Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ - Vistara News

ಮನಿ-ಗೈಡ್

Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Money Guide: ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನ ಕಳೆದ ಹಾಗೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಎಷ್ಟು ದುಡಿದರೂ ಕಡಿಮೆಯೇ ಎನ್ನುವಂತಾಗಿದೆ. ಅದರಲ್ಲಿಯೂ ಈಗಷ್ಟೇ ಉದ್ಯೋಗಕ್ಕೆ ಸೇರಿದವರಿಗೆ ಇನ್ನಷ್ಟು ಚಿಂತೆ. ತಮ್ಮ ಖರ್ಚು ನೋಡಬೇಕು, ಮನೆಯವರಿಗೂ ಹಣ ಕಳುಹಿಸಬೇಕು, ಲೋನ್‌ ಇದ್ದರೆ ಅದನ್ನೂ ತುಂಬಬೇಕು. ಇಷ್ಟರ ನಡುವೆ ಉಳಿತಾಯ ಎನ್ನುವುದು ಕನಸಿನ ಮಾತು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ಸಂಬಳ ಎಷ್ಟೇ ಬರಲಿ ಅದರಲ್ಲಿ ಪ್ರತಿ ತಿಂಗಳು ಒಂದಷ್ಟು ಹಣವನ್ನು ಉಳಿತಾಯ ಮಾಡಲೇ ಬೇಕು. ಯಾವಾಗ, ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಸಂಬಳ ಕೈಗೆ ಸಿಗಲು ಆರಂಭಿಸಿದ ದಿನದಿಂದ ಕಡ್ಡಾಯವಾಗಿ ಒಂದಷ್ಟು ಮೊತ್ತ ಉಳಿತಾಯ ಮಾಡಿ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ. ಕೈಗೆ ಸಿಗುವುದೇ ಇಷ್ಟು ಸಣ್ಣ ಮೊತ್ತ. ಇದರಲ್ಲಿ ಉಳಿತಾಯ ಮಾಡುವುದಾದರೂ ಹೇಗೆ? ಎನ್ನುವುದು ಬಹುತೇಕರ ಪ್ರಶ್ನೆ. ಅದಕ್ಕೆ ಇಲ್ಲಿದೆ ಉತ್ತರ. ಎಷ್ಟೇ ಸಂಬಳ ಬರಲಿ ಅದರಲ್ಲಿ ಒಂದಷ್ಟು ಹಣ ಸೇವಿಂಗ್ಸ್‌ ಮಾಡುವುದು ಹೇಗೆ ಎನ್ನುವ ಟಿಪ್ಸ್‌ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಬಜೆಟ್‌ ತಯಾರಿಸಿ

ಮೊದಲಿಗೆ ಬಜೆಟ್‌ ತಯಾರಿಸಿಕೊಳ್ಳಿ. ಕೈಗೆ ಎಷ್ಟು ಸಂಬಳ ಬರುತ್ತದೆ ಎನ್ನುವುದನ್ನು ಗಮನಿಸಿ ಬಜೆಟ್‌ ತಯಾರಿಸಿ. ತಿಂಗಳ ಆರಂಭದಲ್ಲೇ ಸಂಬಳದ ಮೊತ್ತವನ್ನು ಪ್ರತಿ ಖರ್ಚಿಗೆ ಇಷ್ಟೆಂದು ನಿರ್ಧರಿಸಿ. ಇದರಿಂದ ಅನಗತ್ಯ ಖರ್ಚನ್ನು ತಪ್ಪಿಸಬಹುದು. ಇದೇ ಕಾರಣಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಬಜೆಟ್‌ಗೆ ಒತ್ತು ನೀಡುತ್ತವೆ.

ಎಮರ್ಜೆನ್ಸಿ ಫಂಡ್‌

ಜೀವನ ಎನ್ನುವುದು ಅನಿರೀಕ್ಷಿತಗಳ ಆಗರ. ಇಲ್ಲಿ ಯಾವಾಗ, ಏನು ಸಂಭವಿಸುತ್ತದೆ ಎನ್ನುವುದನ್ನು ಮೊದಲೇ ನಿರೀಕ್ಷಿಸಲು ಸಾಧ್ಯವಿಲ್ಲ. ಹೀಗಾಗಿ ಎಮರ್ಜೆನ್ಸಿ ಫಂಡ್‌ ಹೊಂದಿರುವುದು ಅತ್ಯಗತ್ಯ. ಅಂದರೆ 4-5 ತಿಂಗಳ ಸಂಬಳದಷ್ಟು ಹಣ ನಮ್ಮ ಸೇವಿಂಗ್ ಅಕೌಂಟ್‌ನಲ್ಲಿ ಯಾವತ್ತೂ ಇರಬೇಕು. ಅನಿರೀಕ್ಷಿತ ಅಗತ್ಯಗಳಿಗೆ ಇದು ನೆರವಾಗುತ್ತದೆ. ತಕ್ಷಣ ದುಡ್ಡು ಕೈಗೆ ಬರುವಂತಿರಬೇಕು. ಇದರಿಂದ ಕಷ್ಟ ಕಾಲದಲ್ಲಿ ಸಾಲಕ್ಕಾಗಿ ಇತರರ ಮುಂದೆ ಕೈ ಚಾಚುವುದು ತಪ್ಪುತ್ತದೆ.

ಸಾಧ್ಯವಿರುವಲ್ಲೆಲ್ಲ ಖರ್ಚು ಕಡಿಮೆ ಮಾಡಿ

ನಿಮ್ಮ ಸಂಬಳವನ್ನು ಉಳಿಸಲು ಇದೊಂದು ಅತ್ಯುತ್ತಮ ಮಾರ್ಗ. ಸಾಧ್ಯವಾದಷ್ಟು ಮನೆಯಲ್ಲೇ ಆಹಾರ ತಯಾರಿಸಿ. ಪ್ರತಿ ದಿನ ಹೋಟೆಲ್‌ ಆಹಾರ ಸೇವಿಸುವುದರಿಂದ ಖರ್ಚು ಅಧಿಕ. ಮಾತ್ರವಲ್ಲ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಆದಷ್ಟು ಕರೆಂಟ್‌ ಉಳಿತಾಯ ಮಾಡಿ. ಅನಗತ್ಯ ಬಳಕೆ ತಪ್ಪಿಸಿ. ಮನೆ ಸಮೀಪದಲ್ಲೇ ಆಫೀಸ್‌ ಇದ್ದರೆ ಆದಷ್ಟು ನಡೆದುಕೊಂಡೇ ಹೋಗಿ. ಇದರಿಂದ ವಾಕಿಂಗ್‌ ಮಾಡಿದಂತೂ ಆಗುತ್ತದೆ. ಇನ್ನು ಅಗತ್ಯ ವಸ್ತುಗಳನ್ನು ಆನ್‌ಲೈನ್‌ / ಆಫ್‌ಲೈನ್‌ನಲ್ಲಿ ಆಫರ್‌ ಇದ್ದಾಗ ಕಂಡುಕೊಳ್ಳಿ.

ವಿಮೆ ಮಾಡಿಸಿ

ಜೀವ ವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಲ್ಲ ಎಂದಾದರೆ ಮೊದಲು ಇದನ್ನು ಮಾಡಿಸಿ. ಇದು ಅನಿವಾರ್ಯವೂ ಹೌದು. ಆರೋಗ್ಯ ವಿಮೆ ಕಠಿಣ ಸಂದರ್ಭದಲ್ಲಿ ನಿಮ್ಮನ್ನು ರಕ್ಷಿಸುತ್ತದೆ. ನಿಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ವಿಮೆ ವ್ಯಾಪ್ತಿಗೆ ಒಳಪಡುತ್ತಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಜತೆಗೆ ಜೀವ ವಿಮೆಯೂ ಪ್ರಮುಖವಾದುದು. ನಿಮ್ಮ ಜೀವ ವಿಮಾ ರಕ್ಷಣೆಯು ವಾರ್ಷಿಕ ಮನೆಯ ವೆಚ್ಚಗಳ ಮೂರು ಪಟ್ಟು ಇರುವಂತೆ ನೋಡಿಕೊಳ್ಳಿ. ಇದರಿಂದ ತುರ್ತು ಪರಿಸ್ಥಿತಿಯಲ್ಲಿ ನಿಮ್ಮ ಅಕೌಂಟ್‌ನಲ್ಲಿರುವ ಹಣವನ್ನು ಹಾಗೇ ಉಳಿಸಬಹುದು.

