Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ - Vistara News

ಬೆಂಗಳೂರು

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Actor Darshan: ನಟ ದರ್ಶನ್‌ ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಿದ್ದಾರೆ.

VISTARANEWS.COM


on

Pradhan Mantri Awas Yojana CM Siddaramaiah instructs to complete work on incomplete houses on priority
Koo

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ.

ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಆಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿ ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದುದರಿಂದ, ಫಲಾನುಭವಿಗಳ ಮೇಲಿನ ವಂತಿಕೆ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗದಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ ರೂ. 4.00 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದ್ದು, ಪ್ರಥಮ ಹಂತದಲ್ಲಿ 500 ಕೋಟಿ ರೂ. ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಫಲಾನುಭವಿಗಳ ಪಾಲಿನ ಒಂದು ಲಕ್ಷ ರೂ. ವಂತಿಕೆ ಮೊತ್ತವನ್ನು ಸಂಗ್ರಹಿಸುವ ಮೂಲಕ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸಿಎಂ ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 592 ಕೊಳೆಗೇರಿಗಳ ಅಭಿವೃದ್ಧಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50 ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು,ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಹೇಳಿದರು.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಸಭೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್‌ ಅಬ್ಬಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಎಂ.ಟಿ. ರೇಜು ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

Toyota Kirloskar Motor: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

VISTARANEWS.COM


on

Toyota Kirloskar Motor has joined hands with the IISC to support the establishment of a Mobility Engineering Laboratory
Koo

ಬೆಂಗಳೂರು: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) (Toyota Kirloskar Motor) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

ಭವಿಷ್ಯದ ಸಾಮರ್ಥ್ಯವನ್ನು ಪೂರೈಸಬಹುದಾದ ಅಪೇಕ್ಷಿತ ಪರಿಸರ ವ್ಯವಸ್ಥೆಯನ್ನು ರಚಿಸಲು ಉದ್ಯಮ ಮತ್ತು ಶಿಕ್ಷಣ ಸಂಸ್ಥೆಗಳು ಒಗ್ಗೂಡುವ ಅಗತ್ಯವನ್ನು ಗುರುತಿಸಿ, ಐಐಎಸ್‌ಸಿ, ಈ ಪ್ರವರ್ತಕ ಕಾರ್ಯಕ್ರಮವನ್ನು ಕಲಿಕೆಯ ಕ್ಷೇತ್ರದಲ್ಲಿ ಟಿಕೆಎಂ ಬೆಂಬಲಿಸುತ್ತದೆ. ಸುಧಾರಿತ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಬೋಧನೆಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದುವ ಜೊತೆಗೆ ಉನ್ನತ ಮಟ್ಟದ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದೆ.

ಚಲನಶೀಲತೆ ವಲಯವು ಹವಾಮಾನ ಬದಲಾವಣೆಯಿಂದ ಪ್ರೇರಿತವಾದ ಮಾದರಿ ಬದಲಾವಣೆಯನ್ನು ಅನುಭವಿಸುತ್ತಿದೆ. ಇದು ಪಳೆಯುಳಿಕೆ ಇಂಧನಗಳಿಂದ ದೂರ ಸರಿಯುವ ಅಗತ್ಯವನ್ನು ಪ್ರೇರೇಪಿಸುತ್ತದೆ. ಭಾರತದಲ್ಲಿ ಆಟೋಮೋಟಿವ್ ಉದ್ಯಮವು ಹಸಿರು ತಂತ್ರಜ್ಞಾನಗಳಿಗೆ ವೇಗವಾಗಿ ಬದಲಾಗುವ ಮತ್ತು ಜಾಗತಿಕವಾಗಿ ನಡೆಯುತ್ತಿರುವ ಇಂಧನ ಪರಿವರ್ತನೆಯನ್ನು ಸ್ವೀಕರಿಸುವ ಸವಾಲುಗಳನ್ನು ಎದುರಿಸುತ್ತಿದೆ. ಅದೇ ಸಮಯದಲ್ಲಿ ಅದರ ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳುತ್ತದೆ.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಐಐಎಸ್‌ಸಿ ತನ್ನ ಬಲವಾದ ಉದ್ಯಮ ಸಂಪರ್ಕಗಳು ಮತ್ತು ಉತ್ಕೃಷ್ಟತೆಯ ಬದ್ಧತೆಯೊಂದಿಗೆ ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯನ್ನು ಬಳಸಿಕೊಳ್ಳಲು ಸೂಕ್ತ ಸ್ಥಾನದಲ್ಲಿದೆ. ಈ ಸೌಲಭ್ಯವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಸುಧಾರಿತ ಚಲನಶೀಲತೆ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಅಗತ್ಯವಾದ ಬಹುಶಿಸ್ತೀಯ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ಸಹಾಯ ಮಾಡುತ್ತದೆ. ಸಮಗ್ರ ಪರೀಕ್ಷೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್‌ಐಎಲ್) ಸಿಮ್ಯುಲೇಶನ್ ಅನ್ನು ಬಳಸಿಕೊಂಡು ಪ್ರಯೋಗಾಲಯವು ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಮೇಲೆ ಕೇಂದ್ರೀಕರಿಸುತ್ತದೆ.

