Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್ - Vistara News

ಕರ್ನಾಟಕ

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Lakshmi Hebbalkar visit the Women and Children Nutritious Food Manufacturing Unit at Yaragatti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯರಗಟ್ಟಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್‌ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು, ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಸಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್‌ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಈ ಸಂದರ್ಭದಲ್ಲಿ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

ನನ್ನ ದೇಶ ನನ್ನ ದನಿ ಅಂಕಣ: ಐವತ್ತು ವರ್ಷಗಳ ಹಿಂದೆಯೇ ನಿರಂಜನರು “ಕಿರಿಯರ ವಿಶ್ವಕೋಶ” ತಂದರು. ಇಂದಿನಂತೆ ಕಂಪ್ಯೂಟರ್, ಅಂತರಜಾಲ, ಫೋನ್, ಇತ್ಯಾದಿ ಇಲ್ಲದ ಆ ಕಾಲಘಟ್ಟದಲ್ಲಿ ನಿರಂಜನ ಅವರ ಸಂಗ್ರಹ, ಸಂಪಾದನೆ ಮತ್ತು ಪ್ರಸ್ತಾವನೆಗಳು ನಿಜವಾಗಿಯೂ ಸಾಹಸವೇ. ವಿವಿಧ ಪ್ರವರ್ಗಗಳ ಅವರ ಕೃತಿಗಳನ್ನು, ಸಂಪಾದಿತ ಕೃತಿಗಳನ್ನು ನೋಡುವಾಗ, ನಿರಂಜನರು ಅದೆಂತಹ ಅದ್ಭುತ ಸಾಧಕರು, ಎನಿಸಿ ಗೌರವ ಇನ್ನಷ್ಟು ಹೆಚ್ಚಾಗುತ್ತದೆ.

VISTARANEWS.COM


on

niranjana ನನ್ನ ದೇಶ ನನ್ನ ದನಿ ಅಂಕಣ
Koo

ನಿರಂಜನ ಅವರ ಜನ್ಮ ಶತಮಾನೋತ್ಸವ

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: “ಇಡೀ ಜಗತ್ತಿನ ಇತಿಹಾಸವನ್ನು (History) ಕನ್ನಡದಲ್ಲಿ ಬರೆಯಬೇಕು ಎನಿಸುತ್ತಿದೆ” ಎಂದು ಆಸೆಪಟ್ಟಿದ್ದರು ನಿರಂಜನ (Niranjana).

ಇದೀಗ ಲೇಖಕ, ಸಂಪಾದಕ, ಕಾದಂಬರಿಕಾರ, ಅಪರೂಪದ ಸಾಧಕ “ನಿರಂಜನ” (ಜನನ : ಜೂನ್ 1924) ಅವರ ಶತಮಾನೋತ್ಸವ. ನಿರಂಜನ ಎಂದರೆ ಜ್ಞಾನ, ದೋಷರಹಿತವಾದುದು ಎಂಬೆಲ್ಲಾ ಅರ್ಥಗಳಿವೆ. ಶಿವ ಎನ್ನುವ ಅರ್ಥವೂ ಇದೆ. ಮೂಲತಃ ಕುಳಕುಂದ ಶಿವ ರಾವ್ ಆಗಿದ್ದ ಅವರು “ನಿರಂಜನ” ಎಂಬ ಕಾವ್ಯನಾಮ ಬಳಸಿದುದು ಅನ್ವರ್ಥವೇ ಆಗಿತ್ತು. ಕನ್ನಡ ಸಾಹಿತ್ಯದಲ್ಲಿ ಶಿವರಾಮ ಕಾರಂತರಂತೆ, ಮಹತ್ತ್ವದ ಮತ್ತು ಬಹು-ಆಯಾಮದ ಸಾಹಿತ್ಯ ರಚನೆ ಮಾಡಿದವರು ವಿರಳ. ಆದರೆ ಎಚ್ಚೆಸ್ಕೆ, ನಿರಂಜನ ಅವರನ್ನು ಈ ಕ್ಷಣಕ್ಕೆ ನೆನಪು ಮಾಡಿಕೊಳ್ಳಬಹುದು. ಸ್ವಯಂಭೂ, ಸ್ವಯಂಘೋಷಿತ ಸಾಹಿತ್ಯ ಧುರಂಧರ ಭಯಂಕರರ ಮಾಫಿಯಾದ ಅಬ್ಬರದಲ್ಲಿ, ಪ್ರಶಸ್ತಿ – ಸ್ಥಾನಮಾನ ಇತ್ಯಾದಿಗಳಿಗೆ ಹಾತೊರೆಯದೆ ತಮ್ಮ ಪಾಡಿಗೆ ತಾವು ಶುದ್ಧ ಸಾಹಿತ್ಯ ಸೇವೆಯನ್ನು ವ್ರತದಂತೆ ಪಾಲಿಸಿದವರು ಈ ಎಚ್ಚೆಸ್ಕೆ, ನಿರಂಜನ ಅಂತಹವರು.

1982ರಲ್ಲಿ ಒಮ್ಮೆ ಹೀಗಾಯಿತು. ಆಕಾಶವಾಣಿಯಲ್ಲಿ ಸಂಸ್ಕೃತ ವಾರ್ತೆಗಳು ಆರಂಭವಾದವು. ಕನ್ನಡದ ನಮ್ಮ ಸಮಾಜವಾದೀ, ಸಾಮ್ಯವಾದೀ ಲೇಖಕರು ಭಾರೀ ಗದ್ದಲವೆಬ್ಬಿಸಿದರು. ಅವರದ್ದೇ ನಿಯಂತ್ರಣದ ಪತ್ರಿಕೆಗಳನ್ನು ಓದಿದರೆ, ಏನೋ ಆಗಬಾರದ್ದು ಆಗಿಹೋಗಿದೆ, ಪ್ರಳಯವೇ ಆಗುತ್ತಿದೆ, ಎಂಬಂತಹ ಅಭಿಪ್ರಾಯ ಮೂಡುತ್ತಿತ್ತು. ಒಂದು ಪ್ರತಿಭಟನಾ ಸಭೆಯನ್ನೇ ಆಯೋಜಿಸಲಾಯಿತು. ನಾನೂ ಸಭಿಕನಾಗಿ ಹೋಗಿದ್ದೆ. ನಿರಂಜನ ಅವರದ್ದೇ ಅಧ್ಯಕ್ಷತೆ. ಒಬ್ಬೊಬ್ಬರಾಗಿ “ಕೆಲವೇ ಕೆಲವು ನಿಮಿಷಗಳ ಈ ಸಂಸ್ಕೃತ ವಾರ್ತೆಯ ಪ್ರಸಾರದಿಂದ” ಹೇಗೆ ಮತ್ತು ಎಷ್ಟು ಅನಾಹುತವಾಗುತ್ತಿದೆ, ಎಂದೆಲ್ಲಾ ಕೂಗಾಡತೊಡಗಿದರು. ಅನಂತರ ನಮ್ಮ ಸಮಾಜವಾದೀ ಲೇಖಕ ಮಿತ್ರ ಕಾಳಪ್ಪನವರು ಎದ್ದು ಮೈಕ್ ಮುಂದೆ ನಿಂತು ರೋದಿಸಲು ಪ್ರಾರಂಭಿಸಿದರು. “ನೋಡಿ, ಸತ್ತ ಭಾಷೆ ಸಂಸ್ಕೃತಕ್ಕೆ ಮಣೆ ಹಾಕಲಾಗುತ್ತಿದೆ. ಆದರೆ ಜನಭಾಷೆ ಉರ್ದುವಿಗೆ ಸ್ಥಾನವಿಲ್ಲ” ಇತ್ಯಾದಿ ಗಳಹತೊಡಗಿದರು. ತಡೆಯಲಾರದೆ, ನಾನು ಎದ್ದು ನಿಂತು ಗಟ್ಟಿಯಾಗಿ “ಎರಡಕ್ಕೂ ಹೋಲಿಕೆಯಿಲ್ಲ, ಉರ್ದುವಿಗೆ ಆಕಾಶವಾಣಿಯಲ್ಲಿ ಪ್ರತ್ಯೇಕ ಸ್ಟೇಷನ್ ಇದೆ” ಎಂದು ಆಕ್ಷೇಪಿಸಿದೆ. ನಮ್ಮ ಕಾಳಪ್ಪನವರಿಗೆ ಬರೀ ದ್ವೇಷ, ಪೂರ್ವಗ್ರಹಗಳೇ ಹೊರತು ಮಾಹಿತಿಯೂ ಇಲ್ಲ, ತಿಳಿವಳಿಕೆಯೂ ಇಲ್ಲ. ಸಭಾಂಗಣದಲ್ಲಿ ಆಗ ಗಲಾಟೆಯೇ ಆಗಿಹೋಯಿತು. ಸಭೆಯನ್ನೇ ಮುಗಿಸಬೇಕಾಯಿತು. ನಾನು ನೇರವಾಗಿ ಸಭಾಧ್ಯಕ್ಷರಾದ ನಿರಂಜನ ಅವರಲ್ಲಿಗೇ ಹೋಗಿ, ಪ್ರತ್ಯೇಕ ಉರ್ದು ಸ್ಟೇಷನ್ ಇರುವುದನ್ನು, ಸಂಸ್ಕೃತದಲ್ಲಿ ಕೇವಲ ಕೆಲವು ನಿಮಿಷಗಳ ವಾರ್ತೆ ಮಾತ್ರ ಬರುತ್ತಿದೆ, ಎಂಬಿತ್ಯಾದಿ ವಿವರ ಹೇಳಿದೆ. ಸಜ್ಜನರಾದ ಅವರು “You have a valid point” ಎಂದು ಒಪ್ಪಿಕೊಂಡರು.

ನವಕರ್ನಾಟಕ ಪ್ರಕಾಶನದ ಮಹತ್ತ್ವದ ಯೋಜನೆಗಳಲ್ಲೊಂದು ನಿರಂಜನ ಅವರು ಸಂಪಾದಕರಾಗಿದ್ದ 25 ಸಂಪುಟಗಳ “ವಿಶ್ವಕಥಾಕೋಶ” ಸರಣಿ. ಈ ಕಟ್ಟಿನಲ್ಲಿ ಧರಣಿ ಮಂಡಲ ಮಧ್ಯದೊಳಗೆ, ಆಫ್ರಿಕಾದ ಹಾಡು, ಕಾಡಿನಲ್ಲಿ ಬೆಳದಿಂಗಳು, ಚೆಲುವು, ಸುಭಾಷಿಣಿ, ವಿಚಿತ್ರ ಕಕ್ಷಿದಾರ, ಮಂಜು ಹೂವಿನ ಮದುವಣಿಗ, ಬೂದು ಬಣ್ಣದ ಕಾಂಗರೂ, ಹೆಜ್ಜೆಗುರುತು, ಅರಬಿ, ನೆತ್ತರು ದೆವ್ವ, ಬಾವಿ ಕಟ್ಟೆಯ ಬಳಿ, ಅದೃಷ್ಟ, ಸಜ್ಜನನ ಸಾವು, ಡೇಗೆ ಹಕ್ಕಿ, ಅವಸಾನ, ತಾತನ ಹುಟ್ಟುಹಬ್ಬ, ಬಾಲ ಮೇಧಾವಿ, ಇಬ್ಬರು ಗೆಳೆಯರು, ಅಬಿಂದಾ ಸಯೀದಾ, ನಿಗೂಢಸೌಧ, ಬೆಳಗಾಗುವ ಮುನ್ನ, ಮರಳುಗಾಡಿನ ಮದುವೆ, ಕಿವುಡು ವನದೇವತೆ, ಸಾವಿಲ್ಲದವರು ಸಂಪುಟಗಳಿವೆ.

ಜಗತ್ತಿನ ನೂರಾರು ದೇಶಗಳ ಹಲವು ನೂರು ಪ್ರಾತಿನಿಧಿಕ ಕಥೆಗಳು. ಅತ್ಯದ್ಭುತ ಸಂಚಯವದು. ನಿರಂಜನ ಅವರ ಸಂಪಾದಕತ್ವ ಎಂದರೆ, ಅಂತಹ ಯೋಜನೆಯ ಸತ್ತ್ವ ಏನು, ಪ್ರಾಮುಖ್ಯ ಏನು ಎಂದು ಅರಿಯಲು ಆ ಸಂಪುಟಗಳನ್ನೇ ಓದಬೇಕು, ಮುಖ್ಯವಾಗಿ ಆ ಎಲ್ಲ ಸಂಪುಟಗಳಿಗೆ ನಿರಂಜನ ಅವರು ಸಂಪಾದಕರಾಗಿ ಬರೆದ ಪ್ರಸ್ತಾವನೆಗಳನ್ನೂ ಓದಬೇಕು. ಆಯಾ ಸಂಕಲನದಲ್ಲಿ ಇರುವ ಕತೆಗಳು ಯಾವೆಲ್ಲ ದೇಶಗಳಿಗೆ ಸೇರಿವೆಯೋ, ಆ ದೇಶಗಳ ಪುಟ್ಟ ಸಾಂಸ್ಕೃತಿಕ ಇತಿಹಾಸವನ್ನೇ ಅವರು ನೀಡಿದ್ದಾರೆ. ಅದೊಂದು ದಾಖಲೆ, ಅದೊಂದು ಅದ್ಭುತ. ನಿರಂಜನ ಅವರು ಒಂದು ಚಿಕ್ಕ ಕಿಂಡಿಯಲ್ಲಿ ಜಗತ್ತಿನ ವಿಶ್ವರೂಪ ದರ್ಶನವನ್ನೇ ಮಾಡಿಸಿದ್ದರು, ಮಾಡಿಸಿದ್ದಾರೆ (ಮುಂದೆ ಪ್ರಕಾಶಕರು ಈ ಪ್ರಸ್ತಾವನೆಗಳನ್ನೇ ಪ್ರತ್ಯೇಕ ಸಂಪುಟವನ್ನಾಗಿ ಹೊರತಂದು ಮೆಚ್ಚುವಂತಹ ಕೆಲಸ ಮಾಡಿದರು).

