World's Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ? - Vistara News

ವಿದೇಶ

World’s Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ?

ಸಮಯದೊಂದಿಗೆ ಜಾಗತಿಕವಾಗಿಯೂ ಹಲವಾರು ಬದಲಾವಣೆಗಳು ಆಗುತ್ತಲೇ ಇರುತ್ತದೆ. ಪ್ರಸ್ತುತ ಜಗತ್ತಿನಲ್ಲಿ 195 ದೇಶಗಳಿವೆ. ಇವುಗಳಲ್ಲಿ ಕೆಲವು ಸಾಕಷ್ಟು ಹಳೆಯವು ಮತ್ತು ಕೆಲವು ಸಾಕಷ್ಟು ಹೊಸದು. ಇದರಲ್ಲಿ ಹತ್ತು ರಾಷ್ಟ್ರಗಳು ಕಳೆದ ಎರಡು ದಶಕಗಳಲ್ಲಿ (World’s Newest Countries) ಸ್ಥಾಪನೆಯಾಗಿರುವುದು. ಈ ಹತ್ತು ದೇಶಗಳ ಸಂಕ್ಪಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

World's Newest Countries
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಳೆದ ಎರಡು ದಶಕಗಳಲ್ಲಿ ವಿಶ್ವದಲ್ಲಿ ಹತ್ತು ಹೊಸ ರಾಷ್ಟ್ರಗಳು (World’s Newest Countries) ರೂಪುಗೊಂಡಿದ್ದು, ಇದರಲ್ಲಿ ದಕ್ಷಿಣ ಸುಡಾನ್ (South Sudan) ಇತ್ತೀಚೆಗೆಷ್ಟೇ ಹುಟ್ಟಿಕೊಂಡಿದೆ. ಸಾಕಷ್ಟು ಸವಾಲುಗಳನ್ನು ಎದುರಿಸಿ ರೂಪುಗೊಂಡಿರುವ ಈ ಹೊಸ ರಾಷ್ಟ್ರಗಳು ಅನೇಕ ಅವಕಾಶಗಳನ್ನೂ ಸೃಷ್ಟಿಸಿದೆ.

ದಕ್ಷಿಣ ಸೂಡಾನ್ ಇದೀಗ ವಿಶ್ವದ ಹೊಸ ದೇಶಗಳ ಪಟ್ಟಿಯಲ್ಲಿದೆ. 2011ರ ಜುಲೈ 9ರಂದು ಸ್ವತಂತ್ರಗೊಂಡ (gained independence) ದಕ್ಷಿಣ ಸುಡಾನ್ ಈಗ ವಿಶ್ವದಲ್ಲಿ ಅಸ್ತಿತ್ವದಲ್ಲಿರುವ ಹೊಸ ದೇಶವಾಗಿದೆ. ಇದರೊಂದಿಗೆ ಹೊಸ ದೇಶಗಳ ಪಟ್ಟಿಯಲ್ಲಿ ಕೊಸೊವೊ (Kosovo), ಮಾಂಟೆನೆಗ್ರೊ (Montenegro), ಸೆರ್ಬಿಯಾ (Serbia), ಪೂರ್ವ ಟಿಮೋರ್ (East Timor) , ಪಲಾವ್ (Palau), ಎರಿಟ್ರಿಯಾ (Eritrea), ಜೆಕ್ ರಿಪಬ್ಲಿಕ್ (Czech Republic), ಸ್ಲೋವಾಕಿಯಾ (Slovakia) ಮತ್ತು ಕ್ರೊಯೇಷಿಯಾ (Croatia) ಕೂಡ ಸೇರ್ಪಡೆಯಾಗಿದೆ.

ಸಮಯದೊಂದಿಗೆ ಜಾಗತಿಕವಾಗಿಯೂ ಹಲವಾರು ಬದಲಾವಣೆಗಳು ಆಗುತ್ತಲೇ ಇರುತ್ತದೆ. ಪ್ರಸ್ತುತ ಜಗತ್ತಿನಲ್ಲಿ 195 ದೇಶಗಳಿವೆ. ಇವುಗಳಲ್ಲಿ ಕೆಲವು ಸಾಕಷ್ಟು ಹಳೆಯವು ಮತ್ತು ಕೆಲವು ಸಾಕಷ್ಟು ಹೊಸದು. ಇದರಲ್ಲಿ ಹತ್ತು ರಾಷ್ಟ್ರಗಳು ಕಳೆದ ಎರಡು ದಶಕಗಳಲ್ಲಿ ಸ್ಥಾಪನೆಯಾಗಿರುವುದು.

