Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ - Vistara News

ಬಾಲಿವುಡ್

Sonakshi Sinha: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ-ಜಹೀರ್‌ ಇಕ್ಬಾಲ್;‌ Photos ಇಲ್ಲಿವೆ

Sonakshi Sinha: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಭಾನುವಾರ (ಜೂನ್‌ 23) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರೂ ಮದುವೆಯಾಗಿದ್ದು, ಶೀಘ್ರದಲ್ಲೇ ಮುಂಬೈನಲ್ಲಿ ಅದ್ಧೂರಿ ರಿಸೆಪ್ಶನ್‌ ಏರ್ಪಾಡು ಮಾಡಲಿದ್ದಾರೆ. ಬಾಲಿವುಡ್‌ ನಟ-ನಟಿಯರು ರಿಸೆಪ್ಶನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Sonakshi Sinha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ದೀರ್ಘಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ (Zaheer Iqbal) ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಎರಡೂ ಕುಟುಂಬಗಳ ಆಪ್ತರು, ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಮದುವೆಯಾಗಿದ್ದು, ಮದುವೆಯ ಫೋಟೊಗಳನ್ನು ಸೋನಾಕ್ಷಿ ಸಿನ್ಹಾ ಅವರೇ ಹಂಚಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸೋನಾಕ್ಷಿ ಸಿನ್ಹಾ ಅವರು ಫೋಟೊಗಳನ್ನು ಹಂಚಿಕೊಂಡಿರುವ ಜತೆಗೆ ಭಾವನಾತ್ಮಕವಾಗಿ ಪೋಸ್ಟ್‌ ಮಾಡಿದ್ದಾರೆ. “ಏಳು ವರ್ಷದ ಹಿಂದಿನ ಇದೇ ದಿನ ಅಂದರೆ, 2017ರ ಜೂನ್‌ 23ರಂದು ನಮ್ಮಿಬ್ಬರ ಕಣ್ಣುಗಳು ಮೊದಲ ಬಾರಿ ಸಂಧಿಸಿದವು. ಆ ಕಣ್ಣುಗಳ ನೋಟದಲ್ಲಿಯೇ ನಾವು ನಿಜವಾದ ಪ್ರೇಮವನ್ನು ಕಂಡೆವು ಹಾಗೂ ಆ ಪ್ರೀತಿ ತುಂಬಿದ ನೋಟವನ್ನು ಜೀವನಪೂರ್ತಿ ಸವಿಯಲು ನಿರ್ಧರಿಸಿದೆವು. ಸವಾಲುಗಳನ್ನು ಎದುರಿಸಿ, ದೇವರು ಹಾಗೂ ಕುಟುಂಬಸ್ಥರ ಆಶೀರ್ವಾದದೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ಮುಂದಿನ ದಿನಗಳಲ್ಲೂ ಪ್ರೀತಿಯು ನಮ್ಮ ಜೀವನವನ್ನು ಇನ್ನಷ್ಟು ಸುಂದರಗೊಳಿಸುತ್ತದೆ ಎಂಬ ನಂಬಿಕೆ ಇದೆ” ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಶುಭ ಕೋರಲು ಆಗದೆ ಅಭಿಮಾನಿಗಳಿಗೆ ನಿರಾಸೆ

