T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ - Vistara News

ಕ್ರೀಡೆ

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

T20 World Cup 2024: ಟಿ20 ವಿಶ್ವಕಪ್​ 2024 ಚಾಂಪಿಯನ್‌ ಆಗಿ ಹೊರ ಹೊಮ್ಮಿರುವ ಟೀಮ್‌ ಇಂಡಿಯಾ ತಂಡಕ್ಕೆ ಅಭಿನಂದನಾ ಪ್ರವಾಹವೇ ಹರಿದು ಬರುತ್ತಿದೆ. ಜತೆಗೆ ವಿಶ್ವದ ನಾನಾ ಕಡೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ವೈರಲ್‌ ಆಗಿದೆ.

VISTARANEWS.COM


on

T20 World Cup 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ವಿಶ್ವಾದ್ಯಂತ ಭಾರತ ತಂಡದ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲೆಂಡ್‌ನಲ್ಲಿಯೂ ಭಾರತೀಯರ ಸಡಗರ ಮುಗಿಲು ಮುಟ್ಟಿದ್ದು, ಸಾವಿರಾರು ಮಂದಿ ಜಮಾಯಿಸಿ ಸಂತಸ ಹಂಚಿಕೊಂಡಿದ್ದಾರೆ. ಸಂಭ್ರಮಾಚರಣೆ ಮಧ್ಯೆ ಲಂಡನ್‌ಲ್ಲಿ ಅನಾಹುತವೊಂದು ಜರುಗಿದ್ದು, ಕ್ವೀನ್ಸ್ಬರಿ ಟ್ಯೂಬ್ ನಿಲ್ದಾಣ (Queensbury tube station)ದ ಹೊರಗಿನ ಕಂಬದ ಮೇಲೆ ಭಾರತೀಯ ಧ್ವಜವನ್ನು ಹಾರಿಸಲು ಪ್ರಯತ್ನಿಸುತ್ತಿದ್ದಾಗ ಅಭಿಮಾನಿಯೊಬ್ಬರು ನೆಲಕ್ಕೆ ಬಿದ್ದು ಬಿಟ್ಟಿದ್ದಾರೆ. ಸದ್ಯ ಅವರು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ (Viral Video).

ಧ್ವಜ ಕಟ್ಟಲು ಕಂಬ ಏರಿದ ಅಭಿಮಾನಿ ಕೈ ಜಾರಿ ನೆಲಕ್ಕೆ ಬೀಳುವುದು ವಿಡಿಯೊದಲ್ಲಿ ಕಂಡು ಬಂದಿದೆ. ಅವರ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಳಿಕ ಎದ್ದ ಓಡಾಡಿದ್ದಾರೆ. ಆ ಮೂಲಕ ಬಹುದೊಡ್ಡ ಅನಾಹುತ ತಪ್ಪಿದಂತಾಗಿದೆ.

ನಗರದ ಈಲಿಂಗ್ ರಸ್ತೆಯ ಮತ್ತೊಂದು ಭಾಗದಲ್ಲಿಯೂ ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಬಂಧನಕ್ಕೆ ಕಾರಣ ತಿಳಿದಿಲ್ಲ. ಇತ್ತ ಹ್ಯಾರೋದಲ್ಲಿ ಅಭಿಮಾನಿಗಳು ಪಟಾಕಿಗಳು ಸಿಡಿಸಿ ಸಂತಸ ಹಂಚಿಕೊಂಡಿದ್ದಾರೆ.

ಕೆನ್ಸಿಂಗ್ಟನ್ ಓವಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸುವ ಮೂಲಕ ಭಾರತವು 17 ವರ್ಷಗಳ ನಂತರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 76 ರನ್ ಮತ್ತು ಹಾರ್ದಿಕ್ ಪಾಂಡ್ಯ ಅವರ ನಿರ್ಣಾಯಕ ಮೂರು ವಿಕೆಟ್‌ಗಳು ಭಾರತವು ಎರಡನೇ ಐಸಿಸಿ ಟಿ20 ವಿಶ್ವಕಪ್‌ ಗೆಲ್ಲಲು ನೆರವಾಯಿತು. ಈ ಗೆಲುವಿನ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದರು.

