T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು? - Vistara News

ಸ್ಯಾಂಡಲ್ ವುಡ್

T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

T20 World Cup 2024: ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

VISTARANEWS.COM


on

T20 World Cup 2024 Netizen Thanking Darshan For India World Cup Win
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದರ ಬೆನ್ನಲ್ಲೇ  ಭಾರತ ವಿಶ್ವಕಪ್ ಗೆಲ್ಲಲು ಕಾರಣ ದರ್ಶನ್‌ ಎಂದು ಟ್ರೋಲ್‌ ಆಗುತ್ತಿದೆ. ಮಾತ್ರವಲ್ಲ ನೆಟ್ಟಿಗರು ದರ್ಶನ್‌ಗೆ ಧನ್ಯವಾದ ಎಂದು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. 

ಭಾರತ ಕಳೆದ ಬಾರಿ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ ಆ ವರ್ಷವೂ ಸಹ ದರ್ಶನ್ ಜೈಲು ಸೇರಿದ್ದರು. ಅದಾದ 13 ವರ್ಷಗಳ ಬಳಿಕ 2024 ರಲ್ಲಿ ದರ್ಶನ್​ ಮತ್ತೆ ಜೈಲಿಗೆ ಹೋಗಿದ್ದಾರೆ. ಈ ಬಾರಿ ಭಾರತ ಮತ್ತೆ ವಿಶ್ವಕಪ್ ಗೆದ್ದಿದೆ. ಹಾಗಾಗಿ ದರ್ಶನ್ ಜೈಲು ಸೇರಿದ್ದಕ್ಕೆ ಭಾರತ ವಿಶ್ವಕಪ್ ಗೆದ್ದಿದ್ದು ಎಂಬುದು ಕೆಲವರ ಮಾತುಗಳು. ಭಾರತ ವಿಶ್ವಕಪ್ ಗೆದ್ದ ಕೆಲವು ತಿಂಗಳು ಬಳಿಕ ದರ್ಶನ್ ಜೈಲಿಗೆ ಹೋಗಿದ್ದರೆ ಹೊರತು ವಿಶ್ವಕಪ್ ಗೆಲ್ಲುವ ಮೊದಲಲ್ಲ. 2011 ರ ಏಪ್ರಿಲ್ 2 ರಂದು ಭಾರತ ವಿಶ್ವಕಪ್ ಗೆದ್ದಿತ್ತು, ಅದಾದ ಕೆಲವು ತಿಂಗಳ ಬಳಿಕ ಅಂದರೆ ಸೆಪ್ಟೆಂಬರ್ 9 ರಂದು ನಟ ದರ್ಶನ್ ಜೈಲು ಸೇರಿದ್ದರು.

ಹೇಗಿತ್ತು ಸೆಲೆಬ್ರೇಷನ್‌?

ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳ ಸಡಗರ ಮುಗಿಲು ಮುಟ್ಟಿತ್ತು‌. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಕೋರಮಂಗಲ ಸೇರಿದಂತೆ ಬೆಂಗಳೂರಿನ ಹಲವು ಭಾಗಗಳಲ್ಲಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಮತ್ತು ತ್ರಿವರ್ಣ ಧ್ವಜ ಹಾರಿಸಿ, ಹಾಡುಗಳಿಗೆ ಕುಣಿದು ಸಂಭ್ರಮ ಆಚರಿಸಿ ಭಾರತ ತಂಡಕ್ಕೆ ಅಭಿನಂದನೆ‌ ಸಲ್ಲಿಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

ಭಾರತ ತಂಡ ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಕ್ರಿಕೆಟ್ ಪ್ರೇಮಿಗಳು ಭಾರತ ಧ್ವಜ, ಭಗವಾಧ್ವಜ ಪ್ರದರ್ಶಿಸಿ ಖುಷಿಪಟ್ಟರು. ಜತೆಗೆ ಡಿಜೆಗೆ ಸಖತ್‌ ಸ್ಟೆಪ್ ಹಾಕಿ ಕ್ರೀಡಾ ಪ್ರೇಮಿಗಳು ಸಂಭ್ರಮಿಸಿದರು. ಕನ್ನಡ, ಹಿಂದಿ ಹಾಡುಗಳ ನಡುವೆ ಯುವ ಜನತೆಯ ಡ್ಯಾನ್ಸ್‌ ಗಮನ ಸೆಳೆಯಿತು.