ಕಂಡದ್ದೆಲ್ಲ ಕೊಂಡು ಗುಡ್ಡೆ ಹಾಕಬೇಡಿ

ಶಾಪಿಂಗ್‌ ಹೋದಾಗ ಅಥವಾ ಆನ್‌ಲೈನ್‌ನಲ್ಲಿ ಆಕರ್ಷಕವಾಗಿ ಕಂಡದ್ದನ್ನೆಲ್ಲ ಕೊಂಡುಕೊಳ್ಳುವ ಅಭ್ಯಾಸ ಕೆಲವರಿಗಿರುತ್ತದೆ. ಅದರ ಉಪಯೋಗವೇನು, ತಾವೆಷ್ಟು ಅದನ್ನು ಬಳಸುತ್ತೇವೆ ಎನ್ನುವ ಬಗ್ಗೆ ಯೋಚನೆಯನ್ನೂ ಮಾಡದೆ ಖರೀದಿಸಿ ಗುಡ್ಡೆ ಹಾಕುತ್ತಾರೆ. ಈ ಅಭ್ಯಾಸವನ್ನು ನಿಲ್ಲಿಸಿ. ಯಾವುದೇ ವಸ್ತು ಕಂಡುಕೊಳ್ಳಬೇಕಾದರೆ ನಿಜವಾಗಿಯೂ ಅಗತ್ಯ ಉಂಟಾ ಎನ್ನುವುದನ್ನು ಹಲವು ಬಾರಿ ಯೋಚಿಸಿ.

ಹೂಡಿಕೆ ಮಾಡಿ

ಇಂದಿನ ಉಳಿತಾಯವೇ ನಾಳೆಯ ಆದಾಯ. ಹೀಗಾಗಿ ನಿಮ್ಮ ಆದಾಯದ 10% ಅನ್ನು ಹೂಡಿಕೆ ಮಾಡಿ. ಆದರೆ ಎಲ್ಲವನ್ನೂ ಒಂದೇ ಕಡೆ ಹೂಡಿಕೆ ಮಾಡಬೇಡಿ. ಇದಕ್ಕಾಗಿ ಈಕ್ವಿಟಿ, ಚಿನ್ನ, ಮ್ಯೂಚುವಲ್‌ ಫಂಡ್‌ನಂತಹ ವೈವಿಧ್ಯಮಯ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಿ. ಮ್ಯೂಚುವಲ್‌ ಫಂಡ್‌ ಎಂದರೆ ಸಾಮೂಹಿಕ ಹೂಡಿಕೆಯ ಸಾಧನ. ಹಲವಾರು ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿ, ಅದನ್ನು ವೃತ್ತಿಪರ ಫಂಡ್ ಮ್ಯಾನೇಜರ್‌ಗಳ ನೆರವಿನಿಂದ ಈಕ್ವಿಟಿ, ಬಾಂಡ್‌, ಸರ್ಕಾರಿ ಸೆಕ್ಯುರಿಟೀಸ್‌, ಮನಿ ಮಾರ್ಕೆಟ್‌ ಸಾಧನಗಳಲ್ಲಿ ಹೂಡಿಕೆ ಮಾಡುವುದು.‌ ಪ್ರತಿ ಮ್ಯೂಚುವಲ್‌ ಫಂಡ್‌ ಯೋಜನೆಗೂ ಅದರದ್ದೇ ಆದ ಉದ್ದೇಶ ಇರುತ್ತದೆ. ಸ್ಟಾಕ್‌ ಮಾರ್ಕೆಟ್‌ ಬಗ್ಗೆ ಸಾಕಷ್ಟು ತಿಳುವಳಿಕೆ ಇಲ್ಲದವರು ಹಾಗೂ ತಿಳಿಯಲು ಸಮಯದ ಅಭಾವ ಇರುವವರು ಮ್ಯೂಚುವಲ್‌ ಫಂಡ್‌ ಆಯ್ಕೆ ಮಾಡಬಹುದು. ನೆನಪಿಡಿ ಹೂಡಿಕೆಯಲ್ಲಿ ತೊಡಗುವ ಮುನ್ನ ಹಣಕಾಸು ಸಲಹೆಗಾರರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇಎಂಐ ತಪ್ಪಿಸಬೇಡಿ

ದಂಡದ ಮೂಲಕ ನಿಮ್ಮ ಒಂದಷ್ಟು ಹಣ ಪೋಲಾಗುವುದನ್ನು ತಡೆಯುವ ಅತ್ಯುತ್ತಮ ಮಾರ್ಗ ಎಂದರೆ ಸರಿಯಾದ ಸಮಯಕ್ಕೆ ಇಎಂಐ ಪಾವತಿಸುವುದು. ಸರಿಯಾಗಿ ಇಎಂಐ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಇದರಿಂದ ನಿಮ್ಮ ಹಣ ವ್ಯರ್ಥವಾದಂತಾಗುತ್ತದೆ. ಅಲ್ಲದೆ ವಾಹನದಲ್ಲಿ ಸಂಚರಿಸುವಾಗ ದಾಖಲೆಗಳು ತಪ್ಪದೆ ನಿಮ್ಮ ಬಳಿ ಇರಲಿ. ಹೆಲ್ಮೆಟ್‌, ಸೀಟ್‌ ಬೆಲ್ಟ್‌ ಧರಿಸುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಲೇಬೇಡಿ.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Credit Card New Rules: ಕ್ರೆಡಿಟ್ ಕಾರ್ಡ್‌ಗೆ ಹೊಸ ನಿಯಮ; ಗ್ರಾಹಕರು ಈಗ ಏನು ಮಾಡಬೇಕು?

ಎಲ್ಲಾ ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ ಆದೇಶ ಮಾಡಿದ್ದು, ಇದು ಕ್ರೆಡಿಟ್ ಕಾರ್ಡ್ ಬಳಸುತ್ತಿರುವ ಗ್ರಾಹಕರ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Credit Card New Rules
Koo

ಕ್ರೆಡಿಟ್ ಕಾರ್ಡ್ (Credit Card New Rules) ಬಿಲ್ ಪಾವತಿ (bill payment) ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಮಾಡಲಾಗಿದ್ದು, ಇದು ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ. ಎಲ್ಲಾ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನಿರ್ವಹಿಸುವ ಭಾರತ್ ಬಿಲ್ ಪಾವತಿ ವ್ಯವಸ್ಥೆ (BBPS) ಮೂಲಕ ರವಾನಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನ (RBI) ಆದೇಶದಲ್ಲಿ ತಿಳಿಸಿದೆ.

ಆದರೆ, ಕ್ರೆಡಿಟ್ ಕಾರ್ಡ್ ಪಾವತಿಗಳಿಗಾಗಿ CRED ಮತ್ತು PhonePe ನಂತಹ ಜನಪ್ರಿಯ ಅಪ್ಲಿಕೇಶನ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ತಮ್ಮ ಬ್ಯಾಂಕ್‌ಗಳು ಇನ್ನೂ ಸಕ್ರಿಯವಾಗಿಲ್ಲ ಎಂದು ಅನೇಕ ಗ್ರಾಹಕರು ದೂರಿದ್ದಾರೆ.

