Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು? - Vistara News

ವಾಣಿಜ್ಯ

Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೂ ಮುನ್ನ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿ ಸೀರೆಗಳನ್ನು ಖರೀದಿ ಮಾಡಿ, ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲಿ ಅವರು ಐವತ್ತಕ್ಕೂ ಹೆಚ್ಚು ಸೀರೆಗಳನ್ನು ಖರೀದಿಸಿದ್ದಾರೆ. ಇವು ಯಾವ ಮಾದರಿ ಸೀರೆ, ದರ ಎಷ್ಟು ಇತ್ಯಾದಿ ಮಾಹಿತಿ ಇಲ್ಲಿದೆ.

VISTARANEWS.COM


on

Nita Ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲ ಸಂದರ್ಭಕ್ಕೂ ಸೂಕ್ತವಾಗುವ ಬನಾರಸಿ ಸೀರೆಗಳು (Banarasi sari) ಎಲ್ಲರಿಗೂ ಇಷ್ಟವಾಗುತ್ತದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Anant Radhika Wedding) ಅವರ ಮದುವೆಗೂ ಮುನ್ನ ಬನಾರಸಿ ಸೀರೆಗಳನ್ನು ಖರೀದಿ ಮಾಡಲು ರಿಲಯನ್ಸ್ ಫೌಂಡೇಶನ್‌ನ (Reliance Foundation) ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಗೆ (varanasi) ತೆರಳಿ ಐವತ್ತರಿಂದ ಅರವತ್ತು ಸೀರೆಗಳನ್ನು ಖರೀದಿಸಿದರು.

ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿದ ಅವರು ಸೀರೆಗಳನ್ನು ಖರೀದಿ ಮಾಡಿದರು. ಇದಕ್ಕೂ ಮೊದಲು ಹಲವಾರು ಬನಾರಸಿ ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳನ್ನು ಹೊಟೇಲ್ ಗೆ ಕರೆಸಿ ಮಾತನಾಡಿದ ಅವರು ಬಳಿಕ ಸೀರೆಗಳನ್ನು ಸ್ವತಃ ಆಯ್ಕೆ ಮಾಡಿದರು. ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಾಲಿವುಡ್, ಹಾಲಿವುಡ್ ಮತ್ತು ಇತರ ದೇಶಗಳ ಅನೇಕ ಅತಿಥಿಗಳು ಅನಂತ್ ಅಂಬಾನಿ ಅವರ ವಿವಾಹದಲ್ಲಿ ಪಾಲ್ಗೊಳ್ಳುವುದರಿಂದ ಬನಾರಸಿ ಸೀರೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಅಂಬಾನಿ ಕುಟುಂಬ ಸೀರೆಗಳಿಗೆ ಆರ್ಡರ್ ಮಾಡಿದ್ದು, ನೇಕಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಲಕ್ಕಾ ಬೂಟಿ ಸೀರೆ

ನೀತಾ ಅಂಬಾನಿ ಅವರ ಲಕ್ಕಾ ಬೂಟಿ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದು ಬನಾರಸಿ ಕೈಮಗ್ಗ ನೇಕಾರ ಛೋಟೆ ಲಾಲ್ ಪಾಲ್ ತಿಳಿಸಿದ್ದಾರೆ. ಅಂಬಾನಿ ಕುಟುಂಬವು ಭಾರತದ ಪ್ರಸಿದ್ಧ ವ್ಯಾಪಾರ ಕುಟುಂಬವಾಗಿದೆ. ನೀತಾ ಅಂಬಾನಿ ತನ್ನ ಮಗನ ಮದುವೆಯಲ್ಲಿ ನಾನು ತಯಾರಿಸಿದ ಸೀರೆಯನ್ನು ಧರಿಸಿದರೆ ಅನಂತರ ಎಲ್ಲರೂ ಅದನ್ನು ಟಿವಿಯಲ್ಲಿ ನೋಡುತ್ತಾರೆ. ಅವರು ನನ್ನ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದರು.


