Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ! - Vistara News

Latest

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Viral Video ಮಗುವೊಂದು ಮನೆಯ ಟಿವಿ ಸ್ಟ್ಯಾಂಡ್ ಬಿದ್ದು ಮೃತಪಟ್ಟ ಘಟನೆ ಇನ್ನೂ ಮಾಸಿಲ್ಲ ಈಗ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಕ್ಕಳನ್ನು ಕಣ್ಣರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಏನಾದರೊಂದು ಅವಘಡಗಳು ನಡೆಯುತ್ತಲೇ ಇರುತ್ತದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೋಯ್ಡಾ : ಚಿಕ್ಕಮಕ್ಕಳು ಆಟವಾಡುತ್ತಿರುವಾಗ ಪೋಷಕರು ಅವರ ಗಮನಕೊಡುವ ಬದಲು ಮೊಬೈಲ್ ನೋಡುವುದರಲ್ಲಿ, ಬೇರೆಯವರ ಜೊತೆ ಮಾತನಾಡುವುದರಲ್ಲೇ ಕಾಲ ಕಳೆಯುತ್ತಿರುತ್ತಾರೆ. ಆದರೆ ಚಿಕ್ಕಮಕ್ಕಳು ಹೊರಗಡೆ ಅಥವಾ ಮನೆಯ ಒಳಗಡೆ ಆಟವಾಡುವಾಗ ಪೋಷಕರು ಮಕ್ಕಳ ಬಗ್ಗೆ ಗಮನಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ಅಪಾಯ ಸಂಭವಿಸಬಹುದು. ಆದರೆ ಕೆಲವೊಮ್ಮೆ ಮಕ್ಕಳು ಪಾಪ ತಮ್ಮ ಪಾಡಿಗೆ ಮನೆಯ ಬಳಿ ಆಟವಾಡುತ್ತಿದ್ದರೂ ಅವರದಲ್ಲದ ತಪ್ಪಿಗೆ ಬಲಿಪಶು ಆಗುತ್ತಿದ್ದಾರೆ. ಚಾಲಕರ ಬೇಜವಾಬ್ದಾರಿ ಚಾಲನೆ ಇದಕ್ಕೆ ಕಾರಣ. ಅಂತಹದೊಂದು ಘಟನೆ ಇದೀಗ ನೋಯ್ಡಾದಲ್ಲಿ ಸಂಭವಿಸಿದ್ದು, ವಿಡಿಯೋ ವೈರಲ್ (Viral Video )ಆಗಿದೆ.

ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಾಗ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.

ವರದಿಗಳ ಪ್ರಕಾರ, ಗಾಯಗೊಂಡ ಬಾಲಕಿಯನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ವಿಡಿಯೊದಲ್ಲಿ ಕಂಡುಬರುವ ಮಹಿಳೆಯನ್ನು ರಿಂಕಿ ಎಂದು ಗುರುತಿಸಲಾಗಿದ್ದು, ಅವರು ಕನೌಜಿಯಾ ಎಂಬ ವ್ಯಕ್ತಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಸೆಕ್ಟರ್ -63 ಠಾಣೆಯ ಪೊಲೀಸರು ಸೋಶಿಯಲ್ ಮೀಡಿಯಾಗಳ ಮೂಲಕ ಮಾಹಿತಿ ಪಡೆದರು. ಘಟನೆಯ ಬಗ್ಗೆ ತಕ್ಷಣ ಗಮನ ಹರಿಸಿದ ಪೊಲೀಸರು ಗಂಭೀರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವಾಹನವನ್ನು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಬಾಲಕಿಯ ಸರಿಯಾದ ಚಿಕಿತ್ಸೆಗಾಗಿ ಆಸ್ಪತ್ರೆಯ ಆಡಳಿತವನ್ನು ಸಂಪರ್ಕಿಸಲಾಗಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ಇಂತಹದೊಂದು ಘಟನೆ ಈ ವರ್ಷದ ಏಪ್ರಿಲ್ ನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನ ಅಗರ ಗ್ರಾಮದಲ್ಲಿ ನಡೆದಿದ್ದು, ಮನೆಯ ಮುಂದೆ ನಿಂತಿದ್ದ ಒಂದೂವರೆ ವರ್ಷದ ಮಗುವಿಗೆ ತಂದೆಯ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿತ್ತು. ಮಗುವಿನ ಕುಟುಂಬದವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಗು ತನ್ನ ಹೆತ್ತವರೊಂದಿಗೆ ಸಂಜೆ ಚನ್ನಪಟ್ಟಣದಿಂದ ಹಿಂದಿರುಗಿತ್ತು.ಆಕೆಯ ತಂದೆ ವಾಹನದಿಂದ ಸಾಮಾನುಗಳನ್ನು ಹೊರತೆಗೆದು, ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮಗು ವಾಹನದ ಹಿಂಭಾಗದ ಚಕ್ರದ ಅಡಿಯಲ್ಲಿ ಬಂದು ಚಕ್ರಕ್ಕೆ ಸಿಲುಕಿ ನಜ್ಜುಗುಜ್ಜಾಗಿ ಸಾವನಪ್ಪಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ತಂತ್ರಜ್ಞಾನ

Deepfake Video: ಡೀಪ್‌ ಫೇಕ್‌ ವಿಡಿಯೊ ಹಾವಳಿ; ಅಸಲಿಯೋ ನಕಲಿಯೋ ಎಂದು ಗುರುತಿಸುವುದು ಹೇಗೆ?

ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ಡೀಪ್ ಫೇಕ್ ವಿಡಿಯೋಗಳ (Deepfake Video) ಹಾವಳಿ ಹೆಚ್ಚಾಗಿದೆ. ಸಾಮಾನ್ಯವಾಗಿ ಗುರುತಿಸಲು ಅಸಾಧ್ಯವಾಗಿರುವ ಇದನ್ನು ನಮ್ಮ ಸೂಕ್ಷ್ಮ ದೃಷ್ಟಿಕೋನದಿಂದ ಸುಲಭವಾಗಿ ಪತ್ತೆ ಮಾಡಬಹುದು. ಇದಕ್ಕಾಗಿ ಏಳು ವಿಧಾನಗಳಿವೆ. ಅವು ಯಾವುದು, ಹೇಗೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Deepfake Video
Koo

ಸಾಮಾಜಿಕ ಮಾಧ್ಯಮಗಳಲ್ಲಿ (social media) ಇತ್ತೀಚೆಗೆ ಡೀಪ್ ಫೇಕ್ ವಿಡಿಯೋಗಳ (Deepfake Video) ಹಾವಳಿ ಹೆಚ್ಚಾಗಿದೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಚುನಾವಣೆ (election) ನಿಗದಿಯಾಗಿದೆ. ಜನರಲ್ಲಿ ರಾಜಕೀಯದ ಕುರಿತು ಉತ್ಸಾಹ ಒಂದೆಡೆ ಹೆಚ್ಚಳವಾಗಿದ್ದರೆ, ಇನ್ನೊಂದೆಡೆ ಡೀಪ್ ಫೇಕ್ ವಿಡಿಯೋಗಳ ಮೂಲಕ ಕೆಲವರು ಜನರ ಮೇಲೆ ಪ್ರಭಾವ ಬೀರಲು ಕುತಂತ್ರ ರೂಪಿಸಲಾಗುತ್ತಿದೆ.

