Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ! - Vistara News

ಬಾಲಿವುಡ್

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli: ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

VISTARANEWS.COM


on

Virat Kohli video calls Anushka Sharma after winning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Salman Khan: ಸಲ್ಮಾನ್ ಖಾನ್ ಹೊಸ ಲುಕ್‌ ವೈರಲ್‌: ‘ಸಿಕಂದರ್’ಗೆ ಫ್ಯಾನ್ಸ್‌ ಫಿದಾ!

Salman Khan: ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

VISTARANEWS.COM


on

Salman Khan shares new pic from for Sikandar
Koo

ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ಬುಧವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದಾರೆ. ಸರಳವಾದ ಕಪ್ಪು ಟೀ ಶರ್ಟ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದರು. ನಟನ ಹೊಸ ಲುಕ್‌ ಕಂಡು ಅಭಿಮಾನಿಗಳು ಪ್ರತಿಕ್ರಿಯಿಸಿ ಪ್ರೀತಿಯ ಸುರಿಮಳೆಗೈದರು. ‘ಸಿಕಂದರ್’ ಚಿತ್ರೀಕರಣದಲ್ಲಿ ನಿರತರಾಗಿರುವ ಸಲ್ಮಾನ್, “ಗ್ರೀನ್ ಜೋನ್” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

ಈ ಹಿಂದೆ, ‘ಸಿಕಂದರ್’ ಸೆಟ್‌ನಿಂದ ಕೆಲವು ಫೋಟೊಗಳು ಲೀಕ್‌ ಆಗಿದ್ದವು. ಜೂನ್ 19 ರಂದು ‘ಸಿಕಂದರ್’ ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರದಲ್ಲಿ ಸಲ್ಮಾನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ಈ ಹಿಂದೆ ಸಿನಿಮಾ ಈದ್ 2025ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಪೋಸ್ಟರ್‌ ಜತೆ ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಇದನ್ನೂ ಓದಿ: Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ತಮಿಳು ಮತ್ತು ಹಿಂದಿಯ ʼಘಜನಿʼ, ತಮಿಳಿನ ʼ7 ಆಮ್ ಅರಿವುʼ, ʼತುಪಾಕಿʼ, ʼಕತ್ತಿʼ, ʼದರ್ಬಾರ್‌ʼ, ಹಿಂದಿಯ ʼಹಾಲಿ ಡೇʼ, ತೆಲುಗಿನ ʼಸ್ಪೈಡರ್‌ʼ ಮುಂತಾದ ಹಿಟ್‌ ಚಿತ್ರಗಳಿಗೆ ಆ್ಯಕ್ಷನ್‌ ಕಟ್‌ ಹೇಳಿದ್ದ ಎ.ಆರ್‌.ಮುರುಗದಾಸ್‌ ಸುಮಾರು 8 ವರ್ಷಗಳ ಬಳಿಕ ಸಲ್ಮಾನ್‌ ಚಿತ್ರದ ಮೂಲಕ ಬಾಲಿವುಡ್‌ಗೆ ಮತ್ತೆ ಕಾಲಿಡುತ್ತಿದ್ದಾರೆ. ಮೊದಲ ಬಾರಿ ಮುರುಗದಾಸ್‌ ಅವರು ಸಲ್ಮಾನ್‌ ಖಾನ್‌ ಚಿತ್ರವನ್ನು ನಿರ್ದೇಶಿಸುತ್ತಿರುವುದು ಕೂಡ ವಿಶೇಷವೆನಿಸಿದೆ.

Continue Reading

ಬಾಲಿವುಡ್

Munjya Movie: ಸ್ಟಾರ್​ ಕಲಾವಿದರೇ ಇಲ್ಲದೇ ಬರೋಬ್ಬರಿ 100 ಕೋಟಿ ರೂ. ಗಳಿಕೆ ಕಂಡ ʻಮುಂಜ್ಯʼ!

