Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ? - Vistara News

ಕ್ರೈಂ

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Actor Darshan: ದರ್ಶನ್ ಅವರೇ ಈಗ ಅಭಿಮಾನಿಗಳಿಗೆ ಪರಪ್ಪನ ಅಗ್ರಹಾರಕ್ಕೆ ಬರಬೇಡಿ ಎಂದು ವಿಶೇಷ ಮನವಿ ಮಾಡಿದ್ದಾರೆ. ಹೀಗಿದ್ದರೂ ದರ್ಶನ್ ಭೇಟಿಗೆ ಯುವತಿವೊಬ್ಬಳು ಆಗಮಿಸಿದ್ದಳು. ಮಾಸ್ಕ್ ಧರಿಸಿ ಜೈಲು ಬಳಿ ಬಂದು , ಬಳಿಕ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ಸು ಹೋಗಿದ್ದಾರೆ.

VISTARANEWS.COM


on

Actor Darshan A young woman came to Parappa Agrahara to see Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಅವರು ಪರಪ್ಪನ ಅಗ್ರಹಾರದಲ್ಲಿದ್ದಾರೆ. ದರ್ಶನ್ ಫ್ಯಾನ್ಸ್ ಜೈಲಿನ ಎದುರು ಸೇರುತ್ತಿದ್ದಾರೆ. ದರ್ಶನ್ ಪರ ಘೋಷಣೆ ಕೂಗುತ್ತಿದ್ದಾರೆ.ಹೀಗಾಗಿ ದರ್ಶನ್ ಅವರೇ ಈಗ ಅಭಿಮಾನಿಗಳಿಗೆ ಪರಪ್ಪನ ಅಗ್ರಹಾರಕ್ಕೆ ಬರಬೇಡಿ ಎಂದು ವಿಶೇಷ ಮನವಿ ಮಾಡಿದ್ದಾರೆ. ಹೀಗಿದ್ದರೂ ದರ್ಶನ್ ಭೇಟಿಗೆ ಯುವತಿವೊಬ್ಬಳು ಆಗಮಿಸಿದ್ದಳು. ಮಾಸ್ಕ್ ಧರಿಸಿ ಜೈಲು ಬಳಿ ಬಂದು , ಬಳಿಕ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಾಪಸ್ಸು ಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನ ಬಳಿ ಯುವತಿ ದರ್ಶನ್‌ ನೋಡಲು ಆಗಮಿಸಿದ್ದಳು. ಬ್ಲೂ ಕಲರ್ ಹುಂಡೈ ಕ್ರೆಟಾ ಕಾರಿನಲ್ಲಿ ಆಗಮಿಸಿದ್ದ ಯುವತಿ, ಕ್ಯಾಮೆರಾ ನೋಡುತ್ತಿದ್ದಂತೆ ವಾಪಸ್ಸು ಆಗಿದ್ದಾರೆ. ʻʻದರ್ಶನ್ ಸರ್ ನಮ್ಮ ಕುಟುಂಬದವರು. ಅವರನ್ನು ನೋಡಲು ಬಂದಿದ್ದೆ. ಜೈಲು ಅಧಿಕಾರಿಗಳು ಅವಕಾಶ ನೀಡುವುದಿಲ್ಲʼʼ ಎಂದರು ಯುವತಿ. ಹೆಸರನ್ನು ಎಲ್ಲಿಯೂ ಹೇಳಿಕೊಂಡಿಲ್ಲ.

ದರ್ಶನ್‌ನಿಂದ ವಿಶೇಷ ಮನವಿ!

