ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ! - Vistara News

ಕರ್ನಾಟಕ

ಕರ್ನಾಟಕ ತೋಟದಪ್ಪನ ಛತ್ರ ಅಲ್ಲ; ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿ ಜು.1ರಂದು ಕರವೇ ಬೃಹತ್‌ ಪ್ರತಿಭಟನೆ!

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1 ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.

VISTARANEWS.COM


on

Rakshana Vedike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು.

ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹದಿನೈದು ವರ್ಷ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.

ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು.

ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡಾ 100 ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ. 90ರಷ್ಟು ಮೀಸಲಾತಿ ನೀಡಬೇಕು.

ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.

ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Rain News: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ ಸುರಿಯಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

ಭಾರಿ ಗಾಳಿ ಮಳೆಯಿಂದ ಉಡುಪಿಯ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಬೃಹತ್ ಆಲದ ಮರ ಬಿದ್ದಿದೆ.
Koo

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತ ಮುತ್ತ ಧಾರಾಕಾರ ಮಳೆ (Rain News) ಸುರಿಯುತ್ತಿದೆ. ನೆನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದ ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸೇರಿ ಹಲವೆಡೆ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದೆ. ಇನ್ನು ಬಿರುಸಿನ ಮಳೆಯಿಂದ ಚಾರ್ಮಾಡಿ ಘಾಟ್ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿದ್ದು, ಮಂಗಳೂರು-ಮೂಡಿಗೆರೆ ಪ್ರಯಾಣಿಕರು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ಆಂಬ್ಯುಲೆನ್ಸ್ ಚಾಲಕರಿಗೂ ಸಂಕಷ್ಟ ಎದುರಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಮಂಜು ಮಿಶ್ರಿತ ಮಳೆಯಿಂದಾಗಿ ರಸ್ತೆ ಕಾಣದೆ ವಾಹನಗಳು ನಿಂತಲ್ಲೇ ನಿಂತಿವೆ.

ವಿರಾಜಪೇಟೆ ತಾಲೂಕಿನಲ್ಲಿ ಕುಸಿದ ಕಾಂಕ್ರೀಟ್ ರಸ್ತೆ

ಕೊಡಗು: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರದಿಂದ ಕಾಂಕ್ರೀಟ್ ರಸ್ತೆಯ ಒಂದು ಬದಿ‌ ಕುಸಿದಿದೆ. ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಪುತ್ತಮಕ್ಕಿ ಸ್ಕೂಲ್ ಸಮೀಪ ನಡೆದ ಘಟನೆ ನಡೆದಿದೆ. ಕಳೆದ ನಾಲ್ಕು ವರ್ಷದ ಹಿಂದೆ ಕಾಮಗಾರಿ ನಡೆದಿತ್ತು. ವಿರಾಜಪೇಟೆ ತೆರ್ಮೆಮೊಟ್ಟೆ ಮೂಲಕ ತೋರಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ 5 ವರ್ಷದ ಹಿಂದೆ ತೋರದ ಬಳಿ ಭಾರಿ ಕುಸಿತವಾಗಿದ್ದ ಸ್ಥಳದಿಂದ 8 ಕಿ.ಮೀ. ದೂರದಲ್ಲಿ ಘಟನೆ‌ ನಡೆದಿದೆ.

ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ ನಾಲ್ವರ ರಕ್ಷಣೆ

ಗದಗ: ಮನೆ ಚಾವಣಿ ಕುಸಿದು ಅವಶೇಷಗಳಡಿ ಸಿಲುಕಿದ್ದ ನಾಲ್ವರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹತ್ತಿಕಾಳ ಬಡಾವಣೆಯಲ್ಲಿ ನಡೆದಿದೆ.

ನಿರಂತರ ಮಳೆಯಿಂದ ಚಾವಣಿ ಶಿಥಿಲವಾಗಿತ್ತು. ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಏಕಾಏಕಿ ಚಾವಣಿ ಕುಸಿದಿದ್ದರಿಂದ ಗಂಗಪ್ಪ ಹತ್ತಿಕಾಳ, ಚಂಭವ್ವ ಹತ್ತಿಕಾಳ, ಸರೋಜಾ ಹತ್ತಿಕಾಳಗೆ ಗಾಯಗಳಾಗಿವೆ. ಛಾವಣಿ ಕುಸಿತ ಗಮನಿಸಿ ಮನೆಯಿಂದ 16 ವರ್ಷ ಬಾಲಕಿ ಮೇಘಾ ಆಚೆ ಓಡಿ ಬಂದಿದ್ದಾಳೆ.