ರಾಜಕೀಯ ನಾಯಕರು (Political leaders), ಸೆಲೆಬ್ರಿಟಿಗಳು (celebrities) ಡೀಪ್ ಫೇಕ್ ಗೆ ಗುರಿಯಾಗುತ್ತಲೇ ಇದ್ದಾರೆ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ರಾಜಕೀಯ ನಾಯಕರ ಕುರಿತಾಗಿ ಸಾಕಷ್ಟು ತಪ್ಪು ಮಾಹಿತಿಯು ಚಾಲ್ತಿಗೆ ಬರುತ್ತದೆ. ಇದರ ಪರಿಣಾಮ ಎಷ್ಟಿರುತ್ತದೆ ಎಂದರೆ ಇದು ಕೆಲವರಿಗೆ ಆಘಾತವನ್ನು ಉಂಟು ಮಾಡಬಹುದು.

2024ರ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ನಾಯಕರ ಕುರಿತಾದ ಡೀಪ್‌ಫೇಕ್ ವಿಡಿಯೋಗಳು ಸ್ಫೋಟಗೊಂಡಿತ್ತು. ಅದು ಪ್ರಧಾನಿ ಮೋದಿ ಅವರು ಟ್ರೆಂಡಿ ಜಾಕೆಟ್‌ನೊಂದಿಗೆ ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ್ದರೆ, ಮಮತಾ ಬ್ಯಾನರ್ಜಿ ಅವರು ಸೀರೆಯ ವಿಡಿಯೋದಲ್ಲಿ ತಮ್ಮ ಭಾಷಣದ ಭಾಗಗಳನ್ನು ಹಿನ್ನೆಲೆಯಾಗಿ ಬಳಸುತ್ತಾರೆ ಮತ್ತು ಡೀಪ್‌ಫೇಕ್ ವಿಡಿಯೋದಲ್ಲಿ ನೃತ್ಯ ಮಾಡುತ್ತಾರೆ. ಗೃಹ ಸಚಿವ ಅಮಿತ್ ಶಾ ಅವರ ವಿಡಿಯೋ ಈಗಲೂ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಸಹಾಯದಿಂದ ರಚಿಸಲಾಗುವ ಈ ವಿಡಿಯೋಗಳನ್ನು ನೋಡಿ ಎಲ್ಲರೂ ಸುಲಭವಾಗಿ ಮೋಸ ಹೋಗುತ್ತಾರೆ. ಇಂತಹ ನಕಲಿ ಸುದ್ದಿಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳುವುದು, ಜನರಲ್ಲಿ ಸುಳ್ಳು ಮಾಹಿತಿ ಹರಡುವುದನ್ನು ತಡೆಯುವುದು ಬಹುಮುಖ್ಯ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಡೀಪ್ ಫೇಕ್ ವಿಡಿಯೋಗಳನ್ನು ಗುರುತಿಸಲು ಏಳು ವಿಧಾನಗಳಿವೆ. ಅವುಗಳ ಮಾಹಿತಿ ಇಲ್ಲಿದೆ.


ಬಾಯಿ ಅಥವಾ ಗಲ್ಲದ ಸುತ್ತಲಿನ ಪ್ರದೇಶವನ್ನು ಗಮನಿಸಿ

ಡೀಪ್‌ಫೇಕ್‌ಗಳನ್ನು ಗುರುತಿಸಲು ಮೊದಲು ಬಾಯಿ ಅಥವಾ ಗಲ್ಲದ ಸುತ್ತಲಿನ ಪ್ರದೇಶವನ್ನು ವಿಶ್ಲೇಷಿಸಿ. ಡೀಪ್‌ಫೇಕ್ ಮಾಡುವವರು ಮುಖದ ರೆಂಡರಿಂಗ್ ಅನ್ನು ನಿಖರವಾಗಿ ಕರಗತ ಮಾಡಿಕೊಂಡಿರುವುದಿಲ್ಲ. ಪರಿಣಾಮವಾಗಿ, ಮುಖಗಳು ಸಾಮಾನ್ಯವಾಗಿ ಕಡಿಮೆ ಸುಕ್ಕುಗಳು, ಕಡಿಮೆ ವಿವರಗಳನ್ನು ಹೊಂದಿರುತ್ತವೆ ಮತ್ತು ಕೆಲವೊಮ್ಮೆ ಇದು ಅಸ್ಪಷ್ಟ ಅಥವಾ ಮಸುಕಾದ ನೋಟವನ್ನು ನೀಡುತ್ತದೆ. ಗುರುತಿಸಲು ಇನ್ನೂ ಕಷ್ಟವಾಗಿದ್ದರೆ ವ್ಯಕ್ತಿಯ ಧ್ವನಿ ಮತ್ತು ಬಾಯಿಯ ಚಲನೆಗಳನ್ನು ಗಮನಿಸಿ. ಇದರಲ್ಲಿ ಡೀಪ್‌ಫೇಕ್ ವಿಡಿಯೋಗಳು ಸ್ಪಷ್ಟವಾಗಿ ಗೋಚರಿಸುತ್ತದೆ.

ದೇಹದ ಚಲನೆ ಗಮನಿಸಿ

ಎಷ್ಟೇ ಕೌಶಲ ಪೂರ್ಣವಾಗಿ ಡೀಪ್ ಫೇಕ್ ವಿಡಿಯೋಗಳನ್ನು ಮಾಡಿದರೂ ಸಾಮಾನ್ಯವಾಗಿ ಅದು ಕಳಪೆಯಾಗಿರುತ್ತದೆ. ದೇಹದ ಚಲನೆಯಲ್ಲಿ ವ್ಯತ್ಯಾಸಗಳಿರುತ್ತವೆ. ಇದರಿಂದ ವಿಡಿಯೋ ಡೀಫೇಕ್ ಎಂಬುದನ್ನು ಸ್ಪಷ್ಟವಾಗಿ ಗುರುತಿಸಬಹುದು.

