Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್ - Vistara News

ಬೆಂಗಳೂರು

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bengaluru News: ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮನ್ನೋತ್ ಅಭಿಪ್ರಾಯಪಟ್ಟರು.

VISTARANEWS.COM


on

actor producer and Cow lover Mahendra Munnoth donated 51 lakh rupees to cow shelter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮುನ್ನೋತ್ ತಿಳಿಸಿದರು.

ನಗರದ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಗೋಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಕೇವಲ ಗ್ರಾಮ ಮಾತ್ರವಲ್ಲ ಇಡೀ ದೇಶ ಸಮೃದ್ಧಿ, ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ, ಗೋಸೇವಕ ಮಹೇಂದ್ರ ಮುನ್ನೋತ್, ಗೋಶಾಲೆಗಳ ಉಳಿವಿಗಾಗಿ ಮತ್ತು ಗೋವುಗಳ ಸಂರಕ್ಷಣೆಗಾಗಿ ದೇಣಿಗೆ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ವ್ಯಯಿಸುತ್ತಿರುವ ಮಹೇಂದ್ರ ಮನ್ನೋತ್‌ ಅವರ ಕುಟುಂಬ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್‌ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.

ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರಿಗೆ ಚೆಕ್‌ ರೂಪದಲ್ಲಿ ಹಣವನ್ನು ನೀಡಲಾಯಿತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

ಈ ವೇಳೆ ಮಹೇಂದ್ರ ಮುನ್ನೋತ್‌ ಅವರ ಪತ್ನಿ ಸುರಕ್ಷಾ ಹಾಗೂ ಕುಟುಂಬದ ಸದಸ್ಯರು, ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಮಾಡಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Murder Case: ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

VISTARANEWS.COM


on

hassan murder case
Koo

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ರೌಡಿಯಾಗಲು ಹವಾ ಸೃಷ್ಟಿಸಿದ್ದವನನ್ನು ಇರಿದು ಕೊಂದರು!

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder caseನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Continue Reading

ಬೆಂಗಳೂರು

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Murder case : ರೌಡಿ ಆಗಬೇಕೆಂದು ಸಿಕ್ಕ ಸಿಕ್ಕವರಿಗೆ ಹೊಡೆದು ಬಡೆದು ಮಾಡುತ್ತಿದ್ದವನನ್ನು ಅದೇ ಏರಿಯಾದ ಹುಡುಗರು ಅಟ್ಟಾಡಿಸಿಕೊಂದು ಹೋಗಿ ಕೊಂದು ಹಾಕಿದ್ದರು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

murder case
ಬರ್ಬರವಾಗಿ ಕೊಲೆಯಾದ ಅಪ್ಪು
Koo

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder case) ನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

ಕೋಲ್ಕತ್ತಾ: ಅನೈತಿಕ ಸಂಬಂಧದಲ್ಲಿ (Illicit relationship) ತೊಡಗಿದ್ದರು ಎನ್ನಲಾದ ಜೋಡಿಯೊಂದರ ಮೇಲೆ ತೃಣಮೂಲ ಕಾಂಗ್ರೆಸ್ (‌Trinamoola Congress) ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ (Assault Case) ನಡೆಸಿದ್ದರು. ಇದರ ವಿಡಿಯೋ ವೈರಲ್ (viral viedo) ಆದ ನಂತರ ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ. “ಮುಸ್ಲಿಂ ರಾಷ್ಟ್ರ ನೀತಿ ಸಂಹಿತೆ ಪ್ರಕಾರ ನಡೆದುಕೊಳ್ಳಲಾಗಿದೆ…” ಎಂದು ತೃಣಮೂಲ ಕಾಂಗ್ರೆಸ್‌ ಶಾಸಕನೊಬ್ಬ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾನೆ.

ಬಿದಿರಿನ ದೊಣ್ಣೆಗಳಿಂದ ಇಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವ್ಯಕ್ತಿಯನ್ನು ತಜ್ಮುಲ್ ಅಲಿಯಾಸ್ “ಜೆಸಿಬಿ” ಎಂದು ಗುರುತಿಸಲಾಗಿದೆ. ಈತ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಹೇಳಲಾಗಿದೆ. ಸ್ಥಳೀಯ ಪಂಚಾಯ್ತಿಯ ತೀರ್ಪಿನ ನಂತರ ಈ ಘಟನೆ ನಡೆದಿದೆ. ಘಟನೆಯ ಕುರಿತು ಪಶ್ಚಿಮ ಬಂಗಾಳ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡು ತಜ್ಮುಲ್‌ನನ್ನು ಬಂಧಿಸಿದ್ದಾರೆ.

