Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ - Vistara News

ಕರ್ನಾಟಕ

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹ; ನಾಳೆ‌ ಕರುನಾಡಲ್ಲಿ ಮೊಳಗಲಿದೆ ಕರವೇ ಕಹಳೆ

Karave Protest: ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೂ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗಳು ಜರುಗಲಿವೆ.

VISTARANEWS.COM


on

Karave Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರುನಾಡಿನಲ್ಲಿ ಜುಲೈ 1ರಂದು ಕರವೇ ಕಹಳೆ ಮೊಳಗಲಿದೆ. ಕನ್ನಡಿಗರಿಗೆ ಉದ್ಯೋಗಕ್ಕಾಗಿ ಆಗ್ರಹಿಸಿ ರಾಜ್ಯಾದಾದ್ಯಂತ ಚಳವಳಿಗೆ ಕರ್ನಾಟಕ ರಕ್ಷಣಾ ವೇದಿಕೆ (Karave Protest) ಕರೆ ನೀಡಿದ್ದು, ಬೃಹತ್ ಪ್ರತಿಭಟನೆಗೆ ರಾಜಧಾನಿ ಸಾಕ್ಷಿಯಾಗಲಿದೆ. ಸೋಮವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೂ ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಏಕಕಾಲದಲ್ಲಿ ಪ್ರತಿಭಟನೆಗಳು ಜರುಗಲಿವೆ.

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಹೋರಾಟಕ್ಕೆ ಕರೆ ನೀಡಲಾಗಿದೆ. ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳು ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್‌ಗಳಲ್ಲಿ ಶೇಕಡ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಾಗುತ್ತದೆ.

50 ಸಾವಿರ ಕಾರ್ಯಕರ್ತರು ಭಾಗಿ ಆಗುವ ಸಾಧ್ಯತೆ

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದ್ದು, ನಾಳೆ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸುವ ಪ್ರತಿಭಟನೆಯಲ್ಲಿ 50 ಸಾವಿರ ಕಾರ್ಯಕರ್ತರು ಭಾಗಿ ಆಗುವ ಸಾಧ್ಯತೆ ಇದೆ. ನಗರದ 28 ವಿಧಾನಸಭಾ ಕ್ಷೇತ್ರಗಳಿಂದ ಮೆರವಣಿಗೆ ಮೂಲಕ ಕಾರ್ಯಕರ್ತರ ಆಗಮಿಸಲಿದ್ದಾರೆ.
ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ಪೊಲೀಸ್ ಇಲಾಖೆ ಮಾಡಿದರೆ ಮತ್ತೊಂದು ಡಿಸೆಂಬರ್ 27 ಆಗುತ್ತೆ ಎಂದು
ಪೊಲೀಸರು ಹಾಗೂ ಸರ್ಕಾರಕ್ಕೆ ಕರವೇ ಅಧ್ಯಕ್ಷ ನಾರಾಯಣ ಗೌಡರು ಎಚ್ಚರಿಕೆ ನೀಡಿದ್ದಾರೆ.

ಹಲವು ಸಂಘಟನೆಗಳ ಬೆಂಬಲ

ಇನ್ನು ನಾಳಿನ ಕರವೇ ಹೋರಾಟಕ್ಕೆ ಹಲವು ಸಂಘಟನೆ, ಸಂಘ-ಸಂಸ್ಥೆಗಳು ಬೆಂಬಲ ನೀಡಿವೆ.
ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ಘೋಷಣೆ ಮಾಡಿದ್ದು, ಕೈಗಾರಿಕಾ ವಲಯದಲ್ಲಿ ಕೆಲಸ ಮಾಡುತ್ತಿರುವ ಕನ್ನಡ ನೌಕರರು, ರೈತ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು, ಚಿತ್ರರಂಗದ ಹಲವು ಮಂದಿ ನಟ ಹಾಗೂ ತಂತ್ರಜ್ಞರಿಂದಲೂ ಬೆಂಬಲ ವ್ಯಕ್ತವಾಗಿದೆ.