ಟಾಸ್ ಗೆದ್ದ ನಂತರ ಭಾರತವು ಬ್ಯಾಟಿಂಗ್ ಸ್ನೇಹಿ ಪಿಚ್ನಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಧಾನವಾಗಿ ರನ್ ಪೇರಿಸಿ ದಕ್ಷಿಣ ಆಫ್ರಿಕಾಕ್ಕೆ 177 ರನ್​ಗಳ ಸವಾಲಿನ ಗುರಿ ನಿಗದಿಪಡಿಸಿತು. ಅಂತೆಯೇ ಅಂತಿಮ ಓವರ್​ನಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಶಸ್ತಿ ಗೆಲ್ಲಲು 16 ರನ್ಗಳ ಅವಶ್ಯಕತೆಯಿತ್ತು. ಈ ನಿರ್ಣಾಯಕ ಓವರ್​ಗೆ ಎಸೆಯಲು ರೋಹಿತ್ ಶರ್ಮಾ ಪಾಂಡ್ಯಗೆ ಚೆಂಡನ್ನು ನೀಡಿದರು. ಪಾಂಡ್ಯ ಕೇವಲ ಏಳು ರನ್​ಗಳನ್ನು ಬಿಟ್ಟುಕೊಟ್ಟು ಡೇವಿಡ್ ಮಿಲ್ಲರ್ ಮತ್ತು ಕಗಿಸೊ ರಬಾಡ ಅವರ ಎರಡು ಪ್ರಮುಖ ವಿಕೆಟ್​​ಗಳನ್ನು ಪಡೆದು ಭಾರತದ ಗೆಲುವನ್ನು ಖಚಿತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

Varalaxmi Sarathkumar: ನಿನ್ನೆ (ಜುಲೈ 3) ಚೆನ್ನೈನಲ್ಲಿ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆರತಕ್ಷತೆಗೆ ಕಿಚ್ಚು ಸುದೀಪ್ ಕೂಡ ಭಾಗವಹಿಸಿದ್ದರು. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಕೂಡ ಜತಗೆ ಇದ್ದರು. ಮೊದಲಿಂದ ಶರತ್‌ ಕುಮಾರ್‌ (Varalaxmi Sarathkumar) ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮೀ ಶರತ್ ಕುಮಾರ್ ಅವರು ಸುದೀಪ್‌ ಅವರ ಜನುಮದಿನ ವಿಶ್‌ ಮಾಡದೇ ಇರಲ್ಲ.

VISTARANEWS.COM


on

Varalaxmi Sarathkumar Reception attend By sudeep Family
Koo

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಿಕೊಲಾಯ್ ಸಚ್‌ದೇವ್ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಥಾಯ್ಲೆಂಡ್‌ನಲ್ಲಿ ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯರು ಮಾತ್ರ ಭಾಗವಹಿಸಿದ್ದರು. ಈ ಬೆನ್ನಲ್ಲೇ ನಿನ್ನೆ (ಜುಲೈ 3) ಚೆನ್ನೈನಲ್ಲಿ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆರತಕ್ಷತೆಗೆ ಕಿಚ್ಚು ಸುದೀಪ್ ಕೂಡ ಭಾಗವಹಿಸಿದ್ದರು. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಕೂಡ ಜತಗೆ ಇದ್ದರು.

