Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು - Vistara News

ಕ್ರೈಂ

Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು

Self Harming: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿರುವುದು (Self Harming) ಕುಂದಾಪುರ ತಾಲೂಕಿನ ಕೆರಾಡಿ ಗ್ರಾಪಂ ವ್ಯಾಪ್ತಿಯ ಬೆಳ್ಳಾಲ ಸಮೀಪದ ನಂದ್ರೋಳ್ಳಿ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಮಕ್ಕಳು ಮೃತಪಟ್ಟಿದ್ದರೆ, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

ಧನರಾಜ್ (13) ಮತ್ತು ಛಾಯ (7) ಮೃತಪಟ್ಟ ಮಕ್ಕಳು. ತಾಯಿ ಶೀಲಾ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ | Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Road Accident

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಶಾಲಾ ವಾಹನ ಹರಿದು 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಶಾಲೆಗೆ ಹೋಗಬೇಕಿದ್ದ ಪುಟ್ಟ ಕಂದಮ್ಮ, ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ ದುರಂತ ಸಾವು ಕಂಡಿದೆ. ಸಂಗಪ್ಪ ಹೊಸೂರ್ ಎಂಬುವವರ ಪುತ್ರ ಅಭಿನಂದನ್ ಹೊಸೂರ್ (4) ಮೃತ ಬಾಲಕ.

ಶಾಲಾ ವಾಹನ ಹರಿದು ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ

Road Accident

ಮಂಡ್ಯ: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿಘಾಟ್ ಶನಿವಾರ ಸರಣಿ ಅಪಘಾತ ನಡೆದಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದಿದೆ. ಹೀಗಾಗಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಸ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Mangalore News: ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಪೈಕಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ.

VISTARANEWS.COM


on

Mangalore News
Koo

ಮಂಗಳೂರು: ನಗರದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣದಲ್ಲಿ (Mangalore News) ಮಣ್ಣಿನಡಿ ಸಿಲುಕಿದ್ದ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ. ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕನನ್ನು ಬುಧವಾರ ಸಂಜೆ ರಕ್ಷಣೆ ಮಾಡಲಾಗಿತ್ತು. ಆದರೆ, ಮತ್ತೊಬ್ಬ ಕಾರ್ಮಿಕನ ರಕ್ಷಣೆಗಾಗಿ ಸತತ 6-7 ಗಂಟೆ ನಡೆದ ಕಾರ್ಯಾಚರಣೆ ಫಲ ನೀಡಲಿಲ್ಲ.

ಬಿಹಾರ ಮೂಲದ 30 ವರ್ಷದ ಚಂದನ್ ಮೃತ ಪಟ್ಟಿದ್ದಾನೆ. ಸತತ 6-7 ಗಂಟೆ ಕಾರ್ಯಾಚರಣೆ ನಡೆಸಿ ಕಾರ್ಮಿಕನನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿ ಶಾಮಕ ದಳ ಸಿಬ್ಬಂದಿ ತೀವ್ರ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ.

ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಬಿಹಾರ ಮೂಲದ ಚಂದನ್ ಮತ್ತು ರಾಜಕುಮಾರ್ ಸಿಲುಕಿದ್ದರು. ಕಾರ್ಯಾಚರಣೆಯಲ್ಲಿ ಮೊದಲಿಗೆ ರಾಜಕುಮಾರ್‌ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚಂದನ್‌ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿತ್ತು. ಸತತ ಕಾರ್ಯಾಚರಣೆ ಬಳಿಕ ಮಣ್ಣಿನಡಿ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಂದನ್‌ನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

ಎಲ್ಲ ಕಟ್ಟಡ ಕಾಮಗಾರಿಗಳ ಸ್ಥಗಿತಕ್ಕೆ ಪಾಲಿಕೆ ಆದೇಶ

ಮಣ್ಣು ಕುಸಿತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ನಗರದಾದ್ಯಂತ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತ ಮಾಡಲು ಸೂಚಿಸಲಾಗಿದೆ.

ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಅವೈಜ್ಞಾನಿಕ ಭೂ ಅಗೆತ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪಾಲಿಕೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆಯನ್ನು ಕಮಿಷನರ್‌ ನೀಡಿದ್ದಾರೆ.