ನಟ ನೆನಪಿರಲಿ ಪ್ರೇಮ್, ಚಿತ್ರ ಸಾಹಿತಿ ವಿ ನಾಗೇಂದ್ರ ಪ್ರಸಾದ್, ನಿರ್ದೇಶಕ ರವಿ ಶ್ರೀವತ್ಸ,
ಸಾಹಿತಿಗಳಾದ ದೊಡ್ಡ ರಂಗೇಗೌಡ, ಮನು ಬಳಿಗಾರ್ ಸೇರಿದಂತೆ ಹಲವರು ಬೆಂಬಲ ವ್ಯಕ್ತಪಡಿಸಿದ್ದು,
ಆಟೋ ಚಾಲಕರ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಭಾಗಿ ಆಗುವ ನಿರೀಕ್ಷೆ ಇದೆ.,.

ಇದನ್ನೂ ಓದಿ | CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

ಕರವೇ ಪ್ರಮುಖ ಬೇಡಿಕೆಗಳು

1.ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ರ ಅನ್ವಯ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು.
2.ಖಾಸಗಿ ಸಂಸ್ಥೆಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳು ಶೇ.100 ಕನ್ನಡಿಗರಿಗೆ ಮೀಸಲಿಡಬೇಕು.
3.ಖಾಸಗಿ ಸಂಸ್ಥೆಗಳ ಇತರೆ ಹುದ್ದೆಯಲ್ಲಿ ಶೇ. 80 ಕನ್ನಡಿಗರಿಗೆ ಮೀಸಲಿಡಬೇಕು.
4.ಹದಿನೈದು ವರ್ಷ ರಾಜ್ಯದಲ್ಲಿದ್ದವರಿಗೆ ಕನ್ನಡಿಗರೆಂದು ಪರಿಗಣಿಸುವ ನಿಯಮವಿದ್ದು, ಅಂತವರಿಗೆ ಕನ್ನಡ ಪರೀಕ್ಷೆ ನಡೆಸಿ ಉತ್ತೀರ್ಣರಾದರೆ ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು.
5.ನಿಯಮ‌‌ ಪಾಲಿಸದ ಸಂಸ್ಥೆಗಳ ಲೈಸೆನ್ಸ್ ರದ್ದು ಮಾಡಬೇಕು. ಸರ್ಕಾರ ನೀಡಿರುವ ಭೂಮಿ, ಸವಲತ್ತುಗಳನ್ನು ವಾಪಸ್ ಪಡೆದು ಕ್ರಿಮಿನಲ್ ಮೊಕದ್ದಮೆ ಹಾಕಬೇಕು.
6.ರಾಜ್ಯ ಸರ್ಕಾರಿ ಸಂಸ್ಥೆ ಮತ್ತು ಸಾರ್ವಜನಿಕ ವಲಯದಲ್ಲಿ ಶೇ.100 ಕನ್ನಡಿಗರಿಗೆ ಮೀಸಲಾತಿ
7.ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ ಶೇ.100 ಕನ್ನಡಿಗರಿಗೆ ಮೀಸಲಾತಿ ನೀಡಬೇಕು.
8.ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ, ಡಿ ಹೊರತಾದ ಉಳಿದ ಉದ್ಯೋಗದಲ್ಲಿ ಶೇ.90 ಮೀಸಲಾತಿ ನೀಡಬೇಕು.
9.ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ವಿಫಲವಾಗುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಈ ಅಂಶವನ್ನು ಉದ್ದೇಶಿತ ಕಾನೂನಿನಲ್ಲಿ ಸೇರಿಸಬೇಕು.
10. ರಾಜ್ಯ ಸರ್ಕಾರ ರೂಪಿಸುವ ಕಾನೂನು ಜಾರಿ ಮಾಡಲು ಕನ್ನಡ ಪ್ರಾಧಿಕಾರಕ್ಕೆ ಅಧಿಕಾರ ನೀಡಬೇಕು.

ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ: ಟಿ.ಎ. ನಾರಾಯಣಗೌಡ

ಕರ್ನಾಟಕ ರಕ್ಷಣಾ ವೇದಿಕೆಯಿಂದ (Karnataka Rakshana Vedike) ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ (KaRaVe Protest) ನಡೆಸಲಿದ್ದು, ಸಾವಿರಾರು ಕರವೇ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ (Bengaluru News) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕಕ್ಕೆ ಹೊರರಾಜ್ಯಗಳಿಂದ ಅವ್ಯಾಹತವಾಗಿ ವಲಸೆ ನಡೆಯುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಇದು ತೀವ್ರ ಸ್ವರೂಪ ಪಡೆದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಮಹಾನಗರಗಳು ವಲಸಿಗರ ಹಾವಳಿಯಿಂದ ಸಂಪೂರ್ಣ ಬದಲಾಗುತ್ತಿವೆ. ಕನ್ನಡಿಗರ ಉದ್ಯೋಗಗಳನ್ನು ಹೊರರಾಜ್ಯದವರು ಕಿತ್ತುಕೊಳ್ಳುತ್ತಿದ್ದಾರೆ. ಕನ್ನಡಿಗರು ತಮ್ಮ ನೆಲದಲ್ಲೇ ನಿರುದ್ಯೋಗಿಗಳಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ವೇದಿಕೆ ದೊಡ್ಡ ಪ್ರಮಾಣದ ಚಳವಳಿಗೆ ಸಜ್ಜಾಗಿದೆ. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಲು ಆಗ್ರಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಮಳೆ

    Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

    Karnataka Rain: ರಾಜ್ಯಾದ್ಯಂತ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ. ರಾತ್ರಿ ಸುರಿದ ಒಂದು ಮಳೆಗೆ ಹಲವು ಗ್ರಾಮಗಳು ಮುಳುಗಡೆಯಾಗಿವೆ. ಮಳೆಗೆ ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಬಸ್‌ವೊಂದು ಸಿಲುಕಿಕೊಂಡು ಪ್ರಯಾಣಿಕರು ಕಂಗಲಾದರು.

    VISTARANEWS.COM


    on

    By

    Karnataka Rain
    Koo

    ಬೆಂಗಳೂರು/ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ (karnataka Rain) ಮಳೆಯಾಗುತ್ತಿದ್ದು, ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯ ಕತಗಾಲ ಬಳಿ ಚಂಡಿಕಾ ಹೊಳೆ ಉಕ್ಕಿ ರಸ್ತೆಗೆ ಹರಿದಿದೆ. ಪರಿಣಾಮ ಬಸ್‌ವೊಂದು ನೀರಿನಲ್ಲಿ ಸಿಲುಕಿತ್ತು. ಗ್ರಾಮ ಪಂಚಾಯತಿ ಅಧಿಕಾರಿಗಳು, ಸ್ಥಳೀಯರಿಂದ ಬೋಟ್ ಮೂಲಕ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ಶಿರಸಿ-ಕುಮಟಾ ಹೆದ್ದಾರಿ ಸಂಚಾರ ಬಂದ್ ಆಗಿದ್ದು, ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪ್ರತಿವರ್ಷ ಮಳೆಗಾಲದಲ್ಲಿ (karnataka weather forecast) ಚಂಡಿಕಾ ಹೊಳೆ ತುಂಬಿ ಹರಿಯಲಿದೆ.

    ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

    ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

    ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

    ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

    ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

    ಶಿವಮೊಗ್ಗದಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್‌ ಕಂಬಗಳು

    ಶಿವಮೊಗ್ಗದಲ್ಲೂ ಧಾರಾಕಾರ ಮಳೆಯಿಂದಾಗಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿವೆ. ಸಾಗರ ತಾಲೂಕಿನ ಹೊಳೆಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿದೆ. ಹೊಳೆಬಾಗಿಲು, ಕಳಸವಳ್ಳಿ, ತುಮರಿ ರಸ್ತೆ ವಿದ್ಯುತ್‌ ಕಂಬಗಳು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

    ಕೊಡಗಿನಲ್ಲಿ ಮತ್ತೆ ಮುಂದುವರಿದ ಮಳೆ

    ಕೊಡಗಿನಲ್ಲಿ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು, ನದಿ ತುಂಬಿ ಹರಿಯುತ್ತಿದೆ. ಕಾವೇರಿಯ ತವರು ಬ್ರಹ್ಮಗಿರಿ ತಪ್ಪಲಿನಲ್ಲೂ ರಾತ್ರಿಯಿಂದ ಭಾರಿ ಮಳೆಯಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

