Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ - Vistara News

ದೇಶ

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Jio Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗಲಿದೆ.

VISTARANEWS.COM


on

Jio Tariffs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ರಿಲಯನ್ಸ್‌ ಜಿಯೋ (Reliance Jio) ಪ್ರಿಪೇಯ್ಡ್‌ ಬಳಕೆದಾರರಿಗೆ ಕಂಪನಿಯು ಕಹಿ ಸುದ್ದಿ ನೀಡಿದೆ. ಜಿಯೋ ಪ್ರಿಪೇಯ್ಡ್‌ ಪ್ಲಾನ್‌ನ ಶುಲ್ಕಗಳನ್ನು (Jio Tariffs) ಶೇ.20ರಷ್ಟು ಏರಿಕೆ ಮಾಡಿದ್ದು, ಇದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಅದರಲ್ಲೂ, ಇತ್ತೀಚೆಗೆ ಕರ್ನಾಟಕದಲ್ಲಿ ಪೆಟ್ರೋಲ್‌, ಡೀಸೆಲ್‌, ಹಾಲಿನ ಬೆಲೆಯೇರಿಕೆ ಆಗಿದ್ದು, ಇದರ ಬೆನ್ನಲ್ಲೇ ಜಿಯೋ ಪ್ರಿಪೇಯ್ಡ್‌ ಪ್ಲಾನ್‌ಗಳ ಶುಲ್ಕವೂ ಜಾಸ್ತಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜುಲೈ 3ರಿಂದ ರಿಲಯನ್ಸ್‌ ಜಿಯೋ ಹೊಸ ರೇಟ್‌ ಅನ್ವಯವಾಗಲಿದೆ.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಇದನ್ನೂ ಓದಿ: GST Council Meeting : ಪೆಟ್ರೋಲ್, ಡೀಸೆಲ್ ಜಿಎಸ್​​ಟಿ ವ್ಯಾಪ್ತಿಗೆ ಬರಲಿದೆಯೇ? ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮನಿ-ಗೈಡ್

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ (ITR Filing) ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಮೊದಲು ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ.

VISTARANEWS.COM


on

By

ITR Filing
Koo

ಆದಾಯ ತೆರಿಗೆ ರಿಟರ್ನ್ (ITR Filing) ಸಲ್ಲಿಸುವ ಮೊದಲು ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ. ಆದಾಯ ತೆರಿಗೆಯು (Income tax) ಜನರು ಮತ್ತು ಸಂಸ್ಥೆಗಳು ಗಳಿಸುವ ಆದಾಯ ಮತ್ತು ಲಾಭದ ಮೇಲೆ ಪಾವತಿಸುವ ತೆರಿಗೆಯಾಗಿದೆ. ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ತೆರಿಗೆದಾರರು ಮಾಡಲೇಬೇಕಾದ ವಾರ್ಷಿಕ ಆಥಿಕ ಕಾರ್ಯವಾಗಿದೆ.

ಭಾರತದಲ್ಲಿ (India) ತೆರಿಗೆದಾರರು (taxpayer) ತಮ್ಮ ಆದಾಯ ಮತ್ತು ತೆರಿಗೆಗಳ ವಾರ್ಷಿಕ ಲೆಕ್ಕಾಚಾರವನ್ನು ಸಲ್ಲಿಸುವ ಮೂಲಕ ಸರ್ಕಾರಕ್ಕೆ ವರದಿ ಮಾಡಬೇಕಾಗುತ್ತದೆ. ಪಾರದರ್ಶಕತೆ, ಹೊಣೆಗಾರಿಕೆ ಮತ್ತು ರಾಷ್ಟ್ರದ ಆರ್ಥಿಕ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಇದು ಅತ್ಯಮೂಲ್ಯವಾಗಿದೆ. 2023– 24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ.

ಗಡುವು ತಿಳಿದಿರಿ

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಮೊದಲು ಎಲ್ಲಾ ತೆರಿಗೆದಾರರು ಗಮನಿಸಬೇಕಾದ ಮೊದಲ ಮತ್ತು ಪ್ರಮುಖ ವಿಷಯವೆಂದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಾಮಾನ್ಯವಾಗಿ ಪ್ರತಿ ಹಣಕಾಸು ವರ್ಷದ ಜುಲೈ 31 ಕೊನೆಯ ದಿನವಾಗಿದೆ. ಈ ವರ್ಷ ಆದಾಯ ತೆರಿಗೆ ಇಲಾಖೆಯು 2023-24ಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ತೆರಿಗೆ ಪದ್ಧತಿಯನ್ನು ಅರ್ಥಮಾಡಿಕೊಳ್ಳಿ