ನಾವು ಬನಾರಸ್‌ನ ಹಳೆಯ ಕುಶಲಕರ್ಮಿಗಳು. ನಾವು ಮೂರನೇ ತಲೆಮಾರಿನವರು. ನಮ್ಮ ಅಜ್ಜ ಮತ್ತು ತಂದೆ ನೇಕಾರರು. ನಾವು ತಯಾರಿಸುವ ಸೀರೆಗೆ ಲಖ ಬೂಟಿ ಎಂದು ಕರೆಯಲಾಗುತ್ತದೆ. ಈ ಸೀರೆಯ ವಿಶೇಷತೆ ಎಂದರೆ ಆಂಚಲ್ ಬಳಿ ಒಂದು ಮೂಲೆ ಇದೆ. ಒಮ್ಮೆ ಮಗ್ಗವನ್ನು ಸ್ಥಾಪಿಸಿದಾಗ, ಸಂಪೂರ್ಣ ಸೀರೆಯನ್ನು ಸಿದ್ಧಪಡಿಸುತ್ತೇವೆ. ಆದರೆ ವಿಶೇಷ ಸೀರೆಯನ್ನು ತಯಾರಿಸಲು ಮಗ್ಗವನ್ನು ಮೂರು ಬಾರಿ ತಯಾರಿಸಲಾಗುತ್ತದೆ/ ಇದನ್ನು ಹಿಂದೂ ಧರ್ಮದ ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ, ಇದನ್ನು ತಯಾರಿಸಲು 60 ರಿಂದ 62 ದಿನಗಳು ಬೇಕಾಗುತ್ತದೆ ಎಂದು ಹೇಳಿದರು.

ನೇಕಾರರ ಜೊತೆಗೆ ಸೀರೆ ತಯಾರಿಸಲು ಸಹಾಯ ಮಾಡಲು ಇನ್ನೂ 20ರಿಂದ 25 ಕಾರ್ಮಿಕರು ಅಗತ್ಯವಿದೆ. ಮೊದಲು ತಯಾರಿ ಇದೆ. ವಿವರಣೆ ಮುಗಿದಿದೆ. ವಿನ್ಯಾಸವನ್ನು ರಚಿಸಲಾಗಿದೆ. ನಕ್ಷೆಯನ್ನು ರಚಿಸಲಾಗಿದೆ. ವಿನ್ಯಾಸ ಮುಗಿದ ಮೇಲೆ ಸೀರೆಯನ್ನು ಕೈಮಗ್ಗಕ್ಕೆ ಕಳುಹಿಸಲಾಗುತ್ತದೆ. ಇಪ್ಪತ್ತೈದು ಜನರ ಕೈಗಳಲ್ಲಿ ಸೀರೆ ಸಂಪೂರ್ಣ ವಿನ್ಯಾಸಗೊಳ್ಳುತ್ತದೆ.


ಪ್ರತಿ ಸೀರೆಯು ಚಿನ್ನ ಮತ್ತು ಬೆಳ್ಳಿಯ ಎಳೆಗಳನ್ನು ಹೊಂದಿರುವ ನಿಜವಾದ ಝರಿಯನ್ನು ಬಳಸಿ ಕೈಯಿಂದ ಮಾಡಲ್ಪಟ್ಟಿದೆ. ಶೇ. 58-60ರಷ್ಟು ಬೆಳ್ಳಿ ಮತ್ತು ಶೇ. 1.5ರಷ್ಟು ಚಿನ್ನದ ಲೇಪನವನ್ನು ಅನ್ವಯಿಸಲಾಗುತ್ತದೆ. ಚಿನ್ನ ಮತ್ತು ಬೆಳ್ಳಿಯ ದಾರಗಳ ಸೀರೆಗಳ ಬೆಲೆ 1.5 – 2 ಲಕ್ಷ ರೂ. ಗಳಿಂದ 5- 6 ಲಕ್ಷ ರೂ. ಗಳವರೆಗೆ ಇರುತ್ತದೆ.