Continue Reading

Latest

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Sexual Harassment: ಕಾಮ, ಕ್ರೋಧ, ಮೋಹ, ಮದ, ಮತ್ಸರ ಇವೆಲ್ಲವೂ ಅಂಕೆಯಲ್ಲಿದ್ದರೆ ಚೆನ್ನ. ಆದರೆ ಈಗ ಎಳೆಯ ಮಕ್ಕಳನ್ನು ಕೂಡ ಕಾಮುಕ ದೃಷ್ಟಿಯಲ್ಲಿ ನೋಡುವ ದುರಂತ ಕಾಲದಲ್ಲಿದ್ದೇವೆ. ರೈಲಿನಲ್ಲಿ ಅಜ್ಜಿಯೊಂದಿಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ವ್ಯಕ್ತಿಯೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅಶ್ಲೀಲ ವಿಡಿಯೊಗಳನ್ನು ನೋಡುವಂತೆ ಒತ್ತಾಯಿಸಿದ್ದಲ್ಲದೇ ಅಸಭ್ಯ ಸನ್ನೆಗಳನ್ನು ಸಹ ಮಾಡಿ ಕಿರುಕುಳ ಕೊಟ್ಟಿದ್ದಾನೆ.

VISTARANEWS.COM


on

Sexual Harassment
Koo

ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ಆಗಾಗ ಕೇಳಿ ಬರುತ್ತಲೇ ಇದೆ. ಬಸ್,
ರೈಲುಗಳಲ್ಲಿ , ಹೋಟೆಲ್, ರೆಸ್ಟೋರೆಂಟ್, ಮಾಲ್‍ಗಳಂತಹ ಹೊರಗಿನ ಸ್ಥಳದಲ್ಲಿ ಮಾತ್ರವಲ್ಲ ಕೆಲವೊಮ್ಮೆ ಕೆಲವು ಮಹಿಳೆಯರು ತಮ್ಮ ಮನೆಯೊಳಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಒಟ್ಟಾರೆ ಹೆಣ್ಣು ಮಕ್ಕಳ ಮೇಲಿನ ಶೋಷಣೆ ಕಡಿಮೆಯಾಗುವುದಿಲ್ಲ. ಇದೀಗ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment )ನೀಡಿದ ಘಟನೆ ಬೆಳಕಿಗೆ ಬಂದಿದೆ.

ಇಟಾರ್ಸಿಯಿಂದ ಭೋಪಾಲ್‍ಗೆ ತೆರಳುತ್ತಿದ್ದ ಮಂಗಳಾ ಎಕ್ಸ್‌ಪ್ರೆಸ್‌ನಲ್ಲಿ ಸೆಕೆಂಡ್ ಕ್ಲಾಸ್ ಎಸಿ ಕೋಚ್ ಎ -1 ರಲ್ಲಿ 14 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಬಾಲಕಿ ತನ್ನ ಅಜ್ಜಿಯ ಜೊತೆಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ಆಗ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿ ಅಶ್ಲೀಲ ವಿಡಿಯೊಗಳನ್ನು ನೋಡುವಂತೆ ಒತ್ತಾಯಿಸಿದ್ದಲ್ಲದೇ ಅಸಭ್ಯ ಸನ್ನೆಗಳನ್ನು ಸಹ ಮಾಡಿದ್ದಾನೆ. ಕಿರುಕುಳವನ್ನು ಸಹಿಸಲಾಗದೆ ಭಯಭೀತಳಾದ ಬಾಲಕಿ ತನ್ನ ಅಜ್ಜಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ಈ ಘಟನೆಯ ಬಗ್ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿ ಆರ್ ಪಿ) ನಿಯಂತ್ರಣ ಕೊಠಡಿಗೆ ವರದಿ ಮಾಡಿದ್ದಾಳೆ. ರೈಲು ಬೀನಾ ತಲುಪಿದಾಗ, ಜಿಆರ್‌ಪಿ ಅಧಿಕಾರಿಗಳು ಬಂದು, ತಕ್ಷಣದ ಕ್ರಮ ತೆಗೆದುಕೊಳ್ಳುವ ಬದಲು, ಎಫ್ಐಆರ್ ದಾಖಲಿಸಲು ರೈಲಿನಿಂದ ಇಳಿಯುವಂತೆ ಅವರು ಹುಡುಗಿಗೆ ಸೂಚಿಸಿದರು. ಆದರೆ ಅವಳು ಅದಕ್ಕೆ ನಿರಾಕರಿಸಿದಳು.

