Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ! - Vistara News

ಟಾಲಿವುಡ್

Actor Darshan: ದರ್ಶನ್‌ ಅಣ್ಣ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದ ಟಾಲಿವುಡ್‌ ಸ್ಟಾರ್‌ ನಾಗ ಶೌರ್ಯ!

Actor Darshan: ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ. 2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

VISTARANEWS.COM


on

Actor Darshan incident Naga Shaurya support
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ದರ್ಶನ್ (Actor Darshan) ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಷ್ಟಾದರೂ ದರ್ಶನ್‌ಗೆ ಕೆಲವು ಅಭಿಮಾನಿಗಳು ಹಾಗೂ ನಟ ನಟಿಯರು ಬೆಂಬಲ ನೀಡಿದ್ದಾರೆ. ದಿನ ಕಳೆದಂತೆ ತನಿಖೆಯಿಂದ ಬೆಚ್ಚಿ ಬೀಳಿಸುವ ಸತ್ಯಗಳು ಹೊರಬೀಳುತ್ತಿವೆ. ಕಲೆವರು ಅಂದಿನಿಂದ ದರ್ಶನ್‌ಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಸಾರ್ವಜನಿಕ ಆಕ್ರೋಶದ ನಡುವೆ, ಟಾಲಿವುಡ್ ಹೀರೊ ನಾಗ ಶೌರ್ಯ ದರ್ಶನ್‌ಗೆ ಬೆಂಬಲ ನೀಡಿದ್ದಾರೆ. ʻದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆʼʼಎಂದು ಬರೆದುಕೊಂಡಿದ್ದಾರೆ.

ನಾಗ ಶೌರ್ಯ ಬರೆದುಕೊಂಡಿದ್ದು ಹೀಗೆ ʻ“ಘಟನೆ ಕೇಳಿದಾಗ ಮೃತರ ಕುಟುಂಬಕ್ಕೆ ನನ್ನ ಹೃದಯ ಮರಗುತ್ತದೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವಿಷಯದಲ್ಲಿ ಜನರು ಈಗಾಗಲೇ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ಕಷ್ಟವಾಗುತ್ತದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ಕನಸಿನಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್‌ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಬದ್ಧತೆಯನ್ನು ಅವರನ್ನು ಚೆನ್ನಾಗಿ ಬಲ್ಲವರು ತಿಳಿದುಕೊಂಡಿದ್ದಾರೆ. ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ಗಾಗಿ ಊಟ ಬಿಟ್ಟು ಜೈಲಿನ ಹೊರಗೆ ವಿಶೇಷಚೇತನ ಯುವತಿ ಗೋಳಾಟ

ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆ ಇದೆ. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ. ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ಅವರು ನಿರಪರಾಧಿ ಎಂಬುದು ಸಾಬೀತಾಗುತ್ತದೆ. ನಿಜವಾದ ಅಪರಾಧಿ ಯಾರೆಂಬುದು ಗೊತ್ತಾಗುತ್ತದೆ’ ಎಂದಿದ್ದಾರೆ.

ದರ್ಶನ್ ಅವರನ್ನು ಬೆಂಬಲಿಸುವ ನಾಗಶೌರ್ಯ ನಿರ್ಧಾರವು ಮೂರ್ಖತನ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಒಬ್ಬ ಕೊಲೆಗಾರನನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ನೆಟ್ಟಿಗರು ನಾಗ ಶೌರ್ಯ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟನ ಈ ಪೋಸ್ಟ್‌ಗಾಗಿ ಛೀಮಾರಿ ಹಾಕುತ್ತಿದ್ದಾರೆ.

2024ರ ಜೂನ್ 7ರಂದು ರೇಣುಕಾಸ್ವಾಮಿಯನ್ನು ದರ್ಶನ್ ಸಹಚರ ರಘು ಅಪಹರಿಸಿದ್ದ. ಕೆಲವು ವರದಿಗಳ ಪ್ರಕಾರ, ದರ್ಶನ್ ಸಂತ್ರಸ್ತನನ್ನು ಬೆಲ್ಟ್ ನಿಂದ ಹೊಡೆದರು ಮತ್ತು ಆರೋಪಿಸಲಾಗಿದೆ. ಅವರ ಕುಟುಂಬವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ನೀಡಿತು. ಜೂನ್ 9, 2024 ರಂದು, ದರ್ಶನ್ ತಮ್ಮ ಇತ್ತೀಚಿನ ಚಿತ್ರ “ಡೆವಿಲ್: ದಿ ಹೀರೋ” ಸೆಟ್​​ನಲ್ಲಿದ್ದಾಗ ಪವಿತ್ರಾ ಗೌಡ ಅವರೊಂದಿಗೆ ವಿಚಾರಣೆಗೆ ಕರೆದೊಯ್ಯಲಾಗಿತ್ತು.

