Women Arrest: ಅತ್ಯಾಚಾರಿಗೆ ಬೈದಿದ್ದಕ್ಕೆ ಜೈಲುಪಾಲಾದ ಮಹಿಳೆ! ಇದೆಂಥಾ ನ್ಯಾಯ? - Vistara News

Latest

Women Arrest: ಅತ್ಯಾಚಾರಿಗೆ ಬೈದಿದ್ದಕ್ಕೆ ಜೈಲುಪಾಲಾದ ಮಹಿಳೆ! ಇದೆಂಥಾ ನ್ಯಾಯ?

Women Arrest: ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 10 ಮಂದಿ ಯುವಕರು ಸೇರಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10ಮಂದಿಯಲ್ಲಿ ಒಬ್ಬನಿಗೆ ಶಿಕ್ಷೆ ವಿಧಿಸಿ ಉಳಿದವರನ್ನು ಮುಕ್ತಗೊಳಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅದರಲ್ಲಿ ಒಬ್ಬನ ಹೆಸರು ಮತ್ತು ಮೊಬೈಲ್ ಸಂಖ್ಯೆ ಸೋರಿಕೆಯಾಗಿತ್ತು. ಆಗ ಈ ಘಟನೆಯಿಂದ ಕುಪಿತಳಾದ 20 ವರ್ಷದ ಜರ್ಮನ್ ಮಹಿಳೆಯೊಬ್ಬರು ಆ ವ್ಯಕ್ತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಲು ಶುರು ಮಾಡಿದ್ದಾಳೆ. ಈ ಬಗ್ಗೆ ಆತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹ್ಯಾಂಬರ್ಗ್ ವಾಂಡ್ಸ್ಬೆಕ್ ಜಿಲ್ಲಾ ನ್ಯಾಯಾಲಯ ಮಹಿಳೆಯನ್ನು ದೋಷಿ ಎಂದು ಪರಿಗಣಿಸಿ ಅವಮಾನ ಮತ್ತು ಬೆದರಿಕೆಗಾಗಿ ಆಕೆಗೆ 48 ಗಂಟೆಗಳ ಕಾಲ ಜೈಲು ಶಿಕ್ಷೆ ವಿಧಿಸಿ, ವಾರಾಂತ್ಯದಲ್ಲಿ ಜೈಲಿನಲ್ಲಿ ಬಂಧಿಯಾಗಿರಲು ಆದೇಶಿಸಿದೆ.

VISTARANEWS.COM


on

Women Arrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜರ್ಮನಿ : 2020ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನ ಬಗ್ಗೆ ಅವಮಾನವೀಯ ಹೇಳಿಕೆ ನೀಡಿದ 20 ವರ್ಷದ ಜರ್ಮನ್ ಮಹಿಳೆಗೆ ಜೈಲು ಶಿಕ್ಷೆ (Women Arrest) ವಿಧಿಸಲಾಗಿದೆ ಹಾಗೂ ಮಹಿಳೆ ವಾರಾಂತ್ಯವನ್ನು ಜೈಲಿನಲ್ಲಿ ಕಳೆಯಲು ಆದೇಶಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

2020ರಲ್ಲಿ ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 16-20 ವರ್ಷದೊಳಗಿನ 10 ಮಂದಿ ಯುವಕರು ಸೇರಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10 ಮಂದಿಯಲ್ಲಿ ಒಬ್ಬನಿಗೆ ಶಿಕ್ಷೆ ವಿಧಿಸಿ ಉಳಿದವರನ್ನು ಮುಕ್ತಗೊಳಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅದರಲ್ಲಿ ಒಬ್ಬನ ಹೆಸರು ಮತ್ತು ಮೊಬೈಲ್ ಸಂಖ್ಯೆ ಸೋರಿಕೆಯಾಗಿತ್ತು. ಆಗ ಈ ಘಟನೆಯಿಂದ ಕುಪಿತಳಾದ 20 ವರ್ಷದ ಜರ್ಮನ್ ಮಹಿಳೆಯೊಬ್ಬರು ಆ ವ್ಯಕ್ತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಲು ಶುರು ಮಾಡಿದ್ದಳು. ಇದರಿಂದ ಆ ವ್ಯಕ್ತಿಗೆ ಹೊರಗಡೆ ಮುಖ ತೋರಿಸಲೂ ಕಷ್ಟವಾಗಿದೆ. ಆದರೆ ಆ ಮಹಿಳೆಗೂ ಸಂತ್ರಸ್ತ ಬಾಲಕಿ ಹಾಗೂ ಅತ್ಯಾಚಾರಿಗಳಿಗೂ ಯಾವುದೇ ಸಂಬಂಧವಿರಲಿಲ್ಲ.