ದರ್ಶನ್‌ ಹೇಳಿದ್ದು ಹೀಗೆ ʻʻಅಭಿಮಾನಿಗಳು ಯಾರು ಕೂಡ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು. ಅದರಲ್ಲೂ ನಿನ್ನೆ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದು ಕೂಡ ಬೇಸರ ತಂದಿದೆʼʼಎಂದು ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

ಇತ್ತೀಚೆಗೆ ಸೌಮ್ಯ ಹೆಸರಿನ ವಿಶೇಷ ಚೇತನ ಯುವತಿ ದರ್ಶನ್ ಭೇಟಿಗೆ ಬಂದಿದ್ದರು. ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದರು. ಇದನ್ನು ಕೇಳಿ ದರ್ಶನ್ ಬೇಸರಗೊಂಡಿದ್ದಾರೆ. ಅನ್ನ ಆಹಾರ ಸೇವಿಸದೇ ಹಠ ಮಾಡಿದ್ದರು ಸೌಮ್ಯ. ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜತೆ ಸೌಮ್ಯ ಆಗಮಿಸಿದ್ದರು. ಸೌಮ್ಯ ಜೈಲಿನ ಬಳಿ ಆಗಮಿಸಿದ್ದ ವಿಚಾರ ತಿಳಿದು ದರ್ಶನ್ ಬೇಸರಗೊಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿದ್ದ.ತ್ರಿ ವೀಲರ್ ಬೈಕ್‌ನಲ್ಲಿ ವಿಶೇಷ ಚೇತನ ಆಗಮಿಸಿದ್ದ . ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಈ ರೀತಿ ಮನವಿ ಮಾಡಿದ್ದಾರೆ.

ಯುವತಿ ಪೋಷಣೆಗೆ ಆಟೋ ಕೊಡಿಸಿದ್ದ ದರ್ಶನ್‌

2016 ರಲ್ಲಿ ಈ ಬಡ ಕುಟುಂಬಕ್ಕೆ ನಟ ದರ್ಶನ್‌ ಆಟೋವೊಂದನ್ನು ಕೊಡಿಸಿದ್ದರು. ಲಕ್ಷ್ಮೀ ಹಾಗೂ ರಂಗಸ್ವಾಮಿ ದಂಪತಿಯ ಪುತ್ರಿ ಸೌಮ್ಯಳನ್ನು ಪೋಷಣೆಗಾಗಿ ನಟ ದರ್ಶನ್‌ ಖುದ್ದು ಆಟೋ ಕೊಡಿಸಿದ್ದರು. ಹೀಗಾಗಿ ಇದೇ ಆಟೋದಲ್ಲಿ ಜೈಲಿಗೆ ಬಂದು ದರ್ಶನ್‌ ಭೇಟಿಗಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೆ ಇಂದು ದರ್ಶನ್ ಭೇಟಿಗೆ ಅವರ ಕುಟುಂಬದವರು ಬರುತ್ತಿದ್ದು, ವಿಶೇಷ ಚೇತನ ಯುವತಿ ಭೇಟಿಗೆ ಅವಕಾಶವನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನ ಸೆರೆವಾಸ ಏಳನೇ ದಿನಕ್ಕೆ ಕಾಲಿಟ್ಟಿದೆ. ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ಕುಡಿದು ದರ್ಶನ್‌ ತಡವಾಗಿ ನಿದ್ರೆಗೆ ಜಾರಿದರು. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರಗೊಂಡು ಎಂದಿನಂತೆ ಬಿಸಿನೀರು ಸೇವಿಸಿದ್ದಾರೆ ದರ್ಶನ್‌. ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Advocate G Devarajegowda: ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

VISTARANEWS.COM


on

Advocate G Devarajegowda
Koo

ಹಾಸನ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡ (Advocate G Devarajegowda) ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಜಾಮೀನು ಮಂಜೂರು ಮಾಡಿತ್ತು. ಹೀಗಾಗಿ ಇಂದು ದೇವರಾಜೇಗೌಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜೂನ್ 5ರಂದು ಹಾಸನ ಜಿಲ್ಲಾ ನ್ಯಾಯಾಲಯಕ್ಕೆ ದೇವರಾಜೇಗೌಡ ಜಾಮೀನು ಅರ್ಜಿ ಸಲ್ಲಿಸಿದಾಗ ಕೋರ್ಟ್ ನಿರಾಕರಿಸಿತ್ತು. ಆದರೆ, ಹೈಕೋರ್ಟ್‌ ಜಾಮೀನು ನೀಡಿದ್ದರಿಂದ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದೇವರಾಜೇಗೌಡರನ್ನು ಬಿಡುಗಡೆ ಮಾಡಲಾಗಿದೆ.