ಚೆನ್ನೈನಲ್ಲಿ ನಡೆದ ಅದ್ಧೂರಿ ಆರತಕ್ಷತೆಯಲ್ಲಿ ತಮಿಳು, ತೆಲುಗು, ಕನ್ನಡ ಚಿತ್ರರಂಗದ ಗಣ್ಯರೇ ಹೆಚ್ಚಾಗಿ ಭಾಗಿವಹಿಸಿದ್ದರು. ನಿರ್ದೇಶಕ ಬಾಲಾ, ನಟ ಜೀವಾ, ನಟಿ ರೋಜಾ, ನಿರ್ದೇಶಕ ಆರ್.ಕೆ.ಸೆಲ್ವಮಣಿ, ನಿರ್ದೇಶಕ ಹರಿ, ನಟ ವಿಜಯಕುಮಾರ್, ನಟ ಬಾಲಕೃಷ್ಣ, ನಟಿ ಆಂಡ್ರಿಯಾ, ನಿರ್ದೇಶಕ ಕೆ.ಎಸ್.ರವಿಕುಮಾರ್, ನಟ ಶಿವಕುಮಾರ್, ಶೋಭಾ, ಸುಂದರ್ ಸಿ. ಖುಷ್ಬೂ, ನಿರ್ದೇಶಕ ಎ.ಎಲ್.ವಿಜಯ್, ಮಣಿರತ್ನಂ, ಸುಹಾಸಿನಿ, ಜಾಕಿ ಶ್ರಾಫ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಬಂದು ಶುಭ ಕೋರಿದ್ದಾರೆ. ಆರತಕ್ಷತೆಯಲ್ಲಿ ವರಲಕ್ಷ್ಮಿ ಶರತ್‌ಕುಮಾರ್ ಮೆರೂನ್ ಬಣ್ಣದ ಗೌನ್ ಧರಿಸಿದ್ದರೆ, ನಿಕೊಲಾಯ್ ಸಚ್‌ದೇವ್ ಅದೇ ಬಣ್ಣದ ಶೇರ್ವಾನಿಯಲ್ಲಿ ಮಿಂಚಿದ್ದರು.

ಇದನ್ನೂ ಓದಿ: Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

ನಟ ಶರತ್‌ಕುಮಾರ್ ಅವರ ಮೊದಲ ಪತ್ನಿ ಸಯಾ ಅವರಿಗೆ ಜನಿಸಿದವರೇ ವರಲಕ್ಷ್ಮಿ. ಮೊದಲ ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ನಟಿ ರಾಧಿಕಾರನ್ನು ವಿವಾಹವಾಗಿದ್ದರು.

ಮೊದಲಿಂದ ಶರತ್‌ ಕುಮಾರ್‌ (Varalaxmi Sarathkumar) ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮೀ ಶರತ್ ಕುಮಾರ್ ಅವರು ಸುದೀಪ್‌ ಅವರ ಜನುಮದಿನ ವಿಶ್‌ ಮಾಡದೇ ಇರಲ್ಲ. ಇಬ್ಬರೂ ತುಂಬ ಆತ್ಮಿಯರು.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು.

Continue Reading

ಸ್ಯಾಂಡಲ್ ವುಡ್

Yuva Rajkumar: ಅಮೆರಿಕಕ್ಕೆ ಮರಳಿದ ಶ್ರೀದೇವಿ ಭೈರಪ್ಪ; ಡಿವೋರ್ಸ್ ಕಥೆ ಏನಾಯ್ತು?

Yuva Rajkumar: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ವಿಚಾರ ಕೆಲವು ದಿನಗಳ ಹಿಂದೆ ಭಾರೀ ಸುದ್ದಿಯಾಗಿತ್ತು. ಈ ನೋಟಿಸ್‌ಗೆ ಸಂಬಂಧಿಸಿ ಇಂದು (ಜುಲೈ 4) ನಡೆಯಬೇಕಾಗಿದ್ದ ವಿಚಾರಣೆಗಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ಭೈರಪ್ಪ ಹಿಂತಿರುಗುತ್ತಿರುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ವಿಚಾರ ಕೆಲವು ದಿನಗಳ ಹಿಂದೆ ಭಾರೀ ಸುದ್ದಿಯಾಗಿತ್ತು. ಈ ನೋಟಿಸ್‌ಗೆ ಸಂಬಂಧಿಸಿ ಇಂದು (ಜುಲೈ 4) ನಡೆಯಬೇಕಾಗಿದ್ದ ವಿಚಾರಣೆಗಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ಭೈರಪ್ಪ ಹಿಂತಿರುಗುತ್ತಿರುವುದಾಗಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಹೀಗಾಗಿ ಅವರು ವಿಚಾರಣೆಗೆ ಗೈರಾಗಲಿದ್ದಾರೆ ಎನ್ನಲಾಗಿದೆ.