ಈ “ವಿಶ್ವಕಥಾಕೋಶ” ಸಂಪುಟಗಳ ಒಂದು ಸರಣಿಯ ಲೋಕಾರ್ಪಣೆಗೆ, ನನ್ನ ನೆಚ್ಚಿನ ಅಂಕಣಕಾರರಾದ ಹಾ.ಮಾ.ನಾಯಕರು ಬಂದಿದ್ದರು. ಒಂದೇ ವೇದಿಕೆಯಲ್ಲಿ ಹಾ.ಮಾ.ನಾಯಕರನ್ನು, ನಿರಂಜನರನ್ನು ನೋಡುವ ಭಾಗ್ಯ ನಮ್ಮದು. ಲೋಕಾರ್ಪಣೆಯಾದ ಸರಣಿಗಳಲ್ಲಿ ರಷ್ಯನ್ ಕತೆಗಳೂ ಇದ್ದವು. ಲೋಕಾರ್ಪಣೆ ಮಾಡಿದ ಹಾ.ಮಾ.ನಾಯಕರು “ಈ ಸಂಕಲನಗಳಲ್ಲಿ ದಸ್ತಯೇವ್ ಸ್ಕಿ, ತೋಲ್ಸ್ ತೋಯ್ ಎಂಬ ಪ್ರಯೋಗಗಳಿವೆ, ನಮಗೆಲ್ಲಾ ಸುಪರಿಚಿತವಾಗಿರುವ ದಾಸ್ತೋವಸ್ಕಿ, ಟಾಲ್ ಸ್ಟಾಯ್ ಎಂಬ ಪದಗಳನ್ನೇ ಪ್ರಯೋಗಿಸಬಹುದಿತ್ತು” ಎಂದು ಅಭಿಪ್ರಾಯಪಟ್ಟರು. ಅದಕ್ಕೆ ಉತ್ತರವಾಗಿ ನಿರಂಜನರು “ನಾಯಕರೇ, ನಮಗೆ ಹೆಚ್ಚು ಪರಿಚಯವಿರುವ ಹೆಸರುಗಳು ಎರಡೋ ಮೂರೋ. ಆದರೆ, ಈ ಎಲ್ಲ ದೇಶಗಳ ಕತೆಗಳಲ್ಲಿ ಅಲ್ಲಿನ ನೂರಾರು ಹೆಸರುಗಳಿವೆ. ಅಲ್ಲಿನ ಸ್ಥಳೀಯವಾದ ಮತ್ತು ಅವರು ಬಳಸುವ ಮೂಲ-ಪ್ರಯೋಗಗಳನ್ನೇ ಬಳಸಿದ್ದೇವೆ. ನಮಗೆ ಪರಿಚಯವಿರುವ ಕೆಲವು (ಅಪಭ್ರಂಶವಾಗಿಹೋಗಿರುವ) ಪ್ರಯೋಗಗಳನ್ನು ಮಾತ್ರ ಉಳಿಸಿಕೊಳ್ಳಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು.

ನನಗಂತೂ ನಿರಂಜನರ ಪರಿಕಲ್ಪನೆ ಅದ್ಭುತ ಎನಿಸಿತು.

ಕಾರಣಾಂತರಗಳಿಂದ ನಮ್ಮ ಮೇಲೆ ಮುಗಿಬಿದ್ದಿರುವ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಧ್ವಾನದ ಕಾರಣಕ್ಕೆ ಮೂಲ ಉಚ್ಚಾರಣೆಗಳಿಗೂ, ನಾವು ಬಳಸುತ್ತಿರುವ ಉಚ್ಚಾರಣೆಗಳಿಗೂ ಅರ್ಥಾತ್ ಸಂಬಂಧವೇ ಇಲ್ಲ ಎನ್ನುವಂತಾಗಿದೆ. ಹತ್ತಾರು ವರ್ಷಗಳಿಂದ ಸೀತಾರಾಮ ಗೋಯಲ್ ಅವರ “ವಾಯ್ಸ್ ಆಫ್ ಇಂಡಿಯಾ” ಸರಣಿಯ ಸಂಪಾದಕನಾಗಿ, ಈ ಗ್ರಂಥಗಳಲ್ಲಿ ಬರುವ ಸಾವಿರಾರು ಹೆಸರುಗಳಿಗೆ, ಸ್ಥಳನಾಮಗಳಿಗೆ ಮೂಲ ಉಚ್ಚಾರಣೆಗಳನ್ನು ದೊರಕಿಸಿಕೊಳ್ಳಲು, ಪ್ರತಿಬಾರಿಯೂ ಅಪಾರ ಪರಿಶ್ರಮ ಹಾಕಬೇಕಾಗುತ್ತಿದೆ. ಪ್ರತಿಬಾರಿಯೂ ನಿರಂಜನರಂತಹ ಧೀಮಂತರು ನೆನಪಾಗುತ್ತಾರೆ, ಎಂದರೆ ಉತ್ಪ್ರೇಕ್ಷೆಯಲ್ಲ.

ಉದಾಹರಣೆಗೆ, ಉತ್ತರ ಪ್ರದೇಶದ “ಅಮೇಠಿ” (ಸರಿಯಾದ ಪ್ರಯೋಗ) ಕ್ಷೇತ್ರವು, ಸಂಜಯ ಗಾಂಧಿ ಅವರ ಕಾಲದಿಂದಲೂ “ಖ್ಯಾತಿ” ಪಡೆದಿದೆ. ರೋಮನ್ ಲಿಪಿಯ ಅದ್ವಾನದ ಕಾರಣದಿಂದ (ನಾಲ್ಕೈದು ದಶಕಗಳಿಂದಲೂ) ಕನ್ನಡದ ಪತ್ರಿಕೆಗಳಲ್ಲಿ, ವಾಹಿನಿಗಳಲ್ಲಿ ಮತ್ತು ಪುಸ್ತಕಗಳಲ್ಲಿ ಬಹುಪಾಲು “ಅಮೇಥಿ” ಎಂದೇ ಬಳಸಲಾಗುತ್ತಿದೆ! ಅಂತೆಯೇ, ಚೀನಾ ದೇಶದ Sinkiang / Xinjiang ಅನ್ನು ಸಿಂಕಿಯಾಂಗ್ ಎಂದೇ ಅನೇಕ ಕಡೆ ಉಲ್ಲೇಖಿಸಲಾಗಿದೆಯಾದರೂ, ಸರಿಯಾದ ಪ್ರಯೋಗ “ಶಿಂಜಾಂಗ್” ಆಗಿದೆ.