ಬ್ಯಾಂಕ್ ಏಕೀಕರಣದ ಪ್ರಸ್ತುತ ಸ್ಥಿತಿ ಏನಿದೆ?

ಭಾರತದಲ್ಲಿ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲು ಅಧಿಕಾರ ಹೊಂದಿರುವ 34 ಬ್ಯಾಂಕ್‌ಗಳಲ್ಲಿ 12 ಮಾತ್ರ ಪ್ರಸ್ತುತ BBPS ಪ್ಲಾಟ್‌ಫಾರ್ಮ್‌ನಲ್ಲಿ ಇದೆ. ಉಳಿದ 22 ಬ್ಯಾಂಕ್‌ಗಳು ಇನ್ನೂ ವ್ಯವಸ್ಥೆಯೊಂದಿಗೆ ಸಂಯೋಜಿಸುವ ಪ್ರಕ್ರಿಯೆಯಲ್ಲಿವೆ. ಪ್ರಸ್ತುತ ಎಸ್‌ಬಿಐ ಕಾರ್ಡ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಯು ಸಣ್ಣ ಹಣಕಾಸು ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಫೆಡರಲ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಐಡಿಬಿಐ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸಾರಸ್ವತ್ ಬ್ಯಾಂಕ್ ಗಳು ಬಿಬಿಪಿಎಸ್ ಪ್ಲಾಟ್ ಫಾರ್ಮ್ ನಲ್ಲಿ ಇವೆ.

ಆಕ್ಸಿಸ್ ಬ್ಯಾಂಕ್, ಹೆಚ್ ಡಿಎಫ್ ಸಿ ಬ್ಯಾಂಕ್, ಐಡಿಎಫ್ ಸಿ ಫಸ್ಟ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯೆಸ್ ಬ್ಯಾಂಕ್ ಗಳು ಸೇರಿದಂತೆ ಇನ್ನು ಹಲವು ಬ್ಯಾಂಕ್ ಗಳು ಬಿಬಿಪಿಎಸ್ ನೊಂದಿಗೆ ಸೇರುವ ಪ್ರಯತ್ನದಲ್ಲಿದೆ.

ಇನ್ನೂ ಅಪ್‌ಡೇಟ್‌ ಆಗಿಲ್ಲ ಏಕೆ?

ಕೆಲವು ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳುವಲ್ಲಿ ವಿಳಂಬವನ್ನು ಅನುಸರಿಸಲು ಹಲವಾರು ಅಂಶಗಳು ಕಾರಣವೆಂದು ಹೇಳಬಹುದು. ಏಕೀಕರಣವು ಅಸ್ತಿತ್ವದಲ್ಲಿರುವ ಸಿಸ್ಟಮ್‌ಗಳಿಗೆ ಗಮನಾರ್ಹವಾದ ನವೀಕರಣಗಳ ಅಗತ್ಯವಿದೆ. ಇದು ಸಂಕೀರ್ಣವಾಗಿದ್ದು, ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಮತ್ತು ಇದು ದುಬಾರಿ ಪ್ರಕ್ರಿಯೆಯಾಗಿದೆ.

ಕೆಲವು ಬ್ಯಾಂಕುಗಳು ಈ ಪ್ರಕ್ರಿಯೆಯನ್ನು ಸಮರ್ಥವಾಗಿ ಕೈಗೊಳ್ಳಲು ಅಗತ್ಯವಾದ ಸಂಪನ್ಮೂಲಗಳು ಅಥವಾ ತಾಂತ್ರಿಕ ಸಾಮರ್ಥ್ಯಗಳನ್ನು ಹೊಂದಿಲ್ಲ. ಇದಲ್ಲದೆ, ಬ್ಯಾಂಕ್‌ಗಳು ಬಿಲ್ ಪಾವತಿ ಸೌಲಭ್ಯಕ್ಕಿಂತ ಹೆಚ್ಚು ನಿರ್ಣಾಯಕ ಅಥವಾ ಲಾಭದಾಯಕವೆಂದು ಪರಿಗಣಿಸುವ ಡಿಜಿಟಲ್ ಬ್ಯಾಂಕಿಂಗ್ ಅಥವಾ ಹಣಕಾಸು ಸೇವೆಗಳ ಇತರ ಕ್ಷೇತ್ರಗಳಿಗೆ ಆದ್ಯತೆ ನೀಡುತ್ತಿದೆ. ಹೆಚ್ಚುವರಿಯಾಗಿ, ಅನೇಕ ಬ್ಯಾಂಕುಗಳು ತಮ್ಮದೇ ಆದ ಪಾವತಿ ವ್ಯವಸ್ಥೆಯನ್ನು ಹೊಂದಿವೆ ಮತ್ತು ಗ್ರಾಹಕರನ್ನು ತಮ್ಮ ಪರಿಸರ ವ್ಯವಸ್ಥೆಯೊಳಗೆ ನಿಕಟ ಸಂಬಂಧಗಳನ್ನು ಕಾಪಾಡಿಕೊಳ್ಳಲು ಮತ್ತು ವಹಿವಾಟಿನ ಮೇಲೆ ನಿಯಂತ್ರಣವನ್ನು ಇರಿಸಿಕೊಳ್ಳಲು ಆದ್ಯತೆ ನೀಡುತ್ತಿವೆ. ಹಾಗಾಗಿ ಈ ಅಪ್‌ಡೇಟ್‌ ಪ್ರಕ್ರಿಯೆ ವಿಳಂಬವಾಗಿದೆ.

ಏನು ಇದರ ಪರಿಣಾಮ?

ಆರ್‌ಬಿಐನ ಹೊಸ ಆದೇಶವು ಪ್ರಾಥಮಿಕವಾಗಿ ಮೂರನೇ ವ್ಯಕ್ತಿಯ ಅಪ್ಲಿಕೇಶನ್‌ಗಳನ್ನು ಅವಲಂಬಿಸಿರುವ ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಈ ಪ್ಲಾಟ್‌ಫಾರ್ಮ್‌ಗಳು ಕೊಡುಗೆಗಳನ್ನು ನೀಡುತ್ತಿತ್ತು.

ಬ್ಯಾಂಕ್‌ಗಳು ಬಿಬಿಪಿಎಸ್ ಅನ್ನು ಅಳವಡಿಸಿಕೊಳ್ಳದಿದ್ದರೆ ಬಳಕೆದಾರರು ತಮ್ಮ ಪಾವತಿಗಳೊಂದಿಗೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಬಿಬಿಪಿಎಸ್‌ನ ಹಿಂದಿನ ಮುಖ್ಯ ಆಲೋಚನೆಯು ಬಿಲ್ ಪಾವತಿ ಪ್ರಕ್ರಿಯೆಯನ್ನು ಕೇಂದ್ರೀಕರಿಸುವುದು ಮತ್ತು ಸುಗಮಗೊಳಿಸುವುದು. ಬಳಕೆದಾರರಿಗೆ ಒಂದೇ ಪ್ಲಾಟ್‌ಫಾರ್ಮ್‌ನಿಂದ ಬಹು ಬಿಲ್‌ಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಬಿಬಿಪಿಎಸ್ ಗೆ ಪ್ರವೇಶವಿಲ್ಲದೆ ಬಳಕೆದಾರರು ಹಲವಾರು ಪ್ಲಾಟ್‌ಫಾರ್ಮ್‌ಗಳನ್ನು ನ್ಯಾವಿಗೇಟ್ ಮಾಡಬೇಕಾಗಬಹುದು ಅಥವಾ ಹಲವಾರು ಪಾವತಿ ಸೆಟಪ್‌ಗಳನ್ನು ನಿರ್ವಹಿಸಬೇಕಾಗಬಹುದು. ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸಬಹುದು.

