Yogi Adityanath: ಮುಖ್ಯಮಂತ್ರಿಯ ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಖತರ್ನಾಕ್‌ ಕ್ರಿಮಿನಲ್‌ ಪೊಲೀಸ್‌ ಬಲೆಗೆ - Vistara News

ದೇಶ

Yogi Adityanath: ಮುಖ್ಯಮಂತ್ರಿಯ ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಖತರ್ನಾಕ್‌ ಕ್ರಿಮಿನಲ್‌ ಪೊಲೀಸ್‌ ಬಲೆಗೆ

Yogi Adityanath: ಉತ್ತರ ಪ್ರದೇಶದ ಮುಖುಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಫೋನ್ ಮೂಲಕ ವಂಚಿಸುತ್ತಿದ್ದವನು ಕೊನೆಗೂ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ. ಸಿಎಂ ಕಾರ್ಯದರ್ಶಿಯ ಹೆಸರಿನಲ್ಲಿ ನಕಲಿ ಫೋನ್ ಕರೆಗಳನ್ನು ಮಾಡುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ವಿವೇಕ್ ಶರ್ಮಾ ಅಲಿಯಾಸ್ ಬಂಟು ಚೌಧರಿಯನ್ನು ಬಸ್ತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Yogi Adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಉತ್ತರ ಪ್ರದೇಶದ ಮುಖುಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ಸರ್ಕಾರಿ ಅಧಿಕಾರಿಗಳನ್ನು ಫೋನ್ ಮೂಲಕ ವಂಚಿಸುತ್ತಿದ್ದವನು ಕೊನೆಗೂ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ. ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (STF) ಆತನನ್ನು ಭಾನುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಕಾರ್ಯದರ್ಶಿಯ ಹೆಸರಿನಲ್ಲಿ ನಕಲಿ ಫೋನ್ ಕರೆಗಳನ್ನು ಮಾಡುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ವಿವೇಕ್ ಶರ್ಮಾ ಅಲಿಯಾಸ್ ಬಂಟು ಚೌಧರಿಯನ್ನು ಬಸ್ತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಎಸ್‌ಟಿಎಫ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಲವು ದಿನಗಳ ಹಿಂದೆ ಬಸ್ತಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿಗೆ ಮೋಸ ಮಾಡುವ ಸಲುವಾಗಿ ಅವರ ಮೊಬೈಲ್‌ ಫೊನ್‌ಗೆ ಕರೆ ಮಾಡಿ ತನ್ನನ್ನು ಮುಖ್ಯಮಂತ್ರಿಯ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿರುವುದಾಗಿ ಎಂದು ವಿವೇಕ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಬೈಲ್ ಅಪ್ಲಿಕೇಶನ್ ‘ಟ್ರೂ ಕಾಲರ್’ನಲ್ಲಿ ವಿವೇಕ್‌ನ ಫೋನ್‌ ನಂಬರ್‌ ʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ʼ ಎಂದು ಕಾಣಿಸಿಕೊಂಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಬಸ್ತಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 419 (ವ್ಯಕ್ತಿಗಳಿಗೆ ಮೋಸ ಮಾಡಿದ್ದಕ್ಕೆ ಇರುವ ಶಿಕ್ಷೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರಚೋದನೆ), 384 (ಸುಲಿಗೆ) ಮತ್ತು 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಂಚನೆ ಆರೋಪದ ಮೇಲೆ ಅಲಿಗಢ, ಬಲರಾಂಪುರ, ಮಥುರಾ, ಕಾನ್ಪುರ ನಗರ ಮತ್ತು ಹರ್ದೋಯ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಎಸ್‌ಟಿಎಫ್‌ ತಿಳಿಸಿದೆ. ಸದ್ಯ ವಿವೇಕ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಇನ್ನಷ್ಟು ಸ್ಫೋಟಕ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.