ತೆರಿಗೆದಾರರು ಈಗ ಹಳೆಯ ತೆರಿಗೆ ಪದ್ಧತಿ ಮತ್ತು ಬಜೆಟ್ 2020ರಲ್ಲಿ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯ ನಡುವೆ ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿದ್ದಾರೆ. ಎರಡೂ ತನ್ನದೇ ಆದ ಸಾಧಕ-ಬಾಧಕಗಳನ್ನು ಹೊಂದಿವೆ. ಹೊಸ ಪದ್ದತಿಯು ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆ. ಆದರೆ ಕೆಲವು ವಿಷಯಗಳ ಮೇಲೆ ಕಡಿತ ಮತ್ತು ವಿನಾಯಿತಿಗಳನ್ನು ಮಿತಿಗೊಳಿಸುತ್ತದೆ.

ಹಳೆಯ ಪದ್ದತಿಯು ತುಲನಾತ್ಮಕವಾಗಿ ಹೆಚ್ಚಿನ ತೆರಿಗೆ ದರಗಳನ್ನು ಹೊಂದಿದೆ. ಆದರೆ ಕಡಿತ ಮತ್ತು ತೆರಿಗೆ ಪ್ರಯೋಜನಗಳನ್ನು ಕ್ಲೈಮ್ ಮಾಡುವ ಮೂಲಕ ಹಣವನ್ನು ಉಳಿಸಲು ಜನರಿಗೆ ಅವಕಾಶ ನೀಡುತ್ತದೆ. ಒಬ್ಬರ ಪರಿಸ್ಥಿತಿಗೆ ಅನುಗುಣವಾಗಿ ಯಾವ ಪದ್ಧತಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂಬುದನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಕೊಳ್ಳಬೇಕು.

ಯಾವ ತೆರಿಗೆ ವರ್ಗಕ್ಕೆ ಸೇರುತ್ತೀರಿ?

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ತೆರಿಗೆ ವರ್ಗಕ್ಕೆ ಸೇರುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕು. ತೆರಿಗೆಯ ಆದಾಯವನ್ನು ತಿಳಿದುಕೊಳ್ಳುವುದು ತೆರಿಗೆ ಹೊಣೆಗಾರಿಕೆಯನ್ನು ನಿರ್ಧರಿಸಲು ಸಹಾಯ ಮಾಡುತ್ತದೆ, ಇದು ಭರ್ತಿ ಮಾಡಲು ಅರ್ಹವಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಹಣಕಾಸು ಮತ್ತು ಹೂಡಿಕೆಗಳನ್ನು ಯೋಜಿಸಲು ಆದಾಯ ತೆರಿಗೆ ರಿಟರ್ನ್ ಅನ್ನು ಸಮರ್ಥ ಮತ್ತು ದೋಷ-ಮುಕ್ತ ರೀತಿಯಲ್ಲಿ ಸಲ್ಲಿಸುವುದನ್ನು ಖಚಿತಪಡಿಸುತ್ತದೆ.

ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವೇಳೆ ದಾಖಲೆಗಳನ್ನು ಪರಿಶೀಲಿಸುವುದು ಬಹುಮುಖ್ಯವಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರು ತಮ್ಮ ಆದಾಯ, ಕಡಿತಗಳು ಮತ್ತು ತೆರಿಗೆ ಪಾವತಿಗಳನ್ನು ದೃಢೀಕರಿಸಲು ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಆದ್ದರಿಂದ ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಪ್ರಕ್ರಿಯೆಯು ಹೆಚ್ಚು ಸುವ್ಯವಸ್ಥಿತ ಮತ್ತು ಡಿಜಿಟೈಸ್ ಆಗಿರುವುದರಿಂದ ಡಿಜಿಟಲ್ ಸಾಧನದಲ್ಲಿ ಅಗತ್ಯ ದಾಖಲೆಗಳನ್ನು ಸಂಘಟಿಸುವುದು ಮತ್ತು ಉಳಿಸುವುದು ಫೈಲಿಂಗ್ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಹೆಚ್ಚು ನಿಖರವಾಗಿ ಮಾಡಲು ಸಹಾಯ ಮಾಡುತ್ತದೆ.


ಸರಿಯಾದ ಐಟಿಆರ್ ಅರ್ಜಿಯನ್ನು ಆಯ್ಕೆ ಮಾಡಿ

ಆದಾಯದ ಮೂಲ ಮತ್ತು ಒಟ್ಟು ಆದಾಯದ ಆಧಾರದ ಮೇಲೆ ಅನ್ವಯವಾಗುವ ಐಟಿಆರ್ ಫಾರ್ಮ್ ಅನ್ನು ಗುರುತಿಸುವುದು ಮತ್ತು ಆಯ್ಕೆ ಮಾಡುವುದು ಮುಖ್ಯವಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ತೆರಿಗೆದಾರರಿಂದ ಆರಂಭಿಕ ರಿಟರ್ನ್ ಫೈಲಿಂಗ್ ಅನ್ನು ಉತ್ತೇಜಿಸಲು ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಐಟಿಆರ್ ಫಾರ್ಮ್‌ಗಳು ಲಭ್ಯವಾಗುವಂತೆ ಮಾಡಿತು.