ಅನಗತ್ಯ ಅಂಶಗಳು

ಡೀಪ್‌ಫೇಕ್ ವಿಡಿಯೋದ ಗಮನಾರ್ಹ ಲಕ್ಷಣವೆಂದರೆ ವಿಡಿಯೋ ಕ್ಲಿಪ್ ನಲ್ಲಿ ಅನಗತ್ಯ ಅಂಶಗಳು ಕಂಡು ಬರುತ್ತದೆ. ಉದಾಹರಣೆಗೆ ಅಮೆರಿಕದ ಆಂತರಿಕ ಆಡಳಿತದ ವಕ್ತಾರ ಮ್ಯಾಥ್ಯೂ ಮಿಲ್ಲರ್ ಅವರ ನಕಲಿ ವಿಡಿಯೋವೊಂದರಲ್ಲಿ ಅವರು ರಷ್ಯಾದ ಬೆಲ್ಗೊರೊಡ್‌ನಲ್ಲಿ ಉಕ್ರೇನಿಯನ್ ಮಿಲಿಟರಿ ದಾಳಿಯನ್ನು ಸಮರ್ಥಿಸುತ್ತಿರುವುದು ಕಂಡು ಬಂದಿತ್ತು. ಇಲ್ಲಿದ್ದ ಅನಗತ್ಯ ಅಂಶಗಳು ಅದು ನಕಲಿ ಎಂದು ಗುರುತಿಸುವಂತೆ ಮಾಡಿತ್ತು.

ಮಾತಿನ ವಿಲಕ್ಷಣ ಅಂಶ

ಉದಾಹರಣೆಗೆ ಬಾಲಿವುಡ್‌ನ ಖ್ಯಾತ ಗಾಯಕರು ಹಾಡುವ ಆಧುನಿಕ ಹಾಡುಗಳು ಸಾಮಾನ್ಯವಾಗಿ ಮಾತಿನ ವಿಲಕ್ಷಣ ಅಂಶಗಳನ್ನು ಪ್ರತಿಬಿಂಬಿಸುತ್ತವೆ.

ಮುಖ ಮತ್ತು ದೇಹದ ನಡುವಿನ ಸಂಪರ್ಕ

ಅಸಮಂಜಸವಾದ ಮುಖ ಮತ್ತು ದೇಹದ ನಡುವಿನ ಸಂಪರ್ಕ, ಹೊಂದಿಕೆಯಾಗದ ಚರ್ಮದ ಬಣ್ಣಗಳು ಡೀಪ್ ಫೇಕ್ ವಿಡಿಯೋವನ್ನು ಸ್ಪಷ್ಟಪಡಿಸತ್ತದೆ. ಉದಾಹರಣೆಗೆ ಉಕ್ರೇನಿಯನ್ ಅಧ್ಯಕ್ಷ ಝೆಲೆನ್ಸ್‌ಕಿ ಅವರ ವಿಡಿಯೋದಲ್ಲಿ ಅವರು ರಷ್ಯಾದ ಸೈನ್ಯಕ್ಕೆ ಶರಣಾಗುವಂತೆ ನಾಗರಿಕರನ್ನು ಕೇಳುತ್ತಿದ್ದರು. ಅದು ನಕಲಿ ಎಂದು ಬಳಿಕ ಕಂಡುಬಂದಿತ್ತು. ಇದರಲ್ಲಿ ಸೂಕ್ಷ ವಿಷಯ ಏನೆಂದರೆ ದೇಹಕ್ಕೆ ಹೋಲಿಸಿದರೆ ತಲೆಯು ಅಸಮಾನವಾಗಿ ದೊಡ್ಡದಾಗಿತ್ತು!

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಹೆಚ್ಚುವರಿ ಅಂಗಗಳು

ಡೀಪ್ ಫೇಕ್ ವಿಡಿಯೋದಲ್ಲಿ ಇನ್ನೊಂದು ಗಮನಾರ್ಹ ಸಂಗತಿಯೆಂದರೆ ಎಐ ರಚಿತವಾದ ವಿಡಿಯೋಗಳು ಮಾನವ ದೇಹವನ್ನು ನಿಖರವಾಗಿ ನಿರೂಪಿಸುವುದಿಲ್ಲ. ಇದು ಸಾಮಾನ್ಯವಾಗಿ ಹೆಚ್ಚುವರಿ ಬೆರಳು ಅಥವಾ ವಿಕೃತ ಅಂಗಗಳ ಉಪಸ್ಥಿತಿಗೆ ಕಾರಣವಾಗುತ್ತದೆ.

ವಿಕೃತ ಅಕ್ಷರಗಳು

ಎಐ ರಚಿಸಿದ ವಿಡಿಯೋಗಳು ಸಂಖ್ಯೆ ಮತ್ತು ಅಕ್ಷರಗಳಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಉದಾಹರಣೆಗೆ ಡೊನಾಲ್ಡ್ ಟ್ರಂಪ್ ಅವರ ನಕಲಿ ವಿಡಿಯೋದಲ್ಲಿ ಸ್ಪಷ್ಟ ಎತ್ತರದ ಚಾರ್ಟ್‌ಗಿಂತ ಅಸಂಬದ್ಧ ಸಂಖ್ಯೆ ಮತ್ತು ಅಕ್ಷರಗಳನ್ನು ಪ್ರದರ್ಶಿಸಿತ್ತವೆ. ಹೀಗಾಗಿ, ಈ ವಿಡಿಯೋವನ್ನು ಡೀಪ್‌ಫೇಕ್ ಎಂದು ಗುರುತಿಸಲಾಯಿತು.

Continue Reading

ಆಟೋಮೊಬೈಲ್

Safe Drive Tips: ಜೀವ ಅಮೂಲ್ಯ; ಕಾರು ಓಡಿಸುವಾಗ ಈ ಸಂಗತಿಗಳನ್ನು ಮರೆಯಬೇಡಿ!