ಭಾವಿ ಯೋಧರಿಗೆ ನೇಮಕ ಹೆಸರಲ್ಲಿ ವಂಚನೆ

ಬೆಂಗಳೂರು: ದೇಶ ಸೇವೆ ಮಾಡಲು ಯೋಧನಾಗಬೇಕೆಂದು ಗುರಿ ಹೊಂದಿರುವ ಯುವಕರನ್ನೇ ಟಾರ್ಗೆಟ್‌ ಮಾಡಿ ವಂಚಿಸಿರುವ ಘಟನೆ ಕೆಲವು ದಿನಗಳ ಹಿಂದೆ ಬೆಂಗಳೂರಲ್ಲಿ ವರದಿಯಾಗಿತ್ತು. ಸೇನಾ ಸೆಲೆಕ್ಷನ್ ರ‍್ಯಾಲಿ ವೇಳೆ ಮಿಲಿಟರಿ ಆಫೀಸರ್ ಡ್ರೆಸ್ ಹಾಕಿ ಬಂದಿದ್ದ ಪ್ರಸನ್ ಜಿನ್ ಘೋಷ್ ಎಂಬಾತ ಅಭ್ಯರ್ಥಿಗಳಿಗೆ ವಂಚಿಸಿ ಸುಲಿಗೆ ಮಾಡಿದ್ದಾನೆ. ಈ ಸಂಬಂಧ ಲೆಫ್ಟಿನೆಂಟ್ ಕರ್ನಲ್ ಹೇಮಂತ್ ತಿವಾರಿ ಅವರು ದೂರು ನೀಡಿದ್ದಾರೆ. ಅಶೋಕ್ ನಗರ ಬಳಿ ಇರುವ ಸಿಎಂಪಿ ಸೆಂಟರ್ ಹಾಗೂ ಬಿಹಾರ ಸೇನೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ರ‍್ಯಾಲಿ ನಡೆದಿತ್ತು. ಈ ವೇಳೆ ಆರ್ಮಿ ಶಾಲೆಗೆ ಮಿಲಿಟರಿ ಆಫೀಸರ್ ಡ್ರೆಸ್‌ನಲ್ಲಿ ಪ್ರಸನ್ ಜಿನ್ ಘೋಷ್ ಬಂದಿದ್ದಾನೆ. ಅಲ್ಲಿದ್ದ ಕೆಲ ಅಭ್ಯರ್ಥಿಗಳಿಗೆ ಹಿಂದಿಯಲ್ಲಿ ಮಾತನಾಡಿ ಸಲಹೆಗಳನ್ನು ನೀಡಿದ್ದಾನೆ.

ಇತ್ತ ಅಸ್ಸಾಂ ಹಾಗು ಬಿಹಾರ ಮೂಲದ ಅಭ್ಯರ್ಥಿಗಳು ಈ ವಂಚಕನನ್ನು ಆಫೀಸರ್ ಎಂದೇ ನಂಬಿದ್ದರು. ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದು ಬೇಡ. ನಾನೇ ನಿಮ್ಮನ್ನು ಸೇನೆಗೆ ಸೇರಿಸುತ್ತಿನಿ ಎಂದು ಅಭ್ಯರ್ಥಿಗಳಿಗೆ ನಂಬಿಸಿ 20 ಅಭ್ಯರ್ಥಿಗಳಿಂದ ತಲಾ 30 ಸಾವಿರ ರೂ. ಹಣ ಪಡೆದಿದ್ದ. ನಂತರ ಸಿಎಂಪಿ ಸ್ಟ್ಯಾಂಪ್ ಹಾಗೂ ನಕಲಿ ಸಹಿ ಮಾಡಿ ಅಪಾಯಿಂಟ್‌ಮೆಂಟ್‌ ಲೆಟರ್‌ ನೀಡಿ ಡ್ಯೂಟಿಗೆ ರಿಪೋರ್ಟ್‌ ಮಾಡಿಕೊಳ್ಳಿ ಎಂದಿದ್ದ. ನಂತರ ಯುವಕರಿಗೆ ತಾವು ಮೋಸ ಹೋಗಿರುವುದು ತಿಳಿದುಬಂದಿದೆ. ಈ ಸಂಬಂಧ ಖುದ್ದು ಲೆಫ್ಟಿನೆಂಟ್ ಕರ್ನಲ್ ಅವರೇ ದೂರು ನೀಡಿದ್ದಾರೆ. 