ಕೂಡಲೇ ಸ್ಥಳೀಯರಿಗೆ ಮೇಘಾ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದು ಮಣ್ಣಿನ ಅಡಿಯಲ್ಲಿ ಸಿಲುಕಿದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ಆಲದ ಮರ; ಮನೆಯಲ್ಲಿದ್ದವರು ಪಾರು

ಉಡುಪಿ: ಬಿರುಗಾಳಿ ಸಹಿತ ಭಾರಿ ಮಳೆಗೆ ನಗರದ ವಸಂತಿ ಶೆಟ್ಟಿ ಎಂಬುವವರ ಮನೆ ಮೇಲೆ ಆಲದ ಮರ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ವಸಂತಿ ಶೆಟ್ಟಿ, ಮಗಳು, ಮೊಮ್ಮಕ್ಕಳು ಮನೆಯಲ್ಲಿದ್ದರು.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮರ ಬಿದ್ದಿದ್ದರಿಂದ ಮನೆಯ ಎರಡು ಕೊಠಡಿಗಳ ಮೇಲ್ಚಾವಣಿ ಕುಸಿದು ಬಿದ್ದಿದೆ. ಮನೆಯ ಸದಸ್ಯರು ಬೇರೆ ಕೋಣೆಯಲ್ಲಿ ಮಲಗಿದ್ದರು, ಇದರಿಂದ ಅಪಾಯ ತಪ್ಪಿದೆ. ಅವಘಡದಿಂದ ಸೈಕಲ್ ಶಾಪ್, ಜನಪ್ರಿಯ ಸೌಂಡ್ಸ್, ಸಲೂನ್‌ಗೆ ಹಾನಿಯಾಗಿದೆ.

ಕರಾವಳಿ ಬೈಪಾಸ್ ಜಲಾವೃತ

ಉಡುಪಿ ಜಿಲ್ಲೆಯಲ್ಲಿ ಇಂದು ಕೂಡ ಎಲ್ಲೋ ಅಲರ್ಟ್ ನೀಡಲಾಗಿತ್ತು. ಏಕಾಏಕಿ ಸುರಿದ ಗಾಳಿ ಸಹಿತ ಮಳೆಯಿಂದ ನಗರದ ಕರಾವಳಿ ಬೈಪಾಸ್ ಬಳಿ ರಸ್ತೆ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಗಾಳಿ ಸಹಿತ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿದ್ದು, ಕಡೆಕಾರು ಪರಿಸರದಲ್ಲಿ ಮನೆಯ ಮೇಲೆ ಮರ ಬಿದ್ದಿದೆ.

Continue Reading

ಕರ್ನಾಟಕ

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

MUDA site scandal: ಮುಡಾ ನಿವೇಶನಗಳು ಅಮಾನತ್ತಿನಲ್ಲಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ. ತನಿಖಾ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಬೆಂಗಳೂರು: ಮುಡಾ ಸೈಟ್ ಅಕ್ರಮದ (MUDA site scandal) ತನಿಖೆ ಮಾಡಲು ತನಿಖಾ ತಂಡ ರಚನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿಯವರು, ನಾವು ಕೇಳಿದಾಗ ಒಂದೇ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ಯಾಕೆ ನಾವು ಯಾಕೆ ಸಿಬಿಐಗೆ ಕೊಡಬೇಕು? ಸೈಟ್ ಹಂಚಿದ್ದು ಅವರ ಸರ್ಕಾರದಲ್ಲಿ, ದುರುಪಯೋಗ ಆಗಿದೆ ಅಂತ ಈಗ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಇಷ್ಟಕ್ಕೂ ನಾನು ಯಾಕಪ್ಪ ರಾಜೀನಾಮೆ ಕೊಡಬೇಕು, ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳ್ತಾನೆ ಅಂತ ಕೊಟ್ಟು ಬಿಡೋಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣ ಸಿಬಿಐಗೆ ಹಸ್ತಾಂತರ ಮಾಡಲು ಒತ್ತಾಯದ ಬಗ್ಗೆ ಮಾತನಾಡಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.

ಇದನ್ನೂ ಓದಿ | Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Suraj Revanna Case: 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿದ ರೇವಣ್ಣ

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ನ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೇವಣ್ಣ, ಭವಿಷ್ಯವನ್ನು ಹಾಳು ಮಾಡಿಕೊಂಡೆ. ನಮ್ಮ ಕುಟುಂಬಕ್ಕೂ ಕೆಟ್ಟ ಹೆಸರು ತಂದೆ. ಎಂತಹ ಮಕ್ಕಳು ಹುಟ್ಟಿದ್ದೀರಪ್ಪಾ ನನಗೆ ಎಂದು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

ನಮ್ಮ ಹಣೆಬರಹ ಏನೂ ಮಾಡೋದಿಕ್ಕೆ ಆಗೋದಿಲ್ಲ ಎಂದು ರೇವಣ್ಣ ಬೇಸರ ವ್ಯಕ್ತಪಡಿಸಿದಾಗ, ತಂದೆ ಮಾತಿಗೆ ಮರು ಉತ್ತರ ನೀಡಲಾಗದೆ ಪ್ರಜ್ವಲ್ ಸುಮ್ಮನಾಗಿದ್ದಾರೆ. ನಂತರ ಬಟ್ಟೆ ಮತ್ತು ಹಣ್ಣುಗಳನ್ನು ನೀಡಿ ರೇವಣ್ಣ ವಾಪಸ್ ತೆರಳಿದ್ದಾರೆ ಎಂದು ಜೈಲ್ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
ಕರ್ನಾಟಕ12 mins ago

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Cabinet Committees
ದೇಶ26 mins ago

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Hemant Soren
ದೇಶ59 mins ago

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

MUDA site scandal
ಕರ್ನಾಟಕ1 hour ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ2 hours ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ2 hours ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್2 hours ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ2 hours ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ2 hours ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest2 hours ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ23 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