MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ - Vistara News

ಕ್ರೀಡೆ

MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

MS Dhoni Instagram Post: 2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಭಾರತ ಯಾವುದೇ ಕಪ್​ ಗೆದ್ದಿಲ್ಲ. 2014ರಲ್ಲಿ ಧೋನಿ ನಾಯಕತ್ವದಲ್ಲಿ ಫೈನಲ್​ ಪ್ರವೇಶಿಸಿದ್ದರೂ ಕೂಡ ಶ್ರೀಲಂಕಾ ವಿರುದ್ಧ ಸೋಲು ಕಂಡು ರನ್ನರ್ ಅಪ್​ ಆಗಿತ್ತು. ಇದೀಗ ರೋಹಿತ್​ ಕಪ್​ ಗೆಲ್ಲುವ ಮೂಲಕ ಭಾರತ ತಂಡ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಂಚಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup 2024)​ ಗೆದ್ದ ಟೀಮ್​ ಇಂಡಿಯಾಕ್ಕೆ, ಚೊಚ್ಚಲ ಟಿ20 ವಿಶ್ವಕಪ್(T20 World Cup Win)​ ಗೆದ್ದ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ವಿಶೇಷವಾಗಿ ಶುಭ ಹಾರೈಸಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಮುಂಚಿತವಾಗಿಯೇ ಸ್ಮರಣೀಯ ಉಡುಗೊರೆ ನೀಡಿದ್ದಕ್ಕೆ ಟೀಮ್​ ಇಂಡಿಯಾಕ್ಕೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಮ್(MS Dhoni Instagram Post)​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಚಾಂಪಿಯನ್​ ತಂಡದ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಧೋನಿ, ನನ್ನ ಎದೆ ಬಡಿತ ಹೆಚ್ಚಾಗಿತ್ತು. ಆದರೆ ದೃಢ ನಂಬಿಕೆಯೊಂದಿಗೆ ನೀವೆಲ್ಲರೂ ಉತ್ತಮವಾಗಿ ಆಡಿದ್ದೀರಿ. ತವರಿನ ಮತ್ತು ವಿಶ್ವದೆಲ್ಲಡೆ ಇರುವ ಎಲ್ಲಾ ಭಾರತೀಯರಿಂದ, ವಿಶ್ವಕಪ್ ಮರಳಿ ಮನೆಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅಭಿನಂದನೆಗಳು. ಜತೆಗೆ ನನ್ನ ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು” ಎಂದು ಧೋನಿ ಬರೆದುಕೊಂಡಿದ್ದಾರೆ. ಧೋನಿ ಅವರ ಜನ್ಮ ದಿನ ಜುಲೈ 7. 43ನೇ ವರ್ಷಕ್ಕೆ ಕಾಲಿಡುತ್ತಿರುವ ಧೋನಿಗೆ ಈ ಗೆಲುವು ಅಮೂಲ್ಯ ಉಡುಗೊರ ಎಂದು ಧೋನಿ ಭಾವಿಸಿದ್ದಾರೆ.

2007ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ ಭಾರತ ಯಾವುದೇ ಕಪ್​ ಗೆದ್ದಿಲ್ಲ. 2014ರಲ್ಲಿ ಧೋನಿ ನಾಯಕತ್ವದಲ್ಲಿ ಫೈನಲ್​ ಪ್ರವೇಶಿಸಿದ್ದರೂ ಕೂಡ ಶ್ರೀಲಂಕಾ ವಿರುದ್ಧ ಸೋಲು ಕಂಡು ರನ್ನರ್ ಅಪ್​ ಆಗಿತ್ತು. ಇದೀಗ ರೋಹಿತ್​ ಕಪ್​ ಗೆಲ್ಲುವ ಮೂಲಕ ಭಾರತ ತಂಡ 17 ವರ್ಷಗಳ ಬಳಿಕ ಮತ್ತೊಂದು ಟಿ20 ವಿಶ್ವಕಪ್​ ಗೆದ್ದ ಸಾಧನೆ ಮಾಡಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಎಸೆದರು. ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Team India: ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ ಆಟಗಾರರು ದೆಹಲಿಗೆ ಆಗಮಿಸಿದ್ದಾರೆ. ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು.

VISTARANEWS.COM


on

Team India
Koo

ನವದೆಹಲಿ: ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ (Rohit Sharma) ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು. ಭಾರತೀಯ ಪತ್ರಕರ್ತರು, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ವಿಮಾನದಲ್ಲಿದ್ದರು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ವಿಮಾನ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದರು.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿದೆ.