ಇದನ್ನೂ ಓದಿ: Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading

ದೇಶ

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Stampedes in India: ಈ ಹಿಂದೆಯೂ ಅನೇಕ ಬಾರಿ ಇಂತಹ ದುರ್ಘಟನೆಗಳು ದೇಶದಲ್ಲಿ ನಡೆದಿವೆ. ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತದಿಂದ ಉಂಟಾದ ಕೆಲವು ದೊಡ್ಡ ಸಾವುನೋವುಗಳಲ್ಲಿ 2005 ರಲ್ಲಿ ಮಹಾರಾಷ್ಟ್ರದ ಮಂದಾರದೇವಿ ದೇವಸ್ಥಾನದಲ್ಲಿ 340 ಕ್ಕೂ ಹೆಚ್ಚು ಭಕ್ತರ ಸಾವು ಮತ್ತು 2008 ರಲ್ಲಿ ರಾಜಸ್ಥಾನದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಕನಿಷ್ಠ 250 ಜನರು ಸಾವನ್ನಪ್ಪಿದರು.

VISTARANEWS.COM


on

Stampedes in India
Koo

ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ (Stampedes in India) ಮೃತಪಟ್ಟವರ ಸಂಖ್ಯೆ 107ಕ್ಕೆ ಏರಿಕೆ ಆಗಿದೆ ಎಂದು ಹೇಳಲಾಗಿದೆ ಹತ್ರಾಸ್​​(Hatras) ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.‍ಇಂಥಹ ಧಾರುಣ ಘಟನೆ ನಡೆದಿರುವುದು ಇದೇ ಮೊದಲಲ್ಲ.

ಈ ಹಿಂದೆಯೂ ಅನೇಕ ಬಾರಿ ಇಂತಹ ದುರ್ಘಟನೆಗಳು ದೇಶದಲ್ಲಿ ನಡೆದಿವೆ. ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತದಿಂದ ಉಂಟಾದ ಕೆಲವು ದೊಡ್ಡ ಸಾವುನೋವುಗಳಲ್ಲಿ 2005 ರಲ್ಲಿ ಮಹಾರಾಷ್ಟ್ರದ ಮಂದಾರದೇವಿ ದೇವಸ್ಥಾನದಲ್ಲಿ 340 ಕ್ಕೂ ಹೆಚ್ಚು ಭಕ್ತರ ಸಾವು ಮತ್ತು 2008 ರಲ್ಲಿ ರಾಜಸ್ಥಾನದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಕನಿಷ್ಠ 250 ಜನರು ಸಾವನ್ನಪ್ಪಿದರು. ಹಿಮಾಚಲ ಪ್ರದೇಶದ ನೈನಾ ದೇವಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, 162 ಜನ ಬಲಿಯಾಗಿದ್ದರು.

ಮಾರ್ಚ್ 31, 2023: ಇಂದೋರ್ ನಗರದ ದೇವಸ್ಥಾನವೊಂದರಲ್ಲಿ ರಾಮ ನವಮಿಯ ಸಂದರ್ಭದಲ್ಲಿ ನಡೆದ ‘ಹವನ’ ಕಾರ್ಯಕ್ರಮದಲ್ಲಿ ಪುರಾತನವಾದ ಬಾವಿಯ ಮೇಲೆ ನಿರ್ಮಿಸಲಾದ ಚಪ್ಪಡಿ ಕುಸಿದು ಕನಿಷ್ಠ 36 ಜನರು ಸಾವನ್ನಪ್ಪಿದರು.

ಜನವರಿ 1, 2022: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಭಕ್ತರ ಭಾರೀ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದರು ಮತ್ತು ಹನ್ನೆರಡು ಜನರು ಗಾಯಗೊಂಡರು.

