Varamahalakshmi Festival | ಸ್ಯಾಂಡಲ್‌ವುಡ್‌ ಪೋಸ್ಟರ್‌ ಧಮಾಕಾ: ತೋತಾಪುರಿ ರಿಲೀಸ್‌ ಡೇಟ್‌ ಫಿಕ್ಸ್‌ - Vistara News

ಸಿನಿಮಾ

Varamahalakshmi Festival | ಸ್ಯಾಂಡಲ್‌ವುಡ್‌ ಪೋಸ್ಟರ್‌ ಧಮಾಕಾ: ತೋತಾಪುರಿ ರಿಲೀಸ್‌ ಡೇಟ್‌ ಫಿಕ್ಸ್‌

ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ (Varamahalakshmi Festival) ಸ್ಯಾಂಡಲ್‌ವುಡ್‌ನ ಹಲವು ಚಿತ್ರಗಳ ಪೋಸ್ಟರ್‌ಗಳು ಬಿಡುಗಡೆಗೊಂಡಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Varamahalakshmi Festival
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ (Varamahalakshmi Festival) ಪ್ರಯುಕ್ತ ಸ್ಯಾಂಡಲ್‌ವುಡ್‌ ಸಿನಿಮಾಗಳು ಪೋಸ್ಟ್‌ರ್‌ ಬಿಡುಗಡೆ ಮಾಡುವುದರ ಮೂಲಕ ಹಬ್ಬ ಆಚರಿಸಿವೆ. ಸಾಲುಸಾಲು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದ್ದು, ಪೋಸ್ಟರ್‌ಗಳನ್ನು ಅನಾರಣಗೊಳಿಸಿವೆ.

ತೋತಾಪುರಿ
ನವರಸ ನಾಯಕ ಜಗ್ಗೇಶ್‌ ಅಭಿನಯದ “ತೋತಾಪುರಿ ಚಾಪ್ಟರ್‌-1ʼ ಸಿನಿಮಾ ರಿಲೀಸ್‌ ಡೇಟ್‌ ರಿವೀಲ್‌ ಆಗಿದೆ. ಈ ಚಿತ್ರವು ಇದೇ ವರ್ಷ ಸೆಪ್ಟೆಂಬರ್​ 30ಕ್ಕೆ ಬಿಡುಗಡೆ ಆಗುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ಈ ಹಿಂದೆ ಟ್ರೈಲರ್‌ ಬಿಡುಗಡೆಗೊಂಡಿದ್ದು, ಸಿನಿಮಾಗಳಲ್ಲಿ ಸಾಕಷ್ಟು ಡಬಲ್‌ ಮೀನಿಂಗ್‌ ಡೈಲಾಗ್‌ಗಳು ಸಹಜವಾಗಿತ್ತು.

ಬಾನದಾರಿಯಲ್ಲಿ
ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯಿಸುತ್ತಿರುವ “ಬಾನದಾರಿಯಲ್ಲಿʼ ಸಿನಿಮಾ ತಂಡ ಹಬ್ಬದ ಕುರಿತಾಗಿ ಶುಭ ಹಾರೈಸಿರುವ ಪೋಸ್ಟರ್‌ ಹಾಕಿಕೊಂಡಿದೆ. ಬೆಂಗಳೂರು ಜತೆಗೆ ಆಫ್ರಿಕಾದಲ್ಲಿ ಕೂಡ ಈ ಚಿತ್ರದ ಶೂಟಿಂಗ್‌ ಆಗಲಿದೆ. “ಬೀರಬಲ್‌ʼ ಚಿತ್ರದ ಖ್ಯಾತಿಯ ನಟಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ಅಭಿನಯಿಸಲಿದ್ದಾರೆ. “ಬಾನದಾರಿಯಲ್ಲಿʼ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನಿರ್ದೇಶಕರಾಗಿದ್ದು, ಅಭಿಲಾಶ್‌ ಕಳತ್ತಿ ಛಾಯಾಗ್ರಹಣ ಮಾಡಿದ್ದಾರೆ. ಪ್ರೀತಮ್‌ ಗುಬ್ಬಿ ಅವರ ಫಿಲ್ಮ್‌ ಬ್ಯಾನರ್‌ ಅಡಿಯಲ್ಲಿ ಈ ಚಿತ್ರ ತೆರೆ ಕಾಣಲಿದೆ. ಶ್ರೀ ವಾರಿ ಟಾಕಿಸ್‌ ಚಿತ್ರವನ್ನು ನಿರ್ಮಿಸಿದೆ.