ಹಣಕಾಸು ವರ್ಷ 2024 ರಿಂದ 2027 ರವರೆಗೆ, ಟಿಕೆಎಂ ಮೊಬಿಲಿಟಿ ಎಂಜಿನಿಯರಿಂಗ್ ಪ್ರಯೋಗಾಲಯದ ಸ್ಥಾಪನೆ ಮತ್ತು ಹೈಸ್ಪೀಡ್ ಡೈನಮೋಮೀಟರ್, ಬ್ಯಾಟರಿ ಎಮ್ಯುಲೇಟರ್, ಆಟೋಮೇಷನ್ ಮತ್ತು ನಿಯಂತ್ರಣ ವ್ಯವಸ್ಥೆಗಳು, ವಾಹನ ಸಿಮ್ಯುಲೇಶನ್ ಸಾಫ್ಟ್‌ವೇರ್ ಮತ್ತು ಮೋಟರ್ಸ್ ಮತ್ತು ಎಂಜಿನ್‌ಗಾಗಿ ಮೌಂಟಿಂಗ್ ಹಾರ್ಡ್‌ವೇರ್‌ನಂತಹ ಅಗತ್ಯ ಉಪಕರಣಗಳು ಮತ್ತು ಮೂಲಸೌಕರ್ಯಗಳ ಖರೀದಿಗೆ ಬೆಂಬಲ ನೀಡುತ್ತದೆ. ಈ ಪ್ರಯೋಗಾಲಯವು ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಂಶೋಧನೆಗೆ ಬೆಂಬಲ ನೀಡಲಿದೆ.

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯ ಗಮನಾರ್ಹ ಲಕ್ಷಣವೆಂದರೆ ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್ ಐಎಲ್) ಪರೀಕ್ಷಾ ಸೌಲಭ್ಯ. ಎಚ್ಐಎಲ್ ಸಿಮ್ಯುಲೇಶನ್ ರಿಯಲ್-ವರ್ಲ್ಡ್ ಮಾಪನಗಳನ್ನು ಸಿಮ್ಯುಲೇಶನ್‌ಗಳೊಂದಿಗೆ ಸಂಯೋಜಿಸುತ್ತದೆ. ಇದು ಪುನರುತ್ಪಾದಕ, ವೇಗದ ಮತ್ತು ವೆಚ್ಚ-ಪರಿಣಾಮಕಾರಿ ಪರೀಕ್ಷೆಗೆ ಅನುವು ಮಾಡಿಕೊಡುತ್ತದೆ. ಇದು ವಾಹನ ಅಭಿವೃದ್ಧಿಗೆ ನಿರ್ಣಾಯಕವಾಗಿದೆ, ಸಿಮ್ಯುಲೇಟೆಡ್ ರಿಯಲ್-ವರ್ಲ್ಡ್ ಚಾಲನಾ ಪರಿಸ್ಥಿತಿಗಳಲ್ಲಿ ಎಂಜಿನ್‌ಗಳು, ಮೋಟರ್‌ಗಳು ಮತ್ತು ಬ್ಯಾಟರಿಗಳಂತಹ ವೈಯಕ್ತಿಕ ಘಟಕಗಳ ಪರೀಕ್ಷೆಯನ್ನು ಸಕ್ರಿಯಗೊಳಿಸುತ್ತದೆ.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಈ ಪ್ರಯೋಗಾಲಯವು ವಾಹನ ಡ್ರೈವ್ ಟ್ರೇನ್ ಸಂರಚನೆಗಳು ಮತ್ತು ನಿಯಂತ್ರಣ ತಂತ್ರಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಅನುಕೂಲ ಮಾಡಿಕೊಡುತ್ತದೆ. ಭೌತಿಕ ಮೂಲಮಾದರಿಗಳಿಗೆ ಸಂಬಂಧಿಸಿದ ವೆಚ್ಚಗಳು ಮತ್ತು ಅಭಿವೃದ್ಧಿ ಸಮಯವನ್ನು ಕಡಿಮೆ ಮಾಡುವಾಗ ಸುರಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸುತ್ತದೆ.

