Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ - Vistara News

ದೇಶ

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

Stabbing:ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

VISTARANEWS.COM


on

Stabbing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರಂ: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಹರಿತವಾದ ವಸ್ತುವಿನಿಂದ ಇರಿದಿರುವ ಘಟನೆ ಒಡಿಶಾ(Odisha)ದ ಗಂಜಂ ಜಿಲ್ಲೆಯಲ್ಲಿ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನಿಗೇ ಕೋಪದ ಭರದಲ್ಲಿ ಇರಿದಿ(Stabbing)ದ್ದಾನೆ. ಸಾನಕೆಮುಂಡಿ ಪ್ರದೇಶದಲ್ಲಿರುವ ರಘನಾಥಂ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:

ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ. ಮೊದಲಿಗೆ ಬಾಲಕನನ್ನು ಸೆರಗಢಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ MKCG ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಾಂಶುಪಾಲರೂ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಕಳೆದ ವರ್ಷ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ರೇಗಿಸಬೇಡಿ ಈ ರೀತಿ ರೇಗಿಸೋದ್ರಿಂದ ನಿಮಗೆ ಕೆಟ್ಟ ಹೆಸರು ಬರುವುದಲ್ಲದೇ ಕಾಲೇಜಿಗೂ ಕೆಟ್ಟ ಹೆಸರು ಬರುತ್ತೆ ಅಂತ ಬುದ್ಧಿವಾದ ಹೇಳಿದಕ್ಕೆ ಸಹಪಾಠಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಜಯನಗರದಲ್ಲಿ ನಡೆದಿತ್ತು.

ವಿದ್ಯಾರ್ಥಿಗೆ ಚಾಕು ಇರಿದಿರುವ ಸಹಪಾಠಿಗಳು ನಮಗೆ ಬುದ್ಧಿವಾದ ಹೇಳ್ತಿಯಾ? ನಾವು ನಿನ್ನಂತೆಯೇ ಈ ಕಾಲೇಜಿಗೆ ಸೇರಿಕೊಂಡಿರೋದು, ನಮ್ಮ ಇಷ್ಟ ಬಂದ ಹಾಗೇ ಮಾಡ್ತೀವಿ ಅಂತ ಕ್ಯಾತೆ ತೆಗೆದಿದ್ದಾರೆ. ಆದರೆ ಇದನ್ನು ವಿದ್ಯಾರ್ಥಿ ವಿರೋಧಿಸಿದ್ದಕ್ಕಾಗಿ ಕಾಲೇಜಿನಲ್ಲಿ ಗಲಾಟೆ ಮಾಡಿಕೊಂಡಿದ್ದರು. ವಿಜಯ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜಗಳ ತಿಳಿದು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಈ ವಿಚಾರಕ್ಕೆ ಬೇಸರವಾಗಿದ್ದರಿಂದ ಸೇಡು ತೀರಿಸಿಕೊಳ್ಳಲಿಕ್ಕಾಗಿ ವಿದ್ಯಾರ್ಥಿಯ ಮೇಲೆ ಚಾಕು ಚುಚ್ಚಿ ಪರಾರಿಯಾಗಿದ್ದಾರೆ. ವಿಚಾರ ತಿಳಿದ ಪೊಲೀಸರು ಬಾಲಾಪರಾಧಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Cabinet Committees: ವಸತಿ, ಆರ್ಥಿಕ ವ್ಯವಹಾರಗಳು, ಸಂಸದೀಯ ವ್ಯವಹಾರಗಳು, ರಾಜಕೀಯ ವ್ಯವಹಾರಗಳು, ಭದ್ರತೆ, ಹೂಡಿಕೆ ಮತ್ತು ಬೆಳವಣಿಗೆ ಹಾಗೂ ಕೌಶಲ, ಉದ್ಯೋಗ ಹಾಗೂ ಜೀವನೋಪಾಯ ಸಂಪುಟ ಸಮಿತಿಗಳಿಗೂ ಮುಖ್ಯಸ್ಥರು, ಸದಸ್ಯರು ಹಾಗೂ ವಿಶೇಷ ಆಹ್ವಾನಿತರನ್ನು ನರೇಂದ್ರ ಮೋದಿ ಅವರು ನೇಮಿಸಿದ್ದಾರೆ.