Continue Reading

ಕ್ರಿಕೆಟ್

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

Team India: ಟಿ-20 ವಿಶ್ವಕಪ್‌ನಲ್ಲಿ ಪರಾಕ್ರಮ ಮೆರೆದು, ಚಾಂಪಿಯನ್‌ ಎನಿಸಿರುವ ಭಾರತ ತಂಡದ ಆಟಗಾರರು ಗುರುವಾರ ಬೆಳಗ್ಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಆನ್‌ಲೈನ್‌ ಮೂಲಕ ಈ ಫ್ಲೈಟ್‌ಅನ್ನು ಅಂದರೆ, ಫ್ಲೈಟ್‌ರೆಡಾರ್‌24. ಮೂಲಕ ಟ್ರ್ಯಾಕ್‌ ಮಾಡಲಾಗುತ್ತಿದೆ. ಇದು ಕೂಡ ಈಗ ದಾಖಲೆ ಎನಿಸಿದೆ.

VISTARANEWS.COM


on

Team India
Koo

ನವದೆಹಲಿ: ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ (Rohit Sharma) ನೇತೃತ್ವದ ಭಾರತ ತಂಡವು ಭಾರತಕ್ಕೆ ಆಗಮಿಸುತ್ತಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ದೆಹಲಿಗೆ ಆಗಮಿಸುತ್ತಿದ್ದು, ಈ ಫ್ಲೈಟ್‌ಅನ್ನು ಹೆಚ್ಚಿನ ಜನ ಟ್ರ್ಯಾಕ್‌ ಮಾಡುತ್ತಿರುವುದು ಕೂಡ ಒಂದು ದಾಖಲೆಯಾಗಿದೆ. ಸದ್ಯದ ಮಟ್ಟಿಗೆ ಅತಿ ಹೆಚ್ಚು ಜನ ಫ್ಲೈಟ್‌ರೆಡಾರ್‌24.ನಲ್ಲಿ (Flightradar24.) ಏರ್‌ ಇಂಡಿಯಾ ವಿಶೇಷ ವಿಮಾನವನ್ನೇ ಟ್ರ್ಯಾಕ್‌ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಟಿ-20 ವಿಶ್ವಕಪ್‌ನಲ್ಲಿ ಪರಾಕ್ರಮ ಮೆರೆದು, ಚಾಂಪಿಯನ್‌ ಎನಿಸಿರುವ ಭಾರತ ತಂಡದ ಆಟಗಾರರು ಗುರುವಾರ ಬೆಳಗ್ಗೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಆನ್‌ಲೈನ್‌ ಮೂಲಕ ಈ ಫ್ಲೈಟ್‌ಅನ್ನು ಅಂದರೆ, ಫ್ಲೈಟ್‌ರೆಡಾರ್‌24. ಮೂಲಕ ಟ್ರ್ಯಾಕ್‌ ಮಾಡಲಾಗುತ್ತಿದೆ. ಫ್ಲೈಟ್‌ರೆಡಾರ್‌24. ವರದಿ ಪ್ರಕಾರ, ಸರಿ ಸುಮಾರು 5,252 ಜನರು ಫ್ಲೈಟ್‌ರೆಡಾರ್‌24.ನಲ್ಲಿ ಏರ್‌ ಇಂಡಿಯಾ ವಿಶೇಷ ವಿಮಾನವನ್ನು ಟ್ರ್ಯಾಕ್‌ ಮಾಡುತ್ತಿದ್ದಾರೆ. ಇದು ಅತಿ ಹೆಚ್ಚು ಜನ ಟ್ರ್ಯಾಕ್‌ ಮಾಡುತ್ತಿರುವ ಫ್ಲೈಟ್‌ ಆಗಿದೆ ಫ್ಲೈಟ್‌ರೆಡಾರ್‌24. ತಿಳಿಸಿದೆ.

ರಾಜಮಾರ್ಗ ಅಂಕಣ virat kohli rohit sharma

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳುತ್ತಿದೆ. ದೆಹಲಿಗೆ ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಬರಲಿರುವ ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ: Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

Continue Reading

ಕ್ರೀಡೆ

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

T20 World Cup Winners: ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Team India
Koo

