುದನ್ನು ನೋಡಿದ್ದಾನೆ ಇದಕ್ಕಿಂತ ಉತ್ತಮ ಭಾವನೆ ಇಲ್ಲ. ಈ ರೀತಿಯ ಪಂದ್ಯಾವಳಿಯಲ್ಲಿ ಭಾರತಕ್ಕೆ ಕೊಡುಗೆ ನೀಡಿದ್ದಕ್ಕೆ ಸಂತೋಷವಿದೆ” ಎಂದು ವೇಗಿ ಹೇಳಿದ್ದಾರೆ.

ಈ ಟಿ 20 ವಿಶ್ವಕಪ್​​ನಲ್ಲಿ ಭಾರತದ ಅಜೇಯ ಓಟದ ಬಗ್ಗೆ ಪ್ರತಿಕ್ರಿಯಿಸಿದ ಬುಮ್ರಾ, “ಎಲ್ಲಾ ಪ್ರಶಂಸೆಗಳು ಕಡಿಮೆ. ನಾವು ನಿರೀಕ್ಷೆಗಳೊಂದಿಗೆ ಬಂದಿದ್ದೆವು. ನಾವು ನಮ್ಮ ಆಟಕ್ಕೆ ಅಂಟಿಕೊಂಡಿದ್ದೆವು. ಕೊನೆಯ ಹಂತಗಳಲ್ಲಿಯೂ, ನಾವು ಭಯಭೀತರಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

ಭಾರತೀಯ ವೇಗಿ ಇಡೀ ಭಾರತೀಯ ಬೌಲಿಂಗ್ ವಿಭಾಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ನಿಜವಾಗಿಯೂ ಖುಷಿಯ ವಿಚಾರ. ಎಲ್ಲ ಬೌಲರ್​ಗಳು ತುಂಬಾ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾಮಾನ್ಯವಾಗಿ, ನಾನು ನನ್ನ ಭಾವನೆಗಳನ್ನು ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತೇನೆ. ಆದರೆ ಈ ಬಾರಿ, ಇದು ಅವಾಸ್ತವಿಕ ಭಾವನೆಯಾಗಿದೆ” ಎಂದು ಬುಮ್ರಾ ಸಂತೋಷ ವ್ಯಕ್ತಪಡಿಸಿದ್ದಾರೆ. ನಾನು ಚಂದ್ರನ ಮೇಲೆ ಇದ್ದೇನೆ, ವಿಶೇಷವಾಗಿ ನನ್ನ ಕುಟುಂಬದೊಂದಿಗೆ ಇಲ್ಲಿದ್ದೇನೆ ಎಂದು ಭಾವಿಸುವೆ ಎಂದು ಭಾರತೀಯ ವೇಗಿ ಹೇಳಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಲು ಭಾರತೀಯ ನಾಯಕ ರೋಹಿತ್ ಶರ್ಮಾ ಅವರ ತಂತ್ರಗಾರಿಕೆಯ ನಿರ್ಧಾರವು ಫಲ ನೀಡಿತು. ಅಂತಿಮವಾಗಿ ದಕ್ಷಿಣ ಆಫ್ರಿಕಾ ಚೇಸಿಂಗ್​​ನಲ್ಲಿ ಒತ್ತಡಕ್ಕೆ ಸಿಲುಕಿತು. ಅಂತಿಮ ಐದು ಓವರ್ಗಳಲ್ಲಿ 30 ರನ್​ಗಳ ಅಗತ್ಯವಿದ್ದ ದಕ್ಷಿಣ ಆಫ್ರಿಕಾ ವಿಫಲಗೊಂಡಿತು.

Continue Reading

ಪ್ರಮುಖ ಸುದ್ದಿ

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Ravindra Jadeja : ರವೀಂದ್ರ ಜಡೇಜಾ ಅವರ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಹೇಳುವುದರೊಂದಿಗೆ ಟಿ20 ವಿಶ್ವ ಕಪ್​ ಗೆಲುವಿನ ಬಳಿಕ ಭಾರತ ತಂಡದಿಂದ ಟಿ20 ವಿಶ್ವ ಕಪ್​ಗೆ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

VISTARANEWS.COM


on

Ravindra jadeja
Koo

ಬೆಂಗಳೂರು: ಭಾರತದ ತಂಡ ಸ್ಟಾರ್​ ಆಲ್​ರೌಂಡರ್​ ರವೀಂದ್ರ ಜಡೇಜಾ (Ravindra Jadeja ) ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್​ ಮೂಲಕ ಟಿ 20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. “ಕೃತಜ್ಞತೆ ತುಂಬಿದ ಹೃದಯದಿಂದ ನಾನು ಟಿ 20 ಅಂತರರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದ್ದನ್ನು ನೀಡಿದ್ದೇನೆ. ಕ್ರಿಕೆಟ್​​ನ ಇತರ ಸ್ವರೂಪಗಳಲ್ಲಿ ಆಟ ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿತ್ತು. ಅದು ನನಸಾಗಿದೆ. ನನ್ನ ಟಿ 20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.