ಐಟಿಆರ್-1 ಆದಾಯದ ಮೂಲ ಸಂಬಳವಾಗಿದ್ದು, ಮನೆ ಆಸ್ತಿ ಮತ್ತು ಇತರ ಮೂಲಗಳಿಂದ ಬಡ್ಡಿ, ಲಾಭಂಶ ಸೇರಿ ಒಟ್ಟು 50 ಲಕ್ಷ ರೂ. ಆದಾಯವಿದ್ದವರು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್ -2 ಬಂಡವಾಳ ಅಥವಾ ವಿದೇಶಿ ಆಸ್ತಿಗಳಿಂದ ಆದಾಯದ ಮೂಲ ಹೊಂದಿರುವ ಹಿಂದೂ ಅವಿಭಜಿತ ಕುಟುಂಬಗಳು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್- 3 ವ್ಯಾಪಾರ ಅಥವಾ ಸ್ವಯಂ ವೃತ್ತಿಯಿಂದ ಆದಾಯ ಹೊಂದಿರುವ ವ್ಯಕ್ತಿಗಳು, ಐಟಿಆರ್- 4 ವ್ಯಾಪಾರ ಅಥವಾ ಸ್ವಂತ ವೃತ್ತಿಯಿಂದ ಆದಾಯ ಹೊಂದಿರುವವರು ಇದರಲ್ಲಿ ಅರ್ಜಿ ಸಲ್ಲಿಸಬಹುದು.

ವೈಯಕ್ತಿಕ ಮತ್ತು ಬ್ಯಾಂಕ್ ಖಾತೆ ವಿವರ ಪರಿಶೀಲಿಸಿ

ಐಟಿಆರ್ ಅನ್ನು ಸಲ್ಲಿಸುವ ಮೊದಲು ತೆರಿಗೆ ಮರುಪಾವತಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಪ್ಪಿಸಲು ತೆರಿಗೆದಾರರು ತಮ್ಮ ವೈಯಕ್ತಿಕ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಪರಿಶೀಲಿಸಬೇಕು. ಹೆಸರು, ವಿಳಾಸ, ಇಮೇಲ್ ಮತ್ತು ಪಾನ್ ನಂತಹ ವಿವರಗಳನ್ನು ಲಿಂಕ್ ಮಾಡಲಾಗಿದೆ ಮತ್ತು ತೆರಿಗೆ ರಿಟರ್ನ್‌ನಲ್ಲಿ ನಿಖರವಾಗಿ ನಮೂದಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸರಿಯಾದ ಮೌಲ್ಯಮಾಪನ ವರ್ಷವನ್ನು ಆಯ್ಕೆ ಮಾಡಿ

ತೆರಿಗೆ ರಿಟರ್ನ್‌ನಲ್ಲಿ ಸರಿಯಾದ ಮೌಲ್ಯಮಾಪನ ವರ್ಷವನ್ನು ನಮೂದಿಸಿ. ಇದರಲ್ಲಿ ತಪ್ಪುಗಳಾದರೆ ಹೆಚ್ಚು ತೆರಿಗೆ ಮತ್ತು ಅನಗತ್ಯ ದಂಡಗಳಿಗೆ ಕಾರಣವಾಗಬಹುದು.

ಫಾರ್ಮ್ 16ರಲ್ಲಿ ವಿವರಗಳನ್ನು ಪರಿಶೀಲಿಸಿ

ಫಾರ್ಮ್ 16ರಲ್ಲಿನ ಸಂಬಳದ ಭಾಗಗಳು, ಟಿಡಿಎಸ್ ಕಡಿತ ಮತ್ತು ತೆರಿಗೆ-ಉಳಿತಾಯ ಹೂಡಿಕೆಗಳಂತಹ ವಿವರಗಳು ಸರಿಯಾಗಿವೆಯೇ ಎಂದು ಮುಂಚಿತವಾಗಿ ಖಚಿತಪಡಿಸಿಕೊಳ್ಳಿ. ಪೇ ಸ್ಲಿಪ್‌ ಮತ್ತು ಹೂಡಿಕೆ ಹೇಳಿಕೆಗಳೊಂದಿಗೆ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡಿ. ಯಾವುದೇ ವ್ಯತ್ಯಾಸಗಳನ್ನು ಸರಿಪಡಿಸಲು ಉದ್ಯೋಗದಾತರಿಗೆ ವರದಿ ಮಾಡಬೇಕು.