ಕೊನೆಗೆ ಬಾಲಕಿ ಗ್ವಾಲಿಯರ್‌ಗೆ ಬಂದು ತನ್ನ ತಂದೆಯನ್ನು ಭೇಟಿಯಾಗಿ ಅವರ ಜೊತೆ ಗ್ವಾಲಿಯರ್‌ನ ಜಿಆರ್‌ಪಿ ಠಾಣೆಯಲ್ಲಿ ಸೆಕ್ಷನ್ 74 ಬಿಎನ್ಎಸ್ 11/12 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾಳೆ. ರಾಣಿ ಕಮಲಾಪತಿ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದರಿಂದ ಪ್ರಕರಣವನ್ನು ದಾಖಲಿಸಿಕೊಂಡ ಗ್ವಾಲಿಯರ್‌ನ ಜಿರ್‌ಪಿ ಠಾಣೆ ಮುಂದಿನ ಕ್ರಮಕ್ಕಾಗಿ ರಾಣಿ ಕಮಲಪತಿ ಠಾಣೆಯ ಜಿಆರ್‌ಪಿಗೆ ವರ್ಗಾಯಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

ಲೈಂಗಿಕ ಕಿರುಕುಳ ಬಾಲಕಿಯರ ಮೇಲೆ ಮಾತ್ರ ನಡೆಯುತ್ತಿಲ್ಲ. ಈ ವರ್ಷದ ಮೇ ತಿಂಗಳಿನಲ್ಲಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುವಾಗ ತಾನು ಲೈಂಗಿಕ ದೌರ್ಜನ್ಯವನ್ನು ಎದುರಿಸಿದ್ದೇನೆ ಎಂದು 16 ವರ್ಷದ ಬಾಲಕನೊಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಅದು ಸಖತ್ ವೈರಲ್ ಆಗಿತ್ತು. ಸಮಯ್ ಪುರ್ ಬದ್ಲಿ ಕಡೆಗೆ ಹೋಗುತ್ತಿದ್ದ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಹತ್ತಿದ ನಂತರ ತನ್ನ ಸಹ ಪ್ರಯಾಣಿಕರು ತನ್ನ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದಾತ ದೂರಿದ್ದ.

Continue Reading

ದೇಶ

ಬೇರೆ ಹುಡುಗಿಗೆ ಮೋಸ ಆಗಬಾರದು; ಮದುವೆಯಾಗಲ್ಲ ಎಂದ ಗೆಳೆಯನ ಗುಪ್ತಾಂಗ ಕತ್ತರಿಸಿದ ಯುವತಿ! Video ಇದೆ

ಬಿಹಾರದ ಸರಣ್‌ ಜಿಲ್ಲೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯು ಗೆಳೆಯನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಜುಲೈ 1ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮರ್ಹೌರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್‌ ಹೋಮ್‌ನಲ್ಲಿಯೇ ಘಟನೆ ನಡೆದಿದೆ. ನರ್ಸಿಂಗ್‌ ಹೋಮ್‌ನಲ್ಲಿಯೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ-ಯುವತಿ ಮಧ್ಯೆ ವಾಗ್ವಾದ ನಡೆದಿದೆ. ಯುವಕನು ಮದುವೆಯಾಗಲು ಸುತಾರಾಂ ಒಪ್ಪದ ಕಾರಣ ಇಂತಹ ಕೃತ್ಯ ಎಸಗಿದ್ದಾಳೆ.

VISTARANEWS.COM


on

Woman Doctor
Koo

ಪಟನಾ: ಬಣ್ಣದ ಮಾತನಾಡಿ, ನೂರು ಕನಸು ಬಿತ್ತಿ, ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕವನ್ನೂ ಬೆಳೆಸಿ, ಕೊನೆಗೆ ಮೋಸ ಮಾಡುವ ಯುವಕರು ಹಾಗೂ ಯುವತಿಯರ ಸಂಖ್ಯೆ ಜಾಸ್ತಿ ಇದೆ. ಬ್ರೇಕಪ್‌ (Breakup) ಎಂದು ಒಂದೇ ಒಂದು ಮಾತಿನಲ್ಲಿ ಸಂಬಂಧವನ್ನು, ಪ್ರೀತಿಯನ್ನು ಕಡಿದುಕೊಳ್ಳುವವರ ಸಂಖ್ಯೆ ಜಾಸ್ತಿಯೇ ಆಗುತ್ತಿದೆ. ಹೀಗೆ, ಮದುವೆಯಾಗುವುದಾಗಿ ಭರವಸೆ ನೀಡಿ, ದೈಹಿಕ ಸಂಪರ್ಕ ಬೆಳೆಸಿ, ಕೊನೆಗೆ ಮದುವೆಯಾಗುವುದಿಲ್ಲ (Marriage) ಎಂದು ಹೇಳಿದ ಯುವಕನ ಮರ್ಮಾಂಗವನ್ನೇ ಲೇಡಿ ಡಾಕ್ಟರ್‌ ಒಬ್ಬರು ಕತ್ತರಿಸಿದ ಘಟನೆ ಬಿಹಾರದಲ್ಲಿ (Bihar) ನಡೆದಿದೆ.