ಸ್ಪಿನ್-ಬೌಲಿಂಗ್ ಆಲ್ರೌಂಡರ್ ಎಂಎಸ್ ಧೋನಿ ನಾಯಕತ್ವದಲ್ಲಿ ತಂಡಕ್ಕೆ ಕಾಲಿಟ್ಟಿದ್ದರು. ಅಲ್ಲಿಂದ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಅವರು ಹೆಚ್ಚು ಪ್ರಭಾವಶಾಲಿ ಪ್ರದರ್ಶನ ನೀಡಿರಲಿಲ್ಲ. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಅವರು 74 ಪಂದ್ಯಗಳನ್ನು ಆಡಿದ್ದು, 515 ರನ್ ಹಾಗೂ 54 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

2024ರ ಟಿ20 ವಿಶ್ವಕಪ್ ಗೆದ್ದ ಮರುದಿನವೇ ಆಲ್​ರೌಂಡ್​​ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಂಡದಲ್ಲಿ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅದಕ್ಕಿಂತ ಮೊದಲು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಬಾರ್ಬಡೋಸ್​ನ ಕೆನ್ಸಿಂಗ್ಟನ್​ ಓವಲ್​​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಭಾರತ 7 ರನ್​ಗಳಿಂದ ಗೆದ್ದುಕೊಂಡಿತು. ಐಸಿಸಿ ಪ್ರಶಸ್ತಿ ಗೆಲುವಿನ ನಂತರ ಭಾರತ ಸಂಭ್ರಮದಲ್ಲಿರುವಾಗ ಜಡೇಜಾ ಅವರು ವಿರಾಟ್ ಕೊಹ್ಲಿ ಮತ್ತು ಅವರ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂಬಾಲಿಸಿದರು.

ವಿಶ್ವ ಕಪ್​ನಲ್ಲಿ ಜಡೇಜಾ ಉತ್ತಮ ಫಾರ್ಮ್​​ನಲ್ಲಿ ಇರಲಿಲ್ಲ. ಆದರೆ ಕಳೆದ ದಶಕದಲ್ಲಿ ವಿಶ್ವ ಕ್ರಿಕೆಟ್​ನಲ್ಲಿ ಅವರು ಪ್ರಾಬಲ್ಯ ಸಾಧಿಸಿದ್ದರು. ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತೀಯ ತಂಡದ ಆಸ್ತಿಯಾಗಿದ್ದರು. ಸಾರ್ವಕಾಲಿಕ ಅತ್ಯುತ್ತಮ ಆಲ್ರೌಂಡರ್ಗಳಲ್ಲಿ ಒಬ್ಬರೆಂದು ಕರೆಯಲ್ಪಡುವ ಜಡೇಜಾ ಸುಮಾರು 36 ನೇ ವಯಸ್ಸಿನಲ್ಲಿ ಟಿ 20 ಐ ಕ್ರಿಕೆಟ್​ನಿಂದ ವಿದಾಯ ಹೇಳಿದ್ದಾರೆ. ಅವರು ಐಪಿಎಲ್​ನಲ್ಲಿ ಮುಂದುವರಿಯಲಿದ್ದಾರೆ.

2022 ರಲ್ಲಿ ಇಂಗ್ಲೆಂಡ್ ವಿರುದ್ಧ ಬ್ಯಾಟಿಂಗ್​ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವು ಬಂದಿದ್ದವು. ಅಲ್ಲಿ ಅವರು 29 ಎಸೆತಗಳಲ್ಲಿ 46 ರನ್ ಗಳಿಸಿದ್ದರು. ಆ ಪಂದ್ಯವನ್ನು ಭಾರತ 49 ರನ್​ಗಳಿಂದ ಗೆದ್ದಿತ್ತು. ದುಬೈನಲ್ಲಿ ನಡೆದ 2021 ರ ಟಿ 20 ವಿಶ್ವಕಪ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಅವರು ಬೌಲಿಂಗ್​ನಲ್ಲಿ 15 ನೀಡಿ 3 ವಿಕೆಟ್ ಉರುಳಿಸಿದ್ದರು.