ಅತ್ಯಾಚಾರ ನಡೆದ ಸ್ಥಳ

ಹಾಗಾಗಿ ಈ ಬಗ್ಗೆ ಆತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹ್ಯಾಂಬರ್ಗ್ ವಾಂಡ್ಸ್ಬೆಕ್ ಜಿಲ್ಲಾ ನ್ಯಾಯಾಲಯ ಮಹಿಳೆಯನ್ನು ದೋಷಿ ಎಂದು ಪರಿಗಣಿಸಿ ಅವಮಾನ ಮತ್ತು ಬೆದರಿಕೆಗಾಗಿ ಆಕೆಗೆ 48 ಗಂಟೆಗಳ ಕಾಲ ಜೈಲು ಶಿಕ್ಷೆ ವಿಧಿಸಿ, ವಾರಾಂತ್ಯದಲ್ಲಿ ಜೈಲಿನಲ್ಲಿ ಬಂಧಿಯಾಗಿರಲು ಆದೇಶಿಸಿದೆ. ಅದರಂತೆ ಆಕೆಗೆ ಶುಕ್ರವಾರ ಸಂಜೆಯಿಂದ ಭಾನುವಾರ ಸಂಜೆಯವರೆಗೆ ಹ್ಯಾನೋಫರ್ ಸಂಡ್ ಯುವ ಬಂಧನ ಕೇಂದ್ರದಲ್ಲಿ ಬಂಧಿಯಾಗಿರಲು ಸೂಚಿಸಲಾಗಿದೆ.

ಹ್ಯಾಂಬರ್ಗ್‌ ಸಿಟಿ ಪಾರ್ಕ್‌

ಹಾಗೇ ಕೊಲೆ ಬೆದರಿಕೆಗಳು, ಹಿಂಸೆ ಮತ್ತು ಜನಾಂಗೀಯ ನಿಂದನೆ ಸೇರಿದಂತೆ ಅತ್ಯಾಚಾರಿಗಳ ಬಗ್ಗೆ ಇದೇ ರೀತಿಯ ಅವಮಾನವೀಯ ಹೇಳಿಕೆಗಳ ಕುರಿತು ಪೊಲೀಸರು ಇತರ 140 ಮಂದಿಯನ್ನು ತನಿಖೆ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ಶಿಕ್ಷೆಯಾದ ಹಿನ್ನಲೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅನೇಕರು ನ್ಯಾಯಾಧೀಶರ ವಿರುದ್ಧ ಕಿಡಿಕಾರಿದ್ದಾರೆ. ಅವರ ತೀರ್ಪನ್ನು ತಪ್ಪು ಎಂದು ದೂಷಿಸಿದ್ದಾರೆ. ಹಾಗೇ ಆಕೆ ಅತ್ಯಾಚಾರಿ ಯುವಕನಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆಯುವಂತಾಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

ಸೆಪ್ಟೆಂಬರ್ 19, 2020ರಲ್ಲಿ ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ ರಾತ್ರಿ ನಡೆದ ಉತ್ಸವದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಕುಡಿದ ಮತ್ತಿನಲ್ಲಿದ್ದ 10 ಮಂದಿ ಪುರುಷರು ಸೇರಿ ಆಕೆಯನ್ನು ಪೊದೆಗೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಪ್ರಕರಣವು ಪ್ರಪಂಚದಾದ್ಯಂತ ಆಘಾತವನ್ನುಂಟು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಕೋರ್ಟ್ ಅವರಲ್ಲಿ 19 ವರ್ಷದ ಯುವಕನಿಗೆ ಎರಡು ವರ್ಷ ಎಂಟು ತಿಂಗಳು ಜೈಲು ಶಿಕ್ಷೆ ವಿಧಿಸಿದರೆ ಒಬ್ಬನನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿತ್ತು, ಉಳಿದ ಎಂಟು ಮಂದಿಗೆ ಮುಕ್ತವಾಗಿ ನಡೆಯಲು ಅವಕಾಶ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Challa Sreenivasulu Setty: ಚಲ್ಲಾ ಶ್ರೀನಿವಾಸುಲು ಸೆಟ್ಟಿ; ಅಂದು ಪ್ರೊಬೆಷನರಿ ಅಧಿಕಾರಿ, ಈಗ ಎಸ್‌ಬಿಐ ಅಧ್ಯಕ್ಷ!