ಸ್ವಾಮಿಯನ್ನು ಕೋಲುಗಳಿಂದ ಥಳಿಸಿ ವಿದ್ಯುತ್ ಆಘಾತಗಳನ್ನು ನೀಡಲಾಗುತ್ತು. ಈ ವೇಳೆ ಪವಿತ್ರಾ ಗೌಡ ಸ್ವಲ್ಪ ಸಮಯದವರೆಗೆ ಶೆಡ್ ನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ತೂಗುದೀಪ ಅವರು ಮಾಡಿದ ಪೋಸ್ಟ್​ಗಳಿಗೆ ಸ್ವಾಮಿಯನ್ನು ಶಿಕ್ಷಿಸಲು ಶ್ರೀ ತೂಗುದೀಪ ಅವರನ್ನು ಪ್ರಚೋದಿಸಿದ್ದು ಎಂ.ಎಸ್.ಗೌಡ ಎಂದು ಹೇಳಲಾಗಿದೆ. ಇದೇ ರೀತಿಯ ಹಲವಾರು ಮಾಹಿತಿಗಳ ನೀಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading

ಸಿನಿಮಾ

Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

Kalki 2898 AD:  ʼಕಲ್ಕಿ 2898 ಎಡಿʼ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ, ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. 5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿದೆ. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ:  ʼಕಲ್ಕಿ 2898 ಎಡಿʼ (Kalki 2898 AD) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಾಗಾಲೋಟ ಮುಂದುವರಿಸಿದೆ. ಜೂನ್ 27ರಂದು ವಿಶ್ವಾದ್ಯಂತ ತೆರೆಕಂಡ ಈ ಸೈನ್ಸ್‌ ಫಿಕ್ಷನ್‌ ದಾಖಲೆಯ ಕಲೆಕ್ಷನ್‌ ಮಾಡಿದೆ. ಅದರಲ್ಲಿಯೂ ಚಿತ್ರ ಬಿಡುಗಡೆಯಾಗಿ 5 ದಿನ ಕಳೆದರೂ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. 5ನೇ ದಿನವಾದ ಸೋಮವಾರ (ಜುಲೈ 2) ʼಕಲ್ಕಿʼ ಚಿತ್ರ ಜಾಗತಿಕವಾಗಿ ಬರೋಬ್ಬರಿ 84 ಕೋಟಿ ರೂ. ಗಳಿಸಿದೆ. ಈ ಮೂಲಕ ಮಲ್ಟಿ ಸ್ಟಾರರ್‌ ಚಿತ್ರ ಒಟ್ಟು 635 ಕೋಟಿ ರೂ. ಬಾಚಿಕೊಂಡಿದೆ.

ಭಾರತದಲ್ಲಿ ಗಳಿಸಿದ್ದೆಷ್ಟು?