VISTARANEWS.COM


on

Cabinet Committees
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿ, ಸಚಿವ ಸಂಪುಟ ರಚಿಸಿ, ಖಾತೆಗಳ ಹಂಚಿಕೆಯನ್ನೂ ಮಾಡಿರುವ ನರೇಂದ್ರ ಮೋದಿ (Narendra Modi) ಅವರೀಗ 8 ಸಂಪುಟ ಸಮಿತಿಗಳನ್ನು (Cabinet Committees) ಕೂಡ ರಚಿಸಿದ್ದಾರೆ. ನೇಮಕಾತಿಗಳ ಸಂಪುಟ ಸಮಿತಿ, ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಭದ್ರತಾ ಸಂಪುಟ ಸಮಿತಿ ಸೇರಿ 8 ಸಮಿತಿಗಳನ್ನು ರಚಿಸಲಾಗಿದ್ದು, ಭದ್ರತಾ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಮುಖ್ಯಸ್ಥರಾಗಿದ್ದಾರೆ.

ನೇಮಕಾತಿಗಳ ಸಂಪುಟ ಸಭೆಗೆ ನರೇಂದ್ರ ಮೋದಿ ಮುಖ್ಯಸ್ಥರಾದರೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸದಸ್ಯರಾಗಿದ್ದಾರೆ. ಇನ್ನು, ವಸತಿ, ಆರ್ಥಿಕ ವ್ಯವಹಾರಗಳು, ಸಂಸದೀಯ ವ್ಯವಹಾರಗಳು, ರಾಜಕೀಯ ವ್ಯವಹಾರಗಳು, ಭದ್ರತೆ, ಹೂಡಿಕೆ ಮತ್ತು ಬೆಳವಣಿಗೆ ಹಾಗೂ ಕೌಶಲ, ಉದ್ಯೋಗ ಹಾಗೂ ಜೀವನೋಪಾಯ ಸಂಪುಟ ಸಮಿತಿಗಳಿಗೂ ಮುಖ್ಯಸ್ಥರು, ಸದಸ್ಯರು ಹಾಗೂ ವಿಶೇಷ ಆಹ್ವಾನಿತರನ್ನು ನರೇಂದ್ರ ಮೋದಿ ಅವರು ನೇಮಿಸಿದ್ದಾರೆ. ಸಚಿವಾಲಯಗಳಿಗೆ ನೇಮಕ, ಪ್ರಮುಖ ತೀರ್ಮಾನ ಸೇರಿ ಹಲವು ನಿರ್ಧಾರಗಳನ್ನು ಸಂಪುಟ ಸಮಿತಿಗಳು ತೆಗೆದುಕೊಳ್ಳಲಿವೆ.

ಸಂಪುಟ ಸಮಿತಿಗಳು ಏಕೆ ಪ್ರಮುಖ?

ದೇಶದ ಹಣಕಾಸು, ನೇಮಕಾತಿ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ದಿಸೆಯಲ್ಲಿ, ಪ್ರಮುಖ ಸಚಿವಾಲಯಗಳ ದಕ್ಷತೆ, ನಿರ್ವಹಣೆ ಮಾಡುವ ದಿಸೆಯಲ್ಲಿ ಸಂಪುಟ ಸಮಿತಿಗಳನ್ನು ರಚಿಸಲಾಗುತ್ತದೆ. ಸಾಮಾನ್ಯವಾಗಿ ಮೂರರಿಂದ ಎಂಟು ಸಂಪುಟ ಸಮಿತಿಗಳನ್ನು ರಚಿಸಲಾಗುತ್ತದೆ. ಯಾವುದೇ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಮಂತ್ರಿಯೇ ಸಮಿತಿಗಳನ್ನು ರಚಿಸುತ್ತಾರೆ. ಸಮಿತಿಗಳಿಗೆ ಸದಸ್ಯರು ಅಥವಾ ಮುಖ್ಯಸ್ಥರನ್ನು ಕೂಡ ಪ್ರಧಾನಿ ಆಯ್ಕೆಯಾಗಿರುತ್ತದೆ. ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ 12 ಸಮಿತಿಗಳನ್ನು ರಚಿಸಿದ್ದರು.