ಕ್ರೀಮ್‌ ಬಣ್ಣದ ಸೀರೆಯಲ್ಲಿ ಸೋನಾಕ್ಷಿ ಸಿನ್ಹಾ ಹಾಗೂ ಕುರ್ತಾದಲ್ಲಿ ಜಹೀರ್‌ ಇಕ್ಬಾಲ್‌ ಮಿಂಚಿದ್ದಾರೆ. ಸೋನಾಕ್ಷಿ ಅವರು ಜಹೀರ್‌ ಇಕ್ಬಾಲ್‌ ಅವರನ್ನು ತಬ್ಬಿಕೊಂಡರೆ, ಸೋನಾಕ್ಷಿ ಕೈಗೆ ಜಹೀರ್‌ ಸಿಹಿ ಮುತ್ತು ಕೊಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಅವರು ಇನ್‌ಸ್ಟಾಗ್ರಾಂನಲ್ಲಿ ಫೋಟೊಗಳನ್ನು ಹಂಚಿಕೊಂಡು, ಪೋಸ್ಟ್‌ಗೆ ಕಮೆಂಟ್‌ಗಳನ್ನು ಬ್ಲಾಕ್‌ ಮಾಡಿದ ಕಾರಣ ಅಭಿಮಾನಿಗಳಿಗೆ ಶುಭಾಶಯ ತಿಳಿಸಲು ಆಗಿಲ್ಲ. ಇದರಿಂದಾಗಿ ಅಭಿಮಾನಿಗಳಿಗೆ ತುಸು ನಿರಾಸೆಯಾಗಿದೆ ಎಂದು ತಿಳಿದುಬಂದಿದೆ.

ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್‌ ಇಕ್ಬಾಲ್‌ ಅವರು ಹಿಂದು ಅಥವಾ ಇಸ್ಲಾಂ ಸಂಪ್ರದಾಯದಂತೆ ಮದುವೆಯಾಗದೆ, ಜಹೀರ್‌ ಅವರ ತಂದೆ ಇಕ್ಬಾಲ್‌ ರತಾನ್ಸಿ ಅವರು ಇದಕ್ಕೂ ಮೊದಲು ಹೇಳಿದಂತೆ ‘ನಾಗರಿಕʼ ಸಂಪ್ರದಾಯದಂತೆ ಅಂದರೆ, ಸಾಮಾನ್ಯವಾಗಿ ಮದುವೆಯಾಗಿದ್ದಾರೆ. ಇಬ್ಬರೂ ತಮ್ಮ ವಿವಾಹವನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು, ಆರಂಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಸೋನಾಕ್ಷಿ ಸಿನ್ಹಾ ಅವರ ತಂದೆ ಶತ್ರುಘ್ನ ಸಿನ್ಹಾ ಅವರು ಮುನಿಸು ಮರೆತು, ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಕಳೆದ ಎರಡು ವಾರದ ಹಿಂದಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತ್ತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೆ, ಅವರು ಮುನಿಸು ಮರೆತು ಮದುವೆಗೆ ಹಾಜರಾಗಿ, ಆಶೀರ್ವಾದ ಮಾಡಿದ್ದಾರೆ.

ಇದನ್ನೂ ಓದಿ: Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading

ಕ್ರಿಕೆಟ್

T20 World Cup 2024: ಸುದೀಪ್‌ ಸೇರಿದಂತೆ ಸೌತ್‌ ,ಬಾಲಿವುಡ್‌ ತಾರೆಯರು ವಿಶ್ವಕಪ್​ ಗೆಲುವನ್ನು  ಸಂಭ್ರಮಿಸಿದ್ದು ಹೀಗೆ!

T20 World Cup 2024: ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ.

VISTARANEWS.COM


on

T20 World Cup 2024 Celebrities Celebrates India ICC Cricket
Koo

ಬೆಂಗಳೂರು: ಅತ್ಯಂತ ರೋಚಕವಾಗಿ ನಡೆದ ಟಿ20 ವಿಶ್ವಕಪ್​ ಫೈನಲ್(T20 World Cup 2024) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ(South Africa vs India) ತಂಡವನ್ನು 7 ರನ್​ಗಳಿಂದ ಮಣಿಸಿದ ಭಾರತ 2ನೇ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಜತೆಗೆ 13 ವರ್ಷಗಳ ಕಪ್​ ಬರಗಾಲ ಕೂಡ ನೀಗಿತು.  ಭಾರತ ಕ್ರಿಕೆಟ್ ತಂಡದ ಗೆಲುವನ್ನು ಸಿನಿಮಾ ಸೆಲೆಬ್ರಿಟಿಗಳು ಕೂಡ ಸಂಭ್ರಮಿಸಿದ್ದಾರೆ.