2020ರ ಜನವರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದ ಚಲ್ಲಾ ಶ್ರೀನಿವಾಸುಲು ಸೆಟ್ಟಿ (Challa Sreenivasulu Setty) ಪ್ರಸ್ತುತ ಎಸ್‌ಬಿಐನ ಇಂಟರ್ನ್ಯಾಷನಲ್ ಬ್ಯಾಂಕಿಂಗ್, ಗ್ಲೋಬಲ್ ಮಾರ್ಕೆಟ್ಸ್ ಮತ್ತು ಟೆಕ್ನಾಲಜಿ ವರ್ಟಿಕಲ್‌ಗಳನ್ನು ನೋಡಿಕೊಳ್ಳುತ್ತಿದ್ದಾರೆ. ಆಗಸ್ಟ್ 28ರಂದು ನಿವೃತ್ತರಾಗಲಿರುವ ದಿನೇಶ್ ಕುಮಾರ್ ಖರಾ ಅವರ ಬಳಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

VISTARANEWS.COM


on

By

Challa Sreenivasulu Setty
Koo

ಸರ್ಕಾರಿ ನೇಮಕಾತಿ ಆಯ್ಕೆ ಸಮಿತಿ ಹಣಕಾಸು ಸೇವೆ ಸಂಸ್ಥೆಗಳ ಬ್ಯೂರೋ (FSBI) ಶನಿವಾರ ದೇಶದ ಅತಿ ದೊಡ್ಡ ಹಣಕಾಸು ವಹಿವಾಟು ನಡೆಸುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಚಲ್ಲಾ ಶ್ರೀನಿವಾಸುಲು ಸೆಟ್ಟಿ ( Challa Sreenivasulu Setty) ಅವರನ್ನು ಆಯ್ಕೆ ಮಾಡಿದೆ.

ಯಾರು ಚಲ್ಲಾ ಶ್ರೀನಿವಾಸುಲು ಸೆಟ್ಟಿ?

2020ರ ಜನವರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಸೆಟ್ಟಿ ಪ್ರಸ್ತುತ ಎಸ್‌ಬಿಐನ ಇಂಟರ್ನ್ಯಾಷನಲ್ ಬ್ಯಾಂಕಿಂಗ್, ಗ್ಲೋಬಲ್ ಮಾರ್ಕೆಟ್ಸ್ ಮತ್ತು ಟೆಕ್ನಾಲಜಿ ವರ್ಟಿಕಲ್‌ಗಳನ್ನು ನೋಡಿಕೊಳ್ಳುತ್ತಿದ್ದಾರೆ.
ಎಸ್‌ಬಿಐ ಅಧ್ಯಕ್ಷ ಸ್ಥಾನಕ್ಕೆ ಗರಿಷ್ಠ ವಯೋಮಿತಿಯಾದ 63ನೇ ವರ್ಷಕ್ಕೆ ಕಾಲಿಟ್ಟಿರುವ ಅವರು ಆಗಸ್ಟ್ 28ರಂದು ನಿವೃತ್ತರಾಗಲಿರುವ ದಿನೇಶ್ ಕುಮಾರ್ ಖರಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ.