ನವದೆಹಲಿ: ಚಾರ್ಟರ್​ ಪ್ಲೈಟ್​ ಮೂಲಕ ಬುಧವಾರ ಬಾರ್ಬಡೋಸ್​ನಿಂದ ಹೊರಟಿರುವ ಟಿ20 ವಿಶ್ವಕಪ್​ ವಿಜೇತ(T20 World Cup Winners) ಟೀಮ್ ಇಂಡಿಯಾ(Team India) ನಾಳೆ(ಗುರುವಾರ) ನವದೆಹಲಿ ತಲುಪಲಿದೆ. ತವರಿಗೆ ಬಂದಿಳಿದ ಆಟಗಾರರನ್ನು ಮುಂಬೈನಲ್ಲಿ ತೆರೆದ ಬಸ್​ನಲ್ಲಿ ಸಂಜೆ 4 ಗಂಟೆಗೆ ರೋಡ್​ ಶೋ ಮೂಲಕ ಭವ್ಯ ಸ್ವಾಗತ ಕೋರಲು(VICTORY PARADE IN MUMBA) ಸಿದ್ಧತೆ ನಡೆಸಲಾಗಿದೆ.​ ಜತೆಗೆ ಪ್ರಧಾನಿ ಮೋದಿ ಅವರು ಟೀಮ್​ ಇಂಡಿಯಾ ಆಟಗಾರರನ್ನು ಸನ್ಮಾನಿಸಲಿದ್ದಾರೆ ಎಂದು ವರದಿಯಾಗಿದೆ.

ಬಿಸಿಸಿಐ ವ್ಯವಸ್ಥೆ ಮಾಡಿರುವ ವಿಶೇಷ ವಿಮಾನದಲ್ಲಿ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಭಾರತಕ್ಕೆ ಮರಳಲಿದ್ದಾರೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು. ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೇ ಬಾರ್ಬಡಾಸ್‌ನಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿತ್ತು. ಜತೆಗೆ ವಿಮಾನ ನಿಲ್ದಾಣಗಳು ಬಂದ್‌ ಆಗಿತ್ತು. ಹೀಗಾಗಿ ಭಾರತ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿತ್ತು.

ಇದನ್ನೂ ಓದಿ T20 World Cup 2024: ಟಿ-20 ಸ್ವಯಂವರದ ಮಂಟಪದಲ್ಲಿ ವಿಶ್ವಸುಂದರಿಗೆ ಮಾಲೆ ತೊಡಿಸಿದ ರೋಹಿತ್ ಬಳಗ

ಶನಿವಾರ ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ. ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

Continue Reading

ಕ್ರೀಡೆ

Hardik Pandya: ಆಲ್​ರೌಂಡರ್​ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ ಹಾರ್ದಿಕ್​ ಪಾಂಡ್ಯ

Hardik Pandya: ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ.

VISTARANEWS.COM


on

Hardik Pandya
Koo

ದುಬೈ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಭಾರತ ತಂಡ ವಿಶ್ವಕಪ್​ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಾರ್ದಿಕ್​ ಪಾಂಡ್ಯ(222 ರೇಟಿಂಗ್​ ಅಂಕ) ಅವರು ನೂತನ ಐಸಿಸಿ ಟಿ20 ಆಲ್​ರೌಂಡರ್​ ಶ್ರೇಯಾಂಕದಲ್ಲಿ(T20I all-rounder) ಅಗ್ರಸ್ಥಾನಕ್ಕೇರಿದ್ದಾರೆ.

ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಂಡ್ಯ(Hardik Pandya) ಒಟ್ಟು 144 ರನ್​ ಮತ್ತು 11 ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಅದರಲ್ಲೂ ಫೈನಲ್​ನಲ್ಲಿ ಸೋಲಿನ ಭೀತಿಯಲ್ಲಿದ್ದ ಭಾರತಕ್ಕೆ ಅಪಾಯಕಾರಿ ಕ್ಲಾಸೆನ್​ ಮತ್ತು ಮಿಲ್ಲರ್​ ವಿಕೆಟ್​ ಭೇಟೆಯಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಎಲ್ಲ ಪ್ರದರ್ಶನದ ಫಲವಾಗಿ ಅವರು ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಲಂಕಾದ ವನಿಂದು ಹಸರಂಗ ಕೂಡ 222 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಪಡೆದರು.

ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಯಾವುದೇ ಮಹತ್ವದ ಬದಲಾವಣೆ ಸಂಭವಿಸಿಲ್ಲ. ಈ ಹಿಂದೆ ಇದ್ದಂತೆ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಅಗ್ರಸ್ಥಾನ, ಸೂರ್ಯಕುಮಾರ್ ಯಾದವ್​ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಆದರೆ ಬೌಲಿಂಗ್​ ಶ್ರೇಯಾಂಕದಲ್ಲಿ ದಕ್ಷಿಣ ಆಫ್ರಿಕಾದ ಅನ್ರಿಚ್​ ನೋರ್ಜೆ ಬರೋಬ್ಬರಿ 7 ಸ್ಥಾನಗಳ ಪ್ರಗತಿ ಸಾಧಿಸಿ 2ನೇ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್​ ಸ್ಪಿನ್ನರ್​ ಆದೀಲ್​ ರಶೀದ್​ ಮೊದಲ ಸ್ಥಾನಿಯಾಗಿದ್ದಾರೆ. ಭಾರತೀಯ ಬೌಲರ್​ಗಳಾದ ಅಕ್ಷರ್​ ಪಟೇಲ್​ 7ನೇ, ಕುಲ್​ದೀಪ್​ ಯಾದವ್​ 8ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ಟಾಪ್​-5 ಆಲ್​ರೌಂಡರ್​ಗಳು