ಈ ಸೀರೆಗಳನ್ನು ತಯಾರಿಸಲು ಬಹಳ ಸಮಯ ಬೇಕಾಗುತ್ತದೆ. ನೀತಾ ಅಂಬಾನಿ ಅವರು ಹಜಾರಾ ಬುಟಿ ಎಂದು ಕರೆಯಲ್ಪಡುವ ವಿಶಿಷ್ಟವಾದ ಸೀರೆಯನ್ನು ಖರೀದಿಸಿದ್ದಾರೆ. ಇದು 35,000 ಬೆಳ್ಳಿಯ ಬೂಟಿಗಳನ್ನು ಒಳಗೊಂಡಿದೆ. ಹಜಾರಾ ಬುಟಿ ಸೀರೆಯನ್ನು 40- 45 ದಿನಗಳಲ್ಲಿ ತಯಾರಿಸಲಾಗುತ್ತದೆ.


ಅನಂತ್-ರಾಧಿಕಾ ಮದುವೆ

ಜುಲೈ 12ರಂದು ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮದುವೆಗೆ ಮುನ್ನ ನೀತಾ ಅಂಬಾನಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ದಿನ ಹತ್ತಿರವಾಗುತ್ತಿದ್ದಂತೆ ಮುಂಬಯಿನಲ್ಲಿ ಪುರಾತನ ಹಿಂದೂ ವೈದಿಕ ಸಂಪ್ರದಾಯದಂತೆ ನಡೆಯಲಿದೆ ಎನ್ನಲಾಗಿದೆ.

ಮಂಗಳಕರ ಶುಭ ವಿವಾಹ ಎಂದೂ ಕರೆಯಲ್ಪಡುವ ವಿವಾಹ ಸಮಾರಂಭವು ಶುಕ್ರವಾರ ಮುಖ್ಯ ಸಮಾರಂಭಗಳ ಮೂಲಕ ಪ್ರಾರಂಭವಾಗಲಿದೆ. ಆಚರಣೆಯ ವಾತಾವರಣವನ್ನು ಸಂಪೂರ್ಣವಾಗಿ ಆನಂದಿಸಲು ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ಅತಿಥಿಗಳಿಗೆ ಸೂಚಿಸಲಾಗಿದೆ. ಜುಲೈ 13ರಂದು ಶುಭ್ ಆಶೀರ್ವಾದ್ , ಕೊನೆಯ ದಿನವಾದ ಜುಲೈ 14ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

SEBI: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

VISTARANEWS.COM


on

SEBI
Koo

ಮುಂಬೈ: ಅಮೆರಿಕ ಮೂಲದ ಹಿಂಡನ್‌ಬರ್ಗ್‌ ರಿಸರ್ಚ್ (Hindenburg research) ಸಂಸ್ಥೆಯ ಅದಾನಿ ವರದಿಗೆ ಸಂಬಂಧಿಸಿದಂತೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ(SEBI) ಶೋಕಾಸ್ ನೋಟಿಸ್ ನೀಡಿದೆ. 46 ಪುಟಗಳ ಶೋಕಾಸ್ ನೋಟಿಸ್ ಅನ್ನು ಜೂನ್ 27ರಂದು ನೀಡಲಾಗಿದೆ ಎಂದು ಹಿಂಡನ್‌ಬರ್ಗ್‌ನ ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿದ ಹಿಂಡನ್‌ಬರ್ಗ್‌, “ಪೂರ್ವ ನಿರ್ದೇಶಿತ ಉದ್ದೇಶವನ್ನು ಪೂರೈಸಲು ರೂಪಿಸಿರುವ ಈ ಶೋಕಾಸ್‌ ನೋಟಿಸ್‌ ಅನ್ನು ನಾವು ಅಸಂಬದ್ಧ ಎಂದು ಭಾವಿಸುತ್ತೇವೆ. ಭ್ರಷ್ಟಾಚಾರವನ್ನು ಬಯಲಿಗೆಳೆಯುವವರನ್ನು ಬೆದರಿಸಿ ಮೌನಗೊಳಿಸುವ ಪ್ರಯತ್ನ ಇದಾಗಿದೆ. ಭಾರತದ ಅತ್ಯಂತ ಪ್ರಬಲ ಸಂಸ್ಥೆಯೊಂದು ವಂಚನೆ ಎಸಗಿದೆ” ಎಂದು ಎಂದು ಆರೋಪಿಸಿದೆ.