ಸೋಮವಾರ ಭಾರತವೊಂದರಲ್ಲೇ ʼಕಲ್ಕಿʼ ಸುಮಾರು 34.6 ಕೋಟಿ ರೂ. ಗಳಿಸಿದೆ ಎಂದು ವರದಿಯೊಂದು ತಿಳಿಸಿದೆ. ʼʼಸೋಮವಾರ ಭಾರತದಲ್ಲಿ ಎಲ್ಲ ಭಾಷೆಗಳಲ್ಲಿ ಸೇರಿ ಸೇರಿ ಸುಮಾರು 34.6 ಕೋಟಿ ರೂ. ಬಾಚಿಕೊಂಡಿದೆ. ಇನ್ನು ಜಗತ್ತಿನ ವಿವಿಧ ಕಡೆಗಳ ಕಲೆಕ್ಷನ್‌ 45-50 ಕೋಟಿ ರೂ. ಹೀಗೆ ಒಂದೇ ದಿನ ಸುಮಾರು 84 ಕೋಟಿ ರೂ. ಬಾಚಿಕೊಂಡಿದ್ದು, ಒಟ್ಟು ಕಲೆಕ್ಷನ್‌ 635 ಕೋಟಿ ರೂ,ಗೆ ತಲುಪಿದೆʼʼ ಎಂದು ವರದಿ ತಿಳಿಸಿದೆ. ಅಧಿಕೃತ ಹೇಳಿಕೆ ಇನ್ನಷ್ಟೇ ಹೊರ ಬರಬೇಕಿದೆ. ಚಿತ್ರವನ್ನು ಸುಮಾರು 600 ಕೋಟಿ ರೂ. ಬಜೆಟ್‌ನಲ್ಲಿ ತಯಾರಿಸಲಾಗಿದ್ದು, ಈಗಾಗಲೇ ಹಾಕಿದ ದುಡ್ಡು ವಾಪಸ್‌ ಬಂದಂತಾಗಿದೆ.

ರಿಲೀಸ್‌ ಆದ 4 ದಿನಕ್ಕೆ ʼಕಲ್ಕಿʼ ಜಾಗತಿಕವಾಗಿ 550 ಕೋಟಿ ರೂ. ಗಳಿಸಿದೆ ಎಂದು ಈ ಹಿಂದೆ ಚಿತ್ರತಂಡ ಘೋಷಿಸಿತ್ತು. ಮೊದಲ ದಿನವೇ ಸಿನಿಮಾ ಸುಮಾರು 191 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು. ಆ ಮೂಲಕ ಮೊದಲ ದಿನ ಅತ್ಯಧಿಕ ಕಲೆಕ್ಷನ್‌ ಮಾಡಿದ ಚಿತ್ರಗಳ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ತೆಲುಗಿನ ʼಆರ್‌ಆರ್‌ಆರ್‌ʼ ಮತ್ತು ʼಬಾಹುಬಲಿ 2ʼ ಮೊದಲೆರಡು ಸ್ಥಾನಗಳಲ್ಲಿವೆ.

ಭರ್ಜರಿ ಗಳಿಕೆ

ಮೊದಲ ದಿನ ಭರ್ಜರಿ 191 ಕೋಟಿ ರೂ. ಗಳಿಸಿದ ʼಕಲ್ಕಿʼ ಆ ಮೂಲಕ ಸ್ಯಾಂಡಲ್‌ವುಡ್‌ನ ʼಕೆಜಿಎಫ್‌ 2ʼ (159 ಕೋಟಿ ರೂ.), ʼಸಲಾರ್‌ʼ (158 ಕೋಟಿ ರೂ.), ʼಲಿಯೋʼ (142.75 ಕೋಟಿ ರೂ.), ʼಸಾಹೋʼ (130 ಕೋಟಿ ರೂ.) ಮತ್ತು ʼಜವಾನ್‌ʼ (129 ಕೋಟಿ ರೂ.) ದಾಖಲೆ ಮುರಿದೆ. ಅದಾಗ್ಯೂ 223 ಕೋಟಿ ರೂ. ಕಲೆಕ್ಷನ್‌ ಮಾಡಿದ ʼಆರ್‌ಆರ್‌ಆರ್‌ʼ ಮತ್ತು 217 ಕೋಟಿ ರೂ. ಗಳಿಸಿದ ʼಬಾಹುಬಲಿ 2ʼ ಈಗಲೂ ಮೊದಲ ದಿನದ ಕಲೆಕ್ಷನ್‌ ವಿಚಾರದಲ್ಲಿ ಮೊದಲೆರಡು ಸ್ಥಾನಗಳಲ್ಲಿ ಭದ್ರವಾಗಿವೆ.

