Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ - Vistara News

ವೈರಲ್ ನ್ಯೂಸ್

Viral Video: ನಾಗರಹಾವು ಟಾಯ್ಲೆಟ್ ಕಮೋಡ್ ನೊಳಗೂ ಇರಬಹುದು, ಹುಷಾರ್! ಈ ವಿಡಿಯೊ ನೋಡಿ

Viral Video: ಕೆಲವೊಮ್ಮೆ ಸ್ನಾನಗೃಹದಲ್ಲಿ ಅವಿತುಕೊಳ್ಳುವ ಹಾವುಗಳು ಮೂರು ದಿನಗಳವರೆಗೆ ಇರುತ್ತವೆ. ಹಾವು ಯಾವ ಮಹಡಿಯಲ್ಲಿ ಕಾಣಿಸುತ್ತದೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ. ಅವು ನೆಲಮಹಡಿಗೆ ಮಾತ್ರ ಬರುತ್ತವೆ ಎಂಬುದು ತಪ್ಪು ಕಲ್ಪನೆ. ಯಾವುದೇ ಮಹಡಿಗೆ ಅವು ಬಹಳ ಸುಲಭವಾಗಿ ಪ್ರಯಾಣಿಸಬಲ್ಲವು ಎಂದು ಈ ಹಾವನ್ನು ಹಿಡಿದಿರುವ ವನ್ಯಪ್ರಾಣಿ ಸಂರಕ್ಷಕ ಹೇಳಿದ್ದಾರೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್: ಟಾಯ್ಲೆಟ್ ಕಮೋಡ್ ನಲ್ಲಿ (toilet commode) ನಾಗರಹಾವು (cobra) ಪತ್ತೆಯಾದ ಘಟನೆ ಇಂದೋರ್ ನಲ್ಲಿ (Indore) ನಡೆದಿದ್ದು, ಭಯ ಹುಟ್ಟಿಸುವ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ (social media) ಇನ್ ಸ್ಟಾಗ್ರಾಮ್ ನಲ್ಲಿ (Instagram) ಹಾವು ರಕ್ಷಕ ರಾಜೇಶ್ ಜಾಟ್ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೊ ಭಾರೀ ವೈರಲ್ (Viral Video) ಆಗಿದೆ.

ಇಂದೋರ್‌ನ ವಾಯ್ಸ್ 4 ವೈಲ್ಡ್‌ಲೈಫ್ ಫೌಂಡೇಶನ್‌ನ ( Voice4Wildlife Foundation) ನಿರ್ದೇಶಕ ಮತ್ತು ಸಂಸ್ಥಾಪಕ ಜಾಟ್ ಅವರು ತಮ್ಮ ಫೌಂಡೇಶನ್ ನಗರಕ್ಕೆ ಬರುವ ವನ್ಯಜೀವಿ ಪ್ರಾಣಿಗಳಾದ ವಿಷಕಾರಿ ಹಾವು ಮತ್ತು ಉಡ ವನ್ನು ರಕ್ಷಿಸುತ್ತಿದೆ. ಗೂಗಲ್ ನಲ್ಲಿ ನಮ್ಮ ಫೌಂಡೇಶನ್ ಮಾಹಿತಿ ಇದೆ. ಇಂತಹ ಸಂದರ್ಭದಲ್ಲಿ ಜನರು ನಮ್ಮ ವೆಬ್‌ಸೈಟ್ ‘voice4wildlife.in’ ಮೂಲಕ ನಮ್ಮನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಏಪ್ರಿಲ್ 1ರಂದು ಮಧ್ಯರಾತ್ರಿ ವನ್ಯಜೀವಿಯೊಂದು ನಗರಕ್ಕೆ ಬಂದಿರುವುದಾಗಿ ಫೌಂಡೇಷನ್ ಗೆ ಕರೆ ಬಂದಿತ್ತು. ಇಂದೋರ್‌ನ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ಹಾವನ್ನು ನೋಡಿ ಕರೆ ಮಾಡಿದ್ದರು ಎಂದು ರಾಜೇಶ್ ಜಾಟ್ ಹೇಳಿದ್ದಾರೆ. ಕೂಡಲೇ ಹಾವಿನ ಮೇಲೆ ನಿಗಾ ಇಡಲು ಮತ್ತು ಅಂತರವನ್ನು ಕಾಯ್ದುಕೊಳ್ಳಲು ನಾನು ಅವರನ್ನು ಕೇಳಿದೆ. ಆದರೆ ಅವರು ಹೆದರಿದರು ಮತ್ತು ಹೊರಗಿನಿಂದ ಬಾಗಿಲು ಹಾಕಿದರು. ನಾನು ಬಂದಾಗ ನನಗೆ ಹಾವು ಕಾಣಿಸಲಿಲ್ಲ. ಅನಂತರ ಕಮೋಡ್ ಒಳಗೆ ನೋಡಿದೆ. ಕಪ್ಪು ಬಣ್ಣದ, ಹೆಚ್ಚು ವಿಷಪೂರಿತ ನಾಗರ ಹಾವಿನಂತೆ ಕಾಣುತ್ತಿತ್ತು ಎಂದರು. ಜಾಟ್ ಅವರು ಇದರ ವಿಡಿಯೋ ಹಂಚಿಕೊಂಡಿದ್ದು, ಐದು ಮಿಲಿಯನ್ ಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ. ಸಾಕಷ್ಟು ಮಂದಿ ಇದನ್ನು ಭಯಾನಕ ಎಂದು ಪ್ರತಿಕ್ರಿಯಿಸಿದ್ದಾರೆ.

