Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ? - Vistara News

ಲೈಫ್‌ಸ್ಟೈಲ್

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

Sleep after Lunch: ಮಧ್ಯಾಹ್ನ ವಿಪರೀತ ಹಸಿವಾಗುತ್ತದೆ. ಹಸಿವು ಅಂತ ಚೆನ್ನಾಗಿ ಊಟ ಮಾಡಿದರೆ ಆಕಳಿಕೆ ಬಂದು ನಿದ್ದೆ ಆವರಿಸುತ್ತದೆ. ಹೀಗೆ ಊಟದ ನಂತರ ಕಾಲು ಚಾಚಿ ಮೈ ಚೆಲ್ಲಬೇಕೆಂಬ ಬಯಕೆ ಬಹಳಷ್ಟು ಜನರಿಗೆ ಬರುತ್ತದೆ. ಊಟದ ನಂತರ ಕಣ್ಣೆಳೆದು ನಿದ್ದೆ ಬರುವಂತಾಗುವುದೇಕೆ? ಉಂಡಿದ್ದಕ್ಕೇ ದಣಿವಾಗುವುದೇಕೆ? ಇಲ್ಲಿದೆ ಅದಕ್ಕೆ ಕಾರಣಗಳ ವಿವರ.

VISTARANEWS.COM


on

Sleep After Lunch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗಷ್ಟೇ ಮಧ್ಯಾಹ್ನದ ಊಟ ಮುಗಿಸಿ (Sleep after Lunch) ಬಂದು ಆಫೀಸ್‌ನಲ್ಲಿ ಕುಳಿತಿದ್ದೀರಿ. ಅಲ್ಲಿಯವರೆಗೆ ಇಲ್ಲದ್ದು ಇದ್ದಕ್ಕಿದ್ದಂತೆ ಗಂಟು ಬೀಳುತ್ತದೆ- ಆಕಳಿಕೆ! ಹತ್ತಿಪ್ಪತ್ತು ಸಾರಿ ಆಕಳಿಸುವಷ್ಟರಲ್ಲಿ, ಮೆಲ್ಲಗೆ ತೂಕಡಿಕೆ ಆವರಿಸುತ್ತದೆ. ಎಷ್ಟು ಪ್ರಯತ್ನಿಸಿದರೂ ಕಣ್ಣು ತೆರೆದು ಕೂರುವುದಕ್ಕೇ ಆಗುತ್ತಿಲ್ಲ. ಸಣ್ಣದೊಂದು ಕೋಳಿ ನಿದ್ದೆ ಮಾಡಿದ ಮೇಲೆಯೇ ಈ ಅವಸ್ಥೆಯಿಂದ ಬಿಡುಗಡೆ ಅನಿಸಬಹುದು. ಕೂತಲ್ಲೇ ತೂಕಡಿಸಿ ನಿದ್ದೆ ತೆಗೆಯುವ ಸಾಮರ್ಥ್ಯ ಇದ್ದರೆ ಸರಿ, ಇಲ್ಲದಿದ್ದರೆ? ಫಜೀತಿ ತಪ್ಪಿದ್ದಲ್ಲ. ಹೀಗೆ ಊಟದ ನಂತರ ಕಾಲು ಚಾಚಿ ಮೈ ಚೆಲ್ಲಬೇಕೆಂಬ ಬಯಕೆ ಬಹಳಷ್ಟು ಜನರಿಗೆ ಬರುತ್ತದೆ. ಊಟದ ನಂತರ ಕಣ್ಣೆಳೆದು ನಿದ್ದೆ ಬರುವಂತಾಗುವುದೇಕೆ? ಉಂಡಿದ್ದಕ್ಕೇ ದಣಿವಾಗುವುದೆಂದರೆ! ಇದಕ್ಕೆ ಕಾರಣಗಳು ಇಲ್ಲಿವೆ.

Asian man is sleeping snoring

ಏಕೆ ಹೀಗೆ?

ಗಡದ್ದು ಊಟದ ನಂತರ ನಿದ್ದೆ ಬರುವುದಕ್ಕೆ ಕಾರಣಗಳು ಇಲ್ಲದಿಲ್ಲ. ದೇಹದಲ್ಲಿ ಹೆಚ್ಚುವ ಸೆರೋಟೀನಿನ್‌ ಎಂಬ ಅಂಶವೇ ಇದಕ್ಕೆ ಕಾರಣ. ವಿವರವಾಗಿ ಹೇಳುವುದಾದರೆ, ಪಿಷ್ಟ ಮತ್ತು ಪ್ರೊಟೀನ್‌ ಅಂಶಗಳು ಹೆಚ್ಚಿರುವಂಥ ಆಹಾರಗಳು ಸಾಮಾನ್ಯವಾಗಿ ನಿದ್ದೆ ಬರಿಸುತ್ತವೆ. ಕಾರಣ ಪ್ರೊಟೀನ್‌ಭರಿತ ಆಹಾರಗಳಲ್ಲಿ ಟ್ರಿಪ್ಟೋಫ್ಯಾನ್‌ ಎಂಬ ಅಮೈನೊ ಆಮ್ಲಗಳು ಧಾರಾಳವಾಗಿ ಇರುತ್ತವೆ. ಈ ಅಮೈನೊ ಆಮ್ಲಗಳಿಂದ ಸೆರೋಟೋನಿನ್‌ ಎನ್ನುವ ಹ್ಯಾಪಿ ಹಾರ್ಮೋನು ಬಿಡುಗಡೆ ಆಗುತ್ತದೆ. ನಮ್ಮ ಮೂಡ್‌ ಬದಲಾವಣೆ, ನಿದ್ದೆ ಮುಂತಾದ ಬಹಳಷ್ಟು ವಿಷಯಗಳ ಮೇಲೆ ಇದು ಪ್ರಭಾವ ಬೀರುತ್ತದೆ. ಈ ಸೆರೋಟೋನಿನ್‌ ಹೀರಿಕೊಳ್ಳುವುದಕ್ಕೆ ಪಿಷ್ಟಭರಿತ ಆಹಾರಗಳು ಪ್ರೋತ್ಸಾಹ ನೀಡುತ್ತವೆ. ಗಡದ್ದು ಊಟದ ನಂತರ ನಿದ್ದೆ ಬರುವುದಕ್ಕೆ ಇಷ್ಟು ಸಾಲದೇ?

ಯಾವ ಆಹಾರಗಳು?