ಹಣಕಾಸು ವರ್ಷದಲ್ಲಿ ಒಬ್ಬರು ಬಹು ಉದ್ಯೋಗದಾತರನ್ನು ಹೊಂದಿದ್ದರೆ ರಿಟರ್ನ್ ಸಲ್ಲಿಸುವ ಮೊದಲು ನಿಮ್ಮ ಎಲ್ಲಾ ಫಾರ್ಮ್ 16ರಿಂದ ಆದಾಯವನ್ನು ಒಟ್ಟುಗೂಡಿಸಿರುವುದು ಖಚಿತಪಡಿಸಿಕೊಳ್ಳಿ. ಸರಿಯಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಒಟ್ಟು ಆದಾಯವನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ನಿಖರ ವರದಿ ಖಚಿತಪಡಿಸಿ

ಫಾರ್ಮ್ 26ಎಎಸ್ (ತೆರಿಗೆ ಕ್ರೆಡಿಟ್ ಸ್ಟೇಟ್‌ಮೆಂಟ್) ಮತ್ತು ಎಐಎಸ್ /ಟಿಐಎಸ್ (ವಾರ್ಷಿಕ ಮಾಹಿತಿ ಹೇಳಿಕೆ/ತೆರಿಗೆ ಮಾಹಿತಿ ಹೇಳಿಕೆ) ನಲ್ಲಿ ಲಭ್ಯವಿರುವ ಮಾಹಿತಿಯೊಂದಿಗೆ ಒಟ್ಟು ಆದಾಯವನ್ನು ಸಂಪೂರ್ಣವಾಗಿ ಸಮನ್ವಯಗೊಳಿಸಿ. ಯಾಕೆಂದರೆ ಇದು ಯಾವುದೇ ವ್ಯತ್ಯಾಸಗಳನ್ನು ಗುರುತಿಸಲು ಮತ್ತು ಎಲ್ಲಾ ಆದಾಯ ಮೂಲಗಳನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

Continue Reading

ಪ್ರಮುಖ ಸುದ್ದಿ

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

VISTARANEWS.COM


on

GST Collection
Koo

ನವದೆಹಲಿ: 2024-25ನೇ ಹಣಕಾಸು ವರ್ಷದ ಜೂನ್​​ನಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು (GST Collection) 1.74 ಲಕ್ಷ ಕೋಟಿ ರೂಪಾಯಿ ಆಗಿದ್ದು ಶೇಕಡಾ 8 ರಷ್ಟು ಏರಿಕೆಯಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ಆದಾಗ್ಯೂ, ಮಾಸಿಕ ಜಿಎಸ್ಟಿ ಸಂಗ್ರಹದ ದತ್ತಾಂಶದ ಅಧಿಕೃತ ಬಿಡುಗಡೆಯನ್ನು ಸರ್ಕಾರ ನಿಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಣಕಾಸು ವರ್ಷದ ಮೂರು ತಿಂಗಳಲ್ಲಿ (ಏಪ್ರಿಲ್-ಜೂನ್) ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ​) ಸಂಗ್ರಹವು 5.57 ಲಕ್ಷ ಕೋಟಿ ರೂ.ಗಳಷ್ಟಿದೆ ಎಂದು ಮೂಲಗಳು ತಿಳಿಸಿವೆ.

ಜೂನ್​​ನ ಸಂಗ್ರಹವು ಮೇ 2024 ರಲ್ಲಿ ಸಂಗ್ರಹಿಸಿದ 1.73 ಲಕ್ಷ ಕೋಟಿ ರೂ.ಗಿಂತ ಹೆಚ್ಚಾಗಿದೆ. ಇದು ಜೂನ್ 2023 ರಲ್ಲಿ ಸಂಗ್ರಹಿಸಿದ 1.61 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಹೆಚ್ಚಾಗಿದೆ. ಕೇಂದ್ರ ಜಿಎಸ್ಟಿ (ಸಿಜಿಎಸ್​ಟಿ) ಗೆ 39,586 ಕೋಟಿ ರೂ., ರಾಜ್ಯ ಜಿಎಸ್ಟಿ (ಎಸ್ಜಿಎಸ್ಟಿ) ಗೆ 33,548 ಕೋಟಿ ರೂ. ಜಿಎಸ್ಟಿ ಸಂಗ್ರಹವು ಏಪ್ರಿಲ್​​ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ.ಗೆ ತಲುಪಿತ್ತು.