ಒಬ್ಬ ಬಳಕೆದಾರ ನನ್ನ ಬಾಲ್ಯದಿಂದಲೂ ಹಾವಿಗೆ ಹೆದರುತ್ತಿದ್ದೆ ಎಂದು ಬರೆದಿದ್ದಾರೆ. ಮತ್ತೊಬ್ಬರು ನನ್ನ ಭಯವು ಈಗ ವಾಸ್ತವವಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು ಹೊಸ ಭಯವನ್ನು ಅನ್ಲಾಕ್ ಮಾಡಲಾಗಿದೆ ಎಂದು ಹೇಳಿದರು. ಕೆಲವು ಬಳಕೆದಾರರು ಜಾಟ್ ಅವರ ಕೆಲಸವನ್ನು ಶ್ಲಾಘಿಸಿದ್ದು, ನಿಮ್ಮ ಕೆಲಸವು ಪ್ರಶಂಸನೀಯವಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ನಗರಗಳಲ್ಲಿನ ಒಳಚರಂಡಿ ವ್ಯವಸ್ಥೆಯ ಮೂಲಕ ಹಾವುಗಳು ಸ್ನಾನಗೃಹದೊಳಗೆ ಬರುತ್ತವೆ ಎಂದು ಜಾಟ್ ವಿವರಿಸಿದರು. ಈ ಸನ್ನಿವೇಶದಲ್ಲಿ ಇಂದೋರ್‌ನಲ್ಲಿನ ಹೆಚ್ಚಿನ ತಾಪಮಾನ ಮತ್ತು ಇಲಿಗಳು ಒಳಚರಂಡಿ ಪೈಪ್‌ಗಳಲ್ಲಿ ರಂಧ್ರಗಳನ್ನು ಅಗೆಯುವುದರಿಂದ, ಹಾವುಗಳು ಈ ಪೈಪ್‌ಗಳ ಮೂಲಕ ಚಲಿಸುತ್ತವೆ ಮತ್ತು ಟಾಯ್ಲೆಟ್ ಕಮೋಡ್‌ಗಳು ಮತ್ತು ಅಡುಗೆ ಮನೆಯ ಪೈಪ್‌ಗಳನ್ನು ಸಹ ತಲುಪುತ್ತವೆ ಎಂದು ಜಾಟ್ ಹೇಳಿದರು.

ಬಿಸಿ ವಾತಾವರಣದಿಂದಾಗಿ ಅವು ಹಗಲಿನಲ್ಲಿ ಡ್ರೈನೇಜ್ ಪೈಪ್‌ಗಳೊಳಗೆ ಅಡಗಿಕೊಳ್ಳುತ್ತವೆ ಮತ್ತು ರಾತ್ರಿಯಲ್ಲಿ ತಂಪಾಗಿರುವಾಗ ಹೊರಬರುತ್ತವೆ. ಇದರ ಚಲನವಲನವನ್ನು ಪತ್ತೆಹಚ್ಚಿದ ತಕ್ಷಣ ಅದು ಮತ್ತೆ ಅಡಗಿಕೊಳ್ಳುವುದರಿಂದ ಅವುಗಳನ್ನು ಹಿಡಿದು ರಕ್ಷಿಸುವುದು ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಮೋಡ್ ನೊಳಗೆ ಸೇರಿದ್ದ ಹಾವನ್ನು ರಕ್ಷಿಸಲು, ನಾವು ಕಮೋಡ್‌ಗೆ ನೀರು ಹಾಕಿದ್ದೇವೆ. ಡ್ರೈನೇಜ್ ಪೈಪ್‌ನೊಳಗೆ ನಿರಂತರ ನೀರು ಹರಿಯುವುದರಿಂದ ಹಾವು ಆಮ್ಲಜನಕದ ಕೊರತೆಯನ್ನು ಅನುಭವಿಸಿ ಹೊರಗೆ ಬರಲು ಪ್ರಯತ್ನಿಸುತ್ತದೆ. ಅದು ಆಮ್ಲಜನಕಕ್ಕಾಗಿ ಹೊರಬಂದ ತಕ್ಷಣ ನಾನು ಬಾಯಿಗೆ ನೀರು ಸುರಿಯಲು ಪ್ರಾರಂಭಿಸಿದೆ ಮತ್ತು ಅದನ್ನು ಹಿಡಿದು ರಕ್ಷಿಸಿದೆ ಎಂದು ಅವರು ತಿಳಿಸಿದರು. ಪ್ರತಿಯೊಂದು ಹಾವನ್ನು ಹಿಡಿಯುವುದು ಸುಲಭವಲ್ಲ. ಇದನ್ನು 15 ನಿಮಿಷಗಳಲ್ಲಿ ಹಿಡಿಯಲಾಗಿದೆ. ಕೆಲವೊಮ್ಮೆ ಸ್ನಾನಗೃಹದಲ್ಲಿ ಅವಿತುಕೊಳ್ಳುವ ಹಾವುಗಳು ಮೂರು ದಿನಗಳವರೆಗೆ ಇರುತ್ತದೆ. ಹಾವು ಯಾವ ಮಹಡಿಯಲ್ಲಿ ಕಾಣಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅವು ನೆಲಮಹಡಿಗೆ ಮಾತ್ರ ಬರುತ್ತವೆ ಎಂಬುದು ತಪ್ಪು ಕಲ್ಪನೆ. ಯಾವುದೇ ಮಹಡಿಗೆ ಅವು ಬಹಳ ಸುಲಭವಾಗಿ ಪ್ರಯಾಣಿಸಬಲ್ಲವು ಎಂದು ಜಾಟ್ ತಿಳಿಸಿದರು.