ಇತ್ತೀಚಿನ ದಿನಗಳಲ್ಲಿ ಕಾರುಗಳ ಬಳಕೆ ಹೆಚ್ಚಾಗಿದೆ. ಜೊತೆಗೆ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ರಸ್ತೆ ನಿಯಮಗಳು ನಮಗೆ ಗೊತ್ತಿಲ್ಲ ಎಂದಲ್ಲ. ಗೊತ್ತಿರುವ ನಿಯಮಗಳನ್ನು ನಾವು ಪಾಲಿಸದೇ ಇರುವುದು. ಕಾರು ಚಾಲನೆ ಮಾಡುವಾಗ ಎಚ್ಚರಿಕೆ ವಹಿಸುವುದು ಬಹುಮುಖ್ಯ. ಇದಕ್ಕಾಗಿ ಕೆಲವೊಂದು ನಿಯಮಗಳನ್ನು (Safe Drive Tips) ಪಾಲಿಸಲೇಬೇಕು. ಅವು ಯಾವುದು ಗೊತ್ತೇ? ಈ ಲೇಖನ ಓದಿ.

VISTARANEWS.COM


on

By

Safe Drive Tips
Koo

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರ ಮನೆಯಲ್ಲಿ ಕಾರುಗಳು (car) ಇದ್ದೇ ಇವೆ. ಕೆಲವರು ಕಾರು ಓಡಿಸುವುದು (drive) ಕಲಿತಿದ್ದರೂ ರಸ್ತೆಯಲ್ಲಿ (road) ಕಾರು ಓಡಿಸಲು ಹಿಂಜರಿಯುತ್ತಾರೆ. ಕಾರುಗಳು ಇವತ್ತು ಎಲ್ಲರಿಗೂ ಬೇಕೇ ಬೇಕು ಎನ್ನುವಷ್ಟು ಅನಿವಾರ್ಯವಾಗಿದೆ. ಇದಕ್ಕೆ ಕಾರಣ ಪ್ರಯಾಣ ಹೆಚ್ಚು ಸುರಕ್ಷಿತ (Safe Drive Tips) ಎನ್ನುವ ಭಾವನೆ. ಹೀಗಾಗಿ ಕಚೇರಿ ಕೆಲಸ, ಸ್ನೇಹಿತರ ಭೇಟಿ, ಸಣ್ಣಪುಟ್ಟ ಪ್ರಯಾಣಕ್ಕೂ ಹೆಚ್ಚಿನವರು ತಮ್ಮಲ್ಲಿರುವ ಕಾರುಗಳನ್ನೇ ತೆಗೆದುಕೊಂಡು ಹೋಗಲು ಇಷ್ಟ ಪಡುತ್ತಾರೆ.

ಅನೇಕ ಬಾರಿ ಕಾರು ಚಾಲನೆ ಮಾಡುವಾಗ ಕೆಲವೊಂದು ವಿಷಯಗಳ ಬಗ್ಗೆ ನಾವು ಗಮನ ಹರಿಸುವುದಿಲ್ಲ. ಇದು ಅಪಘಾತಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಾರು ಚಾಲನೆ ಮಾಡುವಾಗ ಕೆಲವು ವಿಷಯಗಳನ್ನು ನಾವು ನೆನಪಿನಲ್ಲಿ ಇಟ್ಟುಕೊಂಡರೆ ಅಪಘಾತಗಳಿಂದ ನಮ್ಮನ್ನು ನಾವು ಮಾತ್ರವಲ್ಲ ನಮ್ಮ ಕಾರುಗಳನ್ನೂ ರಕ್ಷಿಸಬಹುದು.

ಸಂಚಾರ ನಿಯಮಗಳನ್ನು ಅನುಸರಿಸಿ

ಕಾರು ಚಾಲನೆ ಮಾಡುವಾಗ ಯಾವಾಗಲೂ ಸಂಚಾರ ನಿಯಮಗಳನ್ನು ಅನುಸರಿಸಿ. ವೇಗದ ಮಿತಿಗಳನ್ನು ಅನುಸರಿಸುವುದು, ಕೆಂಪು ದೀಪಗಳನ್ನು ಗಮನಿಸಿ ನಿಲ್ಲಿಸುವುದು ಮತ್ತು ಸ್ಟಾಪ್ ಚಿಹ್ನೆಗಳನ್ನು ಪಾಲಿಸುವುದು ಇದರಲ್ಲಿ ಸೇರಿದೆ. ಇದಲ್ಲದೆ, ಜೀಬ್ರಾ ಕ್ರಾಸಿಂಗ್‌ಗಳಲ್ಲಿ ಪಾದಚಾರಿಗಳಿಗೆ ದಾರಿ ಮಾಡಿಕೊಡುವುದು ಮತ್ತು ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸದಿರುವುದು ಸಹ ಮುಖ್ಯವಾಗಿದೆ.


ಯಾವಾಗಲೂ ಸೀಟ್ ಬೆಲ್ಟ್ ಧರಿಸಿ

ಕಾರು ಚಾಲನೆ ಮಾಡುವಾಗ ಯಾವಾಗಲೂ ಸೀಟ್ ಬೆಲ್ಟ್ ಧರಿಸುವುದು ಮುಖ್ಯ. ನಿಮ್ಮ ಮತ್ತು ನಿಮ್ಮೊಂದಿಗೆ ಪ್ರಯಾಣಿಸುವ ಜನರ ಸುರಕ್ಷತೆಗೆ ಇದು ಬಹಳ ಮುಖ್ಯವಾಗಿದೆ. ಸೀಟ್ ಬೆಲ್ಟ್‌ಗಳು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಳ್ಳುವುದರಿಂದ ನಮ್ಮನ್ನು ರಕ್ಷಿಸುತ್ತದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ

ಆಲ್ಕೋಹಾಲ್ ಅಥವಾ ಡ್ರಗ್ಸ್ ಸೇವಿಸಿದ ಅನಂತರ ವಾಹನ ಚಲಾಯಿಸುವುದು ತುಂಬಾ ಅಪಾಯಕಾರಿ. ಇದು ಮನಸ್ಸನ್ನು ಕ್ರಿಯಾಶೀಲವಾಗದಂತೆ ಮಾಡುತ್ತದೆ. ಇದರಿಂದ ಕಾರಿನ ಮೇಲೆ ನಿಯಂತ್ರಣವನ್ನು ಕಳೆದುಕೊಳ್ಳಬಹುದು. ಇದು ಅಪಘಾತಗಳ ಅಪಾಯವನ್ನು ಹೆಚ್ಚಿಸುತ್ತದೆ.