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಎಕ್ಸ್‌ ಖಾತೆಯಲ್ಲಿ ʻʻರಾಹುಲ್ ದ್ರಾವಿಡ್ ಸರ್ ನೀವು ನಮ್ಮ ಹೆಮ್ಮೆ. , ಘನತೆಯ ಶಿಖರ ಇದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರುಗಳು ನಮ್ಮ ಹೀರೋಗಳಾಗಿ ಹೊರಹೊಮ್ಮಿದ್ದಕ್ಕೆ ಧನ್ಯಾವದ. ಅದ್ಭುತ ಕ್ಯಾಚ್ ಪಡೆದ ಸೂರ್ಯಕುಮಾರ್ ಯಾದವ್​ಗೆ ವಿಶೇಷ ಧನ್ಯವಾದ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಅಮಿತಾಭ್‌ ಬಚ್ಚನ್‌ ಕೂಡ ʻʻಕಣ್ಣೀರು ಹರಿಯುತ್ತಿದೆ. ವಿಶ್ವ ಚಾಂಪಿಯನ್ಸ್ ಭಾರತ. ಭಾರತ ಮಾತಾ ಕಿ ಜಯ್‌. ಜಯ ಹಿಂದ್ ಜಯ ಹಿಂದ್ʼʼಎಂದು ಬರೆದುಕೊಂಡಿದ್ದಾರೆ.

ಇನ್ನು ನಟ, ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಸರಳವಾಗಿ, ‘ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಭಾರತ ಕ್ರಿಕೆಟ್ ತಂಡದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಸಹ ಟ್ವೀಟ್ ಮಾಡಿದ್ದು, ʻʻಈ ಕಪ್‌ ನಮ್ಮದು! ಹೀರೋಸ್-ಇನ್-ಬ್ಲೂ ಹೊಸ ‘ವಿಶ್ವ ಚಾಂಪಿಯನ್’! ಸೂರ್ಯ ಕುಮಾರ್‌ ಕ್ಯಾಚ್‌ ಅದ್ಭುತ. ಈ ಐತಿಹಾಸಿಕ ಗೆಲುವಿನ ಬಗ್ಗೆ ತುಂಬಾ ಹೆಮ್ಮೆ ಇದೆ. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ರಣದೀಪ್ ಹೂಡಾ “ಬುಮ್ರಾ ಸ್ವಿಂಗ್ ದೇವರು ಮತ್ತು ಅರ್ಶ್‌ದೀಪ್ ಮತ್ತು ಅಕ್ಸರ್ .. ಕೊಹ್ಲಿ ಬ್ಯಾಟ್ ಮತ್ತು ರೋಹಿತ್ ಗ್ರೇಟ್‌. ಧನ್ಯವಾದಗಳು ರಾಹುಲ್ ದ್ರಾವಿಡ್.”ಎಂದು ಬರೆದುಕೊಂಡಿದ್ದಾರೆ.

ಅನಿಲ್ ಕಪೂರ್, ಮತ್ತು ರಶ್ಮಿಕಾ ಮಂದಣ್ಣ, ಅನನ್ಯ ಪಾಂಡೆ, ರವೀನಾ ಟಂಡನ್ ರಣದೀಪ್ ಹೂಡಾ ರಣ್ವೀರ್ ಸಿಂಗ್ ಸೇರಿದಂತೆ ಇನ್ನೂ ಹಲವು ಸಿನಿಮಾ ಸೆಲೆಬ್ರಿಟಿಗಳು ಭಾರತ ಕ್ರಿಕೆಟ್ ತಂಡದ ಅತ್ಯದ್ಭುತವಾದ ವಿಜಯಕ್ಕೆ ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