ನಿರಂಜನ ಅವರು ಆ ಕಾಲದಲ್ಲಿ ಮೂಲ ಉಚ್ಚಾರಣೆಗಳಿಗಾಗಿ ಅದೆಷ್ಟು ಶ್ರಮ ಹಾಕಿದರೋ, ಏನೋ?! ಐವತ್ತು ವರ್ಷಗಳ ಹಿಂದೆಯೇ ನಿರಂಜನರು “ಕಿರಿಯರ ವಿಶ್ವಕೋಶ” ತಂದರು. ಇಂದಿನಂತೆ ಕಂಪ್ಯೂಟರ್, ಅಂತರಜಾಲ, ಫೋನ್, ಇತ್ಯಾದಿ ಇಲ್ಲದ ಆ ಕಾಲಘಟ್ಟದಲ್ಲಿ ನಿರಂಜನ ಅವರ ಸಂಗ್ರಹ, ಸಂಪಾದನೆ ಮತ್ತು ಪ್ರಸ್ತಾವನೆಗಳು ನಿಜವಾಗಿಯೂ ಸಾಹಸವೇ. ವಿವಿಧ ಪ್ರವರ್ಗಗಳ ಅವರ ಕೃತಿಗಳನ್ನು, ಸಂಪಾದಿತ ಕೃತಿಗಳನ್ನು ನೋಡುವಾಗ, ನಿರಂಜನರು ಅದೆಂತಹ ಅದ್ಭುತ ಸಾಧಕರು, ಎನಿಸಿ ಗೌರವ ಇನ್ನಷ್ಟು ಹೆಚ್ಚಾಗುತ್ತದೆ.

ಅಂದಿನ ಆ ಲೋಕಾರ್ಪಣೆ ಸಮಾರಂಭದಲ್ಲಿ, ನಿರಂಜನರು “ಇಡೀ ಜಗತ್ತಿನ ಇತಿಹಾಸವನ್ನು ಕನ್ನಡದಲ್ಲಿ ಬರೆಯಬೇಕು ಎನಿಸುತ್ತಿದೆ” ಎಂದು ಆಸೆಪಟ್ಟಿದ್ದರು. ವಿಲ್ ಡ್ಯೂರಾಂಟ್ ಅವರ “ದ ಸ್ಟೋರಿ ಆಫ್ ಸಿವಿಲೈಸೇಷನ್” ಬೃಹತ್ ಸಂಪುಟಗಳನ್ನು ನೋಡುವಾಗ, ನಿರಂಜನರದ್ದೇ ನೆನಪು. ಆರೋಗ್ಯ ಚೆನ್ನಾಗಿದ್ದಿದ್ದರೆ ಅಂತಹುದನ್ನು ಅವರು ಖಂಡಿತವಾಗಿಯೂ ಸಾಧಿಸುತ್ತಿದ್ದರು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: “ನೀವು ಭಾರತೀಯರೋ, ರಾಷ್ಟ್ರೀಯರೋ?” ಎಮರ್ಜೆನ್ಸಿಯ ಕರಾಳ ನೆನಪು

Continue Reading

ಕ್ರೈಂ

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Dengue fever: ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ.

VISTARANEWS.COM


on

dengue fever hassan girl death
Koo

ಹಾಸನ: ಡೆಂಗ್ಯು ಜ್ವರದ (Dengue fever) ಪರಿಣಾಮ ಬಾಲಕಿಯೊಬ್ಬಳು (Girl death) ಮೃತಪಟ್ಟಿದ್ದಾಳೆ. ರಾಜ್ಯದಲ್ಲಿ ದಿನೇ ದಿನೆ ಡೆಂಗ್ಯು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಸಣ್ಣ ಮಕ್ಕಳಲ್ಲಿ ಇದು ಮಾರಣಾಂತಿಕವಾಗುತ್ತಿರುವುದು ಆತಂಕ ಮೂಡಿಸಿದೆ.

ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಕ್ಷತಾ (13) ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರಾದ ಅಕ್ಷತಾಳ ಪೋಷಕರು ಕೂಲಿ ಕೆಲಸ ಮಾಡುವ ಬಡವರಾಗಿದ್ದಾರೆ.

ಗುಣಮಖಳಾಗದಿದ್ದಾಗ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚೇತರಿಸಿಕೊಳ್ಳದ ಅಕ್ಷತಾಳನ್ನು ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಬಳಿಕ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಯುವಕನ ಬಲಿ

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Continue Reading

ಮಳೆ

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಹಗುರದಿಂದ ಕೂಡಿದ ಮಳೆ ಸುರಿಯಲಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (rain News) ಸಾಧ್ಯತೆ ಇದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (karnataka Weather Forecast) ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳದಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಕರಾವಳಿ ಮತ್ತು ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆಯು ಮುಂದುವರಿದಿದೆ. ಗುಡುಗು ಸಹಿತ ಗಾಳಿಗೆ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: Tumkur News : ತುಮಕೂರಿನಲ್ಲಿ ಗ್ರಾಪಂ ಸದಸ್ಯನ ಮೇಲೆ ಚಪ್ಪಲಿ ಎಸೆದು ಮನಬಂದಂತೆ ಥಳಿಸಿದ ಉಪಾಧ್ಯಕ್ಷ!

ಮಳೆಗಾಲಕ್ಕೆ ತಕ್ಕಂತೆ ಬದಲಾಗುವ ಫುಟ್‌ವೇರ್‌ ಸ್ಟೈಲಿಂಗ್‌


ಮಳೆಗಾಲಕ್ಕೆ ತಕ್ಕಂತೆ (Monsoon Footwear Fashion) ಪ್ರತಿಯೊಬ್ಬರ ಫುಟ್‌ವೇರ್‌ ಸ್ಟೈಲಿಂಗ್‌ ಕೂಡ ಬದಲಾಗುತ್ತದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ಗಳು ವಿನೂತನ ಮಾದರಿಯ ಬಗೆಬಗೆಯ ವಿನ್ಯಾಸದ ವಾಟರ್‌ಪ್ರೂಫ್‌ ಹಾಗೂ ಸ್ಕಿಡ್‌ ಆಗದ ಫುಟ್‌ವೇರ್​​ಗಳು ಲಗ್ಗೆ ಇಟ್ಟಿವೆ.