2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು. ಆದರೆ, ಮಾರ್ಚ್ 29 ರಂದು ದೇವರಾಜೇಗೌಡ ವಿರುದ್ಧ ಸಂತ್ರಸ್ತೆ ಪತಿ ದೂರು ನೀಡಿದ್ದರು. ಅದರಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಚಕಾರವಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿತ್ತು.

ಇದನ್ನೂ ಓದಿ | Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

ವಕೀಲ ದೇವರಾಜೇಗೌಡ ಬಂಧನವಾಗಿದ್ದು ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಾದರೂ ಹಾಸನ ಪೆನ್ ಡ್ರೈವ್ ಪ್ರಕರಣಕ್ಕೇ ತಳುಕು ಹಾಕಿಕೊಂಡಿದೆ. ಈಗಾಗಲೇ ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಗಂಭೀರ ಆರೋಪ ಮಾಡಿದ್ದಲ್ಲದೆ, ಅವರ ಜತೆಗಿನ ಮಾತುಕತೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಿದ್ದರು. ಇದಲ್ಲದೆ, ಸಾಕಷ್ಟು ವಿಡಿಯೊಗಳು, ಸಾಕ್ಷಿಗಳು ಸಹ ತಮ್ಮ ಬಳಿ ಇದೆ ಎಂದು ಹೇಳಿಕೊಂಡಿದ್ದರು. ಸಾಕ್ಷ್ಯಗಳನ್ನು ಮುಂದಿನ ದಿನಗಳಲ್ಲಿ ಸಿಬಿಐ ಮುಂದೆ ಇಡುತ್ತೇನೆ ಎಂದು ಸಹ ಸುದ್ದಿಗೋಷ್ಠಿ ನಡೆಸಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಸವಾಲು ಹಾಕಿದ್ದರು. ಆದರೆ, ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಅವರನ್ನು ಬಂಧಿಸಲಾಗಿತ್ತು.

Continue Reading

ಕರ್ನಾಟಕ

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Krishna River Tragedy: ಅಂದರ್‌ ಬಾಹರ್ (ಇಸ್ಪೇಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ವೇಳೆ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದಾಗ ಏಳೆಂಟು ಜನರು ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Krishna River Tragedy
Koo

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರುಪಾಲಾಗಿದ್ದು, ಒಬ್ಬರ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಕೃಷ್ಣಾ ನದಿಯಲ್ಲಿ ದುರ್ಘಟನೆ ನಡೆದಿದೆ. ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್‌ ಬರುತ್ತಿದ್ದ ವೇಳೆ ಘಟನೆ ನಡೆದಿದ್ದು, ಸ್ಥಳಕ್ಕೆ ಕೊಲ್ಹಾರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್.ಪಿ. ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ (raft capsizes) ಶೋಧಕಾರ್ಯ ನಡೆಯುತ್ತಿದೆ.

ಅಂದರ್ ಬಾಹರ್ (ಇಸ್ಪೇಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ವೇಳೆ ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದಾಗ ಏಳೆಂಟು ಜನರು ನೀರುಪಾಲು ಆಗಿರುವ ಶಂಕೆ ವ್ಯಕ್ತವಾಗಿದೆ. ಅದರಲ್ಲಿ ಒಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಪುಂಡಲೀಕ ಯಂಕಂಚಿ (35) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಒಬ್ಬ ನದಿಯಿಂದ ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

ತೆಪ್ಪದಲ್ಲಿ ತೆರಳಿದವರು ಕೊಲ್ಹಾರ ಹಾಗೂ ಬಳೂತಿ ಗ್ರಾಮದವರು ಎನ್ನಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಗ್ರಾಮಸ್ಥರು ದೌಡಾಯಿಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Bomb Blast: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಪತ್ರಕರ್ತರ ಕಾರಿನಡಿ ನಾಡ ಬಾಂಬ್ ಸ್ಫೋಟವಾಗಿದೆ. ಜೋಯಿಡಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Bomb Blast
Koo