ಚೋಪ್ರಾ ಶಾಸಕ ಹಮೀದುಲ್ ರಹಮಾನ್, ಟಿಎಂಸಿಗೆ ತಜ್ಮುಲ್ ಜೊತೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ʼಮಹಿಳೆಯ ಚಟುವಟಿಕೆಗಳು ಅನೈತಿಕವಾಗಿದ್ದವು. ಇದು ಹಳ್ಳಿಯ ವಿಷಯವಾಗಿದ್ದು, ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಘಟನೆಯನ್ನು ಖಂಡಿಸುತ್ತೇವೆ. ಆದರೆ ಮಹಿಳೆಯೂ ತಪ್ಪು ಮಾಡಿದ್ದಾಳೆ. ಅವಳು ತನ್ನ ಗಂಡ, ಮಗ ಮತ್ತು ಮಗಳನ್ನು ತೊರೆದಿದ್ದಾಳೆ. ಮುಸ್ಲಿಂ ರಾಷ್ಟ್ರದ ಪ್ರಕಾರ ಕೆಲವು ನೀತಿ ಸಂಹಿತೆ ಮತ್ತು ನ್ಯಾಯವಿದೆ. ಈಗ ಈ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತೃಣಮೂಲ ಶಾಸಕ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಈ ಘಟನೆಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಟಿಎಂಸಿ ಹೇಳಿದೆ.

ಕೇಂದ್ರ ಸಚಿವ ಮತ್ತು ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಟಿಎಂಸಿಯ ಶಾಸಕನ “ಮುಸ್ಲಿಂ ರಾಷ್ಟ್ರ” ಉಲ್ಲೇಖದ ಬಗ್ಗೆ ಆತಂಕಪಟ್ಟಿದ್ದಾರೆ. “ಮುಸ್ಲಿಂ ರಾಷ್ಟ್ರ ಕೆಲವು ನಿಯಮಗಳ ಅಡಿಯಲ್ಲಿ ಶಿಕ್ಷೆಗಳನ್ನು ಚರ್ಚಿಸುವ ಹೇಳಿಕೆಗಳು ಕಳವಳ ಮೂಡಿಸುತ್ತವೆ. ಟಿಎಂಸಿ ಪಶ್ಚಿಮ ಬಂಗಾಳವನ್ನು ಷರಿಯಾ ಕಾನೂನನ್ನು ಅನ್ವಯಿಸುವ ರಾಜ್ಯವೆಂದು ಘೋಷಿಸುತ್ತಿದೆಯೇ?” ಎಂದು ಸುಕಾಂತ ಮಜುಂದಾರ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಗಾಳ ಪೊಲೀಸರು ಹೇಳಿದ್ದೇನು?

ಇಸ್ಲಾಂಪುರ ಪೊಲೀಸ್ ಹೇಳಿಕೆಯಲ್ಲಿ, “ಇಸ್ಲಾಂಪುರ ಪಿಡಿ ಅಡಿಯಲ್ಲಿ ಚೋಪ್ರಾ ಪಿಎಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಒಬ್ಬ ವ್ಯಕ್ತಿಯನ್ನು ಪೊಲೀಸರು ತಕ್ಷಣ ಗುರುತಿಸಿ ಬಂಧಿಸಿದ್ದಾರೆ. ಸಂತ್ರಸ್ತ ಜೋಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ” ಎಂದು ತಿಳಿಸಿದೆ. ಇಸ್ಲಾಂಪುರ ಪೊಲೀಸ್ ಅಧೀಕ್ಷಕ ಜೋಬಿ ಥಾಮಸ್ ಕೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕ್ಲಿಪ್ ಅನ್ನು ವೀಕ್ಷಿಸಿದ್ದಾರೆ ಮತ್ತು ಅದನ್ನು ಪರಿಶೀಲಿಸಿದ ನಂತರ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ಭಾರೀ ಸಂಖ್ಯೆಯ ಜನರು ನೋಡುತ್ತಿದ್ದಂತೆಯೇ ನೋವಿನಿಂದ ಅಳುತ್ತಿದ್ದ ಮಹಿಳೆಗೆ ಆರೋಪಿಗಳು ಥಳಿಸಿದ ದೃಶ್ಯ ವೈರಲ್ ಆಗಿದೆ. ಹಲ್ಲೆ ಮಾಡಿದಾತ ಆಕೆಯ ತಲೆಕೂದಲು ಎಳೆದು ಒದೆಯುವುದು ಕಂಡುಬಂದಿತು. ಆರೋಪಿಗಳು ವ್ಯಕ್ತಿಯೊಬ್ಬನಿಗೆ ದೊಣ್ಣೆಗಳಿಂದ ಥಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dengue Fever: ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading

ಕ್ರೈಂ

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Kidnap Case: ಹುಡುಗಿಯನ್ನು ಹುಡುಗ ಬೈಕ್‌ನಲ್ಲಿ ಕರೆದೊಯ್ದಿರುವ ಶಂಕೆ ಇದೆ. ಮೊಬೈಲ್ ಟ್ರೇಸ್ ಮಾಡಿ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಪತ್ತೆಯಾಗಿದೆ.