ತೆರಿಗೆ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಹೇಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. ತೆರಿಗೆ ಪಾಲುದಾರ ಸೌರಭ್ ಅಗರ್ವಾಲ್ ಮಾತನಾಡಿ, ಈ ದೃಢ ಕಾರ್ಯಕ್ಷಮತೆಯು ಉತ್ಸಾಹಭರಿತ ಆರ್ಥಿಕತೆಯನ್ನು ಪ್ರತಿಬಿಂಬಿಸುತ್ತದೆ. ಸಮಯೋಚಿತ ಲೆಕ್ಕಪರಿಶೋಧನೆ, ಪರಿಶೀಲನಾ ಕ್ರಮಗಳು ಮತ್ತು ಇಲಾಖೆಯ ಪರಿಣಾಮಕಾರಿ ಜಾರಿ ಇವೆಲ್ಲವೂ ಈ ಜಿಎಸ್​ಟಿ ಸಂಗ್ರಹ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

“ಸಂಗ್ರಹದಲ್ಲಿನ ಗಮನಾರ್ಹ ಏರಿಕೆಯು ಜಿಎಸ್ಟಿ ಸುಧಾರಣೆಗಳ ಮುಂದಿನ ನಿರೀಕ್ಷೆಗಳನ್ನು ಹೆಚ್ಚಿಸುತ್ತದೆ. ಈ ಸುಧಾರಣೆಗಳು ಬಂಡವಾಳದ ಅಡೆತಡೆಗಳನ್ನು ಪರಿಹರಿಸಬಹುದು. ತೆರಿಗೆ ದರಗಳನ್ನು ಸುಗಮಗೊಳಿಸಬಹುದು, ನಿರ್ಬಂಧಗಳನ್ನು ಸರಾಗಗೊಳಿಸಬಹುದು. ಅಸ್ತಿತ್ವದಲ್ಲಿರುವ ಸವಾಲುಗಳನ್ನು ನಿಭಾಯಿಸಲು ಪರಿಹಾರಗಳನ್ನು ಜಾರಿಗೆ ತರಬಹುದು ಎಂದು ಅಗರ್ವಾಲ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

Maharashtra Politics: ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

VISTARANEWS.COM


on

Maharashtra Politics
Koo

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (Maharashtra Politics) ಶಿವಸೇನೆ (ಉದ್ಧವ್​ ಠಾಕ್ರೆ ಬಣ) ಮುಖಂಡ ಅನಿಲ್ ಪರಬ್ ಅವರು ಬಿಜೆಪಿಯ ಕಿರಣ್ ಶೆಲಾರ್ ಅವರನ್ನು ಸೋಲಿಸಿದ್ದಾರೆ. ಪರಬ್ 44,784 ಮತಗಳನ್ನು ಪಡೆದರೆ, ಶೆಲಾರ್ 18,772 ಮತಗಳನ್ನು ಪಡೆದರು. ಜೂನ್ 26 ರಂದು ನಡೆದ ಮತದಾನದಲ್ಲಿ ಒಟ್ಟು 67,644 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಚಲಾವಣೆಯಾದ ಒಟ್ಟು ಮತಗಳಲ್ಲಿ 64,222 ಮತಗಳು ಕ್ರಮಬದ್ಧವಾಗಿದ್ದು, ಗೆಲುವಿನ ಕೋಟಾ 32,112 ಮತಗಳಾಗಿದ್ದವು.

ಮೊದಲ ಪ್ರಾಶಸ್ತ್ಯದ ಮತದಾನದಲ್ಲಿ ಪರಬ್ 44,784 ಮತಗಳನ್ನು ಪಡೆದು ಚುನಾಯಿತರಾಗಿದ್ದಾರೆ. ಜುಲೈ 12 ರಂದು ಮಹಾರಾಷ್ಟ್ರ ವಿಧಾನ ಪರಿಷತ್ತಿಗೆ ನಡೆಯಲಿರುವ

ದ್ವೈವಾರ್ಷಿಕ ಚುನಾವಣೆಗೆ ಎಂಎಲ್​​ಸಿ ಪ್ರಜ್ಞಾ ಸತವ್ ಅವರನ್ನು ಕಾಂಗ್ರೆಸ್ ಇಂದು ಶಾಸಕರ ಕೋಟಾದಿಂದ ತನ್ನ ಅಭ್ಯರ್ಥಿಯಾಗಿ ಮರು ನಾಮಕರಣ ಮಾಡಿದೆ. ರಾಜ್ಯ ವಿಧಾನಸಭೆಯ ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ (ಜುಲೈ 2) ಕೊನೆಯ ದಿನವಾಗಿದೆ. ಹಾಲಿ ಸದಸ್ಯರು ಜುಲೈ 27 ರಂದು ನಿವೃತ್ತರಾಗುವುದರಿಂದ ಖಾಲಿಯಾಗುವ 11 ಸ್ಥಾನಗಳನ್ನು ತುಂಬಲು ಈ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