ಪ್ರೊಟೀನ್‌ ಹೆಚ್ಚಿರುವಂಥ ಮೊಟ್ಟೆ, ಚಿಕನ್‌, ಹಾಲು, ಮೊಸರಿನಂಥ ಡೇರಿ ಉತ್ಪನ್ನಗಳು, ಸೋಯ್‌ ಉತ್ಪನ್ನಗಳು, ಮೀನು, ಬೀಜಗಳು ಇತ್ಯಾದಿ ಆಹಾರಗಳಲ್ಲಿ ಟ್ರಿಪ್ಟೊಫ್ಯಾನ್‌ ಅಮೈನೊ ಆಮ್ಲ ಹೆಚ್ಚಾಗಿರುತ್ತದೆ. ಪಿಷ್ಟ ಹೆಚ್ಚಾಗಿರುವ ಆಹಾರಗಳೆಂದರೆ- ಅನ್ನ, ಚಪಾತಿ, ಬ್ರೆಡ್‌, ಪಾಸ್ತಾ, ಯಾವುದೇ ಸಿಹಿ ತಿಂಡಿಗಳು, ಕೇಕ್‌ನಂಥ ಬೇಕ್‌ ಮಾಡಿದ ತಿನಿಸುಗಳು, ಆಲೂಗಡ್ಡೆ ಮತ್ತು ಗೆಣಸಿನಂಥ ಗಡ್ಡೆಗಳು. ಇವುಗಳ ಮಿಶ್ರಣ ಆಹಾರದಲ್ಲಿದ್ದರೆ, ಊಟದ ನಂತರ ಕಣ್ಣೆಳೆಯುವುದು ಖಚಿತ. ಹಳೆಯ ಕಾಲದಲ್ಲಿ ಮಕ್ಕಳಿಗೆ ಮಲಗುವಾಗ ಹಾಲು ಕುಡಿಸುವ ಕ್ರಮದ ಹಿಂದೆಯೂ ಇಂಥದ್ದೇ ಕಾರಣಗಳು ಇರಬಹುದು.

ಎಷ್ಟು ತಿನ್ನುತ್ತೀರಿ?

ಆಹಾರವನ್ನು ತಿನ್ನುವ ಪ್ರಮಾಣ ಎಷ್ಟು ಎನ್ನುವುದು ಸಹ ಮುಖ್ಯವಾಗುತ್ತದೆ. ಭೂರಿ ಭೋಜನದ ನಂತರ ನಿದ್ದೆಯನ್ನು ತಪ್ಪಿಸುವುದು ಕಷ್ಟ. ಭರ್ಜರಿ ಊಟದ ನಂತರ ರಕ್ತದಲ್ಲಿನ ಸಕ್ಕರೆ ಅಂಶಗಳೂ ಏರಿಳಿತವಾಗಿ ಆಯಾಸದ ಅನುಭವ ಆಗಬಹುದು, ನಿದ್ದೆ ಬೇಕೆನಿಸಬಹುದು. ಆದರೆ ಊಟದ ಪ್ರಾರಂಭದಲ್ಲಿ ಒಂದಿಷ್ಟು ಸಲಾಡ್‌ಗಳನ್ನು ತಿನ್ನುವುದರಿಂದ, ಅತಿಯಾಗಿ ಊಟ ಮಾಡುವುದನ್ನು ತಪ್ಪಿಸಬಹುದು. ಸಲಾಡ್‌ಗಳು ಒಮ್ಮೆ ಹೊಟ್ಟೆ ತುಂಬಿದ ಅನುಭವ ನೀಡಿದರೂ, ನಂತರ ದೀರ್ಘ ಕಾಲದವರೆಗೆ ಹೊಟ್ಟೆ ಭಾರವಾದ ಅನುಭವವನ್ನು ನೀಡುವುದಿಲ್ಲ. ಅದರಿಂದಾಗಿ ಮಧ್ಯಾಹ್ನದ ತೂಕಡಿಕೆಯನ್ನು ತಡೆಯಲು ಸಾಧ್ಯವಾಗುತ್ತದೆ. ಹಾಗಾಗಿ ಮಧ್ಯಾಹ್ನದ ಊಟ ಮಿತವಾಗಿರುವುದು ಅಗತ್ಯ.

Health Tips Kannada sleepy is good

ನಿದ್ದೆ

ರಾತ್ರಿಯ ಹೊತ್ತು ಸರಿಯಾಗಿ ನಿದ್ದೆಯಿಲ್ಲವೇ? ಮಧ್ಯಾಹ್ನ ತೂಕಡಿಕೆ ಬೆನ್ನುಹತ್ತುವುದು ನಿಶ್ಚಿತ. ಹಾಗಾಗಿ ರಾತ್ರಿ ಕಣ್ತುಂಬಾ ನಿದ್ರಿಸಲು ಆದ್ಯತೆ ನೀಡಿ. ಸಾಮಾನ್ಯವಾಗಿ 7 ತಾಸುಗಳ ರಾತ್ರಿಯ ನಿದ್ದೆಯಿಂದ ಹಗಲು ಹೊತ್ತಿನ ಆಯಾಸವನ್ನು ತಪ್ಪಿಸಲು ಸಾಧ್ಯವಿದೆ. ಇಷ್ಟಾಗಿಯೂ ನಿದ್ದೆ ತಡೆಯಲು ಆಗುತ್ತಿಲ್ಲವೆಂದರೆ, ಹತ್ತು ನಿಮಿಷಗಳಿಗೆ ಅಲರಾಂ ಇಟ್ಟು ನಿದ್ರಿಸಿ. ಈ ಕಿರು ನಿದ್ರೆ ಚೈತನ್ಯವನ್ನು ನೀಡಬಲ್ಲದು.

ಇದನ್ನೂ ಓದಿ: Mouth Sleeping: ನಿದ್ದೆಯಲ್ಲಿದ್ದಾಗ ಬಾಯಿಯಿಂದ ಉಸಿರಾಡುತ್ತೀರಾ? ಹಾಗಾದರೆ ಮುಂದೆ ಸಮಸ್ಯೆಯಾಗಬಹುದು!