ಜುಲೈ 14, 2015: ಆಂಧ್ರಪ್ರದೇಶದ ರಾಜಾಜಿನಗರದಲ್ಲಿ ನಡೆದ ‘ಪುಷ್ಕರಂ’ ಉತ್ಸವದ ಆರಂಭದ ದಿನದಂದು ಅಪಾರ ಸಂಖ್ಯೆಯ ಭಕ್ತರು ಸೇರಿದ್ದ ಗೋದಾವರಿ ನದಿಯ ದಡದ ಪ್ರಮುಖ ಸ್ನಾನಗೃಹದಲ್ಲಿ ನೂಕುನುಗ್ಗಲು ಉಂಟಾಗಿ 27 ಯಾತ್ರಾರ್ಥಿಗಳು ಸಾವನ್ನಪ್ಪಿದರು ಮತ್ತು 20 ಮಂದಿ ಗಾಯಗೊಂಡರು.

ಅಕ್ಟೋಬರ್ 3, 2014: ದಸರಾ ಆಚರಣೆಗಳು ಮುಗಿದ ಸ್ವಲ್ಪ ಸಮಯದ ನಂತರ ಪಾಟ್ನಾದ ಗಾಂಧಿ ಮೈದಾನದಲ್ಲಿ ಕಾಲ್ತುಳಿತದಲ್ಲಿ ಮೂವತ್ತೆರಡು ಜನರು ಸಾವನ್ನಪ್ಪಿದರು ಮತ್ತು 26 ಮಂದಿ ಗಾಯಗೊಂಡರು.

ಅಕ್ಟೋಬರ್ 13, 2013: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ರತನ್‌ಗಢ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ 115 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಕ್ತರು ದಾಟುತ್ತಿದ್ದ ನದಿ ಸೇತುವೆ ಕುಸಿಯುವ ಹಂತದಲ್ಲಿದೆ ಎಂಬ ವದಂತಿಯಿಂದ ಈ ಕಾಲ್ತುಳಿತ ಉಂಟಾಗಿತ್ತು.

ನವೆಂಬರ್ 19, 2012: ಪಾಟ್ನಾದ ಗಂಗಾ ನದಿಯ ದಡದಲ್ಲಿರುವ ಅದಾಲತ್ ಘಾಟ್‌ನಲ್ಲಿ ಛತ್ ಪೂಜೆಯ ವೇಳೆ ನೂಕುನುಗ್ಗಲು ಉಂಟಾದ ತಾತ್ಕಾಲಿಕ ಸೇತುವೆಯೊಂದು ಕುಸಿದು ಸುಮಾರು 20 ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡರು.

ನವೆಂಬರ್ 8, 2011: ಹರಿದ್ವಾರದಲ್ಲಿ ಗಂಗಾ ನದಿಯ ದಡದಲ್ಲಿರುವ ಹರ್-ಕಿ-ಪೌರಿ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದರು.

ಜನವರಿ 14, 2011: ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಮೇಡುವಿನಲ್ಲಿ ಸ್ವದೇಶಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಜೀಪ್ ಡಿಕ್ಕಿ ಹೊಡೆದು ಕಾಲ್ತುಳಿತದಲ್ಲಿ ಕನಿಷ್ಠ 104 ಶಬರಿಮಲೆ ಭಕ್ತರು ಸಾವನ್ನಪ್ಪಿದರು ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಮಾರ್ಚ್ 4, 2010: ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಕೃಪಾಲು ಮಹಾರಾಜನ ರಾಮ್ ಜಾಂಕಿ ದೇವಸ್ಥಾನದಲ್ಲಿ ಸ್ವಯಂಘೋಷಿತ ದೇವಮಾನವನಿಂದ ಉಚಿತ ಬಟ್ಟೆ ಮತ್ತು ಆಹಾರವನ್ನು ಸಂಗ್ರಹಿಸಲು ಜನರು ಸೇರುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 63 ಜನರು ಸಾವನ್ನಪ್ಪಿದರು.