ಜಡೇಜಾ ಅವರ ಅತ್ಯಂತ ಗಮನಾರ್ಹ ಲಕ್ಷಣವೆಂದರೆ ಅವರ ಫೀಲ್ಡಿಂಗ್. ಸುರೇಶ್ ರೈನಾ ಮತ್ತು ಯುವರಾಜ್ ಸಿಂಗ್ ಅವರಂತಹ ಆಟಗಾರರನ್ನು ನಾವು ಹೊಂದಿದ್ದ ಸಮಯದಲ್ಲಿ ಸೌರಾಷ್ಟ್ರದ ಆಟಗಾರ ತಮ್ಮ ವೃತ್ತಿಜೀವನದುದ್ದಕ್ಕೂ ಅನೇಕ ಸಂದರ್ಭಗಳಲ್ಲಿ ಉತ್ತಮ ಫೀಲ್ಡಿಂಗ್ ಮಾಡಿದ್ದಾರೆ. ಅವರು ಎದುರಾಳಿ ತಂಡಕ್ಕೆ 20 ರನ್​ಗಳನ್ನು ಫೀಲ್ಡಿಂಗ್​ನಲ್ಲಿ ಬಿಟ್ಟುಕೊಡುತ್ತಿರಲಿಲ್ಲ.

ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ನಿಯೋಜಿತ ಆಲ್​ರೌಂಡರ್​ಗಳಾಗಿ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಜಡೇಜಾ ಈಗ ಏಕದಿನ ಮತ್ತು ಟೆಸ್ಟ್ ಸ್ವರೂಪಗಳತ್ತ ಗಮನ ಹರಿಸಿದ್ದಾರೆ.

Continue Reading

ಕ್ರೀಡೆ

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

IND vs SA Final: ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IND vs SA Final
Koo

ಲಂಡನ್​: ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್(​T20 World Cup 2024) ಗೆಲ್ಲುವ ಮೂಲಕ ಭಾರತೀಯ(IND vs SA Final) ಕ್ರಿಕೆಟ್​ ಅಭಿಮಾನಿಗಳು 13 ವರ್ಷಗಳಿಂದ ಕಾಯುತ್ತಿದ್ದ ಐಸಿಸಿ ಟ್ರೋಫಿಯೊಂದರ ಕನಸು ನನಸಾಯಿತು. ಈ ಗೆಲುವಿನ ಸಂಭ್ರಮವನ್ನು ದೇಶ-ವಿದೇಶದಲ್ಲಿರುವ ಭಾರತೀಯರು ಸಂಭ್ರಮಿಸಿದ್ದಾರೆ. ಇದೀಗ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿಯೂ ಈ ಗೆಲುವಿನ ಸಂಭ್ರಮಾಚರಣೆ ನಡೆದಿದೆ.

ಹೌದು, ಲಂಡನ್‌ಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಫೈನಲ್​ ಪಂದ್ಯವನ್ನು ತಮ್ಮ ಲ್ಯಾಪ್​ಟಾಪ್​ಗಳಲ್ಲಿ ವೀಕ್ಷಿಸಿದ್ದಾರೆ. ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಹರ್ದೀಪ್ ಸಿಂಗ್ ಎನ್ನುವವರು ಪಂದ್ಯವನ್ನು ವೀಕ್ಷಿಸಲು ತಡೆರಹಿತ ವೈ-ಫೈ ಸೇವೆಯನ್ನು ಒದಗಿಸಿದ ಏರ್‌ಲೈನ್‌ಗೆ ಧನ್ಯವಾದ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಇದನ್ನೂ ಓದಿ Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

Continue Reading

ಕ್ರಿಕೆಟ್

T20 World Cup 2024 : ಚಾಂಪಿಯನ್ ಭಾರತಕ್ಕೆ ಪಾಕಿಸ್ತಾನ ಆಟಗಾರರು ಶುಭ ಕೋರಿದ್ದು ಹೀಗೆ…

T20 World Cup 2024 : 2016ರಲ್ಲಿ ಭಾರತವು ಸೆಮಿಫೈನಲ್​​ನಲ್ಲಿ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಸೋತಿತ್ತು. 2021 ರಲ್ಲಿ ಮುಂದಿನ ಗುಂಪು ಹಂತದ ನಿರ್ಗಮನ ಕಂಡಿತು. 2022 ರಲ್ಲಿ, ಟಿ 20 ವಿಶ್ವಕಪ್​​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಸೆಮಿಫೈನಲ್​ನಲ್ಲಿ ಟ್ರೋಫಿ ವಿಜೇತ ಇಂಗ್ಲೆಂಡ್ ವಿರುದ್ಧ ಸೋತಿತ್ತು. ಆ ಸೋಲು ನಿಜವಾಗಿಯೂ ಭಾರತೀಯ ತಂಡಕ್ಕೆ ರಿಯಾಲಿಟಿ ಚೆಕ್ ಆಗಿತ್ತು.

