Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌ - Vistara News

ಕರ್ನಾಟಕ

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

Vinay Kulkarni: ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಆರೋಪಗಳಿರುವ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ನಿಷೇಧವಿದೆ.

VISTARANEWS.COM


on

vinay Kulkarni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಪ್ರವೇಶ ಕೋರಿ‌ ವಿನಯ್ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಆರೋಪಗಳಿರುವ ಹಿನ್ನೆಲೆಯಲ್ಲಿ ಮತ್ತೆ ಜಿಲ್ಲೆಯ ಪ್ರವೇಶವನ್ನು ನ್ಯಾಯಾಲಯ ನಿರಾಕರಿಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಧಾರವಾಡ ಜಿಲ್ಲೆಯ ಪ್ರವೇಶ ಪಡೆದಿದ್ದರು. ಆದರೆ, ಈಗ ಮತ್ತಿ ಪ್ರವೇಶ ಕೋರಿ ಸಲ್ಲಿಸಿರುವ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ವಜಾಗೊಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಬಿಜೆಪಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಆರೋಪಿಯಾಗಿದ್ದಾರೆ. ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಅವರನ್ನು 2016ರ ಜೂನ್‌ 15ರಂದು ಬರ್ಬರವಾಗಿ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ 2020ರ ನವೆಂಬರ್‌ನಲ್ಲಿ ವಿನಯ್‌ ಕುಲಕರ್ಣಿ ಅವರ ಬಂಧನವಾಗಿತ್ತು. ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ನಂತರ ಜಾಮೀನಿನ ಮೇಲೆ ಹೊರಬಂದಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಕೊಲೆ ಪ್ರಕರಣದಲ್ಲಿ ಆರೋಪಿಯಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಈ ಹಿಂದೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಒಂದು ವೇಳೆ ಧಾರವಾಡಕ್ಕೆ ತೆರಳಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು. ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಕಂಡರೂ ಶಾಸಕನಿಗೆ ಧಾರವಾಡ ಜಿಲ್ಲೆ ಪ್ರವೇಶದ ಮೇಲಿರುವ ನಿರ್ಬಂಧ ತೆರವು ಮಾಡಿಲ್ಲ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಇನ್ನೂ 10 ಕೋಟಿ‌ ಎಸ್ಐಟಿ ವಶಕ್ಕೆ, ಇದುವರೆಗೆ ರಿಕವರಿ ಆಗಿದ್ದೆಷ್ಟು?

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾದ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆವರೆಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ಜೂನ್‌ 14ರಂದು ಹೈಕೋರ್ಟ್‌ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಬಿ.ಎಸ್‌. ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದಲ್ಲಿ ಎಫ್‌ಐಆರ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಿದೆ. ಅಲ್ಲದೇ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿದೆ.

Satish Jarkiholi: 2028ಕ್ಕೆ ನಾನೇ ರಾಜ್ಯದ ಸಿಎಂ ಎಂದ ಸತೀಶ್‌ ಜಾರಕಿಹೊಳಿ; ಡಿಕೆಶಿಗೆ ಸಚಿವ ಸೆಡ್ಡು!

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

MUDA site scandal: ಮುಡಾ ನಿವೇಶನಗಳು ಅಮಾನತ್ತಿನಲ್ಲಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನಷ್ಟವಾಗಿಲ್ಲ. ತನಿಖಾ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

MUDA site scandal
Koo

ಬೆಂಗಳೂರು: ಮುಡಾ ಸೈಟ್ ಅಕ್ರಮದ (MUDA site scandal) ತನಿಖೆ ಮಾಡಲು ತನಿಖಾ ತಂಡ ರಚನೆ ಮಾಡಲಾಗಿದೆ. ಈ ಹಿಂದೆ ಬಿಜೆಪಿಯವರು, ನಾವು ಕೇಳಿದಾಗ ಒಂದೇ ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ? ಯಾಕೆ ನಾವು ಯಾಕೆ ಸಿಬಿಐಗೆ ಕೊಡಬೇಕು? ಸೈಟ್ ಹಂಚಿದ್ದು ಅವರ ಸರ್ಕಾರದಲ್ಲಿ, ದುರುಪಯೋಗ ಆಗಿದೆ ಅಂತ ಈಗ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಇಷ್ಟಕ್ಕೂ ನಾನು ಯಾಕಪ್ಪ ರಾಜೀನಾಮೆ ಕೊಡಬೇಕು, ನನ್ನ ಪಾತ್ರ ಏನಿದೆ? ಅಶೋಕ್ ರಾಜೀನಾಮೆ ಕೇಳ್ತಾನೆ ಅಂತ ಕೊಟ್ಟು ಬಿಡೋಕೆ ಆಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಪಕ್ಷ ನಾಯಕರು ಸಿಎಂ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು, ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣ ಸಿಬಿಐಗೆ ಹಸ್ತಾಂತರ ಮಾಡಲು ಒತ್ತಾಯದ ಬಗ್ಗೆ ಮಾತನಾಡಿ, ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದಲ್ಲಿ ನನ್ನ ಪಾತ್ರವೇನಿದೆ? ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜೀನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜೀನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.

