Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು! - Vistara News

ಕರ್ನಾಟಕ

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

Satish Jarkiholi: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Satish Jarkiholi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಒಗ್ಗಟ್ಟಿನ ಮಂತ್ರ ಪಠಿಸಿದ್ದ ಕಾಂಗ್ರೆಸ್‌ ನಾಯಕರ ಮಧ್ಯೆಯೇ ಈಗ ಭಿನ್ನಾಭಿಪ್ರಾಯಗಳು ಮೂಡಿವೆ. ಅದರಲ್ಲೂ, ಮುಖ್ಯಮಂತ್ರಿ ಬದಲಾವಣೆ ವಿಚಾರವು ಮುನ್ನೆಲೆಗೆ ಬಂದಿದ್ದು, ಸ್ವಾಮೀಜಿಗಳು ಕೂಡ ಇದರ ಚರ್ಚೆಗೆ ಪದಾರ್ಪಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ‘2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ’ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳುವ ಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಸಿಎಂ ಬದಲಾವಣೆ ವಿಚಾರವು ಹೈಕಮಾಂಡ್‌ ತೀರ್ಮಾನವಾಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆಗೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ” ಎಂದು ಹೇಳಿದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರವೂ ತೀವ್ರವಾಗಿ ಮುನ್ನೆಲೆಗೆ ಬಂದಿದೆ. ಆಯಾ ಸಮುದಾಯಗಳ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್‌ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದಿಷ್ಟು

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು ಕೆಲ ದಿನಗಳ ಹಿಂದೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. “ಎಲ್ಲರೂ ಮುಖ್ಯಮಂತ್ರಿಗಳಾಗಿ ತಮ್ಮ ತಮ್ಮ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಒಬ್ಬರು ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಆ ಕಾರಣಕ್ಕಾಗಿ ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು” ಹೇಳಿದ್ದರು.

ಲಿಂಗಾಯತ ಸಿಎಂ ಕೂಗು

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು‌ಶ್ರೀ ರಂಭಾಪುರಿ ಡಾ.ವೀರ‌ಸೋಮೇಶ್ವರ ಜಗದ್ಗುರು ಆಗ್ರಹಿಸಿದ್ದಾರೆ. “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ. ಹಾಗಾಗಿ, ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ತಪ್ಪಿಲ್ಲ. ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯ‌ವು ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು” ಎಂದು ಹೇಳಿದರು.

ಇದನ್ನೂ ಓದಿ: Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Suraj Revanna Case: 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿದ ರೇವಣ್ಣ

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ನ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೇವಣ್ಣ, ಭವಿಷ್ಯವನ್ನು ಹಾಳು ಮಾಡಿಕೊಂಡೆ. ನಮ್ಮ ಕುಟುಂಬಕ್ಕೂ ಕೆಟ್ಟ ಹೆಸರು ತಂದೆ. ಎಂತಹ ಮಕ್ಕಳು ಹುಟ್ಟಿದ್ದೀರಪ್ಪಾ ನನಗೆ ಎಂದು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

ನಮ್ಮ ಹಣೆಬರಹ ಏನೂ ಮಾಡೋದಿಕ್ಕೆ ಆಗೋದಿಲ್ಲ ಎಂದು ರೇವಣ್ಣ ಬೇಸರ ವ್ಯಕ್ತಪಡಿಸಿದಾಗ, ತಂದೆ ಮಾತಿಗೆ ಮರು ಉತ್ತರ ನೀಡಲಾಗದೆ ಪ್ರಜ್ವಲ್ ಸುಮ್ಮನಾಗಿದ್ದಾರೆ. ನಂತರ ಬಟ್ಟೆ ಮತ್ತು ಹಣ್ಣುಗಳನ್ನು ನೀಡಿ ರೇವಣ್ಣ ವಾಪಸ್ ತೆರಳಿದ್ದಾರೆ ಎಂದು ಜೈಲ್ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Koo Shut Down: ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ ಎಂಬುದಾಗಿ ಕೂ ಸಂಸ್ಥಾಪಕ ರಾಧಾಕೃಷ್ಣ ಅಪ್ರಮೇಯ ತಿಳಿಸಿದ್ದಾರೆ.