Monsoon Footwear Fashion

ವೈವಿಧ್ಯಮಯ ಫುಟ್‌ವೇರ್ಸ್

ಅವುಗಳಲ್ಲಿ ಫಂಕಿ ಕ್ರೂಕ್ಸ್‌, ಫ್ಲಿಪ್‌ಫ್ಲಾಪ್‌, ಜೆಲ್ಲಿ ಫ್ಲಾಟ್ಸ್, ವೆಡ್ಜಸ್‌ ಬೆಲ್ಲಿ ಶೂಸ್‌, ಸ್ಕಿಪ್ಪರ್‌ ಕ್ಲಾಗ್ಸ್‌, ಕ್ಯಾನ್ವಾಸ್‌, ಬ್ಯಾಲೇರಿನಾ ಫ್ಲಾಟ್‌ ಸ್ಯಾಂಡಲ್ಸ್, ಮಾನ್ಸೂನ್‌ ಸ್ನೀಕರ್‌, ರೈನ್‌ ಶೂ, ಅಕ್ವಾ ಶೂಸ್‌, ಗಮ್‌ ಬೂಟ್ಸ್, ಫೋಮ್‌ ಕ್ಲಾಗ್ಸ್ ಸೇರಿದಂತೆ ಮೆನ್ಸ್‌ ಹಾಗೂ ವುಮೆನ್ಸ್‌ ಕೆಟಗರಿಯಲ್ಲಿ ನಾನಾ ಬಗೆಯವು ಬಿಡುಗಡೆಗೊಂಡಿದ್ದು, ಮಾರಾಟ ಹೆಚ್ಚಾಗಿಯೇ ಸಾಗಿದೆ ಎನ್ನುತ್ತಾರೆ ಫುಟ್‌ವೇರ್‌ ಶೋರೂಂವೊಂದರ ಮಾರಾಟಗಾರರು.

ಸೀಸನ್‌ಗೆ ಬದಲಾಗುವ ಫುಟ್‌ವೇರ್ಸ್

ಸಮ್ಮರ್‌ ಸೀಸನ್‌ನಿಂದ ಮಾನ್ಸೂನ್‌ ಸೀಸನ್‌ಗೆ ಕಾಲಿಡುವಾಗ ಫುಟ್‌ವೇರ್‌ ಫ್ಯಾಷನ್‌ ಕೂಡ ಸಾಕಷ್ಟು ಬದಲಾಗುತ್ತದೆ. ಗ್ರ್ಯಾಂಡ್‌ ಲುಕ್‌ ನೀಡುವ ಸ್ಯಾಂಡಲ್ಸ್‌ ಆಗಲಿ, ವೆಲ್ವೆಟ್‌ ಹಾಗೂ ಡಿಸೈನರ್‌ ಶೂಗಳನ್ನಾಗಲಿ ಈ ಮಳೆಗಾಲದಲ್ಲಿ ಧರಿಸಿ ಹೊರಾಂಗಣದಲ್ಲಿ ಓಡಾಡಲು ಸಾಧ್ಯವಿಲ್ಲ! ಹಾಗಾಗಿ ಮಳೆಗಾಲಕ್ಕೆ ನೀರಿನಲ್ಲಿ ನೆನೆದರೂ, ತೊಪ್ಪೆಯಾದರೂ, ವಾಶ್‌ ಮಾಡಿದರೂ ಹಾಳಾಗದ ಮೆಟೀರಿಯಲ್‌ನ ಫುಟ್‌ವೇರ್‌ಗಳನ್ನು ಧರಿಸುವುದು, ವಾಕ್‌ ಮಾಡುವಾಗ ಸ್ಕಿಡ್‌ ಆಗದ, ಜಾರದ ಫುಟ್‌ವೇರ್‌ಗಳನ್ನು ಧರಿಸುವುದು ಅವಶ್ಯವಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಅದರಲ್ಲೂ ಪ್ರತಿನಿತ್ಯ ಹೆಚ್ಚು ಓಡಾಡುವ ವ್ಯಾಪಾರಸ್ಥರು, ಉದ್ಯೋಗಸ್ಥರು ಹೆಚ್ಚಾಗಿ ಕಂಫರ್ಟಬಲ್‌ ಜೊತೆಗೆ ಸೀಸನ್‌ ಮುಗಿಯುವವರೆಗೂ ಬಾಳಿಕೆ ಬರುವಂತಹ ಫುಟ್‌ವೇರ್‌ಗಳನ್ನೇ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ ಎನ್ನುತ್ತಾರೆ ಅವರು.

ಬೂಟ್ಸ್-ಶೂ-ಸ್ಯಾಂಡಲ್ಸ್-ಫ್ಲಿಪ್‌-ಫ್ಲಾಪ್‌

ಮಳೆಗಾಲದಲ್ಲಿ ಫ್ಯಾಷನ್‌ ಲುಕ್‌ಗಾಗಿ ಮಾತ್ರವಲ್ಲ, ನಿಮ್ಮ ಕಂಫರ್ಟಬಲಿಟಿಗೆ ತಕ್ಕಂತೆ ಆಯ್ಕೆ ಮಾಡಿಕೊಳ್ಳುವುದು ಜಾಣತನ. ಔಟ್‌ಡೋರ್‌ನಲ್ಲಿ ಹೆಚ್ಚು ಓಡಾಡುವವರು ಹಾಗೂ ಕೆಲಸ ಮಾಡುವವರು ಬೂಟ್ಸ್​​​ಗಎ ಮೊರೆ ಹೋದರೆ, ಮಹಿಳೆಯರು ಸ್ಯಾಂಡಲ್ಸ್‌ ಹಾಗೂ ಫ್ಲಿಪ್‌-ಫ್ಲಾಪ್‌ಗಳನ್ನು ಚೂಸ್‌ ಮಾಡುತ್ತಾರೆ. ಇನ್ನು ಹುಡುಗಿಯರು ಕ್ರೂಕ್ಸ್‌ ಹಾಗೂ ಬ್ಯಾಲೇರಿನಾ ಶೂಗಳಂತವನ್ನು ಸೆಲೆಕ್ಟ್‌ ಮಾಡುತ್ತಾರೆ ಎನ್ನುತ್ತಾರೆ ಫುಟ್‌ವೇರ್‌ ಮಾರಾಟಗಾರರು.

ಫುಟ್‌ವೇರ್‌ ಸೆಲೆಕ್ಷನ್‌ ಹೀಗಿರಲಿ

  • – ಫ್ಯಾಷನ್‌ಗಿಂತ ಹೆಚ್ಚಾಗಿ ಆರಾಮದಾಯಕವಾಗಿರಲಿ.
  • – ಫುಟ್‌ವೇರ್‌ ಒದ್ದೆಯಾಗಿದ್ದಲ್ಲಿ, ಒಣಗಿಸಿ, ಧರಿಸಿ.
  • – ಗುಣಮಟ್ಟದ ಫುಟ್‌ವೇರ್ ಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರವಾಸ

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು (Karnataka Tour) ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾದೀತು!