ಉಪಾಯಗಳು ಬೇರೆಯೂ ಇವೆ

ಊಟದ ನಂತರ ಹತ್ತಿಪ್ಪತ್ತು ನಿಮಿಷಗಳ ಲಘು ನಡಿಗೆ ನೆರವಾಗುತ್ತದೆ. ಕೊಂಚ ತಾಜಾ ಗಾಳಿ, ಬೆಳಕು ಮೈಸೋಕಿದಾಗಲೂ ನಿದ್ದೆಯನ್ನು ದೂರ ಓಡಿಸಬಹುದು. ಹಾಗೆಂದು ಬಿರು ಬಿಸಿಲಿನಲ್ಲಿ ವಾಕಿಂಗ್‌ ಮಾಡಿದರೆ ತೂಕಡಿಕೆ ಹೆಚ್ಚಲೂಬಹುದು, ಜಾಗ್ರತೆ! ಊಟದ ಜೊತೆಗೆ ಆಲ್ಕೊಹಾಲ್‌ ಸೇವನೆ ಬೇಡ. ಇದು ಸಮಸ್ಯೆಯನ್ನು ಬಿಗಡಾಯಿಸುತ್ತದೆ. ಊಟದ ನಂತರದ ನಿದ್ದೆಯನ್ನು ತಡಯುವುದಕ್ಕೆಂದೇ, ಆ ಹೊತ್ತಿನಲ್ಲಿ ಒಂದು ಖಡಕ್‌ ಚಹಾ ಅಥವಾ ಸ್ಟ್ರಾಂಗ್‌ ಕಾಫಿ ಕುಡಿಯುವವರು ಬಹಳ ಜನರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Breakfast Tips: ಬ್ರೇಕ್‌ಫಾಸ್ಟ್‌ ಅನ್ನು ಬಿಡುವುದು ಆರೋಗ್ಯದ ಲಕ್ಷಣವಲ್ಲ. ಅಷ್ಟೇ ಅಲ್ಲ. ಉತ್ತಮ ಆರೋಗ್ಯಕರ ಬೆಳಗಿನ ಉಪಾಹಾರವೂ ಕೂಡಾ ನಮ್ಮ ಆರೋಗ್ಯದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆದರೆ ಕೆಲವು ಅನಾರೋಗ್ಯಕರ ತಿನಿಸುಗಳನ್ನು ಇಂದಿನ ಧಾವಂತದ ಯುಗದಲ್ಲಿ ಬಹುತೇಕರು ಬೆಳಗಿನ ಉಪಹಾರಕ್ಕಾಗಿ ಸೇವಿಸುತ್ತಾರೆ. ಸಂಸ್ಕರಿಸಿದ ಇಂತಹ ಆಹಾರಗಳನ್ನು ಬೆಳಗಿನ ಉಪಾಹಾರಕ್ಕಾಗಿ ಸೇವಿಸಿದರೆ, ನಮ್ಮ ಜೀರ್ಣಾಂಗ ವ್ಯವಸ್ಥೆಗೆ ನಾವೇ ಅಪಚಾರ ಬಗೆದಂತೆ. ಬನ್ನಿ, ಯಾವೆಲ್ಲ ಆಹಾರಗಳನ್ನು ಬೆಳಗ್ಗಿನ ಉಪಹಾರಕ್ಕೆ ತಿನ್ನಲೇಬಾರದು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Breakfast Tip
Koo

ಇಡೀ ದಿನದ ಆಹಾರಕ್ರಮದಲ್ಲಿ ಬಹಳ ಮುಖ್ಯವಾದದ್ದು ಬೆಳಗ್ಗಿನ ಉಪಾಹಾರ (Breakfast Tips). ಇದನ್ನು ಸರಿಯಾಗಿ ಮಾಡದಿದ್ದರೆ ಅದು ಇಡೀ ದಿನದ ಕೆಲಸದ ಮೇಲೆ ಪ್ರಭಾವ ಬೀರುತ್ತದೆ. ಉಪಾಹಾರವನ್ನೇ ಬಿಟ್ಟರೆ ಕೇವಲ ದೇಹವಷ್ಟೇ ಅಲ್ಲ, ಮನಸ್ಸೂ ಕೂಡ ಸರಿ ಇರುವುದಿಲ್ಲ. ಕಿರಿಕಿರಿ, ಏನೋ ಕಳೆದುಕೊಂಡ ಭಾವ ಅಷ್ಟೇ ಅಲ್ಲ, ಶಕ್ತಿಗುಂದುವಿಕೆ, ಇಡೀ ದಿನದ ಕೆಲಸಕ್ಕೆ ಶಕ್ತಿ ಇಲ್ಲದಂತಾಗುವುದು ಇತ್ಯಾದಿ ಪರಿಣಾಮ ಕಂಡುಬರುತ್ತದೆ. ಹೀಗಾಗಿ, ಬ್ರೇಕ್‌ಫಾಸ್ಟ್‌ ಅನ್ನು ಬಿಡುವುದು ಆರೋಗ್ಯದ ಲಕ್ಷಣವಲ್ಲ. ಅಷ್ಟೇ ಅಲ್ಲ. ಉತ್ತಮ ಆರೋಗ್ಯಕರ ಬೆಳಗಿನ ಉಪಾಹಾರವೂ ಕೂಡಾ ನಮ್ಮ ಆರೋಗ್ಯದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆದರೆ ಕೆಲವು ಅನಾರೋಗ್ಯಕರ ತಿನಿಸುಗಳನ್ನು ಇಂದಿನ ಧಾವಂತದ ಯುಗದಲ್ಲಿ ಬಹುತೇಕರು ಬೆಳಗಿನ ಉಪಹಾರಕ್ಕಾಗಿ ಸೇವಿಸುತ್ತಾರೆ. ಸಂಸ್ಕರಿಸಿದ ಇಂತಹ ಆಹಾರಗಳನ್ನು ಬೆಳಗಿನ ಉಪಹಾರಕ್ಕಾಗಿ ಸೇವಿಸಿದರೆ, ನಮ್ಮ ಜೀರ್ಣಾಂಗ ವ್ಯವಸ್ಥೆಗೆ ನಾವೇ ಅಪಚಾರ ಬಗೆದಂತೆ. ಬನ್ನಿ, ಯಾವೆಲ್ಲ ಆಹಾರಗಳನ್ನು ಬೆಳಗ್ಗಿನ ಉಪಹಾರಕ್ಕೆ ತಿನ್ನಲೇಬಾರದು ಎಂಬುದನ್ನು ನೋಡೋಣ.