ಬಹುಮಾನದ ಮೊತ್ತ

ಭಾರತ ತಂಡಕ್ಕೆ ಭಾರಿ ಮೊತ್ತದ ಬಹುಮಾನ ಲಭಿಸಿದೆ. $ 2.45 ಮಿಲಿಯನ್ ಯುಎಸ್‌ಡಿ (20,42,49,000 ರೂ.) ಪಡೆದಿದೆ. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ ನೀಡಲಾದ ಅತ್ಯಧಿಕ ಮೊತ್ತವಾಗಿದೆ. ರನ್ನರ್​ ಅಪ್​ ದಕ್ಷಿಣ ಆಫ್ರಿಕಾ ತಂಡಕ್ಕೆ 1,280,000 ಯುಎಸ್‌ಡಿ (10,68,06,400 ರೂ.) ಲಭಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯ ಒಟ್ಟು ಬಹುಮಾನ ಮೊತ್ತ 11.25 ಮಿಲಿಯನ್ ಯುಸ್ ಡಾಲರ್ ಆಗಿತ್ತು.

ಟೀಮ್​ ಇಂಡಿಯಾಕ್ಕೆ ಧನ್ಯವಾದ ತಿಳಿಸಿದ ಧೋನಿ

ಟೀಮ್​ ಇಂಡಿಯಾಕ್ಕೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದಕೊಟ್ಟ ನಾಯಕ ಮಹೇಂದ್ರ ಸಿಂಗ್​ ಧೋನಿ ವಿಶೇಷವಾಗಿ ಶುಭ ಹಾರೈಸಿದ್ದಾರೆ. ನನ್ನ ಹುಟ್ಟು ಹಬ್ಬಕ್ಕೆ ಮುಂಚಿತವಾಗಿಯೇ ಸ್ಮರಣೀಯ ಉಡುಗೊರೆ ನೀಡಿದ್ದಕ್ಕೆ ಟೀಮ್​ ಇಂಡಿಯಾಕ್ಕೆ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಚಾಂಪಿಯನ್​ ತಂಡದ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಧೋನಿ, ನನ್ನ ಎದೆ ಬಡಿತ ಹೆಚ್ಚಾಗಿತ್ತು. ಆದರೆ ದೃಢ ನಂಬಿಕೆಯೊಂದಿಗೆ ನೀವೆಲ್ಲರೂ ಉತ್ತಮವಾಗಿ ಆಡಿದ್ದೀರಿ. ತವರಿನ ಮತ್ತು ವಿಶ್ವದೆಲ್ಲಡೆ ಇರುವ ಎಲ್ಲಾ ಭಾರತೀಯರಿಂದ, ವಿಶ್ವಕಪ್ ಮರಳಿ ಮನೆಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಅಭಿನಂದನೆಗಳು. ಜತೆಗೆ ನನ್ನ ಹುಟ್ಟುಹಬ್ಬದ ಉಡುಗೊರೆಗೆ ಧನ್ಯವಾದಗಳು” ಎಂದು ಧೋನಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: T20 World Cup final: ತ್ರಿವರ್ಣ ಧ್ವಜ ಹಿಡಿದು ಜಮ್ಮು-ಕಾಶ್ಮೀರದಲ್ಲಿ ಮೊಳಗಿದ ವಿಜಯೋತ್ಸವ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 9 ಅಥ್ಲೀಟ್​ಗಳು