ಸೆಟ್ಟಿ ಅವರು ಭಾರತ ಸರ್ಕಾರದಿಂದ ರಚಿಸಲಾದ ವಿವಿಧ ಕಾರ್ಯಪಡೆಗಳು, ಸಮಿತಿಗಳ ಮುಖ್ಯಸ್ಥರೂ ಆಗಿದ್ದು, ಈ ಹಿಂದೆ ಬ್ಯಾಂಕಿನ ಚಿಲ್ಲರೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಪೋರ್ಟ್‌ಫೋಲಿಯೊವನ್ನು ನೋಡಿಕೊಳ್ಳುತ್ತಿದ್ದರು.
ಕೃಷಿಯಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕರ್‌ಗಳ ಪ್ರಮಾಣೀಕೃತ ಸಹವರ್ತಿಯಾಗಿರುವ ಅವರು 1988 ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಎಸ್‌ಬಿಐನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಮೂರು ದಶಕಗಳ ಕಾಲ ವೃತ್ತಿಜೀವನದ ಉದ್ದಕ್ಕೂ ಅವರು ಕಾರ್ಪೊರೇಟ್ ಕ್ರೆಡಿಟ್, ಚಿಲ್ಲರೆ ವ್ಯಾಪಾರ, ಡಿಜಿಟಲ್ ಮತ್ತು ಅಂತಾರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಅಭಿವೃದ್ಧಿ ಹೊಂದಿದ ಮಾರುಕಟ್ಟೆಗಳಲ್ಲಿ ಬ್ಯಾಂಕಿಂಗ್‌ನಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಸೆಟ್ಟಿ ಅವರು ಎಸ್‌ಬಿಐನಲ್ಲಿ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ – ಸ್ಟ್ರೆಸ್ಡ್ ಅಸೆಟ್ಸ್ ರೆಸಲ್ಯೂಶನ್ ಗ್ರೂಪ್, ಕಾರ್ಪೊರೇಟ್ ಅಕೌಂಟ್ಸ್ ಗ್ರೂಪ್‌ನಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್, ಇಂದೋರ್‌ನ ವಾಣಿಜ್ಯ ಶಾಖೆಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಎಸ್‌ಬಿಐ, ನ್ಯೂಯಾರ್ಕ್ ಬ್ರಾಂಚ್‌ನಲ್ಲಿ ವಿಪಿ ಮತ್ತು ಹೆಡ್ (ಸಿಂಡಿಕೇಶನ್ಸ್) ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ನಿರ್ವಹಿಸಿದ್ದಾರೆ. .

ಎಸ್‌ಬಿಐ ಅಧ್ಯಕ್ಷರನ್ನು ಯಾರು ನೇಮಕ ಮಾಡುತ್ತಾರೆ?

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ನಿರ್ದೇಶಕರ ಮುಖ್ಯಸ್ಥರಾಗಿರುವ ಎಫ್ ಎಸ್ ಐಬಿ 2024ರ ಜೂನ್ 29ರಂದು ಸ್ಥಾನಕ್ಕಾಗಿ ಮೂವರು ಅಭ್ಯರ್ಥಿಗಳನ್ನು ಸಂದರ್ಶಿಸಿದೆ.

ಇಂಟರ್‌ಫೇಸ್‌ನಲ್ಲಿ ಕಾರ್ಯಕ್ಷಮತೆ, ಒಟ್ಟಾರೆ ಅನುಭವ ಮತ್ತು ಅಸ್ತಿತ್ವದಲ್ಲಿರುವ ನಿಯತಾಂಕಗಳನ್ನು ಗಮನದಲ್ಲಿಟ್ಟುಕೊಂಡು ಬ್ಯೂರೋ ಚಲ್ಲಾ ಶ್ರೀನಿವಾಸಲು ಸೆಟ್ಟಿ ಅವರನ್ನು ಎಸ್‌ಬಿಐನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದೆ ಎಂದು ಎಫ್‌ಎಸ್‌ಐಬಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

ಅಧ್ಯಕ್ಷರನ್ನು ಎಸ್‌ಬಿಐನ ಸೇವೆಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರ ಪೂಲ್‌ನಿಂದ ನೇಮಿಸಲಾಗುತ್ತದೆ. ಸಾಮಾನ್ಯವಾಗಿ, ಅತ್ಯಂತ ಹಿರಿಯ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕಿನ ಅಧ್ಯಕ್ಷರಾಗುತ್ತಾರೆ. ಎಫ್‌ಎಸ್‌ಐಬಿ ಶಿಫಾರಸಿನ ಕುರಿತು ಅಂತಿಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ತೆಗೆದುಕೊಳ್ಳುತ್ತದೆ. ಎಫ್‌ಎಸ್‌ಐಬಿಯ ನೇತೃತ್ವವನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ಮಾಜಿ ಕಾರ್ಯದರ್ಶಿ ಭಾನು ಪ್ರತಾಪ್ ಶರ್ಮಾ ಅವರು ವಹಿಸಿದ್ದಾರೆ.