ವಿಧಾನಸಭೆಯ ಸದಸ್ಯರು (ಶಾಸಕರು) ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ನಿವೃತ್ತರಾಗುತ್ತಿರುವ 11 ಎಂಎಲ್ಸಿಗಳಲ್ಲಿ ಇಬ್ಬರು ಕಾಂಗ್ರೆಸ್​ನವರು. ಆದಾಗ್ಯೂ, ವಿಧಾನಸಭೆಯಲ್ಲಿ ಕಾಂಗ್ರೆಸ್​​ನ ಪ್ರಸ್ತುತ ಬಲವನ್ನು ಗಮನಿಸಿದರೆ, ವಿರೋಧ ಪಕ್ಷವು ಮೇಲ್ಮನೆಗೆ ಒಬ್ಬ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಬಹುದು.

ಪ್ರದ್ನ್ಯಾ ಸತವ್ ಅವರು ದಿವಂಗತ ಕಾಂಗ್ರೆಸ್ ಸಂಸದ ರಾಜೀವ್ ಸತವ್ ಅವರ ಪತ್ನಿ. ಹಾಲಿ ಕಾಂಗ್ರೆಸ್ ಎಂಎಲ್ಸಿ ಶರದ್ ರಾನ್ಪೈಸ್ ಅವರ ನಿಧನದ ನಂತರ ಉಪಚುನಾವಣೆ ಅನಿವಾರ್ಯವಾದಾಗ 2021 ರಲ್ಲಿ ಅವರು ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದರು. ಮಧ್ಯ ಮಹಾರಾಷ್ಟ್ರದ ಬೀಡ್ ನಿಂದ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಸೋತ ಮಾಜಿ ರಾಜ್ಯ ಸಚಿವೆ ಪಂಕಜಾ ಮುಂಡೆ ಸೇರಿದಂತೆ ಆಡಳಿತಾರೂಢ ಬಿಜೆಪಿ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕಾಂಗ್ರೆಸ್​ನ ಮಿತ್ರ ಪಕ್ಷವಾದ ಎನ್ಸಿಪಿ (ಶರದ್​​ ಪವಾರ್) ಪೆಸೆಂಟ್ಸ್ ಅಂಡ್ ವರ್ಕರ್ಸ್ ಪಾರ್ಟಿ (ಪಿಡಬ್ಲ್ಯೂಪಿ) ಅಭ್ಯರ್ಥಿ ಜಯಂತ್ ಪಾಟೀಲ್ ಅವರಿಗೆ ಬೆಂಬಲ ಘೋಷಿಸಿದೆ. 288 ಸದಸ್ಯರ ವಿಧಾನಸಭೆಯಲ್ಲಿ 14 ಸ್ಥಾನಗಳು ಖಾಲಿ ಇದ್ದು, ಎಲೆಕ್ಟೋರಲ್ ಕಾಲೇಜ್ 274 ಮತ್ತು ವಿಜೇತ ಅಭ್ಯರ್ಥಿಯ ಕೋಟಾ 23 ಆಗಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ದ್ವೈವಾರ್ಷಿಕ ಚುನಾವಣೆಗಳು ನಡೆಯುತ್ತಿವೆ.

Continue Reading

ವಾಣಿಜ್ಯ

Challa Sreenivasulu Setty: ಚಲ್ಲಾ ಶ್ರೀನಿವಾಸುಲು ಸೆಟ್ಟಿ; ಅಂದು ಪ್ರೊಬೆಷನರಿ ಅಧಿಕಾರಿ, ಈಗ ಎಸ್‌ಬಿಐ ಅಧ್ಯಕ್ಷ!

2020ರ ಜನವರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದ ಚಲ್ಲಾ ಶ್ರೀನಿವಾಸುಲು ಸೆಟ್ಟಿ (Challa Sreenivasulu Setty) ಪ್ರಸ್ತುತ ಎಸ್‌ಬಿಐನ ಇಂಟರ್ನ್ಯಾಷನಲ್ ಬ್ಯಾಂಕಿಂಗ್, ಗ್ಲೋಬಲ್ ಮಾರ್ಕೆಟ್ಸ್ ಮತ್ತು ಟೆಕ್ನಾಲಜಿ ವರ್ಟಿಕಲ್‌ಗಳನ್ನು ನೋಡಿಕೊಳ್ಳುತ್ತಿದ್ದಾರೆ. ಆಗಸ್ಟ್ 28ರಂದು ನಿವೃತ್ತರಾಗಲಿರುವ ದಿನೇಶ್ ಕುಮಾರ್ ಖರಾ ಅವರ ಬಳಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ.