ʼʼಭಾರತದಲ್ಲಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳು ನಡೆಸುವ ಭ್ರಷ್ಟಾಚಾರ ಮತ್ತು ವಂಚನೆಯನ್ನು ಬಹಿರಂಗಪಡಿಸುವವರ ಬಾಯಿ ಮುಚ್ಚಿಸುವ ಪ್ರಯತ್ನ ಇದಾಗಿದೆ. ಸೆಬಿ ಕಳುಹಿಸಿದ ನೋಟಿಸ್‌ನಲ್ಲಿ ಕೆ-ಇಂಡಿಯಾ ಆಪೋರ್ಚೂನಿಟೀಸ್ ಫಂಡ್ ಹೆಸರನ್ನು ಪ್ರಸ್ತಾಪಿಸಿದೆ. ಆದರೆ ಅದು ಕೋಟಕ್ ಮಹೀಂದ್ರ ಬ್ಯಾಂಕ್ ಎಂದು ಸ್ಪಷ್ಟವಾಗಿ ಹೇಳಿಲ್ಲ ಯಾಕೆ? ಮತ್ತೊಬ್ಬ ಪ್ರಭಾವಶಾಲಿ ವ್ಯಕ್ತಿಯನ್ನು ರಕ್ಷಿಸುವ ಕೆಲಸ ಇದುʼʼ ಎಂದು ಹಿಂಡನ್‌ಬರ್ಗ್‌ ರಿಸರ್ಚ್ ಸಂಸ್ಥೆ ಖಾರವಾಗಿ ಪ್ರತಿಕ್ರಿಯಿಸಿದೆ.

ಕೆ ಇಂಡಿಯಾ ಆಪೋರ್ಚುನಿಟೀಸ್ ಫಂಡ್ ಅನ್ನು ಕೋಟಕ್ ಮಹೀಂದ್ರ ಇನ್ವೆಸ್ಟ್​ಮೆಂಟ್ ಲಿ ಸಂಸ್ಥೆ ನಿರ್ವಹಿಸುತ್ತದೆ. ಇದು ಉದಯ್ ಕೋಟಕ್ ಅವರ ಕೋಟಕ್ ಮಹೀಂದ್ರ ಬ್ಯಾಂಕ್ ಅಧೀನದಲ್ಲಿರುವ ಸಂಸ್ಥೆಯಾಗಿದೆ. ಕುತೂಹಲ ಎಂದರೆ ಉದಯ್ ಕೋಟಕ್ ಅವರು 2017ರಲ್ಲಿ ಸೆಬಿಯ ಕಾರ್ಪೊರೇಟ್ ಗವರ್ನೆನ್ಸ್ ಕಮಿಟಿಯ ನೇತೃತ್ವ ವಹಿಸಿದ್ದರು. ಇನ್ನು ತನ್ನ ವಿವಿಧ ನೆಟ್‌ವರ್ಕ್‌ಗಳನ್ನು ಬಳಸಿ ಅದಾನಿ ಸ್ಟಾಕ್​ಗಳನ್ನು ಶಾರ್ಟ್ ಮಾಡಿದ್ದೇವೆ ಎಂದು ಸೆಬಿ ಮಾಡಿರುವ ಆರೋಪವನ್ನು ಹಿಂಡನ್‌ಬರ್ಗ್‌ ನಿರಾಕರಿಸಿದೆ.