ಬಿಬಿಪಿಎಸ್ ನೊಂದಿಗೆ ಬ್ಯಾಂಕ್‌ಗಳನ್ನು ಸಂಯೋಜಿಸದ ಕ್ರೆಡಿಟ್ ಕಾರ್ಡ್ ಬಳಕೆದಾರರು ಕೆಲವು ಬಿಲ್ ಪಾವತಿಗಳಿಗೆ ತಮ್ಮ ಕಾರ್ಡ್‌ಗಳನ್ನು ಬಳಸಲು ಸಾಧ್ಯವಾಗದಿರಬಹುದು.

ಇದನ್ನೂ ಓದಿ: SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

ಹಾಗಾದರೆ ಗ್ರಾಹಕರು ಏನು ಮಾಡಬಹುದು?

ಸದ್ಯಕ್ಕೆ ಬಿಬಿಪಿಎಸ್ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಬ್ಯಾಂಕ್ ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಲು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸಲಹೆ ನೀಡಲಾಗುತ್ತಿದೆ. ಈ ಮಾಹಿತಿಯು ಸಾಮಾನ್ಯವಾಗಿ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಥವಾ ಗ್ರಾಹಕ ಸೇವಾ ಚಾನೆಲ್‌ಗಳ ಮೂಲಕ ಲಭ್ಯವಿರುತ್ತದೆ. ಬ್ಯಾಂಕ್‌ಗಳು ಇನ್ನೂ ಬಿಬಿಪಿಎಸ್ ನಲ್ಲಿ ಸೇರಿಕೊಳ್ಳದೇ ಇದ್ದರೆ ತಮ್ಮ ಬಿಲ್ ಪಾವತಿ ಕಷ್ಟವಾಗಬಹುದು. ಗಡುವು ಮೀರಿದ ದಂಡ ಶುಲ್ಕದಿಂದ ಪಾರಾಗಲು ಪರ್ಯಾಯ ಪಾವತಿ ವಿಧಾನಗಳನ್ನು ಹುಡುಕಿಕೊಳ್ಳಬೇಕಾಗುತ್ತದೆ. ಆಯಾ ಬ್ಯಾಂಕ್‌ನ ಕಾಲ್‌ ಸೆಂಟರ್‌ಗೆ ಕರೆ ಮಾಡಿ ನೆರವು ಕೋರಬೇಕು.

Continue Reading

ಮನಿ-ಗೈಡ್

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Money Guide: ನೀವೂ ಮಗುವಿನ ಹುಟ್ಟಿದ ಹಬ್ಬಕ್ಕೆ ಏನಾದರೂ ಗಿಫ್ಟ್‌ ಕೊಡಬೇಕು ಎನ್ನುವ ಯೋಚನೆಯಲ್ಲಿದ್ದೀರಾ? ಈ ಉಡುಗೊರೆ ಅವರ ಉಜ್ವಲ ಭವಿಷ್ಯಕ್ಕೂ ನೆರವಾಗಬೇಕು ಎಂದು ಯೋಚಿಸುತ್ತಿದ್ದೀರಾ? ಹೌದು ಎಂದಾದರೆ ನೀವು ಅಂಚೆ ಕಚೇರಿಯ ಬಾಲ್‌ ಜೀವನ್ ಬಿಮಾ ಯೋಜನೆಯಲ್ಲಿ ಮಗುವಿನ ಹೂಡಿಕೆ ಮಾಡಬಹುದು. ಏನಿದು ಯೋಜನೆ? ಯಾರೆಲ್ಲ ಅರ್ಹರು? ಮುಂತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಮಕ್ಕಳ ಭವಿಷ್ಯ ಉಜ್ವಲವಾಗಿರಬೇಕು ಎನ್ನುವುದು ಪ್ರತಿಯೊಬ್ಬ ಪಾಲಕರ ಕನಸು. ಮಕ್ಕಳು ಸದಾ ಸಂತಸದಿಂದ ಇರಬೇಕು ಎಂದು ಬಯಸುತ್ತಾರೆ. ಇದಕ್ಕಾಗಿ ಏನೇ ತ್ಯಾಗ ಮಾಡಲೂ ಸಿದ್ಧರಿರುತ್ತಾರೆ. ತಮ್ಮಂತೆ ಮಕ್ಕಳು ಕಷ್ಟಪಡಬಾರದೆಂದು ಒದ್ದಾಡುತ್ತಾರೆ. ಇದೇ ಕಾರಣಕ್ಕೆ ಮಕ್ಕಳು ಕೇಳಿದ್ದನ್ನೆಲ್ಲ ತಂದು ಗುಡ್ಡೆ ಹಾಕುತ್ತಾರೆ. ಅದರಲ್ಲಿಯೂ ಮಕ್ಕಳ ಬರ್ತ್‌ಡೇ ಬಂತೆಂದರೆ ಸಾಕು ದುಬಾರಿ ಉಡುಗೊರೆ ನೀಡಲು ಮುಂದಾಗುತ್ತಾರೆ. ನೀವೂ ಮಗುವಿನ ಹುಟ್ಟಿದ ಹಬ್ಬಕ್ಕೆ ಏನಾದರೂ ಗಿಫ್ಟ್‌ ಕೊಡಬೇಕು ಎನ್ನುವ ಯೋಚನೆಯಲ್ಲಿದ್ದೀರಾ? ಈ ಉಡುಗೊರೆ ಅವರ ಉಜ್ವಲ ಭವಿಷ್ಯಕ್ಕೂ ನೆರವಾಗಬೇಕು ಎಂದು ಯೋಚಿಸುತ್ತಿದ್ದೀರಾ? ಹೌದು ಎಂದಾದರೆ ನೀವು ಅಂಚೆ ಕಚೇರಿಯ ಬಾಲ್‌ ಜೀವನ್ ಬಿಮಾ (Bal Jeevan Bima) ಯೋಜನೆಯಲ್ಲಿ ಮಗುವಿನ ಹೂಡಿಕೆ ಮಾಡಬಹುದು. ಏನಿದು ಯೋಜನೆ? ಯಾರೆಲ್ಲ ಅರ್ಹರು? ಮುಂತಾದ ಸಂಪೂರ್ಣ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಏನಿದು ಯೋಜನೆ?

ಭಾರತೀಯ ಅಂಚೆ ಕಚೇರಿ ಮಕ್ಕಳಿಗಾಗಿಯೇ ಆರಂಭಿಸಿದ ಯೋಜನೆ ಇದು. 5ರಿಂದ 20 ವರ್ಷದೊಳಗಿನ ಮಕ್ಕಳ ಪೋಷಕರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪ್ರತಿ ದಿನ ಮಕ್ಕಳ ಹೆಸರಿನಲ್ಲಿ 6 ರೂ. ಹೂಡಿಕೆ ಮಾಡಿದರೆ ಮೆಚ್ಯುರಿಟಿ ಆದಾಗ 1 ಲಕ್ಷ ರೂ. ಪಡೆಯಬಹುದು. ಆಕಸ್ಮಿಕವಾಗಿ ಮೃತಪಟ್ಟರೆ ಬಳಿಕ ಹಣ ಕಟ್ಟಬೇಕಾಗಿಲ್ಲ. ಅಂತಹ ಸಂದರ್ಭದಲ್ಲಿ ಪಾಲಕರಿಗೆ 1 ಲಕ್ಷ ರೂ. ಸಂದಾಯವಾಗುತ್ತದೆ.

ಯಾರೆಲ್ಲ ಅರ್ಹರು?