VISTARANEWS.COM


on

By

Karnataka Tour
Koo

ಕರ್ನಾಟದಲ್ಲಿ ಮಳೆಗಾಲ ಆರಂಭವಾಗಿದೆ. ಕೆಲವು ಪ್ರವಾಸಿ (Karnataka Tour) ತಾಣಗಳಂತೂ ನಯನ ಮನೋಹರವಾಗಿ ಕಂಗೊಳಿಸುತ್ತಿವೆ. ಮಾಂತ್ರಿಕವಾಗಿ ಸಿಂಗಾರಗೊಂಡಂತಿವೆ. ದೂರದೂರದ ಪ್ರವಾಸಿಗರನ್ನು (tourists) ತನ್ನತ್ತ ಆಕರ್ಷಿಸುತ್ತಿವೆ. ಒಂದೆಡೆ ಪಶ್ಚಿಮ ಘಟ್ಟಗಳು (Western Ghats), ಇನ್ನೊಂದೆಡೆ ಅರಬ್ಬಿ ಸಮುದ್ರದ (arabian sea) ಸಮೀಪವಿರುವ ಕರಾವಳಿ ಪ್ರದೇಶಗಳು ಮಳೆಯ ಧಾರೆಯಲ್ಲಿ ತೋಯ್ದು ತನ್ನನ್ನು ತಾನು ಸ್ವಚ್ಛ, ಸುಂದರ ಮತ್ತಷ್ಟು ಸಿಂಗಾರಗೊಳಿಸಿದಂತೆ ಭಾಸವಾಗುತ್ತಿದೆ.

ಭಾರೀ ಮಳೆಯ ಆರಂಭದ ದಿನಗಳಲ್ಲಿ ಕರ್ನಾಟಕದ ಹವಾಮಾನವು ಆರ್ದ್ರವಾಗಿರುತ್ತದೆ ಮತ್ತು ಆಹ್ಲಾದಕರವಾಗಿರುತ್ತದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಸಿರಿನಿಂದ ಚಿತ್ರಿಸಲ್ಪಟ್ಟಂತೆ ಭಾಸವಾಗುತ್ತದೆ. ಪಶ್ಚಿಮ ಘಟ್ಟಗಳಂತೂ ಆಕರ್ಷಣೆಯ ಕೇಂದ್ರವಾಗುತ್ತದೆ.

ಹಗಲಿನಲ್ಲಿ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ ರಾತ್ರಿಯಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವುದು. ಹಗಲು ಸುರಿಯುವ ಮಳೆಯಲ್ಲೂ ಹೊರಗೆ ಸುತ್ತಾಡಲು ಮನ ಬಯಸಿದರೆ, ರಾತ್ರಿ ತಂಪನೆಯ ವಾತಾವರಣ ಬೆಚ್ಚನೆ ಹೊದಿಕೆ ಹೊದ್ದು ಮಲಗಲು ಪ್ರೇರೇಪಿಸುತ್ತದೆ.

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾಗುವುದು.


1. ಹಂಪಿ

ಹಂಪಿ ಕರ್ನಾಟಕದ ಅತ್ಯುತ್ತಮ ಮಾನ್ಸೂನ್ ಸ್ಥಳಗಳಲ್ಲಿ ಒಂದಾಗಿದೆ. ಇದ್ದಕ್ಕಿದ್ದಂತೆ, ಹಂಪಿಯ ಶುಷ್ಕ ಪ್ರದೇಶಗಳು ಹಸಿರು ವಿಸ್ತಾರವಾದ ಹುಲ್ಲುಗಾವಲುಗಳಾಗಿ ಬದಲಾಗುತ್ತವೆ. ಹಂಪಿಯ ರಮಣೀಯ ಭೂದೃಶ್ಯವನ್ನು ಹೊಂದಿರುವ ಹೇರಳವಾದ ದೇವಾಲಯಗಳು ಮಳೆಯಲ್ಲಿ ರುದ್ರರಮಣೀಯವಾಗಿ ಕಾಣುತ್ತವೆ. ಇಲ್ಲಿನ ಆಹ್ಲಾದಕರ ವಾತಾವರಣವು ಅದ್ಭುತವಾದ ಫೋಟೋಗಳನ್ನು ಒದಗಿಸುವುದು. ಮೋಡ ಕವಿದ ಆಕಾಶವು ದೇವಾಲಯಗಳ ಫೋಟೋಗಳಿಗೆ ಅದ್ಭುತವಾದ ಹಿನ್ನೆಲೆಯನ್ನು ಉಂಟು ಮಾಡುತ್ತದೆ. ಪ್ರಬಲವಾದ ಹಂಪಿ ನದಿಯಲ್ಲಿ ಕೊರಾಕಲ್ ದೋಣಿ ಸವಾರಿ ಮತ್ತು ರಾಕ್ ಕ್ಲೈಂಬಿಂಗ್ ಹೆಚ್ಚು ರೋಮಾಂಚನಕಾರಿಯಾಗಿರುತ್ತದೆ.


2. ಮರವಂತೆ

ಕರ್ನಾಟಕದ ಎನ್ ಹೆಚ್ 66ರಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒಂದು ಸಣ್ಣ ಹಳ್ಳಿ ಮರವಂತೆಯಲ್ಲಿ ಸಮುದ್ರ ಮತ್ತು ನದಿ ಒಟ್ಟಿಗೆ ಸೇರುವ ದೃಶ್ಯ ನಯನಮನೋಹರವಾಗಿರುತ್ತದೆ. ಒಂದು ಕಡೆ ಗ್ರಾಮವು ಅರಬ್ಬೀ ಸಮುದ್ರದಿಂದ ಆವೃತವಾಗಿದ್ದರೆ ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯು ಶಾಂತವಾಗಿ ಹರಿಯುತ್ತಿರುತ್ತದೆ. ಮಾನ್ಸೂನ್ ಸಮಯದಲ್ಲಿ ಮರವಂತೆಯ ಬೀಚ್ ರಸ್ತೆಯಲ್ಲಿ ನಡೆಯುವುದು ಅತ್ಯುತ್ತಮ ಅನುಭವವನ್ನು ಕೊಡುವುದು.