ಡಿವೋರ್ಸ್ ಪ್ರಕರಣ ವಿಚಾರವಾಗಿ ಅಮೆರಿಕದಿಂದ ಬಂದಿದ್ದ ಶ್ರೀದೇವಿ ವಿಚಾರಣೆಗೆ ಹಾಜರಾಗದೆ ಅಮೆರಿಕಕ್ಕೆ ಹಿಂತಿರುಗುತ್ತಿರುವ ವಿಷಯ ಸದ್ಯ ಕುತೂಹಲ ಮೂಡಿಸಿದೆ. ಹಾರ್ವರ್ಡ್‌ನಲ್ಲಿ ಶಿಕ್ಷಣ ಮುಂದುವರಿಸುವ ಸಲುವಾಗಿ ಭಾರತದಿಂದ ಅಮೆರಿಕಕ್ಕೆ ಹೋಗುತ್ತಿರುವುದಾಗಿ ಶ್ರೀದೇವಿ ತಿಳಿಸಿದ್ದಾರೆ. ತನ್ನ ಮೇಲೆ ಮಾಡಿರುವ ಆರೋಪಗಳಿಗೆ ತಕ್ಕ ಉತ್ತರ ಕೊಡ್ತೀನಿ. ನಾನು ಬಿಟ್ಟು ಕೊಡಲ್ಲ, ಸರಿಯಾದ ಸಮಯ ಬಂದಾಗ ಮತ್ತೆ ವಾಪಾಸ್ ಬರ್ತೀನಿ ಎಂದಿದ್ದಾರೆ.

ಶ್ರೀದೇವಿ ಹೇಳಿದ್ದೇನು?

ಕಳೆದ 15 ದಿನಗಳಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜತೆ ಇದ್ದಾಗ ಖಾಸಗಿ ಬದುಕನ್ನ ಗೌರವಿಸಿದ್ದಕ್ಕೆ ಧನ್ಯವಾದ. ಕಳೆದ ದಶಕಗಳಿಂದ ನನ್ನ ಜತೆಯಾಗಿದ್ದ ಸ್ನೇಹಿತರ ಬಳಗ ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ದುರಾದೃಷ್ಟ. ಕಷ್ಟದ ಸಮಯದಲ್ಲಿ ನನ್ನ ಜತೆ ನಿಂತ ಸ್ನೇಹಿತರಿಗೆ, ಚಿತ್ರರಂಗದವರಿಗೆ ಧನ್ಯವಾದಗಳು ಎಂದು ಶ್ರೀದೇವಿ ಬರೆದುಕೊಂಡಿದ್ದಾರೆ.

ಮುಂದುವರಿದು, ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಂಬಿದ್ದೇನೆ ಹಾಗೂ ಅದಕ್ಕಾಗಿ ಹೋರಾಡುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ. ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನ ಶುರು ಮಾಡಿದ್ದೇನೆ. ಕಾಯಕವನ್ನ ಮುಂದುವರಿಸಲು ನಾನು ಅಮೆರಿಕಕ್ಕೆ ಹಿಂದಿರುಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುತ್ತೇನೆ ಹಾಗೂ ಇಲ್ಲಿನ ಕೆಲಸಗಳನ್ನ ಮುಂದುವರಿಸುತ್ತೇನೆ ಎಂದು ಶ್ರೀದೇವಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಬೆಚ್ಚಿ ಬಿದ್ದಿದ್ದ ಸ್ಯಾಂಡಲ್‌ವುಡ್‌

ಕೆಲವು ದಿನಗಳ ಹಿಂದೆ ರಾಜ್​ಕುಮಾರ್ ಕುಟುಂಬದ ಕುಡಿ ಯುವ ರಾಜ್‌ಕುಮಾರ್‌ ಅವರು ವಿಚ್ಛೇದನ ಪಡೆಯಲು ಮುಂದಾದಾಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬಿದ್ದಿತ್ತು. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು. ಕೋರ್ಟ್‌ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಿತ್ತು. 

2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಅಂದಹಾಗೆ ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ವಿನಯ್ ರಾಜ್ ಕುಮಾರ್ ಅಭಿನಯದ ರನ್ ಆಂಟನಿ ಸಿನಿಮಾದ ಪ್ರಚಾರದಲ್ಲೂ ಭಾಗಿಯಾಗಿದ್ದರು. ಇನ್ನೂ ಪವರ್ ಸ್ಟಾರ್‌ ಪುನೀತ್‌ ನಿಧನರಾದಾಗ ಮುಂದೆ ನಿಂತು ಸಾಕಷ್ಟು ಕೆಲಸಗಳು ಮಾಡಿದ್ದರು. ಕೆಲವು ದಿನಗಳಿಂದ ಇಬ್ಬರೂ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಇನ್ನೂ ಯುವ ಸಿನಿಮಾ ಪ್ರಚಾರದಲ್ಲಿ ಪತ್ನಿ ಶ್ರೀದೇವಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅವರು ಕಳೆದ ಆರೇಳು ತಿಂಗಳಿಂದ ದೊಡ್ಮನೆಯಿಂದ ದೂರಾಗಿದ್ದರು. ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. 