ಅರ್ಜಿ ಸಲ್ಲಿಸುವ ಪಾಲಕರ ವಯಸ್ಸು 45 ವರ್ಷಕ್ಕಿಂತ ಹೆಚ್ಚಿರಬಾರದು. ಮಗುವಿನ ವಯಸ್ಸು ಕನಿಷ್ಠ 5 ವರ್ಷ ಮತ್ತು ಗರಿಷ್ಠ ವಯಸ್ಸು 20 ವರ್ಷ. ಈ ಯೋಜನೆಯಡಿ ಒಂದು ಕುಟುಂಬದ 2 ಮಕ್ಕಳು ಮಾತ್ರ ಪ್ರಯೋಜನಗಳನ್ನು ಪಡೆಯಬಹುದು. ದೈನಂದಿನ ಹೂಡಿಕೆ ಆಯ್ಕೆ ಪಾಲಕರ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಮೊತ್ತವನ್ನು ಮಕ್ಕಳ ಶಿಕ್ಷಣ ಹಾಗೂ ಇತರ ಹಣಕಾಸು ಸಹಾಯಕ್ಕೆ ಬಳಕೆ ಮಾಡಬಹುದು. ಈ ಯೋಜನೆ ಹಣವನ್ನು ಉಳಿತಾಯ ಮಾಡಲೂ ಸಹಕಾರಿ.

ಹೂಡಿಕೆ ಹೇಗೆ?

ಈ ಯೋಜನೆಯಲ್ಲಿ ಕನಿಷ್ಠ ವಿಮಾ ಮೊತ್ತವು 1,00,000 ರೂ. ಮತ್ತು ಗರಿಷ್ಠ ವಿಮಾ ಮೊತ್ತ 3,00,000 ರೂ. ಪ್ರತಿ ದಿನ, ಮಾಸಿಕ, ಪಾಕ್ಷಿಕ, ಅರ್ಧ ವಾರ್ಷಿಕ, ವಾರ್ಷಿಕ ಹೀಗೆ ನಿಮ್ಮ ಆಯ್ಕೆಯ ವಿಧಾನದಲ್ಲಿ ಹೂಡಿಕೆ ಮಾಡಬಹುದು. ಉದಾಹರಣೆ ನೋಡುವುದಾದರೆ, ನೀವು 5 ವರ್ಷಗಳಿಗೆ ಹೂಡಿಕೆ ಮಾಡುತ್ತಿದ್ದರೆ ಪ್ರತಿದಿನ 18 ರೂ. ಪಾವತಿಸಬೇಕು. ಅದೇ 20 ವರ್ಷಗಳವರೆಗೆ ಹೂಡಿಕೆ ಮಾಡುತ್ತಿದ್ದರೆ ದಿನಕ್ಕೆ 6 ರೂ. ಪ್ರೀಮಿಯಂ ಪಾವತಿಸಬೇಕಾಗುತ್ತದೆ.

ಷರತ್ತುಗಳು

ಪಾಲಿಸಿದಾರ ಮಧ್ಯದಲ್ಲಿಯೇ ಮೃತಪಟ್ಟರೆ ಹಣವನ್ನು ಪಾವತಿಸಬೇಕಾಗಿಲ್ಲ. ಪಾಲಿಸಿ ಅವಧಿ ಮುಗಿದ ಮೇಲೆ ಸಂಪೂರ್ಣ ಹಣ ಸಿಗುತ್ತದೆ. ಮಧ್ಯದಲ್ಲಿಯೇ ಪಾಲಿಸಿ ವಿತ್ ಡ್ರಾ ಮಾಡಲು 5 ವರ್ಷ ಕಾಯಬೇಕು. 5 ವರ್ಷಕ್ಕಿಂತ ಮೊದಲು ಪಾಲಿಸಿ ಹಣ ಪಡೆಯಲು ಸಾಧ್ಯವಿಲ್ಲ. ಸದ್ಯ ಈ ಪಾಲಿಸಿಯಲ್ಲಿ ಸಾಲ ಪಡೆಯಲು ಅವಕಾಶವಿಲ್ಲ.

ಎಲ್ಲಿ ಲಭ್ಯ?

ಬಾಲ ಜೀವನ್ ಬಿಮಾ ಯೋಜನೆ ಪಡೆಯಲು ನಿಮ್ಮ ಸಮೀಪದ ಅಂಚೆ ಕಚೇರಿಗೆ ಭೇಟಿ ನೀಡಿ. ಈ ಯೋಜನೆಯ ಅರ್ಜಿ ಪಡೆದು ಅದನ್ನು ಭರ್ತಿ ಮಾಡಿ ಸಲ್ಲಿಸಿ.

ಏನೆಲ್ಲ ದಾಖಲೆ ಅಗತ್ಯ?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಗುವಿನ ಜನನ ದಾಖಲೆ, ಆಧಾರ್ ಕಾರ್ಡ್, ವಿಳಾಸದ ದಾಖಲೆ, ಪಾಲಕರ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಪಾಸ್‌ಪೋರ್ಟ್‌ ಗಾತ್ರದ ಫೋಟೋ ಅಗತ್ಯ.

ಇದನ್ನೂ ಓದಿ: Money Guide: ಕಡಿಮೆ ಸಂಬಳ ಇದ್ದರೂ ಚಿಂತೆ ಬೇಡ; ಉಳಿತಾಯಕ್ಕಾಗಿ ಈ ಟಿಪ್ಸ್‌ ಫಾಲೋ ಮಾಡಿ

Continue Reading

ಮನಿ-ಗೈಡ್

ITR Filing: ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ಈ ಸಂಗತಿ ತಿಳಿದಿರಲೇಬೇಕು!

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ (ITR Filing) ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ. ಆದಾಯ ತೆರಿಗೆ ರಿಟರ್ನ್‌ ಸಲ್ಲಿಸುವ ಮೊದಲು ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ.

VISTARANEWS.COM


on

By

ITR Filing
Koo

ಆದಾಯ ತೆರಿಗೆ ರಿಟರ್ನ್ (ITR Filing) ಸಲ್ಲಿಸುವ ಮೊದಲು ತಿಳಿದುಕೊಳ್ಳಬೇಕಾದ ಹಲವಾರು ಸಂಗತಿಗಳಿವೆ. ಆದಾಯ ತೆರಿಗೆಯು (Income tax) ಜನರು ಮತ್ತು ಸಂಸ್ಥೆಗಳು ಗಳಿಸುವ ಆದಾಯ ಮತ್ತು ಲಾಭದ ಮೇಲೆ ಪಾವತಿಸುವ ತೆರಿಗೆಯಾಗಿದೆ. ಆದಾಯ ತೆರಿಗೆ ರಿಟರ್ನ್ (ITR) ಅನ್ನು ಸಲ್ಲಿಸುವುದು ತೆರಿಗೆದಾರರು ಮಾಡಲೇಬೇಕಾದ ವಾರ್ಷಿಕ ಆಥಿಕ ಕಾರ್ಯವಾಗಿದೆ.

ಭಾರತದಲ್ಲಿ (India) ತೆರಿಗೆದಾರರು (taxpayer) ತಮ್ಮ ಆದಾಯ ಮತ್ತು ತೆರಿಗೆಗಳ ವಾರ್ಷಿಕ ಲೆಕ್ಕಾಚಾರವನ್ನು ಸಲ್ಲಿಸುವ ಮೂಲಕ ಸರ್ಕಾರಕ್ಕೆ ವರದಿ ಮಾಡಬೇಕಾಗುತ್ತದೆ. ಪಾರದರ್ಶಕತೆ, ಹೊಣೆಗಾರಿಕೆ ಮತ್ತು ರಾಷ್ಟ್ರದ ಆರ್ಥಿಕ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಇದು ಅತ್ಯಮೂಲ್ಯವಾಗಿದೆ. 2023– 24ರ ಮೌಲ್ಯಮಾಪನ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಪ್ರಕ್ರಿಯೆಯು ಸ್ವಲ್ಪ ಸಂಕೀರ್ಣ ಮತ್ತು ಸವಾಲಿನದ್ದಾಗಿರಬಹುದು. ತೆರಿಗೆದಾರರು ತಮ್ಮ ಐಟಿಆರ್ ಅನ್ನು ಸಲ್ಲಿಸುವಾಗ ತಿಳಿದಿರಬೇಕಾದ ಮತ್ತು ಗಮನ ಹರಿಸಬೇಕಾದ ಕೆಲವು ಪ್ರಮುಖ ವಿಷಯಗಳಿವೆ.