ಇದನ್ನೂ ಓದಿ | Gaalipata 2 | ಗಾಳಿಪಟ-2 ಪ್ರೀ ರಿಲೀಸ್ ಇವೆಂಟ್: ಭಾಗಿಯಾದ ಸ್ಯಾಂಡಲ್‌ವುಡ್‌ ತಾರಾ ಬಳಗ

ಶುಗರ್‌ ಫ್ಯಾಕ್ಟರಿ
“ಲವ್‌ ಮಾಕ್ಟೇಲ್‌ʼ ಖ್ಯಾತಿಯ ಡಾರ್ಲಿಂಗ್‌ ಕೃಷ್ಣ “ಶುಗರ್‌ ಫ್ಯಾಕ್ಟರಿʼ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದಲ್ಲಿ ಮೂವರು ನಾಯಕಿಯರಾಗಿ ಅಭಿನಯಿಸುತಿದ್ದಾರೆ. ಸೊನಾಲ್ ಮಾಂಟೆರೊ ಹಾಗೂ ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ. ರಂಗಾಯಣ ರಘು, ‘ಲವ್ ಮಾಕ್ಟೇಲ್’ ಖ್ಯಾತಿಯ ಅಭಿ ಕೂಡ ಬಣ್ಣ ಹಚ್ಚಿದ್ದಾರೆ.

ರಾಣಾ
“ರಾಣಾʼ ಸಿನಿಮಾದ ಪೋಸ್ಟರ್‌ ಬಿಡುಗಡೆಗೊಂಡಿದೆ. ನಂದ ಕಿಶೋರ್‌ ನಿರ್ದೇಶನದ ಈ ಸಿನಿಮಾಗೆ ಶ್ರೇಯಸ್‌ ಮಂಜು ನಾಯಕನಾಗಿ ನಟಿಸುತ್ತಿದ್ದಾರೆ.

ಶಿವ 143
ಅನೀಲ್‌ ಕುಮಾರ್‌ ನಿರ್ದೇಶನದ “ಶಿವ 143ʼ ಆಗಸ್ಟ್‌ 26ಕ್ಕೆ ತೆರೆಗೆ ಅಪ್ಪಳಿಸಲಿದೆ. ಹೊಸ ತಂಡದ ಈ ಚಿತ್ರ ಹೇಗೆ ಸಿನಿಪ್ರಿಯರನ್ನು ರಂಜಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬ್ಯಾಡ್‌ ಮ್ಯಾನರ್ಸ್‌
ಯಂಗ್‌ ರೆಬಲ್‌ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ ನಟನೆಯ “ಬ್ಯಾಡ್‌ ಮ್ಯಾನರ್ಸ್‌ʼ ಸಿನಿಮಾ ವರ ಮಹಾಲಕ್ಷ್ಮಿ ಹಬ್ಬದ ಶುಭಾಶಯ ತಿಳಿಸಿದೆ. ಸುಧೀರ್‌ ಕೆ ಎಂ ಇದನ್ನು ನಿರ್ಮಾಣ ಮಾಡಿದ್ದಾರೆ.

ಜೋಗ್‌ 101
ರಾಘವೇಂದ್ರ ಅಭಿನಯದ “ಜೋಗ್‌ 101ʼ ಪೋಸ್ಟರ್‌ ಬಿಡುಗಡೆಗೊಂಡಿದೆ. ವಿಜಯ್‌ ಕನ್ನಡಿಗ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸುನೀತ್‌ ಹಲಗೇರಿ ಛಾಯಾಗ್ರಹಣ ಮಾಡಿದ್ದು, ಅವಿನಾಶ್‌ ಆರ್‌ ಸಂಗೀತ ಸಂಯೋಜನೆ ಮಾಡಿದ್ದಾರೆ.