ಇದನ್ನೂ ಓದಿ | Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

Continue Reading

ಕರ್ನಾಟಕ

Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

Kannada New Movie: “ಫ್ಯಾಮಿಲಿ ಡ್ರಾಮ” ಚಿತ್ರದ ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

VISTARANEWS.COM


on

Family drama Kannada movie song
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ಫ್ಯಾಮಿಲಿ ಡ್ರಾಮ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ್ಯಾಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಯುವ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಫ್ಯಾಮಿಲಿ ಡ್ರಾಮಾ’ ಹಾಡು ಕೂಡ ಚಿತ್ರದ (Kannada New Movie) ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಿಲೀಸ್ ಆಗಿದ್ದ ಟ್ರೈಲರ್ ಸಖತ್ ಕ್ರಿಯೇಟಿವ್‌ ಆಗಿದ್ದು, ಇದೊಂದು ಮಾಮೂಲಿ ಸಿನಿಮಾವಲ್ಲ, ವಿನೂತನ ಮತ್ತು ವಿಭಿನ್ನವಾದ ಸಿನಿಮಾ ಎನ್ನುವುದನ್ನು ಹೇಳುತ್ತಿದೆ.

ಫ್ಯಾಮಿಲಿ ಡ್ರಾಮಾ, ಆಕರ್ಷ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅಭಯ್, ಅನನ್ಯಾ ಅಮರ್, ಸಿಂಧು ಶ್ರೀನಿವಾಸ್ ಮೂರ್ತಿ, ರೇಖಾ, ಪೂರ್ಣಚಂದ್ರ ಮೈಸೂರು ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಸಿನಿಮಾಗೆ ಡಬ್ಬುಗುಡಿ ಮುರಳಿಕೃಷ್ಣ ಅವರು ತಮ್ಮ ಡಿಎಂಕೆ (DMK) ಎಂಟರ್ಟೈನ್ಮೆಂಟ್ ಮೂಲಕ ಬಂಡವಾಳ ಹೂಡಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಈಗ ಎಲ್ಲರ ಗಮನ ಸೆಳೆಯುತ್ತದೆ. ಗಾಯಕ ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ‘ ಲಿ ಲಿ ಫ್ಯಾಮಿಲಿ ಹಾಡು…’ ಹಾಡು ಕೇಳೋಕೆ ಎಷ್ಟು ಮಜವಾಗಿದೆಯೋ ನೋಡೊಕು ಅಷ್ಟೇ ಕುತೂಹಲಕಾರಿಯಾಗಿದೆ.

ಅಂದಹಾಗೆ ಈ ಹಾಡಿಗೆ ಚೇತನ್ ಅಮ್ಮಯ್ಯ ಸಂಗೀತ ಸಂಯೋಜನೆ ಮಾಡಿದ್ದು, ಶರತ್ ವಶಿಷ್ಠ ಹಾಗೂ ಚೇತನ್ ಅಮ್ಮಯ್ಯ ಜಂಟಿಯಾಗಿ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ಪಾರ್ಟಿ ನಡೆಯುತ್ತಿದ್ದು ನಟ ಅಭಯ್, ಸಿಂಧು, ಅನಯ್ಯಾ ಎಂಡ್ ಗ್ಯಾಂಗ್ ಯಾರನ್ನೊ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರೆ. ಆದರೆ ಹಾಡಿನ ಕೊನೆಯಲ್ಲಿ ಅವರ ಸ್ಕೆಚ್ ಫ್ಲಾಪ್ ಆಗಿರುವ ಹಾಗೆ ಅನ್ನಿಸುತ್ತದೆ. ಆದರೆ ಮುಂದೇನಾಗುತ್ತೆ ಎನ್ನುವುದು ಸಿನಿಮಾದಲ್ಲಿಯೇ ನೋಡಬೇಕು. ಈ ಹಾಡು ಸಿನಿಮಾದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