ಬಹುತಾರಾಗಣ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್ ಅಶ್ವಿನ್ ಆ್ಯಕ್ಷನ್‌ ಕಟ್‌ ಹೇಳಿರುವ ʼಕಲ್ಕಿʼಯಲ್ಲಿ ಬಹುತಾರಾಗಣವಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿ ತೆರೆ ಹಂಚಿಕೊಂಡಿದ್ದು, ಬಾಲಿವುಡ್‌ನ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಜನಪ್ರಿಯ ತಾರೆಗಳಾದ ಕಮಲ್‌ ಹಾಸನ್‌, ಶೋಭನಾ ಮತ್ತಿತರರು ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ: Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Continue Reading

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಕಂಡ ʻಕಲ್ಕಿʼ: ಪ್ರಭಾಸ್‌ ಅಬ್ಬರಕ್ಕೆ ಬಾಕ್ಸ್ ಆಫೀಸ್‌ ಧೂಳೀಪಟ!

Kalki 2898 AD: ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

VISTARANEWS.COM


on

Kalki 2898 AD Prabhas Film Hits Jackpot 500 Cr WW In Opening
Koo

ಬೆಂಗಳೂರು: ಕಲ್ಕಿ 2898 AD (Kalki 2898 AD) ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ನಾಗ್ ಅಶ್ವಿನ್ ಅವರ ಕಲ್ಕಿ 2898 AD ಜೂನ್ 27 ರಂದು ಬಿಡುಗಡೆಯಾಯಿತು. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್‌ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯದ ಈ ಚಿತ್ರ ಭಾರತದಲ್ಲಿ ಎಲ್ಲಾ ಭಾಷೆಗಳಲ್ಲಿ 300.6 ಕೋಟಿ ರೂ. ಗಳಿಸಿದೆ. ವರದಿಗಳ ಪ್ರಕಾರ, ಕಲ್ಕಿ 2898 AD ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿ ರೂ. ಮೀರಿದೆ.ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

ಕಲ್ಕಿ 2898 AD ತನ್ನ ಆರಂಭಿಕ ದಿನದಲ್ಲಿ 95.3 ಕೋಟಿ ರೂ. ಮತ್ತು ಶುಕ್ರವಾರ 57.6 ಕೋಟಿ ರೂ. ಭಾರತದಲ್ಲಿ ಗಳಿಸಿತು. ಶನಿವಾರ 67.1 ಕೋಟಿ ರೂ. ಮತ್ತು ಭಾನುವಾರ 83.2 ಕೋಟಿ ರೂ. ಗಳಿಸಿದ ಈ ಚಿತ್ರ ಕಲೆಕ್ಷನ್‌ನಲ್ಲಿ ಏರಿಕೆ ಕಂಡಿದೆ. ಚಿತ್ರದ ಒಟ್ಟು ಮೊತ್ತ 300.6 ಕೋಟಿ ರೂ. ಆಗಿದೆ. ವಿಶ್ವಾದ್ಯಂತ ಮೂರು ದಿನಗಳಲ್ಲಿ ಚಿತ್ರ 415 ಕೋಟಿ ಗಳಿಸಿದೆ. ವಾರದ ದಿನಗಳಲ್ಲೂ ಚಿತ್ರ ತನ್ನ ಯಶಸ್ವಿ ಪ್ರದರ್ಶನವನ್ನು ಉಳಿಸಿಕೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಕಲ್ಕಿ 2898 AD ಎಲ್ಲಾ ದಕ್ಷಿಣ ಭಾರತದ ಭಾಷೆಗಳಲ್ಲಿ ಮತ್ತು ಹಿಂದಿಯಲ್ಲಿ 2D ಮತ್ತು 3D ನಲ್ಲಿ ಬಿಡುಗಡೆಯಾಯಿತು.

ಕರ್ನಾಟಕದಲ್ಲಿ ‘ಕಲ್ಕಿ2898 AD’ ಸಿನಿಮಾ ಅತೀ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಕನ್ನಡದಲ್ಲಿ ದೊಡ್ಡ ಸಿನಿಮಾಗಳು ಇಲ್ಲದೇ ಇರುವುದರಿಂದ ಕರ್ನಾಟಕದಲ್ಲಿ ಸುಮಾರು 444 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ 219 ಸ್ಕ್ರೀನ್‌ಗಳಲ್ಲಿ ತೆಲುಗು, 100 ಸ್ಕ್ರೀನ್‌ಗಳಲ್ಲಿ ಕನ್ನಡ, 85 ಸ್ಕ್ರೀನ್‌ಗಳಲ್ಲಿ ಹಿಂದಿ, 40 ಸ್ಕ್ರೀನ್‌ಗಳಲ್ಲಿ ತಮಿಳು ಭಾಷೆಯ ಕಲ್ಕಿ ರಿಲೀಸ್ ಆಗಿದ್ದವು. ಈ ನಾಲ್ಕು ಭಾಷೆಗಳಿಂದ ಕರ್ನಾಟಕದಲ್ಲಿ ‘ಕಲ್ಕಿ2898 AD’ ಗಳಿಸಿದ್ದು ಬರೋಬ್ಬರಿ 6.7 ಕೋಟಿ ರೂಪಾಯಿ (Nett) ಎಂದು ಟ್ರೇಡ್ ಎಕ್ಸ್‌ಪರ್ಟ್‌ಗಳು ಲೆಕ್ಕ ಕೊಟ್ಟಿದ್ದಾರೆ.

ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ ! 

ಕಲ್ಕಿ 2898 AD ಜೂನ್ 27 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಲನಚಿತ್ರವು ಈಗಾಗಲೇ ತನ್ನ ಮುಂಗಡ ಬುಕಿಂಗ್‌ನಲ್ಲಿ ಎಲ್ಲಾ ಭಾಷೆಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳನ್ನು ಮಾರಾಟ ಮಾಡಿದೆ.

ವಿಶ್ವದಾದ್ಯಂತ (world) ತೆರೆಗೆ ಬಂದ ಅತ್ಯಂತ ದುಬಾರಿ ಚಿತ್ರ (film) ʼಕಲ್ಕಿ 2898 ಎಡಿʼ (Kalki 2898AD) ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಇದು ಹಿಂದೂ ಧರ್ಮದ (hindu dharma) ವಿಷಯದ ಮೇಲೆ ಕೇಂದ್ರೀಕೃತವಾಗಿರುವುದು. ಭಗವಾನ್ ವಿಷ್ಣುವಿನ (baghavan vishnu) 10ನೇ ಅವತಾರ ಕಲ್ಕಿ (kalki). ಸದಾಚಾರ ಮತ್ತು ನೈತಿಕ ನಡವಳಿಕೆಯನ್ನು ಉತ್ತೇಜಿಸುವ ಕಲ್ಕಿ, ಕಲಿಯುಗವನ್ನು ಕೊನೆಗೊಳಿಸಿ ಮತ್ತೆ ಸತ್ಯಯುಗದ ಸುವರ್ಣ ಯುಗವನ್ನು ಪ್ರಾರಂಭಿಸುತ್ತಾನೆ ಎಂದು ನಂಬಲಾಗಿದೆ.

Continue Reading

ಟಾಲಿವುಡ್

Kamal Haasan: ನನ್ನ ಪಾತ್ರ ಚಿಕ್ಕದಿರಬಹುದು ಆದರೆ ಇದು ಆರಂಭವಷ್ಟೇ ಎಂದು ಕಲ್ಕಿ ಭಾಗ- 2ರ ಸುಳಿವು ಕೊಟ್ಟ ಕಮಲ್‌ ಹಾಸನ್‌!

Kamal Haasan: ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ನಟ ಮಾತನಾಡಿ, “ಕಲ್ಕಿಯಲ್ಲಿ, ನಾನು ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಸಣ್ಣ ಪಾತ್ರವನ್ನು ನಿರ್ವಹಿಸಿದ್ದೇನೆ. ಚಿತ್ರದಲ್ಲಿ ನನ್ನ ನಿಜವಾದ ಭಾಗ ಪ್ರಾರಂಭವಾಗುವುದು ಎರಡನೇ ಪಾರ್ಟ್‌ನಲ್ಲಿ. ಈ ಚಿತ್ರವನ್ನು ನಾನು ಕೂಡ ಒಬ್ಬ ಅಭಿಮಾನಿಯಾಗಿ ನೋಡಿದೆʼʼಎಂದು ಹೇಳಿದರು.