Continue Reading

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading

Latest

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Viral News: ಈಗ ಹಣ ಮಾಡುವುದಕ್ಕೆ ಜನ ಯಾವುದೆಲ್ಲಾ ದಾರಿ ಹಿಡಿಯುತ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆಯಂತೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

VISTARANEWS.COM


on

Viral News
Koo

ಪುರಾತನ ಕಾಲದಲ್ಲಿ ಮಹಿಳೆಯರಿಗೆ ಅಪಾರ ಗೌರವ ನೀಡುತ್ತಿದ್ದರು. ಪರಸ್ತ್ರೀಯನ್ನು ಮುಟ್ಟಲೂ ಹೆದರುತ್ತಿದ್ದರು ಎಂಬ ಮಾತಿತ್ತು. ಆದರೆ ಇಂದಿನ ಕಾಲದಲ್ಲಿ ಮಹಿಳೆಯರ ದೇಹವನ್ನೇ ಬಳಸಿಕೊಂಡು ವ್ಯಾಪಾರ ಮಾಡಲು ಶುರುಮಾಡಿದ್ದಾರೆ. ಈಗ ಮಹಿಳೆಯರನ್ನು ನಗ್ನವಾಗಿ ಬಳಸಿಕೊಂಡು ವ್ಯಾಪಾರ ಮಾಡುವ ಪ್ರವೃತ್ತಿ ರೆಸ್ಟೋರೆಂಟ್‌ಗಳಲ್ಲಿಯೂ ಬಂದಿದೆ. ಗ್ರಾಹಕರನ್ನು ಆಕರ್ಷಿಸಲು ಕ್ಲಬ್ ರೆಸ್ಟೋರೆಂಟ್‌ಗಳು ಮಹಿಳೆಯರನ್ನು ಬೆತ್ತಲೆ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ ವೈರಲ್ (Viral News) ಆಗಿದೆ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬ್ಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

Viral News

ಹಾಗೇ ಯುವತಿಯ ಬೆತ್ತಲೆ ದೇಹದ ಪ್ಲೇಟ್‌ಗೆ ‘ಸುಶಿ ಬೋಟ್’ ಎಂದು ಕರೆಯಲಾಗುತ್ತದೆ. ಈ ಭೋಜನಕ್ಕೆ ಭಾರೀ ಬೇಡಿಕೆ ಇದ್ದು, ಇದನ್ನು ಪಡೆಯಲು ಗ್ರಾಹಕರು ಮೊದಲೇ ಬುಕ್ ಮಾಡಬೇಕು. ನಂತರ ಅವರು ತಿಳಿಸಿದ ದಿನ ಕ್ಲಬ್ ಗೆ ಹೋದರೆ ಸಾಕಂತೆ. ಅಲ್ಲಿ ಮೊದಲು ಟೇಬಲ್ ಮೇಲೆ ಬೆತ್ತಲೆಯಾದ ಯುವತಿ ಬಂದು ಮಲಗುತ್ತಾಳೆ ನಂತರ ಅವಳ ಮೇಮೇಲೆ ವಿವಿಧ ರೀತಿಯ ಸಲಾಡ್, ಫುಡ್ ಅನ್ನು ಇಡಲಾಗುತ್ತದೆ.

Viral News

ಇದಕ್ಕೆ ಸಂಬಂಧಪಟ್ಟ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ. ಈ ಪ್ರಕರಣವು ಆನ್‌ಲೈನ್‌ನಲ್ಲಿ ಸಾಕಷ್ಟು ಟೀಕೆಗಳನ್ನು ಹುಟ್ಟುಹಾಕಿದೆ. ಅದರ ನಂತರ ಸ್ಥಳೀಯ ಅಧಿಕಾರಿಗಳು ಈ ಕ್ಲಬ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಬಂದಿಲ್ಲ, ಆದರೂ ಈ ಬಗ್ಗೆ ತನಿಖೆ ಮಾಡುವುದಾಗಿ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