ಇನ್ನು ನಿರ್ಮಾಪಕ ಮುರಳಿಕೃಷ್ಣ ಅವರು ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಅಂದಹಾಗೆ ಮುರಳಿಕೃಷ್ಣ ಅವರು ಯುಎಸ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ನೆಲದ ಮೇಲಿನ ಪ್ರೀತಿ, ಸಿನಿಮಾಗಳ ಮೇಲಿನ ಆಸಕ್ತಿ ಕಳೆದುಕೊಂಡಿಲ್ಲ. ಉತ್ತಮ ಸಿನಿಮಾಗಳನ್ನು ಮಾಡಬೇಕು ಎನ್ನುವ ದೊಡ್ಡ ಕನಸು ಹೊತ್ತಿರುವ ಮುರುಳಿಯವರು ಚಿತ್ರರಂಗದ ಬಗ್ಗೆ ಒಂದಷ್ಟು ತಿಳಿದುಕೊಂಡು ‘ಫ್ಯಾಮಿಲಿ ಡ್ರಾಮ’ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

ಕನ್ನಡದ ‘ಫ್ಯಾಮಿಲಿ ಡ್ರಾಮ’ ಸಿನಿಮಾ ರಿಲೀಸ್‌ನ ಬ್ಯುಸಿಯ ಜತೆಗೆ ನಿರ್ಮಾಪಕರು ಈಗಾಗಲೇ ತೆಲುಗಿನಲ್ಲಿ ಮೂರು ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ DMK ಎಂಟರ್ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಬೇಕು ಹಾಗೂ ದೊಡ್ಡ ಬಜೆಟ್‌ನ ಸ್ಟಾರ್ ಸಿನಿಮಾ ನಿರ್ಮಾಣ ಮಾಡುವ ದೊಡ್ಡ ಕನಸನ್ನು ಕಂಡಿದ್ದಾರೆ. ಅವರ ಮುಂದಿನ ಎಲ್ಲಾ ಯೋಜನೆಗಳಿಗೆ ‘ಫ್ಯಾಮಿಲಿ ಡ್ರಾಮ’ ಉತ್ತಮ ವೇದಿಕೆಯಾಗಲಿದೆ ಎನ್ನುವ ಭರವಸೆ ಹೊಂದಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಬಲವರ್ಧನೆಗೆ ಕೇಂದ್ರದ ನೆರವು ಕೋರಿದ ಲಕ್ಷ್ಮೀ ಹೆಬ್ಬಾಳಕರ್

ಫ್ಯಾಮಿಲಿ ಡ್ರಾಮ ಉತ್ತಮ ಕಂಟೆಂಟ್ ಜತೆಗೆ ಟೆಕ್ನಿಕಲ್ ವಿಚಾರಗಳು ಸಹ ಗಮನ ಸೆಳೆಯುತ್ತಿದೆ. ಡಾರ್ಕ್ ಕಾಮಿಡಿ ಸಿನಿಮಾ ಇದಾಗಿದ್ದು, ಮುಗ್ದ ಕುಟುಂಬವೊಂದು ಕೊಲೆ ಮಾಡಿ ಸಂಕಷ್ಚಕ್ಕೆ ಸಿಲುಕುವ ಕಥೆಯಾಗಿದೆ. ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಫ್ಯಾಮಿಲಿ ಡ್ರಾಮ ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ.

Continue Reading

ಕರ್ನಾಟಕ

Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

Suraj Revanna Case: 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಇನ್ನು ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಡಿ ಕಾಮತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧಿಶರು ಸೂಚಿಸಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿದ ರೇವಣ್ಣ

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ನ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ಮಾಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಮಗನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರೇವಣ್ಣ, ಭವಿಷ್ಯವನ್ನು ಹಾಳು ಮಾಡಿಕೊಂಡೆ. ನಮ್ಮ ಕುಟುಂಬಕ್ಕೂ ಕೆಟ್ಟ ಹೆಸರು ತಂದೆ. ಎಂತಹ ಮಕ್ಕಳು ಹುಟ್ಟಿದ್ದೀರಪ್ಪಾ ನನಗೆ ಎಂದು ಬೇಸರ ಹೊರಹಾಕಿದ್ದಾರೆ ಎನ್ನಲಾಗಿದೆ.