Munjya Movie: ಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿತ್ತು. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿತ್ತು.

VISTARANEWS.COM


on

Munjya Movie Box Office Collection Rs 100 Cr
Koo

ಬೆಂಗಳೂರು: ಅಭಯ್ ವರ್ಮಾ ಮತ್ತು ಶಾರ್ವರಿ ಅಭಿನಯದ ಹಾರರ್-ಕಾಮಿಡಿ ಚಲನಚಿತ್ರ ʻಮುಂಜ್ಯʼ ಜೂನ್ 7 ರಂದು ತೆರೆ ಕಂಡಿತ್ತು. ಸ್ಟಾರ್​ ಕಲಾವಿದರೇ ಇಲ್ಲದ ಸಿನಿಮಾವೊಂದು ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಗಮನ ಸೆಳೆದಿದೆ. ಪ್ರಭಾಸ್​ ನಟನೆಯ ‘ಕಲ್ಕಿ 2898 ಎಡಿ’ (Munjya Movie) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಹಿಂದಿ ಪ್ರೇಕ್ಷಕರ ವಲಯದಲ್ಲಿ ಕೂಡ ಈ ಸಿನಿಮಾ ಸದ್ದು ಮಾಡುತ್ತಿವೆ. ಬಹುತೇಕ ಚಿತ್ರಮಂದಿಗಳನ್ನು ‘ಕಲ್ಕಿ 2898 ಎಡಿ’ ಆವರಿಸಿಕೊಂಡಿದೆ. ಹಾಗಾಗಿ ಈ ಸಿನಿಮಾ ಬಿಡುಗಡೆ ಆದ ನಂತರ ‘ಮುಂಜ್ಯ’ ಕಲೆಕ್ಷನ್​ ಕುಸಿದಿದೆ.

ಇದು ಭಾರತದ ಮೊದಲ CGI ನಾಯಕನನ್ನು ಒಳಗೊಂಡಿರುವ ಸಿನಿಮಾ ಎಂದು. (first computer generated actor) . ಸಿನಿಮಾ ಬಿಡುಗಡೆ ಮುಂಚೆ ಟೀಸರ್‌ ಬಿಡುಗಡೆಯಾಗಿದ್ದರೂ ಅಷ್ಟಾಗಿ ಸದ್ದು ಮಾಡಿರಲಿಲ್ಲ. ಯಾವಾಗ ಥಿಯೇಟರ್‌ನಲ್ಲಿ ರಿಲೀಸ್‌ ಆಯ್ತೋ ಸಿನಿಮಾ ಒಳ್ಳೆಯ ಕಲೆಕ್ಷನ್‌ ಮಾಡಿದೆ.

`ಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿತ್ತು. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿತ್ತು. ʻಮುಂಜ್ಯಾʼ ನಗರಕ್ಕೆ ಪ್ರವೇಶಿಸುವ , ಹಾಗೇ ಟಿವಿ ನೋಡುತ್ತಿದ್ದವ ಏಕಾಏಕಿ ಟಿವಿ ಆಫ್‌ ಮಾಡುವಾಗ ಕೋಪಗೊಂಡ ʻಮುಂಜ್ಯಾʼ ಕೋಣೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸುವ ಸನ್ನಿವೇಶ ಟೀಸರ್‌ನಲ್ಲಿತ್ತು. ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇತ್ತು.