ಗಡುವು ತಿಳಿದಿರಿ

ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸುವ ಮೊದಲು ಎಲ್ಲಾ ತೆರಿಗೆದಾರರು ಗಮನಿಸಬೇಕಾದ ಮೊದಲ ಮತ್ತು ಪ್ರಮುಖ ವಿಷಯವೆಂದರೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಾಮಾನ್ಯವಾಗಿ ಪ್ರತಿ ಹಣಕಾಸು ವರ್ಷದ ಜುಲೈ 31 ಕೊನೆಯ ದಿನವಾಗಿದೆ. ಈ ವರ್ಷ ಆದಾಯ ತೆರಿಗೆ ಇಲಾಖೆಯು 2023-24ಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ತೆರಿಗೆ ಪದ್ಧತಿಯನ್ನು ಅರ್ಥಮಾಡಿಕೊಳ್ಳಿ

ತೆರಿಗೆದಾರರು ಈಗ ಹಳೆಯ ತೆರಿಗೆ ಪದ್ಧತಿ ಮತ್ತು ಬಜೆಟ್ 2020ರಲ್ಲಿ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯ ನಡುವೆ ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿದ್ದಾರೆ. ಎರಡೂ ತನ್ನದೇ ಆದ ಸಾಧಕ-ಬಾಧಕಗಳನ್ನು ಹೊಂದಿವೆ. ಹೊಸ ಪದ್ದತಿಯು ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆ. ಆದರೆ ಕೆಲವು ವಿಷಯಗಳ ಮೇಲೆ ಕಡಿತ ಮತ್ತು ವಿನಾಯಿತಿಗಳನ್ನು ಮಿತಿಗೊಳಿಸುತ್ತದೆ.

ಹಳೆಯ ಪದ್ದತಿಯು ತುಲನಾತ್ಮಕವಾಗಿ ಹೆಚ್ಚಿನ ತೆರಿಗೆ ದರಗಳನ್ನು ಹೊಂದಿದೆ. ಆದರೆ ಕಡಿತ ಮತ್ತು ತೆರಿಗೆ ಪ್ರಯೋಜನಗಳನ್ನು ಕ್ಲೈಮ್ ಮಾಡುವ ಮೂಲಕ ಹಣವನ್ನು ಉಳಿಸಲು ಜನರಿಗೆ ಅವಕಾಶ ನೀಡುತ್ತದೆ. ಒಬ್ಬರ ಪರಿಸ್ಥಿತಿಗೆ ಅನುಗುಣವಾಗಿ ಯಾವ ಪದ್ಧತಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂಬುದನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಕೊಳ್ಳಬೇಕು.

ಯಾವ ತೆರಿಗೆ ವರ್ಗಕ್ಕೆ ಸೇರುತ್ತೀರಿ?

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಮೊದಲು ತೆರಿಗೆ ವರ್ಗಕ್ಕೆ ಸೇರುತ್ತೀರಿ ಎಂಬುದನ್ನು ತಿಳಿದುಕೊಂಡಿರಬೇಕು. ತೆರಿಗೆಯ ಆದಾಯವನ್ನು ತಿಳಿದುಕೊಳ್ಳುವುದು ತೆರಿಗೆ ಹೊಣೆಗಾರಿಕೆಯನ್ನು ನಿರ್ಧರಿಸಲು ಸಹಾಯ ಮಾಡುತ್ತದೆ, ಇದು ಭರ್ತಿ ಮಾಡಲು ಅರ್ಹವಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಅದಕ್ಕೆ ಅನುಗುಣವಾಗಿ ಹಣಕಾಸು ಮತ್ತು ಹೂಡಿಕೆಗಳನ್ನು ಯೋಜಿಸಲು ಆದಾಯ ತೆರಿಗೆ ರಿಟರ್ನ್ ಅನ್ನು ಸಮರ್ಥ ಮತ್ತು ದೋಷ-ಮುಕ್ತ ರೀತಿಯಲ್ಲಿ ಸಲ್ಲಿಸುವುದನ್ನು ಖಚಿತಪಡಿಸುತ್ತದೆ.

ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ವೇಳೆ ದಾಖಲೆಗಳನ್ನು ಪರಿಶೀಲಿಸುವುದು ಬಹುಮುಖ್ಯವಾಗಿದೆ. ಆದಾಯ ತೆರಿಗೆ ಇಲಾಖೆಯು ತೆರಿಗೆದಾರರು ತಮ್ಮ ಆದಾಯ, ಕಡಿತಗಳು ಮತ್ತು ತೆರಿಗೆ ಪಾವತಿಗಳನ್ನು ದೃಢೀಕರಿಸಲು ವಿವಿಧ ದಾಖಲೆಗಳನ್ನು ಸಲ್ಲಿಸಬೇಕು. ಆದ್ದರಿಂದ ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಪ್ರಕ್ರಿಯೆಯು ಹೆಚ್ಚು ಸುವ್ಯವಸ್ಥಿತ ಮತ್ತು ಡಿಜಿಟೈಸ್ ಆಗಿರುವುದರಿಂದ ಡಿಜಿಟಲ್ ಸಾಧನದಲ್ಲಿ ಅಗತ್ಯ ದಾಖಲೆಗಳನ್ನು ಸಂಘಟಿಸುವುದು ಮತ್ತು ಉಳಿಸುವುದು ಫೈಲಿಂಗ್ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಹೆಚ್ಚು ನಿಖರವಾಗಿ ಮಾಡಲು ಸಹಾಯ ಮಾಡುತ್ತದೆ.


ಸರಿಯಾದ ಐಟಿಆರ್ ಅರ್ಜಿಯನ್ನು ಆಯ್ಕೆ ಮಾಡಿ

ಆದಾಯದ ಮೂಲ ಮತ್ತು ಒಟ್ಟು ಆದಾಯದ ಆಧಾರದ ಮೇಲೆ ಅನ್ವಯವಾಗುವ ಐಟಿಆರ್ ಫಾರ್ಮ್ ಅನ್ನು ಗುರುತಿಸುವುದು ಮತ್ತು ಆಯ್ಕೆ ಮಾಡುವುದು ಮುಖ್ಯವಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ತೆರಿಗೆದಾರರಿಂದ ಆರಂಭಿಕ ರಿಟರ್ನ್ ಫೈಲಿಂಗ್ ಅನ್ನು ಉತ್ತೇಜಿಸಲು ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಐಟಿಆರ್ ಫಾರ್ಮ್‌ಗಳು ಲಭ್ಯವಾಗುವಂತೆ ಮಾಡಿತು.

ಐಟಿಆರ್-1 ಆದಾಯದ ಮೂಲ ಸಂಬಳವಾಗಿದ್ದು, ಮನೆ ಆಸ್ತಿ ಮತ್ತು ಇತರ ಮೂಲಗಳಿಂದ ಬಡ್ಡಿ, ಲಾಭಂಶ ಸೇರಿ ಒಟ್ಟು 50 ಲಕ್ಷ ರೂ. ಆದಾಯವಿದ್ದವರು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್ -2 ಬಂಡವಾಳ ಅಥವಾ ವಿದೇಶಿ ಆಸ್ತಿಗಳಿಂದ ಆದಾಯದ ಮೂಲ ಹೊಂದಿರುವ ಹಿಂದೂ ಅವಿಭಜಿತ ಕುಟುಂಬಗಳು ಇದರಲ್ಲಿ ಅರ್ಜಿ ಸಲ್ಲಿಸಬೇಕು.