ಇದನ್ನೂ ಓದಿ: Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Continue Reading

ಸ್ಯಾಂಡಲ್ ವುಡ್

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Ashika Ranganath: ಪುಷ್ಪ 2 ಸಿನಿಮಾದ ಸೂಸೇನೆ ಹಾಡಿಗೆ ಆಶಿಕಾ ರಂಗನಾಥ್‌ ಅವರು ಹೆಜ್ಜೆ ಹಾಕಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ನವಿಲಿನಂತೆ ಹೆಜ್ಜೆ ಹಾಕಿರುವುದನ್ನು ನೋಡಿ ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಲ್ಕಿ ಬ್ಯೂಟಿ ಮಾಡಿದ ಡಾನ್ಸ್‌ನ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Ashika Ranganath
Koo

ಬೆಂಗಳೂರು: ಅಲ್ಲು ಅರ್ಜುನ್‌ (Allu Arjun) ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 (Pushpa 2) ಸಿನಿಮಾದ ಸೂಸೇನೆ ಹಾಡು ಎಲ್ಲರ ಮನೆಮಾತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಹಾಡು ವೈರಲ್‌ ಆಗುವ ಜತೆಗೆ ಯುವತಿಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಈ ಹಾಡಿಗೆ ಡಾನ್ಸ್‌ ಮಾಡಿದ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಅಷ್ಟರಮಟ್ಟಿಗೆ ಈ ಹಾಡು ಎಲ್ಲರ ಗಮನ ಸೆಳೆದಿದೆ. ಇದಕ್ಕೆ ನಿದರ್ಶನ ಎಂಬಂತೆ, ಸ್ಯಾಂಡಲ್‌ವುಡ್‌ನ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿಯಾದ, ನಟಿ ಆಶಿಕಾ ರಂಗನಾಥ್‌ (Ashika Ranganath) ಅವರು ಕೂಡ ಸೂಸೇನೆ ಹಾಡಿಗೆ ಡಾನ್ಸ್‌ ಮಾಡಿದ್ದಾರೆ. ಡಾನ್ಸ್‌ ಮಾಡಿದ ವಿಡಿಯೊವನ್ನು (Viral Video) ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಕೂಡ ವೈರಲ್‌ ಆಗಿದೆ.

ಸಾಂಪ್ರದಾಯಿಕ ಉಡುಗೆಯಲ್ಲಿ ಆಶಿಕಾ ರಂಗನಾಥ್‌ ಅವರು ಪುಷ್ಪ 2 ಹಾಡಿಗೆ ಹೆಜ್ಜೆ ಹಾಕಿದ್ದು, ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. “ನಾನು ಈ ಹಾಡಿಗೆ ತುಂಬ ತಡವಾಗಿ ಕುಣಿಯುತ್ತಿರಬಹುದು, ಆದರೆ, ನೀವು ನನ್ನ ನೃತ್ಯವನ್ನು ಇಷ್ಟಪಡುತ್ತೀರಿ ಎಂಬ ಭರವಸೆ ಇದೆ” ಎಂಬುದಾಗಿ ಆಶಿಕಾ ರಂಗನಾಥ್‌ ಅವರು ಬರೆದುಕೊಂಡಿದ್ದಾರೆ. ವಿಡಿಯೊಗೆ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, “ತುಂಬ ಚೆನ್ನಾಗಿ ಡಾನ್ಸ್‌ ಮಾಡಿದ್ದೀರಿ” ಎಂದಿದ್ದಾರೆ. ಇನ್ನೊಂದಿಷ್ಟು ಕಿಡಿಗೇಡಿಗಳು, “ನೀವು ರಶ್ಮಿಕಾ ಮಂದಣ್ಣ ಅವರಿಗಿಂತ ಚೆನ್ನಾಗಿ ಹೆಜ್ಜೆ ಹಾಕಿದ್ದೀರಿ” ಎಂದಿದ್ದಾರೆ.