ಪ್ರಧಾನಮಂತ್ರಿ, ಸಚಿವರು ಪ್ರಮುಖ ಸಂಪುಟ ಸಮಿತಿಗಳ ಸದಸ್ಯರು ಅಥವಾ ಮುಖ್ಯಸ್ಥರಾಗಿರುತ್ತಾರೆ. ಹಾಗೆಯೇ, ಪ್ರಧಾನಿಯವರು ವಿಶೇಷ ಆಹ್ವಾನಿತರನ್ನು ಕೂಡ ಸಮಿತಿಗಳ ಸದಸ್ಯರನ್ನಾಗಿ ನೇಮಿಸಬಹುದಾಗಿದೆ. ಇಷ್ಟೆಲ್ಲ ಕಾರಣಗಳಿಂದಾಗಿ ಸಂಪುಟ ಸಮಿತಿಗಳ ರಚನೆಯು ಪ್ರಮುಖ ಸಂಗತಿಯಾಗಿದೆ.

ಇದನ್ನೂ ಓದಿ: NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

Continue Reading

ದೇಶ

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

Hemant Soren: ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ ಹೇಮಂತ್‌ ಸೊರೆನ್‌ ಅವರು ಮತ್ತೆ ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Hemant Soren
Koo

ರಾಂಚಿ: ಅಕ್ರಮ ಹಣ ವರ್ಗಾವಣೆ (Money laundering Case), ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ (Hemant Soren) ಅವರು ಮತ್ತೆ ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಹಾಲಿ ಸಿಎಂ ಚಂಪೈ ಸೊರೆನ್‌ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಹೇಮಂತ್‌ ಸೊರೆನ್‌ ಅವರು ಮೂರನೇ ಬಾರಿಗೆ ಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Continue Reading

ದೇಶ

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Kangana Ranaut: ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಮೇಲೆ ಹಲ್ಲೆ ನಡೆಸಿದ್ದ CISF ಕುಲ್ವಿಂದರ್‌ ಕೌರ್‌ ಈಗಲೂ ಅಮಾನತಿನಲ್ಲಿದ್ದಾರೆ. ಆಕೆಯ ಮೇಲಿನ ತನಿಖೆ ಮುಂದುವರೆದಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದೆ.

VISTARANEWS.COM


on

Kangana Ranaut
Koo

ಹೊಸದಿಲ್ಲಿ: ಬಿಜೆಪಿ ಸಂಸದೆ(BJP MP), ಬಾಲಿವುಡ್‌ ನಟಿ ಕಂಗನಾ ರಣಾವತ್​ (Kangana Ranaut)ಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಕುಲ್ವಿಂದರ್‌ ಕೌರ್‌ರನ್ನು ಬೆಂಗಳೂರಿಗೆ ವರ್ಗಾವಣೆ(Transfer) ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಬಳಿಕ ಕುಲ್ವಿಂದರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ವಿಚಾರಣೆ ನಡೆಯುತ್ತಿರುವ ಹಿನ್ನೆಲೆ ಕುಲ್ವಿಂದರ್ ಇನ್ನು ಸೇವೆಗೆ ಮರಳಿಲ್ಲ. ಆದರೆ ಇದೀಗ ಆಕೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾಳೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಮೇಲೆ ಹಲ್ಲೆ ನಡೆಸಿದ್ದ CISF ಕುಲ್ವಿಂದರ್‌ ಕೌರ್‌ ಈಗಲೂ ಅಮಾನತಿನಲ್ಲಿದ್ದಾರೆ. ಆಕೆಯ ಮೇಲಿನ ತನಿಖೆ ಮುಂದುವರೆದಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದೆ.