3. ಆಗುಂಬೆ

ಆಗುಂಬೆಯು ಹಲವಾರು ಜಲಪಾತಗಳು, ನೈಸರ್ಗಿಕ ವೈಭವ ಮತ್ತು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಎತ್ತರದ ಗ್ರಾಮವನ್ನು ‘ದಕ್ಷಿಣದ ಚಿರಾಪುಂಜಿ’ ಎಂದೂ ಕರೆಯುತ್ತಾರೆ. ಯಾಕೆಂದರೆ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳವಾಗಿದೆ. ಅನೇಕ ಜಲಪಾತಗಳಾದ ಒನಕೆ ಅಬ್ಬಿ, ಜೋಗಿ ಗುಂಡಿ ಜಲಪಾತ ಮತ್ತು ಬರ್ಕಾನ ಜಲಪಾತಗಳು ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಅದ್ಭುತಗಳಾಗಿ ರೂಪಾಂತರಗೊಳ್ಳುತ್ತವೆ. ಹಚ್ಚ ಹಸಿರಿನ ಮಳೆಕಾಡುಗಳಲ್ಲಿನ ಹಲವಾರು ಟ್ರೆಕ್ಕಿಂಗ್ ಟ್ರೇಲ್‌ಗಳು ಈ ಸ್ಥಳವನ್ನು ಒದಗಿಸುವ ಇತರ ಆಹ್ಲಾದಕರ ಸಂಗತಿಯಾಗಿದೆ.


4. ಬೀದರ್ ಕೋಟೆ

ಒಂದು ಕಾಲದಲ್ಲಿ ದಕ್ಷಿಣದ ರಾಜಧಾನಿಯಾಗಿದ್ದು 98 ಸ್ಮಾರಕಗಳನ್ನು ಹೊಂದಿರುವ ಜನಪ್ರಿಯ ತಾಣವಾಗಿದೆ. ಬೆಟ್ಟದ ತುದಿಯಲ್ಲಿ ನೆಲೆಸಿರುವ ‘ಸಿಟಿ ಆಫ್ ವಿಸ್ಪರಿಂಗ್ ಸ್ಮಾರಕಗಳು’ ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. 500 ವರ್ಷಗಳಷ್ಟು ಹಳೆಯದಾದ ಬೀದರ್ ಕೋಟೆಯು ಭಾರತದ ಪುರಾತತ್ತ್ವ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದೆ.


5. ಕೊಡಗು

ಮಳೆಗಾಲದಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣ ಕೊಡಗು. ದಟ್ಟವಾದ ಮಂಜಿನ ವಾತಾವರಣದಲ್ಲಿ ಹಸಿರು ಕಾಫಿ ತೋಟಗಳು ತುಂಬಾ ಆಕರ್ಷಣೀಯವಾಗಿ ಕಾಣುತ್ತದೆ. ಮಡಿಕೇರಿ ಪಟ್ಟಣದ ಅತ್ಯುನ್ನತ ಸ್ಥಳವಾದ ರಾಜಾ ಸೀಟ್‌ನಿಂದ ಮಳೆಯಲ್ಲಿ ಮುಳುಗಿರುವ ನಗರ ಸೌಂದರ್ಯವನ್ನು ವೀಕ್ಷಿಸುವುದು ರೋಮಾಂಚಕ ಅನುಭವವನ್ನು ಕೊಡುತ್ತದೆ.

ಕೂರ್ಗ್‌ನ ಮತ್ತೊಂದು ಪ್ರಸಿದ್ಧ ಪ್ರವಾಸಿ ಆಕರ್ಷಣೆಯಾಗಿರುವ ಅಬ್ಬೆ ಜಲಪಾತ. ಜಲಪಾತದ ಸೌಂದರ್ಯ ಸವಿಯುತ್ತಾ ಬಿಸಿಬಿಸಿ ಕಪ್ ಕಾಫಿ ಸೇವನೆ ಮಾಡುತ್ತ ಕೂರ್ಗ್‌ ನಲ್ಲಿ ಬೈಕ್ ಸವಾರಿ ಮಾಡುವುದು ಅತ್ಯಂತ ಅದ್ಭುತವಾದ ಅನುಭವವನ್ನು ಕೊಡುತ್ತದೆ.


6. ದಾಂಡೇಲಿ

ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಸಸ್ಯ ಮತ್ತು ಪ್ರಾಣಿಗಳ ಸೌಂದರ್ಯ ಸವಿಯಲು ದಾಂಡೇಲಿಯ ಕಾಡುಗಳು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ದಾಂಡೇಲಿ ವನ್ಯಜೀವಿ ಅಭಯಾರಣ್ಯವು ಕರ್ನಾಟಕದ ಎರಡನೇ ಅತಿ ದೊಡ್ಡ ವನ್ಯಜೀವಿ ಅಭಯಾರಣ್ಯವಾಗಿದೆ. ಮಳೆಗಾಲದಲ್ಲಿ ಅನೇಕ ಸರೀಸೃಪಗಳು, ಪಕ್ಷಿಗಳು ಮತ್ತು ಕಾಡು ಪ್ರಾಣಿಗಳ ಆವಾಸಸ್ಥಾನವಾಗಿದೆ. ಕಪ್ಪು ಪ್ಯಾಂಥರ್, ಚಿರತೆ ಅಥವಾ ಆನೆಯನ್ನು ಇಲ್ಲಿ ಕಾಣಬಹುದು.


7. ಮೈಸೂರು

ಮಳೆಗಾಲದಲ್ಲಿ ಪ್ರವಾಸ ಹೊರಡುವ ಯೋಚನೆ ಇದ್ದರೆ ಮೈಸೂರನ್ನು ಆಯ್ಕೆ ಮಾಡಬಹುದು. ವಾರಾಂತ್ಯವನ್ನು ಮೈಸೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಕಳೆಯುವುದು ಅದ್ಭುತ ಆಯ್ಕೆಯಾಗಿದೆ. ಹೊರಗೆ ಮಳೆ ಸುರಿಯುವಾಗ ಬಲಿನೀಸ್, ಸ್ವೀಡಿಷ್ ಮತ್ತು ಆಯುರ್ವೇದಿಕ್ ಸ್ಪಾ ಚಿಕಿತ್ಸೆಗಳ ಆನಂದ ಸವಿಯಬಹುದು.


8. ನಂದಿ ಹಿಲ್‌

ಮಾನ್ಸೂನ್ ಸಮಯದಲ್ಲಿ ನಂದಿ ಬೆಟ್ಟದಲ್ಲಿ ಮಂತ್ರಮುಗ್ಧಗೊಳಿಸುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು. ನಯನಮನೋಹರ ಸೂರ್ಯಾಸ್ತ, ಸೂರ್ಯೋದಯದ ದೃಶ್ಯಾವಳಿಗಳು ಮನದಲ್ಲಿ ವರ್ಣಚಿತ್ರದಂತೆ ಅಚ್ಚಳಿಯದೆ ಉಳಿಯುವುದು. ಮಳೆಗಾಲದಲ್ಲಿ ಬೈಕ್ ಸವಾರರು ಬೆಟ್ಟಗಳ ಮೇಲೆ ಹೋಗಿ ಪ್ರಕೃತಿಯ ಸೌಂದರ್ಯ ಸವಿಯಬಹುದು.