ಶಂಭೋ ಶಿವ ಶಂಕರ
ಈ ಸಿನಿಮಾದ ಕಥೆ, ಚಿತ್ರಕಥೆ ಮತ್ತು ನಿರ್ದೇಶನದ ಹೊಣೆಯನ್ನು ಶಂಕರ್‌ ಕೋಣಮನಹಳ್ಳಿ ನಿಭಾಯಿಸುತ್ತಿದ್ದಾರೆ. ವರ್ತೂರು ಮಂಜು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ | Kannada Movies | ಒಗ್ಗಟ್ಟಿಗೆ ಸಾಕ್ಷಿಯಾದ ಸ್ಯಾಂಡಲ್‌ವುಡ್‌; ಇದು ತಾರೆಗಳ ಸಮಾಗಮ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Kalki 2898 AD: ಪ್ರಭಾಸ್‍, ದೀಪಿಕಾ ಪಡುಕೋಣೆ, ಅಮಿತಾಭ್‍ ಬಚ್ಚನ್ ಮತ್ತಿತರರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ  ‘ಕಲ್ಕಿ 2898 ಎಡಿ’ಯ ಹೊಸ ಪಾತ್ರ ‘ಬುಜ್ಜಿ’ ಗಮನ ಸೆಳೆಯುತ್ತಿದೆ. ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಚಿತ್ರತಂಡ ಅದ್ಧೂರಿ ಕಾರ್ಯಕ್ರಮದಲ್ಲಿ ಪರಿಚಯಿಸಿದೆ. ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ ಈ ಬುಜ್ಜಿ. ಬುಜ್ಜಿ ಝಳಕ್‌ ಅನ್ನು ಈ ವಿಡಿಯೊದಲ್ಲಿ ನೋಡಿ.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ. ಈ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ (ಮೇ 22) ಚಿತ್ರದ ಐದನೇ ಸೂಪರ್‌ ಸ್ಟಾರ್ ‘ಬುಜ್ಜಿ’ಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ ಅನ್ನು ಅನಾವರಣಗೊಳಿಸಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪ್ರೇಕ್ಷಕರ ಮುಂದಿಡಲಾಗಿದೆ.

ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ಎಡಿʼ ಚಿತ್ರದ ಹೊಸ ಪೋಸ್ಟರ್‌ ಔಟ್‌; ಪ್ರಭಾಸ್‌ ಪಾತ್ರದ ಹೆಸರು ರಿವೀಲ್‌

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು. ಜತೆಗೆ ಮೊದಲ ಬಾರಿಗೆ ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ತೆರೆಮೇಲೆ ಒಂದಾಗುತ್ತಿರುವುದೂ ನಿರೀಕ್ಷೆ ಹೆಚ್ಚಿಸಿದೆ.

Continue Reading

ಸಿನಿಮಾ

Actor Dhananjay: ʻಕೋಟಿʼ ಸಿನಿಮಾದ ‘ಜನತಾ ಸಿಟಿ’ ಹಾಡು ಔಟ್‌

Actor Dhananjay: ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಕೆಲವು ದಿನಗಳ ಹಿಂದೆ ‘ಮಾತು ಸೋತು’ ಹಾಡು ಬಿಡುಗಡೆ ಮಾಡಿ ಗಮನ ಸೆಳೆದಿದ್ದ ಚಿತ್ರತಂಡ ಇದೀಗ ಮತ್ತೊಂದು ವಿಶೇಷ ಹಾಡನ್ನು ಹೊರ ತಂದಿದೆ. ʼಕೋಟಿʼ ಚಿತ್ರವನ್ನು ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ನಾಯಕಿಯಾಗಿ ಮೋಕ್ಷಾ ಕುಶಾಲ್‌ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Actor Dhananjay
Koo

ಬೆಂಗಳೂರು: ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ‌. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತಹ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ (Kotee Movie) ಜೀವನ ನಡೆಸುತ್ತಿದ್ದಾನೆ.‌ ಇದು ಒಂದು ಭ್ರಷ್ಟ ನಗರವೂ ಹೌದು. ಸದ್ಯ ಸ್ಯಾಂಡಲ್‌ವುಡ್‌ ನಟ ಧನಂಜಯ್‌ ಅಭಿನಯದ ʼಕೋಟಿʼ ಸಿನಿಮಾದಲ್ಲಿನ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೊವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದು.

ವಾಸುಕಿ ವೈಭವ್ ಮಾತನಾಡಿ, “ಕೋಟಿ ‘ಜನತಾಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂ. ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ತುಂಬಾ ಚಾಲೆಂಜಿಂಗ್ ಆಗಿತ್ತು. ಈ ಹಾಡಿನ ತಯಾರಿ ವೇಳೆ ಸಖತ್ ಮಜ ಮಾಡಿದೀನಿ” ಎಂದು ಹೇಳಿದ್ದಾರೆ.