ಈ ಬಗ್ಗೆ ಐಐಎಸ್‌ಸಿ ನಿರ್ದೇಶಕ ಪ್ರೊ.ಜಿ.ರಂಗರಾಜನ್ ಮಾತನಾಡಿ, ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪಿಸಲು ಟಿಕೆಎಂನೊಂದಿಗೆ ಕೈಜೋಡಿಸಲು ನಾವು ಸಂತೋಷಪಡುತ್ತೇವೆ. ಈ ಸೌಲಭ್ಯವು ನಮ್ಮ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಎಮಿಷನ್ ಕಡಿತ ಮತ್ತು ಇಂಧನ ದಕ್ಷತೆ ಸೇರಿದಂತೆ ವಾಹನ ಉದ್ಯಮದಲ್ಲಿನ ನಿರ್ಣಾಯಕ ಸವಾಲುಗಳನ್ನು ಎದುರಿಸಲು ಅತ್ಯಾಧುನಿಕ ಉಪಕರಣಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುತ್ತದೆ.

ಟಿಕೆಎಂನೊಂದಿಗಿನ ಸಹಯೋಗವು ಶೈಕ್ಷಣಿಕ ಮತ್ತು ಉದ್ಯಮದ ಅತ್ಯುತ್ತಮ ಮನಸ್ಸುಗಳನ್ನು ಒಟ್ಟುಗೂಡಿಸುವ ಜತೆಗೆ ನಾವೀನ್ಯತೆ ಮತ್ತು ಉತ್ಕೃಷ್ಟತೆಯ ಸಂಸ್ಕೃತಿಯನ್ನು ಬೆಳೆಸುತ್ತದೆ. ವಿಶೇಷವಾಗಿ ವಿದ್ಯುದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಈ ಸಹಯೋಗದ ಪರಿಣಾಮವಾಗಿ ನಾವು ಅನೇಕ ಗಮನಾರ್ಹ ಪ್ರಗತಿಗಳನ್ನು ನಿರೀಕ್ಷಿಸುತ್ತೇವೆ. ಮೊಬಿಲಿಟಿ ಎಂಜಿನಿಯರಿಂಗ್‌ನಲ್ಲಿ ನಾವು ಹೊಸದಾಗಿ ಪ್ರಾರಂಭಿಸಿದ ಎಂಟೆಕ್ ಕಾರ್ಯಕ್ರಮವನ್ನು ಬೆಂಬಲಿಸುವಲ್ಲಿ ಪ್ರಯೋಗಾಲಯವು ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಆಟೋಮೋಟಿವ್ ಉದ್ಯಮದ ರೂಪಾಂತರವನ್ನು ಮುನ್ನಡೆಸಲು ಅಗತ್ಯವಿರುವ ಕೌಶಲ್ಯ ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಾಲ್ವಿ ಮಾತನಾಡಿ, ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆಗೆ ಸಮಾನಾರ್ಥಕವಾಗಿರುವ ಐಐಎಸ್‌ಸಿಯೊಂದಿಗೆ ಪಾಲುದಾರರಾಗಲು ನಮಗೆ ಗೌರವವಿದೆ. ಈ ತಿಳಿವಳಿಕೆ ಒಪ್ಪಂದವು ಚಲನಶೀಲತೆ ಎಂಜಿನಿಯರಿಂಗ್‌ನಲ್ಲಿ ನಾವೀನ್ಯತೆಯನ್ನು ಉತ್ತೇಜಿಸುವ ನಮ್ಮ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಸಹಯೋಗದ ಶಕ್ತಿಯನ್ನು ನಾವು ನಂಬುತ್ತೇವೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಯನ್ನು ಬೆಂಬಲಿಸುವ ಮೂಲಕ ನಾವು ಸಂಶೋಧನಾ ಮೂಲಸೌಕರ್ಯವನ್ನು ಹೆಚ್ಚಿಸಲು ಮಾತ್ರವಲ್ಲದೆ ಸುಸ್ಥಿರ ಚಲನಶೀಲತೆಯ ಭವಿಷ್ಯದಲ್ಲಿ ಮತ್ತು ಭಾರತದಲ್ಲಿ ನುರಿತ ಎಂಜಿನಿಯರ್‌ಗಳ ಅಭಿವೃದ್ಧಿಗೆ ಬೆಂಬಲ ನೀಡುತ್ತಿದ್ದೇವೆ. ಈ ಪ್ರಯೋಗಾಲಯವು ಪ್ರವರ್ತಕ ಸಂಶೋಧನೆಗೆ ಒಂದು ಕ್ರೂಸಿಬಲ್ ಆಗಿ ಕಾರ್ಯನಿರ್ವಹಿಸುತ್ತದೆ. ಹವಾಮಾನ ಬದಲಾವಣೆ ಮತ್ತು ಸ್ವಚ್ಛ, ಹೆಚ್ಚು ಪರಿಣಾಮಕಾರಿ ಸಾರಿಗೆ ಪರಿಹಾರಗಳ ಅಗತ್ಯದಂತಹ ನಮ್ಮ ಕಾಲದ ಒತ್ತಡದ ಸವಾಲುಗಳನ್ನು ಪರಿಹರಿಸುವ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಯಕ್ರಮವು ಅದ್ಭುತ ಸಂಶೋಧನೆಯನ್ನು ವೇಗ ವರ್ಧಿಸುತ್ತದೆ ಎಂದು ನಮಗೆ ವಿಶ್ವಾಸವಿದ್ದು, ಸುಸ್ಥಿರ ಚಲನಶೀಲತೆಯ ಭವಿಷ್ಯವನ್ನು ಮುನ್ನಡೆಸುವ ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಇದು ಪೋಷಿಸುತ್ತದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

Dengue fever: ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿಗಿಂತ ಹೆಚ್ಚು ಹಣ ಸ್ವೀಕರಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Dengue fever
Koo

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ | Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

ಹೊಳೆನರಸೀಪುರದಲ್ಲಿ ಡೆಂಗ್ಯೂ ಜ್ವರದಿಂದ ಬಾಲಕಿ ಸಾವು

ಹಾಸನ: ಮಾರಕ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ
ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್. (11) ಮೃತಪಟ್ಟ ಬಾಲಕಿ.

ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ತನುಜ ದಂಪತಿಗಳ ಪುತ್ರಿ ಕಲಾಶ್ರೀ ಜಿ.ಎಲ್. ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಿಮ್ಸ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ. ಇದರಿಂದ ಒಂದು ವಾರದಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಹೆಣ್ಣುಮಕ್ಕಳು ಬಲಿಯಾದಂತಾಗಿದೆ.

ಇದನ್ನೂ ಓದಿ | Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ಜೂ.28 ರಂದು ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದ ಕುಮಾರ್ ಎಂಬುವರ ಪುತ್ರಿ ವರ್ಷಿಕ (8) ಮೃತಪಟ್ಟಿದ್ದಳು. ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವರ್ಷಿಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆದಿದ್ದಳು.

Continue Reading

ಕರ್ನಾಟಕ

Koppala News: ʼಮಮತೆಯ ತೊಟ್ಟಿಲುʼವಿನ 4 ಅನಾಥ ಮಕ್ಕಳು ವಿದೇಶಿ ದಂಪತಿಗಳ ಮಡಿಲಿಗೆ!