ಕಾರವಾರ: ಪತ್ರಕರ್ತರು ಸಾಗುತ್ತಿದ್ದ ಕಾರಿನ ಕೆಳಗೆ ನಾಡ ಬಾಂಬ್ ಸ್ಫೋಟವಾಗಿರುವ (Bomb Blast) ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಗುಂದ ಗ್ರಾಮದ ಬಳಿ ಮಂಗಳವಾರ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂದೇಶ್ ದೇಸಾಯಿ ಎನ್ನುವ ಪತ್ರಕರ್ತರಿಗೆ ಸೇರಿದ ಕಾರಿನಲ್ಲಿ ಮೂವರು ಪತ್ರಕರ್ತರು, ಶಾಸಕ ಆರ್.ವಿ. ದೇಶಪಾಂಡೆ ಸಭೆಗೆ ತೆರಳುತ್ತಿದ್ದರು. ಜೋಯಿಡಾದ ಗುಂದ ಗ್ರಾಮದ ಬಳಿ ಕಾರಿನ ಟಯರ್‌ಗೆ ಸಿಕ್ಕಿ ಬಾಂಬ್ ಸ್ಫೋಟವಾಗಿದೆ. ಅದೃಷ್ಟವಶಾತ್ ಪತ್ರಕರ್ತರು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Sandalwood theft : ಶ್ರೀಗಂಧ ಕದಿಯಲು ಬಂದವನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

ಕೋಲಾರ : ಅರಣ್ಯ ಪ್ರದೇಶದಲ್ಲಿ ಶ್ರೀಗಂಧವನ್ನು ಕದಿಯಲು (Sandalwood theft) ಬಂದವನು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಗುಂಡೇಟು ತಿಂದಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಶಿಪುರ ಅರಣ್ಯ ಪ್ರದೇಶದಲ್ಲಿ (Kashipura Forest) ಘಟನೆ ನಡೆದಿದೆ.

ತಾಯಲೂರು ಗ್ರಾಮದ ಭತ್ಯಪ್ಪ ಎಂಬಾತ ಕಾಲಿಗೆ ಗುಂಡು ತಗುಲಿದೆ. ಅರಣ್ಯ ಇಲಾಖೆ ರಕ್ಷಕ ಅನಿಲ್ ಗುಂಡು ಹಾರಿಸಿದ್ದಾರೆ. ಶ್ರೀಗಂಧ ಕಳ್ಳತನಕ್ಕೆ ಆಂಧ್ರಪ್ರದೇಶದ ಐದಾರು ಮಂದಿ ಜತೆಗೆ ಭತ್ಯಪ್ಪ ಬಂದಿದ್ದ. ಈ ವೇಳೆ ರಕ್ಷಕ ಅನಿಲ್ ಮೇಲೆ ಹಲ್ಲೆಗೆ ಮುಂದಾಗಿದ್ದ.

ರಕ್ಷಣೆಗಾಗಿ ಭತ್ಯಪ್ಪ ಹಾಗೂ ಮತ್ತೋರ್ವನಿಗೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಭತ್ಯಪ್ಪ ಸಿಕ್ಕಿಬಿದ್ದರೆ ಉಳಿದವರು ಕಾಲ್ಕಿತ್ತಿದ್ದಾರೆ. ಗಾಯಾಳು ಭತ್ಯಪ್ಪಗೆ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

ಕೋರ್ಟ್‌ ಆವರಣದಲ್ಲೇ ಡೆಡ್ಲಿ ಅಟ್ಯಾಕ್‌

ಕಲಬುರಗಿ ಕೋರ್ಟ್ ಆವರಣದಲ್ಲಿ ಸಿನಿಮೀಯ ಶೈಲಿಯಲ್ಲಿ ವ್ಯಕ್ತಿಯ ಬೆನ್ನತ್ತಿ ದುಷ್ಕರ್ಮಿಗಳು ತಲವಾರ್‌ನಿಂದ ದಾಳಿ ನಡೆಸಿದ್ದಾರೆ. ಧೀರಜ್ ಎಂಬಾತನ ಮೇಲೆ ತಲವಾರ್‌‌ನಿಂದ ದಾಳಿ ನಡೆಸಿದ್ದಾರೆ.