ಸೆಪ್ಟೆಂಬರ್ 30, 2008: ರಾಜಸ್ಥಾನದ ಜೋಧ್‌ಪುರ ನಗರದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಬಾಂಬ್ ಸ್ಫೋಟವಾಗುತ್ತಿದೆ ಎಂಬ ವದಂತಿಯಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 250 ಭಕ್ತರು ಸಾವನ್ನಪ್ಪಿದರು ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಆಗಸ್ಟ್ 3, 2008: ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ನೈನಾ ದೇವಿ ದೇವಸ್ಥಾನದಲ್ಲಿ ಬಂಡೆಗಳ ಕುಸಿತದ ವದಂತಿಗಳಿಂದ ಉಂಟಾದ ಕಾಲ್ತುಳಿತದಲ್ಲಿ 162 ಸಾವು, 47 ಮಂದಿ ಗಾಯಗೊಂಡರು.

ಜನವರಿ 25, 2005: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಮಂಧರದೇವಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆಯ ಸಂದರ್ಭದಲ್ಲಿ 340 ಕ್ಕೂ ಹೆಚ್ಚು ಭಕ್ತರು ತುಳಿದು ಸಾವನ್ನಪ್ಪಿದರು ಮತ್ತು ನೂರಾರು ಮಂದಿ ಗಾಯಗೊಂಡರು. ಭಕ್ತಾದಿಗಳು ತೆಂಗಿನಕಾಯಿ ಒಡೆಯುತ್ತಿದ್ದರಿಂದ ಜಾರುತ್ತಿದ್ದ ಮೆಟ್ಟಿಲುಗಳ ಮೇಲೆ ಕೆಲವರು ಬಿದ್ದು ಅವಘಡ ಸಂಭವಿಸಿದೆ.

ಇದನ್ನೂ ಓದಿ:Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Continue Reading

ರಾಜಕೀಯ

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದರು. ಅನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟೀಕರಣ ನೀಡಿದ್ದರು. ಇದೀಗ ಅಗ್ನಿವೀರ್‌ ಕುಟುಂಬದ ಸದಸ್ಯರೇ ಪರಿಹಾರ ಪಡೆದಿರುವುದಾಗಿ ಹೇಳಿದ್ದಾರೆ.

VISTARANEWS.COM


on

By

Agniveer
Koo

ಕರ್ತವ್ಯದ ವೇಳೆ ಕಳೆದ ವರ್ಷ ಮೃತಪಟ್ಟಿದ್ದ ಮಹಾರಾಷ್ಟ್ರದ (maharastra) ಅಗ್ನಿವೀರ್ (agniveer) ಅಕ್ಷಯ್ ಗವಾಟೆ (Agniveer Akshay Gawate) ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 1.08 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸೋಮವಾರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಇದರಿಂದಾಗಿ, ಅಗ್ನಿವೀರ್‌ ಯೋಜನೆಯಡಿ ಆಯ್ಕೆಯಾದವರು ಸತ್ತರೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಸಂಸತ್‌ನಲ್ಲಿ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖಭಂಗ ಅನುಭವಿಸಿದಂತಾಗಿದೆ.

ಲೋಕಸಭೆಯಲ್ಲಿ (loksabha) ರಕ್ಷಣಾ ಸಚಿವ ರಾಜನಾಥ್ ಸಿಂಗ್ (rajnath singh) ಅವರು ಕರ್ತವ್ಯದ ವೇಳೆಯಲ್ಲಿ ಪ್ರಾಣ ತ್ಯಾಗ ಮಾಡುವ ಅಗ್ನಿವೀರನಿಗೆ 1 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ತೀವ್ರವಾಗಿ ಆರೋಪಿಸಿದ್ದರು. ಅನಂತರ ರಾಜನಾಥ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಪಿಂಪಲ್ಗಾಂವ್ ಸರೈ ಮೂಲದ ಅಗ್ನಿವೀರ್ ಅಕ್ಷಯ್ ಗವಾಟೆ ಅವರು 2023ರ ಅಕ್ಟೋಬರ್ 21ರಂದು ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದರು. ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅಕ್ಷಯ್ ಅವರ ತಂದೆ ಲಕ್ಷ್ಮಣ ಗವಾಟೆ, ಅಕ್ಷಯ್ ನಿಧನದ ಅನಂತರ ವಿಮಾ ರಕ್ಷಣೆಯಾಗಿ 48 ಲಕ್ಷ ರೂ., 50 ಲಕ್ಷ ರೂ. ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ 10 ಲಕ್ಷ ರೂ ದೊರೆತಿದೆ ಎಂದರು. ಅಕ್ಷಯ್ ಸಹೋದರಿಗೆ ಸರ್ಕಾರಿ ನೌಕರಿ ನೀಡುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