Latest

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

OTT Release ನೀವು ಸಿನಿಮಾ ಪ್ರಿಯರಾಗಿದ್ದರೆ ಈ ವಾರ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಈ ಸಿನಿಮಾಗಳು ನಿಮಗೆ ಭರಪೂರ ಮನರಂಜನೆಯನ್ನು ನೀಡುವುದಂತೂ ಗ್ಯಾರಂಟಿ. ಎ ಫ್ಯಾಮಿಲಿ ಅಫೇರ್, ಆವೇಶಮ್, ಸಿವಿಲ್ ವಾರ್, ಸಾವೇಜ್ ಬ್ಯೂಟಿ ಸೀಸನ್ 2, ಶರ್ಮಾಜೀ ಕಿ ಬೇಟಿ, ದಿ ವೈರ್ಲ್ವಿಂಡ್ ಮುಂತಾದ ಸಿನಿಮಾಗಳು ನಿಮ್ಮನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗಲಿದೆ. ತಪ್ಪದೇ ಒಟಿಟಿಯಲ್ಲಿ ಈ ಸಿನಿಮಾವನ್ನು ನೋಡಿ.

VISTARANEWS.COM


on

OTT Release
Koo

ಬೆಂಗಳೂರು : ಒಟಿಟಿ ಪ್ರತಿವಾರ ತನ್ನ ವೀಕ್ಷಕರಿಗೆ ಹೊಸ ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳನ್ನು ಬಿಡುಗಡೆ ಮಾಡುತ್ತದೆ. ಆ ಮೂಲಕ ಒಟಿಟಿ ತನ್ನ ವೀಕ್ಷಕರನ್ನು ಸೆಳೆಯುವ ಯೋಜನೆ ಮಾಡುತ್ತಿದೆ. ಪ್ರತಿಬಾರಿ ಒಟಿಟಿಯಲ್ಲಿ ಉತ್ತಮವಾದ ಚಿತ್ರಗಳನ್ನು ಬಿಡುಗಡೆ ಮಾಡಿ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದೆ. ಹಾಗಾದ್ರೆ ಒಟಿಟಿ(OTT Release )ಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಬಗ್ಗೆ ತಿಳಿದುಕೊಳ್ಳೋಣ.

OTT Release

ಎ ಫ್ಯಾಮಿಲಿ ಅಫೇರ್(A Family Affair):

ಒಬ್ಬ ಯುವತಿ, ಆಕೆಯ ತಾಯಿ ಮತ್ತು ಆಕೆಯ ನೆಚ್ಚಿನ ಸಿನಿಮಾ ತಾರೆ ಬಾಸ್ ಅವರ ಪ್ರೀತಿ, ಸೆಕ್ಸ್ ಅನ್ನು ನ್ಯಾವಿಗೇಟ್ ಮಾಡುವುದರಿಂದ ಅವರ ಪ್ರಣಯ ಹಾಸ್ಯ ಸನ್ನಿವೇಶಗಳಿಗೆ ಕಾರಣವಾಗುತ್ತದೆ.

ಇದರಲ್ಲಿ ನಿಕೋಲ್ ಕಿಡ್ಮನ್, ಜಾಕ್ ಎಫ್ರಾನ್, ಜೋಯಿ ಕಿಂಗ್ ನಟಿಸಿದ್ದಾರೆ. ಇದು ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

OTT Release

ಆವೇಶಮ್ (ಹಿಂದಿ) (Aavesham (Hindi):

ಮೂವರು ಹದಿಹರೆಯದ ಬಾಲಕರು ಎಂಜಿನಿಯರಿಂಗ್ ಅಧ್ಯಯನಕ್ಕಾಗಿ ಬೆಂಗಳೂರಿಗೆ ಬಂದು ಅಲ್ಲಿ ಜಗಳವಾಡುತ್ತಾರೆ. ನಂತರ ಅವರು ಹೊಡೆದಾಡಲು ಸ್ಥಳೀಯ ದರೋಡೆಕೋರನ ಸಹಾಯವನ್ನು ಪಡೆಯುತ್ತಾರೆ.