VISTARANEWS.COM


on

Koo Shut Down
Koo

ಬೆಂಗಳೂರು: ಜಾಗತಿಕ ಖ್ಯಾತಿಯ ಟ್ವಿಟರ್‌ಗೆ (ಈಗ ಎಕ್ಸ್)‌ ಸೆಡ್ಡು ಹೊಡೆಯುವ ದಿಸೆಯಲ್ಲಿ 2020ರಲ್ಲಿ ಕನ್ನಡಿಗ ಅಪ್ರಮೇಯ ರಾಧಾಕೃಷ್ಣ ಅವರು ಪರಿಚಯಿಸಿದ್ದ ಕೂ ಸೋಷಿಯಲ್‌ ಮೀಡಿಯಾ ಅಪ್ಲಿಕೇಶನ್‌ (Koo Shut Down) ಈಗ ಇತಿಹಾಸದ ಪುಟ ಸೇರಿದೆ. ಹೌದು, ಕೂ ಅಪ್ಲಿಕೇಶನ್‌ (Koo Application) ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ (Aprameya Radhakrishna) ಹಾಗೂ ಮಯಾಂಕ್‌ ಬಿಡವಟ್ಕ (Mayank Bidawatka) ಅವರು ಘೋಷಣೆ ಮಾಡಿದ್ದು, ಇದರಿಂದ ಕನ್ನಡಿಗರು ಅಭಿವೃದ್ಧಿಪಡಿಸಿದ, ದೇಶಾದ್ಯಂತ ಖ್ಯಾತಿ ಗಳಿಸಿದ್ದ, ಕೋಟ್ಯಂತರ ಜನರು ಬಳಸುತ್ತಿದ್ದ ಕೂ ಈಗ ‘ಕೂ’ಗು ನಿಲ್ಲಿಸಿದಂತಾಗಿದೆ.

ಕೂ ಸ್ಥಗಿತಗೊಳಿಸುವ ಕುರಿತು ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ ಇನ್‌ನಲ್ಲಿ ಬರೆದುಕೊಂಡಿದ್ದಾರೆ. “ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ. ಹಾಗಾಗಿ, ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕೂ ಅಪ್ಲಿಕೇಶನ್‌ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಹಾಗೂ ಮಯಾಂಕ್‌ ಬಿಡವಟ್ಕ.

“ನಮಗೆ ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ಮನಸ್ಸಿರಲಿಲ್ಲ. ಹಾಗಾಗಿ, ಬೃಹತ್‌ ಇಂಟರ್‌ನೆಟ್‌ ಕಂಪನಿಗಳು, ಮೀಡಿಯಾ ಸಂಸ್ಥೆಗಳು ಸೇರಿ ಹತ್ತಾರು ಕಂಪನಿಗಳ ಜತೆ ವಿಲೀನ, ಮಾರಾಟದ ಕುರಿತು ಸತತ ಮಾತುಕತೆ ನಡೆಸಿದೆವು. ಆದರೆ, ಒಂದೇ ಒಂದು ಕಂಪನಿಯ ಜತೆ ನಾವು ವ್ಯವಹಾರ ಮಾಡಲು ಆಗಲಿಲ್ಲ. ಯಾರೂ ಕೂ ಕಂಪನಿಯನ್ನು ಖರೀದಿ ಮಾಡಲಿಲ್ಲ. ಕೂ ಅಪ್ಲಿಕೇಶನ್‌ಅನ್ನು ಇನ್ನಷ್ಟು ಜನಪ್ರಿಯಗೊಳಿಸಲು, ಜಾಗತಿಕ ಕಂಪನಿಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬದಲಾವಣೆ ತರಲು ಸುಮಾರು 6 ವರ್ಷಗಳ ಅವಧಿಗೆ ಬಂಡವಾಳದ ಅವಶ್ಯಕತೆ ಇತ್ತು. ಆದರೆ, ಅದನ್ನು ನಿರ್ವಹಣೆ ಮಾಡಲು ಆಗದ ಕಾರಣ ಸ್ಥಗಿತಗೊಳಿಸಲು ಮುಂದಾಗಿದ್ದೇವೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಹಣಕಾಸು ಬಿಕ್ಕಟ್ಟಿನಿಂದಾಗಿ 2023ರಲ್ಲಿ ಕೆಲ ಉದ್ಯೋಗಿಗಳನ್ನೂ ವಜಾಗೊಳಿಸಲಾಗಿತ್ತು.