ಘಟನೆ ವಿವರ:

ಚಂಡೀಗಢ ಏರ್‌ಪೋರ್ಟ್‌ನಲ್ಲಿ (Chandigarh Airport) ಕಂಗನಾ ರಣಾವತ್ ಅವರ ಮೇಲೆ ಕುಲ್ವಿಂದರ್ ಆಕ್ರಮಣಕಾರಿಯಾಗಿ ದಾಳಿ ನಡೆಸಿ ಕಪಾಳಕ್ಕೆ ಏಟು ನೀಡಿದ್ದರು. ದೆಹಲಿ ರೈತರ ಪ್ರತಿಭಟನೆಯನ್ನು ಟೀಕಿಸಿದ್ದಕ್ಕೆ ಹೊಡೆದಿದ್ದೇನೆ ಎಂದು ಕುಲ್ವಿಂದರ್ ಹೇಳಿಕೊಂಡಿದ್ದರು. ಚಂಢೀಗಡದಿಂದ ದಿಲ್ಲಿಗೆ ವಿಮಾನ ಹತ್ತುವ ವೇಳೆ ಈ ಘಟನೆ ನಡೆದಿದ್ದು, ಇನ್ನು ಕೌರ್‌ ವಿರುದ್ಧ ಕೇಸ್‌ ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಆಕೆಯನ್ನು ಅರೆಸ್ಟ್‌ ಮಾಡಲಾಗಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು. ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರಣಾವತ್‌ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಸಂಸದೆ ಮೇಲಿನ ಹಲ್ಲೆ ಸಂಬಂಧ ವಿಶೇಷ ತನಿಖಾದಳ ತಂಡವನ್ನು ರಚಿಸಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿರುವ ಎಸ್‌ಐಟಿ ತಂಡ ವರದಿಯನ್ನು ಉನ್ನತ ಅಧಿಕಾರಿಗಳಿಗೆ ಸಲ್ಲಿಕೆ ಮಾಡಿದೆ. ಆದರೆ ಈ ಕುರಿತು ಎಸ್‌ಐಟಿ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ:Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Continue Reading

ಕರ್ನಾಟಕ

Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Koo Shut Down: ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ ಎಂಬುದಾಗಿ ಕೂ ಸಂಸ್ಥಾಪಕ ರಾಧಾಕೃಷ್ಣ ಅಪ್ರಮೇಯ ತಿಳಿಸಿದ್ದಾರೆ.

VISTARANEWS.COM


on

Koo Shut Down
Koo

ಬೆಂಗಳೂರು: ಜಾಗತಿಕ ಖ್ಯಾತಿಯ ಟ್ವಿಟರ್‌ಗೆ (ಈಗ ಎಕ್ಸ್)‌ ಸೆಡ್ಡು ಹೊಡೆಯುವ ದಿಸೆಯಲ್ಲಿ 2020ರಲ್ಲಿ ಕನ್ನಡಿಗ ಅಪ್ರಮೇಯ ರಾಧಾಕೃಷ್ಣ ಅವರು ಪರಿಚಯಿಸಿದ್ದ ಕೂ ಸೋಷಿಯಲ್‌ ಮೀಡಿಯಾ ಅಪ್ಲಿಕೇಶನ್‌ (Koo Shut Down) ಈಗ ಇತಿಹಾಸದ ಪುಟ ಸೇರಿದೆ. ಹೌದು, ಕೂ ಅಪ್ಲಿಕೇಶನ್‌ (Koo Application) ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ (Aprameya Radhakrishna) ಹಾಗೂ ಮಯಾಂಕ್‌ ಬಿಡವಟ್ಕ (Mayank Bidawatka) ಅವರು ಘೋಷಣೆ ಮಾಡಿದ್ದು, ಇದರಿಂದ ಕನ್ನಡಿಗರು ಅಭಿವೃದ್ಧಿಪಡಿಸಿದ, ದೇಶಾದ್ಯಂತ ಖ್ಯಾತಿ ಗಳಿಸಿದ್ದ, ಕೋಟ್ಯಂತರ ಜನರು ಬಳಸುತ್ತಿದ್ದ ಕೂ ಈಗ ‘ಕೂ’ಗು ನಿಲ್ಲಿಸಿದಂತಾಗಿದೆ.

