Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ - Vistara News

ವೈರಲ್ ನ್ಯೂಸ್

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Viral Video: ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಘಾಲಯ: ಕೋಲಾರದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಜಮೀನು ವಿವಾದದ ಹಿನ್ನೆಲೆ ಮಹಿಳೆಯನ್ನು ಗ್ರಾಮಸ್ಥರು ಸೇರಿ ಥಳಿಸಿರುವ ಘಟನೆ ನಡೆದಿತ್ತು. ಇಂತಹದ್ದೇ ಒಂದು ಘಟನೆ ಮೇಘಾಲಯದಲ್ಲಿ ನಡೆದಿದೆ. ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದಲ್ಲಿ ಮಹಿಳೆಯನ್ನು ನಾಲ್ವರು ಸೇರಿದ ದೊಣ್ಣೆಯಿಂದ ಥಳಿಸಿ, ನೆಲದಲ್ಲಿ ಎಳೆದಾಡಿದ ಘಟನೆ ಮೇಘಾಲಯದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಪಶ್ಚಿಮ ಗರೋ ಹಿಲ್ಸ್‌ ಜಿಲ್ಲೆಯ ದಡೆಂಗರೆ ಗ್ರಾಮದ ಟೆಕ್ಸಾಗ್ರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ವ್ಯಕ್ತಿಗಳು ಸೇರಿ ಮಹಿಳೆಯನ್ನು ಕೋಲಿನಿಂದ ಥಳಿಸಿ ಆಕೆಯ ಕೂದಲು ಹಿಡಿದು ನೆಲದಲ್ಲಿ ಎಳೆದಾಡಿದ್ದಾರೆ. ಅದೂ ಅಲ್ಲದೇ ಆಕೆಯನ್ನು ನೆಲಕ್ಕೆ ಬಡಿದು ಕಾಲಿನಿಂದ ಒದ್ದಿದ್ದಾರೆ. ಸಾರ್ವಜನಿಕವಾಗಿ ಇಂತಹ ಕ್ರೌರ್ಯ ನಡೆಯುತ್ತಿದ್ದರೂ ಸ್ಥಳದಲ್ಲಿದ್ದ ಜನ ಆಕೆಯ ಸಹಾಯಕ್ಕೆ ಬರಲಿಲ್ಲ. ಹಿರಿಯ ವ್ಯಕ್ತಿ ಮತ್ತು ಮಕ್ಕಳು ಅಲ್ಲಿ ಇರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಘಟನೆ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಒಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದ್ದಾರೆ. ಏತನ್ಮಧ್ಯೆ, ಮಹಿಳಾ ಸಬಲೀಕರಣದ ಮೇಘಾಲಯ ಅಸೆಂಬ್ಲಿ ಸಮಿತಿಯ ಅಧ್ಯಕ್ಷೆಯಾಗಿರುವ ಸುಟ್ಂಗಾ ಸೈಪುಂಗ್ ಶಾಸಕಿ ಸಾಂತಾ ಮೇರಿ ಶೈಲ್ಲಾ ಅವರು ಪೊಲೀಸರಿಂದ ವರದಿಯನ್ನು ಕೇಳಿದ್ದಾರೆ ಮತ್ತು ಮಹಿಳೆಯರ ವಿರುದ್ಧ ಯಾವುದೇ ರೀತಿಯ ಅಪರಾಧ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಕೇಳುವುದಾಗಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಜಮೀನು ವಿವಾದ ಹಿನ್ನೆಲೆಯಲ್ಲಿ ಒಂಟಿ ಮಹಿಳೆಯನ್ನು ಸಂಬಂಧಿಕರು ಥಳಿಸಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತೊಂಗಲಕುಪ್ಪ ಗ್ರಾಮದಲ್ಲಿ ಘಟನೆ ನಡೆದಿತ್ತು. ಆಶಾ ಎಂಬಾಕೆಯನ್ನು ಐದಾರು ಮಂದಿ ಸೇರಿ ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್‌ ಸದಸ್ಯ ಶ್ರೀನಿವಾಸ್‌ ಸೇರಿ ಆಶಾಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿದ್ದಾರೆ.