ಇದರಲ್ಲಿ ಫಹಾದ್ ಫಾಸಿಲ್, ಹಿಪ್‌ಸ್ಟರ್‌, ಸಜಿನ್ ಗೋಪು, ಮಿಥುನ್ ಜೈ ಶಂಕರ್ ನಟಿಸಿದ್ದಾರೆ. ಇದು ಹಾಸ್ಯ ಹಾಗೂ ಆ್ಯಕ್ಷನ್ ಚಿತ್ರವಾಗಿದ್ದು, ಜೂನ್ 28ರಂದು ಡಿಸ್ನಿ ಪ್ಲಸ್ ಹಾಟ್ಸ್ಸ್ಟಾರ್ನಲ್ಲಿ ಪ್ರಸಾರವಾಗಿದೆ.

OTT Release

ಸಿವಿಲ್ ವಾರ್ (Civil War):

ಯುಎಸ್ ಅಂತರ್ಯುದ್ಧದ ಸಮಯದಲ್ಲಿ ವಾರ್ ಜರ್ನಲಿಸ್ಟ್ ತಂಡವು ನ್ಯೂಯಾರ್ಕ್ ನಗರದಿಂದ ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸುತ್ತದೆ. ಬಂಡುಕೋರರು ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮೊದಲು ಯುಎಸ್ ಅಧ್ಯಕ್ಷರನ್ನು ಸಂದರ್ಶಿಸುವ ಗುರಿಯನ್ನು ಅವರು ಹೊಂದಿರುತ್ತಾರೆ.

ಇದರಲ್ಲಿ ಕ್ರಿಸ್ಟನ್ ಡನ್ಸ್ಟ್, ವ್ಯಾಗ್ನರ್ ಮೌರಾ, ಕೈಲೀ ಸ್ಪೇನಿ, ಸ್ಟೀಫನ್ ಮೆಕಿನ್ಲೆ ಹೆಂಡರ್ಸನ್ ನಟಿಸಿದ್ದಾರೆ. ಇದು ಆ್ಯಕ್ಷನ್, ಥ್ರಿಲ್ಲರ್ ಚಿತ್ರವಾಗಿದ್ದು, ಜೂನ್ 28ರಂದು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಪ್ರಸಾರವಾಗಿದೆ.

OTT Release

ರೌತು ಕಾ ರಾಜ್(Rautu Ka Raaz):

ಉತ್ತರಾಖಂಡದ ತೆಹ್ರಿಯ ರೌತು ಕಿ ಬೇಲಿ ಗ್ರಾಮದ ಅಂಧರ ಶಾಲೆಯ ವಾರ್ಡನ್ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗುತ್ತಾನೆ. ಈ ಪ್ರಕರಣದ ತನಿಖೆ ಮಾಡಲು ಇನ್ಸ್ಪೆಕ್ಟರ್ ದೀಪಕ್ ನೇಗಿ ಅವರನ್ನು ಕರೆಸಲಾಗುತ್ತದೆ.

ಇದರಲ್ಲಿ ನವಾಜುದ್ದೀನ್ ಸಿದ್ದಿಕಿ, ರಾಜೇಶ್ ಕುಮಾರ್, ಅತುಲ್ ತಿವಾರಿ, ನಾರಾಯಣಿ ಶಾಸ್ತ್ರಿ ನಟಿಸಿದ್ದಾರೆ. ಇದು ಮಿಸ್ಟರಿ/ಥ್ರಿಲ್ಲರ್ ಚಿತ್ರವಾಗಿದ್ದು, ಜೂನ್ 28ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

OTT Release

ಸಾವೇಜ್ ಬ್ಯೂಟಿ ಸೀಸನ್ 2 (Savage Beauty Season 2):

ನಿಗೂಢ ಮಹಿಳೆಯೊಬ್ಬಳು ತನ್ನ ಜೀವನದಲ್ಲಿ ಹಿಂದೆ ನಡೆದ ದುರಂತಕ್ಕೆ ಸೇಡು ತೀರಿಸಿಕೊಳ್ಳಲು ಜಾಗತಿಕ ಸೌಂದರ್ಯ ಸಾಮ್ರಾಜ್ಯ ಮತ್ತು ಕರಾಳ ರಹಸ್ಯಗಳನ್ನೊಳಗೊಂಡ ಪ್ರಬಲ ಕುಟುಂಬಕ್ಕೆ ಬರುತ್ತಾಳೆ.