ಮೊಬೈಲ್ ಫೋನ್ ಬಳಸಬೇಡಿ

ಕರೆ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಬೇಡಿ. ಇದು ನಿಮ್ಮ ಗಮನವನ್ನು ರಸ್ತೆಯಿಂದ ಬೇರೆಡೆಗೆ ತಿರುಗಿಸುತ್ತದೆ ಮತ್ತು ಇದರಿಂದ ರಸ್ತೆ ಅಪಘಾತಕ್ಕೆ ಬಲಿಯಾಗಬಹುದು.

ಸುಸ್ತಾಗಿದ್ದಾಗ ಅಥವಾ ನಿದ್ದೆ ಬಂದಾಗ ವಾಹನ ಚಲಾಯಿಸಬೇಡಿ

ಹೆಚ್ಚು ದಣಿದಿದ್ದರೆ ಅಥವಾ ನಿದ್ರೆ ಬರುತ್ತಿದ್ದರೆ ವಾಹನ ಚಲಾಯಿಸಬೇಡಿ. ಆಯಾಸವು ಡ್ರೈವಿಂಗ್ ಮಾಡುವಾಗ ನಿಮಗೆ ನಿದ್ರೆ ಬರುವಂತೆ ಮಾಡುತ್ತದೆ. ಇದು ಕಾರಿನ ನಿಯಂತ್ರಣ ತಪ್ಪಲು ಕಾರಣವಾಗಬಹುದು. ಇದು ಅಪಘಾತದ ಅಪಾಯವನ್ನು ಹೆಚ್ಚಿಸುತ್ತದೆ.

ಹೆಚ್ಚಿನ ವೇಗದಲ್ಲಿ ಚಾಲನೆ ಮಾಡಬೇಡಿ

ರಸ್ತೆ ಪರಿಸ್ಥಿತಿಗಳು ಮತ್ತು ಹವಾಮಾನದ ಪ್ರಕಾರ ವಾಹನದ ವೇಗವನ್ನು ನಿಯಂತ್ರಿಸಿ. ಹೆಚ್ಚಿನ ವೇಗದಲ್ಲಿ ಚಾಲನೆ ಮಾಡುವುದು ತುಂಬಾ ಅಪಾಯಕಾರಿ. ವಿಶೇಷವಾಗಿ ಮಳೆ ಅಥವಾ ಮಂಜಿನಂತಹ ಕೆಟ್ಟ ಹವಾಮಾನ ಪರಿಸ್ಥಿತಿಗಳಲ್ಲಿ ಹೆಚ್ಚು ವೇಗವಾಗಿ ಚಾಲನೆ ಮಾಡುವುದನ್ನು ತಪ್ಪಿಸಿ.

ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ

ಇತರ ವಾಹನಗಳಿಂದ ಯಾವಾಗಲೂ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಿ. ಇದರಿಂದ ಎದುರಿನ ವಾಹನ ಹಠಾತ್ತನೆ ನಿಂತರೆ ಸಕಾಲದಲ್ಲಿ ಬ್ರೇಕ್ ಹಾಕುವ ಅವಕಾಶ ಸಿಗುತ್ತದೆ.

ಇದನ್ನೂ ಓದಿ: Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

ಓವರ್ ಟೇಕ್ ಮಾಡುವಾಗ ಜಾಗರೂಕರಾಗಿರಿ

ಓವರ್‌ಟೇಕ್ ಮಾಡುವಾಗ ಯಾವಾಗಲೂ ಜಾಗರೂಕರಾಗಿರಿ. ರಸ್ತೆಯಲ್ಲಿ ಓವರ್‌ಟೇಕ್ ಮಾಡಲು ಸಾಕಷ್ಟು ಸ್ಥಳವಿದೆ ಮತ್ತು ಮುಂಭಾಗದಿಂದ ಯಾವುದೇ ವಾಹನ ಬರುತ್ತಿಲ್ಲ ಎಂದು ಖಚಿತಪಡಿಸಿಕೊಂಡ ಬಳಿಕವೇ ಓವರ್ ಟೇಕ್ ಮಾಡಿ.


ರಸ್ತೆ ಚಿಹ್ನೆಗಳಿಗೆ ಗಮನ ಕೊಡಿ

ರಸ್ತೆ ಚಿಹ್ನೆ ಮತ್ತು ಗುರುತುಗಳತ್ತ ಯಾವಾಗಲೂ ಗಮನ ಕೊಡಿ. ಈ ಚಿಹ್ನೆಗಳು ನಿಮಗೆ ರಸ್ತೆ ನಿಯಮಗಳು ಮತ್ತು ಅಪಾಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತವೆ.

Continue Reading

Latest

Viral Video: 34 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಕಾಶ್ಮೀರಿ ಪಂಡಿತ; ಪಾಳುಬಿದ್ದ ಮನೆ ನೋಡಿ ಭಾವುಕ

Viral Video: ಉಗ್ರರ ದಾಳಿಯಿಂದ ತಾಯ್ನಾಡನ್ನು ತೊರೆದ ಕಾಶ್ಮೀರಿ ಪಂಡಿತರೊಬ್ಬರು 34 ವರ್ಷಗಳ ಬಳಿಕ ಮತ್ತೆ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಅಲ್ಲಿ ತಮ್ಮ ಮನೆಯನ್ನು ಕಂಡು ಭಾವುಕರಾಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಸ್ಥಳೀಯರೊಂದಿಗೆ ಮಾತನಾಡುತ್ತಾ ಭಾವುಕರಾಗಿ ಅವರ ಕಣ್ಣಂಚು ತೇವವಾಗುವುದು ಈ ವಿಡಿಯೊದಲ್ಲಿ ನೋಡಬಹುದು. ಈ ಕ್ಲಿಪ್ ಅನ್ನು ವಿನೀತಾ ಸಿಂಗ್ ಎನ್ನುವವರು ಹಂಚಿಕೊಂಡಿದ್ದಾರೆ.