VISTARANEWS.COM


on

Kamal Haasan on limited screen time in 'Kalki 2898 AD
Koo

ಬೆಂಗಳೂರು: 2024ರ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898ಎಡಿ (Kalki 2898 AD) ಭಾರತೀಯ ಚಿತ್ರರಂಗದಲ್ಲಿ ಮೂರನೇ ಅತೀ ದೊಡ್ಡ ಓಪನರ್ ಕಂಡ ಸಿನಿಮಾವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೇ ಚಿತ್ರದ ಮುಂದಿನ ಸರಣಿ ಶೀಘ್ರದಲ್ಲೇ ತೆರೆ ಕಾಣುವ ನಿರೀಕ್ಷೆಯನ್ನು ಮೂಡಿಸಿದೆ. ಕಮಲ್ ಹಾಸನ್ (Kamal Haasan) ಅವರು ತನ್ನ ಪಾತ್ರ ಮತ್ತು ಚಿತ್ರದ ಬಗ್ಗೆ ಕೆಲವು ಆಸಕ್ತಿದಾಯಕ ವಿಷಯಗಳನ್ನು ಮಾಧ್ಯಮಗಳ ಜತೆ ಹಂಚಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ನಟ ಮಾತನಾಡಿ, “ಕಲ್ಕಿಯಲ್ಲಿ, ನಾನು ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಸಣ್ಣ ಪಾತ್ರವನ್ನು ನಿರ್ವಹಿಸಿದ್ದೇನೆ. ಚಿತ್ರದಲ್ಲಿ ನನ್ನ ನಿಜವಾದ ಭಾಗ ಪ್ರಾರಂಭವಾಗುವುದು ಎರಡನೇ ಪಾರ್ಟ್‌ನಲ್ಲಿ. ಈ ಚಿತ್ರವನ್ನು ನಾನು ಕೂಡ ಒಬ್ಬ ಅಭಿಮಾನಿಯಾಗಿ ನೋಡಿದೆʼʼಎಂದು ಹೇಳಿದರು.

“ಭಾರತೀಯ ಸಿನಿಮಾ ಜಾಗತಿಕ ಮನರಂಜನೆಯತ್ತ ಸಾಗುತ್ತಿದೆ ಎಂಬುದಕ್ಕೆ ನಾವು ಅನೇಕ ಸೂಚಕಗಳನ್ನು ನೋಡುತ್ತಿದ್ದೇವೆ. ಅವುಗಳಲ್ಲಿ ಕಲ್ಕಿ 2898 AD ಒಂದು. ನಾಗ್ ಅಶ್ವಿನ್ ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪುರಾಣದ ವಿಷಯವನ್ನು ಎಚ್ಚರಿಕೆಯಿಂದ ನಿರ್ವಹಿಸಿದ್ದಾರೆ. ಪ್ರಪಂಚದಾದ್ಯಂತ, ಜಪಾನ್, ಚೀನಾ, ಮತ್ತು ಗ್ರೀಕ್ ನಾಗರೀಕತೆಗಳು ಭಾರತೀಯ ಕಥಾ ಪರಂಪರೆಯ ಹತ್ತಿರ ಬರಬಹುದು. ಅಶ್ವಿನ್ ಅದರಿಂದ ಕಥೆಗಳನ್ನು ಆರಿಸಿಕೊಂಡರುʼʼಎಂದರು.

“ಯಾರಾದರೂ ನನ್ನ ಬಳಿ ಬಂದು ಯಾಸ್ಕಿನ್‌ನ ವಯಸ್ಸನ್ನು ಕೇಳಿದರೆ, ನಾನು ಧೈರ್ಯದಿಂದ ಹೇಳುತ್ತೇನೆ, ‘ಊಹಿಸಿ, ಅದು ನಿಮ್ಮ ಆಯ್ಕೆ’. ಎಂದು. ಬಹುಶಃ ಅವರಿಗೆ 180 ವರ್ಷ. ನಾನು ಕಲ್ಕಿ 2898 AD ಯಲ್ಲಿ ಬಹಳ ಚಿಕ್ಕ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ, ಆದರೆ ಇದು ನನಗೆ ಕುತೂಹಲ ಮೂಡಿಸಿದ ಮುಂದಿನ ಭಾಗವಾಗಿದೆ. ಈ ಭಾಗದಲ್ಲಿ ಸೀಮಿತ ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇನೆʼʼಎಂದರು.

ಇದನ್ನೂ ಓದಿ: Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

ಕಲ್ಕಿ 2898ಎಡಿ ದೊಡ್ಡ ಪರದೆಯ ಮೇಲೆ ದಾಖಲೆಯನ್ನೇ ಬರೆದಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಸೇರಿದಂತೆ ಬಹುದೊಡ್ಡ ತಾರಾ ಬಳಗವನ್ನೇ ಹೊಂದಿದ್ದು, ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಗಳಿಸಿದೆ.ಚಿತ್ರದ ಮುಂದುವರಿದ ಭಾಗ ಶೀಘ್ರದಲ್ಲೇ ತೆರೆ ಕಾಣಲಿದೆ ಎಂಬ ಸಂದೇಶದೊಂದಿಗೆ ಕಲ್ಕಿ 2898ಎಡಿ ಚಲನಚಿತ್ರವು ಮುಕ್ತಾಯಗೊಂಡಿರುವುದರಿಂದ 2898ಎಡಿ ಚಿತ್ರ ಭಾಗ 2 ಸಾಕಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಕಮಲ್ ಹಾಸನ್ ನಿರ್ವಹಿಸಿರುವ ಅಸಾಧಾರಣ ಪಾತ್ರ ಯಾಸ್ಕಿನ್ ನ ಅಪಾಯಕಾರಿ ಕಾರ್ಯಾಚರಣೆಯೊಂದಿಗೆ ‘ಕಲ್ಕಿ 2898ಎಡಿ ಭಾಗ 2 ಪ್ರಾರಂಭವಾಗುವ ನಿರೀಕ್ಷೆ ಇದೆ. ಚಿತ್ರದ ಮೊದಲ ಭಾಗದಲ್ಲಿ ಕಮಲ್ ಹಾಸನ್ ಅವರ ಚಿಕ್ಕ ಪಾತ್ರವನ್ನು ಮಾತ್ರ ತೋರಿಸಲಾಗಿದೆ. ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ, ಪ್ರಭಾಸ್ ಭೈರವ ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಯಾಸ್ಕಿನ್ ಅವರನ್ನು ಹೇಗೆ ಎದುರಿಸಲು ಯೋಜಿಸುತ್ತಾರೆ ಎಂಬುದರ ಸುತ್ತ ಕಥೆ ಕೇಂದ್ರೀಕೃತವಾಗಿದೆ.

ಕಲ್ಕಿ 2898ಎಡಿ ಭಾಗ 2 ಚಿತ್ರ ನಿರ್ಮಾಣಕ್ಕೆ ಮೂರು ವರ್ಷಗಳು ಬೇಕಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಭಾಸ್ ಈ ವಿಭಾಗವನ್ನು ಎರಡು ಭಾಗಗಳಾಗಿ ವಿಂಗಡಿಸುವ ಬಗ್ಗೆ ಸುಳಿವು ನೀಡಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ತಮ್ಮ ಮುಂದಿನ ಸರಣಿಯ ಬಗ್ಗೆ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಮೂರು ವರ್ಷಗಳಲ್ಲಿ ಎರಡನೇ ಕಂತನ್ನು ಅಭಿಮಾನಿಗಳು ಎದುರು ನೋಡಬಹುದು ಎಂದು ನಾಗ್ ಅಶ್ವಿನ್ ಕೂಡ ಖಚಿತಪಡಿಸಿದ್ದಾರೆ.

ಭವ್ಯವಾದ ವೈಜ್ಞಾನಿಕ ಮಹಾಕಾವ್ಯ ‘ಕಲ್ಕಿ 2898ಎಡಿ’ ಚಿತ್ರಮಂದಿರಗಳಿಗೆ ಆಗಮಿಸಿದ್ದು, ಹಿಂದೂ ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ದುಷ್ಟ ಶಕ್ತಿಗಳ ವಿರುದ್ಧ ಹೋರಾಡಲು ದೈವಿಕ ಜೀವಿಗಳ ಮೂಲವನ್ನು ವಿವರಿಸುವ ಈ ಚಿತ್ರವೂ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕಥಾಹಂದರ, ಉಸಿರುಕಟ್ಟುವ ದೃಶ್ಯವಳಿಗಳು ಮತ್ತು ವಿಶಿಷ್ಟ ಪರಿಕಲ್ಪನೆ ಮಂತ್ರಮುಗ್ಧರನ್ನಾಗಿಸುತ್ತದೆ. ಇದು ಭಾರತೀಯ ಚಿತ್ರರಂಗದಲ್ಲಿ ಒಂದು ಅದ್ಭುತ ಸಾಧನೆಯನ್ನು ಸೂಚಿಸುತ್ತದೆ.