ಇದನ್ನೂ ಓದಿ: Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

ಮುಂಜ್ಯ’ ಸಿನಿಮಾಗೆ ಮೊದಲ ದಿನ 4.21 ಕೋಟಿ ರೂಪಾಯಿ ಕಲೆಕ್ಷನ್​ ಆಗಿತ್ತು. ಎರಡನೇ ದಿನ 7.40 ಕೋಟಿ ರೂಪಾಯಿ ಗಳಿಕೆ ಆಯಿತು. ಮೂರನೇ ದಿನ 8.43 ಕೋಟಿ ರೂಪಾಯಿ ಹರಿದುಬಂತು. ನಂತರ ಪ್ರತಿ ದಿನ 3 ಅಥವಾ 4 ಕೋಟಿ ರೂಪಾಯಿ ಗಳಿಸುತ್ತಾ ಈ ಸಿನಿಮಾ ಮುನ್ನುಗ್ಗಿತು. ನಂತರದ ವಾರಾಂತ್ಯದಲ್ಲಿ ಕಲೆಕ್ಷನ್​ ಹೆಚ್ಚಾಯಿತು. 25 ದಿನಗಳ ಯಶಸ್ವಿ ಪ್ರದರ್ಶನ ಕಂಡು ಈ ಸಿನಿಮಾದ ಒಟ್ಟು ಕಲೆಕ್ಷನ್​ 100 ಕೋಟಿ ರೂಪಾಯಿ ಮೀರಿತ್ತು.

ಮುಂಜ್ಯ ಚಿತ್ರವನ್ನು ಆದಿತ್ಯ ಸರ್ಪೋತದಾರ್ ನಿರ್ದೇಶಿಸಿದ್ದಾರೆ ಮತ್ತು ಶಾರ್ವರಿ, ಅಭಯ್ ವರ್ಮಾ, ಮೋನಾ ಸಿಂಗ್ ಮತ್ತು ಬಾಹುಬಲಿ ಚಲನಚಿತ್ರ ಖ್ಯಾತಿಯ ಸತ್ಯರಾಜ್ ಅವರ ಸಮಗ್ರ ತಾರಾಗಣವನ್ನು ಒಳಗೊಂಡಿದೆ. ನಿರೇನ್ ಭಟ್ ಅವರ ಚಿತ್ರಕಥೆ, ಯೋಗೇಶ್ ಚಂಡೇಕರ್ ಸಂಭಾಷಣೆ ಇದೆ. ಸಚಿನ್-ಜಿಗರ್ ಸಂಗೀತ ಸಂಯೋಜಿಸಿದ್ದಾರೆ. ಅಮಿತಾಭ್‌ ಭಟ್ಟಾಚಾರ್ಯ ಸಾಹಿತ್ಯ ಇದೆ. ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣದ ಮುಂಜ್ಯವನ್ನು ದಿನೇಶ್ ವಿಜನ್ ಮತ್ತು ಅಮರ್ ಕೌಶಿಕ್ ನಿರ್ಮಿಸಿದ್ದಾರೆ.  ಇದೀಗ ಕಲ್ಕಿ ಬಿಡುಗಡೆಯಾದ ಕಾರಣ ಸಿನಿಮಾ ಕಲೆಕ್ಷನ್‌ನಲ್ಲಿ ಭಾರಿ ಹೊಡೆತ ಬಿದ್ದಿದಂತಾಗಿದೆ.

Continue Reading

ಸಿನಿಮಾ

Highest Collection Movie: ಅತೀ ಹೆಚ್ಚು ಗಳಿಕೆ ದಾಖಲಿಸಿದ ಭಾರತದ ಟಾಪ್‌ 10 ಸಿನಿಮಾಗಳಿವು

Highest Collection Movie: ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Highest Collection Movie
Koo