ಪುಷ್ಪ 1 ಸಿನಿಮಾದ ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಫಿ ಇದೆ. ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಡಿಸೆಂಬರ್‌ 6ಕ್ಕೆ ಸಿನಿಮಾ ಬಿಡುಗಡೆ

ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ನಟನೆಯ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Continue Reading

ಸಿನಿಮಾ

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Kannada New Movie: ಈ ಹಿಂದೆ ‘ಡಬಲ್ ಇಂಜಿನ್’, ‘ಬಾಂಬೆ ಮಿಠಾಯಿ’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್ , ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.

VISTARANEWS.COM


on

Kannada New Movie Odo Odo Odo Kailash Kher
Koo

ಬೆಂಗಳೂರು: ಸ್ಯಾಂಡಲ್ ವುಡ್ ಉಪಾಧ್ಯಕ್ಷ (Kannada New Movie) ಚಿಕ್ಕಣ್ಣ ಸ್ನೇಹಿತರ ಜತೆಗೂಡಿನ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಶೇಕಡ 80 ರಷ್ಟು ಸಿನಿಮಾ ಕಾಡಿನಲ್ಲಿಯೇ ಸಾಗುತ್ತದೆ. ಅದಕ್ಕೇನೆ ಚಿತ್ರಕ್ಕೆ ʻಫಾರೆಸ್ಟ್ʼ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ʻಓಡೋ ಓಡೋʼ ಎಂದು ಶುರುವಾಗುವ ಹಾಡಿಗೆ ಪುನೀತ್ ಆರ್ಯ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದಾರೆ, ಖ್ಯಾತ ಗಾಯಕ ಕೈಲಾಸ್ ಖೇರ್ ಹಾಗೂ ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಧರ್ಮ ವಿಶ್ ಹಾಡಿಗೆ ಸಂಗೀತ ಒದಗಿಸಿದ್ದಾರೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ಫಸ್ಟ್Rank ರಾಜು, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ‘ಡಬಲ್ ಇಂಜಿನ್’, ‘ಬಾಂಬೆ ಮಿಠಾಯಿ’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್ , ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Ram Charan: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಸಿನಿಮಾ!

‘ಫಾರೆಸ್ಟ್’ ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಎಂಬುವವರು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ. ಧರ್ಮವೀರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿರುವ ಚಿತ್ರತಂಡ, ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಫಾರೆಸ್ಟ್ ಚಿತ್ರತಂಡ ಆಗಸ್ಟ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

Continue Reading
Advertisement
Team India
ಕ್ರೀಡೆ3 mins ago

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ3 mins ago

Dengue Fever: ಹಾಸನ ಜಿಲ್ಲೆಯಲ್ಲಿ ಮೂರು ಮಕ್ಕಳ ಬಲಿ ಪಡೆದ ಜ್ವರ; ಡೆಂಗ್ಯು ಮರಣ ಮೃದಂಗ?

Varalaxmi Sarathkumar Reception attend By sudeep Family
ಸ್ಯಾಂಡಲ್ ವುಡ್32 mins ago

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

fraud case bagepalli
ಕ್ರೈಂ38 mins ago

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Suryakumar Yadav
ಕ್ರೀಡೆ39 mins ago

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Kalki 2898 AD records global box office collection
ಟಾಲಿವುಡ್53 mins ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Dengue Fever In Children
ಆರೋಗ್ಯ57 mins ago

Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

Teachers Transfer
ಶಿಕ್ಷಣ59 mins ago

Teachers Transfer: 10 ವರ್ಷ ಒಂದೇ ಕಡೆ ಇದ್ದ 5,000 ಶಿಕ್ಷಕರ ವರ್ಗಾವಣೆ

Death Penalty
ದೇಶ1 hour ago

Death Penalty: 34 ಕೋಟಿ ರೂ. ದಂಡ ಪಾವತಿ; ಸೌದಿ ಅರೇಬಿಯಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳದ ವ್ಯಕ್ತಿಗೆ ಕೊನೆಗೂ ಬಿಡುಗಡೆ ಭಾಗ್ಯ

board exam
ಪ್ರಮುಖ ಸುದ್ದಿ1 hour ago

Board Exam: ಈ ವರ್ಷ 5, 8, 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಇಲ್ಲ: ಶಿಕ್ಷಣ ಇಲಾಖೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