Yogurt vs Curd

ಫ್ಲೇವರ್ಡ್‌ ಮೊಸರು

ಅಂಗಡಿಗಳಲ್ಲಿ ದೊರೆಯುವ ಬಗೆಬಗೆಯ ಫ್ಲೇವರ್ಡ್‌ ಮೊಸರುಗಳು ತಿನ್ನಲು ಬಲು ರುಚಿ. ಸ್ಟ್ರಾಬೆರಿ, ಬ್ಲೂಬೆರ್ರಿ, ರಸ್‌ಬೆರ್ರಿ, ಮಾವು ಇತ್ಯಾದಿ ಇತ್ಯಾದಿ ಬಗೆಬಗೆಯ ಮೊಸರುಗಳು ಡಬ್ಬಗಳಲ್ಲಿ ಇಂದು ಲಭ್ಯ. ಸುಲಭವಾಗಿ ಅಂಗಡಿಗಳಲ್ಲಿ ದೊರೆಯುವ ಆರೋಗ್ಯಕರ ಆಹಾರ ಎಂದು ಬಹುತೇಕರು ಇದನ್ನು ಆಗಾಗ ಬಳಸುವುದುಂಟು. ಆದರೆ, ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಕ್ಕರೆ, ಕೃತಕ ಪದಾರ್ಥಗಳೂ ಇರುವುದರಿಂದ ಇವು ಖಂಡಿತ ಒಳ್ಳೆಯದು ಮಾಡಲಾರವು. ಇವುಗಳ ಒಳ್ಳೆಯ ಗುಣಗಳಿಗಿಂತ ಅಡ್ಡ ಪರಿಣಾಮಗಳೇ ಹೆಚ್ಚು. ತೂಕ ಹೆಚ್ಚಾಗುವಿಕೆ, ಶೀತ, ಕಫಗಳನ್ನು ಹೆಚ್ಚಿಸುತ್ತವೆ.

Serials

ಸಿರಿಯಲ್‌ಗಳು

ಬೆಳಗ್ಗೆ ಎದ್ದ ಕೂಡಲೇ ಸುಲಭವಾಗಿ ಮಾಡಬಹುದಾದ ಬ್ರೇಕ್‌ಫಾಸ್ಟ್‌ಗಳ ಪೈಕಿ, ಒಂದು. ಬಹುತೇಕರು ತಿನ್ನುವುದು ಇಂದು ಇವನ್ನೇ. ಬೆಳಗ್ಗೆ ಎದ್ದ ಕೂಡಲೇ ಒಂದಿಷ್ಟು ಸಿರಿಯಲ್‌ ಅನ್ನು ಬೌಲ್‌ನಲ್ಲಿ ಹಾಕಿ ಅದಕ್ಕೆ ಸ್ವಲ್ಪ ಹಾಲು ಹಾಕಿ ಸೇವಿಸಿದರೆ ಮುಗೀತು. ಆಫೀಸ್‌ ಹೊರಡುವ ಗಡಿಬಿಡಿಯಲ್ಲಿ ಬಹುತೇಕರು ಹೀಗೆ ಇದನ್ನು ತಿನ್ನುವುದು ಹೆಚ್ಚು. ಆದರೆ, ಕಾರ್ನ್‌ ಫ್ಲೇಕ್ಸ್‌ ಸೇರಿದಂತೆ ಇಂಥ ಸಿರಿಯಲ್‌ಗಳು ಸಂಸ್ಕರಿಸಿದ ಆಹಾರಗಳ ಪೈಕಿ ಒಂದಾಗಿರುವುದರಿಂದ ಹಾಗೂ ಇವುಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಕ್ಕರೆ ಹಾಗೂ ಕೃತಕ ವಸ್ತುಗಳೂ ಸೇರಿಸಲ್ಪಟ್ಟಿರುವುದರಿಂದ ಆರೋಗ್ಯಕ್ಕೆ ಅಂದುಕೊಂಡ ಹಾಗೆ ಒಳ್ಳೆಯದನ್ನು ಮಾಡಲಾರವು. ಅಡ್ಡ ಪರಿಣಾಮಗಳೂ ಇವೆ.

Fruit Juice Side Effects

ಹಣ್ಣಿನ ರಸ

ಹಣ್ಣು ಆರೋಗ್ಯಕ್ಕೆ ಒಳ್ಳೆಯದು ನಿಜ. ಹಾಗೆಯೇ ಹಣ್ಣಿನ ರಸವೂ ಕೂಡಾ. ಆದರೆ, ಹಣ್ಣಿನ ರಸ ಒಳ್ಳೆಯದು ಅಂದುಕೊಂಡು ಬೆಳಗ್ಗೆ ಹಣ್ಣಿನ ರಸ ಕುಡಿದರೆ ಖಂಡಿತ ಒಳ್ಳೆಯದಾಗದು. ಇದರಿಂದ ಇದ್ದಕ್ಕಿದ್ದ ಹಾಗೆ ರಕ್ತದಲ್ಲಿನ ಗ್ಲುಕೋಸ್‌ ಪ್ರಮಾಣ ಏರುತ್ತದೆ. ಒಂದು ಹಣ್ಣು ತಿನ್ನುವುದಕ್ಕೂ ಹಣ್ಣಿನ ರಸ ಕುಡಿಯುವುದಕ್ಕೂ ವ್ಯತ್ಯಾಸವಿದೆ. ಒಂದು ಲೋಟ ಹಣ್ಣಿನ ರಸಕ್ಕೆ ಸಾಕಷ್ಟು ಹಣ್ಣುಗಳು ಬೇಕಾಗುತ್ತವೆ, ಅಷ್ಟೇ ಅಲ್ಲ, ಹಣ್ಣಿನ ನಾರಿನಂಶವನ್ನು ಎಸೆದು ಬಿಡಲಾಗುತ್ತದೆ. ಆದರೆ, ಹಣ್ಣಿನಲ್ಲಿ ಹಾಗಲ್ಲ. ಹಾಗಾಗಿ ಜ್ಯೂಸ್‌ಗಿಂತ ಹಣ್ಣನ್ನು ಹಾಗೆಯೇ ತಿನ್ನುವುದು ಬಹಳ ಒಳ್ಳೆಯದು. ಬೆಳಗ್ಗೆ ಉಪಹಾರಕ್ಕಂತೂ ಹಣ್ಣಿನ ರಸ ಕುಡಿಯುವುದು ಒಳ್ಳೆಯದಲ್ಲ.