ಭಾರತೀಯ ಸಿನಿಮಾ (Indian Movies) ರಂಗದಲ್ಲಿ ಬಾಲಿವುಡ್ (Highest Collection Movie) ದಾಖಲೆಗಳು ನಿರಂತರವಾಗಿವೆ. ಹಲವಾರು ಚಿತ್ರಗಳು ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಕೆಯನ್ನು ಪಡೆದಿವೆ. ದಂಗಲ್‌ (Dangal), ಜವಾನ್ (Jawan), ಪಠಾಣ್ (Pathaan), ಬಜರಂಗಿ ಭಾಯಿಜಾನ್ (Bajrangi Bhaijaan), ಸೀಕ್ರೆಟ್ ಸೂಪರ್‌ಸ್ಟಾರ್ (Secret Superstar), ಪಿಕೆ (PK) ಈ ಚಿತ್ರಗಳು ತೆರೆಗೆ ಬಂದು ಹತ್ತು ವರ್ಷಗಳೇ ಕಳೆದರೂ ಇಂದಿಗೂ ಬಹುತೇಕ ಮಂದಿಯ ಮೆಚ್ಚಿನ ಚಿತ್ರವಾಗಿ ಉಳಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಕೆಲವು ಚಿತ್ರಗಳು ಗಳಿಕೆಯಲ್ಲಿ ವಿಶ್ವ ದಾಖಲೆಯನ್ನೇ ಮಾಡಿದೆ. ಅದರಲ್ಲಿ ಅತಿ ಹೆಚ್ಚು ಗಳಿಕೆಯನ್ನು ಮಾಡಿ ಗಲ್ಲಾ ಪೆಟ್ಟಿಗೆಯಲ್ಲಿ (box office) ದಾಖಲೆ ಬರೆದಿರುವ ಹತ್ತು ಸಿನಿಮಾಗಳನ್ನು ಇಂದಿಗೂ ಹಲವು ಮಂದಿ ಪದೇ ಪದೇ ನೋಡುತ್ತಿರುತ್ತಾರೆ. ಆ ಚಿತ್ರಗಳು ಯಾವುದು, ಗಳಿಕೆ ಎಷ್ಟಾಗಿತ್ತು ಎನ್ನುವ ಮಾಹಿತಿ ಇಲ್ಲಿದೆ.

1. ದಂಗಲ್

ಕುಸ್ತಿ ಪಟುಗಳಾದ ಗೀತಾ ಫೋಗಟ್ ಮತ್ತು ಬಬಿತಾ ಫೋಗಟ್ ಅವರ ಜೀವನಾಧಾರಿತ ಚಿತ್ರದಲ್ಲಿ ಮಹಾವೀರ್ ಸಿಂಗ್ ಪಾತ್ರಧಾರಿಯಾಗಿ ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. 2016ರಲ್ಲಿ ತೆರೆಗೆ ಬಂದ ಈ ಚಿತ್ರ 30 ಕೋಟಿ ರೂ. ಬಜೆಟ್‌ನದ್ದಾಗಿದ್ದು, ವಿಶ್ವಾದ್ಯಂತ ಗಲ್ಲಾ ಪೆಟ್ಟಿಗೆಯಲ್ಲಿ 2,024 ಕೋಟಿ ರೂ. ಗಳಿಸಿ ದಾಖಲೆ ಬರೆದು ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಆದಾಯಗಳಿಸಿದ ಸಿನೆಮಾ ಎಂಬ ಖ್ಯಾತಿಯನ್ನು ಪಡೆದಿದೆ. ಅದರಲ್ಲೂ ಚೀನಾದಲ್ಲಿ ಈ ಸಿನಿಮಾ ಅತಿ ಹೆಚ್ಚು ಆದಾಯವನ್ನು ಗಳಿಸಿದ ಅನ್ಯ ಭಾಷೆಯ ಮೂರನೇ ಸಿನಿಮಾ ಇದು ಎನ್ನುವ ಖ್ಯಾತಿಯೂ ʼದಂಗಲ್ʼ ಚಿತ್ರದ್ದಾಗಿದೆ.