9. ಸ್ಕಂದಗಿರಿ ಬೆಟ್ಟ

ಸ್ಕಂದಗಿರಿ ಬೆಟ್ಟಗಳ ಶಿಖರದಲ್ಲಿ ನಿಂತಿರುವಾಗ ಮೋಡಗಳ ಮೇಲೆ ಏರಿದಂತ ಅನುಭವ ಕೊಡುತ್ತದೆ. ಆಗಸ್ಟ್‌ನಲ್ಲಿ ಇಲ್ಲಿ ಚಾರಣಕ್ಕೆ ಹೋಗಲು ಸೂಕ್ತ ಸಮಯ. ಹತ್ತಿಯಂತೆ ಕಾಣುವ ಮೋಡಗಳು ಅಲೌಕಿಕವಾಗಿ ಕಾಣುತ್ತವೆ. ಸ್ಕಂದಗಿರಿಯಿಂದ ಸೂರ್ಯೋದಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ರಾತ್ರಿ ಆಕಾಶದ ಅದ್ಭುತಗಳ ಅಡಿಯಲ್ಲಿ ಕ್ಯಾಂಪಿಂಗ್ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ.


10. ಗೋಕರ್ಣ

ಹಿಪ್ಪಿಗಳ ಸ್ವರ್ಗ ಗೋಕರ್ಣದ ಕಡಲತೀರಗಳು ರಮಣೀಯ ದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಒಂದು ಕಡೆ ಕಲ್ಲಿನ ಪರ್ವತ ಮತ್ತು ಇನ್ನೊಂದು ಕಡೆ ಅರೇಬಿಯನ್ ಸಮುದ್ರದೊಂದಿಗೆ ಇರುವ ಧಾರ್ಮಿಕ ಪಟ್ಟಣವು ಅತ್ಯಂತ ಸುಂದರವಾದ ಭೂದೃಶ್ಯಗಳನ್ನು ನೀಡುತ್ತದೆ.

11. ಜೋಗ ಜಲಪಾತ

ಮಳೆಗಾಲದಲ್ಲಿ ತುಂಬಿ ಹರಿಯುವ ಜೋಗ ಜಲಪಾತವು ಕನಸಿನ ಪ್ರಪಂಚವನ್ನು ಮಳೆಗಾಲದಲ್ಲಿ ತೋರಿಸುತ್ತದೆ. ಮಾನ್ಸೂನ್ ಸಮಯದಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಬಿಲ್ಲುಗಳೊಂದಿಗೆ ಭವ್ಯವಾದ ಪ್ರಕೃತಿಯನ್ನು ಇಲ್ಲಿ ಆನಂದಿಸಬಹುದು. ಶರಾವತಿ ನದಿಯಿಂದ ರೂಪುಗೊಂಡಿರುವ ಜಲಪಾತವು ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಭಾರತದ ಅತಿ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು


12. ಕೆಮ್ಮಣ್ಣುಗುಂಡಿ

ಕರ್ನಾಟಕದ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾಗಿರುವ ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿ ನೋಡುವಂತ ಹಲವಾರು ಭೂದೃಶ್ಯಗಳು ಮತ್ತು ಸೊಂಪಾದ ಪ್ರದೇಶಗಳಿವೆ. ಕೆಮ್ಮನಗುಂಡಿಯಲ್ಲಿರುವ ಇತರ ಕೆಲವು ಪ್ರಮುಖ ಆಕರ್ಷಣೆಗಳೆಂದರೆ ಹೆಬ್ಬೆ ಜಲಪಾತ, ಶಾಂತಿ ಜಲಪಾತ, ಝೆಡ್ ಪಾಯಿಂಟ್ ಮತ್ತು ಅತ್ಯಂತ ಪ್ರಸಿದ್ಧವಾದ ಬಾಬಾ ಬುಡನ್ ಗಿರಿ ಮತ್ತು ಮುಳ್ಳಯ್ಯನಗಿರಿ ಬೆಟ್ಟಗಳು.


13. ಕುದುರೆಮುಖ

ಕುದುರೆಮುಖ ಗಿರಿಧಾಮ ಮಾನ್ಸೂನ್ ಸಮಯದಲ್ಲಿ ಉತ್ತಮ ಅನುಭವವನ್ನು ನೀಡುತ್ತದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಶೋಲಾ ಹುಲ್ಲುಗಾವಲು ಮತ್ತು ಕಾಡುಗಳು ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯಂತ ಆಸಕ್ತಿದಾಯಕ ತಾಣಗಳಾಗಿವೆ. ಹನುಮಾನ್ ಗುಂಡಿ ಮತ್ತು ಕದಂಬಿ ಜಲಪಾತ ಇಲ್ಲಿನ ಎರಡು ಪ್ರಮುಖ ತಾಣಗಳಾಗಿವೆ. ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಭೇಟಿ ನೀಡಲು ಇದು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ.


14. ಬಾಲೂರು

ಚಿಕ್ಕಮಗಳೂರು ಜಿಲ್ಲೆಯ ಒಂದು ಗ್ರಾಮವಾದ ಬಾಲೂರು ಮಾನ್ಸೂನ್ ಋತುವಿನಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣವಾಗಿದೆ. ವಿಶಾಲವಾದ ಕಾಫಿ ಎಸ್ಟೇಟ್ ಗಳು ಭೂಮಿಯ ಮೇಲಿನ ಅತ್ಯಂತ ಪರಿಶುದ್ಧ ಸ್ಥಳ ಎಂಬಂತೆ ಭಾಸವಾಗುತ್ತದೆ. ಚಾರ್ಮಾಡಿ ಘಾಟ್, ಚಾರ್ಮಾಡಿ ಜಲಪಾತ ಮತ್ತು ಕೊಡೆ ಕಲ್ಲು ಇಲ್ಲಿನ ಅದ್ಭುತ ಸ್ಥಳಗಳಾಗಿವೆ.

Continue Reading
Advertisement
ರಾಜಮಾರ್ಗ ಅಂಕಣ virat kohli rohit sharma
ಅಂಕಣ10 mins ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್ ಫೈನಲ್; ಒಂದು ಪಂದ್ಯ – ಹಲವು ಪಾಠ

niranjana ನನ್ನ ದೇಶ ನನ್ನ ದನಿ ಅಂಕಣ
ಅಂಕಣ23 mins ago

ನನ್ನ ದೇಶ ನನ್ನ ದನಿ: ಜಗತ್ತಿನ ಇತಿಹಾಸ ಕನ್ನಡದಲ್ಲಿ ತರಲು ಆಸೆಪಟ್ಟಿದ್ದ ನಿರಂಜನ

dengue fever hassan girl death
ಕ್ರೈಂ40 mins ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್1 hour ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ1 hour ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ2 hours ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Karnataka Tour
ಪ್ರವಾಸ2 hours ago

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

T20 World Cup 2024
ಪ್ರಮುಖ ಸುದ್ದಿ8 hours ago

T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

GST Collection
ಪ್ರಮುಖ ಸುದ್ದಿ8 hours ago

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