2022ರ ಜೂನ್ 14ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು 17 ಮತ್ತು 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರಲ್ಲಿ ಶೇಕಡಾ 25 ರಷ್ಟು ಜನರನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ. ಸರ್ಕಾರವು ಇದಕ್ಕಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿದೆ.

ರಾಹುಲ್ ಆರೋಪ ಸುಳ್ಳು ಎಂದಿದ್ದ ಭಾರತೀಯ ಸೇನೆ

ಸಿಯಾಚಿನ್‌ನಲ್ಲಿ ಮೃತಪಟ್ಟಿರುವ ಭಾರತೀಯ ಸೈನ್ಯದ ʼಅಗ್ನಿವೀರʼನಿಗೆ ಸಂದ ಹಾಗೂ ಸಲ್ಲಲಿರುವ ಆರ್ಥಿಕ ನೆರವಿನ ವಿವರಗಳನ್ನು ಸೈನ್ಯಾಧಿಕಾರಿಗಳು ತಿಳಿಸಿದ್ದು, ರಾಹುಲ್‌ ಗಾಂಧಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಈ ಮೊದಲೇ ಹೇಳಿದ್ದರು.

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರನ ಕುಟುಂಬಕ್ಕೆ ನೀಡಲಾಗುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಭಾರತೀಯ ಸೈನ್ಯ ಸ್ಪಷ್ಟನೆ ನೀಡಿತ್ತು. ಮೃತರ ಕುಟುಂಬದವರಿಗೆ ಪರಿಹಾರವನ್ನು ಸೈನಿಕ ಸೇವೆಯ ಸಂಬಂಧಿತ ನಿಯಮಗಳ ಮೂಲಕವೇ ನೀಡಲಾಗುತ್ತಿದೆ ಎಂದು ಹೇಳಿತ್ತು. ಮೃತ ಅಗ್ನಿವೀರರ ಕುಟುಂಬದವರಿಗೆ 48 ಲಕ್ಷ ರೂ. ವಿಮಾ ಹಣದ ಮೊತ್ತ, 44 ಲಕ್ಷ ರೂ. ಪರಿಹಾರ, ಅಗ್ನಿವೀರ್‌ನಿಂದ ಸೇವಾ ನಿಧಿ ಕೊಡುಗೆ ಮತ್ತು ಸರ್ಕಾರದಿಂದ ಇಷ್ಟೇ ಪ್ರಮಾಣದ ಹೊಂದಾಣಿಕೆಯ ಕೊಡುಗೆ ಸಂಚಿತ ಬಡ್ಡಿಯೊಂದಿಗೆ ಕೊಡಲಾಗುತ್ತದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿತ್ತು.