“ಕೋಟಿʼ ಸಿನಿಮಾದಲ್ಲಿ ‘ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟ. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳ‌ಲ್ಲಿ ಬದುಕುವ ಎಲ್ಲರಿಗೂ ತುಂಬಾ ಹತ್ತಿರ ಆಗಲಿದೆ” ಎಂದು ʼಕೋಟಿʼಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.

ʼಕೋಟಿʼ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ʼ777 ಚಾರ್ಲಿʼ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ʼಕಾಂತಾರʼ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿ ʼಕೋಟಿʼಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮೆರಾಮನ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

ಈ ಸಿನಿಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆಲವು ದಿನಗಳ ಹಿಂದೆ ʻಕೋಟಿʼ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ.

Continue Reading

ಸಿನಿಮಾ

Indian 2: ಕಮಲ್‌ ಹಾಸನ್‌ ಅಭಿನಯದ ʼಇಂಡಿಯನ್‌ 2ʼ ಚಿತ್ರದ ಮೊದಲ ಹಾಡು ರಿಲೀಸ್‌; ಕುದುರೆ ಏರಿ ಬಂದ ಉಳಗನಾಯಗನ್‌

Indian 2: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಕಾಲಿವುಡ್‌ನ ಇಂಡಿಯನ್ 2 ಕೂಡ ಒಂದು. ಉಳಗ ನಾಯಕನ್‌ ಕಮಲ್ ಹಾಸನ್ ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ ಜೋಡಿಯ ʼಇಂಡಿಯನ್ 2ʼ ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ.

VISTARANEWS.COM


on

Indian 2
Koo

ಚೆನ್ನೈ: ಉಳಗ ನಾಯಕನ್‌ ಕಮಲ್ ಹಾಸನ್ (Kamal Haasan) ಹಾಗೂ ಜನಪ್ರಿಯ ನಿರ್ದೇಶಕ ಆರ್.ಶಂಕರ್ (R.Shankar) ಜೋಡಿಯ ʼಇಂಡಿಯನ್ 2ʼ (Indian 2) ಪ್ಯಾನ್‌ ಇಂಡಿಯಾ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಅದರ ಭಾಗವಾಗಿ ʼಇಂಡಿಯನ್ 2ʼ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ʼಇಂಡಿಯನ್ 2ʼ ಸಿನಿಮಾದ ‘ಪಾರಾ’ ಎಂಬ ಹಾಡು ರಿಲೀಸ್‌ ಆಗಿದೆ. ಕುದುರೆ ಏರಿ ಬರುವ ಸೇನಾಪತಿಯ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ. ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ಹಾಡಿಗೆ ಧ್ವನಿಯಾಗಿದ್ದಾರೆ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸೇನಾಪತಿಯಾಗಿ ಕಮಲ್ ಹಾಸನ್ ನಟಿಸಿದ್ದು,‌ ಅನಿರುದ್ಧ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.

1996ರಲ್ಲಿ ಬಿಡುಗಡೆಗೊಂಡಿದ್ದ ʼಇಂಡಿಯನ್ʼ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾದಲ್ಲಿ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು. ʼಇಂಡಿಯನ್ 2ʼ ಆ ಹಿಟ್ ಚಿತ್ರದ ಮುಂದುವರಿದ ಭಾಗವಾಗಿದ್ದು, ಇದರಲ್ಲೂ ಕಮಲ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ. ಈ ಚಲನಚಿತ್ರವನ್ನು ಸುಭಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ನಿರ್ಮಿಸಿದೆ. ಈಗಾಗಲೇ ರಿಲೀಸ್‌ ಆಗಿರುವ ಪೋಸ್ಟರ್‌ ಕುತೂಹಲ ಮೂಡಿಸಿದ್ದು, ಇದೀಗ ಹಾಡು ಕೂಡ ಗಮನ ಸೆಳೆಯುತ್ತಿದೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಇದನ್ನೂ ಓದಿ: Indian 2 : ‘ಇಂಡಿಯನ್ 2ʼ ಸಿನಿಮಾದಲ್ಲಿ ಸಿದ್ಧಾರ್ಥ್: ಫಸ್ಟ್‌ ಲುಕ್‌ ಔಟ್‌!