Paris Olympics 2024: ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

VISTARANEWS.COM


on

Paris Olympics
Koo

ನವದೆಹಲಿ: ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024)​ ಕ್ರೀಡಾಕೂಡ ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಹಲವು ಭಾರತೀಯ ಕ್ರೀಡಾಪಟುಗಳು ಈ ಟೂರ್ನಿಗೆ ಅರ್ಹತೆ ಪಡೆದಿದ್ದು ಪದಕ ಗೆಲ್ಲಲು ಪೂರ್ವ ತಯಾರಿ ಮಾಡುತ್ತಿದ್ದಾರೆ. ಇದೀಗ ಭಾರತದ 9 ಅಥ್ಲೀಟ್​ಗಳು ವಿಶ್ವ ಶ್ರೇಯಾಂಕದ ಆಧಾರದಲ್ಲಿ ಒಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಈ ಪೈಕಿ 100 ಮೀ. ಹರ್ಡಲ್ಸ್​ನಲ್ಲಿ ಒಲಿಂಪಿಕ್ಸ್​ ಅರ್ಹತೆ ಸಂಪಾದಿಸಿದ ಜ್ಯೋತಿ ಯರಾಜಿ(JYOTHI YARRAJI) ಈ ಸಾಧನೆ ಮಾಡಿದ ಮೊದಲ ಭಾರತೀಯರೆನಿಸಿದ್ದಾರೆ.

ಶಾಟ್​ಪುಟ್​ ಪಟುಗಳಾದ ಅಭಾ ಖತುವಾ, ತಜಿಂದರ್​ಪಾಲ್​ ಸಿಂಗ್​, ಜಾವೆಲಿನ್​ ಥ್ರೋಪಟು ಅನ್ನುರಾಣಿ, ಟ್ರಿಪಲ್​ಜಂಪ್​ ಪಟುಗಳಾದ ಪರ್ವೀನ್​ ಚಿತ್ರವೇಲ್​, ಅಬ್ದುಲ್​ ಅಬೂಬಕರ್​, ಹೈಜಂಪ್​ ಪಟು ಸರ್ವೇಶ್​ ಕುಶಾರೆ, 5,000 ಮೀ. ಓಟಗಾರ್ತಿ ಪಾರುಲ್​ ಚೌಧರಿ, ನಡಿಗೆ ಸ್ಪರ್ಧಿ ಸೂರಜ್​ ಪನ್ವರ್​ ರ್ಯಾಂಕಿಂಗ್​ ಆಧಾರದಲ್ಲಿ ಒಲಿಂಪಿಕ್ಸ್​ ಅರ್ಹತೆ ಪಡೆದ ಇತರರು. ಅರ್ಹತೆ ಪಡೆದಿರುವ 9 ಮಂದಿ ಅಥ್ಲೀಟ್​ಗಳನ್ನು​ ಕೂಡ ಭಾರತೀಯ ಅಥ್ಲೆಟಿಕ್ಸ್​ ಒಕ್ಕೂಟವು (ಎಎ​ಐ) ಒಲಿಂಪಿಕ್ಸ್​ಗೆ ಕಳುಹಿಸಬೇಕೆಂದಿಲ್ಲ. ಅಂತಿಮ ಆಯ್ಕೆಯು ಎಎಫ್​​ಐನದ್ದೇ ಆಗಿರುತ್ತದೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ಒಲಿಂಪಿಕ್ಸ್​​ ಸ್ಮರಣೆಗಾಗಿ ಜೆಎಸ್​ಡಬ್ಲ್ಯುನಿಂದ ಪ್ಯಾರಿಸ್​ನಲ್ಲಿ ವಿಶೇಷ ಪ್ರದರ್ಶನ

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading

ಕ್ರೀಡೆ

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಬಾರ್ಬಡೋಸ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ಬಾರ್ಬಡೋಸ್​ನಲ್ಲಿ ತಾವು ತಂಗಿದ್ದ ಹೋಟೆಲ್​ನಲ್ಲಿ ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ(Kohli’s Breakfast Trouble) ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ಟಿ20 ವಿಶ್ವಕಪ್​ ಗೆಲುವಿನ ಬಳಿಕ ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿದ ಬೆರಿಲ್ ಚಂಡಮಾರುತದಿಂದಾಗಿ ಟೀಮ್​ ಇಂಡಿಯಾ ಆಟಗಾರರು 2 ದಿನಗಳ ಕಾಲ ಬಾರ್ಬಡೋಸ್​ನ ಹೋಟೆಲ್​ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ಕೊಹ್ಲಿ ಕಟ್ಲೆಟ್‌ ಅನ್ನು ಓವನ್​ನಲ್ಲಿ ಬಿಸಿ ಮಾಡಲು ಯತ್ನಿಸಿದ್ದಾರೆ. ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಹೋಟೆಲ್​ನಲ್ಲಿ ತಿಂಡಿ ತಿನ್ನುತ್ತಿದ್ದವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸಹೋದರನಿಂದ ಭರ್ಜರಿ ಸ್ವಾಗತ