ಕೂ ಸ್ಥಗಿತಗೊಳಿಸುವ ಕುರಿತು ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ ಇನ್‌ನಲ್ಲಿ ಬರೆದುಕೊಂಡಿದ್ದಾರೆ. “ಭಾರತದಲ್ಲಿ ಜಾಗತಿಕ ಮಟ್ಟದ ಸಂಸ್ಥೆ, ಅಪ್ಲಿಕೇಶನ್‌ಅನ್ನು ನಿರ್ವಹಣೆ ಮಾಡಲು ಭಾರಿ ಪ್ರಮಾಣದಲ್ಲಿ ಬಂಡವಾಳ ಬೇಕಾಗುತ್ತದೆ. ಕೂ ಅಪ್ಲಿಕೇಶನ್‌ ನಿರ್ವಹಣೆಗೂ ಹೆಚ್ಚಿನ ಬಂಡವಾಳ ಬೇಕಾಗಿದ್ದು, ಇದಕ್ಕೆ ಅಧಿಕ ಪ್ರಮಾಣದಲ್ಲಿ ಹಣ ಹರಿದುಬಂದಿಲ್ಲ. ಬೇರೆ ಕಂಪನಿಗಳಿಗೆ ಮಾರಾಟ ಮಾಡುವ ಅಥವಾ ವಿಲೀನಗೊಳಿಸುವ ದಿಸೆಯಲ್ಲಿ ಸತತ ಪ್ರಯತ್ನ ಮಾಡಿದರೂ ಅದು ಫಲ ಕೊಡಲಿಲ್ಲ. ಹಾಗಾಗಿ, ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಕೂ ಅಪ್ಲಿಕೇಶನ್‌ ಸಂಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣ ಹಾಗೂ ಮಯಾಂಕ್‌ ಬಿಡವಟ್ಕ.

“ನಮಗೆ ಕೂ ಅಪ್ಲಿಕೇಶನ್‌ಅನ್ನು ಸ್ಥಗಿತಗೊಳಿಸಲು ಮನಸ್ಸಿರಲಿಲ್ಲ. ಹಾಗಾಗಿ, ಬೃಹತ್‌ ಇಂಟರ್‌ನೆಟ್‌ ಕಂಪನಿಗಳು, ಮೀಡಿಯಾ ಸಂಸ್ಥೆಗಳು ಸೇರಿ ಹತ್ತಾರು ಕಂಪನಿಗಳ ಜತೆ ವಿಲೀನ, ಮಾರಾಟದ ಕುರಿತು ಸತತ ಮಾತುಕತೆ ನಡೆಸಿದೆವು. ಆದರೆ, ಒಂದೇ ಒಂದು ಕಂಪನಿಯ ಜತೆ ನಾವು ವ್ಯವಹಾರ ಮಾಡಲು ಆಗಲಿಲ್ಲ. ಯಾರೂ ಕೂ ಕಂಪನಿಯನ್ನು ಖರೀದಿ ಮಾಡಲಿಲ್ಲ. ಕೂ ಅಪ್ಲಿಕೇಶನ್‌ಅನ್ನು ಇನ್ನಷ್ಟು ಜನಪ್ರಿಯಗೊಳಿಸಲು, ಜಾಗತಿಕ ಕಂಪನಿಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬದಲಾವಣೆ ತರಲು ಸುಮಾರು 6 ವರ್ಷಗಳ ಅವಧಿಗೆ ಬಂಡವಾಳದ ಅವಶ್ಯಕತೆ ಇತ್ತು. ಆದರೆ, ಅದನ್ನು ನಿರ್ವಹಣೆ ಮಾಡಲು ಆಗದ ಕಾರಣ ಸ್ಥಗಿತಗೊಳಿಸಲು ಮುಂದಾಗಿದ್ದೇವೆ” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಹಣಕಾಸು ಬಿಕ್ಕಟ್ಟಿನಿಂದಾಗಿ 2023ರಲ್ಲಿ ಕೆಲ ಉದ್ಯೋಗಿಗಳನ್ನೂ ವಜಾಗೊಳಿಸಲಾಗಿತ್ತು.