1. ಹಾರ್ದಿಕ್​ ಪಾಂಡ್ಯ- 222 ರೇಟಿಂಗ್​ ಅಂಕ

2. ವನಿಂದು ಹಸರಂಗ-222 ರೇಟಿಂಗ್​ ಅಂಕ

3. ಮಾರ್ಕಸ್​ ಸ್ಟೋಯಿನಿಸ್​-211 ರೇಟಿಂಗ್​ ಅಂಕ

4. ಸಿಕಂದರ್​ ರಾಜಾ-210 ರೇಟಿಂಗ್​ ಅಂಕ

5. ಶಕೀಬ್​ ಅಲ್​ ಹಸನ್​-206 ರೇಟಿಂಗ್​ ಅಂಕ


ಟಿ20 ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ, ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿತ್ತು. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading
Advertisement
Yuva Rajkumar
ಸಿನಿಮಾ6 mins ago

Yuva Rajkumar: ಅಮೆರಿಕಕ್ಕೆ ಮರಳಿದ ಶ್ರೀದೇವಿ ಭೈರಪ್ಪ; ಡಿವೋರ್ಸ್ ಕಥೆ ಏನಾಯ್ತು?

Rakshit Shetty Richard Anthony Produce By Hombale
ಆರೋಗ್ಯ12 mins ago

Health Tips: ಮಧ್ಯಾಹ್ನದ ನಂತರ ಏನಾದರು ಸಿಹಿತಿನಿಸು ತಿನ್ನಬೇಕು ಅನಿಸುತ್ತಿದೆಯೆ? ಇದಕ್ಕೂ ಇದೆ ಕಾರಣ

actor darshan vijayalakshmi pavitra gowda
ಕ್ರೈಂ16 mins ago

Actor Darshan: ಪವಿತ್ರಾ ಗೌಡ ಮತ್ತು ದರ್ಶನ್‌ ಸಂಬಂಧ ಅದಲ್ಲ: ಕಮಿಷನರ್‌ಗೆ ಪತ್ರ ಬರೆದ ವಿಜಯಲಕ್ಷ್ಮಿ

Deepfake Video
ತಂತ್ರಜ್ಞಾನ27 mins ago

Deepfake Video: ಡೀಪ್‌ ಫೇಕ್‌ ವಿಡಿಯೊ ಹಾವಳಿ; ಅಸಲಿಯೋ ನಕಲಿಯೋ ಎಂದು ಗುರುತಿಸುವುದು ಹೇಗೆ?

parappana agrahara mobile sale
ಕ್ರೈಂ42 mins ago

Parappana Agrahara: ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲು ಸಾಗಿಸುತ್ತಿದ್ದ ಕೈದಿ; 2 ಫೋನ್‌ ಎಲ್ಲಿಟ್ಟುಕೊಂಡಿದ್ದ ಗೊತ್ತಾ?

Team India
ಕ್ರೀಡೆ50 mins ago

Team India: ಭಾರತಕ್ಕೆ ಬಂದಿಳಿದ ಟೀಮ್‌ ಇಂಡಿಯಾ; ವಿಶ್ವಕಪ್‌ ಹೀರೋಗಳಿಗೆ ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Safe Drive Tips
ಆಟೋಮೊಬೈಲ್1 hour ago

Safe Drive Tips: ಜೀವ ಅಮೂಲ್ಯ; ಕಾರು ಓಡಿಸುವಾಗ ಈ ಸಂಗತಿಗಳನ್ನು ಮರೆಯಬೇಡಿ!

Karnataka Weather
ಮಳೆ2 hours ago

Karnataka Weather: ಇಂದು ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾನೆ ವರುಣ!

Viral Video
Latest2 hours ago

Viral Video: 34 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಕಾಶ್ಮೀರಿ ಪಂಡಿತ; ಪಾಳುಬಿದ್ದ ಮನೆ ನೋಡಿ ಭಾವುಕ

Credit Card New Rules
ವಾಣಿಜ್ಯ2 hours ago

Credit Card New Rules: ಕ್ರೆಡಿಟ್ ಕಾರ್ಡ್‌ಗೆ ಹೊಸ ನಿಯಮ; ಗ್ರಾಹಕರು ಈಗ ಏನು ಮಾಡಬೇಕು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