2. ಬಾಹುಬಲಿ 2

ಪ್ರಭಾಸ್ ಅಭಿನಯದ ‘ಬಾಹುಬಲಿ 2’ ಚಿತ್ರ 2012ರಲ್ಲಿ ತೆರೆಗೆ ಬಂದಿದ್ದು, ಎಸ್.ಎಸ್. ರಾಜಮೌಳಿ ಮತ್ತು ವಿ. ವಿಜಯೇಂದ್ರ ಪ್ರಸಾದ್ ಬರೆದು ನಿರ್ದೇಶಿಸಿದ್ದಾರೆ. 250 ಕೋಟಿ ರೂ. ಬಜೆಟ್ ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,810.60 ಕೋಟಿ ರೂ. ಆದಾಯ ಗಳಿಸಿ ದಾಖಲೆ ಬರೆದಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಿರುವ ಚಿತ್ರ ಎಂಬ ಖ್ಯಾತಿ ಈ ಸಿನೆಮಾದ್ದಾಗಿದೆ. ಚಿತ್ರ ಬಿಡುಗಡೆಯಾದ ಮೊದಲ ಆರು ದಿನದಲ್ಲಿ 789 ಕೋಟಿ ರೂ. ಗಳಿಸಿರುವುದು ಮಾತ್ರವಲ್ಲ 10 ದಿನದಲ್ಲಿ 1 ಸಾವಿರ ಕೋಟಿ ರೂ. ಆದಾಯ ಪಡೆದ ಸಿನೆಮಾ ಇದಾಗಿದೆ.


3. ಆರ್ ಆರ್ ಆರ್

ರಾಮ್ ಚರಣ್ ಮತ್ತು ಜ್ಯೂ. ಎನ್ ಟಿ ಆರ್ ಅಭಿನಯದ ಆರ್ ಆರ್ ಆರ್ ಚಿತ್ರ 2022ರಲ್ಲಿ ತೆರೆಗೆ ಬಂದಿದ್ದು, 550 ಕೋಟಿ ರೂ. ಬಜೆಟ್ ನದ್ದಾಗಿದೆ. ಅತ್ಯಂತ ದುಬಾರಿ ಖರ್ಚು ಮಾಡಿ ನಿರ್ಮಿಸಿರುವ ಈ ಚಿತ್ರ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ 405.9 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ 1,387.26 ಕೋಟಿ ರೂ. ಆದಾಯ ಗಳಿಸಿದೆ. ಭಾರತದಲ್ಲಿ ಮೂರನೇ ಅತಿ ಹೆಚ್ಚು ಆದಾಯ ಗಳಿಸಿದ ಚಿತ್ರವಾಗಿ ಮಾತ್ರವಲ್ಲ ತೆಲುಗಿನಲ್ಲಿ ಎರಡನೇ ಅತಿ ಹೆಚ್ಚು ಆದಾಯಗಳಿಸಿರುವ ಚಿತ್ರವಾಗಿ ಗುರುತಿಸಿಕೊಂಡಿದೆ.


4. ಕೆಜಿಎಫ್ ಚಾಪ್ಟರ್ 2

2022ರಲ್ಲಿ ತೆರೆಗೆ ಬಂದ ಯಶ್ ಅಭಿನಯದ ಕನ್ನಡ ಚಿತ್ರ ಕೆಜಿಎಫ್ ಚಾಪ್ಟರ್ 2 ಅನ್ನು ಪ್ರಶಾಂತ್ ನೀಲ್ ಅವರು ನಿರ್ದೇಶಿಸಿದ್ದಾರೆ. ವಿಜಯ ಕಿರಗಂದೂರ್ ನಿರ್ಮಿಸಿದ್ದಾರೆ.

100 ಕೋಟಿ ಬಜೆಟ್‌ನ ಈ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ 1,250 ಕೋಟಿ ರೂ. ಆದಾಯ ಗಳಿಸಿದೆ. ವಿಶ್ವದಲ್ಲಿ (ಭಾರತೀಯ ಚಿತ್ರ) ನಾಲ್ಕನೇ ಹಾಗೂ ಭಾರತದಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದೆ.