Waffle

ವ್ಯಾಫಲ್

ಪ್ಯಾನ್‌ಕೇಕ್‌ಗಳು ಹಾಗೂ ವ್ಯಾಫಲ್‌ಗಳನ್ನು ಬೆಳಗಿನ ಹೊತ್ತು ಉಪಹಾರಕ್ಕೆ ತಿನ್ನುವುದು ಒಳ್ಳೆಯದಲ್ಲ. ಇದರಲ್ಲಿ ಹೆಚ್ಚು ಮೈದಾ ಇರುತ್ತದೆ. ಅಷ್ಟೇ ಅಲ್ಲ, ಇದರಲ್ಲಿ ಯಾವುದೇ ಪೋಷಕಾಂಶಗಳಿರುವುದಿಲ್ಲ. ಉದಾಸೀನತೆಯನ್ನು ಹೆಚ್ಚು ಮಾಡುವ ಯಾವುದೇ ಶಕ್ತಿ ನೀಡದ ಆಹಾರವಿದು.

Cakes, Muffins

ಕೇಕ್‌, ಮಫಿನ್‌ಗಳು

ಬೆಳಗಿನ ಉಪಾಹಾರಕ್ಕೆ ಕೇಕ್‌, ಮಫಿನ್‌ನಂತಹ ಆಹಾರಗಳು ಒಳ್ಳೆಯದಲ್ಲ. ಮೈದಾ, ಸಕ್ಕರೆ, ಎಣ್ಣೆ ಇತ್ಯಾದಿಗಳೇ ಹೆಚ್ಚಿರುವ ಈ ಆಹಾರದಲ್ಲಿ ಒಳ್ಳೆಯ ಅಂಶಗಳು ಕಡಿಮೆ. ಹೆಚ್ಚು ಕ್ಯಾಲರಿಯ, ಹೆಚ್ಚು ಕೊಬ್ಬಿನ ಆಹಾರ. ಸಕ್ಕರೆಯ ಪ್ರಮಾಣವೂ ಹೆಚ್ಚು. ಹಾಗಾಗಿ ಈ ಬೆಳಗಿನ ಉಪಹಾರಕ್ಕೆ ಆರೋಗ್ಯಕರವಲ್ಲ.

ಇದನ್ನೂ ಓದಿ: Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Continue Reading

ಫ್ಯಾಷನ್

Kids Fashion: ಮಕ್ಕಳ ಕ್ಯೂಟ್‌ ಲುಕ್‌ಗೆ ಸಾಥ್‌ ನೀಡುವ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್!

Kids Fashion: : ಚಿಣ್ಣರ ಸೆಲೆಬ್ರೇಷನ್‌ಗೆ ಸಾಥ್‌ ನೀಡುವಂತಹ ನಾನಾ ಬಗೆಯ ಹೆಡ್‌ಬ್ಯಾಂಡ್‌ಗಳು ಕಾಲಿಟ್ಟಿದ್ದು, ಅವುಗಳಲ್ಲಿ ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಟ್ರೆಂಡಿಯಾಗಿವೆ. ಇವುಗಳಲ್ಲಿ ಯಾವ್ಯಾವ ಬಗೆಯವು ದೊರೆಯುತ್ತಿವೆ. ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

Kids Fashion: Bunny Ears Head Bands for Kids' Cute Look!
ಚಿತ್ರಗಳು : ಪಿಕ್ಸೆಲ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಮಕ್ಕಳನ್ನು ಕ್ಯೂಟಾಗಿ ಬಿಂಬಿಸುವ ಪಾರ್ಟಿ ಹಾಗೂ ಸೆಲೆಬ್ರೇಷನ್‌ಗೆ ಸಾಥ್‌ ನೀಡುವಂತಹ ನಾನಾ ಬಗೆಯ ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. “ಹೆಣ್ಣುಮಕ್ಕಳ ಕೂದಲ ಸೌಂದರ್ಯವನ್ನು ಹೆಚ್ಚಿಸುವಂತಹ ಹೇರ್‌ ಆಕ್ಸೆಸರೀಸ್‌ನಲ್ಲಿ, ಇದೀಗ ರ‍್ಯಾಬಿಟ್‌ ಹಾಗೂ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳು (kids fashion) ಬಂದಿದ್ದು, ನಾನಾ ಕಲರ್‌ಗಳಲ್ಲಿ ಬಿಡುಗಡೆಗೊಂಡಿವೆ. ತಲೆಯ ಮೇಲೆ ಧರಿಸಿದಾಗ ಮಕ್ಕಳನ್ನು ಮುದ್ದು ಮುದ್ದಾಗಿ ಬಿಂಬಿಸುತ್ತವೆ. ಅಲ್ಲದೇ, ಸೆಲೆಬ್ರೇಷನ್‌ಗೆ ಸಾಥ್‌ ನೀಡುತ್ತವೆ” ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್ ರಿಂಕು. ಅವರ ಪ್ರಕಾರ, ಬನ್ನಿ ಹಾಗೂ ರ‍್ಯಾಬಿಟ್‌ ಇಯರ್ಸ್ ಹೆಡ್‌ ಬ್ಯಾಂಡ್‌ಗಳು ಲೆಕ್ಕವಿಲ್ಲದಷ್ಟು ವಿನ್ಯಾಸದಲ್ಲಿ ಬಂದಿರುವುದು ಬೇಡಿಕೆ ಹೆಚ್ಚಾಗಲು ಕಾರಣ ಎನ್ನುತ್ತಾರೆ.

kids fashion

ಏನಿದು ರ‍್ಯಾಬಿಟ್‌ & ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್

ಮೊಲದ ಉದ್ದನಾದ ಕಿವಿಗಳನ್ನು ಹೋಲುವ ವಿನ್ಯಾಸದ ಹೆಡ್‌ ಬ್ಯಾಂಡ್‌ಗಳನ್ನು ಹೀಗೆ ಕರೆಯಲಾಗುತ್ತದೆ. ಕೆಲವು ಫರ್‌ನಂತಹ ಮೆಟಿರಿಯಲ್‌ನಲ್ಲಿ ದೊರೆಯುತ್ತವೆ. ಇನ್ನು ಕೆಲವು ಮಕ್ಕಳ ಬರ್ತ್ ಡೇ ಪಾರ್ಟಿಗೆ ಹೊಂದುವಂತಹ ಮಿರಮಿರ ಮಿನುಗುವ ಡಿಸೈನ್‌ನಲ್ಲಿ ಸಿಗುತ್ತವೆ. ಇನ್ನು, ಕೆಲವು ರಬ್ಬರ್‌ಬ್ಯಾಂಡ್‌ನಂತಹ ವಿನ್ಯಾಸದಲ್ಲೂ ಲಭ್ಯ. ಬ್ಲಾಸಂ ಫ್ಲವರ್ಸ್, ಸ್ಯಾಟಿನ್‌ ಫ್ಯಾಬ್ರಿಕ್‌ನ ಪೋಲ್ಕಾ ಡಾಟ್ಸ್, ಇಯರ್‌ ಮಫ್‌ ಶೈಲಿಯವು, ಎಲ್‌ಇಡಿ ಅಥವಾ ಬ್ಯಾಟರಿ ಶೆಲ್‌ನಿಂದ ಮಿರಮಿರ ಮಿನುಗುವ ಲೈಟ್ಸ್‌ನ ಹೆಡ್‌ ಬ್ಯಾಂಡ್ಸ್, ಕ್ಯಾಂಡಿ ಕಲರ್ಸ್ ಬನ್ನಿ ಹೆಡ್‌ ಬ್ಯಾಂಡ್ಸ್, ನಾಟ್‌ ಬನ್ನಿ ಹೆಡ್‌ ಬ್ಯಾಂಡ್ಸ್, ಮಲ್ಟಿ ಕಲರ್‌ನ ಬನ್ನಿ ಬ್ಯಾಂಡ್ಸ್, ಹಾಲೋಗ್ರಾಫ್‌ನ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್‌ ಚಾಲ್ತಿಯಲ್ಲಿವೆ.