ಇದನ್ನೂ ಓದಿ: Viral Video: ತಲೆ ಮೇಲೆ ಎರಡು ಗ್ಯಾಸ್ ಸಿಲಿಂಡರ್, ಅದರ ಮೇಲೆ ಬಿಂದಿಗೆ! ಅಬ್ಬಾ ಎಂಥ ಅದ್ಭುತ!

ಇಂತಹ ಘಟನೆಗಳನ್ನು ತಡೆಗಟ್ಟಲು ಸಲಹೆ ನೀಡಿದ ಅವರು, ಒಳಚರಂಡಿ ಪೈಪ್‌ಗಳ ಸುತ್ತಲಿನ ಪ್ರದೇಶವನ್ನು ತೆರೆದಿಡಬಾರದು ಅಥವಾ ಅವುಗಳ ಬಳಿ ಕಸವನ್ನು ಎಸೆಯಬಾರದು. ಇದು ಇಲಿಗಳು ಪೈಪ್‌ಗಳ ಒಳಗೆ ರಂಧ್ರಗಳನ್ನು ಅಗೆಯಲು ಕಾರಣವಾಗುತ್ತದೆ. ಹಾವುಗಳಿಗೆ ಮಾರ್ಗವನ್ನು ಸೃಷ್ಟಿಸುತ್ತದೆ. ತೆರೆದ ಒಳಚರಂಡಿ ಪೈಪ್ ಅನ್ನು ಕಂಡುಕೊಂಡರೆ, ಅಂತಹ ಘಟನೆಗಳನ್ನು ತಡೆಗಟ್ಟಲು ನಗರದ ಪುರಸಭೆಯನ್ನು ಸಂಪರ್ಕಿಸಿ ಮತ್ತು ಅದಕ್ಕೆ ಸಿಮೆಂಟ್ ಹಾಕಿಸಿ ಎಂದರು.

ವಾಯ್ಸ್ 4 ವೈಲ್ಡ್‌ಲೈಫ್ ಫೌಂಡೇಶನ್‌ ಇಂದೋರ್ ಮತ್ತು ಹತ್ತಿರದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಜಾಟ್ ಐದರಿಂದ ಆರು ಸದಸ್ಯರ ತಂಡವನ್ನು ಮುನ್ನಡೆಸುತ್ತಿದ್ದಾರೆ. ನಮ್ಮಲ್ಲಿ ನಾಲ್ಕು ಜನರು ಮಾತ್ರ ಪೂರ್ಣ ಸಮಯ ಲಭ್ಯವಿರುತ್ತಾರೆ. ಉಳಿದ ಇಬ್ಬರು ಅವರ ಬಿಡುವಿನ ಸಮಯದಲ್ಲಿ ಮಾತ್ರ ಸಿಗುತ್ತಾರೆ. ಪ್ರತಿ ನಗರದಲ್ಲಿ ಹೆಚ್ಚಿನ ರಕ್ಷಣಾ ತಂಡಗಳನ್ನು ಸ್ಥಾಪಿಸುವ ಗುರಿಯನ್ನು ಜಾಟ್ ಹೊಂದಿರುವುದಾಗಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

ಬಿಹಾರದ ಗೋಲ್ಡ್ ಮ್ಯಾನ್ (Goldman of Bihar) ಎಂದೇ ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ಚಿನ್ನವನ್ನು ಹೆಚ್ಚು ಇಷ್ಟ ಪಡುತ್ತಾರೆ. ಅವರು ಸುಮಾರು ಐದು ಕಿಲೋಗ್ರಾಂಗಳಷ್ಟು ಚಿನ್ನವನ್ನು ಧರಿಸಿಕೊಂಡೇ ಓಡಾಡುತ್ತಾರೆ. ಮಾತ್ರವಲ್ಲದೇ ಅವರು ಚಿನ್ನದ ಬೈಕ್ ಅನ್ನೂ ಹೊಂದಿದ್ದಾರೆ. ಇವರ ಕುರಿತ ಕುತೂಹಲಕಾರಿ ವರದಿ ಇಲ್ಲಿದೆ.