ವರದಿ ಪ್ರಕಾರ, ಈ ‘ನ್ಯೂಟೈಮೊರಿ’ ಭೋಜನಾ ವ್ಯವಸ್ಥೆ 1980ರ ದಶಕದಲ್ಲಿ ಜಪಾನ್‌ನಲ್ಲಿ ಹುಟ್ಟಿಕೊಂಡಿತು. ಪುರುಷರ ದೇಹದ ಮೇಲೆ ಆಹಾರವನ್ನು ನೀಡುವುದಕ್ಕೆ ‘ನ್ಯೂಟೈಮೊರಿ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಟೀಕೆಗಳನ್ನು ಕೇಳಿಬಂದರೂ ಕೂಡ ಇದು ಇನ್ನೂ ಅನೇಕ ಸ್ಥಳಗಳಲ್ಲಿ ಆಚರಣೆಯಲ್ಲಿದೆ ಎನ್ನಲಾಗಿದೆ. ಆದರೆ ಅತ್ಯಂತ ದುಬಾರಿಯಾದ್ದರಿಂದ ಸಾರ್ವಜನಿಕ ಆರೋಗ್ಯ ಕಾಳಜಿಗಳು ಮತ್ತು ನೈತಿಕ ಸಮಸ್ಯೆಗಳನ್ನು ಉಲ್ಲೇಖಿಸಿ ಚೀನಾ ಸರ್ಕಾರವು 2005 ರಲ್ಲಿ ‘ನ್ಯೂಟೈಮೊರಿ’ಯನ್ನು ನಿಷೇಧಿಸಿತು ಎನ್ನಲಾಗಿದೆ.

Continue Reading

Latest

Viral Video: 1 ನಿಮಿಷದಲ್ಲಿ 35 ಪುಲ್-ಅಪ್! ಮೇಜರ್ ಜನರಲ್ ವಿಡಿಯೊ ಫುಲ್ ವೈರಲ್

Viral Video: ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo

ಮುಂಬೈ : ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಫಿಟ್‌ನೆಸ್ ಮತ್ತು ಕಠಿಣ ವ್ಯಾಯಾಮಗಳನ್ನು ಮಾಡುವ ಅವರ ಸಾಮರ್ಥ್ಯದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಅಕ್ಟೋಬರ್ 2022 ರಲ್ಲಿ ಜರ್ಮನ್ ಪಬ್ಲಿಕೇಶನ್ ಸ್ಟ್ಯಾಟಿಸ್ಟಾ ಭಾರತೀಯ ಸೇನೆಯನ್ನು ವಿಶ್ವದ ಅತ್ಯುತ್ತಮ ಹೋರಾಟದ ಪಡೆ ಎಂದು ಹೊಗಳಿದೆ. ಹಾಗಾಗಿ ತಮಗೆ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್ ಎಂದು ಬರೆದಿದ್ದಾರೆ.

ಈ ವಿಡಿಯೊದಲ್ಲಿ ಮೇಜರ್ ಜನರಲ್ ಜೋಶಿ ಅವರು ಇತರ ಸೇನಾ ಸಿಬ್ಬಂದಿಗಳ ಜೊತೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಆ ವೇಳೆ ಅವರು ನಿರಂತರವಾಗಿ ಪುಲ್-ಅಪ್‌ಗಳನ್ನು ಮಾಡುತ್ತಿರುವುದನ್ನು ಕಾಣಬಹುದು. ಅವರ ವರ್ಕೌಟ್ ಮುಗಿದ ಬಳಿಕ ಅಲ್ಲಿರುವ ಪ್ರತಿಯೊಬ್ಬರೂ ಅವರ ದೈಹಿಕ ಸಾಮರ್ಥ್ಯವನ್ನು ಕಂಡು ಹೊಗಳಿದ್ದಾರೆ.