ಪತಿಯನ್ನು ಕಳೆದುಕೊಂಡು ಒಂಟಿಯಾಗಿರುವ ಆಶಾ ನಿನ್ನೆ ಗುರುವಾರ ಸಂಜೆ ಆಸ್ತಿ ಪಾಲು ಕೇಳಲು ಹೋದಾಗ ಸಂಬಂಧಿಕರ ಜತೆಗೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಲಾಟೆ ಶುರುವಾಗಿದ್ದು, ನೋಡನೋಡುತ್ತಿದ್ದಂತೆ ಎಲ್ಲ ಸಂಬಂಧಿಕರು ಒಂಟಿಯಾಗಿದ್ದ ಆಶಾ ಮೇಲೆ ಎರಗಿದ್ದಾರೆ.

ಆಶಾಳನ್ನು ನೆಲಕ್ಕುರಳಿಸಿ ಸಿಕ್ಕ ಸಿಕ್ಕ ವಸ್ತುಗಳಿಂದ ಐದಾರು ವ್ಯಕ್ತಿಗಳು ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದೆಲ್ಲವೂ ಅಲ್ಲೆ ಇದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ. ಒಂಟಿ ಹೆಣ್ಣಿನ ಮೇಲೆ ಕ್ರೌರ್ಯ ಮೆರೆದ ಪುಂಡರ ವಿರುದ್ಧ ಆಕ್ರೋಶಗಳು ಕೇಳಿ ಬಂದಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Viral Video: ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡುಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ.ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಮುಂದೇನಾಯಿತು? ಈ ಸುದ್ದಿ ಓದಿ.

VISTARANEWS.COM


on

Koo

ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ಹೆಚ್ಚು ನಡೆಯುತ್ತಿದ್ದು, ಹಾಡಹಗಲಿನಲ್ಲೇ ಸಾರ್ವಜನಿಕರು ಓಡಾಡುವ ಸ್ಥಳಗಳಲ್ಲೇ ಕಳ್ಳರು ದರೋಡೆ ಶುರು ಮಾಡಿದ್ದಾರೆ. ಇದೀಗ ಇಂತಹದೊಂದು ಘಟನೆ ರಾಜಸ್ಥಾನದ ಉದಯಪುರ ಬೀದಿಯಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ (Viral Video )ಆಗಿದೆ.

ಜೂನ್ 28ರಂದು ಪತಿಗೆ ಟಿಫಿನ್ ನೀಡಿ ಹಿಂದಿರುಗುತ್ತಿದ್ದ ಮಹಿಳೆಯನ್ನು ರಾಜಸ್ಥಾನದ ಉದಯಪುರ ಬೀದಿಯಲ್ಲಿ ಹಾಡಹಗಲೇ ಸಂಮೋಹನಗೊಳಿಸಿ ಆಕೆಯಿಂದ 4.5 ಲಕ್ಷ ಮೌಲ್ಯದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಲಾಗಿದೆ. ಸಂತ್ರಸ್ತೆಯನ್ನು ರೇಖಾ ಜೈನ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆ ದೆಹಲಿ ಗೇಟ್ ಜಂಕ್ಷನ್ ಬಳಿಯ ವಾಚ್‌ಶಾಪ್ ಹೊರಗಿನ ಬೀದಿಯಲ್ಲಿ ನಡೆದುಹೋಗುವಾಗ ಇಬ್ಬರು ವ್ಯಕ್ತಿಗಳು ಅವಳನ್ನು ತಡೆದರು. ಅವರು ಆಕೆಯ ಬಳಿ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದರೂ ಮತ್ತು ರೇಖಾ ಅದಕ್ಕೆ ಉತ್ತರಿಸುತ್ತಿದ್ದರು. ನಂತರ ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅವರಿಗೆ ನೀಡಿದಳು.

ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು. ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ ಇದ್ದ ಚಿನ್ನ, ಮೊಬೈಲ್ ಫೋನ್ ಮತ್ತು ಹಣವನ್ನು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ರೇಖಾ ಪ್ರಜ್ಞೆ ಬಂದ ಬಳಿಕ ತನ್ನ ಪತಿಗೆ ವಿಚಾರ ತಿಳಿಸಿದ್ದು, ಇಬ್ಬರು ಸೇರಿ ನಗರದ ಸೂರಜ್ಪೋಲ್ ಪೊಲೀಸ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ರೇಖಾ, ಆರೋಪಿಗಳು ತಾನು ನಂಬಿದ ದೇವರ ಬಗ್ಗೆ ಕೇಳಿದ್ದು, ಅದಕ್ಕೆ ಆಕೆ ಭಗವಾನ್ ಮಹಾವೀರ ಸ್ವಾಮಿಯ ಬಗ್ಗೆ ಪ್ರಸ್ತಾಪಿಸಿದಾಗ, ಆಕೆಯ ಬಳಿ ಹಣ ಕೇಳಿದ್ದಾರೆ. ಅವಳು ತನ್ನ ಪರ್ಸ್‌ನಿಂದ 50 ರೂಪಾಯಿಗಳನ್ನು ತೆಗೆದುಕೊಂಡು ಅದನ್ನು ಧಾರ್ಮಿಕ ಕಾರಣಕ್ಕಾಗಿ ಎಂದು ಭಾವಿಸಿ ಅವರಿಗೆ ನೀಡಿದಳು. ದುಷ್ಕರ್ಮಿಗಳಲ್ಲಿ ಒಬ್ಬರು ಆಕೆಯ ಕೈಯಿಂದ 50 ರೂಪಾಯಿ ನೋಟನ್ನು ತೆಗೆದುಕೊಂಡರು, ಮತ್ತು ಇನ್ನೊಬ್ಬ ದುಷ್ಕರ್ಮಿ ನೋಟನ್ನು ಮತ್ತೆ ಅವಳ ಕೈಯಲ್ಲಿ ಇಟ್ಟನು.

ಇದನ್ನೂ ಓದಿ: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಕೆಲವೇ ಸೆಕೆಂಡುಗಳಲ್ಲಿ, ರೇಖಾ ಪ್ರಜ್ಞೆ ಕಳೆದುಕೊಂಡರು ಮತ್ತು ಅವರ ಸೂಚನೆಗಳನ್ನು ಅನುಸರಿಸಿದರು ಎಂಬುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿವನ್ನು ಪರೀಕ್ಷಿಸಿದಾಗ ರೇಖಾ ಪೊಲೀಸರಿಗೆ ನೀಡಿದ ವಿವರಗಳು ಸಿಸಿಟಿವಿ ದೃಶ್ಯಾವಳಿಗಳಿಂದ ದೃಢಪಟ್ಟಿವೆ. ಪೊಲೀಸರು ಈಗ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Continue Reading

ವೈರಲ್ ನ್ಯೂಸ್

CM Siddaramaiah: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

CM Siddaramaiah: ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯನವರು ಕ್ರಿಕೆಟ್‌ ನೋಡಿದ್ದ ವಿಡಿಯೊ ವೈರಲ್‌ ಆಗಿದ್ದು, ಮುಖ್ಯಮಂತ್ರಿಗಳ ಕ್ರಿಕೆಟ್‌ ಪ್ರೇಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

CM Siddaramaiah
Koo

ಬೆಂಗಳೂರು: ಟಿ20 ವಿಶ್ವಕಪ್​ 2024 ಚಾಂಪಿಯನ್‌ ಆಗಿ ಹೊರ ಹೊಮ್ಮಿದ ಟೀಮ್‌ ಇಂಡಿಯಾಗೆ (T20 World Cup 2024) ಅಭಿನಂದನೆಗಳ ಪ್ರವಾಹವೇ ಹರಿದು ಬರುತ್ತಿದೆ. ಈ ನಡುವೆ ಜೂನ್‌ 29ರಂದು ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡದ ನಡುವಿನ ಫೈನಲ್‌ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಏರ್‌ಪೋರ್ಟ್‌ನಲ್ಲೇ ವೀಕ್ಷಿಸಿದ್ದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್‌ ಆಗುತ್ತಿದ್ದು, ಸಿಎಂ ಕ್ರಿಕೆಟ್‌ ಪ್ರೀತಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ವಿಡಿಯೊವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದು, 1.3 ಲಕ್ಷ ಮಂದಿ ಲೈಕ್ ಮಾಡಿದ್ದು, ಸಾವಿರಾರು ಮಂದಿ ಕಮೆಂಟ್‌ ಮಾಡಿದ್ದಾರೆ.