5. ಜವಾನ್

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರ 2023ರಲ್ಲಿ ತೆರೆಗೆ ಬಂದಿದ್ದು, 1,148.32 ಕೋಟಿ ರೂ. ಆದಾಯ ಗಳಿಸಿದೆ. 300 ಕೋಟಿ ರೂ. ಬಜೆಟ್‌ನ ಈ ಚಿತ್ರದಲ್ಲಿ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರ ಕೂಡ ಕಾಣಿಸಿಕೊಂಡಿದ್ದಾರೆ.

ಹಿಂದಿ ಭಾಷೆಯಲ್ಲಿ ಎರಡನೇ ಅತಿ ಹೆಚ್ಚು ಆದಾಯ ಗಳಿಸಿರುವ ಚಿತ್ರವಾಗಿ ಇದು ಗುರುತಿಸಿಕೊಂಡಿದ್ದು, ಭಾರತೀಯ ಸಿನಿಮಾದಲ್ಲಿ ಐದನೇ ಸ್ಥಾನ ಪಡೆದಿದೆ.


6. ಪಠಾಣ್

ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡಿರುವ ಚಿತ್ರ ʼಪಠಾಣ್ʼ ವಿಶ್ವದಾದ್ಯಂತ 1,050.30 ಕೋಟಿ ರೂ. ಆದಾಯ ಗಳಿಸಿದೆ. ಶಾರುಖ್ ಖಾನ್ ಅಭಿನಯದ ಈ ಚಿತ್ರ ಗಳಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಮೂರನೇ ಸ್ಥಾನ ಹಾಗೂ ಭಾರತೀಯ ಸಿನಿಮಾ ರಂಗದಲ್ಲಿ ಆರನೇ ಸ್ಥಾನವನ್ನು ಗಳಿಸಿದೆ. 240 ಕೋಟಿ ರೂ. ಬಜೆಟ್ ನ ಚಿತ್ರ ಇದಾಗಿದೆ.


7. ಬಜರಂಗಿ ಭಾಯಿಜಾನ್

ಭಾರತದಾದ್ಯಂತ ಬಾಯಿಜಾನ್ ಎಂದೇ ಕರೆಯಲ್ಪಡುವ ಸಲ್ಮಾನ್ ಖಾನ್, ಕರೀನಾ ಕಪೂರ್ ಅಭಿನಯದ ಈ ಚಿತ್ರ 2015ರಲ್ಲಿ ತೆರೆಗೆ ಬಂದಿದ್ದು, ಕಬೀರ್ ಖಾನ್ ನಿರ್ದೇಶಿಸಿದ್ದಾರೆ. ವಿಶ್ವದಾದ್ಯಂತ 969 ಕೋಟಿ ರೂ. ಆದಾಯವನ್ನು ಈ ಚಿತ್ರ ಗಳಿಸಿದ್ದು, ಅತಿ ಹೆಚ್ಚು ಆದಾಯ ಗಳಿಸಿದ ಭಾರತದ 7ನೇ ಚಿತ್ರ ಹಾಗೂ ಹಿಂದಿ ಭಾಷೆಯ 4ನೇ ಚಿತ್ರವಾಗಿ ಗುರುತಿಸಿಕೊಂಡಿದೆ.


8. ಅನಿಮಲ್

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ದಿಮ್ರಿ ಅಭಿನಯದ ಈ ಚಿತ್ರ ವಿಶ್ವದಾದ್ಯಂತ 917.36 ಕೋಟಿ ರೂ. ಆದಾಯ ಗಳಿಸಿದೆ. ಈ ಚಿತ್ರವನ್ನು 200 ಕೋಟಿ ರೂ. ಬಜೆಟ್ ನಲ್ಲಿ ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.