ಈ ಚಿತ್ರದಲ್ಲಿ ನಂಬಿತಾ ಬೆನ್-ಮಜ್ವಿ, ರೋಸ್ಮರಿ ಜಿಮು, ಎನ್ಥಾಟಿ ಮೋಶೆಶ್, ದುಮಿಸಾನಿ ಎಂಬೆಬೆ ನಟಿಸಿದ್ದಾರೆ. ಇದು ಥ್ರಿಲ್ಲರ್/ಡ್ರಾಮಾ ಚಿತ್ರವಾಗಿದ್ದು, ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

OTT Release

ಶರ್ಮಾಜೀ ಕಿ ಬೇಟಿ (Sharmajee Ki Beti):

ಶರ್ಮಾ ಎಂಬ ಉಪನಾಮ ಹೊಂದಿರುವ ಮೂವರು ಮಹಿಳೆಯರನ್ನು ಕಥೆ ಅನುಸರಿಸುತ್ತದೆ. ಅವರ ಜೀವನವು ಸರಿಯಾದ ದಾರಿಯಲ್ಲಿ ಚಲಿಸಿದರೂ ಕೂಡ ಅವರು ಸಂಕ್ಷಿಪ್ತವಾದ ಮಾರ್ಗಗಳನ್ನು ದಾಟುತ್ತಾರೆ, ಇದು ಅವರ ಜೀವನದ ಮೇಲೆ ಗಮನಾರ್ಹ ಪರಿಣಾಮವನ್ನು ಬೀರುತ್ತದೆ.

ಈ ಚಿತ್ರದಲ್ಲಿ ಸಾಕ್ಷಿ ತನ್ವರ್, ದಿವ್ಯಾ ದತ್ತಾ, ಸಯಾಮಿ ಖೇರ್ ನಟಿಸಿದ್ದಾರೆ. ಇದು ಒಂದು ಡ್ರಾಮಾವಾಗಿದ್ದು, ಜೂನ್ 28ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ:  ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

ದಿ ವೈರ್ಲ್ವಿಂಡ್(The Whirlwind):

ದಕ್ಷಿಣ ಕೊರಿಯಾದ ಸರ್ಕಾರದಲ್ಲಿ, ಭ್ರಷ್ಟಾಚಾರವನ್ನು ನಿಭಾಯಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ಪಾರ್ಕ್ ಡಾಂಗ್ ಹೋ, ಎಂಬವವರು ಅಲ್ಲಿನ ಅಧ್ಯಕ್ಷರ ಹತ್ಯೆಯನ್ನು ಧೈರ್ಯದಿಂದ ಆಯೋಜಿಸುತ್ತಾರೆ.

ಇದರಲ್ಲಿ ಸೋಲ್ ಕ್ಯೂಂಗ್-ಗು, ಕಿಮ್ ಹೀ-ಎ, ಲೀ ಹೇ ಯಂಗ್ ನಟಿಸಿದ್ದಾರೆ. ಇದು ಒಂದು ಡ್ರಾಮಾವಾಗಿದ್ದು, ಜೂನ್ 28ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

Continue Reading

Latest

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

Deepika Padukone ದೀಪಿಕಾ ಪಡುಕೋಣೆ, ಪ್ರಭಾಸ್ ಮತ್ತು ಅಮಿತಾಬ್ ಬಚ್ಚನ್ ಅವರ ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ ಮತ್ತು ಇದು ಅಭಿಮಾನಿಗಳು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಇನ್ನು ನಾಗ್ ಅಶ್ವಿನ್ ನಿರ್ದೇಶನದ ಬಗ್ಗೆ ಜನರು ಹೊಗಳಿದ್ದರು. ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಸುಮತಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ತನ್ನ ಗರ್ಭದಲ್ಲಿ ಇಡೀ ವಿಶ್ವದ ದುಷ್ಟ ಶಕ್ತಿಗಳಿಗೆ ಶತ್ರುವಾದ ಮಗುವನ್ನು ಹೊತ್ತುಕೊಂಡು ಬೆಂಕಿಯ ಮೂಲಕ ನಡೆಯುತ್ತಾ ಬರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಇದು ಈಗ ವೈರಲ್ ಆಗಿದೆ.