VISTARANEWS.COM


on

By

Goldman of Bihar
Koo

ಐದು ಕಿಲೋ ಗ್ರಾಂನಷ್ಟು ಚಿನ್ನವನ್ನು ಧರಿಸಿಕೊಂಡು ಚಿನ್ನದ ಬೈಕ್ ನಲ್ಲಿ ಆತ ಸವಾರಿ ಮಾಡುತ್ತಿದ್ದರೆ ಎಲ್ಲರೂ ಹುಬ್ಬೇರಿಸಿಕೊಂಡು ನೋಡುತ್ತಾರೆ. ಬಿಹಾರದ (bihar) ಗೋಲ್ಡ್ ಮ್ಯಾನ್ (Goldman of Bihar) ಎಂದೇ ಕರೆಯಲಾಗುವ ಆತನಿಗೆ ಚಿನ್ನದ ಮೇಲಿನ ಪ್ರೀತಿ ಈಗ ದೇಶಾದ್ಯಂತ ಚರ್ಚೆಯಲ್ಲಿದೆ. ಆತನ ಕುರಿತಾದ ವಿಡಿಯೋ, ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (viral video) ಆಗುತ್ತಿದೆ.

ಬಿಹಾರದ ಗೋಲ್ಡ್ ಮ್ಯಾನ್ ಎಂದೇ ಕರೆಯಲ್ಪಡುವ ಪ್ರೇಮ್ ಸಿಂಗ್ ಅವರು ಚಿನ್ನವನ್ನು ಹೆಚ್ಚು ಇಷ್ಟಪಡುತ್ತಾರೆ. ಅವರು ಸುಮಾರು ಐದು ಕಿಲೋಗ್ರಾಂಗಳಷ್ಟು ಚಿನ್ನವನ್ನು ಧರಿಸಿಕೊಂಡೇ ಓಡಾಡುತ್ತಾರೆ. ಮಾತ್ರವಲ್ಲದೇ ಅವರು ಚಿನ್ನದ ಬೈಕ್ ಅನ್ನೂ ಹೊಂದಿದ್ದಾರೆ. ಇದನ್ನು ಬೆಂಗಳೂರಿನಲ್ಲಿ ರಚಿಸಲಾಗಿದೆ. ಇದರ ನಿರ್ಮಾಣಕ್ಕೆ ಏಳರಿಂದ ಎಂಟು ತಿಂಗಳು ಬೇಕಾಯಿತು ಮತ್ತು 11 ರಿಂದ 12 ಲಕ್ಷ ರೂ. ಖರ್ಚಾಗಿದೆ ಎನ್ನಲಾಗಿದೆ.


ಬಿಹಾರದ ಬಂಗಾರದ ಮನುಷ್ಯ ಪ್ರೇಮ್ ಸಿಂಗ್ ಅವರಿಗೆ ತಾವು ಧರಿಸುವ ಚಿನ್ನದಿಂದಲೇ ಸುದ್ದಿಯಲ್ಲಿದ್ದಾರೆ. ಇವರ ಕುರಿತು ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಹೀಗಾಗಿ ಯಾವುದೇ ಕಳ್ಳರ ಭಯವಿಲ್ಲದೆ ಇಷ್ಟೊಂದು ಚಿನ್ನವನ್ನು ಧರಿಸಿಕೊಂಡು ಓಡಾಡುತ್ತೇನೆ. ಬೈಕ್‌ಗೂ 150 ರಿಂದ 200 ಗ್ರಾಂ ಚಿನ್ನವನ್ನು ಹಾಕಿದ್ದೇನೆ. ಇದು ಬಿಹಾರ ಸರ್ಕಾರ ಹಾಗೂ ಪೊಲೀಸರ ಪಾಲಿಗೆ ಗೌರವದ ವಿಷಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಾರುಖ್‌ ಖಾನ್‌ ನನ್ನು ಕಾಪಿ ಮಾಡಲು ಹೋಗಿ ಯೂಟ್ಯೂಬರ್‌ಗಳು ಜೈಲು ಪಾಲು

ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಲೈಕ್ಸ್ , ಕಾಮೆಂಟ್‌ ಪಡೆಯಲು ಯುವಕರು ಅನೇಕ ದುಸ್ಸಾಹಸಗಳಿಗೆ ಕೈ ಹಾಕಿ ಸಂಕಷ್ಟಕ್ಕೀಡಾಗುತ್ತಿದ್ದಾರೆ. ಅದೇ ರೀತಿ ಇದೀಗ ಯುವಕರು ಸಿನಿಮಾವೊಂದರಲ್ಲಿ ಹೀರೊ ಲುಕ್‌ ಅನ್ನು ನಕಲು ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾರೆ.