ಇದೀಗ ‘ಇಂಡಿಯನ್‌ 2’ ಜತೆಗೆ ʼಇಂಡಿಯನ್ 3ʼ ಸಿನಿಮಾದ ಚಿತ್ರೀಕರಣವೂ ಮುಗಿದಿದೆ ಎಂದು ವರದಿಯೊಂದು ತಿಳಿಸಿದೆ. ‘ಇಂಡಿಯನ್ 2’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡ ಬಳಿಕ ‘ಇಂಡಿಯನ್ 3’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Kalki 2898 AD: ಕಲ್ಕಿ ಚಿತ್ರದ ʼಬುಜ್ಜಿʼ ಪಾತ್ರ ರಿವೀಲ್; ಅದ್ಧೂರಿ ಕಾರ್ಯಕ್ರಮದ LIVE ವಿಡಿಯೊ ಇಲ್ಲಿದೆ

Kalki 2898 AD: ನಟ ಪ್ರಭಾಸ್‌ ಅಭಿನಯದ ‘ಕಲ್ಕಿ 2898 AD’ ಚಿತ್ರದ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ಅನಾವರಣ ಮಾಡಲು ಹೈದರಾಬಾದ್‌ನ ರಾಮೋಜಿ ಫಿಲಂ ಸಿಟಿಯಲ್ಲಿ ಬುಧವಾರ ರಾತ್ರಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ವೀಕ್ಷಿಸಲು ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

VISTARANEWS.COM


on

Kalki 2898 AD
Koo

ಹೈದರಾಬಾದ್: ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 AD’ (Kalki 2898 AD) ಚಿತ್ರವು ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿದೆ. ಹೀಗಾಗಿ ಸಿನಿಮಾದಲ್ಲಿನ ಪ್ರಮುಖ ನಟರ ಪಾತ್ರಗಳನ್ನು ಪರಿಚಯಿಸುತ್ತಿರುವ ಚಿತ್ರತಂಡ ಬುಧವಾರ, ಚಿತ್ರದ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ಅನಾವರಣಗೊಳಿಸಿದೆ. ಇದಕ್ಕಾಗಿ ನಗರದ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಲ್ಕಿ ಚಿತ್ರದಲ್ಲಿನ ಐದನೇ ಸೂಪರ್‌ ಸ್ಟಾರ್ ಬುಜ್ಜಿಯನ್ನು ರಿವೀಲ್‌ ಮಾಡಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೈರವನ (ಪ್ರಭಾಸ್)‌ ಜತೆ ಬುಜ್ಜಿಯನ್ನು ನೋಡಲು ವಿವಿಧೆಡೆಯಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ʼಬುಜ್ಜಿʼ ಎಂಬ ಸೂಪರ್‌ ಕಾರನ್ನು ಅನಾವರಣ ಮಾಡಲಾಗಿದೆ. ʼಬುಜ್ಜಿʼ ಎಂಬುವುದು ರೋಬೋಟಿಕ್‌ ಕಾರು ಆಗಿದ್ದು, ಕಲ್ಕಿ ಚಿತ್ರದಲ್ಲಿ ಭೈರವನಿಗೆ (ಪ್ರಭಾಸ್‌) ಆಪ್ತಮಿತ್ರ ಆಗಿದೆ.

ಚಿತ್ರದಲ್ಲಿ ಈ ಬುಜ್ಜಿಗೆ ʼಮಹಾನಟಿʼ ಚಿತ್ರದ ಖ್ಯಾತಿಯ ನಟಿ ಕೀರ್ತಿ ಸುರೇಶ್‌ ವಾಯ್ಸ್‌ ನೀಡಿದ್ದಾರೆ. ಪ್ರೇಕ್ಷಕರ ಚಪ್ಪಾಳೆ, ಕೂಗಾಟದ ನಡುವೆ ರೋಬೋಟಿಕ್‌ ಮಾದರಿಯ ಕಾರಿನಲ್ಲಿ ನಟ ಪ್ರಭಾಸ್‌ ಎಂಟ್ರಿ ನೀಡಿದರು. ನಂತರ ಬುಜ್ಜಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದರು.