ಮೋದಿ ಕೂಡ ಬಳಸುತ್ತಿದ್ದರು

2020ರಲ್ಲಿ ಟ್ವಿಟರ್‌ಗೆ ಪರ್ಯಾಯವಾಗಿ ಕೂ ಸಾಮಾಜಿಕ ಜಾಲತಾಣದ ಪರಿಚಯಿಸಿದಾಗ ಅದು ಭಾರಿ ಖ್ಯಾತಿ ಗಳಿಸಿತು. ಕೆಲವೇ ದಿನಗಳಲ್ಲಿ ಲಕ್ಷಾಂತರ ಜನ ಕೂ ಅಪ್ಲಿಕೇಶನ್‌ಅನ್ನು ಡೌನ್‌ಲೋಡ್‌ ಮಾಡಿಕೊಂಡರು. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರು, ಗಣ್ಯರು ಕೂ ಇನ್‌ಸ್ಟಾಲ್‌ ಮಾಡಿಕೊಳ್ಳುವ ಮೂಲಕ ದೇಶೀಯ ಜಾಲತಾಣಕ್ಕೆ ಬೆಂಬಲ ಸೂಚಿಸಿದರು. ದೇಶದ 9 ಸಾವಿರ ವಿಐಪಿಗಳು ಸೇರಿ ಒಂದು ಹಂತದಲ್ಲಿ ಪ್ರತಿದಿನ 21 ಲಕ್ಷ ದೇಶೀಯ ಬಳಕೆದಾರರು ‘ಕೂ’ಗೆ ಇದ್ದರು. ಆದರೆ, ಎಕ್ಸ್‌ ಜಾಲತಾಣಕ್ಕೆ ಸೆಡ್ಡು ಹೊಡೆಯಲು ಆಗದೆ, ಬೇರೆ ಬೇರೆ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಆಗದೆ, ಬಂಡವಾಳ ಸೆಳೆಯಲು ಆಗೆ ಈಗ ಕೂ ತೆರೆಗೆ ಸರಿಯುತ್ತಿದೆ.

ಇದನ್ನೂ ಓದಿ: Elon Musk: ಜಿಮೇಲ್ ಸ್ಥಗಿತ ವದಂತಿ ಮಧ್ಯೆಯೇ ಶೀಘ್ರ ‘ಎಕ್ಸ್‌ಮೇಲ್’ ಲಾಂಚ್!

Continue Reading

ಕಲಬುರಗಿ

Mid Day Meal: ಕಲಬುರಗಿಯಲ್ಲಿ ಬಿಸಿಯೂಟ ಉಂಡ 33 ವಿದ್ಯಾರ್ಥಿಗಳು ಅಸ್ವಸ್ಥ; 3 ದಿನಗಳಲ್ಲಿ ಎರಡನೇ ಘಟನೆ

Mid Day Meal: ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಮಳೆನೀರಿನಿಂದ ಕಲುಷಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಉಂಡ ಪರಿಣಾಮ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಸೋಮವಾರ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ ಒಟ್ಟು 33 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡವು.

VISTARANEWS.COM


on

kanaganahalli mid day meal
Koo

ಕಲಬುರಗಿ: ಕಲಬುರಗಿ ಜಿಲ್ಲೆಯ (Kalaburagi news) ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ (mid day meal) ಸ್ವೀಕರಿಸಿದ 33 ವಿದ್ಯಾರ್ಥಿಗಳು (children ill) ಅಸ್ವಸ್ಥರಾಗಿದ್ದಾರೆ. ಇದು ಕಲಬುರಗಿ ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ ನಡೆಯುತ್ತಿರುವ ಎರಡನೇ ಇಂಥ ಘಟನೆ. ಒಂದು ದಿನದ ಹಿಂದೆ ಜೇವರ್ಗಿಯಲ್ಲಿ ಹೀಗಾಗಿತ್ತು.

ಚಿತ್ತಾಪುರ ತಾಲೂಕಿನ ಕನಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಮಳೆನೀರಿನಿಂದ ಕಲುಷಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟವನ್ನು ಉಂಡ ಪರಿಣಾಮ 33 ವಿದ್ಯಾರ್ಥಿಗಳು ಅಸ್ವಸ್ಥಗೊಂಡರು. ಸೋಮವಾರ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿದ ನಂತರ ಒಟ್ಟು 33 ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಮುಂತಾದ ಲಕ್ಷಣಗಳು ಕಾಣಿಸಿಕೊಂಡವು. ಕೂಡಲೇ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಾಡಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ.ಶರಣಬಸಪ್ಪ ಗಣಜಲಖೇಡ್ ತಿಳಿಸಿದರು.