ಐಟಿಆರ್- 3 ವ್ಯಾಪಾರ ಅಥವಾ ಸ್ವಯಂ ವೃತ್ತಿಯಿಂದ ಆದಾಯ ಹೊಂದಿರುವ ವ್ಯಕ್ತಿಗಳು, ಐಟಿಆರ್- 4 ವ್ಯಾಪಾರ ಅಥವಾ ಸ್ವಂತ ವೃತ್ತಿಯಿಂದ ಆದಾಯ ಹೊಂದಿರುವವರು ಇದರಲ್ಲಿ ಅರ್ಜಿ ಸಲ್ಲಿಸಬಹುದು.

ವೈಯಕ್ತಿಕ ಮತ್ತು ಬ್ಯಾಂಕ್ ಖಾತೆ ವಿವರ ಪರಿಶೀಲಿಸಿ

ಐಟಿಆರ್ ಅನ್ನು ಸಲ್ಲಿಸುವ ಮೊದಲು ತೆರಿಗೆ ಮರುಪಾವತಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಪ್ಪಿಸಲು ತೆರಿಗೆದಾರರು ತಮ್ಮ ವೈಯಕ್ತಿಕ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಪರಿಶೀಲಿಸಬೇಕು. ಹೆಸರು, ವಿಳಾಸ, ಇಮೇಲ್ ಮತ್ತು ಪಾನ್ ನಂತಹ ವಿವರಗಳನ್ನು ಲಿಂಕ್ ಮಾಡಲಾಗಿದೆ ಮತ್ತು ತೆರಿಗೆ ರಿಟರ್ನ್‌ನಲ್ಲಿ ನಿಖರವಾಗಿ ನಮೂದಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸರಿಯಾದ ಮೌಲ್ಯಮಾಪನ ವರ್ಷವನ್ನು ಆಯ್ಕೆ ಮಾಡಿ

ತೆರಿಗೆ ರಿಟರ್ನ್‌ನಲ್ಲಿ ಸರಿಯಾದ ಮೌಲ್ಯಮಾಪನ ವರ್ಷವನ್ನು ನಮೂದಿಸಿ. ಇದರಲ್ಲಿ ತಪ್ಪುಗಳಾದರೆ ಹೆಚ್ಚು ತೆರಿಗೆ ಮತ್ತು ಅನಗತ್ಯ ದಂಡಗಳಿಗೆ ಕಾರಣವಾಗಬಹುದು.

ಫಾರ್ಮ್ 16ರಲ್ಲಿ ವಿವರಗಳನ್ನು ಪರಿಶೀಲಿಸಿ

ಫಾರ್ಮ್ 16ರಲ್ಲಿನ ಸಂಬಳದ ಭಾಗಗಳು, ಟಿಡಿಎಸ್ ಕಡಿತ ಮತ್ತು ತೆರಿಗೆ-ಉಳಿತಾಯ ಹೂಡಿಕೆಗಳಂತಹ ವಿವರಗಳು ಸರಿಯಾಗಿವೆಯೇ ಎಂದು ಮುಂಚಿತವಾಗಿ ಖಚಿತಪಡಿಸಿಕೊಳ್ಳಿ. ಪೇ ಸ್ಲಿಪ್‌ ಮತ್ತು ಹೂಡಿಕೆ ಹೇಳಿಕೆಗಳೊಂದಿಗೆ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡಿ. ಯಾವುದೇ ವ್ಯತ್ಯಾಸಗಳನ್ನು ಸರಿಪಡಿಸಲು ಉದ್ಯೋಗದಾತರಿಗೆ ವರದಿ ಮಾಡಬೇಕು.

ಹಣಕಾಸು ವರ್ಷದಲ್ಲಿ ಒಬ್ಬರು ಬಹು ಉದ್ಯೋಗದಾತರನ್ನು ಹೊಂದಿದ್ದರೆ ರಿಟರ್ನ್ ಸಲ್ಲಿಸುವ ಮೊದಲು ನಿಮ್ಮ ಎಲ್ಲಾ ಫಾರ್ಮ್ 16ರಿಂದ ಆದಾಯವನ್ನು ಒಟ್ಟುಗೂಡಿಸಿರುವುದು ಖಚಿತಪಡಿಸಿಕೊಳ್ಳಿ. ಸರಿಯಾದ ಕಡಿತಗಳನ್ನು ಕ್ಲೈಮ್ ಮಾಡಲು ಮತ್ತು ಒಟ್ಟು ಆದಾಯವನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

ನಿಖರ ವರದಿ ಖಚಿತಪಡಿಸಿ

ಫಾರ್ಮ್ 26ಎಎಸ್ (ತೆರಿಗೆ ಕ್ರೆಡಿಟ್ ಸ್ಟೇಟ್‌ಮೆಂಟ್) ಮತ್ತು ಎಐಎಸ್ /ಟಿಐಎಸ್ (ವಾರ್ಷಿಕ ಮಾಹಿತಿ ಹೇಳಿಕೆ/ತೆರಿಗೆ ಮಾಹಿತಿ ಹೇಳಿಕೆ) ನಲ್ಲಿ ಲಭ್ಯವಿರುವ ಮಾಹಿತಿಯೊಂದಿಗೆ ಒಟ್ಟು ಆದಾಯವನ್ನು ಸಂಪೂರ್ಣವಾಗಿ ಸಮನ್ವಯಗೊಳಿಸಿ. ಯಾಕೆಂದರೆ ಇದು ಯಾವುದೇ ವ್ಯತ್ಯಾಸಗಳನ್ನು ಗುರುತಿಸಲು ಮತ್ತು ಎಲ್ಲಾ ಆದಾಯ ಮೂಲಗಳನ್ನು ನಿಖರವಾಗಿ ವರದಿ ಮಾಡಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