ಏನಿದು ಹಿಂಡನ್‌ಬರ್ಗ್‌ ವರದಿ ಕೇಸ್?‌

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ಸಂಚಲನ ಮೂಡಿಸಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ, ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಹಿಂಡನ್‌ಬರ್ಗ್‌ ಕೇಸ್; ಅದಾನಿಗೆ ಬಿಗ್‌ ರಿಲೀಫ್, ಸೆಬಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದ ಸುಪ್ರೀಂ

Continue Reading

ಚಿನ್ನದ ದರ

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಚಿನ್ನದ ಬೆಲೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ತಲಾ ₹ 10 ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,635 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,238 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ (ಜುಲೈ 2) ಚಿನ್ನದ ಬೆಲೆ ಹೆಚ್ಚಾಗಿದೆ (Gold Rate Today). ಶನಿವಾರ ಬಂಗಾರದ ದರ ತುಸು ಏರಿಕೆಯಾಗಿತ್ತು. ಭಾನುವಾರ ಬೆಲೆ ಹೆಚ್ಚಳವಾಗದೆ ಗ್ರಾಹಕರು ನಿರಾಳರಾಗಿದ್ದರು. ಸೋಮವಾರ ಯಥಾಸ್ಥಿತಿಯಲ್ಲಿತ್ತು. ಆದರೆ ಇಂದು ಬೆಲೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ತಲಾ ₹ 10 ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,635 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,238 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,080. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,350 ಮತ್ತು ₹ 6,63,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 57,904 ಇದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 72,380 ಮತ್ತು ₹ 7,23,800 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,650 ₹ 7,253
ಮುಂಬೈ₹ 6,635 ₹ 7,238
ಬೆಂಗಳೂರು₹ 6,635₹ 7,238
ಚೆನ್ನೈ₹ 6,690 ₹ 7,298

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆ ಕೊಂಚ ಇಳಿಮುಖವಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 90.05 ಹಾಗೂ 8 ಗ್ರಾಂಗೆ ₹ 720.40 ಇದೆ. 10 ಗ್ರಾಂಗೆ ₹ 900.50 ಹಾಗೂ 1 ಕಿಲೋಗ್ರಾಂಗೆ ₹ 90,050 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

    Continue Reading

    ವಾಣಿಜ್ಯ

    Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

    Stock Market: ಬಾಂಬೆ ಷೇರು ಪೇಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ.

    VISTARANEWS.COM


    on

    Stock Market
    Koo

    ಮುಂಬೈ: ಬಾಂಬೆ ಷೇರು ಪೇಟೆ (Stock Market)ಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ 79,000 ಅಂಕ ತಲುಪಿದ್ದ ಸೆನ್ಸೆಕ್ಸ್‌ (Sensex) ಇಂದು (ಜುಲೈ 2) ಕೂಡ ಮೇಲ್ಮುಖವಾಗಿ ಸಾಗಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ.

    ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಇಂದು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

    ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಇಂದು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿವೆ. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

    ಈ ಮಧ್ಯೆ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ 12 ಪೈಸೆ ದುರ್ಬಲಗೊಂಡು 83.56ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಬಲವಾದ ಯುಎಸ್ ಡಾಲರ್ ಮತ್ತು ಹೆಚ್ಚಾದ ಕಚ್ಚಾ ತೈಲ ಬೆಲೆಗಳು ಇದಕ್ಕೆ ಕಾರಣ. ತೈಲ ಆಮದುದಾರರು ಮತ್ತು ವಿದೇಶಿ ಹೂಡಿಕೆದಾರರು ಯುಎಸ್ ಡಾಲರ್‌ ಹೆಚ್ಚಾಗಿ ಬಳಸುತ್ತಿದ್ದು, ಇದು ರೂಪಾಯಿ ಕುಸಿತಕ್ಕೆ ಕಾರಣವಾಗಿದೆ ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ವಿವರಿಸಿದ್ದಾರೆ.

    ಇಂಟರ್‌ ಬ್ಯಾಂಕ್‌ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ 83.51 ಮೌಲ್ಯದೊಂದಿಗೆ ದಿನವನ್ನು ಆರಂಭಿಸಿತು. ಆದರೆ ಬಳಿಕ ಡಾಲರ್ ವಿರುದ್ಧ 83.56ಕ್ಕೆ ಇಳಿಯಿತು. ಈ ಮೂಲಕ ಸೋಮವಾರಕ್ಕಿಂತ 12 ಪೈಸೆ ಕುಸಿತ ದಾಖಲಿಸಿದೆ.