Viral Video

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಈ ವಿಡಿಯೊವನ್ನು ಜೂನ್ 29ರಂದು ಪೋಸ್ಟ್ ಮಾಡಿದ್ದು, ಈ ವಿಡಿಯೊ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್‌ಗಳು ಮತ್ತು 4,000 ಕ್ಕೂ ಹೆಚ್ಚು ಲೈಕ್ಸ್‌ಗಳು ಸಿಕ್ಕಿವೆ .ಇದಕ್ಕ ಹಲವರು ಕಾಮೆಂಟ್ ಮಾಡಿದ್ದಾರೆ. ಜಿಮ್‌ನಲ್ಲಿ 25 ಪುಲ್-ಅಪ್‌ಗಳನ್ನು ಮಾಡಿದ ನಂತರವೂ ಅವರು ಸಮವಸ್ತ್ರದ ಶರ್ಟ್ ಅನ್ನು ಸರಿಯಾಗಿ ಧರಿಸಿದ್ದಾರೆ ಎಂದು ಅವರ ಶಿಸ್ತಿನ ಬಗ್ಗೆ ಒಬ್ಬ ವ್ಯಕ್ತಿ ಬರೆದಿದ್ದಾರೆ. ಇನ್ನೊಬ್ಬರು ಅವರನ್ನು ರಿಯಲ್ ಹೀರೊ ಎಂದು ಹೊಗಳಿದ್ದಾರೆ. ಅತ್ಯಂತ ಸವಾಲಿನ ಪರಿಸ್ಥಿತಿಗಳನ್ನು ನಗುತ್ತಾ ಹೆದರದೆ ಎದುರಿಸುವ ವ್ಯಕ್ತಿ ಅವರು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಹಾಗೇ ಇನ್ನೊಬ್ಬರು ಮೇಜರ್ ಜನರಲ್‌ಗೆ ಪುಲ್-ಅಪ್ ಗಳು ಮತ್ತು ಫಿಟ್ನೆಸ್ ಬಗ್ಗೆ ಇರುವ ಉತ್ಸಾಹದ ಬಗ್ಗೆ ತಿಳಿಸಿದ್ದಾರೆ.

Continue Reading
Advertisement
T20 World Cup 2024
ಪ್ರಮುಖ ಸುದ್ದಿ4 hours ago

T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

GST Collection
ಪ್ರಮುಖ ಸುದ್ದಿ4 hours ago

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

2nd National Pediatric Stroke Conclave 2024 inauguration in Bengaluru
ಕರ್ನಾಟಕ5 hours ago

Bengaluru News: ಬೆಂಗಳೂರಿನಲ್ಲಿ 2ನೇ ರಾಷ್ಟ್ರೀಯ ಮಕ್ಕಳ ಪಾರ್ಶ್ವವಾಯುವಿನ ಶೃಂಗ 2024ಕ್ಕೆ ಚಾಲನೆ

Maharashtra Politics
ಪ್ರಮುಖ ಸುದ್ದಿ5 hours ago

Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

Press Day and Pratibha Puraskara programme in Ballari
ಬಳ್ಳಾರಿ5 hours ago

Press Day: ಮಾಧ್ಯಮ ಕ್ಷೇತ್ರಕ್ಕೆ ಬಳ್ಳಾರಿಯ ಕೊಡುಗೆ ಅಪಾರ: ಡಾ.ಕರಿಯಪ್ಪ ಮಾಳಿಗಿ

Manufacturing of auto parts in the state Increased propensity for capital investment
ಕರ್ನಾಟಕ5 hours ago

Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

Kannada New Movie kagada film released on 5th July
ಕರ್ನಾಟಕ5 hours ago

Kannada New Movie: ಮೊಬೈಲ್ ಮುಂಚಿನ ಪ್ರೇಮಕಥೆ ‘ಕಾಗದ’ ಜುಲೈ 5ರಂದು ಬಿಡುಗಡೆ

Afghanistan cricket
ಪ್ರಮುಖ ಸುದ್ದಿ5 hours ago

Afghanistan cricket : ನಮಗೂ ಒಂದು ತಂಡ ರಚಿಸಿ ಎಂದು ಐಸಿಸಿಗೆ ಪತ್ರ ಬರೆದ ಅಫಘಾನಿಸ್ತಾನದ ಮಹಿಳಾ ಕ್ರಿಕೆಟಿಗರು

IND vs SA
ಪ್ರಮುಖ ಸುದ್ದಿ7 hours ago

IND vs SA : ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಪ್ರಕಟ

Mangalore Jail
ಕರ್ನಾಟಕ7 hours ago

Mangalore Jail: ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ10 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