ತಲವಾರ್ ದಾಳಿಯಿಂದ ಧೀರಜ್‌ ಎಂಬಾತ ಗಾಯಗೊಂಡಿದ್ದು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇತ್ತ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ದುಷ್ಕರ್ಮಿಗಳನ್ನು ಸಾರ್ವಜನಿಕರು ಹಾಗೂ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪ್ರಶಾಂತ್ ಪಾಟೀಲ್ (20), ವಿರೇಶ್ ಪಾಟೀಲ್ (19), ರಾಮು ಪಾಟೀಲ್ (38) ಈ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕಲಬುರಗಿ ನಗರದ ಬಾಪುನಗರ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ವೈಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Darshan: ದರ್ಶನ್ ಭೇಟಿ ಮಾಡಿದ ಪವಿತ್ರಾ ಗೌಡ ಆಪ್ತೆ; ನಟ ಧನ್ವೀರ್‌ಗೆ ಸಿಗದ ಅವಕಾಶ!

Actor Darshan: ಪವಿತ್ರಾ ಗೌಡ ಸ್ನೇಹಿತೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ದರ್ಶನ್‌ ಜತೆ ಮಾತನಾಡಿದ್ದಾರೆ. ಆದರೆ, ನಟ ಧನ್ವೀರ್‌ ಕೂಡ ದರ್ಶನ್‌ ಭೇಟಿಗೆ ತೆರಳಿದ್ದರು, ಅವರಿಗೆ ಮಾತ್ರ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

ದರ್ಶನ್ ‌ಭೇಟಿಯಾಗಿದ್ದಾಗಿ ಮಾಧ್ಯಮಗಳ ಬಳಿ ಸುಳ್ಳು ಹೇಳಿದ್ರಾ ಧನ್ವೀರ್?

ಜೈಲಿನಲ್ಲಿರುವ ದರ್ಶನ್ ಭೇಟಿಗೆ ನಟ ಧನ್ವೀರ್‌ಗೆ ಅವಕಾಶ ಸಿಕ್ಕಿಲ್ಲ ಎನ್ನಲಾಗಿದೆ. ಇದರಿಂದ ಬೇಸರದಲ್ಲಿಯೇ ಧನ್ವೀರ್‌ ವಾಪಸ್ ತೆರಳಿದ್ದಾರೆ. ಆದರೆ, ಮಾಧ್ಯಮಗಳ ಬಳಿ ಮಾತ್ರ ನಟ ದರ್ಶನ್‌ರನ್ನು ಭೇಟಿ ಮಾಡಿರುವುದಾಗಿ ಅವರು ಹೇಳಿರುವುದು ಅನುಮಾನಗಳಿಗೆ ಎಡೆಮಾಡಿದೆ.

ಮೊದಲಿಗೆ ದರ್ಶನ್‌ ಭೇಟಿ ಮಾಡಲು ಹೋಗಿದ್ದೆ, ಅವರ ಜತೆ ಹೆಚ್ಚು ಹೊತ್ತು ಮಾತನಾಡಲಾಗಲಿಲ್ಲ. ನಟ ದರ್ಶನ್ ಬೇಜಾರಿನಲ್ಲಿದ್ದಾರೆ ಎಂದು ಹೊರಟಿದ್ದರು. ಆದರೆ, ಜೈಲಿಗೆ ಭೇಟಿ ನೀಡಿದರೆ ಬಲಗೈಗೆ ಸೀಲ್ ಹಾಕಲಾಗುತ್ತದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಎಂಬ ಸೀಲ್ ಅನ್ನು ಕೈ ಮೇಲೆ ಹಾಕಲಾಗುತ್ತದೆ. ಆದರೆ ಧನ್ವೀರ್ ಕೈಯಲ್ಲಿ ಜೈಲಿನ ಸೀಲ್ ಇರದ ಕಾರಣ ಅವರು ದರ್ಶನ್‌ರನ್ನು ಭೇಟಿಯಾಗಿಲ್ಲ ಎನ್ನಲಾಗುತ್ತಿದೆ.