    ಸೋರುತಿಹುದು ಅರಸೀಕೆರೆ ರೈಲ್ವೆ ಫ್ಲಾಟ್ ಫಾರಂ

    ಮಳೆ ಬಂದರೆ ಹಾಸನ ಜಿಲ್ಲೆಯ ಅರಸೀಕೆರೆ ಜಂಕ್ಷನ್‌ನ ರೈಲ್ವೆ ಫ್ಲಾಟ್ ಫಾರಂ ಬಚ್ಚಲು ಮನೆಯಂತೆ ಬಾಸವಾಗುತ್ತದೆ. ರೈಲ್ವೆ ಫ್ಲಾಟ್ ಫಾರಂನ ಛಾವಣಿ ಸೋರುತ್ತಿದ್ದು, ಪ್ರಯಾಣಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಯಾಣಿಕರ ಲ್ಯಾಗೇಜ್‌ಗಳ ಮೇಲೆ ನೀರು ಸೋರುತ್ತಿದ್ದು, ಕೂಡಲೇ ಛಾವಣಿ ದುರಸ್ತಿ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಪ್ರಮುಖ ಸುದ್ದಿ

    Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

    Dengue Fever: ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489 ಪರೀಕ್ಷೆ ನಡೆಸಲಾಗಿದ್ದು, 479 ಡೆಂಗ್ಯು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 162 ಆ್ಯಕ್ಟೀವ್ ಪ್ರಕರಣಗಳಿವೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.

    VISTARANEWS.COM


    on

    dengue fever mysore death
    Koo

    ಮೈಸೂರು: ಮೈಸೂರು ಜಿಲ್ಲೆಯಲ್ಲಿ (Mysore news) ಡೆಂಗ್ಯು ಜ್ವರ (Dengue fever) ವ್ಯಾಪಕವಾಗಿದ್ದು, ಮೊದಲ ಬಲಿ (Dengue Death) ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ (Health Officer) ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.

    ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489 ಪರೀಕ್ಷೆ ನಡೆಸಲಾಗಿದ್ದು, 479 ಡೆಂಗ್ಯು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. 162 ಆ್ಯಕ್ಟೀವ್ ಪ್ರಕರಣಗಳಿವೆ.

    ಡೆಂಗ್ಯು ಜ್ವರದಿಂದ ಇದುವರೆಗೆ ರಾಜ್ಯದಲ್ಲಿ 6 ಮಂದಿ ಸತ್ತಿದ್ದಾರೆ ಎಂದು ಮಂಗಳವಾರ ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದರು. ನಿನ್ನೆ ಹಾಸನ ಜಿಲ್ಲೆಯಲ್ಲಿ ಒಬ್ಬಳು ಬಾಲಕಿ ಡೆಂಗ್ಯುವಿನಿಂದ ಮೃತಪಟ್ಟಿದ್ದು, ಡೆಂಗ್ಯು ಖಚಿತವಾಗಬೇಕಿದೆ. ಬೆಂಗಳೂರಿನಲ್ಲಿ ಒಬ್ಬರು ಡೆಂಗ್ಯುವಿನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಇದುವರೆಗೂ 7 ಮಂದಿ ಡೆಂಗ್ಯುವಿಗೆ ಬಲಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

    ಡೆಂಗ್ಯು ಜ್ವರ ಪರೀಕ್ಷೆಗೆ ದರ ನಿಗದಿ

    ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

    ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

    ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದರು.

    ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ಸಚಿವರು ತಿಳಿಸಿದ್ದರು.

    ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

    ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

    ಇದನ್ನೂ ಓದಿ: Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

    Continue Reading

    ಪ್ರಮುಖ ಸುದ್ದಿ

    Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

    Rain News: ಈ ಮೂರು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ.

    VISTARANEWS.COM


    on

    rain news no entry falls
    Koo

    ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

    ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

    ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

    ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

    ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

    ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

    ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

    ಶಾಲೆಗಳಿಗೆ ರಜೆ

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

    ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

    Continue Reading

    ಉಡುಪಿ

    Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

    Tornado Effect : ಉಡುಪಿಯಲ್ಲಿ (Udupi News) ದಿಢೀರ್‌ ಸುಂಟರಗಾಳಿ ಎದ್ದಿದ್ದು, ಗ್ರಾಮಸ್ಥರು ಕಂಗಲಾಗಿದ್ದಾರೆ. ಸುಂಟರಗಾಳಿಗೆ ಅಪಾರ ಪ್ರಮಾಣದ ಮರಗಳು ಕತ್ತರಿಸಿದಂತೆ ನೆಲಕ್ಕುರುಳಿವೆ. ರಟ್ಟಾಡಿ ವ್ಯಾಪ್ತಿಯ ಹಲವು ಮನೆಗಳಿಗೂ ಸುಂಟರಗಾಳಿಯಿಂದ ಹಾನಿಯಾಗಿದೆ.