VISTARANEWS.COM


on

By

Challa Sreenivasulu Setty
Koo

ಸರ್ಕಾರಿ ನೇಮಕಾತಿ ಆಯ್ಕೆ ಸಮಿತಿ ಹಣಕಾಸು ಸೇವೆ ಸಂಸ್ಥೆಗಳ ಬ್ಯೂರೋ (FSBI) ಶನಿವಾರ ದೇಶದ ಅತಿ ದೊಡ್ಡ ಹಣಕಾಸು ವಹಿವಾಟು ನಡೆಸುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (SBI) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಚಲ್ಲಾ ಶ್ರೀನಿವಾಸುಲು ಸೆಟ್ಟಿ ( Challa Sreenivasulu Setty) ಅವರನ್ನು ಆಯ್ಕೆ ಮಾಡಿದೆ.

ಯಾರು ಚಲ್ಲಾ ಶ್ರೀನಿವಾಸುಲು ಸೆಟ್ಟಿ?

2020ರ ಜನವರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಸೆಟ್ಟಿ ಪ್ರಸ್ತುತ ಎಸ್‌ಬಿಐನ ಇಂಟರ್ನ್ಯಾಷನಲ್ ಬ್ಯಾಂಕಿಂಗ್, ಗ್ಲೋಬಲ್ ಮಾರ್ಕೆಟ್ಸ್ ಮತ್ತು ಟೆಕ್ನಾಲಜಿ ವರ್ಟಿಕಲ್‌ಗಳನ್ನು ನೋಡಿಕೊಳ್ಳುತ್ತಿದ್ದಾರೆ.
ಎಸ್‌ಬಿಐ ಅಧ್ಯಕ್ಷ ಸ್ಥಾನಕ್ಕೆ ಗರಿಷ್ಠ ವಯೋಮಿತಿಯಾದ 63ನೇ ವರ್ಷಕ್ಕೆ ಕಾಲಿಟ್ಟಿರುವ ಅವರು ಆಗಸ್ಟ್ 28ರಂದು ನಿವೃತ್ತರಾಗಲಿರುವ ದಿನೇಶ್ ಕುಮಾರ್ ಖರಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ.

ಸೆಟ್ಟಿ ಅವರು ಭಾರತ ಸರ್ಕಾರದಿಂದ ರಚಿಸಲಾದ ವಿವಿಧ ಕಾರ್ಯಪಡೆಗಳು, ಸಮಿತಿಗಳ ಮುಖ್ಯಸ್ಥರೂ ಆಗಿದ್ದು, ಈ ಹಿಂದೆ ಬ್ಯಾಂಕಿನ ಚಿಲ್ಲರೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಪೋರ್ಟ್‌ಫೋಲಿಯೊವನ್ನು ನೋಡಿಕೊಳ್ಳುತ್ತಿದ್ದರು.
ಕೃಷಿಯಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕರ್‌ಗಳ ಪ್ರಮಾಣೀಕೃತ ಸಹವರ್ತಿಯಾಗಿರುವ ಅವರು 1988 ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಎಸ್‌ಬಿಐನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ಮೂರು ದಶಕಗಳ ಕಾಲ ವೃತ್ತಿಜೀವನದ ಉದ್ದಕ್ಕೂ ಅವರು ಕಾರ್ಪೊರೇಟ್ ಕ್ರೆಡಿಟ್, ಚಿಲ್ಲರೆ ವ್ಯಾಪಾರ, ಡಿಜಿಟಲ್ ಮತ್ತು ಅಂತಾರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಅಭಿವೃದ್ಧಿ ಹೊಂದಿದ ಮಾರುಕಟ್ಟೆಗಳಲ್ಲಿ ಬ್ಯಾಂಕಿಂಗ್‌ನಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಸೆಟ್ಟಿ ಅವರು ಎಸ್‌ಬಿಐನಲ್ಲಿ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ – ಸ್ಟ್ರೆಸ್ಡ್ ಅಸೆಟ್ಸ್ ರೆಸಲ್ಯೂಶನ್ ಗ್ರೂಪ್, ಕಾರ್ಪೊರೇಟ್ ಅಕೌಂಟ್ಸ್ ಗ್ರೂಪ್‌ನಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಮತ್ತು ಜನರಲ್ ಮ್ಯಾನೇಜರ್, ಇಂದೋರ್‌ನ ವಾಣಿಜ್ಯ ಶಾಖೆಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಎಸ್‌ಬಿಐ, ನ್ಯೂಯಾರ್ಕ್ ಬ್ರಾಂಚ್‌ನಲ್ಲಿ ವಿಪಿ ಮತ್ತು ಹೆಡ್ (ಸಿಂಡಿಕೇಶನ್ಸ್) ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ನಿರ್ವಹಿಸಿದ್ದಾರೆ. .