VISTARANEWS.COM


on

Viral Video
Koo

ಕಾಶ್ಮೀರದಲ್ಲಿ ಆಗಾಗ ಉಗ್ರರು ದಾಳಿ ನಡೆಸುತ್ತಿರುತ್ತಾರೆ. ಇದರಿಂದ ಅನೇಕ ಜನರು ತಮ್ಮವರನ್ನು ಕಳೆದುಕೊಂಡಿದ್ದಾರೆ. ಅನೇಕರು ತಮ್ಮ ನಾಡನ್ನು ಬಿಟ್ಟು ಬೇರೆ ಪ್ರದೇಶಕ್ಕೆ ವಲಸೆ ಹೋಗಿದ್ದಾರೆ. ಇಂತಹ ನರಕ ಯಾತನೆಯಲ್ಲಿ ಬದುಕುತ್ತಿರುವ ಕಾಶ್ಮೀರಿ ಜನರನ್ನು ನೋಡಿದರೆ ಯಾರಿಗಾದರೂ ಕರುಣೆ ಹುಟ್ಟುವುದು ಸಹಜ. ಅಂತಹದೊಂದು ಘಟನೆ ಇದೀಗ ಕಾಶ್ಮೀರದಲ್ಲಿ ನಡೆದಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

ಉಗ್ರರ ದಾಳಿಯಿಂದ ತಾಯ್ನಾಡನ್ನು ತೊರೆದ ಕಾಶ್ಮೀರಿ ಪಂಡಿತರೊಬ್ಬರು 34 ವರ್ಷಗಳ ಬಳಿಕ ಮತ್ತೆ ತಮ್ಮ ತಾಯ್ನಾಡಿಗೆ ಮರಳಿದ್ದಾರೆ. ಅಲ್ಲಿ ತಮ್ಮ ಪಾಳು ಬಿದ್ದ ಮನೆಯನ್ನು ಕಂಡು ಭಾವುಕರಾಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ವಿಡಿಯೊದಲ್ಲಿ ಕಪ್ಪು ಟೀ ಶರ್ಟ್ ಮತ್ತು ಜೀನ್ಸ್ ಧರಿಸಿದ 40 ವರ್ಷದ ವ್ಯಕ್ತಿಯೊಬ್ಬರು 34 ವರ್ಷಗಳ ಬಳಿಕ ತಮ್ಮ ಮನೆಗೆ ಬಂದಿದ್ದಾರೆ. ಅಲ್ಲಿ ಅವರು ಸುತ್ತಲೂ ತಿರುಗುತ್ತಾ ಆಕಾಶ ಮತ್ತು ಕಟ್ಟಡಗಳನ್ನು ನೋಡುತ್ತಾ, ತಮ್ಮ ಗತಕಾಲದ ನೆನಪುಗಳನ್ನು ಸ್ಪಷ್ಟವಾಗಿ ನೆನಪಿಸಿಕೊಳ್ಳುತ್ತಿದ್ದಾರೆ. ಹಾಗೇ ಸ್ಥಳೀಯರೊಂದಿಗೆ ಮಾತನಾಡುವಾಗ ಭಾವುಕರಾಗಿದ್ದಾರೆ. ಅವರ ಕಣ್ಣಿನಂಚಿನಲ್ಲಿ ನೀರು ಬರುವುದು ಕಾಣಿಸುತ್ತದೆ. ಈ ಕ್ಲಿಪ್ ಅನ್ನು ವಿನೀತಾ ಸಿಂಗ್ ಎನ್ನುವವರು ಹಂಚಿಕೊಂಡಿದ್ದು, ಇದಕ್ಕೆ ಸಾವಿರಾರು ವೀಕ್ಷಣೆಗಳು ಮತ್ತು ಹಲವಾರು ಕಾಮೆಂಟ್ ಗಳು ಬಂದಿವೆ.

ಈ ವಿಡಿಯೊ ನೋಡಿ ಒಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರು ವಲಸೆ ಬಂದಿದ್ದ ಕಾಶ್ಮೀರಿ ಗೆಳೆಯನ ಜೊತೆ ‘ಕಾಶ್ಮೀರ್ ಫೈಲ್ಸ್’ ಚಿತ್ರ ನೋಡಲು ಹೋದಾಗ ಆತ ತಮ್ಮ ತಾಯ್ನಾಡಿನ ಸಂಕಷ್ಟಗಳನ್ನು ನೋಡಿ ಭಾವುಕರಾಗಿ 10 ನಿಮಿಷಗಳ ಕಾಲ ಆಘಾತಕ್ಕೊಳಗಾಗಿದ್ದರು ಎಂಬುದಾಗಿ ತಿಳಿಸಿದ್ದಾರೆ.

ಇನ್ನೊಬ್ಬರು 25 ವರ್ಷಗಳ ನಂತರ ಕಾಶ್ಮೀರಕ್ಕೆ ಭೇಟಿ ನೀಡಿದಾಗ, ಅವರಿಗೆ ವಿಮಾನದಿಂದ ಇಳಿದು ನೆಲಕ್ಕೆ ಕಾಲಿಟ್ಟ ತಕ್ಷಣ, ಕಣ್ಣೀರು ಹರಿಯಲು ಶುರುವಾಗಿತ್ತು ಮತ್ತು ತನ್ನ ತಾಯಿಗೂ ಅದೇ ಅನುಭವವ ಆಗಿತ್ತು. ಅಲ್ಲಿ ವಾಸಿಸುವವರ ಈ ಭಾವನೆ, ನೋವು ಎಂದಿಗೂ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದಿದ್ದಾರೆ.

ಅಲ್ಲದೇ ಮತ್ತೊಬ್ಬರು ಬಲವಂತವಾಗಿ ನಿಮ್ಮ ಮನೆಯನ್ನು ತೊರೆಯುವುದು ಎಷ್ಟು ಕಷ್ಟಕರವಾಗಿರುತ್ತದೆ. ನಿಮ್ಮ ಈ ನೋವನ್ನು ಯಾರು ಊಹಿಸಲು ಸಾಧ್ಯವಿಲ್ಲ ಎಂದು ಸಹಾನುಭೂತಿ ತೋರಿದ್ದಾರೆ.

ಇದನ್ನೂ ಓದಿ: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

1990ರಲ್ಲಿ ಈ ಪ್ರದೇಶದಲ್ಲಿ ಉಗ್ರಗಾಮಿಗಳು ನಡೆಸುತ್ತಿದ್ದ ತೀವ್ರ ಉಗ್ರಗಾಮಿ ಕೃತ್ಯಗಳಿಂದಾಗಿ ಕಾಶ್ಮೀರಿ ಪಂಡಿತರು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ತಾಯ್ನಾಡನ್ನು ತೊರೆಯಬೇಕಾಯಿತು.

Continue Reading

ವಾಣಿಜ್ಯ

Credit Card New Rules: ಕ್ರೆಡಿಟ್ ಕಾರ್ಡ್‌ಗೆ ಹೊಸ ನಿಯಮ; ಗ್ರಾಹಕರು ಈಗ ಏನು ಮಾಡಬೇಕು?