ಇತ್ತೀಚಿಗೆ ಸ್ಥಾಪನೆಯಾಗಿರುವ ಪ್ರಪಂಚದ ಹೊಸ ಅಥವಾ ಕಿರಿಯ ರಾಷ್ಟ್ರಗಳು ಅನನ್ಯ ಸವಾಲುಗಳನ್ನು ಎದುರಿಸುತ್ತಿರುವ ನಡುವೆ ಇಲ್ಲಿ ಸಾಕಷ್ಟು ಅವಕಾಶಗಳೂ ಎದ್ದು ಕಾಣುತ್ತಿವೆ. ದಶಕಗಳ ಸಂಘರ್ಷದಿಂದ ಹುಟ್ಟಿದ ದಕ್ಷಿಣ ಸುಡಾನ್‌ನಿಂದ ಹಿಡಿದು ಕೊಸೊವೊ ಅಂತಾರಾಷ್ಟ್ರೀಯ ಮನ್ನಣೆಯ ಹಾದಿಯನ್ನು ಪಡೆಯುವವರೆಗೆ ಪ್ರತಿಯೊಂದು ದೇಶಗಳು ವಿಶಿಷ್ಟವಾದ ಇತಿಹಾಸವನ್ನು ಹೊಂದಿವೆ.

ದಕ್ಷಿಣ ಸುಡಾನ್

2011ರ ಜುಲೈ 9ರಂದು ಸ್ವಾತಂತ್ರ್ಯ ಪಡೆದ ದಕ್ಷಿಣ ಸುಡಾನ್ ಈ ಮೂಲಕ ದಶಕಗಳ ಅಂತರ್ಯುದ್ಧದಕ್ಕೆ ಅಂತ್ಯವನ್ನು ಹಾಡಿತ್ತು. ವೈವಿಧ್ಯಮಯ ಜನಾಂಗೀಯ ಗುಂಪುಗಳಿಗೆ ಮತ್ತು ರಾಜಕೀಯ ಸ್ಥಿರತೆಯ ಹೋರಾಟಗಳಿಗೆ ಈ ರಾಷ್ಟ್ರ ಹೆಸರುವಾಸಿಯಾಗಿದೆ.


ಕೊಸೊವೊ

2008ರ ಫೆಬ್ರವರಿ 17ರಂದು ಸೆರ್ಬಿಯಾದಿಂದ ಕೊಸೊವೊ ಸ್ವಾತಂತ್ರ್ಯವನ್ನು ಘೋಷಿಸಿತು. ಅನೇಕ ದೇಶಗಳಿಂದ ಗುರುತಿಸಲ್ಪಟ್ಟಿದ್ದರೂ ಅಂತಾರಾಷ್ಟ್ರೀಯ ಮನ್ನಣೆ ಪಡೆಯುವಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.


ಮಾಂಟೆನೆಗ್ರೊ

2006ರ ಜೂನ್ 3ರಂದು ಜನಾಭಿಪ್ರಾಯ ಸಂಗ್ರಹಣೆಯ ಅನಂತರ ಮಾಂಟೆನೆಗ್ರೊ ಸ್ಟೇಟ್ ಯೂನಿಯನ್ ಆಫ್ ಸರ್ಬಿಯಾ ಮತ್ತು ಮಾಂಟೆನೆಗ್ರೊದಿಂದ ಸ್ವಾತಂತ್ರ್ಯವನ್ನು ಘೋಷಿಸಿತು. ಇದು ಆಡ್ರಿಯಾಟಿಕ್ ಕರಾವಳಿಗಳಿಗೆ ಹೆಸರುವಾಸಿಯಾಗಿದೆ ಮತ್ತು ಯುರೋಪಿಯನ್ ಯೂನಿಯನ್ ಸದಸ್ಯತ್ವಕ್ಕಾಗಿ ಅಭ್ಯರ್ಥಿಯಾಗಿದೆ.


ಸೆರ್ಬಿಯಾ

ಸೆರ್ಬಿಯಾ ಮತ್ತು ಮಾಂಟೆನೆಗ್ರೊ ರಾಜ್ಯ ಒಕ್ಕೂಟದ ವಿಸರ್ಜನೆಯ ಅನಂತರ ಸೆರ್ಬಿಯಾ 2006ರ ಜೂನ್ 5ರಂದು ಸ್ವಾತಂತ್ರ್ಯವನ್ನು ಘೋಷಿಸಿತು. ಇದು ಆರ್ಥಿಕ ಸುಧಾರಣೆಗಳು ಮತ್ತು ಯುರೋಪಿಯನ್ ಏಕೀಕರಣದ ಮೇಲೆ ಕೇಂದ್ರೀಕರಿಸಿದೆ.


ಪೂರ್ವ ಟಿಮೋರ್

2002ರ ಮೇ 20ರಂದು ರೂಪುಗೊಂಡ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಟಿಮೋರ್- ಲೆಸ್ಟೆ, ಆಗ್ನೇಯ ಏಷ್ಯಾದ ಒಂದು ಸುಂದರವಾದ ದ್ವೀಪ ರಾಷ್ಟ್ರವಾಗಿದೆ.


ಪಲಾವ್

1994ರ ಅಕ್ಟೋಬರ್ 1ರಂದು ಪಲಾವ್ ರಾಷ್ಟ್ರ ಕಾಂಪ್ಯಾಕ್ಟ್ ಆಫ್ ಫ್ರೀ ಅಸೋಸಿಯೇಷನ್ ​​ಅಡಿಯಲ್ಲಿ ಯುನೈಟೆಡ್ ಸ್ಟೇಟ್ಸ್ ನಿಂದ ಸ್ವತಂತ್ರವಾಯಿತು. ಇದು ಸಮುದ್ರದ ಜೀವವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದೆ.