VISTARANEWS.COM


on

deepika padukone
Koo

ಮುಂಬೈ : ಬಾಲಿವುಡ್ ಖ್ಯಾತ ನಟಿಯರಲ್ಲಿ ದೀಪಿಕಾ ಪಡುಕೋಣೆ (Deepika Padukone )ಕೂಡ ಒಬ್ಬರು. ಇವರು ತಮ್ಮ ನಟನೆಯ ಮೂಲಕ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂತಹ ಖ್ಯಾತನಟಿ ದೀಪಿಕಾ ಪಡುಕೋಣೆ ಅವರ ‘ಕಲ್ಕಿ 2898 ಎಡಿ’ ಚಿತ್ರದ ಬೆಂಕಿಯಲ್ಲಿ ನಡೆದು ಬರುವ ಅವರ ನಗ್ನ ಚಿತ್ರ ಸೋರಿಕೆಯಾಗಿದೆ.

Deepika Padukone

ದೀಪಿಕಾ ಪಡುಕೋಣೆ, ಪ್ರಭಾಸ್ ಮತ್ತು ಅಮಿತಾಭ್‌ ಬಚ್ಚನ್ ಅವರ ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿದೆ ಮತ್ತು ಇದು ಅಭಿಮಾನಿಗಳು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಇನ್ನು ನಾಗ್ ಅಶ್ವಿನ್ ನಿರ್ದೇಶನದ ಬಗ್ಗೆ ಜನರು ಹೊಗಳಿದ್ದರು. ಆದರೆ ಈ ಚಿತ್ರದ ಕೆಲವು ದೃಶ್ಯಗಳು, ಹಲವಾರು ಫೋಟೊಗಳು ಮತ್ತು ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆಯಾಗಿವೆ.

Deepika Padukone

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಸುಮತಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು ತನ್ನ ಗರ್ಭದಲ್ಲಿ ಇಡೀ ವಿಶ್ವದ ದುಷ್ಟ ಶಕ್ತಿಗಳಿಗೆ ಶತ್ರುವಾದ ಮಗುವನ್ನು ಹೊತ್ತುಕೊಂಡು ಬೆಂಕಿಯ ಮೂಲಕ ನಡೆಯುತ್ತಾ ಬರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ. ಇದು ಈಗ ವೈರಲ್ ಆಗಿದೆ.

ವಿಡಿಯೊದಲ್ಲಿ ದೀಪಿಕಾ ಬೆಂಕಿಯ ಮೂಲಕ ನಡೆಯುತ್ತಾ ಬರುವಾಗ ಅವರ ಬಟ್ಟೆಗಳು ಬೆಂಕಿಗೆ ಉರಿದುಹೋಗುತ್ತಿದ್ದಂತೆ, ಅವರು ತಮ್ಮ ಎದೆಯನ್ನು ತಮ್ಮ ಕೈಯಿಂದ ಮುಚ್ಚಿಕೊಳ್ಳುತ್ತಾರೆ. ದೀಪಿಕಾ ಅವರ ಈ ಪಾತ್ರವು ಕಥಾಹಂದರಕ್ಕೆ ಪ್ರಮುಖವಾಗಿರುವುದರಿಂದ ಅವರ ಈ ಪಾತ್ರದ ಬಗ್ಗೆ ಚಿತ್ರತಂಡ ಬಹಿರಂಗಪಡಿಸಿರಲಿಲ್ಲ.

ಆದರೂ ಈ ವಿಡಿಯೋ ಸೋರಿಕೆಯಾಗಿದೆ. ಆದರೆ ಇದರಲ್ಲಿ ನಟಿಯ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ಬಳಕೆದಾರರು ಈ ಬೆಂಕಿಯ ದೃಶ್ಯವನ್ನು ‘ಅಪ್ರತಿಮ’ ಎಂದು ಕರೆದಿದ್ದಾರೆ.

