Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ! - Vistara News

ಬಾಲಿವುಡ್

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

Bigg Boss OTT 3: ಖ್ಯಾತ ಯುಟ್ಯೂಬರ್‌ ಅರ್ಮಾನ್‌ ಮಲಿಕ್‌ ಅವರು ಯುಟ್ಯೂಬ್‌ ಸೇರಿ ಯಾವುದೇ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿದರೂ ಅದು ಲಕ್ಷಾಂತರ ಜನರನ್ನು ತಲುಪುತ್ತದೆ, ಸುದ್ದಿಯಾಗುತ್ತದೆ. ಆದರೆ, ಈಗ ಅರ್ಮಾನ್‌ ಮಲಿಕ್‌ ಬಿಗ್‌ ಬಾಸ್‌ ಮನೆಯಿಲ್ಲಿದ್ದಾರೆ. ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ.

VISTARANEWS.COM


on

Bigg Boss OTT 3 Armaan Malik both Kritika Malik and Payal Malik in bigg bos house
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್ ಬಾಸ್ OTT ಸೀಸನ್‌ನಲ್ಲಿ (Bigg Boss OTT 3) ಅರ್ಮಾನ್ ಮಲಿಕ್ (Arman Malik) ಮತ್ತು ಅವರ ಇಬ್ಬರು ಪತ್ನಿಯರಾದ ಪಾಯಲ್ ಮತ್ತು ಕೃತಿಕಾ ಭಾಗವಹಿಸಿರುವುದು ಗೊತ್ತೇ ಇದೆ.

ಈ ಶೋ ಬಹುಪತ್ನಿತ್ವವನ್ನು ಉತ್ತೇಜಿಸುತ್ತಿದೆ ಎಂದು ಹಲವರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಹೊಸ ಪ್ರೋಮೊ ಒಂದು ವೈರಲ್‌ ಆಗಿದೆ.

ಹೊಸ ಪ್ರೋಮೊದಲ್ಲಿ ಅರ್ಮಾನ್ ಮಲಿಕ್ ಮೊದಲ ಪತ್ನಿ ಪಾಯಲ್, ಕೃತಿಕಾ ಮತ್ತು ಅವರ ಪತಿಯ ಎರಡನೇ ಮದುವೆ ಬಗ್ಗೆ ಮಾತನಾಡಿ ಕಣ್ಣೀರು ಹಾಕಿದ್ದಾರೆ. ಅರ್ಮಾನ್ ಮತ್ತು ಕೃತಿಕಾ ವಿವಾಹಿತ ಜೋಡಿಯಾಗಿ ಹೇಗೆ ಮರಳಿದರು ಎಂಬುದನ್ನು ಪಾಯಲ್ ವಿವರಿಸಿದ್ದಾರೆ.

ಇದನ್ನೂ ಓದಿ: Kanguva Release Date: ʻಕಂಗುವ’ ರಿಲೀಸ್‌ ಡೇಟ್‌ ಅನೌನ್ಸ್‌; ಧ್ರುವ ಸರ್ಜಾ ಸಿನಿಮಾ ಜತೆ ಕ್ಲ್ಯಾಶ್‌!

ಅವರಿಬ್ಬರ ನಿರ್ಧಾರದಿಂದ ಪಾಯಲ್ ಎಷ್ಟು ದುಃಖಿತರಾಗಿದ್ದಾರೆಂಬುವುದು ಎಂಬುದು ಈ ಪ್ರೋಮೊದಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading

ಬಾಲಿವುಡ್

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Munawar Faruqui: ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