    ಗುರುವಾರ (ಜೂನ್‌ 27)ದ ಆರಂಭಿಕ ವಹಿವಾಟಿನಲ್ಲಿ ಕುಸಿದ ನಂತರ ಬೆಂಚ್ ಮಾರ್ಕ್ ಸೂಚ್ಯಂಕಗಳು ಜಿಗಿದುಕೊಂಡಿದ್ದವು. ಅಂದು ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 79,000 ಗಡಿಯನ್ನು ದಾಟಿತ್ತು ಮತ್ತು ನಿಫ್ಟಿ ಬ್ಲೂ-ಚಿಪ್ ಷೇರುಗಳ ಖರೀದಿಯ ಮಧ್ಯೆ ತನ್ನ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು. ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ-ಚಿಪ್ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 339.51 ಪಾಯಿಂಟ್ಸ್ ಏರಿಕೆ ಕಂಡು 79,013.76ಕ್ಕೆ ತಲುಪಿದ್ದರೆ ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,966.40ಕ್ಕೆ ಮುಟ್ಟಿತ್ತು. “ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಸೆನ್ಸೆಕ್ಸ್ ಅನ್ನು 80,000 ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಬ್ಯಾಂಕಿಂಗ್ ಮತ್ತು ಟೆಲಿಕಾಂನಂತಹ ಕ್ಷೇತ್ರಗಳಲ್ಲಿ ಬಲವಾದ ಲಾರ್ಜ್ ಕ್ಯಾಪ್‌ಗಳು ಈಗ ಏರಿಕೆ ಪ್ರವೃತ್ತಿಯನ್ನು ಮುನ್ನಡೆಸುತ್ತಿವೆ” ಎಂದು ತಜ್ಞರು ಹೇಳಿದ್ದಾರೆ. 

    ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

    Continue Reading

    ಫ್ಯಾಷನ್

    Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

    ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿರುವ ಅನಂತ್ ಅಂಬಾನಿ (Anant Ambani) ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಗಳು ಯಾವುದು, ಇದರ ಬೆಲೆ ಎಷ್ಟು ಗೊತ್ತೇ?

    VISTARANEWS.COM


    on

    By

    Anant Ambani
    Koo

    ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ರಿಲಾಯನ್ಸ್ ಫೌಂಡೇಶನ್ ನ (Reliance Foundation) ಸಂಸ್ಥಾಪಕಿ ನೀತಾ ಅಂಬಾನಿ (nita ambani) ಅವರ ಕೊನೆಯ ಪುತ್ರ ಅನಂತ್ ಅಂಬಾನಿ (Anant Ambani) ತಮ್ಮ ಮದುವೆಯ ಕಾರಣದಿಂದ ಕಳೆದ ಒಂದು ವರ್ಷದಿಂದ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

    ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (radhika merchant) ಅವರನ್ನು ಇದೇ ತಿಂಗಳ 12ರಂದು ಮುಂಬಯಿನ (mumbai) ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಈ ನಡುವೆ ಇದೀಗ ಅನಂತ್ ಅಂಬಾನಿ ಅವರ ಸಂಗ್ರಹದಲ್ಲಿರುವ ದುಬಾರಿ ವಾಚ್ ಎಲ್ಲರ ಗಮನ ಸೆಳೆಯುತ್ತಿದೆ.

    ಕ್ಯುರೇಟೆಡ್ ಮತ್ತು ಅತ್ಯದ್ಭುತ ದುಬಾರಿ ವಾಚ್ ಸಂಗ್ರಹಣೆಗಾಗಿ ಹೆಸರುವಾಸಿಯಾಗಿರುವ ಅನಂತ್ ಅಂಬಾನಿ ಅವರ ಬಳಿ ಇರುವ ಕೆಲವು ಅಸಾಧಾರಣ ವಾಚ್ ಸಂಗ್ರಹದ ಕುರಿತು ಕಿರು ಮಾಹಿತಿ ಇಲ್ಲಿದೆ.