ಶನಿವಾರ ಟಿ20 ವಿಶ್ವಕಪ್‌ನ ಫೈನಲ್‌ ನಡೆದು, ಭಾರತ ತಂಡ ರೋಚಕ ಜಯದೊಂದಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಪ್ರತಿ ಎಸೆತವೂ ಪಂದ್ಯದ ಗತಿ ಬದಲಿಸುವಂತಿದ್ದುದ್ದರಿಂದ ಇಡೀ ದೇಶವೇ ಫೈನಲ್‌ ಪಂದ್ಯವನ್ನು ನಿಬ್ಬೆರಗಾಗಿ ವೀಕ್ಷಿಸಿದೆ. ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, 9.30ರ ವಿಮಾನ ಹತ್ತಿ ಬೆಂಗಳೂರಿಗೆ ವಾಪಾಸಾಗಬೇಕಿತ್ತು. ಇದೆಲ್ಲದರ ನಡುವೆ ಅವರಿಗೆ ಸಿಕ್ಕಿದ್ದು ಕೆಲವೇ ಕೆಲವು ನಿಮಿಷಗಳು ಮಾತ್ರ, ಅದೇ ಅಲ್ಪ ಬಿಡುವಿನ ಸಮಯದಲ್ಲಿ ವಿಮಾನದ ಬಾಗಿಲಲ್ಲಿ ನಿಂತು ವಿಶ್ವಕಪ್‌ ಟಿ20 ಫೈನಲ್‌ ಪಂದ್ಯ ವೀಕ್ಷಿಸಿ ಅದನ್ನು ತಮ್ಮ ಸಾಮಾಜಿಕ ಜಾಲತಾಣವಾದ ಫೇಸ್‌ ಬುಕ್‌ ನಲ್ಲಿ ಹಂಚಿಕೊಂಡಿದ್ದರು. ಅದರ ಜೊತೆಗೆ ಭಾರತವು ಸಂಘಟಿತ ಪ್ರದರ್ಶನದ ಮೂಲಕ ವಿಶ್ವಕಪ್‌ ಗೆದ್ದು ಬರಲಿ ಎಂದು ಮನದುಂಬಿ ಹಾರೈಸಿದ್ದರು.

ಈ ರೀತಿ ಸಿದ್ದರಾಮಯ್ಯನವರು ಶೇರ್‌ ಮಾಡಿದ್ದ ವಿಡಿಯೊ ಇದೀಗ ಜಾಲತಾಣದಲ್ಲಿ ಭಾರೀ ಹವಾ ಸೃಷ್ಟಿಸಿದೆ. ಈವರೆಗೆ ವಿಡಿಯೋವನ್ನು 70 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ, 1,30,000 ಮಂದಿ ಸಿದ್ದರಾಮಯ್ಯನವರ ಕ್ರಿಕೆಟ್‌ ಪ್ರೇಮಕ್ಕೆ ಲೈಕ್‌ ಒತ್ತಿ ಮೆಚ್ಚಿದ್ದಾರೆ. ಸಾವಿರಾರು ಮಂದಿ ಕಮೆಂಟ್‌ ಗಳ ಸುರಿಮಳೆಗೈದು ನಿಮ್ಮ ಕ್ರೀಡಾ ಪ್ರೀತಿಗೆ ನಾವು ಅಭಿಮಾನಿಯಾಗಿದ್ದೇವೆಂದು ಕೊಂಡಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದ ರಾಜಕಾರಣಿಯೊಬ್ಬರ ಸಾಮಾಜಿಕ ಜಾಲತಾಣದಲ್ಲಿ ಹಾಕಲ್ಪಟ್ಟ ಯಾವೊಂದು ವೀಡಿಯೋ ಕೂಡ ಇಷ್ಟು ವೈರಲ್‌ ಆಗಿಲ್ಲ ಎಂಬುದು ಗಮನಾರ್ಹ.