VISTARANEWS.COM


on

T20 World Cup 2024
Koo

ನವದೆಹಲಿ: ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup 2024) ಅದ್ಭುತ ಗೆಲುವು ಸಾಧಿಸಿದ ಭಾರತ ತಂಡವನ್ನು ಪಾಕಿಸ್ತಾನದ ಮಾಜಿ ಮತ್ತು ಪ್ರಸ್ತುತ ಆಟಗಾರರು ಅಭಿನಂದಿಸಿದ್ದಾರೆ. ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ಗಳ ವಿಜಯ ಸಾಧಿಸಿದೆ. 2014ರ ಆವೃತ್ತಿಯ ಫೈನಲ್​ನಲ್ಲಿ ಸೋತ ಬಳಿಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದಿದೆ.

2016ರಲ್ಲಿ ಭಾರತವು ಸೆಮಿಫೈನಲ್​​ನಲ್ಲಿ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ಸೋತಿತ್ತು. 2021 ರಲ್ಲಿ ಮುಂದಿನ ಗುಂಪು ಹಂತದ ನಿರ್ಗಮನ ಕಂಡಿತು. 2022 ರಲ್ಲಿ, ಟಿ 20 ವಿಶ್ವಕಪ್​​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಸೆಮಿಫೈನಲ್​ನಲ್ಲಿ ಟ್ರೋಫಿ ವಿಜೇತ ಇಂಗ್ಲೆಂಡ್ ವಿರುದ್ಧ ಸೋತಿತ್ತು. ಆ ಸೋಲು ನಿಜವಾಗಿಯೂ ಭಾರತೀಯ ತಂಡಕ್ಕೆ ರಿಯಾಲಿಟಿ ಚೆಕ್ ಆಗಿತ್ತು. ಇದು ಟಿ20 ಐ ಆಟದಲ್ಲಿ ತೀವ್ರ ಬದಲಾವಣೆಗೆ ಕಾರಣವಾಯಿತು. ತಂಡದ ರಚನೆಯ ದೃಷ್ಟಿಯಿಂದ ಅಲ್ಲ ಆದರೆ ಮನಸ್ಥಿತಿಯ ದೃಷ್ಟಿಯಿಂದ. ಈ ಟಿ 20 ವಿಶ್ವಕಪ್​ನ್ಲಿ ಆಡಲು ರೋಹಿತ್ ಶರ್ಮಾ ಮತ್ತು ಬಳಗ ಬಂದಾಗ, ಅವರ ಉದ್ದೇಶ ಸ್ಪಷ್ಟವಾಗಿತ್ತು. ಅವರು ಆಕ್ರಮಣಕಾರಿಯಾಗಿ ಆಡಿದ್ದರು.

ರೋಹಿತ್ ಶರ್ಮಾ ಮುಂಚೂಣಿಯಿಂದ ತಂಡವನ್ನು ಮುನ್ನಡೆಸಿದರು. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುವ ಬದಲು ವಿರಾಟ್ ಕೊಹ್ಲಿ ಆರಂಭಿಕರಾದರು. ರಿಷಭ್ ಪಂತ್ ಅವರನ್ನು 3 ನೇ ಕ್ರಮಾಂಕಕ್ಕೆ ಇಳಿಸಲಾಯಿತು. ಆ ಎಲ್ಲಾ ನಡೆಗಳು ಕೆಲಸ ಮಾಡಿದವು.