Koppala News: ಗಂಗಾವತಿ ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ಸ್ಥಾಪಿಸಲಾದ `ಮಮತೆಯ ತೊಟ್ಟಿಲು’ ಕಾರ್ಯಕ್ರಮಕ್ಕೆ ಬುಧವಾರ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಈ ಯೋಜನೆಯಿಂದ ಅನಾಥ ಮಕ್ಕಳು ರಕ್ಷಣೆ ಆಗುತ್ತಿರುವ ಬಗ್ಗೆ ತಿಳಿಸಿದರು.

VISTARANEWS.COM


on

mamatheya thottilu inauguration programme at gangavathi
Koo

ಗಂಗಾವತಿ: ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ಸ್ಥಾಪಿಸಲಾದ `ಮಮತೆಯ ತೊಟ್ಟಿಲು’ ಕಾರ್ಯಕ್ರಮಕ್ಕೆ ಬುಧವಾರ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಚಾಲನೆ (Koppala News) ನೀಡಿದರು.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಕಾರ್ಯಕ್ರಮವನ್ನು ತೊಟ್ಟಿಲು ತೂಗುವುದರ ಮೂಲಕ ಚಾಲನೆ ನೀಡಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಅವರು ಬಳಿಕ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೂ ಪರಿತ್ಯಕ್ತ 19, ಪಾಲಕರೇ ಸ್ವಯಂ ಆಗಿ ಇಲಾಖೆಯ ಸುಪರ್ದಿಗೆ 23 ಮಕ್ಕಳನ್ನು ಒಪ್ಪಿಸಿದ್ದಾರೆ. ಈ ಪೈಕಿ ಸ್ಪೇನ್, ಸ್ವೀಡನ್ ದೇಶದ ಪೋಷಕರು ತಲಾ ಒಂದು ಮಗು ಹಾಗೂ ಅಮೆರಿಕದ ಇಬ್ಬರು ಪೋಷಕರು ಮಕ್ಕಳನ್ನು ದತ್ತು ಪಡೆದಿದ್ದಾರೆ. ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ 38 ಮಕ್ಕಳನ್ನು ದತ್ತು ನೀಡಲಾಗಿದೆ ಎಂದು ತಿಳಿಸಿದರು.

ಹೆತ್ತವರಿಗೆ ಬೇಡವಾದ ಮತ್ತು ಪರಿತ್ಯಕ್ತ ಮಕ್ಕಳನ್ನು ಸಂರಕ್ಷಣೆ ಮಾಡುವ ಉದ್ದೇಶಕ್ಕೆ ‘ಮಮತೆಯ ತೊಟ್ಟಿಲು’ ಎಂಬ ಯೋಜನೆ ಜಾರಿ ಮಾಡಲಾಗಿದೆ. ಈ ಮಮತೆಯ ತೊಟ್ಟಿಲಿನ ನಾಲ್ಕು ಮಕ್ಕಳು ವಿದೇಶಿ ದಂಪತಿಗಳ ಮಡಿಲು ಸೇರಿದ್ದು ವಿಶೇಷ ಎಂದು ಅವರು ಹೇಳಿದರು.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಈ ಸಂದರ್ಭದಲ್ಲಿ ಗಂಗಾವತಿಯ ವಿವಿಧ ಶ್ರೇಣಿಯ ನ್ಯಾಯಾಲಯಗಳ ನ್ಯಾಯಾಧೀಶರಾದ ರಮೇಶ ಗಾಣಿಗೇರ, ಶ್ರೀದೇವಿ ದರಬಾರೆ, ನಾಗೇಶ ಪಾಟೀಲ್ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

Continue Reading
Advertisement
Team India
ಕ್ರಿಕೆಟ್34 mins ago

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

LK Advani
ದೇಶ48 mins ago

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Ashika Ranganath
ಸ್ಯಾಂಡಲ್ ವುಡ್1 hour ago

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ1 hour ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್2 hours ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ2 hours ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು2 hours ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ2 hours ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ2 hours ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ3 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