ಉತ್ತರ ಪ್ರದೇಶದ ಬುಲಂದ್ ಶಹರ್‌ನ ದಿಬಾಯ್‌ನಲ್ಲಿ ಆರು ಯುಟ್ಯೂಬರ್‌ಗಳು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರು ಬ್ಯಾಂಡೇಜ್ ಧರಿಸಿದ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿದ್ದಾರೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೋದಲ್ಲಿ ಆರು ಮಂದಿ ಯುವಕರು ರಕ್ತದಂತೆ ಕಾಣುವ ಬಣ್ಣವನ್ನು ಬ್ಯಾಂಡೇಜ್‌ಗೆ ಬಳಿದುಕೊಂಡು ಅದನ್ನು ಮುಖಕ್ಕೆ ಸುತ್ತಿಕೊಂಡು ಕೈಯಲ್ಲಿ ಕೋಲುಗಳನ್ನು ಹಿಡಿದು ಜವಾನ್ ಚಿತ್ರದಲ್ಲಿ ನಟ ಶಾರುಖ್ ಖಾನ್ ಅವರ ಲುಕ್ ಅನ್ನು ನಕಲು ಮಾಡಿ ಇಡೀ ಪಟ್ಟಣವನ್ನು ಸುತ್ತಿಹಾಕಿದ್ದಾರೆ. ಇವರಲ್ಲಿ ಒಬ್ಬ ಶರ್ಟ್ ಧರಿಸಿದೆ ತನ್ನ ಇಡೀ ದೇಹವನ್ನು ರಕ್ತದ ಕಲೆಯಂತೆ ಕಾಣುವ ಬ್ಯಾಂಡೇಜ್‌ನಿಂದ ಮುಚ್ಚಿಕೊಂಡಿದ್ದಾನೆ. ಇವರನ್ನು ಕಂಡು ಸ್ಥಳೀಯರು ಗಾಬರಿಗೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಈ ವಿಡಿಯೋ ಸೋಶಿಯಲ್ ವೀಡಿಯಾದಲ್ಲಿ ವೈರಲ್ ಆಗಿದ್ದು, ಮಾತ್ರವಲ್ಲ ಇದರಿಂದ ಪೊಲೀಸರು ಇವರನ್ನು ಹುಡುಕಿಕೊಂಡು ಬರುವಂತಾಗಿದೆ. ಈ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ವಿಡಿಯೋ 15 ನಿಮಿಷಗಳ ಕಾಲವಿದ್ದು, ಸಮಾಜದ ಜನತೆಗೆ ಉಪದ್ರವ ನೀಡುವಂತಹ ಈ ರೀಲ್ಸ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇದಕ್ಕೆ ಶೀರ್ಷಿಕೆ ನೀಡಲಾಗಿದೆ.

ಈ ಆರು ಮಂದಿ ಸ್ಥಳೀಯರನ್ನು ಹೆದರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗೇ ಮುಂದೆ ಇಂತಹ ಕುಚೇಷ್ಠೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Continue Reading

ವೈರಲ್ ನ್ಯೂಸ್

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ (Viral Video) ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು. ಈ ಎರಡು ವಿಡಿಯೊಗಳನ್ನು ನೋಡಿ.

VISTARANEWS.COM


on

By

Viral Video
Koo

ರೀಲ್ಸ್ (reels) ಹುಚ್ಚು ನಮ್ಮಿಂದ ಯಾವ ಕೆಲಸವನ್ನು ಬೇಕಾದರೂ ಮಾಡಿಸುತ್ತದೆ ಎನ್ನುವುದಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉದಾಹರಣೆಗಳು ಲಭ್ಯವಾಗುತ್ತಿದೆ. ಇದೀಗ ಪಶ್ಚಿಮ ಬಂಗಾಳದ (west bengal) ಯುವತಿಯೊಬ್ಬಳು ರೀಲ್ಸ್ ಮಾಡಿ ತಂದೆಯ ಕೈಯಿಂದ ಸರಿಯಾಗಿ ಹೊಡೆತ ತಿಂದಿರುವ ಘಟನೆ ನಡೆದಿದೆ. ಇದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದೆ.

ರೀಲ್ಸ್ ಗಾಗಿ ಯುವತಿಯೊಬ್ಬಳು ಸಿಗರೇಟ್ ಸೇದುತ್ತಿರುವ ವಿಡಿಯೋ ಮಾಡಿ ತಂದೆಯಿಂದ ಸರಿಯಾಗಿ ಏಟು ಕೂಡ ತಿಂದಿದ್ದಾಳೆ. ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿ ಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು.

ವೈರಲ್ ಆಗಿರುವ ವಿಡಿಯೋದ ಇನ್ನೊಂದು ಭಾಗದಲ್ಲಿ ಬೀದಿಯಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಅವಳ ತಂದೆ ಹೇಗೆ ಅವಳಿಗೆ ಬೆಲ್ಟ್‌ನಿಂದ ಹೊಡೆಯುತ್ತಿದ್ದಾರೆ ಎಂಬುದನ್ನು ನೋಡಬಹುದು. ಈ ಸಂಪೂರ್ಣ ಘಟನೆಯು ಯುವ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಒಂದು ಎಚ್ಚರಿಕೆಯ ಕಥೆಯಾಗಿದೆ. ರೀಲ್ಸ್ ಗಾಗಿ ನಾವು ಮಾಡುವ ಸ್ಟಂಟ್ ಗಳು ಮನೆಯವರಿಗೆ ಕೆಟ್ಟ ಹೆಸರು ತರಬಹುದು ಅಥವಾ ಅವರಿಗೆ ಮುಜುಗರ ಉಂಟು ಮಾಡಬಹುದು ಎನ್ನುವ ಯೋಚನೆ ನಮ್ಮಲ್ಲಿ ಇರಬೇಕು. ಆನ್ ಲೈನ್ ನಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ತೋರಿಸುವುದು ಕೂಡ ಬಹು ಮುಖ್ಯವಾಗಿದೆ. ಮಕ್ಕಳು ಈ ಬಗ್ಗೆ ಪೋಷಕರೊಂದಿಗೆ ಮುಕ್ತವಾಗಿ ಮಾತನಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ಹೇಳಲಾಗಿದೆ.