ಎರಿಟ್ರಿಯಾ

ಸುದೀರ್ಘ ಸ್ವಾತಂತ್ರ್ಯ ಹೋರಾಟದ ಅನಂತರ 1993ರ ಮೇ 24ರಂದು ಎರಿಟ್ರಿಯಾ ಇಥಿಯೋಪಿಯಾದಿಂದ ಸ್ವಾತಂತ್ರ್ಯ ಪಡೆಯಿತು. ಇದು ಆಡಳಿತ, ಮಾನವ ಹಕ್ಕುಗಳು ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.


ಜೆಕ್ ಗಣರಾಜ್ಯ

ಜೆಕೊಸ್ಲೊವಾಕಿಯಾದ ಶಾಂತಿಯುತ ವಿಸರ್ಜನೆಯ ಅನಂತರ 1993ರ ಜನವರಿ 1ರಂದು ಜೆಕ್ ರಿಪಬ್ಲಿಕ್ ಅಥವಾ ಜೆಕಿಯಾ ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು. ಪ್ರಾಗ್ ಅದರ ರಾಜಧಾನಿ. ಇದು ವಾಸ್ತುಶಿಲ್ಪದ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ


ಸ್ಲೋವಾಕಿಯಾ

ಜೆಕೊಸ್ಲೊವಾಕಿಯಾದ ಇತರ ಅರ್ಧಭಾಗವಾದ ಸ್ಲೋವಾಕಿಯಾ ಕೂಡ 1993ರ ಜನವರಿ 1ರಂದು ಸ್ವಾತಂತ್ರ್ಯವನ್ನು ಗಳಿಸಿತು. ಜೆಕ್ ಗಣರಾಜ್ಯದೊಂದಿಗೆ ಪ್ರತ್ಯೇಕ ರಾಷ್ಟ್ರವಾಯಿತು.


ಕ್ರೊಯೇಷಿಯಾ

ಕ್ರೊಯೇಷಿಯಾ ಗಣರಾಜ್ಯವು 1991ರ ಜೂನ್ 25ರಂದು ಸ್ವಾತಂತ್ರ್ಯವನ್ನು ಘೋಷಿಸಿತು. ಕ್ರೊಯೇಷಿಯಾ ಯುರೋಪ್‌ನಲ್ಲಿ ರೋಮಾಂಚಕ ಪ್ರವಾಸಿ ತಾಣವಾಗಿ ಹೆಚ್ಚು ಜನಪ್ರಿಯವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Indian Origin Businessman: 8,300 ಕೋಟಿ ರೂ. ವಂಚನೆ; ಭಾರತೀಯ ಮೂಲದ ಅಮೆರಿಕದ ಉದ್ಯಮಿಗೆ ಜೈಲು

Indian Origin Businessman: ಗೋಲ್ಡ್‌ ಸಚ್ಸ್‌ ಗ್ರೂಪ್‌, ಗೂಗಲ್‌ ಪೇರೆಂಟ್‌ ಆಲ್ಫಬೆಟ್‌ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರಿಟ್ಜ್ಕರ್ ಅವರ ಸಾಹಸೋದ್ಯಮ ಬಂಡವಾಳ ಸಂಸ್ಥೆಗೆ ತಮ್ಮ ಸ್ಕೀಂ ಮೂಲಕ ಶಾ ಕೋಟ್ಯಂತರ ರೂ. ವಂಚನೆ ಮಾಡಿರುವುದು ಸಾಬೀತಾಗಿದ್ದು, ಅಮೆರಿಕ ಜಿಲ್ಲಾ ನ್ಯಾಯಾಧೀಶ ಥಾಮನ್‌ ಡರ್ಕಿನ್‌ ಏಳೂವರೆ ವರ್ಷ ಕಠಿನ ಸಜೆ ವಿಧಿಸಿದೆ. ಹೂಡಿಕೆದಾರರಿಗೆ ಸುಳ್ಳು ಹೇಳಿ ವಂಚನೆ, ಸುಳ್ಳು ಜಾಹೀರಾತು ಪ್ರಕಟಿಸಿ ವಂಚನೆ ಹೀಗೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಶಾಗೆ 15ವರ್ಷಗಳ ಶಿಕ್ಷೆ ವಿಧಿಸಬೇಕೆಂದು ಕೋರ್ಟ್‌ಗೆ ಸಂತ್ರಸ್ತರು ಮನವಿ ಮಾಡಿದ್ದರು.