ಹೆಚ್ಚು ತೀವ್ರವಾಗಿ ಅಸ್ವಸ್ಥಗೊಂಡ ಐದು ವಿದ್ಯಾರ್ಥಿಗಳನ್ನು ವಾಡಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಕೊಲ್ಲೂರು ಪಿಎಚ್‌ಸಿಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಕ್ಕಳು ಚೇತರಿಸಿಕೊಂಡಿದ್ದಾರೆ ಮತ್ತು ಸೋಮವಾರ ರಾತ್ರಿಯ ವೇಳೆಗೆ ಡಿಸ್ಚಾರ್ಜ್ ಆಗಿದ್ದಾರೆ. ಆದರೂ ಹೆಚ್ಚು ಪೀಡಿತರು ಇನ್ನೂ ವಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಸುಧಾರಿಸುತ್ತಿದ್ದಾರೆ.

“ನಮಗೆ ಬಡಿಸಿದ ಅನ್ನದೊಂದಿಗೆ ಮಳೆನೀರು ಹೇಗೆ ಮಿಶ್ರವಾಯಿತು ಎಂದು ನಮಗೆ ತಿಳಿದಿಲ್ಲ” ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ಅನೇಕ ವಿದ್ಯಾರ್ಥಿಗಳು ತೀವ್ರ ಹೊಟ್ಟೆ ನೋವು, ವಾಂತಿ ಮತ್ತು ನಿರ್ಜಲೀಕರಣವನ್ನು ಅನುಭವಿಸಿದರು. ಅಕ್ಕಿ ಹಾಳಾಗಿದ್ದು, ಕೆಟ್ಟ ವಾಸನೆ ಬರುತ್ತಿದೆ ಎಂದು ಕೆಲ ವಿದ್ಯಾರ್ಥಿಗಳು ದೂರಿದ್ದರು.

“ನಾವು ತಕ್ಷಣ ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಮತ್ತು ಬ್ಲಾಕ್ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ ಮತ್ತು ಸಂತ್ರಸ್ತ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಕರೆದೊಯ್ದಿದ್ದೇವೆ” ಎಂದು ಶಿಕ್ಷಕರು ತಿಳಿಸಿದ್ದಾರೆ.

ಚಿತ್ತಾಪುರ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತ್ವರಿತವಾಗಿ ಕಾರ್ಯಾಚರಣೆಗಿಳಿದರು. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಂಬ್ಯುಲೆನ್ಸ್‌ಗಾಗಿ ಕಾಯದೆ ಬೈಕ್ ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಿದರು. ಚಿತ್ತಾಪುರ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಜಗದೇವಿ ಹತ್ತೂರ್ ಅವರು ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ಸದಸ್ಯರು ಕೈಗೊಂಡ ತ್ವರಿತ ಕ್ರಮವನ್ನು ಶ್ಲಾಘಿಸಿದರು. “ಹೆಚ್ಚಿನ ಮಕ್ಕಳು ಬೇಗನೆ ಚೇತರಿಸಿಕೊಂಡರು. ಏಕೆಂದರೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಗ್ರಾಮಸ್ಥರು ಮತ್ತು ಎಸ್‌ಡಿಎಂಸಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹತ್ತೂರು ಹೇಳಿದರು.

ತಹಶೀಲ್ದಾರ್ ಅಂಬರೀಶ್ ಬಿರಾದಾರ್ ಮಾತನಾಡಿ, “ವೈದ್ಯರು ಮುಂಜಾಗ್ರತಾ ಕ್ರಮವಾಗಿ ಎಲ್ಲ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು, ಅದೇ ಊಟ ಸೇವಿಸಿದ ಇತರರಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ” ಎಂದಿದ್ದಾರೆ.

ಒಂದು ದಿನದ ಹಿಂದೆ ಜೇವರ್ಗಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯ 17 ವಿದ್ಯಾರ್ಥಿಗಳು ಉಪಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading
Advertisement
Money Guide
ಮನಿ-ಗೈಡ್2 mins ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ10 mins ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ13 mins ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest22 mins ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್29 mins ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Family drama Kannada movie song
ಕರ್ನಾಟಕ31 mins ago

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Suraj Revanna Case
ಕರ್ನಾಟಕ33 mins ago

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Sexual Harassment
Latest34 mins ago

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Koo Shut Down
ಕರ್ನಾಟಕ44 mins ago

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Ananth Ambani
Latest53 mins ago

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ22 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