ಇದನ್ನೂ ಓದಿ | ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

ಆಗಾಗ್ಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್‌, ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳಿಗೆ ಹೋಗಿ ಪಂದ್ಯ ವೀಕ್ಷಿಸಿ ಆಟಗಾರರಿಗೆ ಚಪ್ಪಾಳೆಯ ಮೂಲಕ ಹುರಿದುಂಬಿಸುತ್ತಿದ್ದ ಸಿದ್ದರಾಮಯ್ಯನವರು ಬಿಡುವಿರದ ದಿನಚರಿಯ ಕಾರಣಕ್ಕೆ ವಿಮಾನದ ಬಾಗಿಲಲ್ಲಿ ನಿಂತು ಕ್ರಿಕೆಟ್‌ ವೀಕ್ಷಿಸಿದ್ದಕ್ಕೆ ಕರುನಾಡು ಕೊಂಡಾಡುತ್ತಿದೆ.
ಒಂದೆಡೆ ಭಾರತ ವಿಶ್ವಕಪ್‌ ಗೆದ್ದಿದೆ, ಇನ್ನೊಂದೆಡೆ ಸಿದ್ದರಾಮಯ್ಯನವರು ನಾಡಿನ ಕ್ರಿಕೆಟ್‌ ಪ್ರಿಯರ ಮನ ಗೆದ್ದಿದ್ದಾರೆ.

Continue Reading

Latest

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Viral News: ಈಗ ಹಣ ಮಾಡುವುದಕ್ಕೆ ಜನ ಯಾವುದೆಲ್ಲಾ ದಾರಿ ಹಿಡಿಯುತ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆಯಂತೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

VISTARANEWS.COM


on

Viral News
Koo

ಪುರಾತನ ಕಾಲದಲ್ಲಿ ಮಹಿಳೆಯರಿಗೆ ಅಪಾರ ಗೌರವ ನೀಡುತ್ತಿದ್ದರು. ಪರಸ್ತ್ರೀಯನ್ನು ಮುಟ್ಟಲೂ ಹೆದರುತ್ತಿದ್ದರು ಎಂಬ ಮಾತಿತ್ತು. ಆದರೆ ಇಂದಿನ ಕಾಲದಲ್ಲಿ ಮಹಿಳೆಯರ ದೇಹವನ್ನೇ ಬಳಸಿಕೊಂಡು ವ್ಯಾಪಾರ ಮಾಡಲು ಶುರುಮಾಡಿದ್ದಾರೆ. ಈಗ ಮಹಿಳೆಯರನ್ನು ನಗ್ನವಾಗಿ ಬಳಸಿಕೊಂಡು ವ್ಯಾಪಾರ ಮಾಡುವ ಪ್ರವೃತ್ತಿ ರೆಸ್ಟೋರೆಂಟ್‌ಗಳಲ್ಲಿಯೂ ಬಂದಿದೆ. ಗ್ರಾಹಕರನ್ನು ಆಕರ್ಷಿಸಲು ಕ್ಲಬ್ ರೆಸ್ಟೋರೆಂಟ್‌ಗಳು ಮಹಿಳೆಯರನ್ನು ಬೆತ್ತಲೆ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ ವೈರಲ್ (Viral News) ಆಗಿದೆ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬ್ಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

Viral News

ಹಾಗೇ ಯುವತಿಯ ಬೆತ್ತಲೆ ದೇಹದ ಪ್ಲೇಟ್‌ಗೆ ‘ಸುಶಿ ಬೋಟ್’ ಎಂದು ಕರೆಯಲಾಗುತ್ತದೆ. ಈ ಭೋಜನಕ್ಕೆ ಭಾರೀ ಬೇಡಿಕೆ ಇದ್ದು, ಇದನ್ನು ಪಡೆಯಲು ಗ್ರಾಹಕರು ಮೊದಲೇ ಬುಕ್ ಮಾಡಬೇಕು. ನಂತರ ಅವರು ತಿಳಿಸಿದ ದಿನ ಕ್ಲಬ್ ಗೆ ಹೋದರೆ ಸಾಕಂತೆ. ಅಲ್ಲಿ ಮೊದಲು ಟೇಬಲ್ ಮೇಲೆ ಬೆತ್ತಲೆಯಾದ ಯುವತಿ ಬಂದು ಮಲಗುತ್ತಾಳೆ ನಂತರ ಅವಳ ಮೇಮೇಲೆ ವಿವಿಧ ರೀತಿಯ ಸಲಾಡ್, ಫುಡ್ ಅನ್ನು ಇಡಲಾಗುತ್ತದೆ.