ಈ ಚಿತ್ರವು ಭಾರತದ ‘ಅವೆಂಜರ್ಸ್ ಕ್ಷಣ’. ವೈಜ್ಞಾನಿಕ, ಕಾಲ್ಪನಿಕ ಮತ್ತು ಪುರಾಣದ ಅಂಶಗಳನ್ನು ಅದ್ಭುತವಾಗಿ ಸಂಯೋಜಿಸುತ್ತದೆ. ಚಿತ್ರದ ಸುತ್ತ ಹೆಚ್ಚಿನ ನಿರೀಕ್ಷೆಗಳಿವೆ ಎಂದು ರಾಣಾ ದಗ್ಗುಬಾಟಿ ಅಭಿಪ್ರಾಯ ಪಟ್ಟಿದ್ದಾರೆ.

Continue Reading
Advertisement
Valmiki Development Corporation Scam Opposition party leader R Ashok has demanded that CM Siddaramaiah should resign
ಕರ್ನಾಟಕ5 mins ago

R Ashok: ಲೂಟಿಯಾದ ದಲಿತರ ಹಣವನ್ನು ಸಿದ್ದರಾಮಯ್ಯ ಜೇಬಿನಿಂದ ಕೊಡ್ತಾರಾ? ಆರ್‌. ಅಶೋಕ್‌ ಪ್ರಶ್ನೆ

Actor Darshan
ಸಿನಿಮಾ6 mins ago

Actor Darshan: ದರ್ಶನ್ ಭೇಟಿ ಮಾಡಿದ ಪವಿತ್ರಾ ಗೌಡ ಆಪ್ತೆ; ನಟ ಧನ್ವೀರ್‌ಗೆ ಸಿಗದ ಅವಕಾಶ!

Narendra Modi
ದೇಶ9 mins ago

Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

New Trend
ಫ್ಯಾಷನ್9 mins ago

New Trend: ಕೋಟ್‌ ರಹಿತ ಪ್ಯಾಂಟ್ ಸೂಟ್ಸ್ ಇದೀಗ ಹೊಸ ಟ್ರೆಂಡ್!

Quick start for online ticketing for trekking says minister Eshwar Khandre
ಕರ್ನಾಟಕ9 mins ago

Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

Narendra Modi
ಪ್ರಮುಖ ಸುದ್ದಿ23 mins ago

Narendra Modi: ಸಂಸತ್ತಲ್ಲಿ ಹಿಂದುಗಳಿಗೆ ಅವಮಾನ, ದೇವರಿಗೆ ಅಪಮಾನ, ಇದನ್ನು ಹಿಂದುಗಳು ಮರೆಯಲಾರರು ಎಂದ ಮೋದಿ

NEET PG exam
ಪ್ರಮುಖ ಸುದ್ದಿ25 mins ago

NEET PG exam : ಮೋಸ ತಡೆಯಲು ಕ್ರಮ; ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ತಯಾರಿ!

Viral Video
Latest29 mins ago

Eknath Shinde: ಗಾಯಗೊಂಡು ರಸ್ತೆಯಲ್ಲಿ ಪರದಾಡುತ್ತಿದ್ದ ಜೈನ ಸನ್ಯಾಸಿಗಳಿಗೆ ನೆರವಾದ ಮಹಾರಾಷ್ಟ್ರ ಸಿಎಂ

Rainy Season Tourism
ಪ್ರವಾಸ39 mins ago

Rainy Season Tourism: ಮಳೆಗಾಲದ ಪ್ರವಾಸ ಮಾಡುವ ಮುನ್ನ ಈ 10 ಎಚ್ಚರಿಕೆಗಳನ್ನು ಪಾಲಿಸಿ

Viral News
Latest41 mins ago

Viral News: ಇಬ್ಬರು ಪತ್ನಿಯರು ಸೇರಿ ಗಂಡನಿಗೆ ಮೂರನೇ ಮದುವೆ ಮಾಡಿಸಿದರು! ವೆಡ್ಡಿಂಗ್‌ ಕಾರ್ಡ್‌ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