ಆನ್‌ಲೈನ್‌ನಲ್ಲಿ ಬನ್ನಿಇಯರ್ಸ್ ಹೆಡ್‌ ಬ್ಯಾಂಡ್ಸ್

ಇನ್ನು, ಆನ್‌ಲೈನ್‌ನಲ್ಲಿ ರ‍್ಯಾಬಿಟ್‌ ಅಥವಾ ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್‌ಗಳ ವಿನ್ಯಾಸಗಳಿಗೆ ಬರವಿಲ್ಲ. ಮ್ಯಾಚಿಂಗ್‌ ಹೆಡ್‌ ಬ್ಯಾಂಡ್‌ನಿಂದಿಡಿದು ಚಿಣ್ಣರ ಪಾರ್ಟಿ ಹೆಡ್‌ ಬ್ಯಾಂಡ್‌ಗಳು ಲಭ್ಯ. ಆ ಮಟ್ಟಿಗೆ ಸಾಕಷ್ಟು ಆಪ್ಷನ್‌ಗಳಿವೆ ಎನ್ನುತ್ತಾರೆ ಮಾರಾಟಗಾರರು.

kids fashion

ಬನ್ನಿ ಇಯರ್ಸ್ ಹೆಡ್‌ ಬ್ಯಾಂಡ್ಸ್ ಆಯ್ಕೆಗೆ 5 ಸಿಂಪಲ್‌ ಟಿಪ್ಸ್

  • ಪಾರ್ಟಿಗಾದಲ್ಲಿ ಆದಷ್ಟೂ ಮಿನುಗುವ ಹೆಡ್‌ ಬ್ಯಾಂಡ್ಸ್ ಆಯ್ಕೆ ಮಾಡಿ.
  • ಚಿಕ್ಕ ಮಕ್ಕಳಿಗಾದಲ್ಲಿ ಸಾಫ್ಟ್ ಫ್ಯಾಬ್ರಿಕ್‌ ಅಥವಾ ಫರ್‌ನಂತವನ್ನು ಸೆಲೆಕ್ಟ್ ಮಾಡಿ.
  • ಪುಟ್ಟ ಕಂದಮ್ಮಗಳಿಗೆ ಎಲ್‌ಇಡಿ ಲೈಟ್‌ನಂತವು ಬೇಡ. ಅದೇನಿದ್ದರೂ ಫೋಟೋಶೂಟ್‌ಗೆ ಮಾತ್ರವಿರಲಿ.
  • ಸೆಟ್‌ ಹೆಡ್‌ ಬ್ಯಾಂಡ್‌ಗಳು ದೊರೆಯುತ್ತವೆ.
  • ಕೂದಲಿಗೆ ಸಿಕ್ಕಿ ಹಾಕಿಕೊಳ್ಳದಂತಹ, ಒತ್ತದಂತಹ ಹೆಡ್‌ ಬ್ಯಾಂಡ್‌ ಆಯ್ಕೆ ನಿಮ್ಮದಾಗಿರಲಿ.

( ಲೇಖಕಿ ಫ್ಯಾಷನ್‌ ಪತ್ರಕರ್ತೆ )

ಇದನ್ನೂ ಓದಿ: Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Continue Reading

ಆರೋಗ್ಯ

Sabja Seeds Benefits: ಸಬ್ಜಾ ಬೀಜವನ್ನು ನೆನೆಹಾಕಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆ ದೂರ

Sabja Seeds Benefits: ಸಬ್ಜಾ, ಚಿಯಾ, ಕುಂಬಳಕಾಯಿ ಬೀಜಗಳಂತಹ ಇತ್ತೀಚೆಗೆ ಹೆಚ್ಚು ಚಾಲ್ತಿಗೆ ಬಂದ ಬೀಜಗಳ ಸೇವನೆ ಮಾಡಿರಬಹುದು. ಇವೆಲ್ಲವೂ ನೈಸರ್ಗಿಕವಾಗಿ ಲಭ್ಯವಿರುವ ಪೋಷಕಾಂಶಗಳ ಪವರ್‌ಹೌಸ್‌ಗಳು. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಕೆಲವು ನಿಮಿಷಗಳ ಕಾಲ ನೆನೆಸಿಟ್ಟು ನಂತರ ತಿನ್ನುವುದರಿಂದ ಸಾಕಷ್ಟು ಆರೋಗ್ಯದ ಲಾಭಗಳಿವೆ. ಕಡಿಮೆ ಕ್ಯಾಲರಿಯಿರುವ ಇವುಗಳನ್ನು ತೂಕ ಇಳಿಸುವ ಪಯಣದಲ್ಲಿರುವ ಪ್ರತಿಯೊಬ್ಬರೂ ಈ ಸಬ್ಜಾ ಹಾಗೂ ಚಿಯಾ ಬೀಜಗಳನ್ನು ಬಳಕೆ ಮಾಡುತ್ತಿರಬಹುದು. ಆದರೆ, ಇವನ್ನು ನೆನೆ ಹಾಕಿಯೇ ಬಳಸಬೇಕು ಯಾಕೆ ಎಂಬ ಒಂದು ಪ್ರಶ್ನೆ ನಿಮ್ಮನ್ನು ಕಾಡಿರಬಹುದು. ಇದಕ್ಕೆ ಇಲ್ಲಿದೆ ಉತ್ತರ.