Viral News

ಇದಕ್ಕೆ ಸಂಬಂಧಪಟ್ಟ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ. ಈ ಪ್ರಕರಣವು ಆನ್‌ಲೈನ್‌ನಲ್ಲಿ ಸಾಕಷ್ಟು ಟೀಕೆಗಳನ್ನು ಹುಟ್ಟುಹಾಕಿದೆ. ಅದರ ನಂತರ ಸ್ಥಳೀಯ ಅಧಿಕಾರಿಗಳು ಈ ಕ್ಲಬ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಬಂದಿಲ್ಲ, ಆದರೂ ಈ ಬಗ್ಗೆ ತನಿಖೆ ಮಾಡುವುದಾಗಿ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

ವರದಿ ಪ್ರಕಾರ, ಈ ‘ನ್ಯೂಟೈಮೊರಿ’ ಭೋಜನಾ ವ್ಯವಸ್ಥೆ 1980ರ ದಶಕದಲ್ಲಿ ಜಪಾನ್‌ನಲ್ಲಿ ಹುಟ್ಟಿಕೊಂಡಿತು. ಪುರುಷರ ದೇಹದ ಮೇಲೆ ಆಹಾರವನ್ನು ನೀಡುವುದಕ್ಕೆ ‘ನ್ಯೂಟೈಮೊರಿ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಟೀಕೆಗಳನ್ನು ಕೇಳಿಬಂದರೂ ಕೂಡ ಇದು ಇನ್ನೂ ಅನೇಕ ಸ್ಥಳಗಳಲ್ಲಿ ಆಚರಣೆಯಲ್ಲಿದೆ ಎನ್ನಲಾಗಿದೆ. ಆದರೆ ಅತ್ಯಂತ ದುಬಾರಿಯಾದ್ದರಿಂದ ಸಾರ್ವಜನಿಕ ಆರೋಗ್ಯ ಕಾಳಜಿಗಳು ಮತ್ತು ನೈತಿಕ ಸಮಸ್ಯೆಗಳನ್ನು ಉಲ್ಲೇಖಿಸಿ ಚೀನಾ ಸರ್ಕಾರವು 2005 ರಲ್ಲಿ ‘ನ್ಯೂಟೈಮೊರಿ’ಯನ್ನು ನಿಷೇಧಿಸಿತು ಎನ್ನಲಾಗಿದೆ.

Continue Reading

Latest

Viral Video: 1 ನಿಮಿಷದಲ್ಲಿ 35 ಪುಲ್-ಅಪ್! ಮೇಜರ್ ಜನರಲ್ ವಿಡಿಯೊ ಫುಲ್ ವೈರಲ್

Viral Video: ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo

ಮುಂಬೈ : ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಫಿಟ್‌ನೆಸ್ ಮತ್ತು ಕಠಿಣ ವ್ಯಾಯಾಮಗಳನ್ನು ಮಾಡುವ ಅವರ ಸಾಮರ್ಥ್ಯದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಅಕ್ಟೋಬರ್ 2022 ರಲ್ಲಿ ಜರ್ಮನ್ ಪಬ್ಲಿಕೇಶನ್ ಸ್ಟ್ಯಾಟಿಸ್ಟಾ ಭಾರತೀಯ ಸೇನೆಯನ್ನು ವಿಶ್ವದ ಅತ್ಯುತ್ತಮ ಹೋರಾಟದ ಪಡೆ ಎಂದು ಹೊಗಳಿದೆ. ಹಾಗಾಗಿ ತಮಗೆ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್ ಎಂದು ಬರೆದಿದ್ದಾರೆ.

ಈ ವಿಡಿಯೊದಲ್ಲಿ ಮೇಜರ್ ಜನರಲ್ ಜೋಶಿ ಅವರು ಇತರ ಸೇನಾ ಸಿಬ್ಬಂದಿಗಳ ಜೊತೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಆ ವೇಳೆ ಅವರು ನಿರಂತರವಾಗಿ ಪುಲ್-ಅಪ್‌ಗಳನ್ನು ಮಾಡುತ್ತಿರುವುದನ್ನು ಕಾಣಬಹುದು. ಅವರ ವರ್ಕೌಟ್ ಮುಗಿದ ಬಳಿಕ ಅಲ್ಲಿರುವ ಪ್ರತಿಯೊಬ್ಬರೂ ಅವರ ದೈಹಿಕ ಸಾಮರ್ಥ್ಯವನ್ನು ಕಂಡು ಹೊಗಳಿದ್ದಾರೆ.