ಮೋದಿ ಕೂಡ ಬಳಸುತ್ತಿದ್ದರು

2020ರಲ್ಲಿ ಟ್ವಿಟರ್‌ಗೆ ಪರ್ಯಾಯವಾಗಿ ಕೂ ಸಾಮಾಜಿಕ ಜಾಲತಾಣದ ಪರಿಚಯಿಸಿದಾಗ ಅದು ಭಾರಿ ಖ್ಯಾತಿ ಗಳಿಸಿತು. ಕೆಲವೇ ದಿನಗಳಲ್ಲಿ ಲಕ್ಷಾಂತರ ಜನ ಕೂ ಅಪ್ಲಿಕೇಶನ್‌ಅನ್ನು ಡೌನ್‌ಲೋಡ್‌ ಮಾಡಿಕೊಂಡರು. ಅಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರು, ಗಣ್ಯರು ಕೂ ಇನ್‌ಸ್ಟಾಲ್‌ ಮಾಡಿಕೊಳ್ಳುವ ಮೂಲಕ ದೇಶೀಯ ಜಾಲತಾಣಕ್ಕೆ ಬೆಂಬಲ ಸೂಚಿಸಿದರು. ದೇಶದ 9 ಸಾವಿರ ವಿಐಪಿಗಳು ಸೇರಿ ಒಂದು ಹಂತದಲ್ಲಿ ಪ್ರತಿದಿನ 21 ಲಕ್ಷ ದೇಶೀಯ ಬಳಕೆದಾರರು ‘ಕೂ’ಗೆ ಇದ್ದರು. ಆದರೆ, ಎಕ್ಸ್‌ ಜಾಲತಾಣಕ್ಕೆ ಸೆಡ್ಡು ಹೊಡೆಯಲು ಆಗದೆ, ಬೇರೆ ಬೇರೆ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಆಗದೆ, ಬಂಡವಾಳ ಸೆಳೆಯಲು ಆಗೆ ಈಗ ಕೂ ತೆರೆಗೆ ಸರಿಯುತ್ತಿದೆ.

ಇದನ್ನೂ ಓದಿ: Elon Musk: ಜಿಮೇಲ್ ಸ್ಥಗಿತ ವದಂತಿ ಮಧ್ಯೆಯೇ ಶೀಘ್ರ ‘ಎಕ್ಸ್‌ಮೇಲ್’ ಲಾಂಚ್!

Continue Reading
Advertisement
ಕರ್ನಾಟಕ13 mins ago

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Cabinet Committees
ದೇಶ27 mins ago

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Hemant Soren
ದೇಶ1 hour ago

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

MUDA site scandal
ಕರ್ನಾಟಕ1 hour ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ2 hours ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ2 hours ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್2 hours ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ2 hours ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Samrat Choudhary
ಪ್ರಮುಖ ಸುದ್ದಿ2 hours ago

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Viral Video
Latest2 hours ago

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ23 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