VISTARANEWS.COM


on

Indian Origin Businessman
Koo

ವಾಷಿಂಗ್ಟನ್‌: ಭಾರತೀಯ ಮೂಲದ ಅಮೆರಿಕದ ಉದ್ಯಮಿ(Indian Origin Businessman), ಔಟ್‌ಕಮ್‌ ಹೆಲ್ತ್‌ ಸಂಸ್ಥೆ(Outcome Health)ಯ ಸಹ ಸಂಸ್ಥಾಪಕ ರಿಶಿ ಶಾ ಅವರಿಗೆ ವಂಚನೆ ಪ್ರಕರಣದಲ್ಲಿ ಏಳೂವರೆ ವರ್ಷ ಶಿಕ್ಷೆಯಾಗಿದೆ. ಬರೋಬ್ಬರಿ 8,300 ಕೋಟಿ ರೂ. ವಂಚನೆ ಪ್ರಕರಣದಲ್ಲಿ ರಿಶಿ ಶಾ ಅವರನ್ನು ಅಮೆರಿಕ ಜಿಲ್ಲಾ ಕೋರ್ಟ್‌ ದೋಷಿ ಎಂದು ಘೋಷಿಸಿದ್ದು, ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಗೋಲ್ಡ್‌ ಸಚ್ಸ್‌ ಗ್ರೂಪ್‌, ಗೂಗಲ್‌ ಪೇರೆಂಟ್‌ ಆಲ್ಫಬೆಟ್‌ ಮತ್ತು ಇಲಿನಾಯ್ಸ್ ಗವರ್ನರ್ ಜೆಬಿ ಪ್ರಿಟ್ಜ್ಕರ್ ಅವರ ಸಾಹಸೋದ್ಯಮ ಬಂಡವಾಳ ಸಂಸ್ಥೆಗೆ ತಮ್ಮ ಸ್ಕೀಂ ಮೂಲಕ ಶಾ ಕೋಟ್ಯಂತರ ರೂ. ವಂಚನೆ ಮಾಡಿರುವುದು ಸಾಬೀತಾಗಿದ್ದು, ಅಮೆರಿಕ ಜಿಲ್ಲಾ ನ್ಯಾಯಾಧೀಶ ಥಾಮನ್‌ ಡರ್ಕಿನ್‌ ಏಳೂವರೆ ವರ್ಷ ಕಠಿನ ಸಜೆ ವಿಧಿಸಿದೆ. ಹೂಡಿಕೆದಾರರಿಗೆ ಸುಳ್ಳು ಹೇಳಿ ವಂಚನೆ, ಸುಳ್ಳು ಜಾಹೀರಾತು ಪ್ರಕಟಿಸಿ ವಂಚನೆ ಹೀಗೆ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಶಾಗೆ 15ವರ್ಷಗಳ ಶಿಕ್ಷೆ ವಿಧಿಸಬೇಕೆಂದು ಕೋರ್ಟ್‌ಗೆ ಸಂತ್ರಸ್ತರು ಮನವಿ ಮಾಡಿದ್ದರು.

ವೈದ್ಯರ ಕಚೇರಿಗಳಲ್ಲಿನ ಟಿವಿಗಳಲ್ಲಿ ಜಾಹೀರಾತುಗಳನ್ನು ಒದಗಿಸಿದ ಔಟ್‌ಕಮ್ ಹೆಲ್ತ್‌ನ ಸಹ-ಸಂಸ್ಥಾಪಕ, ಭಾರತೀಯ-ಅಮೆರಿಕನ್ ರಿಷಿ ಶಾ, 38, ಕಳೆದ ವರ್ಷ ಫೆಡರಲ್ ಕೋರ್ಟ್‌ ಅನೇಕ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿತ್ತು. ಇದೀಗ ಶಾ ಮತ್ತು ಮತ್ತು ಇತರ ಇಬ್ಬರು ಸಹೋದ್ಯೋಗಿಗಳಿಗೆ ಕಳೆದ ವಾರ ಚಿಕಾಗೋದಲ್ಲಿ US ಜಿಲ್ಲಾ ನ್ಯಾಯಾಧೀಶ ಥಾಮಸ್ ಡರ್ಕಿನ್ ಅವರು ಶಿಕ್ಷೆ ವಿಧಿಸಿದ್ದಾರೆ ಎಂದು US ಅಟಾರ್ನಿ ಕಚೇರಿ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