9. ಸೀಕ್ರೆಟ್ ಸೂಪರ್ ಸ್ಟಾರ್

2017ರಲ್ಲಿ ತೆರೆಗೆ ಬಂದ ‘ಸೀಕ್ರೆಟ್ ಸೂಪರ್ ಸ್ಟಾರ್’ ಚಿತ್ರವನ್ನು ಅದ್ವತ್ ಚಂದನ್ ನಿರ್ದೇಶಿಸಿದ್ದು, ಆಮೀರ್ ಖಾನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದಾದ್ಯಂತ 905.7 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರವನ್ನು ಅತೀ ಕಡಿಮೆ ಬಜೆಟ್ 15 ಕೋಟಿ ರೂ.ನಲ್ಲಿ ನಿರ್ಮಿಸಲಾಗಿದೆ.


ಇದನ್ನೂ ಓದಿ: Kalki 2898 AD: ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆದ ʼಕಲ್ಕಿʼ; ಬಿಡುಗಡೆಯಾದ 5ನೇ ದಿನ ಗಳಿಸಿದ್ದು ಬರೋಬ್ಬರಿ 84 ಕೋಟಿ ರೂ.

10. ಪಿಕೆ

ಆಮೀರ್ ಖಾನ್, ಅನುಷ್ಕಾ ಶರ್ಮಾ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಈ ಚಿತ್ರ 2014ರಲ್ಲಿ ತೆರೆಗೆ ಬಂದಿತ್ತು. ರಾಜಕುಮಾರ್ ಹಿರಾನಿ ನಿರ್ದೇಶಿರುವ ಈ ಚಿತ್ರವನ್ನು 122 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಿಸಲಾಗಿದ್ದು, ವಿಶ್ವದಾದ್ಯಂತ 769.89 ಕೋಟಿ ರೂ. ಆದಾಯವನ್ನು ಗಳಿಸಿದೆ.

Continue Reading

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading
Advertisement
Prajwal Devaraj birthday Karavali Cinema Update
ಸ್ಯಾಂಡಲ್ ವುಡ್17 mins ago

Prajwal Devaraj: ಪ್ರಜ್ವಲ್ ದೇವರಾಜ್‌ ಬರ್ತ್‌ಡೇ; ‘ಕರಾವಳಿ’ಯಿಂದ ಸಿಕ್ತು ಭರ್ಜರಿ ಗಿಫ್ಟ್!

prajwal revanna case test
ಪ್ರಮುಖ ಸುದ್ದಿ20 mins ago

Prajwal Revanna Case: 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್ ಮಾಡಿಸಿಕೊಳ್ತಿದ್ದ ಪ್ರಜ್ವಲ್ ರೇವಣ್ಣ!

Actor Darshan Will Attend The Court Hearing From Online
ಸಿನಿಮಾ37 mins ago

Actor Darshan: ಇಂದು ನ್ಯಾಯಾಲಯಕ್ಕೆ ಹಾಜರಾಗ್ತಿಲ್ಲ ದರ್ಶನ್ &ಟೀಂ; ಕಾರಣವೇನು?

Price Hike
ವಾಣಿಜ್ಯ39 mins ago

Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

Team India
ಕ್ರೀಡೆ44 mins ago

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ44 mins ago

Dengue Fever: ಹಾಸನ ಜಿಲ್ಲೆಯಲ್ಲಿ ಮೂರು ಮಕ್ಕಳ ಬಲಿ ಪಡೆದ ಜ್ವರ; ಡೆಂಗ್ಯು ಮರಣ ಮೃದಂಗ?

Varalaxmi Sarathkumar Reception attend By sudeep Family
ಸ್ಯಾಂಡಲ್ ವುಡ್1 hour ago

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

fraud case bagepalli
ಕ್ರೈಂ1 hour ago

Fraud Case: ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್, ಗರ್ಭಿಣಿಯಿಂದ ಪೊಲೀಸ್‌ಗೆ ದೂರು

Suryakumar Yadav
ಕ್ರೀಡೆ1 hour ago

Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

Kalki 2898 AD records global box office collection
ಟಾಲಿವುಡ್2 hours ago

Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ7 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