ಆದರೆ ರೋಹಿತ್ ಶರ್ಮಾಗೆ ಮುಖ್ಯ ಟ್ರಂಪ್ ಕಾರ್ಡ್ ಅವರ ದೀರ್ಘಕಾಲದ ಮುಂಬೈ ಇಂಡಿಯನ್ಸ್ ತಂಡದ ಸಹ ಆಟಗಾರ ಜಸ್ಪ್ರೀತ್ ಬಮ್ರಾ. ಫೈನಲ್​ನಲ್ಲಿ ಕೊಹ್ಲಿ ಮತ್ತು ಬುಮ್ರಾ ವಿಭಿನ್ನವಾಗಿ ಆಡಿದರು. ಕೊಹ್ಲಿ ಬ್ಯಾಟ್​​ನಿಂದ ಮಿಂಚಿದರೆ, ಬುಮ್ರಾ ತಮ್ಮ ಬೌಲಿಂಗ್​ನಿಂದ ಸಂಪೂರ್ಣವಾಗಿ ಬದಲಾಯಿಸಿದರು. ಆ ಇಬ್ಬರು ಆಟಗಾರರು ಪ್ರದರ್ಶನ ನೀಡದಿದ್ದರೆ, ಭಾರತವು 17 ವರ್ಷಗಳ ನಂತರ ವಿಶ್ವ ಟಿ 20 ಚಾಂಪಿಯನ್ ಕಿರೀಟವನ್ನು ಪಡೆಯುತ್ತಿರಲಿಲ್ಲ. ಮೆನ್ ಇನ್ ಬ್ಲೂನ ಅದ್ಭುತ ವಿಜಯಕ್ಕೆ ಪಾಕಿಸ್ತಾನದ ಕ್ರಿಕೆಟಿಗರನೇಕರು ಪ್ರತಿಕ್ರಿಯೆ ನೀಡಿದ್ದಾರೆ.

ಶಹೀನ್ ಶಾ ಅಫ್ರಿದಿ ಭಾರತ ತಂಡಕ್ಕೆ ಹಾಗೂ ವಿದಾಯ ಹೇಳಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಅಭಿನಂದನೆ ಸಲ್ಲಿಸಿದ್ದಾರೆ.

ಅರ್ಹ ತಂಡವು ಟಿ 20 ವಿಶ್ವಕಪ್ ಗೆದ್ದಿತು. ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಈ ಅಪ್ರತಿಮ ಗೆಲುವಿನಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅಭಿನಂದನೆಗಳು. ಅವರು ಯಾವಾಗಲೂ ಸ್ಥಿರವಾಗಿದ್ದರು ಮತ್ತು ಬಾಗಿಲು ತಟ್ಟುತ್ತಲೇ ಇದ್ದರು, ಈ ಗೆಲುವು ಸಂಪೂರ್ಣ ಸಮರ್ಪಣೆಯ ಫಲಿತಾಂಶವಾಗಿದೆ ಎಂದು ಅಹಮದ್​ ಶೆಹಜಾದ್ ಹೇಳಿದ್ದಾರೆ.

ಕಷ್ಟದ ಸಂದರ್ಭವನ್ನು ಎದುರಿಸಿಕೊಂಡು ಟ್ರೋಫಿ ಗೆದ್ದ ಭಾರತ ತಂಡಕ್ಕೆ ಶುಭಾಶಯಗಳು ಎಂದು ವಕಾರ್ ಯೂನಿಸ್ ಬರೆದುಕೊಂಡಿದ್ದಾರೆ.

ಸ್ಮರಣೀಯ ಗೆಲುವಿಗಾಗಿ ಭಾರತಕ್ಕೆ ಅಭಿನಂದನೆಗಳು. ರೋಹಿತ್​ ಅದಕ್ಕೆ ಸಂಪೂರ್ಣವಾಗಿ ಅರ್ಹರು, ಅವರು ಅಸಾಧಾರಣ ನಾಯಕರಾಗಿದ್ದಾರೆ. ಎಂದಿನಂತೆ ದೊಡ್ಡ ಮ್ಯಾಚ್ ಪ್ಲೇಯರ್ ಮತ್ತು ಬುಮ್ರಾ ನಿಸ್ಸಂದೇಹವಾಗಿ ವಿಶ್ವದ ಅತ್ಯುತ್ತಮ ಬೌಲರ್. ಕಠಿಣ ಅದೃಷ್ಟ. ಪಂದ್ಯಾವಳಿಯಲ್ಲಿ ಅದ್ಭುತವಾಗಿ ಆಡಿದ ತಂಡದ ಉತ್ತಮ ಹೋರಾಟ ಎಂದು ಹೇಳಿದ್ದಾರೆ.

ವೇಗದ ಬೌಲರ್​ ಶೋಯೆಬ್ ಅಖ್ತರ್ ಅವರು ಶುಭಾಶಯ ಕೋರಿದ್ದು ಅದರ ವಿಡಿಯೊ ಇಲ್ಲಿದೆ.

Continue Reading
Advertisement
Karnataka Politics
ಕರ್ನಾಟಕ6 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ15 mins ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್22 mins ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ54 mins ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ54 mins ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ1 hour ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Rain Effect
ಕೊಡಗು1 hour ago

Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Breakfast Tip
ಆರೋಗ್ಯ2 hours ago

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Ravindra jadeja
ಪ್ರಮುಖ ಸುದ್ದಿ2 hours ago

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು6 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