ಎಸ್‌ಬಿಐ ಅಧ್ಯಕ್ಷರನ್ನು ಯಾರು ನೇಮಕ ಮಾಡುತ್ತಾರೆ?

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ನಿರ್ದೇಶಕರ ಮುಖ್ಯಸ್ಥರಾಗಿರುವ ಎಫ್ ಎಸ್ ಐಬಿ 2024ರ ಜೂನ್ 29ರಂದು ಸ್ಥಾನಕ್ಕಾಗಿ ಮೂವರು ಅಭ್ಯರ್ಥಿಗಳನ್ನು ಸಂದರ್ಶಿಸಿದೆ.

ಇಂಟರ್‌ಫೇಸ್‌ನಲ್ಲಿ ಕಾರ್ಯಕ್ಷಮತೆ, ಒಟ್ಟಾರೆ ಅನುಭವ ಮತ್ತು ಅಸ್ತಿತ್ವದಲ್ಲಿರುವ ನಿಯತಾಂಕಗಳನ್ನು ಗಮನದಲ್ಲಿಟ್ಟುಕೊಂಡು ಬ್ಯೂರೋ ಚಲ್ಲಾ ಶ್ರೀನಿವಾಸಲು ಸೆಟ್ಟಿ ಅವರನ್ನು ಎಸ್‌ಬಿಐನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದೆ ಎಂದು ಎಫ್‌ಎಸ್‌ಐಬಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

ಅಧ್ಯಕ್ಷರನ್ನು ಎಸ್‌ಬಿಐನ ಸೇವೆಯಲ್ಲಿರುವ ವ್ಯವಸ್ಥಾಪಕ ನಿರ್ದೇಶಕರ ಪೂಲ್‌ನಿಂದ ನೇಮಿಸಲಾಗುತ್ತದೆ. ಸಾಮಾನ್ಯವಾಗಿ, ಅತ್ಯಂತ ಹಿರಿಯ ವ್ಯವಸ್ಥಾಪಕ ನಿರ್ದೇಶಕರು ಬ್ಯಾಂಕಿನ ಅಧ್ಯಕ್ಷರಾಗುತ್ತಾರೆ. ಎಫ್‌ಎಸ್‌ಐಬಿ ಶಿಫಾರಸಿನ ಕುರಿತು ಅಂತಿಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ತೆಗೆದುಕೊಳ್ಳುತ್ತದೆ. ಎಫ್‌ಎಸ್‌ಐಬಿಯ ನೇತೃತ್ವವನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (ಡಿಒಪಿಟಿ) ಮಾಜಿ ಕಾರ್ಯದರ್ಶಿ ಭಾನು ಪ್ರತಾಪ್ ಶರ್ಮಾ ಅವರು ವಹಿಸಿದ್ದಾರೆ.

Continue Reading
Advertisement
dengue fever hassan girl death
ಕ್ರೈಂ5 mins ago

Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ITR Filing
ಮನಿ-ಗೈಡ್26 mins ago

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

karnataka weather Forecast
ಮಳೆ46 mins ago

Karnataka Weather : ರಾಜ್ಯದ ಇಲ್ಲೆಲ್ಲ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Mosquito Repellents
ಆರೋಗ್ಯ1 hour ago

Mosquito Repellents: ರಾಸಾಯನಿಕದ ಅಪಾಯ ಏಕೆ? ಸೊಳ್ಳೆ ಓಡಿಸಲು ಇಲ್ಲಿವೆ 10 ನೈಸರ್ಗಿಕ ವಿಧಾನಗಳು!

Karnataka Tour
ಪ್ರವಾಸ1 hour ago

Karnataka Tour: ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

GST Collection
ಪ್ರಮುಖ ಸುದ್ದಿ8 hours ago

GST Collection : ಜೂನ್​ನಲ್ಲಿ 1.74 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಸಂಗ್ರಹ, ಶೇಕಡಾ 8 ಏರಿಕೆ

2nd National Pediatric Stroke Conclave 2024 inauguration in Bengaluru
ಕರ್ನಾಟಕ8 hours ago

Bengaluru News: ಬೆಂಗಳೂರಿನಲ್ಲಿ 2ನೇ ರಾಷ್ಟ್ರೀಯ ಮಕ್ಕಳ ಪಾರ್ಶ್ವವಾಯುವಿನ ಶೃಂಗ 2024ಕ್ಕೆ ಚಾಲನೆ

Maharashtra Politics
ಪ್ರಮುಖ ಸುದ್ದಿ8 hours ago

Maharashtra Politics : ವಿಧಾನ ಪರಿಷತ್​ನಲ್ಲಿ ಬಿಜೆಪಿಯನ್ನು ಸೋಲಿಸಿದ ಉದ್ಧವ್​ ಠಾಕ್ರೆಯ ಶಿವಸೇನೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