VISTARANEWS.COM


on

kidanp case
Koo

ಬೆಂಗಳೂರು: ಪ್ರೀತಿಸುವ ನಾಟಕವಾಡಿ ಬಾಲಕಿಯನ್ನು (Minor girl) ಕಿಡ್ನಾಪ್ (Kidnap Case) ಮಾಡಲಾಗಿದೆ ಎಂದು ಆರೋಪಿಸಿ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಹುಡುಗಿಯ ಪೋಷಕರು ದೂರು ನೀಡಿದ್ದಾರೆ. ಹುಡುಗಿ ಮುಸ್ಲಿಮಳಾಗಿದ್ದು, ಆಕೆಯ ಜೊತೆಗೆ ತೆರಳಿರುವ ಹುಡುಗ ಹಿಂದೂ ಧರ್ಮದವನಾಗಿದ್ದಾನೆ.

ರಜಿಯಾ ಹಾಗು ಅಬ್ದುಲ್ ರಹಿಂ ಎಂಬುವವರ ಹದಿನಾರು ವರ್ಷದ ಪುತ್ರಿಯನ್ನು ಶಂಕರ್‌ ಎಂಬಾತ ಕಿಡ್ನಾಪ್ ಮಾಡಿದ್ದಾನೆ ಎಂದು ದೂರು ಸಲ್ಲಿಸಲಾಗಿದೆ. ಕಳೆದ ಹದಿನಾಲ್ಕು ದಿನಗಳಿಂದ ಬಾಲಕಿ ಸಿಗದೆ ಪೋಷಕರು ಕಂಗಾಲಾಗಿದ್ದಾರೆ. ಪೋಷಕರು ಈಕೆಯನ್ನು ಕಾಲೇಜಿಗೆ ಬಿಟ್ಟು ಬಂದಿದ್ದರು. ನಂತರ ಕಾಲೇಜಿನಿಂದ ವಾಪಸ್ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಂದ ಹುಡುಕಾಟ ನಡೆದಿದೆ.

ಮೊಬೈಲ್ ಕೂಡ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಹುಡುಗಿಯನ್ನು ಹುಡುಗ ಬೈಕ್‌ನಲ್ಲಿ ಕರೆದೊಯ್ದಿರುವ ಶಂಕೆ ಇದೆ. ಮೊಬೈಲ್ ಟ್ರೇಸ್ ಮಾಡಿ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರದಲ್ಲಿ ಶಂಕರ್ ಬೈಕ್ ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆಂಧ್ರದ ಕರ್ನೂಲ್ ಬಸ್ಸು ಹತ್ತಿ ತೆರಳಿರುವುದು ಪತ್ತೆಯಾಗಿದೆ. ಹೀಗಾಗಿ ಆಂದ್ರಪ್ರದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿರಬಹುದು ಎಂದು ತರ್ಕಿಸಲಾಗಿದೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದವನ ಬಂಧನ

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಕರೆದೊಯ್ದ 17 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ (Physical Abuse ) ಎಸಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಒಬ್ಬಳೇ ಆಟವಾಡುತ್ತಿದ್ದನ್ನು ಗಮನಿಸಿದ 17ರ ಪೋರ ತಿಂಡಿ ಕೊಡಿಸುವುದಾಗಿ ಪುಸಲಾಯಿಸಿದ್ದಾನೆ. ತಿಂಡಿ ಆಸೆಗೆ ಆತನೊಂದಿಗೆ ಬಾಲಕಿ ಹೋಗಿದ್ದಾಳೆ. ಆದರೆ ಅಂಗಡಿ ಕರೆದುಕೊಂಡು ಹೋಗದೇ ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಬಳಿಕ ಈ ವಿಚಾರವನ್ನು ಯಾರಿಗೂ ಹೇಳದಂತೆ ವಾಪಸ್‌ ಬಾಲಕಿಯನ್ನು ಕಳಿಸಿದ್ದಾನೆ.

ಆದರೆ ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಗಮನಿಸಿದ ಪೋಷಕರು ವಿಚಾರಿಸಿದ್ದಾರೆ. ಆಗ ಈ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬಾಲಕಿ ಪೋಷಕರು ದೂರು ನೀಡಿದ್ದು, ಅತ್ಯಾಚಾರವೆಸಗಿದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್19 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ20 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ24 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ34 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ38 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ47 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್47 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ50 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