ನಮ್ಮ ಹಣೆಬರಹ ಏನೂ ಮಾಡೋದಿಕ್ಕೆ ಆಗೋದಿಲ್ಲ ಎಂದು ರೇವಣ್ಣ ಬೇಸರ ವ್ಯಕ್ತಪಡಿಸಿದಾಗ, ತಂದೆ ಮಾತಿಗೆ ಮರು ಉತ್ತರ ನೀಡಲಾಗದೆ ಪ್ರಜ್ವಲ್ ಸುಮ್ಮನಾಗಿದ್ದಾರೆ. ನಂತರ ಬಟ್ಟೆ ಮತ್ತು ಹಣ್ಣುಗಳನ್ನು ನೀಡಿ ರೇವಣ್ಣ ವಾಪಸ್ ತೆರಳಿದ್ದಾರೆ ಎಂದು ಜೈಲ್ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Actor Darshan: ದರ್ಶನ್‌ ಕೆಟ್ಟ ವ್ಯಕ್ತಿಯಲ್ಲ, ತಪ್ಪು ಮಾಡಿಲ್ಲ ಎಂದ ಕೆ. ಮಂಜು

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Koo Shut Down: ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ ಎಂಬುದಾಗಿ ಕೂ ಸಂಸ್ಥಾಪಕ ರಾಧಾಕೃಷ್ಣ ಅಪ್ರಮೇಯ ತಿಳಿಸಿದ್ದಾರೆ.

VISTARANEWS.COM


on

Koo Shut Down
Koo

ಬೆಂಗಳೂರು: ಜಾಗತಿಕ ಖ್ಯಾತಿಯ ಟ್ವಿಟರ್‌ಗೆ (ಈಗ ಎಕ್ಸ್)‌ ಸೆಡ್ಡು ಹೊಡೆಯುವ ದಿಸೆಯಲ್ಲಿ 2020ರಲ್ಲಿ ಕನ್ನಡಿಗ ಅಪ್ರಮೇಯ ರಾಧಾಕೃಷ್ಣ ಅವರು ಪರಿಚಯಿಸಿದ್ದ ಕೂ ಸೋಷಿಯಲ್‌ ಮೀಡಿಯಾ ಅಪ್ಲಿಕೇಶನ್‌ (Koo Shut Down) ಈಗ ಇತಿಹಾಸದ ಪುಟ ಸೇರಿದೆ. ಹೌದು, ಕೂ ಅಪ್ಲಿಕೇಶನ್‌ (Koo Application) ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ (Aprameya Radhakrishna) ಹಾಗೂ ಮಯಾಂಕ್‌ ಬಿಡವಟ್ಕ (Mayank Bidawatka) ಅವರು ಘೋಷಣೆ ಮಾಡಿದ್ದು, ಇದರಿಂದ ಕನ್ನಡಿಗರು ಅಭಿವೃದ್ಧಿಪಡಿಸಿದ, ದೇಶಾದ್ಯಂತ ಖ್ಯಾತಿ ಗಳಿಸಿದ್ದ, ಕೋಟ್ಯಂತರ ಜನರು ಬಳಸುತ್ತಿದ್ದ ಕೂ ಈಗ ‘ಕೂ’ಗು ನಿಲ್ಲಿಸಿದಂತಾಗಿದೆ.

ಕೂ ಸ್ಥಗಿತಗೊಳಿಸುವ ಕುರಿತು ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ ಇನ್‌ನಲ್ಲಿ ಬರೆದುಕೊಂಡಿದ್ದಾರೆ. “ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ. ಹಾಗಾಗಿ, ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕೂ ಅಪ್ಲಿಕೇಶನ್‌ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಹಾಗೂ ಮಯಾಂಕ್‌ ಬಿಡವಟ್ಕ.