ಧನ್ವೀರ್‌ ಅಲ್ಲದೇ ಮೈಸೂರಿನಿಂದ ದರ್ಶನ್‌ ಅವರ ಬಾಲ್ಯ ಸ್ನೇಹಿತ ಶಿವಕುಮಾರ್ ಕೂಡ ಆಗಮಿಸಿದ್ದರು. ಆದರೆ, ಅವರಿಗೂ ಭೇಟಿ ಮಾಡಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ವಾಪಸ್‌ ತೆರಳಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Actor Darshan Devil gang gets life imprisonment What do legal experts say

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ (Renuka Swamy Murder) ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಹೆಸರು ಆಚೆಗೇ ಬಾರದೆ ಮುಚ್ಚಿಹೋಗುವುದರಲ್ಲಿತ್ತು. ಆರಂಭದಲ್ಲಿ ಪೊಲೀಸರಿಗೂ (Police) ಇದರ ಅರಿವು ಇರಲಿಲ್ಲ. ಆದರೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ತನಿಖೆ ಮಾಡುತ್ತ ಹೋದಂತೆಲ್ಲಾ ಒಂದೊಂದೇ ಎಳೆಗಳು ಬಿಚ್ಚಿಕೊಂಡು ದರ್ಶನ್‌ ಜೈಲುಪಾಲಾಗುವಂತಾಯಿತು. ಅದೇ ಒಂದು ರೋಚಕ ಕಹಾನಿ.

ಹತ್ಯೆಯ ಹಿಂದಿದ್ದ ಮಾಸ್ಟರ್ ಮೈಂಡ್ ಹೆಸರು ಬಾಯಿ ಬಿಡಿಸುವುದಕ್ಕೆ ಪೊಲೀಸರಿಗೆ ಸರಿ ಸುಮಾರು ಹತ್ತು ಗಂಟೆ ತೆಗೆದುಕೊಂಡಿತ್ತು. ಅದು ನಡೆದದ್ದು ಹೀಗೆ- ರೇಣುಕಾ ಸ್ವಾಮಿಯನ್ನು ಹಂತಕ‌ ಪಡೆ ಕೊಲೆ ಮಾಡಿದ್ದು ಶನಿವಾರ. ಭಾನುವಾರ ಸುಮನಹಳ್ಳಿ ಕಾಲುವೆಯಲ್ಲಿ ಆತನ ಶವ ಸಿಕ್ಕಿತ್ತು. ಶವ ಯಾರದು ಎಂಬ ಹುಡುಕಾಟದಲ್ಲಿದ್ದ ಪೊಲೀಸರಿಗೆ ನಾಲ್ವರು ಆರೋಪಿಗಳು ತಾವಾಗಿ ಬಂದು ಶರಣಾಗಿದ್ದರು.

ಕಾರ್ತಿಕ್, ನಿಖಿಲ್, ಕೇಶವ ಮೂರ್ತಿ ಹಾಗೂ ರಾಘವೇಂದ್ರ ಪೊಲೀಸರ ಬಳಿಗೆ ಸೋಮವಾರ ಬಂದು, ಕೊಲೆ ಮಾಡಿದ್ದು ನಾವೇ ಅಂತ ಹೇಳಿದ್ದರು. ಹಣಕಾಸಿನ ವಿಚಾರಕ್ಕಾಗಿ ನಾವೇ ಹಲ್ಲೆ ಮಾಡಿದೆವು, ಹಲ್ಲೆ ಮಾಡಿದ್ದು ಜಾಸ್ತಿಯಾಗಿ ಆತ ಸತ್ತುಹೋದ ಎಂದಿದ್ದರು. ಎಷ್ಟು ಪ್ರಶ್ನಿಸಿದರೂ ಅದರಾಚೆಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಹಲ್ಲೆ ಮಾಡಿದ ಜಾಗ ಯಾವುದು, ಅಲ್ಲಿಂದ ಇಲ್ಲಿಗೆ ಹೆಣ ಸಾಗಿಸಿದ್ದು ಹೇಗೆ, ಯಾವ ವಾಹನದಲ್ಲಿ, ರೇಣುಕಾ ಸ್ವಾಮಿಗೆ ಕೊಟ್ಟ ಹಣ ನಿಮಗೆ ಬಂದಿದ್ದು ಹೇಗೆ, ಆತನಿಗೂ ನಿಮಗೂ ಹೇಗೆ ಲಿಂಕು, ಇತ್ಯಾದಿ ಸರಣಿ ಪ್ರಶ್ನೆಗಳನ್ನು ಪೊಲೀಸರು ಹಾಕತೊಡಗಿದ ಕೂಡಲೇ ಶರಣಾಗತರು ಉತ್ತರ ಕೊಡಲಾಗದೆ ತತ್ತರಿಸಲು ಆರಂಭಿಸಿದರು.