ಹೌದು, ಸರಣ್‌ ಜಿಲ್ಲೆಯಲ್ಲಿ ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯು ಗೆಳೆಯನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಜುಲೈ 1ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಮರ್ಹೌರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ನರ್ಸಿಂಗ್‌ ಹೋಮ್‌ನಲ್ಲಿಯೇ ಘಟನೆ ನಡೆದಿದೆ. ನರ್ಸಿಂಗ್‌ ಹೋಮ್‌ನಲ್ಲಿಯೇ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕ-ಯುವತಿ ಮಧ್ಯೆ ವಾಗ್ವಾದ ನಡೆದಿದೆ. ಇದೇ ವೇಳೆ, ಮದುವೆಯಾಗುವುದಿಲ್ಲ ಎಂದು ಕಡ್ಡಿ ಮುರಿದ ಹಾಗೆ ಹೇಳಿದ ಗೆಳೆಯನ ಮೇಲೆ ದಾಳಿ ಮಾಡಿದ ಯುವತಿಯು, ಆತನ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ.

ಘಟನೆಯ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಪರಿಸ್ಥಿತಿ ಗಂಭೀರವಾದ ಕಾರಣ ಪಟನಾದಲ್ಲಿರುವ ಸೃಷ್ಟಿ ಆಸ್ಪತ್ರೆಗೆ ಯುವಕನನ್ನು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಜುಲೈ 1ರಂದು ಛಪ್ರಾದಲ್ಲಿಯೇ ಯುವಕ-ಯುವತಿಯು ಮದುವೆಯಾಗಲು ತೀರ್ಮಾನಿಸಿದ್ದರು. ಸಿಂಪಲ್‌ ಆಗಿ ರಿಜಿಸ್ಟರ್‌ ಮದುವೆಯಾಗಲು ನಿರ್ಧರಿಸಿದ್ದರು. ನೂರು ಕನಸುಗಳನ್ನು ಇಟ್ಟುಕೊಂಡು ಯುವತಿಯು ಕಾಯುತ್ತಿದ್ದಳು. ಆದರೆ, ಏಕಾಏಕಿ ಮದುವೆಯಾಗುವುದಿಲ್ಲ ಎಂದು ಹೇಳಿದ ಕಾರಣ ಇಂತಹ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಯುವತಿ ಹೇಳುವುದೇನು?

ಘಟನೆಯ ಬಳಿಕ ಯುವತಿಯನ್ನು ವಶಕ್ಕೆ ಪಡಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. “ಇಬ್ಬರೂ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ. ಮೂರು ಬಾರಿ ನನಗೆ ಗರ್ಭಪಾತ ಆಗಿದೆ. ಮದುವೆಯಾಗುವುದಾಗಿ ನಂಬಿಸಿ ಈಗ ಮೋಸ ಮಾಡಿದ್ದಾನೆ. ನನ್ನನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಬೇರೆ ಯುವತಿಯರಿಗೆ ಹೀಗೆ ಮೋಸ ಆಗಬಾರದು ಎಂದು ಇಂತಹ ಕೃತ್ಯ ಎಸಗಿದ್ದೇನೆ” ಎಂಬುದಾಗಿ ಯುವತಿ ಪೊಲೀಸರ ಎದುರು ಹೇಳಿರುವ ವಿಡಿಯೊ ಈಗ ವೈರಲ್‌ ಆಗಿದೆ.

ಇದನ್ನೂ ಓದಿ: Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Continue Reading

ಕರ್ನಾಟಕ

Stabbing Case: ಕಾಲೇಜಿನೊಳಗೆ ಬಿಡದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ!