“ನಮಗೆ ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ಮನಸ್ಸಿರಲಿಲ್ಲ. ಹಾಗಾಗಿ, ಬೃಹತ್‌ ಇಂಟರ್‌ನೆಟ್‌ ಕಂಪನಿಗಳು, ಮೀಡಿಯಾ ಸಂಸ್ಥೆಗಳು ಸೇರಿ ಹತ್ತಾರು ಕಂಪನಿಗಳ ಜತೆ ವಿಲೀನ, ಮಾರಾಟದ ಕುರಿತು ಸತತ ಮಾತುಕತೆ ನಡೆಸಿದೆವು. ಆದರೆ, ಒಂದೇ ಒಂದು ಕಂಪನಿಯ ಜತೆ ನಾವು ವ್ಯವಹಾರ ಮಾಡಲು ಆಗಲಿಲ್ಲ. ಯಾರೂ ಕೂ ಕಂಪನಿಯನ್ನು ಖರೀದಿ ಮಾಡಲಿಲ್ಲ. ಕೂ ಅಪ್ಲಿಕೇಶನ್‌ಅನ್ನು ಇನ್ನಷ್ಟು ಜನಪ್ರಿಯಗೊಳಿಸಲು, ಜಾಗತಿಕ ಕಂಪನಿಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬದಲಾವಣೆ ತರಲು ಸುಮಾರು 6 ವರ್ಷಗಳ ಅವಧಿಗೆ ಬಂಡವಾಳದ ಅವಶ್ಯಕತೆ ಇತ್ತು. ಆದರೆ, ಅದನ್ನು ನಿರ್ವಹಣೆ ಮಾಡಲು ಆಗದ ಕಾರಣ ಸ್ಥಗಿತಗೊಳಿಸಲು ಮುಂದಾಗಿದ್ದೇವೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಹಣಕಾಸು ಬಿಕ್ಕಟ್ಟಿನಿಂದಾಗಿ 2023ರಲ್ಲಿ ಕೆಲ ಉದ್ಯೋಗಿಗಳನ್ನೂ ವಜಾಗೊಳಿಸಲಾಗಿತ್ತು.

ಮೋದಿ ಕೂಡ ಬಳಸುತ್ತಿದ್ದರು

2020ರಲ್ಲಿ ಟ್ವಿಟರ್‌ಗೆ ಪರ್ಯಾಯವಾಗಿ ಕೂ ಸಾಮಾಜಿಕ ಜಾಲತಾಣದ ಪರಿಚಯಿಸಿದಾಗ ಅದು ಭಾರಿ ಖ್ಯಾತಿ ಗಳಿಸಿತು. ಕೆಲವೇ ದಿನಗಳಲ್ಲಿ ಲಕ್ಷಾಂತರ ಜನ ಕೂ ಅಪ್ಲಿಕೇಶನ್‌ಅನ್ನು ಡೌನ್‌ಲೋಡ್‌ ಮಾಡಿಕೊಂಡರು. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರು, ಗಣ್ಯರು ಕೂ ಇನ್‌ಸ್ಟಾಲ್‌ ಮಾಡಿಕೊಳ್ಳುವ ಮೂಲಕ ದೇಶೀಯ ಜಾಲತಾಣಕ್ಕೆ ಬೆಂಬಲ ಸೂಚಿಸಿದರು. ದೇಶದ 9 ಸಾವಿರ ವಿಐಪಿಗಳು ಸೇರಿ ಒಂದು ಹಂತದಲ್ಲಿ ಪ್ರತಿದಿನ 21 ಲಕ್ಷ ದೇಶೀಯ ಬಳಕೆದಾರರು ‘ಕೂ’ಗೆ ಇದ್ದರು. ಆದರೆ, ಎಕ್ಸ್‌ ಜಾಲತಾಣಕ್ಕೆ ಸೆಡ್ಡು ಹೊಡೆಯಲು ಆಗದೆ, ಬೇರೆ ಬೇರೆ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಆಗದೆ, ಬಂಡವಾಳ ಸೆಳೆಯಲು ಆಗೆ ಈಗ ಕೂ ತೆರೆಗೆ ಸರಿಯುತ್ತಿದೆ.

ಇದನ್ನೂ ಓದಿ: Elon Musk: ಜಿಮೇಲ್ ಸ್ಥಗಿತ ವದಂತಿ ಮಧ್ಯೆಯೇ ಶೀಘ್ರ ‘ಎಕ್ಸ್‌ಮೇಲ್’ ಲಾಂಚ್!

Continue Reading
Advertisement
Cabinet Committees
ದೇಶ2 mins ago

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Hemant Soren
ದೇಶ35 mins ago

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

MUDA site scandal
ಕರ್ನಾಟಕ52 mins ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ1 hour ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ1 hour ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್1 hour ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ1 hour ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ1 hour ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest2 hours ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Ram charan the Indian House on set
ಟಾಲಿವುಡ್2 hours ago

Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ23 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