ಟಿ20 ವಿಶ್ವಕಪ್​ ಗೆದ್ದ ಭಾರತ ತಂಡ ಆಟಗಾರರು ಇಂದು(ಗುರುವಾರ) ನವದೆಹಲಿಗೆ ಆಗಮಿಸಿದರು. ಈ ವೇಳೆ ಕೊಹ್ಲಿಯ ಸಹೋದರ ವಿಕಾಸ್​ ಕೊಹ್ಲಿ ಮತ್ತು ಅವರ ಮಕ್ಕಳು ವಿಮಾನ ನಿಲ್ದಾಣದಲ್ಲಿ ಕೊಹ್ಲಿಯನ್ನು ಸ್ವಾಗತಿಸಿದ್ದಾರೆ. ಕೊಹ್ಲಿ ಗೆದ್ದ ಪದಕವನ್ನು ಕೊರಳಿಗೆ ಹಾಕಿ ಸಂಭ್ರಮಿಸಿದರು. ಈ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿತ್ತು. ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದರು. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Continue Reading

ಕ್ರೀಡೆ

MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

MS Dhoni: ಧೋನಿ ಕೇಕ್​ ಕತ್ತರಿಸಿ ಪತ್ನಿಗೆ ತಿನ್ನಿಸುವ ಮೂಲಕ ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವನ್ನು ಸಂಭ್ರಮಿಸಿದರು. ಈ ಜೋಡಿಗೆ ಝಿವಾ ಎಂಬ ಮುದ್ದಾಗ ಮಗಳಿದ್ದಾಳೆ. ಐಪಿಎಲ್​ ವೇಳೆ ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಚಿಯರ್​ ಅಪ್​ ಮಾಡುವ ದೃಶ್ಯಗಳು ಹಲವು ಬಾರಿ ವೈರಲ್​ ಆಗಿತ್ತು.

VISTARANEWS.COM


on

MS Dhoni
Koo

ರಾಂಚಿ​: ಟೀಮ್​ ಇಂಡಿಯಾದ ಮಾಜಿ ಆಟಗಾರ ಎಂ.ಎಸ್​ ಧೋನಿ ಮತ್ತು ಸಾಕ್ಷಿ ಸಿಂಗ್(Sakshi Dhoni)​ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 15 ವರ್ಷ ಕಳೆದಿದೆ. ಜುಲೈ 4, 2010ರಲ್ಲಿ ಧೋನಿ ಅವರು ಸಾಕ್ಷಿ ಅವರನ್ನು ಡೆಹರಾಡೂನ್​ನಲ್ಲಿ ​ವಿವಾಹವಾಗಿದ್ದರು. ಇದೀಗ ದಂಪತಿ ಕೇಕ್​ ಕತ್ತರಿಸಿ(Wedding Anniversary MS Dhoni & Sakshi) ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ(ms dhoni wedding anniversary) ಆಚರಿಸಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

​ಸಾಮಾಜಿಕ ಜಾಲಾತಾಣದಿಂದ ದೂರ ಉಳಿದಿರುವ ಧೋನಿ, ತಮ್ಮ ಯಾವುದೇ ಶುಭ ಸಮಾಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲು ಬಯಸುವುದಿಲ್ಲ. ಆದರೂ ಚೆನ್ನೈ ಸೂಪರ್ ಕಿಂಗ್ಸ್​ ಟ್ವಿಟರ್​​ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದು, “ನಮ್ಮ ರಾಜ ಮತ್ತು ರಾಣಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು” ಎಂದಿದೆ. ಧೋನಿ ಅಭಿಮಾನಿ ಬಳಗದಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳು ಬಂದಿದೆ.