ಈ ವಿಡಿಯೋ ಗೆ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ. ಒಬ್ಬರು ನನ್ನ ತಂದೆ ಖಂಡಿತಾ ನನ್ನ ತಲೆ ಬೋಳಿಸುತ್ತಿದ್ದರು ಎಂದು ಹೇಳಿದ್ದರೆ, ಇನ್ನೊಬ್ಬರು ಅವಳ ತಂದೆ ಜೈಲಿಗೆ ಹೋಗುವುದು ಖಚಿತ. ಅವರು ಅದನ್ನು ಚಿತ್ರೀಕರಿಸಬಾರದು ಎಂದು ತಿಳಿಸಿದ್ದಾರೆ.


ಸಾಮಾಜಿಕ ಮಾಧ್ಯಮ ಬಳಕೆದಾರರು ಇತ್ತೀಚಿನ ದಿನಗಳಲ್ಲಿ ತಮ್ಮ ಅನುಯಾಯಿಗಳನ್ನು ಹೆಚ್ಚಿಸಲು, ಹೆಚ್ಚು ಲೈಕ್ ಗಳನ್ನು ಪಡೆಯಲು ಮಾಡುವ ಕೆಲವೊಂದು ರೀಲ್ಸ್ ಗಳು ಅವರನ್ನು ತೊಂದರೆಗೆ ಸಿಲುಕಿಸುತ್ತದೆ. ಹೀಗಾಗಿ ಈ ವೈರಲ್ ವೀಡಿಯೊ ಆನ್‌ಲೈನ್ ಜವಾಬ್ದಾರಿಯ ಪ್ರಾಮುಖ್ಯತೆ ಮತ್ತು ಸಾಮಾಜಿಕ ಮಾಧ್ಯಮದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಇದರಿಂದ ಪ್ರತಿಯೊಬ್ಬರೂ ಕಲಿಯಬೇಕಾದ ಕೆಲವು ಸಂಗತಿಗಳಿವೆ.

ಇದನ್ನೂ ಓದಿ: Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಆನ್ ಲೈನ್ ನಲ್ಲಿ ಏನಾದರೂ ಪೋಸ್ಟ್ ಮಾಡುವ ಮೊದಲು ಯೋಚಿಸಿ. ಒಮ್ಮೆ ಏನನ್ನಾದರೂ ಆನ್‌ಲೈನ್‌ನಲ್ಲಿ ಹಂಚಿಕೊಂಡರೆ ಬಳಿಕ ಅದನ್ನು ಸಂಪೂರ್ಣವಾಗಿ ಅಳಿಸಲು ಕಷ್ಟವಾಗಬಹುದು ಅಥವಾ ಅಸಾಧ್ಯವಾಗಬಹುದು. ಅನುಯಾಯಿಗಳ ಬಗ್ಗೆ ಗಮನವಿರಲಿ. ನಿಮಗೆ ಹಾಸ್ಯವಾಗಿ ಕಾಣುವ ಕೆಲವು ಸಂಗತಿಗಳು ಕೆಲವರಿಗೆ ಗ್ರಹಿಸಲು ಕಷ್ಟವಾಗಬಹುದು. ಇದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.

ಅದೇ ರೀತಿ ಮುಕ್ತ ಸಂವಹನವು ಮುಖ್ಯ. ಆನ್‌ಲೈನ್ ಸುರಕ್ಷತೆ ಮತ್ತು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ಬಳಕೆಯ ಕುರಿತು ಪೋಷಕರು ತಮ್ಮ ಮಕ್ಕಳೊಂದಿಗೆ ಮುಕ್ತ ಸಂಭಾಷಣೆಗಳನ್ನು ನಡೆಸುವುದು ಕೂಡ ಬಹು ಮುಖ್ಯವಾಗಿದೆ.