Viral Video

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಈ ವಿಡಿಯೊವನ್ನು ಜೂನ್ 29ರಂದು ಪೋಸ್ಟ್ ಮಾಡಿದ್ದು, ಈ ವಿಡಿಯೊ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್‌ಗಳು ಮತ್ತು 4,000 ಕ್ಕೂ ಹೆಚ್ಚು ಲೈಕ್ಸ್‌ಗಳು ಸಿಕ್ಕಿವೆ .ಇದಕ್ಕ ಹಲವರು ಕಾಮೆಂಟ್ ಮಾಡಿದ್ದಾರೆ. ಜಿಮ್‌ನಲ್ಲಿ 25 ಪುಲ್-ಅಪ್‌ಗಳನ್ನು ಮಾಡಿದ ನಂತರವೂ ಅವರು ಸಮವಸ್ತ್ರದ ಶರ್ಟ್ ಅನ್ನು ಸರಿಯಾಗಿ ಧರಿಸಿದ್ದಾರೆ ಎಂದು ಅವರ ಶಿಸ್ತಿನ ಬಗ್ಗೆ ಒಬ್ಬ ವ್ಯಕ್ತಿ ಬರೆದಿದ್ದಾರೆ. ಇನ್ನೊಬ್ಬರು ಅವರನ್ನು ರಿಯಲ್ ಹೀರೊ ಎಂದು ಹೊಗಳಿದ್ದಾರೆ. ಅತ್ಯಂತ ಸವಾಲಿನ ಪರಿಸ್ಥಿತಿಗಳನ್ನು ನಗುತ್ತಾ ಹೆದರದೆ ಎದುರಿಸುವ ವ್ಯಕ್ತಿ ಅವರು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಹಾಗೇ ಇನ್ನೊಬ್ಬರು ಮೇಜರ್ ಜನರಲ್‌ಗೆ ಪುಲ್-ಅಪ್ ಗಳು ಮತ್ತು ಫಿಟ್ನೆಸ್ ಬಗ್ಗೆ ಇರುವ ಉತ್ಸಾಹದ ಬಗ್ಗೆ ತಿಳಿಸಿದ್ದಾರೆ.

Continue Reading
Advertisement
Latest1 min ago

Viral Video: ರಸ್ತೆ ಮೇಲೆಯೇ ಮಹಿಳೆಯ ವಶೀಕರಣ! 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Kalki 2898 AD
ಸಿನಿಮಾ2 mins ago

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Anant Ambani
ಫ್ಯಾಷನ್8 mins ago

Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Team India Coach
ಕ್ರೀಡೆ14 mins ago

Team India Coach: ಟೀಮ್​ ಇಂಡಿಯಾ ಕೋಚ್​ ಆಯ್ಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಜಯ್‌ ಶಾ

kannada marathi row
ಪ್ರಮುಖ ಸುದ್ದಿ30 mins ago

Kannada- Marathi Row: ಮಹಾರಾಷ್ಟ್ರ ಸದನದಲ್ಲಿ ಕನ್ನಡ ಪರ ದನಿ, ಗಡಿಯಲ್ಲಿ ಮರಾಠಿ ದಬ್ಬಾಳಿಕೆಗೆ ಪ್ರತಿಭಟನೆ

Food for Concentration
ಆರೋಗ್ಯ44 mins ago

Food for Concentration: ಈ ಆಹಾರಗಳ ಸೇವನೆಯಿಂದ ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತವಾಗಬಹುದು!

Grand Marriage
Latest44 mins ago

Grand Marriage: ಭಾರತದ ಶ್ರೀಮಂತ ಕುಟುಂಬಗಳ ಅತ್ಯಂತ ಅದ್ಧೂರಿ ಮದುವೆ ಯಾರದು? ಪಟ್ಟಿ ಇಲ್ಲಿದೆ

ರಾಜಮಾರ್ಗ ಅಂಕಣ virat kohli rohit sharma
ಅಂಕಣ1 hour ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ1 hour ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ2 hours ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