2017 ರ ವಾಲ್ ಸ್ಟ್ರೀಟ್ ಜರ್ನಲ್ ಲೇಖನದಲ್ಲಿ ವಂಚನೆಯನ್ನು ಬಹಿರಂಗಪಡಿಸುವ ಮೊದಲು, ಶಾ ಡೆಮಾಕ್ರಟಿಕ್ ವಲಯಗಳಲ್ಲಿ ಉದಯೋನ್ಮುಖ ಉದ್ಯಮಿಯಾಗಿದ್ದರು. 2006 ರಲ್ಲಿ ಅವರು ಚಿಕಾಗೋದ ಉತ್ತರದಲ್ಲಿರುವ ನಾರ್ತ್‌ವೆಸ್ಟರ್ನ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿದ್ದಾಗ ಶಾ ಕಾಂಟೆಕ್ಸ್ಸ್ಟ್‌ ಮೀಡಿಯಾ ಹೆಲ್ತ್‌ ಎಂಬ ಸ್ಟಾರ್ಟ್‌ಅಪ್‌ ಕಂಪೆನಿ ಶುರುಮಾಡಿದ್ದರು. ರೋಗಿಗಳನ್ನು ಗುರಿಯಾಗಿಸಿಕೊಂಡು ಆರೋಗ್ಯ ಜಾಹೀರಾತುಗಳನ್ನು ಸ್ಟ್ರೀಮ್ ಮಾಡಲು ವೈದ್ಯರ ಕಚೇರಿಗಳಲ್ಲಿ ಟೆಲಿವಿಷನ್‌ಗಳನ್ನು ಸ್ಥಾಪಿಸುವ ದೃಷ್ಟಿಕೋನದೊಂದಿಗೆ ಈ ಉದ್ಯಮ ಪ್ರಾರಂಭವಾಗಿತ್ತು. ಇದಾದ ಬಳಿ ಶಾ ತಮ್ಮ ಸಹ ಸಂಸ್ಥಾಪಕಮ ಶಾರದಾ ಅಗರ್ವಾಲ್‌ ಅವರ ಜೊತೆಗೂಡಿ ಸಂಸ್ಥೆಯನ್ನು ಅಭಿವೃದ್ಧಿ ಪಡಿಸಿದ್ದರು.

ಔಟ್‌ಕಮ್‌ ಹೆಲ್ತ್‌ ದಿನೇ ದಿನೇ ಎತ್ತರಕ್ಕೆ ಬೆಳೆಯುತ್ತಿದ್ದಂತೆ ಅದರ ಕರ್ಮಕಾಂಡ ಬೆಳಕಿಗೆ ಬಂದಿತ್ತು. ಕಂಪನಿಯು ಪ್ರಸಾರ ಮಾಡುವುದಕ್ಕಿಂತ ಹೆಚ್ಚಿನ ಜಾಹೀರಾತುಗಳನ್ನು ಮಾರಾಟ ಮಾಡಿತು ಮತ್ತು ವೈದ್ಯರ ಕಚೇರಿಗಳಲ್ಲಿನ ಟಿವಿಗಳ ನೆಟ್‌ವರ್ಕ್‌ನ ಗಾತ್ರದ ಬಗ್ಗೆ ಔಷಧೀಯ ದೈತ್ಯ Novo Nordisk A/S ನಂತಹ ಗ್ರಾಹಕರಿಗೆ ಸುಳ್ಳು ಹೇಳಿತ್ತು ಎಂಬುದು ಬಯಲಾಗಿತ್ತು.

ಇದನ್ನೂ ಓದಿ: MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

Continue Reading

ಕರ್ನಾಟಕ

Ms Universal Petite 2024: ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ಕನ್ನಡತಿ, ಶಿರಸಿ ಮೂಲದ ಡಾ. ಶ್ರುತಿಗೆ ಕಿರೀಟ

Ms Universal Petite 2024: ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ.

VISTARANEWS.COM


on

Ms Universal Petite 2024
Koo

ವಾಷಿಂಗ್ಟನ್‌: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ, ಹುಬ್ಬಳಿಯ ವೈದ್ಯೆ ಶ್ರುತಿ ಹೆಗಡೆ (Shruti Hegde) ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಅಮೆರಿಕದಲ್ಲಿ ನಡೆದ ಮಿಸ್ ಯೂನಿವರ್ಸಲ್‌ ಪೆಟೀಟ್‌ (Ms Universal Petite 2024) ಎನ್ನುವ ಸೌಂದರ್ಯ ಸ್ಪರ್ಧೆಯಲ್ಲಿ ಶ್ರುತಿ 40 ದೇಶಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ವಿಶೇಷ ಎಂದರೆ‌ ಶ್ರುತಿ ಮಿಸ್ ಯೂನಿವರ್ಸಲ್‌ ಪೆಟೀಟ್‌ ಟೈಟಲ್‌ ಗೆದ್ದ ಮೊದ ಭಾರತೀಯ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಈ ಸ್ಪರ್ಧೆಯನ್ನು ಸುಮಾರು 15 ವರ್ಷಗಳಿಂದ ಅಮೆರಿಕದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಮೊದಲ ಬಾರಿಗೆ 2009ರಲ್ಲಿ ಈ ಸ್ಪರ್ಧೆ ನಡೆದಿತ್ತು.

ಶಿರಸಿ, ಹುಬ್ಬಳ್ಳಿ ಮೂಲ

ಶ್ರುತಿ ಅವರು ಶಿರಸಿ ಮತ್ತು ಹುಬ್ಬಳ್ಳಿ ನಂಟು ಹೊಂದಿದ್ದಾರೆ. ಶಿರಸಿ ತಾಲೂಕಿನ ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಶ್ರುತಿ ಸದ್ಯ ತಮ್ಮ ಪಾಲಕರಾದ ಕೃಷ್ಣ ಹೆಗಡೆ, ಕಮಲಾ ಅವರೊಂದಿಗೆ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. 2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ಕೀರೀಟ ತೊಟ್ಟುಕೊಂಡಿದ್ದ ಶ್ರುತಿ ಕಳೆದ ವರ್ಷ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದರು.