ಸೈನಿಕನ ಮರಣದ ದಿನಾಂಕದಿಂದ ನಾಲ್ಕು ವರ್ಷಗಳು ಪೂರ್ಣಗೊಳ್ಳುವವರೆಗಿನ ಉಳಿದ ಸೇವಾವಧಿಯ ವೇತನವನ್ನು ಸಹ ಇದು ಒಳಗೊಂಡಿದೆ. ಪ್ರಸ್ತುತ ಪ್ರಕರಣದಲ್ಲಿ ಈ ಮೊತ್ತ 13 ಲಕ್ಷ ರೂ. ಗಿಂತ ಹೆಚ್ಚು ಇದೆ. ಇನ್ನು ಸಶಸ್ತ್ರ ಪಡೆಗಳ ಯುದ್ಧ ಅಪಘಾತ ನಿಧಿಯಿಂದ 8 ಲಕ್ಷ ರೂ. ಹೆಚ್ಚುವರಿ ಕೊಡುಗೆಯನ್ನು ಸಂಬಂಧಿಕರಿಗೆ ನೀಡಲಾಗುತ್ತದೆ. ತಕ್ಷಣದ ಪರಿಹಾರವಾಗಿ ಒದಗಿಸಲು ಸೇನಾ ಯೋಧರ ಪತ್ನಿಯರ ಕಲ್ಯಾಣ ಸಂಘ (AWWA) 30 ಸಾವಿರ ರೂ. ಆರ್ಥಿಕ ನೆರವು ನೀಡುತ್ತಿದೆ. ಹೀಗಾಗಿ ಒಟ್ಟಾರೆ ಮೊತ್ತ ₹ 1.13 ಕೋಟಿ ದಾಟಲಿದೆ ಎಂದು ಸೇನೆ ತಿಳಿಸಿತ್ತು.

ಅಗ್ನಿವೀರ್‌ಗಳ ಸೇವಾ ನಿಯಮಗಳ ಪ್ರಕಾರ ಮರಣಹೊಂದಿದ, ಯುದ್ಧದಲ್ಲಿ ಗಾಯಗೊಂಡವರಿಗೆ ಅಧಿಕೃತವಾದ ಪರಿಹಾರಗಳು ಇವುಗಳನ್ನು ಒಳಗೊಂಡಿರುತ್ತವೆ. ಕೊಡುಗೆ ರಹಿತ ವಿಮಾ ಮೊತ್ತ 48 ಲಕ್ಷ ರೂ., ಅಗ್ನಿವೀರ್‌ ಸೇವಾ ನಿಧಿ ಶೇ. 30 ಮತ್ತು ಸರ್ಕಾರ ನೀಡುವ ಸಮಾನ ಹೊಂದಾಣಿಕೆಯ ಕೊಡುಗೆ ಮತ್ತು ಅದಕ್ಕೆ ಬಡ್ಡಿ. ಆರ್ಮಿ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ ​​(AWWA) ನಿಂದ 30 ಸಾವಿರ ರೂ. ತಕ್ಷಣದ ಆರ್ಥಿಕ ನೆರವು ಎಂದು ಸೇನೆ ಈ ಹಿಂದೆಯೇ ತಿಳಿಸಿತ್ತು.

Continue Reading

ಪ್ರಮುಖ ಸುದ್ದಿ

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

Hathras Stampede : ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ‘ಸಕರ್ ವಿಶ್ವ ಹರಿ’ ಅಥವಾ ‘ಭೋಲೆ ಬಾಬಾ’ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗೆ ಸೇರಿದ “ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್’ ಸಮಿತಿ ಸತ್ಸಂಗ ಆಯೋಜಿಸಿತ್ತು.

VISTARANEWS.COM


on

Hathras Stampede
Koo

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಮಂಗಳವಾರ ಸತ್ಸಂಗ ನಡೆಯುತ್ತಿದ್ದ ವೇಳೆ ಉಂಟಾದ ಕಾಲ್ತುಳಿತಕ್ಕೆ 107 ಜನರು (Hathras Stampede) ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಮೃತರನ್ನು ಹತ್ರಾಸ್ ಮತ್ತು ನೆರೆಯ ಇಟಾ ಜಿಲ್ಲೆಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಅಲಿಗಢದ ಕಮಿಷನರ್ ಚೈತ್ರಾ ವಿ ಅವರು 107 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ. ಅದರಲ್ಲಿ 27 ಜನರು ಇಟಾ ಜಿಲ್ಲೆಯವರು. ಕಾಲ್ತುಳಿತಕ್ಕೆ ಸುಮಾರು 18 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್, ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆಯುತ್ತಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ‘ಸಕರ್ ವಿಶ್ವ ಹರಿ’ ಅಥವಾ ‘ಭೋಲೆ ಬಾಬಾ’ ಎಂದೂ ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವ ನಾರಾಯಣ್ ಸಕರ್ ಹರಿ ಅವರಿಗೆ ಸೇರಿದ “ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್’ ಸಮಿತಿ ಸತ್ಸಂಗ ಆಯೋಜಿಸಿತ್ತು.