VISTARANEWS.COM


on

Munawar Faruqui shares first pic with new wife
Koo

ಬೆಂಗಳೂರು:  ಬಿಗ್ ಬಾಸ್ 17 ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಮಿಡಿಯನ್ಮು ಮುನಾವರ್ ಫಾರೂಕಿ (Munawar Faruqui) ಎರಡನೇ ಬಾರಿಗೆ ವಿವಾಹವಾದರು ಎಂದು ವರದಿಯಾಗಿತ್ತು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದರು. ಇದೀಗ ಇದೇ ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಒಂದು ತಿಂಗಳ ವಿವಾಹ ವಾರ್ಷಿಕೋತ್ಸವವನ್ನು ದುಬೈನಲ್ಲಿ ಸೆಲೆಬ್ರೆಟ್‌ ಮಾಡಿರುವ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಮೊದಲ ಫೋಟೊದಲ್ಲಿ , ಮುನಾವರ್ ಅವರು ವಿಶ್ರಾಂತಿ ತೆಗೆದುಕೊಳ್ಳುವ, ಶಾಪಿಂಗ್ ಮುಗಿಸಿ ದುಬೈನ ಸ್ಟ್ರೀಟ್‌ನಲ್ಲಿ ಸುತ್ತಾಡುವ. ಸಂಜೆಯ ವಿಹಾರಕ್ಕೆ ಹೋವ, ಉಪಹಾರದ ಫೋಟೋ ಹಾಗೇ ತಮ್ಮ ಶೋ ಒಂದರ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಇದೀಗ ಈ ಫೋಟೊಗೆ ಮುನಾವರ್‌ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻಕೊನೆಯ ಫೋಟೋ ನಮ್ಮ ಹೃದಯ ಕದ್ದಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻನಿಮ್ಮಿಬ್ಬರ ಮುಂದಿನ ಜೀವನಕ್ಕಾಗಿ ದೇವರು ಆಶೀರ್ವದಿಸಲಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ

ಮೆಹಜಬೀನ್ ಮೇಕಪ್ ಕಲಾವಿದೆ. ಆರ್ ಮಾಧವನ್, ವರುಣ್ ಧವನ್, ಯುಜ್ವೇಂದ್ರ ಚಾಹಲ್ ನಂತಹ ನಟರುಗಳ ಪತ್ನಿಯರಿಗೆ, ನೃತ್ಯಗಾರ್ತಿ ಧನಶ್ರೀ ವರ್ಮಾ ಅವರಂತಹ ಅನೇಕ ಗಣ್ಯ ವ್ಯಕ್ಯಿಗಳಿಗೆ ಮೇಕಪ್‌ ಮಾಡಿದ್ದಾರೆ. ಸಾಕಷು ಫ್ಯಾನ್ಸ್‌ ಫಾಲೋವರ್ಸ್‌ ಕೂಡ ಹೊಂದಿದ್ದಾರೆ. ವರದಿಯ ಪ್ರಕಾರ, ಮುನಾವರ್‌ನಂತೆ, ಮೆಹಜಬೀನ್ ಅವರಿಗೆ ಕೂಡ ಇದು ಎರಡನೇ ಮದುವೆ. ಮುನಾವರ್ ಅವರಿಗೆ ಈಗಾಗಲೇ ಒಬ್ಬ ಮಗನೂ ಇದ್ದಾನೆ. ಮೊದಲ ಹೆಂಡತಿ ಜತೆ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ ಮುನಾವರ್‌.

ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

ಮುನಾವರ್‌ 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

Continue Reading

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Continue Reading
Advertisement
Mahua Moitra
ಪ್ರಮುಖ ಸುದ್ದಿ3 mins ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest11 mins ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ14 mins ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

Kolar News
ಕರ್ನಾಟಕ15 mins ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest22 mins ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು33 mins ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ39 mins ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ41 mins ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Anjanadri Temple Hundi Count
ಕರ್ನಾಟಕ43 mins ago

Koppala News: ಅಂಜನಾದ್ರಿ ದೇಗುಲ ಹುಂಡಿಯಲ್ಲಿ 32.95 ಲಕ್ಷ ರೂ; ವಿವಿಧ ದೇಶಗಳ ನೋಟುಗಳು

Pancreatitis
ಆರೋಗ್ಯ46 mins ago

Pancreatitis: ಏನಿದು ಪ್ಯಾಂಕ್ರಿಯಾಟೈಟಿಸ್‌ನಿಂದ ಉಂಟಾಗುವ ಉರಿಯೂತ? ಇದಕ್ಕೇನು ಪರಿಹಾರ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