    VISTARANEWS.COM


    on

    By

    Tornado Effect in Udupi
    Koo

    ಉಡುಪಿ: ಒಂದು ಕಡೆ ಮಳೆಯು (Karnataka Rain) ಅಬ್ಬರಿಸುತ್ತದ್ದರೆ ಮತ್ತೊಂದು ಕಡೆ ಸುಂಟರಗಾಳಿ (Tornado Effect) ಹವಾ ಜೋರಾಗಿದೆ. ಉಡುಪಿಯ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಸುಂಟರಗಾಳಿ ಕಾಣಿಸಿಕೊಂಡಿದೆ. ಭಾರೀ ಸುಂಟರಗಾಳಿಗೆ ರಟ್ಟಾಡಿ ಗ್ರಾಮದ ಕೃಷಿಕರು ಕಂಗಾಲಾಗಿದ್ದಾರೆ.

    ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿಯಾಗಿದೆ. ಭಾರಿ ಶಬ್ಧದೊಂದಿಗೆ ಸುಂಟರಗಾಳಿ ಅಪ್ಪಳಿಸಿದೆ. ಕೆಲವು ಹೊತ್ತು ಚಂಡಮಾರುತದಂತೆ ಸುಂಟರಗಾಳಿ ಭಾಸವಾಗಿದೆ. ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಟ್ಟಾಡಿಯಲ್ಲಿ ಏಕಾಏಕಿ ಸುಂಟರಗಾಳಿ ಕಾಣಿಸಿಕೊಂಡಿದೆ.

    ರಟ್ಟಾಡಿಯಲ್ಲಿ ಭೀಕರ ಸುಂಟರಗಾಳಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತ್‌ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡ್ರೋನ್‌ ಕ್ಯಾಮೆರಾ ಮೂಲಕ ಮರ, ಮನೆಗಳ ಹಾನಿ ಕುರಿತು ಅಂದಾಜು ಲೆಕ್ಕಚಾರ ನಡೆಸಿದ್ದಾರೆ.

    ಇನ್ನೂ ರಟ್ಟಾಡಿ ವ್ಯಾಪ್ತಿಯಲ್ಲಿರುವ ಸಾವಿರಾರು ಮರಗಳು ಧರಶಾಹಿಯಾಗಿವೆ. 5 ಸಾವಿರಕ್ಕೂ ಅಧಿಕ ಅಡಿಕೆ ಮರ, 2 ಸಾವಿರದಷ್ಟು ರಬ್ಬರ್‌ ಮರ ಹಾಗೂ ತೆಂಗಿಗೂ ಹಾನಿಯಾಗಿದೆ. ಅಪಾರ ಪ್ರಮಾಣದ ಮರಗಳು ಕತ್ತರಿಸಿದಂತೆ ನೆಲಕ್ಕುರುಳಿದೆ. ರಟ್ಟಾಡಿ ವ್ಯಾಪ್ತಿಯ ಹಲವು ಮನೆಗಳಿಗೂ ಸುಂಟರಗಾಳಿಯಿಂದ ಹಾನಿಯಾಗಿದೆ.

    ಅಮಾಸೆಬೈಲು ರಟ್ಟಾಡಿಯಲ್ಲಿ ಕಾಣಿಸಿಕೊಂಡ ಭೀಕರ ಸುಂಟರಗಾಳಿಯ ಎಫೆಕ್ಟ್‌ನಿಂದಾಗಿ ರಟ್ಟಾಡಿ ನಂಜಿನ ಹಾಡಿ ಕತ್ಗೋಡು ಎಂಬಲ್ಲಿ ಮನೆಯ ಮೇಲೆ ಮರ ಬಿದ್ದಿದೆ. ಸುಂಟರಗಾಳಿಯ ಆರ್ಭಟಕ್ಕೆ ಮನೆಯ ಪಕ್ಕದಲ್ಲಿದ್ದ ಮರ ಉರಳಿ ಬಿದ್ದಿದೆ. ಮನೆ ಮೇಲೆ ಮರ ಬಿದ್ದ ಪರಿಣಾಮ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಕಡು ಬಡತನದಲ್ಲಿ ಜೀವನ ನಡೆಸುತ್ತಿದ್ದ ಕುಟುಂಬ ಸುಂಟರಗಾಳಿಯಿಂದ ಅತಂತ್ರಕ್ಕೆ ಸಿಲುಕಿದೆ. ದಿಢೀರನೆ ಕಾಣಿಸಿಕೊಂಡಿದ್ದ ಸುಂಟರಗಾಳಿಯಿಂದ ರಟ್ಟಾಡಿ ಗ್ರಾಮ ಅಲ್ಲೋಲಕಲ್ಲೋಲವೇ ಎದ್ದಿದೆ. ದುರ್ಗಿ ಅವರ ಕುಟುಂಬ ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