ನಜ್ಜುಗುಜ್ಜಾದ ಜನ


ಈ ಭಯಾನಕ ಘಟನೆಯ ಪ್ರತ್ಯಕ್ಷದರ್ಶಿಯೊಬ್ಬರು “ನಾವು ಸತ್ಸಂಗಕ್ಕಾಗಿ ಬಂದಿದ್ದೆವು. ದೊಡ್ಡ ಜನಸಮೂಹವಿತ್ತು. ಸತ್ಸಂಗ ಮುಗಿದ ನಂತರ ನಾವು ಹೊರಡಲು ಪ್ರಾರಂಭಿಸಿದೆವು. ನಿರ್ಗಮನ ದ್ವಾರ ಕಿರಿದಾಗಿತ್ತು. ನಾವು ಮೈದಾನದ ಕಡೆಗೆ ನಿರ್ಗಮಿಸಲು ಪ್ರಯತ್ನಿಸಿದಾಗ, ಇದ್ದಕ್ಕಿದ್ದಂತೆ, ಗದ್ದಲ ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನಿಧನಕ್ಕೆ ರಾಷ್ಟ್ರೀಯ ನಾಯಕರ ಸಂತಾಪ

ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಅಧ್ಯಕ್ಷ ದ್ರೌಪದಿ ಮುರ್ಮು, ಈ ಘಟನೆ ಹೃದಯ ದುಃಖಕರ ಎಂದು ಹೇಳಿದ್ದಾರೆ. “ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಅನೇಕ ಭಕ್ತರು ಸಾವನ್ನಪ್ಪಿದ ಸುದ್ದಿ ಆಘಾತ ತಂದಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಹತ್ರಾಸ್​​ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕೇಂದ್ರ ಸರ್ಕಾರ ಸಂಪರ್ಕದಲ್ಲಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್​ ಪೋಸ್ಟ್​​ ಮಾಡಿ, ದುರಂತದಿಂದ ನನಗೆ ತೀವ್ರ ದುಃಖವಾಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯಷನ್ನು ದೇವರು ಅವರಿಗೆ ನೀಡಲಿ. ಸ್ಥಳೀಯ ಆಡಳಿತವು ಪರಿಹಾರ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿನಾಥ, ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮುಖ್ಯಮಂತ್ರಿಗಳು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಪೊಲೀಸ್ ಮಹಾನಿರ್ದೇಶಕರು, ಇಬ್ಬರು ಹಿರಿಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯನ್ನು ಸ್ಥಳಕ್ಕೆ ಕಳುಹಿಸಿದ್ದಾರೆ.

ಇದೊಂದು ಅತ್ಯಂತ ನೋವಿನ ಘಟನೆ ಎಂದು ಹೇಳಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ” ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ/ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement
bengaluru student Vaishnavi M who won the prestigious award from IIT Bombay
ಬೆಂಗಳೂರು9 mins ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ15 mins ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ17 mins ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ20 mins ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Pancreatitis
ಆರೋಗ್ಯ22 mins ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ24 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Advocate G Devarajegowda
ಕರ್ನಾಟಕ25 mins ago

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Uttara Kannada News Meeting by DC Gangubai Manakar in Karwar
ಉತ್ತರ ಕನ್ನಡ27 mins ago

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Minister Lakshmi Hebbalkar has submitted various proposals to the Union Minister seeking grant for the strengthening of the department
ಕರ್ನಾಟಕ29 mins ago

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Hathras Stampede
ದೇಶ35 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