Continue Reading

ಕ್ರೀಡೆ

IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

IND vs SA Final: ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

IND vs SA Final
Koo

ಲಂಡನ್​: ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್(​T20 World Cup 2024) ಗೆಲ್ಲುವ ಮೂಲಕ ಭಾರತೀಯ(IND vs SA Final) ಕ್ರಿಕೆಟ್​ ಅಭಿಮಾನಿಗಳು 13 ವರ್ಷಗಳಿಂದ ಕಾಯುತ್ತಿದ್ದ ಐಸಿಸಿ ಟ್ರೋಫಿಯೊಂದರ ಕನಸು ನನಸಾಯಿತು. ಈ ಗೆಲುವಿನ ಸಂಭ್ರಮವನ್ನು ದೇಶ-ವಿದೇಶದಲ್ಲಿರುವ ಭಾರತೀಯರು ಸಂಭ್ರಮಿಸಿದ್ದಾರೆ. ಇದೀಗ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿಯೂ ಈ ಗೆಲುವಿನ ಸಂಭ್ರಮಾಚರಣೆ ನಡೆದಿದೆ.

ಹೌದು, ಲಂಡನ್‌ಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಫೈನಲ್​ ಪಂದ್ಯವನ್ನು ತಮ್ಮ ಲ್ಯಾಪ್​ಟಾಪ್​ಗಳಲ್ಲಿ ವೀಕ್ಷಿಸಿದ್ದಾರೆ. ಭಾರತ ಪಂದ್ಯ ಗೆಲ್ಲುತ್ತಿದ್ದಂತೆ ವಿಮಾನದಲ್ಲಿದ್ದ ಭಾರತೀಯರು ಸಂಭ್ರಮಿಸಿದ್ದಾರೆ. ವಿಮಾನದಲ್ಲಿಯೂ ಕೂಡ ಭಾರತದ ಗೆಲುವಿನ ಸುದ್ದಿಯನ್ನು ಘೋಷಿಸಿದರು. ಈ ವಿಡಿಯೊ ವೈರಲ್​ ಆಗಿದೆ.

ವಿಮಾನದಲ್ಲಿ ಪ್ರಯಾಣಿಸಿದ ಹರ್ದೀಪ್ ಸಿಂಗ್ ಎನ್ನುವವರು ಪಂದ್ಯವನ್ನು ವೀಕ್ಷಿಸಲು ತಡೆರಹಿತ ವೈ-ಫೈ ಸೇವೆಯನ್ನು ಒದಗಿಸಿದ ಏರ್‌ಲೈನ್‌ಗೆ ಧನ್ಯವಾದ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ


17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲೂ ತಡರಾತ್ರಿಯೇ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ ಅಭಿಮಾನಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ಗೆಲುವನ್ನು ಸಂಭ್ರಮಿಸಿದ್ದಾರೆ. ಇದರ ಫೋಟೊ ಮತ್ತು ವೈರಲ್​ ಆಗಿದೆ.

ಜಮ್ಮು ಕಾಶ್ಮೀರದ ಕಚಿ ಚೌನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಚಳಿಯನ್ನು ಕೂಡ ಲೆಕ್ಕಿಸದೆ ಮಧ್ಯರಾತ್ರಿಯೇ ಅಭಿಮಾನಿಗಳು ಮನೆಯಿಂದ ಹೊರ ಬಂದು ಭಾರತದ ಗೆಲುವನ್ನು ಸಂಭ್ರಮಿಸಿದ್ದಾರೆ. ಬೃಹತ್ ತ್ರಿವರ್ಣ ಧ್ವಜ ಹಿಡಿದು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದ್ದಾರೆ.

ಇದನ್ನೂ ಓದಿ Jay Shah Promise: ಜಯ್​​ ಶಾ ಭವಿಷ್ಯ ನುಡಿದಂತೆ ಟಿ20 ವಿಶ್ವಕಪ್​ ಗೆದ್ದ ಭಾರತ; ವಿಡಿಯೊ ವೈರಲ್​

ಬ್ರಿಜ್‌ಟೌನ್‌ನ ಕೆನ್ಸಿಂಗ್ಟನ್‌ ಓವಲ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ ಅಂತರದಿಂದ ಗೆದ್ದು 17 ವರ್ಷಗಳ ಬಳಿಕ 2ನೇ ಟಿ20 ವಿಶ್ವಕಪ್​ ಎತ್ತಿ ಹಿಡಿಯಿತು.

ದ್ರಾವಿಡ್​ಗೆ ಸ್ಮರಣೀಯ ಬೀಳ್ಕೊಡುಗೆ


ನಾಯಕನಾಗಿ ಗೆಲ್ಲಲಾಗದ ವಿಶ್ವಕಪ್(T20 World Cup 2024)​ ಟ್ರೋಫಿಯನ್ನು ರಾಹುಲ್​ ದ್ರಾವಿಡ್‌(Rahul Dravid) ಕೊನೆಗೂ ಭಾರತ ತಂಡದ ತರಬೇತುದಾರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಕೂಡ ತಮ್ಮ ಕೊನೆಯ ಮಾರ್ಗದರ್ಶನದಲ್ಲಿ ಎನ್ನುವುದು ವಿಶೇಷ. 2007ರಲ್ಲಿ ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ರಾಹುಲ್​ ದ್ರಾವಿಡ್​ ಅವರ ನಾಯಕತ್ವದಲ್ಲಿ ಭಾರತ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಲೀಗ್​ ಹಂತದಿಂದಲೇ ನಿರ್ಗಮಿಸಿತ್ತು. ದುರ್ಬಲ ಬಾಂಗ್ಲಾದೇಶ ವಿರುದ್ದವೂ ಕೂಡ ಗೆಲುವು ಸಾಧಿಸಲು ಸಾಧ್ಯವಾಗ ಅವಮಾನಕ್ಕೆ ಸಿಲುಕಿತ್ತು. ಅಂದು ಅವಮಾನ ಎದುರಿಸಿದ ವಿಂಡೀಸ್​ ನೆಲದಲ್ಲೇ ಇದೀಗ ದ್ರಾವಿಡ್​ ತರಬೇತುದಾರನಾಗಿ ಕಪ್​ ಗೆದ್ದು ಸಂಭ್ರಮಿಸಿದ್ದಾರೆ.