ಎಂ.ಡಿ. ಅಧ್ಯಯನ

ಹುಬ್ಬಳ್ಳಿಯಲ್ಲಿ ಎಂಬಿಬಿಎಸ್‌ ಓದಿರುವ ಶ್ರುತಿ ಅವರು ಪ್ರಸ್ತುತ ತುಮಕೂರಿನಲ್ಲಿ ಡರ್ಮಟಾಲಜಿಯಲ್ಲಿ ಎಂ.ಡಿ. ಮಾಡುತ್ತಿದ್ದಾರೆ. ಅವರು ಬಹುಮುಖ ಪ್ರತಿಭೆಯೂ ಹೌದು. ಭರತನಾಟ ಕಲಾವಿದೆಯಾಗಿ ವಿವಿಧ ಕಡೆ ಹಲವು ಪ್ರದರ್ಶನ ನೀಡಿದ್ದಾರೆ. ಜತೆಗೆ ಕನ್ನಡದ ಕೆಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ಈ ಬಾರಿಯ ಸ್ಪರ್ಧೆ ಅಮೆರಿಕದ ಫ್ಲೋರಿಡಾದಲ್ಲಿ ಜೂ. 6ರಿಂದ 10ರವರೆಗೆ ಆಯೋಜಿಸಲಾಗಿತ್ತು. ನ್ಯಾಷನಲ್‌ ಕಾಸ್ಟ್ಯೂಮ್‌ ರೌಂಡ್‌, ಪ್ರಶ್ನೋತ್ತರ ರೌಂಡ್‌ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.

ಏನಿದು ಮಿಸ್ ಯೂನಿವರ್ಸಲ್‌ ಪೆಟೀಟ್‌ ಸ್ಪರ್ಧೆ?

ಮಿಸ್ ಯೂನಿವರ್ಸಲ್‌ ಪೆಟೀಟ್‌ ಎನ್ನುವುದು ಕಡಿಮೆ ಎತ್ತರ ಹೊಂದಿರುವವರಿಗಾಗಿ ಇರುವ ಸ್ಪರ್ಧೆ. 5.2 ಅಡಿ ಎತ್ತರದ ಶ್ರುತಿ ಅವರಿಗೆ ಈ ಹಿಂದೆ ಮಿಸ್‌ ವರ್ಲ್ಡ್‌, ಮಿಸ್‌ ಯೂನಿವರ್ಸ್‌ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಆಗಿರಲಿಲ್ಲ. ಇದೀಗ ಅವರ ಕನಸು ನನಸಾಗಿದೆ. ಹಲವು ವರ್ಷಗಳಿಂದ ನಡೆಸುತ್ತಿದ್ದ ತಯಾರಿಗೆ ಕೊನೆಗೂ ಫಲ ಸಿಕ್ಕಿದೆ ಎಂದು ಅವರು ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Miss World 2024: ಸಿನಿ ಶೆಟ್ಟಿಗೆ ವಿಶ್ವ ಸುಂದರಿ ಕಿರೀಟ ಜಸ್ಟ್‌ ಮಿಸ್‌

ಕ್ರಿಸ್ಟಿನಾ ಪಿಸ್ಕೋವಾಗೆ ವಿಶ್ವ ಸುಂದರಿ ಕಿರೀಟ

ಮುಂಬೈ: ಜೆಕ್ ಗಣರಾಜ್ಯ ದೇಶದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ (Miss World 2024)ಯಾಗಿ ಹೊರಹೊಮ್ಮಿದ್ದಾರೆ. ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಾರ್ಚ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡರು. ಕ್ರಿಸ್ಟಿನಾ ಕಾನೂನು ಮತ್ತು ವ್ಯವಹಾರ ಆಡಳಿತ ಎರಡರಲ್ಲೂ ಪದವಿ ಅಧ್ಯಯನ ಮಾಡುತ್ತಿದ್ದಾರೆ ಮತ್ತು ರೂಪದರ್ಶಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಅವರು ಕ್ರಿಸ್ಟಿನಾ ಫೌಂಡೇಶನ್ ಅನ್ನು ಸ್ಥಾಪಿಸಿದ್ದಾರೆ ಎಂದು ಮಿಸ್ ವರ್ಲ್ಡ್ ಆರ್ಗನೈಸೇಶನ್ ತಿಳಿಸಿದೆ.

ವಿಶೇಷ ಎಂದರೆ ವಿಶ್ವ ಸುಂದರಿ ಸ್ಪರ್ಧೆಯ ಆತಿಥ್ಯವನ್ನು ಭಾರತ ಬರೋಬ್ಬರಿ 28 ವರ್ಷಗಳ ಬಳಿಕ ವಹಿಸಿತ್ತು. 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತವು ಕೊನೆಯದಾಗಿ ಆಯೋಜಿಸಿತ್ತು. ಬೆಂಗಳೂರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಗ್ರೀಸ್‌ನ 19ರ ಹರೆಯದ ಐರಿನ್ ಸ್ಕ್ಲಿವಾ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದರು.