ಧೋನಿ ಕೇಕ್​ ಕತ್ತರಿಸಿ ಪತ್ನಿಗೆ ತಿನ್ನಿಸುವ ಮೂಲಕ ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವನ್ನು ಸಂಭ್ರಮಿಸಿದರು. ಈ ಜೋಡಿಗೆ ಝಿವಾ ಎಂಬ ಮುದ್ದಾಗ ಮಗಳಿದ್ದಾಳೆ. ಐಪಿಎಲ್​ ವೇಳೆ ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಚಿಯರ್​ ಅಪ್​ ಮಾಡುವ ದೃಶ್ಯಗಳು ಹಲವು ಬಾರಿ ವೈರಲ್​ ಆಗಿತ್ತು.

ಧೋನಿ ಆಗಸ್ಟ್​ 15 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದರ. ಸದ್ಯ ಐಪಿಎಲ್​ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಹಿಂದೊಮ್ಮೆ ಧೋನಿ ಅವರು ನನ್ನ ಪತ್ನಿಗೆ ಟ್ರಾವೆಲ್​ ಎಂದರೆ ಬಲು ಇಷ್ಟ. ಕ್ರಿಕೆಟ್​ ನಿವೃತ್ತಿ ಬಳಿಕ ನಾನು ಖಂಡಿತಾ ಹಲವು ದೇಶಕ್ಕೆ ಪ್ರವಾಸ ಮಾಡುವ ಎಲ್ಲ ಯೋಜನೆಗಳನ್ನು ರೂಪಿಸಿದ್ದೇನೆ ಎಂದು ಹೇಳಿದ್ದರು. ಬಿಡುವಿನ ವೇಳೆಯಲ್ಲಿ ಪತ್ನಿ ಮತ್ತು ಮಗಳ ಜತೆ ಧೋನಿ ಆಗಾಗ ವಿದೇಶಕ್ಕೆ ಭೇಟಿ ನೀಡುತ್ತಾ ಪ್ರವಾಸವನ್ನು ಎಂಜಾಯ್​ ಮಾಡುತ್ತಿರುತ್ತಾರೆ.

ಇದನ್ನೂ ಓದಿ MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಧೋನಿ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಐಪಿಎಲ್​ಗೂ ವಿದಾಯ ಹೇಳುವ ಮೂಲಕ ಎಲ್ಲ ಕ್ರಿಕೆಟ್​ಗೆ ಗುಡ್​ ಬೈ ಹೇಳಲಿದ್ದಾರೆ ಎನ್ನಲಾಗಿತ್ತು. ಚೆನ್ನೈ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಧೋನಿ ಮಾತ್ರ ಐಪಿಎಲ್​ ವಿದಾಯ ಹೇಳಿಲ್ಲ. ಮುಂದಿನ ಆವೃತ್ತಿಯಲ್ಲಿಯೂ ಆಡುವ ನಿರೀಕ್ಷೆಯಲ್ಲಿದ್ದಾರೆ.

2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗೆ 275 ರನ್​ಗಳು ಬೇಕಾಗಿದ್ದವು. ಅಂತೆಯೇ ಆರಂಭಿಕ ಬ್ಯಾಟರ್​ ಗೌತಮ್​ ಗಂಭೀರ್​ 97 ರನ್​ ಬಾರಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಸೆಹ್ವಾಗ್​ ಸೊನ್ನೆಗೆ ಔಟಾಗಿದ್ದರೆ ಸಚಿನ್​​ ಕೊಡಗೆ 18 ರನ್​. ಆದರೆ, ಕೊನೇ ಹಂತದಲ್ಲಿ ಕ್ರೀಸ್​ಗೆ ತಳವೂರಿ ಆಡಿದ್ದ ನಾಯಕ ಧೋನಿ ಅಜೇಯ 91 ರನ್​ ಬಾರಿಸಿ ಭಾರತದ ಗೆಲುವಿಗೆ ಕಾರಣರಾಗಿದ್ದರು. ಅಂತೆಯೇ ಇನಿಂಗ್ಸ್​ನ ಕೊನೇ ಓವರ್​ನಲ್ಲಿ ಲಂಕಾ ಬೌಲರ್​ ನುವಾನ್​ ಕುಲಶೇಖರ ಅವರ ಎಸೆತಕ್ಕೆ ಸಿಕ್ಸರ್​ ಬಾರಿಸಿದ್ದರು. ಅದು ಭಾರತದ ವಿಜಯ ರನ್​ ಆಗಿತ್ತು. 