    Tornado Effect in udupi

    ಇದನ್ನೂ ಓದಿ: Murder case : ಹಾಸನದಲ್ಲಿ ದಾಯಾದಿಗಳ ಕಲಹ ಕೊಲೆಯಲ್ಲಿ ಅಂತ್ಯ

    ಕಮಲಶಿಲೆ ದೇವಾಲಯದಲ್ಲಿ ನೈಸರ್ಗಿಕ ಪುಣ್ಯಸ್ನಾನ

    ಉಡುಪಿಯ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದೊಳಗೆ ಕುಬ್ಜ ನದಿ ನೀರು ಹರಿದಿದೆ. ಬೆಳಗಿನ ಜಾವ ಮೂರುವರೆ ಸುಮಾರಿಗೆ ದೇವಿಯ ಚರಣವನ್ನು ಕುಬ್ಜಾ ನದಿ ನೀರು ಸ್ಪರ್ಶ ಮಾಡಿದೆ. ಈ ಮೂಲಕ ದೇವಸ್ಥಾನದಲ್ಲಿ ನೈಸರ್ಗಿಕ ಪುಣ್ಯಸ್ನಾನ ನಡೆದಿದೆ.

    ಗರ್ಭಗುಡಿಗೆ ನೀರು ಬರುತ್ತಿದ್ದಂತೆ ಅರ್ಚಕರು ಮಂಗಳಾರತಿ ಮಾಡಿದ್ದಾರೆ. ವರ್ಷಂಪ್ರತಿ ಒಂದು ಬಾರಿ ಗರ್ಭಗುಡಿಗೆ ಕುಬ್ಜಾ ನದಿ ನೀರು ಬರುತ್ತದೆ. ಈ ನೈಸರ್ಗಿಕ ಪುಣ್ಯಸ್ನಾನಕ್ಕೆ ಭಕ್ತರು ಕಾತರದಿಂದ ಕಾಯುತ್ತಾರೆ. ಸದ್ಯ ನೀರು ಇಳಿಮುಖವಾಗಿ ದೇವಾಲಯದಿಂದ ತೆರವು ಮಾಡಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    Karnataka Rain
    ಮಳೆ5 mins ago

    Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

    dengue fever mysore death
    ಪ್ರಮುಖ ಸುದ್ದಿ14 mins ago

    Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

    Hathras Stampede
    ದೇಶ19 mins ago

    Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

    Virat Kohli
    ಕ್ರೀಡೆ19 mins ago

    Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

    Shiva Rajkumar Bhairavana Kone PaaTa Title announce
    ಸ್ಯಾಂಡಲ್ ವುಡ್44 mins ago

    Shiva Rajkumar: ‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್‌; ಹ್ಯಾಟ್ರಿಕ್ ಹೀರೊಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌!

    rain news no entry falls
    ಪ್ರಮುಖ ಸುದ್ದಿ54 mins ago

    Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

    Tornado Effect in Udupi
    ಉಡುಪಿ59 mins ago

    Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

    MS Dhoni
    ಕ್ರೀಡೆ1 hour ago

    MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

    Hathras Stampede
    ದೇಶ1 hour ago

    Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

    Stock Market
    ವಾಣಿಜ್ಯ1 hour ago

    Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ7 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ9 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ5 mins ago

    Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

    Tornado Effect in Udupi
    ಉಡುಪಿ59 mins ago

    Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

    karnataka weather Forecast
    ಮಳೆ2 days ago

    Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

    karnataka Weather Forecast
    ಮಳೆ3 days ago

    Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

    karnataka Weather Forecast
    ಮಳೆ4 days ago

    Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

    Actor Darshan
    ಬೆಂಗಳೂರು4 days ago

    Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

    karnataka weather Forecast
    ಮಳೆ5 days ago

    Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

    karnataka Rain
    ಮಳೆ5 days ago

    Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

    karnataka Weather Forecast
    ಮಳೆ6 days ago

    Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

    karnataka Rain
    ಮಳೆ6 days ago

    Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

    ಟ್ರೆಂಡಿಂಗ್‌