Stabbing Case: ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಮದ್ಯ ಸೇವಿಸಿದ್ದರಿಂದ ಕಾಲೇಜಿನೊಳಗೆ ಬಿಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

Stabbing Case
Koo

ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ (Stabbing Case) ಬುಧವಾರ ನಡೆದಿದೆ. ಜೈ ಕಿಶೋರ್‌ ರಾಯ್ ಮೃತ ಸೆಕ್ಯೂರಿಟಿ ಗಾರ್ಡ್, ಭಾರ್ಗವ್ ಕೊಲೆ ಆರೋಪಿಯಾಗಿದ್ದಾನೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಕಾಲೇಜಿಗೆ ವಿದ್ಯಾರ್ಥಿ ಮದ್ಯ ಸೇವಿಸಿ ಹೋಗಿದ್ದ. ಹೀಗಾಗಿ ಆತನನ್ನು ಒಳಗೆ ಹೋಗಲು ಸೆಕ್ಯೂರಿಟಿ ಗಾರ್ಡ್ ಜೈ ಕಿಶೋರ್ ರಾಯ್ ಬಿಟ್ಟಿಲ್ಲ. ಈ ವೇಳೆ ಜಗಳ ತೆಗೆದ ವಿದ್ಯಾರ್ಥಿ ಆತನನ್ನು ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಮಾಡಿದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಕಾಲೇಜಿನ ಮುಂಭಾಗದಲ್ಲಿ ಮೃತ ಕಿಶೋರ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ | Suraj Revanna Case: ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಬಾಲಕಿ

ಬೆಳಗಾವಿ: ಬಾವಿಗೆ ಹಾರಿ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ಪ್ರಿಯಾ ರವಿ ತಳವಾರ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನೆನ್ನೆ ಶಾಲೆಯಿಂದ ಮನೆಗೆ ಬಂದ ಬೆನ್ನಲ್ಲೇ ಬಾಲಕಿ ಬಾವಿಗೆ ಹಾರಿದ್ದಾಳೆ. ಸುಮಾರು 50 ಅಡಿ ಆಳದ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದು, ಬಾಲಕಿ ಶವ ಹೊರಕ್ಕೆ ತೆಗೆಯಲಾಗಿದೆ.

ಕಾರು-ಖಾಸಗಿ ಬಸ್ ಡಿಕ್ಕಿಯಾಗಿ ಚಾಲಕ ಸಾವು

ಶಿವಮೊಗ್ಗ: ಕಾರು- ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಐದಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ದೇವಿಕೊಪ್ಪ ಬಳಿ ನಡೆದಿದೆ. ಶಿವಮೊಗ್ಗ ಮೂಲದ ಪ್ರಸಾದ್ ಮೃತ ಯುವಕ. ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದ್ದು, ಬಸ್ ಪಲ್ಟಿಯಾಗಿದೆ. ಇದರಿಂದ ಬಸ್‌ನಲ್ಲಿದ್ದ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಶಿರಾಳಕೊಪ್ಪ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನವಟ್ಟಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಹಾಗೂ ಶಿರಾಳಕೊಪ್ಪದ ಕಡೆದಿಂದ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಚಾಲಕ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ | Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಸವಾರನ ತಲೆ ಮೇಲೆ ಹರಿದ ಲಾರಿ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದಿದ್ದರಿಂದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೈಸ್‌ ರಸ್ತೆಯಲ್ಲಿ ನಡೆದಿದೆ. ಲಾರಿ ಡಿಕ್ಕಿ ಹೊಡೆದು ದ್ವಿಚಕ್ರವಾಹನ ಸವಾರನ ತಲೆ ಮೇಲೆ ಹರಿದಿದ್ದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement
Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ2 mins ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್17 mins ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ35 mins ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು38 mins ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ59 mins ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ1 hour ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ2 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Positive woman drinking water
ಆರೋಗ್ಯ2 hours ago

Drinking Water Tips: ನೀರು ಕುಡಿಯುವುದೇ ನಿಮ್ಮ ಸಮಸ್ಯೆಯೇ? ಇಲ್ಲಿವೆ ಸರಳ ಉಪಾಯಗಳು!

Poverty In India
ದೇಶ2 hours ago

Poverty In India: ಭಾರತದಲ್ಲಿ ಒಂದು ದಶಕದಲ್ಲೇ ಬಡತನ ಪ್ರಮಾಣ 21.2%ರಿಂದ 8.5%ಕ್ಕೆ ಇಳಿಕೆ

Monsoon Jacket Styling Tips
ಫ್ಯಾಷನ್2 hours ago

Monsoon Jacket Styling Tips: ಮಳೆಗಾಲದ ಜಾಕೆಟ್‌ನಲ್ಲೂ ಸ್ಟೈಲಿಶ್‌ ಆಗಿ ಕಾಣಿಸುವುದು ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