Deepika Padukone

ದೀಪಿಕಾ ಪಡುಕೋಣೆಯವರ ಇಡೀ ವೃತ್ತಿಜೀವನದ ಅತ್ಯಂತ ಅಪ್ರತಿಮ ದೃಶ್ಯ ಇದಾಗಿದೆ ಎಂದು ಒಬ್ಬ ಬಳಕೆದಾರ ತಿಳಿಸಿದರೆ, ಮತ್ತೊಬ್ಬರು “ದೀಪಿಕಾ ಉರಿಯುತ್ತಿರುವ ಬೆಂಕಿಯ ಮೂಲಕ ನಡೆಯುವುದು ಯುಗಾಂತರಗಳ ದೃಶ್ಯವಾಗಿದೆ” ಎಂದು ಬರೆದಿದ್ದಾರೆ.

ಈ ನಡುವೆ ‘ಕಲ್ಕಿ 2898 ಎಡಿ’ ಚಿತ್ರ ಥಿಯೇಟರ್ ಗಳಲ್ಲಿ ಬಿಡುಗಡೆಯಾದಾಗ ಚಿತ್ರತಂಡ ಚಲನಚಿತ್ರದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳದಂತೆ ಅಭಿಮಾನಿಗಳಲ್ಲಿ ವಿನಂತಿಸಿದ್ದರು. ಈ ಚಿತ್ರ 4 ವರ್ಷಗಳ ಸುದೀರ್ಘ ಪ್ರಯಾಣ ಮತ್ತು ಇದು ನಾಗ್ ಅಶ್ವಿನ್ ಮತ್ತು ತಂಡದ ಅಪಾರ ಪರಿಶ್ರಮದ ಕಥೆಯಾಗಿದೆ.

Deepika Padukone

ಇದನ್ನೂ ಓದಿ: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

ಈ ಕಥೆಯನ್ನು ಜಾಗತಿಕ ಮಟ್ಟಕ್ಕೆ ತರುವಲ್ಲಿ ಯಾವುದೇ ಪ್ರಯತ್ನ ನಡೆದಿಲ್ಲ. ಇದನ್ನು ಮುಂದೆ ತರಲು ತಂಡವು ರಕ್ತ ಮತ್ತು ಬೆವರು ಹರಿಸಿದೆ. ಹಾಗಾಗಿ ದಯವಿಟ್ಟು ಸಿನಿಮಾವನ್ನು ಗೌರವಿಸೋಣ. ಅದಕ್ಕಾಗಿ ಸಿನಿಮಾ ತುಣುಕುಗಳನ್ನು ಹಂಚಿಕೊಳ್ಳಬೇಡಿ. ನಿಮಿಷದಿಂದ ನಿಮಿಷಕ್ಕೆ ಅಪ್ಡೇಟ್ ನೀಡಬೇಡಿ ಅಥವಾ ಪೈರಸಿಯಲ್ಲಿ ತೊಡಗಬೇಡಿ ಎಂದು ಕೇಳಿಕೊಂಡಿದ್ದರು. ಆದರೂ ಈ ಚಿತ್ರದ ಪ್ರಮುಖ ದೃಶ್ಯ ಸೋರಿಕೆಯಾಗಿರುವುದು ಬೇಸರವೇ ಸರಿ.

Continue Reading
Advertisement
Virat kohli
ಪ್ರಮುಖ ಸುದ್ದಿ2 mins ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ವಿವರ ಇಲ್ಲಿದೆ

Drown In Water
ದೇಶ5 mins ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Road Accident
ಕರ್ನಾಟಕ16 mins ago

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Hosur International Airport
ಬೆಂಗಳೂರು37 mins ago

Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Karnataka Politics
ಕರ್ನಾಟಕ50 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ59 mins ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್1 hour ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ2 hours ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ2 hours ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ2 hours ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು7 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