Continue Reading

ಕ್ರೀಡೆ

Team India Arrival: ಪ್ರಧಾನಿ ಮೋದಿ ಔತಣ ಕೂಟಕ್ಕೆ ತೆರಳಿದ ಟೀಮ್​ ಇಂಡಿಯಾ

Team India Arrival: ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡ ಬಳಿಕ ಮೋದಿ ಜತೆ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಲಿದ್ದಾರೆ. ಅಲ್ಲಿ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆ ನಡೆಸಿ ಬಳಿಕ ಅದ್ಧೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Team India Arrival
Koo

ನವದೆಹಲಿ: ಟಿ20 ವಿಶ್ವಕಪ್​ ಟ್ರೋಫಿಯೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ ಇದೀಗ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿದೆ. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡ ಬಳಿಕ ಮೋದಿ ಜತೆ ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈಗೆ ತೆರಳಲಿದ್ದಾರೆ. ಅಲ್ಲಿ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆ ನಡೆಸಿ ಬಳಿಕ ಅದ್ಧೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ (Rohit Sharmaನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ (Team India) ಆಟಗಾರರು ದೆಹಲಿಗೆ ಆಗಮಿಸಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು. ಭಾರತೀಯ ಪತ್ರಕರ್ತರು, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ವಿಮಾನದಲ್ಲಿದ್ದರು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ವಿಮಾನ ಬಂದಿಳಿಯುತ್ತಿದ್ದಂತೆ ಅಭಿಮಾನಿಗಳು ಜಯಘೋಷ ಕೂಗಿ ಸ್ವಾಗತಿಸಿದರು.

ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

Continue Reading
Advertisement
karnataka Rain
ಮಳೆ7 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್12 mins ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ13 mins ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

heart attack death
ಪ್ರಮುಖ ಸುದ್ದಿ20 mins ago

Heart Attack: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಎಳೇ ಜೀವ ಬಲಿ; ಈ ಸಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ

Job Alert
ಉದ್ಯೋಗ25 mins ago

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Electric shock
ಬೆಂಗಳೂರು ಗ್ರಾಮಾಂತರ44 mins ago

Electric shock : ಕತ್ತಲಲ್ಲಿ ಕೆಲಸಕ್ಕೆ ಹೋದವನಿಗೆ ಕರೆಂಟ್‌ ಶಾಕ್‌

Paris Olympics
ಕ್ರೀಡೆ48 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 9 ಅಥ್ಲೀಟ್​ಗಳು

Bigg Boss Telugu 8 Contestants List Leaked
ಬಿಗ್ ಬಾಸ್49 mins ago

Bigg Boss Telugu 8: ಶುರುವಾಗ್ತಿದೆ ಬಿಗ್​ಬಾಸ್ ತೆಲುಗು ಸೀಸನ್ 8; ಸ್ಪರ್ಧಿಗಳು ಯಾರೆಲ್ಲ?

Lonalva Tragedy
ದೇಶ1 hour ago

Lonavla Tragedy: ಲೋನಾವಲಾದಲ್ಲಿ ಇದುವರೆಗೆ 37 ದುರಂತ ಪ್ರಕರಣಗಳು; 47 ಮಂದಿ ದಾರುಣ ಸಾವು

Gold Rate Today
ಚಿನ್ನದ ದರ1 hour ago

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ7 mins ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 hour ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ2 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

ಟ್ರೆಂಡಿಂಗ್‌