Continue Reading

Latest

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video: ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ. ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo

ಸಾಮಾನ್ಯವಾಗಿ ಎಲ್ಲರೂ ಮಾತನಾಡುವಾಗ ಮುಂದೆ ಇರುವ ವ್ಯಕ್ತಿಗಳ ಕಣ್ಣುಗಳನ್ನು ನೋಡಿಕೊಂಡು ಮಾತನಾಡುತ್ತಾರೆ. ಆಗ ಅವರು ಯಾರ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಅರ್ಥವಾಗುತ್ತದೆ. ಆದರೆ ಕೆಲವು ಜನರು ಮಾತನಾಡುತ್ತಿರುವವರ ಕಣ್ಣುಗಳನ್ನು ನೋಡದೆ ಅತ್ತಿತ್ತ ನೋಡಿದರೆ ಮಾತನಾಡುವವರಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ ಎಂಬ ಭಾವನೆ ಮೂಡುತ್ತದೆ. ಇದು ಎಲ್ಲರಿಗೂ ಆಗುವುದು ಸಹಜ. ಇಂತಹದೊಂದು ವಿಚಾರದ ಬಗ್ಗೆ ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಚರ್ಚೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

Viral Video

ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ.

ಜರ್ತಾಜ್ ಗುಲ್ ಅವರು ಸಭೆಯಲ್ಲಿ ಮಾತನಾಡುವಾಗ “ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

Viral Video

ಪಾಕಿಸ್ತಾನ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಸಂಸತ್ತಿನ ಕಲಾಪಗಳಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೊದಲ್ಲಿ ಸಚಿವೆ “ನನ್ನ ಪಕ್ಷದ ನಾಯಕರು ನನಗೆ ಕಣ್ಣುಗಳನ್ನು ನೋಡುತ್ತಾ ಮಾತನಾಡಲು ಕಲಿಸಿದ್ದಾರೆ. ನೀವು ಈ ರೀತಿಯ ಕಣ್ಣಿನ ಸಂಪರ್ಕವನ್ನು ತಪ್ಪಿಸಿದರೆ ನಾನು ಮಾತನಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ನಿಮ್ಮ ಕನ್ನಡಕವನ್ನು ಧರಿಸಿ, ಸರ್” ಎಂದು ಜರ್ತಾಜ್ ಗುಲ್ ಸ್ಪೀಕರ್ ಅಯಾಜ್ ಸಾದಿಕ್ ಅವರಿಗೆ ಹೇಳಿದರು. ʼನಾನು ಒಬ್ಬಳು ಲೀಡರ್ʼ ನನಗೆ 1.5 ಲಕ್ಷ ಮತಗಳು ಬಂದಿವೆ. ನೀವು ನನ್ನ ಮಾತನ್ನು ಕೇಳದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ” ಎಂದು ಜರ್ತಾಜ್ ಗುಲ್ ಹೇಳಿದರು. ‌

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ʼಮಹಿಳೆಯೊಂದಿಗೆ ಕಣ್ಣಿನ ಸಂಪರ್ಕ ಮಾಡುವುದು ಒಳ್ಳೆಯದಲ್ಲ ಎಂದು ನಾನು ಕೇಳಿದ್ದೇನೆ. ಆದಕಾರಣ ಹೆಣ್ಣಿನ ಕಣ್ಣಿನ ಸಂಪರ್ಕವನ್ನು ಮಾಡುವುದಿಲ್ಲʼ ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮರು ಉತ್ತರಿಸಿದ ಸಚಿವೆ, ಈ ರೀತಿಯಲ್ಲಿ 52% ಮಹಿಳೆಯರನ್ನು ನೀವು ನಿರ್ಲಕ್ಷಿಸಿದರೆ, ಆಯ್ದ ಜನರು ಮಾತ್ರ ಇಲ್ಲಿಗೆ ಬರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಜರ್ತಾಜ್ ಗುಲ್ 2024ರಲ್ಲಿ ಡೇರಾ ಘಾಜಿಯಿಂದ ಮರು ಆಯ್ಕೆಯಾದವರು. ಗುಲ್ ಪಾಕಿಸ್ತಾನದ ರಾಜಕಾರಣಿಯಾಗಿದ್ದು, ಇಮ್ರಾನ್ ಖಾನ್ ಅವರ ಸಂಪುಟದಲ್ಲಿ ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಅಕ್ಟೋಬರ್ 5 ,2018ರಿಂದ ಏಪ್ರಿಲ್ 10, 2022ರವರೆಗೆ ಸೇವೆ ಸಲ್ಲಿಸಿದರು.