    ಪಾಟೆಕ್ ಫಿಲಿಪ್ ಗ್ರ್ಯಾಂಡ್ ಮಾಸ್ಟರ್ ಚೈಮ್

    ಅನಂತ್ ಅಂಬಾನಿ ಗ್ರ್ಯಾಂಡ್ ಮಾಸ್ಟರ್ ಚೈಮ್ ಸೇರಿದಂತೆ ಪಾಟೆಕ್ ಫಿಲಿಪ್ ಅವರ ಅತ್ಯಂತ ದುಬಾರಿ ಕೈಗಡಿಯಾರಗಳಲ್ಲಿ ಎರಡನ್ನು ಹೊಂದಿದ್ದಾರೆ. ಪಾಟೆಕ್‌ ನ ಅತ್ಯಂತ ದುಬಾರಿ ಕೈಗಡಿಯಾರ ಇದಾಗಿದೆ. ಇದುವರೆಗೆ ಇದರ ಏಳು ವಾಚ್‌ಗಳನ್ನು ಮಾತ್ರ ಮಾಡಲಾಗಿದೆ. ಇದು ಇತ್ತೀಚೆಗೆ ಹರಾಜಿನಲ್ಲಿ 31 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2.58 ಬಿಲಿಯನ್ ರೂ.ಗಳಾಗಿದೆ.


    ಆಡೆಮರ್ಸ್ ಪಿಗುಯೆಟ್ ರಾಯಲ್ ಓಕ್ ಕಾನ್ಸೆಪ್ಟ್ ಜಿಎಂಟಿ ಟೂರ್‌ಬಿಲ್ಲನ್

    ರಾಯಲ್ ಓಕ್‌ನ 30ನೇ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ ಬಿಡುಗಡೆ ಮಾಡಲಾದ ಈ ದಪ್ಪ ಗಡಿಯಾರವು ಟೈಟಾನಿಯಂ ಕೇಸ್ ಮತ್ತು ಅಸ್ಥಿಪಂಜರ ಮಾದರಿಯ ಡಯಲ್ ಅನ್ನು ಒಳಗೊಂಡಿದೆ. ಅದರ ಸಂಕೀರ್ಣ ಕಾರ್ಯವಿಧಾನ ಮೋಡಿ ಮಾಡುವಂತಿದೆ. ಮೈ ಯ ಶಾಖ ಮತ್ತು ಜಿಎಂಟಿ ಕಾರ್ಯದೊಂದಿಗೆ ಇದು ಕಾರ್ಯ ನಿರ್ವಹಿಸುತ್ತದೆ. ಇದರ ಅಂದಾಜು ಬೆಲೆ 1.9 ಕೋಟಿ ರೂ.


    ಪಾಟೆಕ್ ಫಿಲಿಪ್ ನಾಟಿಲಸ್ ಟ್ರಾವೆಲ್ ಟೈಮ್

    ಪಾಟೆಕ್ ಫಿಲಿಪ್ ವಾಚ್‌ ನ ಅತ್ಯಂತ ಅಪರೂಪದ ವಾಚ್ ಇದಾಗಿದ್ದು, ಮಾಣಿಕ್ಯ, ವಜ್ರ ಬಿಳಿ ಚಿನ್ನವನ್ನು ಒಳಗೊಂಡಿದೆ. ಅತ್ಯಂತ ಐಷಾರಾಮಿ ಕೈಗಡಿಯಾರವಾದ ಇದು ಕೆಂಪು ಮಾಣಿಕ್ಯ, ಹಸಿರು ಪಚ್ಚೆಗಳಿಂದ ಅಲಂಕರಿಸಲ್ಪಟ್ಟಿದೆ. ಇದರ ಅಂದಾಜು ಬೆಲೆ 8.2 ಕೋಟಿ ರೂ.

    ಇದನ್ನೂ ಓದಿ: Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?


    ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಟೂರ್‌ಬಿಲ್ಲನ್

    ರಿಚರ್ಡ್ ಮಿಲ್ಲೆ ಆರ್ ಎಮ್ 56-01 ಶುದ್ಧ, ಸ್ಫಟಿಕದಂತಹ ನೀಲಮಣಿಯನ್ನು ಹೊಂದಿದೆ. ಇದು ಅಸಾಧಾರಣ ಬಾಳಿಕೆ ಮತ್ತು ಸ್ಕ್ರಾಚ್ ಪ್ರತಿರೋಧವನ್ನು ಹೊಂದಿದೆ. ಹಸಿರು ನೀಲಮಣಿಯನ್ನು ಒಳಗೊಂಡಿರುವ ಇದರ ಅಂದಾಜು ಬೆಲೆ 25 ಕೋಟಿ ರೂ.


    ಪಾಟೆಕ್ ಫಿಲಿಪ್ ಸ್ಕೈ ಮೂನ್ ಟೂರ್ಬಿಲ್ಲಾನ್

    ಪಾಟೆಕ್ ಫಿಲಿಪ್ ರಚಿಸಿದ ಅತ್ಯಂತ ಅಪರೂಪದ ಕೈಗಡಿಯಾರಗಳಲ್ಲಿ ಸ್ಕೈ ಮೂನ್ ಟೂರ್‌ಬಿಲ್ಲನ್ ನಲ್ಲಿ ಕ್ಯಾಲೆಂಡರ್, ಚಂದ್ರನ ಚಲನೆಯ ಸೂಚಕ ಸೇರಿದಂತೆ ಹನ್ನೆರಡು ವಿಶೇಷತೆಗಳನ್ನು ಒಳಗೊಂಡಿದೆ. ಇದರ ಸಂಕೀರ್ಣ ವಿನ್ಯಾಸ ಮತ್ತು ಅಸಾಧಾರಣ ಕರಕುಶಲತೆಯು ಸ್ವಿಸ್ ವಾಚ್‌ಮೇಕಿಂಗ್ ಅನ್ನು ಅತ್ಯುತ್ತಮವಾಗಿಸಿದೆ. ಇದರ ಅಂದಾಜು ಬೆಲೆ 54 ಕೋಟಿ ರೂ.

    Continue Reading
    Advertisement
    David Miller :
    ಪ್ರಮುಖ ಸುದ್ದಿ26 mins ago

    David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

    Sudha Murty
    ದೇಶ53 mins ago

    Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

    Physical Abuse
    ಕರ್ನಾಟಕ1 hour ago

    Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    Mahua Moitra
    ಪ್ರಮುಖ ಸುದ್ದಿ2 hours ago

    Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

    Viral Video
    Latest2 hours ago

    Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

    Hemant Nimbalkar
    ಪ್ರಮುಖ ಸುದ್ದಿ2 hours ago

    Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

    Kolar News
    ಕರ್ನಾಟಕ3 hours ago

    Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

    Tamanna Bhatia
    Latest3 hours ago

    Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

    bengaluru student Vaishnavi M who won the prestigious award from IIT Bombay
    ಬೆಂಗಳೂರು3 hours ago

    Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

    IPL 2025
    ಪ್ರಮುಖ ಸುದ್ದಿ3 hours ago

    IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    karnataka weather Forecast
    ಮಳೆ5 hours ago

    Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

    karnataka Weather Forecast
    ಮಳೆ1 day ago

    Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    karnataka Weather Forecast
    ಮಳೆ2 days ago

    Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

    Actor Darshan
    ಬೆಂಗಳೂರು2 days ago

    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

    karnataka weather Forecast
    ಮಳೆ3 days ago

    Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

    karnataka Rain
    ಮಳೆ4 days ago

    Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

    karnataka Weather Forecast
    ಮಳೆ4 days ago

    Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

    karnataka Rain
    ಮಳೆ5 days ago

    Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

    Karnataka Weather Forecast
    ಮಳೆ5 days ago

    Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

    karnataka Weather Forecast
    ಮಳೆ5 days ago

    Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

    ಟ್ರೆಂಡಿಂಗ್‌