ಎಲ್ಲಾ ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ ಆದೇಶ ಮಾಡಿದ್ದು, ಇದು ಕ್ರೆಡಿಟ್ ಕಾರ್ಡ್ ಬಳಸುತ್ತಿರುವ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Credit Card New Rules
Koo

ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿ (bill payment) ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಲಾಗಿದ್ದು, ಇದು ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ. ಎಲ್ಲಾ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ (BBPS) ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ (RBI) ಆದೇಶದಲ್ಲಿ ತಿಳಿಸಿದೆ.

ಆದರೆ, ಕ್ರೆಡಿಟ್ ಕಾರ್ಡ್ ಪಾವತಿಗಳಿಗಾಗಿ CRED ಮತ್ತು PhonePe ನಂತಹ ಜನಪ್ರಿಯ ಅಪ್ಲಿಕೇಶನ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ತಮ್ಮ ಬ್ಯಾಂಕ್‌ಗಳು ಇನ್ನೂ ಸಕ್ರಿಯವಾಗಿಲ್ಲ ಎಂದು ಅನೇಕ ಗ್ರಾಹಕರು ದೂರಿದ್ದಾರೆ.

ಬ್ಯಾಂಕ್ ಏಕೀಕರಣದ ಪ್ರಸ್ತುತ ಸ್ಥಿತಿ ಏನಿದೆ?

ಭಾರತದಲ್ಲಿ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲು ಅಧಿಕಾರ ಹೊಂದಿರುವ 34 ಬ್ಯಾಂಕ್‌ಗಳಲ್ಲಿ 12 ಮಾತ್ರ ಪ್ರಸ್ತುತ BBPS ಪ್ಲಾಟ್‌ಫಾರ್ಮ್‌ನಲ್ಲಿ ಇದೆ. ಉಳಿದ 22 ಬ್ಯಾಂಕ್‌ಗಳು ಇನ್ನೂ ವ್ಯವಸ್ಥೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಲ್ಲಿವೆ. ಪ್ರಸ್ತುತ ಎಸ್‌ಬಿಐ ಕಾರ್ಡ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಯು ಸಣ್ಣ ಹಣಕಾಸು ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಾರಸ್ವತ್ ಬ್ಯಾಂಕ್ ಗಳು ಬಿಬಿಪಿಎಸ್ ಪ್ಲಾಟ್ ಫಾರ್ಮ್ ನಲ್ಲಿ ಇವೆ.

ಆಕ್ಸಿಸ್ ಬ್ಯಾಂಕ್, ಹೆಚ್ ಡಿಎಫ್ ಸಿ ಬ್ಯಾಂಕ್, ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯೆಸ್ ಬ್ಯಾಂಕ್ ಗಳು ಸೇರಿದಂತೆ ಇನ್ನು ಹಲವು ಬ್ಯಾಂಕ್ ಗಳು ಬಿಬಿಪಿಎಸ್ ನೊಂದಿಗೆ ಸೇರುವ ಪ್ರಯತ್ನದಲ್ಲಿದೆ.

ಇನ್ನೂ ಅಪ್‌ಡೇಟ್‌ ಆಗಿಲ್ಲ ಏಕೆ?

ಕೆಲವು ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳುವಲ್ಲಿ ವಿಳಂಬವನ್ನು ಅನುಸರಿಸಲು ಹಲವಾರು ಅಂಶಗಳು ಕಾರಣವೆಂದು ಹೇಳಬಹುದು. ಏಕೀಕರಣವು ಅಸ್ತಿತ್ವದಲ್ಲಿರುವ ಸಿಸ್ಟಮ್‌ಗಳಿಗೆ ಗಮನಾರ್ಹವಾದ ನವೀಕರಣಗಳ ಅಗತ್ಯವಿದೆ. ಇದು ಸಂಕೀರ್ಣವಾಗಿದ್ದು, ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಇದು ದುಬಾರಿ ಪ್ರಕ್ರಿಯೆಯಾಗಿದೆ.

ಕೆಲವು ಬ್ಯಾಂಕುಗಳು ಈ ಪ್ರಕ್ರಿಯೆಯನ್ನು ಸಮರ್ಥವಾಗಿ ಕೈಗೊಳ್ಳಲು ಅಗತ್ಯವಾದ ಸಂಪನ್ಮೂಲಗಳು ಅಥವಾ ತಾಂತ್ರಿಕ ಸಾಮರ್ಥ್ಯಗಳನ್ನು ಹೊಂದಿಲ್ಲ. ಇದಲ್ಲದೆ, ಬ್ಯಾಂಕ್‌ಗಳು ಬಿಲ್ ಪಾವತಿ ಸೌಲಭ್ಯಕ್ಕಿಂತ ಹೆಚ್ಚು ನಿರ್ಣಾಯಕ ಅಥವಾ ಲಾಭದಾಯಕವೆಂದು ಪರಿಗಣಿಸುವ ಡಿಜಿಟಲ್ ಬ್ಯಾಂಕಿಂಗ್ ಅಥವಾ ಹಣಕಾಸು ಸೇವೆಗಳ ಇತರ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿದೆ. ಹೆಚ್ಚುವರಿಯಾಗಿ, ಅನೇಕ ಬ್ಯಾಂಕುಗಳು ತಮ್ಮದೇ ಆದ ಪಾವತಿ ವ್ಯವಸ್ಥೆಯನ್ನು ಹೊಂದಿವೆ ಮತ್ತು ಗ್ರಾಹಕರನ್ನು ತಮ್ಮ ಪರಿಸರ ವ್ಯವಸ್ಥೆಯೊಳಗೆ ನಿಕಟ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವಹಿವಾಟಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಲು ಆದ್ಯತೆ ನೀಡುತ್ತಿವೆ. ಹಾಗಾಗಿ ಈ ಅಪ್‌ಡೇಟ್‌ ಪ್ರಕ್ರಿಯೆ ವಿಳಂಬವಾಗಿದೆ.

ಏನು ಇದರ ಪರಿಣಾಮ?

ಆರ್‌ಬಿಐನ ಹೊಸ ಆದೇಶವು ಪ್ರಾಥಮಿಕವಾಗಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳನ್ನು ಅವಲಂಬಿಸಿರುವ ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಈ ಪ್ಲಾಟ್‌ಫಾರ್ಮ್‌ಗಳು ಕೊಡುಗೆಗಳನ್ನು ನೀಡುತ್ತಿತ್ತು.

ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳದಿದ್ದರೆ ಬಳಕೆದಾರರು ತಮ್ಮ ಪಾವತಿಗಳೊಂದಿಗೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಬಿಬಿಪಿಎಸ್‌ನ ಹಿಂದಿನ ಮುಖ್ಯ ಆಲೋಚನೆಯು ಬಿಲ್ ಪಾವತಿ ಪ್ರಕ್ರಿಯೆಯನ್ನು ಕೇಂದ್ರೀಕರಿಸುವುದು ಮತ್ತು ಸುಗಮಗೊಳಿಸುವುದು. ಬಳಕೆದಾರರಿಗೆ ಒಂದೇ ಪ್ಲಾಟ್‌ಫಾರ್ಮ್‌ನಿಂದ ಬಹು ಬಿಲ್‌ಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಬಿಬಿಪಿಎಸ್ ಗೆ ಪ್ರವೇಶವಿಲ್ಲದೆ ಬಳಕೆದಾರರು ಹಲವಾರು ಪ್ಲಾಟ್‌ಫಾರ್ಮ್‌ಗಳನ್ನು ನ್ಯಾವಿಗೇಟ್ ಮಾಡಬೇಕಾಗಬಹುದು ಅಥವಾ ಹಲವಾರು ಪಾವತಿ ಸೆಟಪ್‌ಗಳನ್ನು ನಿರ್ವಹಿಸಬೇಕಾಗಬಹುದು. ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸಬಹುದು.

ಬಿಬಿಪಿಎಸ್ ನೊಂದಿಗೆ ಬ್ಯಾಂಕ್‌ಗಳನ್ನು ಸಂಯೋಜಿಸದ ಕ್ರೆಡಿಟ್ ಕಾರ್ಡ್ ಬಳಕೆದಾರರು ಕೆಲವು ಬಿಲ್ ಪಾವತಿಗಳಿಗೆ ತಮ್ಮ ಕಾರ್ಡ್‌ಗಳನ್ನು ಬಳಸಲು ಸಾಧ್ಯವಾಗದಿರಬಹುದು.

ಇದನ್ನೂ ಓದಿ: SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

ಹಾಗಾದರೆ ಗ್ರಾಹಕರು ಏನು ಮಾಡಬಹುದು?

ಸದ್ಯಕ್ಕೆ ಬಿಬಿಪಿಎಸ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಬ್ಯಾಂಕ್ ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಲು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸಲಹೆ ನೀಡಲಾಗುತ್ತಿದೆ. ಈ ಮಾಹಿತಿಯು ಸಾಮಾನ್ಯವಾಗಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಥವಾ ಗ್ರಾಹಕ ಸೇವಾ ಚಾನೆಲ್‌ಗಳ ಮೂಲಕ ಲಭ್ಯವಿರುತ್ತದೆ. ಬ್ಯಾಂಕ್‌ಗಳು ಇನ್ನೂ ಬಿಬಿಪಿಎಸ್ ನಲ್ಲಿ ಸೇರಿಕೊಳ್ಳದೇ ಇದ್ದರೆ ತಮ್ಮ ಬಿಲ್ ಪಾವತಿ ಕಷ್ಟವಾಗಬಹುದು. ಗಡುವು ಮೀರಿದ ದಂಡ ಶುಲ್ಕದಿಂದ ಪಾರಾಗಲು ಪರ್ಯಾಯ ಪಾವತಿ ವಿಧಾನಗಳನ್ನು ಹುಡುಕಿಕೊಳ್ಳಬೇಕಾಗುತ್ತದೆ. ಆಯಾ ಬ್ಯಾಂಕ್‌ನ ಕಾಲ್‌ ಸೆಂಟರ್‌ಗೆ ಕರೆ ಮಾಡಿ ನೆರವು ಕೋರಬೇಕು.

Continue Reading
Advertisement
board exam
ಪ್ರಮುಖ ಸುದ್ದಿ2 mins ago

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

T20 World Cup 2024
ಕ್ರಿಕೆಟ್7 mins ago

T20 World Cup 2024: ವಿವಾದಾತ್ಮಕ ಕ್ಯಾಚ್​ನ ಮತ್ತೊಂದು ವಿಡಿಯೊ ವೈರಲ್​

Salman Khan shares new pic from for Sikandar
ಸಿನಿಮಾ11 mins ago

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Champions Trophy 2025
ಕ್ರೀಡೆ31 mins ago

Champions Trophy 2025: ಲಾಹೋರ್‌ನಲ್ಲಿ ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯ

Yuva Rajkumar
ಸ್ಯಾಂಡಲ್ ವುಡ್47 mins ago

Yuva Rajkumar: ಅಮೆರಿಕಕ್ಕೆ ಮರಳಿದ ಶ್ರೀದೇವಿ ಭೈರಪ್ಪ; ಡಿವೋರ್ಸ್ ಕಥೆ ಏನಾಯ್ತು?

sweets Gujiya peda barfi Motichoor Laddu Indian Sweet dessert mithai festival dish
ಆರೋಗ್ಯ53 mins ago

Health Tips: ಮಧ್ಯಾಹ್ನದ ನಂತರ ಏನಾದರು ಸಿಹಿತಿನಿಸು ತಿನ್ನಬೇಕು ಅನಿಸುತ್ತಿದೆಯೆ? ಇದಕ್ಕೂ ಇದೆ ಕಾರಣ

actor darshan vijayalakshmi pavitra gowda
ಕ್ರೈಂ57 mins ago

Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

Deepfake Video
ತಂತ್ರಜ್ಞಾನ1 hour ago

Deepfake Video: ಡೀಪ್‌ ಫೇಕ್‌ ವಿಡಿಯೊ ಹಾವಳಿ; ಅಸಲಿಯೋ ನಕಲಿಯೋ ಎಂದು ಗುರುತಿಸುವುದು ಹೇಗೆ?

parappana agrahara mobile sale
ಕ್ರೈಂ1 hour ago

Parappana Agrahara: ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲು ಸಾಗಿಸುತ್ತಿದ್ದ ಕೈದಿ; 2 ಫೋನ್‌ ಎಲ್ಲಿಟ್ಟುಕೊಂಡಿದ್ದ ಗೊತ್ತಾ?

Team India
ಕ್ರೀಡೆ2 hours ago

Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