Continue Reading

ಕ್ರೈಂ

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

ಎರಡು ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು (Physical Assualt) ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಆನ್‌ಲೈನ್ ಚಾಟ್‌ರೂಮ್ ನಲ್ಲಿ ಹುಡುಕುತ್ತಿದ್ದ ಕ್ರಾಲಿ ಮತ್ತು ಟ್ರಿಪ್ ದಂಪತಿಯನ್ನು ಅಮೆರಿಕದಲ್ಲಿ ಜಾರ್ಜಿಯಾದ ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Physical Assault
Koo

ಜಾರ್ಜಿಯಾ: ಎರಡು ವರ್ಷದ ಮಗಳನ್ನು ಲೈಂಗಿಕ ಚಟುವಟಿಕೆಗಾಗಿ (Physical Assualt) ಮಾರಾಟ ಮಾಡಲು ಯತ್ನಿಸಿದ ದುಷ್ಟ ದಂಪತಿಯನ್ನು ಅಮೆರಿಕದಲ್ಲಿ (america) ಜಾರ್ಜಿಯಾದ (Georgia) ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ. ಆಶ್ಲೀ ಕ್ರಾಲಿ (26) ಜೇಮ್ಸ್ ಟ್ರಿಪ್ (29) ಬಂಧಿತರು.

ಕ್ರಾಲಿ ಮತ್ತು ಟ್ರಿಪ್ ತಮ್ಮ 2 ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಹುಡುಕುತ್ತಿದ್ದರು. ಇದಕ್ಕಾಗಿ ಆನ್‌ಲೈನ್ ಚಾಟ್‌ರೂಮ್ ಅನ್ನು ಬಳಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಕ್ರಾಲಿ ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಅದನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಇದರಲ್ಲಿ ಕೆಲವು ವಿಡಿಯೋಗಳು ಅಂಬೆಗಾಲಿಡುವ ಮಕ್ಕಳು ಸೇರಿದಂತೆ ಅವರ ಮಕ್ಕಳನ್ನು ಒಳಗೊಂಡಿವೆ. ಟ್ರಿಪ್ ತನ್ನ ಅಪ್ರಾಪ್ತ ವಯಸ್ಸಿನ ಸಂಬಂಧಿಗಳೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರಾಲಿಯ ಅನುಮತಿಯನ್ನೂ ಪಡೆಯುತ್ತಿದ್ದನು.

ಇದನ್ನೂ ಓದಿ: Physical assualt : ಅಣ್ಣ ಕರೀತಾನೆ ಎಂದು ಹೇಳಿ ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ; ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಇವರ ಆರೈಕೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಅವರ ಮನೆಯಿಂದ ಅಧಿಕಾರಿಗಳು ತ್ವರಿತವಾಗಿ ರಕ್ಷಣೆ ಮಾಡಿದ್ದಾರೆ. ಕ್ರಾಲಿ ವಿರುದ್ಧ ಮಕ್ಕಳ ಮೇಲೆ ಕಿರುಕುಳ ಮತ್ತು ಕಂಪ್ಯೂಟರ್ ಅಥವಾ ಎಲೆಕ್ಟ್ರಾನಿಕ್ ಪೋರ್ನೋಗ್ರಫಿ ಮತ್ತು 2007ರ ಮಕ್ಕಳ ಶೋಷಣೆ ಮತ್ತು ತಡೆಗಟ್ಟುವಿಕೆ ಕಾಯಿದೆಯನ್ನು ಉಲ್ಲಂಘಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಟ್ರಿಪ್ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಸದ್ಯ ಇಬ್ಬರನ್ನೂ ಕೊಲಂಬಿಯಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ. ತನಿಖೆ ಮುಂದುವರಿಸಲಾಗಿದ್ದು ಹೆಚ್ಚುವರಿ ಆರೋಪಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ: ಬಾಲಕಿ ಸಾವು

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವ ಉಂಟಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading
Advertisement
Akhilesh Yadav
ದೇಶ1 min ago

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Viral Video
Latest4 mins ago

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Bike Accident
ಕರ್ನಾಟಕ6 mins ago

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Heart Attack
ಕ್ರೀಡೆ9 mins ago

Heart Attack: ಬ್ಯಾಡ್ಮಿಂಟನ್​ ಆಡುತ್ತಿದ್ದಾಗಲೇ ಕುಸಿದು ಬಿದ್ದು  ಸಾವನ್ನಪ್ಪಿದ 17 ವರ್ಷದ ಶಟ್ಲರ್‌

Actor Kamal Haasan
Latest9 mins ago

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Google Map
ವೈರಲ್ ನ್ಯೂಸ್13 mins ago

Google Map: ಗೂಗಲ್‌ ಮ್ಯಾಪ್‌ ನಂಬಿ ಹೊರಟವರಿಗೆ ಕಾದಿತ್ತು ಬಿಗ್‌ ಶಾಕ್‌; 11ಗಂಟೆ ದಟ್ಟ ಕಾಡಿನಲ್ಲೇ ಸಿಲುಕಿದ ವಿದ್ಯಾರ್ಥಿಗಳು

karnataka cm mallikarjun kharge siddaramiah dk shivakumar
ಪ್ರಮುಖ ಸುದ್ದಿ33 mins ago

Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

Student death
ಚಿತ್ರದುರ್ಗ45 mins ago

Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

MUDA site Cm Siddaramaiah says his wife was given MUDA site during BJP regimescandal
ಕರ್ನಾಟಕ1 hour ago

MUDA site scandal: ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

Highest Collection Movie
ಸಿನಿಮಾ1 hour ago

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ21 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