ಚಿತ್ರದಲ್ಲಿ ಐದನೇ ಸೂಪರ್‌ ಸ್ಟಾರ್‌ ಯಾರು? ಎಂಬ ರಹಸ್ಯವನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಆತನ ಹೆಸರು ಬುಜ್ಜಿ ಮತ್ತು ಈತ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ ಎಂಬುವುದಾಗಿ ಮಾತ್ರ ಚಿತ್ರತಂಡ ಮಾಹಿತಿ ನೀಡಿತ್ತು. ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘From Skratch: Building A Superstar’ ಹೆಸರಿನ ಈ ವಿಡಿಯೊದಲ್ಲಿ ಬುಜ್ಜಿಯ ಕುರಿತು ಪರಿಚಯ ಮಾಡಿಕೊಡಲಾಗಿತ್ತು. 2020ರ ಜೂನ್‍ನಲ್ಲಿ ಅಂಥದ್ದೊಂದು ಪಾತ್ರದ ಸೃಷ್ಠಿ ಹೇಗಾಯಿತು ಎಂದು ಪ್ರಾರಂಭವಾಗುವುದರಿಂದ, ಅಂತಿಮವಾಗಿ ಅದು ಹೇಗೆ ರೂಪುಗೊಂಡಿತು ಎಂಬುದನ್ನು ಈ ವಿಡಿಯೊದಲ್ಲಿ ತೋರಿಸಲಾಗಿತ್ತು. ಇದೀಗ ಬುಜ್ಜಿಯ ಪಾತ್ರ ಅನಾವರಣ ಮಾಡಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಇದನ್ನೂ ಓದಿ | Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading
Advertisement
Highest Paid CEO
ವಾಣಿಜ್ಯ1 min ago

Highest Paid CEO: ವಿಪ್ರೊ ಮಾಜಿ ಸಿಇಒ ವಾರ್ಷಿಕ ಸಂಬಳ 166 ಕೋಟಿ ರೂ! ಉಳಿದ ಸಿಇಒಗಳಿಗೆ ಎಷ್ಟು?

Share Market
ದೇಶ20 mins ago

Share Market: ದಾಖಲೆ ಬರೆದ ನಿಫ್ಟಿ, ಸೆನ್ಸೆಕ್ಸ್‌ ಭರ್ಜರಿ ನೆಗೆತ; ಹೂಡಿಕೆದಾರರಿಗೆ ಭಾರಿ ಲಾಭ!

Viral Video
ವೈರಲ್ ನ್ಯೂಸ್23 mins ago

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Crime News
ದೇಶ46 mins ago

ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

cm siddaramaiah meet 2
ಪ್ರಮುಖ ಸುದ್ದಿ51 mins ago

CM Siddaramaiah: ರೈತರ ಬರ ಪರಿಹಾರ ಸಮಸ್ಯೆಯಾದರೆ ಸಹಿಸುವುದಿಲ್ಲ- ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

viral video
ಕ್ರೀಡೆ1 hour ago

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Prajwal Revanna Case JDS mega plan to cancel Parliament membership even if Rahul Gandhi wins
ರಾಜಕೀಯ1 hour ago

Prajwal Revanna Case: ರಾಹುಲ್‌ ಗಾಂಧಿ ಗೆದ್ದರೂ ಸಂಸತ್‌ ಸದಸ್ಯತ್ವ ರದ್ದು ಮಾಡಲು ಜೆಡಿಎಸ್‌ ಮೆಗಾ ಪ್ಲ್ಯಾನ್‌!

Naxal activities
ತುಮಕೂರು2 hours ago

Naxal activities: ವೆಂಕಟಮ್ಮನಹಳ್ಳಿ ನಕ್ಸಲ್ ದಾಳಿ ಕೇಸ್‌; 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವನು ಅರೆಸ್ಟ್‌

Viral Video
ವೈರಲ್ ನ್ಯೂಸ್2 hours ago

Viral Video: ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

Prajwal Revanna Case HD Revanna visit to Gangapur and special pooja to Dattatreya
ಕಲಬುರಗಿ2 hours ago

Prajwal Revanna Case: ಗಾಣಗಾಪುರಕ್ಕೆ ಎಚ್‌ಡಿ ರೇವಣ್ಣ ಭೇಟಿ; ದತ್ತಾತ್ರೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ11 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