VISTARANEWS.COM


on

Sabja Seeds Benefits
Koo

ನಿಮಗೆ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ, ಖಂಡಿತಾ ಸಬ್ಜಾ, ಚಿಯಾ, ಕುಂಬಳಕಾಯಿ ಬೀಜಗಳಂತಹ ಇತ್ತೀಚೆಗೆ ಹೆಚ್ಚು ಚಾಲ್ತಿಗೆ ಬಂದ ಬೀಜಗಳ ಸೇವನೆ ಮಾಡಿರಬಹುದು. ಇವೆಲ್ಲವೂ ನೈಸರ್ಗಿಕವಾಗಿ ಲಭ್ಯವಿರುವ ಪೋಷಕಾಂಶಗಳ ಪವರ್‌ಹೌಸ್‌ಗಳು. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿದ್ದು, ಕೆಲವು ನಿಮಿಷಗಳ ಕಾಲ ನೆನೆಸಿಟ್ಟು ನಂತರ ತಿನ್ನುವುದರಿಂದ ಸಾಕಷ್ಟು ಆರೋಗ್ಯದ ಲಾಭಗಳಿವೆ. ಕಡಿಮೆ ಕ್ಯಾಲರಿಯಿರುವ ಇವುಗಳನ್ನು ತೂಕ ಇಳಿಸುವ ಪಯಣದಲ್ಲಿರುವ ಪ್ರತಿಯೊಬ್ಬರೂ ಈ ಸಬ್ಜಾ ಹಾಗೂ ಚಿಯಾ ಬೀಜಗಳನ್ನು ಬಳಕೆ ಮಾಡುತ್ತಿರಬಹುದು. ಆದರೆ, ಇವನ್ನು ನೆನೆ ಹಾಕಿಯೇ ಬಳಸಬೇಕು ಯಾಕೆ ಎಂಬ ಒಂದು ಪ್ರಶ್ನೆ ನಿಮ್ಮನ್ನು ಕಾಡಿರಬಹುದು. ಅಂತಹ ಗೊಂದಲವಿದ್ದರೆ (Sabja Seeds Benefits) ಅದಕ್ಕೆ ಉತ್ತರ ಇಲ್ಲಿದೆ. ಸಬ್ಜಾ ಬೀಜಗಳನ್ನು ಹಾಗೆಯೇ ಹಸಿಯಾಗಿ ನೆನೆಸದೆ ಯಾಕೆ ತಿನ್ನಬಾರದು ಎಂಬುದಕ್ಕೆ ಮೊದಲು ಸಬ್ಜಾ ಹಾಗೂ ಚಿಯಾ ಬೀಜಗಳ ನಡುವಿನ ವ್ಯತ್ಯಾಸ ತಿಳಿದುಕೊಳ್ಳೋಣ.ಬಹಳಷ್ಟು ಮಂದಿ ಚಿಯಾ ಬೀಜಗಳು ಹಾಗೂ ಸಬ್ಜಾ ಬೀಜಗಳ ನಡುವೆ ಗೊಂದಲಕ್ಕೆ ಬೀಳುವುದುಂಟು. ಎರಡನ್ನೂ ಒಂದೇ ಎಂದು ತಿಳಿದುಕೊಳ್ಳುವುದುಂಟು. ಆದರೆ, ಇವೆರಡೂ ಬೇರೆ ಬೇರೆ. ಇವೆರಡನ್ನೂ ಸರಿಯಾಗಿ ಗಮನಿಸಿ ನೋಡಿದರೆ ಬೇರೆ ಬೇರೆ ಎಂದು ತಿಳಿಯುತ್ತದೆ. ಸಬ್ಜಾ ಬೀಜ ಕಡು ಕಪ್ಪಗಿದ್ದರೆ, ಚಿಯಾ ಬೀಜ ಕಪ್ಪು, ಬೂದು, ಬಿಳಿ ಹಾಗೂ ಕಂದು ಬಣ್ಣಗಳಿಂದ ಮಿಶ್ರಿತವಾಗಿರುತ್ತದೆ. ಸಬ್ಜಾಕ್ಕೆ ಅದರದ್ದೇ ಆದ ರುಚಿಯಿದ್ದರೆ, ಚಿಯಾ ಬೀಜಕ್ಕೆ ಹೇಳಿಕೊಳ್ಳುವ ರುಚಿಯೇನೂ ಇಲ್ಲ. ಆದರೆ, ಇವೆರಡೂ ಬೀಜಗಳನ್ನು ಸಲಾಡ್‌ ಹಾಗೂ ಇತರ ಆಹಾರಗಳ ಜೊತೆ ಸೇರಿಸಿ ತಿನ್ನುವುದರಿಂದ ನಮ್ಮ ದೇಹಕ್ಕೆ ಸೇರ್ಪಡೆಯಾಗುವ ಪೋಷಕಾಂಶಗಳ ಪ್ರಮಾಣ ಹೆಚ್ಚು.

Sabja Seeds

ಸಬ್ಜಾ ಬೀಜಗಳನ್ನು ಯಾಕೆ ನೀರಿನಲ್ಲಿ ನೆನೆಸದೆ ತಿನ್ನಬೇಕು ಗೊತ್ತೇ? ಸಬ್ಜಾ ಬೀಜಗಳು ತೀರಾ ಚಿಕ್ಕದಾದ ಕಪ್ಪಗಿನ ಬೀಜಗಳಾಗಿದ್ದು, ನೀರಿನಲ್ಲಿ ಅಥವಾ ಯಾವುದೇ ದ್ರವದಲ್ಲಿ ಹಾಕಿದ ಕೂಡಲೇ ಊದಿಕೊಳ್ಳುತ್ತವೆ. ಆದರೆ ಊದಿಕೊಳ್ಳುವ ಮೊದಲೇ ಹಾಗೆಯೇ ಹಸಿಯಾಗಿಯೇ ತಿಂದರೆ ಇದು ದೇಹ ಪ್ರವೇಶಿಸಿದ ಮೇಲೆ ಎಲ್ಲಿ ಬೇಕಾದರೂ ಹೀಗೆ ಊದಿಕೊಂಡು ಕೆಲವೊಮ್ಮೆ ಸಿಕ್ಕಿಹಾಕಿಕೊಂಡ ಅನುಭವ ಕೊಡಬಹುದು.ಹೀಗಾಗಿ ಇದನ್ನು ಯಾವಾಗಲೂ ನೀರಿನಲ್ಲಿ ನೆನೆ ಹಾಕಿಯೇ ತಿನ್ನಬೇಕು. ಒಂದು ಚಮಚ ಸಬ್ಜಾ ಬೀಜಗಳನ್ನು ನೀರಿನಲ್ಲಿ ನೆನೆಸಿ ಊಟದ ನಂತರ ಸೇವಿಸುವುದು ಒಳ್ಳೆಯದು. ಸಬ್ಜಾ ಬೀಜಗಳಿಂದ ಹಲವಾರು ಆರೋಗ್ಯಕರ ಲಾಭಗಳಿವೆ. ಅದಕ್ಕಾಗಿಯೇ ಇತ್ತೀಚೆಗಿನ ದಿನಗಳಲ್ಲಿ ಹಲವರು ಇದನ್ನು ತಮ್ಮ ನಿತ್ಯ ಆಹಾರದಲ್ಲಿ ಇದನ್ನು ಸೇರಿಸಿಕೊಂಡಿದ್ದಾರೆ.