ಸತತ ಹತ್ತು ಗಂಟೆಗಳ ಪ್ರಶ್ನಾವಳಿಯ ಬಳಿಕ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪ್ರದೂಷ್ ಹಾಗೂ ವಿನಯ್ ಹೆಸರುಗಳನ್ನು ಶರಣಾಗತರು ಬಾಯಿ ಬಿಟ್ಟಿದ್ದರು. ಇವರಿಬ್ಬರ ಹೆಸರು ಬಂದ ಕೂಡಲೇ ಜಾಗೃತರಾದ ಪೊಲೀಸರು, ಪ್ರಕರಣದಲ್ಲಿ ಇನ್ನಷ್ಟು ದೊಡ್ಡ ಹೆಸರುಗಳು ಇರಬಹುದು ಎಂಬ ಅರಿವಾಗಿ ಜಾಗೃತರಾದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರದೂಷ್ ಹಾಗೂ ವಿನಯ್‌ರನ್ನು ವಶಕ್ಕೆ ಪಡೆದರು.

ಪ್ರದೂಷ್‌ ಹಾಗೂ ವಿನಯ್‌ ಸುಲಭವಾಗಿ ಬಾಯಿ ಬಿಡಲಿಲ್ಲ. ಆರಂಭದಲ್ಲಿ, ಶರಣಾದವರು ಯಾರೂ ನಮಗೆ ಗೊತ್ತೇ ಇಲ್ಲ ಎಂದುಬಿಟ್ಟರು. ಪೊಲೀಸರು ವಿಚಾರಣೆ ತೀವ್ರಗೊಳಿಸಿದರು. ಆಗಲೂ ದರ್ಶನ್‌ ಹೆಸರು ಬಾಯಿ ಬಿಡಲಿಲ್ಲ ಪ್ರದೂಷ್ ಹಾಗೂ ವಿನಯ್. ಆದರೆ ಬೆಳಗಿನ ಜಾವ ಪೊಲೀಸರ ವಿಚಾರಣೆ ಧಾಟಿಗೆ ಬಳಲಿಹೋಗಿದ್ದ ವಿನಯ್ ಹಾಗೂ ಪ್ರದೂಷ್ ಪವಿತ್ರ ಗೌಡಳ ಹೆಸರು ಹೇಳಿದ್ದರು. ಪವಿತ್ರ ಗೌಡ ಯಾರು ಎಂದು ತಲೆ ಕೆಡಿಸಿಕೊಂಡ ಪೊಲೀಸರಿಗೆ ಆಕೆಗೆ ದರ್ಶನ್‌ ಲಿಂಕ್‌ ಇರುವುದು ಗೊತ್ತಾಗಿ ಇದು ಹೈ ಪ್ರೊಫೈಲ್‌ ಕೇಸು ಎಂಬುದು ಗೊತ್ತಾಗಿ ಹೋಗಿದೆ.