Continue Reading

ಕ್ರೈಂ

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

ಎರಡು ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು (Physical Assualt) ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಆನ್‌ಲೈನ್ ಚಾಟ್‌ರೂಮ್ ನಲ್ಲಿ ಹುಡುಕುತ್ತಿದ್ದ ಕ್ರಾಲಿ ಮತ್ತು ಟ್ರಿಪ್ ದಂಪತಿಯನ್ನು ಅಮೆರಿಕದಲ್ಲಿ ಜಾರ್ಜಿಯಾದ ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Physical Assault
Koo

ಜಾರ್ಜಿಯಾ: ಎರಡು ವರ್ಷದ ಮಗಳನ್ನು ಲೈಂಗಿಕ ಚಟುವಟಿಕೆಗಾಗಿ (Physical Assualt) ಮಾರಾಟ ಮಾಡಲು ಯತ್ನಿಸಿದ ದುಷ್ಟ ದಂಪತಿಯನ್ನು ಅಮೆರಿಕದಲ್ಲಿ (america) ಜಾರ್ಜಿಯಾದ (Georgia) ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ. ಆಶ್ಲೀ ಕ್ರಾಲಿ (26) ಜೇಮ್ಸ್ ಟ್ರಿಪ್ (29) ಬಂಧಿತರು.

ಕ್ರಾಲಿ ಮತ್ತು ಟ್ರಿಪ್ ತಮ್ಮ 2 ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಹುಡುಕುತ್ತಿದ್ದರು. ಇದಕ್ಕಾಗಿ ಆನ್‌ಲೈನ್ ಚಾಟ್‌ರೂಮ್ ಅನ್ನು ಬಳಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಕ್ರಾಲಿ ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಅದನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಇದರಲ್ಲಿ ಕೆಲವು ವಿಡಿಯೋಗಳು ಅಂಬೆಗಾಲಿಡುವ ಮಕ್ಕಳು ಸೇರಿದಂತೆ ಅವರ ಮಕ್ಕಳನ್ನು ಒಳಗೊಂಡಿವೆ. ಟ್ರಿಪ್ ತನ್ನ ಅಪ್ರಾಪ್ತ ವಯಸ್ಸಿನ ಸಂಬಂಧಿಗಳೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರಾಲಿಯ ಅನುಮತಿಯನ್ನೂ ಪಡೆಯುತ್ತಿದ್ದನು.

ಇದನ್ನೂ ಓದಿ: Physical assualt : ಅಣ್ಣ ಕರೀತಾನೆ ಎಂದು ಹೇಳಿ ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ; ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಇವರ ಆರೈಕೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಅವರ ಮನೆಯಿಂದ ಅಧಿಕಾರಿಗಳು ತ್ವರಿತವಾಗಿ ರಕ್ಷಣೆ ಮಾಡಿದ್ದಾರೆ. ಕ್ರಾಲಿ ವಿರುದ್ಧ ಮಕ್ಕಳ ಮೇಲೆ ಕಿರುಕುಳ ಮತ್ತು ಕಂಪ್ಯೂಟರ್ ಅಥವಾ ಎಲೆಕ್ಟ್ರಾನಿಕ್ ಪೋರ್ನೋಗ್ರಫಿ ಮತ್ತು 2007ರ ಮಕ್ಕಳ ಶೋಷಣೆ ಮತ್ತು ತಡೆಗಟ್ಟುವಿಕೆ ಕಾಯಿದೆಯನ್ನು ಉಲ್ಲಂಘಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಟ್ರಿಪ್ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಸದ್ಯ ಇಬ್ಬರನ್ನೂ ಕೊಲಂಬಿಯಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ. ತನಿಖೆ ಮುಂದುವರಿಸಲಾಗಿದ್ದು ಹೆಚ್ಚುವರಿ ಆರೋಪಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ: ಬಾಲಕಿ ಸಾವು

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವ ಉಂಟಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading
Advertisement
VSK Media Awards 2024
ಬೆಂಗಳೂರು10 mins ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ13 mins ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌39 mins ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ43 mins ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್1 hour ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ1 hour ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ1 hour ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Virat kohli
ಪ್ರಮುಖ ಸುದ್ದಿ2 hours ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Drown In Water
ದೇಶ2 hours ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Road Accident
ಕರ್ನಾಟಕ2 hours ago

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು9 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