Soaking sabja seeds
  • ನಿಮ್ಮ ದೇಹ ಉಷ್ಣ ಪ್ರಕೃತಿಯದಾಗಿದ್ದರೆ, ಸಬ್ಜಾ ಬೀಜ ಬಹಳ ಒಳ್ಳೆಯದು. ಇದು ದೇಹವನ್ನು ತಂಪು ಮಾಡುವ ಗುಣವನ್ನು ಹೊಂದಿದೆ.
  • ಮದುಮೇಹಿಗಳಿಗೆ ಸಬ್ಜಾ ಬೀಜ ಒಳ್ಳೆಯದು. ದೇಹದ ಸಕ್ಕರೆಯ ಮಟ್ಟವನ್ನು ಇದು ಸಮತೋಲನದಲ್ಲಿ ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ.
  • ಮಲಬದ್ಧತೆಯ ಸಮಸ್ಯೆ ಇರುವ ಮಂದಿಗೂ ಸಬ್ಜಾ ಬೀಜಗಳು ಅತ್ಯುತ್ತಮ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಬೆಳಗ್ಗೆ ಸರಿಯಾಗಿ ಸುಲಭವಾಗಿ ಮಲವಿಸರ್ಜನೆಯಾಗುತ್ತದೆ.
  • ತೂಕ ಇಳಿಸುವ ಮಂದಿಗೂ ಸಬ್ಜಾ ಬೀಜ ಅತ್ಯುತ್ತಮ. ಎರಡು ಚಮಚ ಸಬ್ಜಾ ಬೀಜವನ್ನು ಒಂದು ಲೋಟ ನೀರಿನಲ್ಲಿ ಮೊದಲೇ ನೆನೆಸಿಟ್ಟು ಸೇವಿಸಿದರೆ, ಇದು ಜೀರ್ಣಕಾರಿ ಕಿಣ್ವಗಳನ್ನು ಬಿಡುಗಡೆ ಮಾಡುವ ಮೂಲಕ ಜೀರ್ಣಕ್ರಿಯೆ ಸರಾಗವಾಗಿ ಆಗಿ ತೂಕ ಇಳಿಕೆಗೆ ಸಹಾಯವಾಗುತ್ತದೆ. ಸಬ್ಜಾ ಬೀಜಕ್ಕೆ ತನ್ನದೇ ಆದ ರುಚಿ ಇಲ್ಲದೇ ಇರುವುದರಿಂದ ಅನೇಕ ತಿನಿಸುಗಳಿಗೆ ಹಾಗೂ ಪೇಯಗಳಿಗೆ ಬಳಸುವ ಮೂಲಕ ನಿತಯವೂ ನಿಮ್ಮ ಹೊಟ್ಟೆ ಸೇರುವಂತೆ ಮಾಡಬಹುದು. ಮಿಲ್ಕ್‌ ಶೇಕ್‌ಗಳಲಲಿ, ಸ್ಮೂದಿಗಳಲ್ಲಿ, ಲೆಮನೇಡ್‌ಗಳಲ್ಲಿ, ಸಲಾಡ್‌ ಹಾಗೂ ಡೆಸರ್ಟ್‌ಗಳಲ್ಲೂ ಇದನ್ನು ಬಳಸಬಹುದು.

ಇದನ್ನೂ ಓದಿ: Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

Continue Reading

ಕರ್ನಾಟಕ

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

Shawarma: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

VISTARANEWS.COM


on

Shawarma
Koo

ಬೆಂಗಳೂರು: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ (Shawarma) ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ.

ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದ್ದೇನು?

ಮಾಧ್ಯಮಗಳಲ್ಲಿ ಶವರ್ಮಾ ಸೇವಿಸಿ ಫುಡ್‌ ಪಾಯ್ಸನ್‌ ಆಗಿರುವ ಕುರಿತು ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೋರೇಷನ್‌ ವ್ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶವರ್ಮಾದ ಆಹಾರ ಮಾದರಿಗಳನ್ನ್ ವಿಶ್ಲೇಷಣೆಗೊಳಪಡಿಸಲಾಗಿದೆ. ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತವಾಗಿದ್ದರೆ 8 ಮಾದರಿಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ ಕಂಡು ಬಂದಿರುವುದರಿಂದ ಅಸುರಕ್ಷಿತ ಎಂದು ನಿರ್ಧರಿಸಲಾಗಿದೆ. ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ. ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ್ಮ ಉದ್ದಿಮೆಗೆ ಎಫ್‌ಎಸ್‌ಎಸ್‌ಎಐ ನೋಂದಣಿ / ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ್ಮ ವ್ಯಾಪಾರದ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ.

ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ. ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Chemicals in Food: ಗೋಬಿ- ಕಬಾಬ್‌ ಆಯ್ತು‌, ಈಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಿ ವಿಷ ಪತ್ತೆ; ಸದ್ಯದಲ್ಲೇ ಬ್ಯಾನ್?

Continue Reading
Advertisement
Rain Tragedy
ಪ್ರಮುಖ ಸುದ್ದಿ49 mins ago

Rain Tragedy: ಪ್ರವಾಸಿಗರ ಕಣ್ಣಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 7 ಮಂದಿ; ಇಲ್ಲಿದೆ ವಿಡಿಯೊ

T20 World Cup 2024
ಪ್ರಮುಖ ಸುದ್ದಿ1 hour ago

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

Rohit Sharma
ಪ್ರಮುಖ ಸುದ್ದಿ2 hours ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

VSK Media Awards 2024
ಬೆಂಗಳೂರು3 hours ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ3 hours ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌3 hours ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ3 hours ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್4 hours ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ4 hours ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ4 hours ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು11 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