ನಂತರ ಪೊಲೀಸರು ಪವಿತ್ರ ಗೌಡಳ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಅಷ್ಟರಲ್ಲಿ ದರ್ಶನ್ ಜೊತೆ ಪವಿತ್ರ ಗೌಡ ಲಿಂಕ್ ಇರುವುದು ಚಾಟಿಂಗ್ಸ್, ಕಾಲ್ ಡಿಟೇಲ್ಸ್ ಮೂಲಕ ಪತ್ತೆಯಾಗಿದೆ. ಆರೋಪಿಗಳನ್ನೂ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ಕೂರಿಸಿಕೊಂಡು ಮತ್ತಷ್ಟು ವಿಚಾರಣೆ ನಡೆಸಿದಾಗ ಎಲ್ಲರೂ ಡಿ ಬಾಸ್‌ ಗ್ಯಾಂಗ್‌ ಆಗಿರುವುದು ಗೊತ್ತಾಗಿದೆ. ಪವಿತ್ರ ಗೌಡ ಕಾಲ್‌ ಹಿಸ್ಟರಿ, ಚಾಟ್‌ ಎಲ್ಲ ತೆಗೆದಾಗ ಅದರಲ್ಲಿ ರೇಣುಕ ಸ್ವಾಮಿಯ ಅಶ್ಲೀಲ ಮೆಸೇಜ್‌ಗಳ ಬಗೆಗಿನ ವಿವರಗಳು ಕಂಡುಬಂದಿವೆ. ಈ ಬಗ್ಗೆ ಪವನ್‌, ದರ್ಶನ್‌ಗೆ ಕಾಲ್‌ ಮಾಡಿ ರೇಣುಕಾ ಸ್ವಾಮಿಯ ಹಾವಳಿಯ ಬಗ್ಗೆ ತಿಳಿಸಿದ್ದು ಕೂಡ ಗೊತ್ತಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಮೇಲಿನ ಅಂಧಾಭಿಮಾನ; ಮಗನನ್ನೇ ಕೈದಿ ಮಾಡಿದ ಹುಚ್ಚು ಫ್ಯಾನ್!

ಕೂಡಲೇ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಸಿಪಿ ಗಿರೀಶ್ ಈ ವಿಷಯವನ್ನು ಕಮೀಷನರ್‌ಗೆ ಮುಟ್ಟಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಕಮೀಷನರ್, ದರ್ಶನ್ ಬಂಧನಕ್ಕೆ‌‌ ಸೂಚನೆ ನೀಡಿದ್ದರು. ಜೂನ್ 10ರ ರಾತ್ರಿಯೇ ಮೈಸೂರಿಗೆ ತೆರಳಿದ ಬೆಂಗಳೂರು ಪೊಲೀಸರು ದರ್ಶನ್ ಇರುವ ಸ್ಥಳದ ಮಾಹಿತಿ ಕಲೆ ಹಾಕಿದ್ದರು. ಜೂನ್ 11ರ ಬೆಳಗ್ಗೆ 6.30ಕ್ಕೆ ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಜಿಮ್ ಮಾಡುತ್ತಿದ್ದ ದರ್ಶನ್ ಹೊರಗೆ ಬಂದ ಕೂಡಲೇ ವಶಕ್ಕೆ ಪಡೆದರು.

Continue Reading
Advertisement
bengaluru student Vaishnavi M who won the prestigious award from IIT Bombay
ಬೆಂಗಳೂರು2 mins ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ7 mins ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ10 mins ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ12 mins ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Pancreatitis
ಆರೋಗ್ಯ14 mins ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

MLA Shivaram Hebbar spoke in Taluk level janaspandana programme yallapur
ಉತ್ತರ ಕನ್ನಡ17 mins ago

Uttara Kannada News: ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚನೆ

Advocate G Devarajegowda
ಕರ್ನಾಟಕ17 mins ago

Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

Uttara Kannada News Meeting by DC Gangubai Manakar in Karwar
ಉತ್ತರ ಕನ್ನಡ19 mins ago

Uttara Kannada News: ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಕಾಮಗಾರಿ ಚುರುಕುಗೊಳಿಸಲು ಡಿಸಿ ಸೂಚನೆ

Minister Lakshmi Hebbalkar has submitted various proposals to the Union Minister seeking grant for the strengthening of the department
ಕರ್ನಾಟಕ21 mins ago

Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

Hathras Stampede
ದೇಶ28 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