Continue Reading

ಮನಿ-ಗೈಡ್

Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Money Guide: ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭವಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲ್ಯಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರ ಒದಗಿಸಲು ಬ್ಯಾಂಕ್‌ಗಳು ಕ್ರೆಡಿಟ್ ಕಾರ್ಡ್‌ಗಳಂತೆ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ಗಳನ್ನೂ ಪರಿಚಯಿಸಿವೆ. ಅಂತಹ ಕೆಲವು ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ಗಳ ವಿವರ ಇಂದಿನ ಮನಿಗೈಡ್‌ನಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಜೀವನದಲ್ಲಿ ಒಮ್ಮೆಯಾದರೂ ವಿದೇಶ ಪ್ರವಾಸ ಕೈಗೊಳ್ಳಬೇಕು ಎಂದು ಬಹುತೇಕರು ಅಂದುಕೊಳ್ಳುತ್ತಾರೆ. ಅಲ್ಲಿನ ಪ್ರಕೃತಿ, ಆಹಾರ ಪದ್ಧತಿ, ಜನ ಜೀವನ ಹೀಗೆ ಪ್ರತಿಯೊಂದದನ್ನು ಹತ್ತಿರದಿಂದಲೇ ನೋಡಬೇಕು, ನಮ್ಮ ದೇಶಕ್ಕಿಂತ ಅಲ್ಲಿ ಜೀವನ ವಿಧಾನ ಹೇಗೆ ಭಿನ್ನ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಬಯಸುತ್ತಾರೆ. ಆದರೆ ವಿದೇಶ ಪ್ರವಾಸ ಅಂದುಕೊಂಡಷ್ಟು ಸುಲಭವಲ್ಲ. ಪಾಸ್‌ಪೋರ್ಟ್‌, ವೀಸಾ ಹೊಂದಿಸುವುದರಿಂದ ಹಿಡಿದು ಟಿಕೆಟ್‌ ಬುಕ್‌ ಮಾಡುವುದು, ಅಲ್ಲಿನ ಪ್ರವಾಸ ತಾಣಗಳ ಬಗ್ಗೆ ಮಾಹಿತಿ ಕಲೆ ಹಾಕುವುದು, ಉಳಿದುಕೊಳ್ಳುವ ವ್ಯವಸ್ಥೆ, ಶಾಪಿಂಗ್‌ ಮಾಡುವ ರೀತಿ ಹೀಗೆ ಎಲ್ಲ ವಿಚಾರದ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಸೂಕ್ತ ಪ್ಲ್ಯಾನ್‌ ಮಾಡಬೇಕಾಗುತ್ತದೆ. ಜತೆಗೆ ಅಲ್ಲಿ ನಿಮ್ಮ ಹಣವನ್ನು ಹೇಗೆ ಖರ್ಚು ಮಾಡುವುದು ಎನ್ನುವ ವಿಚಾರವೂ ಮುಖ್ಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರ ಒದಗಿಸಲು ಬ್ಯಾಂಕ್‌ಗಳು ಕ್ರೆಡಿಟ್ ಕಾರ್ಡ್‌ಗಳಂತೆ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ (International Travel Debit Card)ಗಳನ್ನೂ ಪರಿಚಯಿಸಿವೆ. ಅಂತಹ ಕೆಲವು ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ಗಳ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ಗಳು ಪ್ರಯಾಣ ರಿಯಾಯಿತಿಗಳು, ಲಾಂಜ್ ಪ್ರವೇಶ, ವಿದೇಶಿ ಖರೀದಿಗಳ ಮೇಲೆ ಹೆಚ್ಚಿದ ರಿವಾರ್ಡ್ ಪಾಯಿಂಟ್‌ಗಳು ಮತ್ತಿತರ ಕೊಡುಗೆಗಳನ್ನು ನೀಡುತ್ತವೆ.

ಐಸಿಐಸಿಐ ಮಾಸ್ಟರ್‌ಕಾರ್ಡ್‌ ವರ್ಲ್ಡ್‌ ಡೆಬಿಟ್‌ ಕಾರ್ಡ್‌

ಈ ಕಾರ್ಡ್‌ ಪ್ರತಿ ಖರೀದಿಯ ಮೇಲೆ ವಿಶಿಷ್ಟ ರಿಯಾಯಿತಿಗಳು ಮತ್ತು ಪ್ರಯೋಜನಗಳನ್ನು ಒದಗಿಸುತ್ತದೆ. ಕಾರ್ಡ್ ಹೊಂದಿರುವವರು ಆಯ್ದ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಾಂಜ್‌ಗಳಿಗೆ ಪ್ರತಿ ತ್ರೈಮಾಸಿಕದಲ್ಲಿ ಗರಿಷ್ಠ ಎರಡು ಕಾಂಪ್ಲಿಮೆಂಟರಿ ಭೇಟಿಗಳಿಗೆ ಅರ್ಹರಾಗಿರುತ್ತಾರೆ. ಬಳಕೆದಾರರಿಗೆ ಉಚಿತ ವೈಯಕ್ತಿಕ ಅಪಘಾತ ವಿಮೆ ಮತ್ತು ವಿಮಾನ ಅಪಘಾತ ರಕ್ಷಣೆಯನ್ನು ಸಹ ಒದಗಿಸಲಾಗುತ್ತದೆ.

ಎಸ್‌ಬಿಐ ಇಂಟರ್‌ನ್ಯಾಷನಲ್‌ ಡೆಬಿಟ್‌ ಕಾರ್ಡ್‌

ಎಸ್‌ಬಿಐಯ ಗ್ಲೋಬಲ್ ಇಂಟರ್‌ನ್ಯಾಷನಲ್‌ ಕಾಂಟ್ಯಾಕ್ಟ್‌ಲೆಸ್‌ ಡೆಬಿಟ್ ಕಾರ್ಡ್ ವಿಶ್ವದ ಯಾವುದೇ ಭಾಗದಿಂದ ಹಣವನ್ನು ಹಿಂಪಡೆಯಲು ನಿಮಗೆ ಅವಕಾಶ ನೀಡುತ್ತದೆ. ಈ ಡೆಬಿಟ್ ಕಾರ್ಡ್ ಅನ್ನು ವಸ್ತುಗಳನ್ನು ಖರೀದಿಸಲು ಮತ್ತು ಎಸ್‌ಬಿಐ ರಿವಾರ್ಡ್ ಪಾಯಿಂಟ್‌ಗಳನ್ನು ಗಳಿಸಲು ಬಳಸಬಹುದು. ಗ್ರಾಹಕರು ಆಹಾರ ಸೇವನೆ, ಶಾಪಿಂಗ್, ಪೆಟ್ರೋಲ್ ಖರೀದಿ, ಆನ್‌ಲೈನ್‌ ಪಾವತಿಗಳು ಅಥವಾ ಪ್ರಯಾಣದ ಬುಕ್ಕಿಂಗ್‌ಗಾಗಿ ಖರ್ಚು ಮಾಡಿದ ಪ್ರತಿ 200 ರೂ.ಗೆ ಎರಡು ಎಸ್‌ಬಿಐ ರಿವಾರ್ಡ್ ಪಾಯಿಂಟ್‌ ಪಡೆಯುತ್ತಾರೆ. ಅಲ್ಲದೆ ಜನ್ಮದಿನದಂದು ಖರೀದಿಸಿದರೆ ಬಹುಮಾನಗಳು ದ್ವಿಗುಣಗೊಳ್ಳುತ್ತವೆ. ಈ ಡೆಬಿಟ್ ಅನ್ನು ಭಾರತದಲ್ಲಿ 52 ಲಕ್ಷಕ್ಕೂ ಹೆಚ್ಚು ವ್ಯಾಪಾರಿ ಮಳಿಗೆ ಮತ್ತು ವಿಶ್ವಾದ್ಯಂತ 30 ದಶಲಕ್ಷಕ್ಕೂ ಹೆಚ್ಚು ವ್ಯಾಪಾರಿ ಮಳಿಗೆಗಳಲ್ಲಿ ಬಳಸಬಹುದು.

ಇಂಡಸ್‌ಲ್ಯಾಂಡ್‌ ವರ್ಲ್ಡ್‌ ಎಕ್ಸ್‌ಕ್ಯೂಸಿವ್‌ ಡೆಬಿಟ್‌ ಕಾರ್ಡ್‌

ಕಾರ್ಡ್ ಹೊಂದಿರುವವರು ಆಯ್ದ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಾಂಜ್‌ಗಳಿಗೆ ಪ್ರತಿ ತ್ರೈಮಾಸಿಕದಲ್ಲಿ ಗರಿಷ್ಠ ಎರಡು ಕಾಂಪ್ಲಿಮೆಂಟರಿ ಭೇಟಿಗಳಿಗೆ ಅರ್ಹರಾಗಿರುತ್ತಾರೆ. ಜತೆಗೆ ಬುಕ್‌ಮೈ ಶೋ ಅಪ್ಲಿಕೇಷನ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದು, ಸಿನಿಮಾ ಟಿಕೆಟ್‌ ಖರೀದಿಗೆ ಕೊಡುಗೆ ನೀಡುತ್ತದೆ. ಈ ಡೆಬಿಟ್ ಕಾರ್ಡ್ ಯಾವುದೇ ಕ್ರಾಸ್-ಕಂಟ್ರಿ ಮಾರ್ಕ್ಅಪ್ ಶುಲ್ಕವನ್ನು ವಿಧಿಸುವುದಿಲ್ಲ.

ಕೆನರಾ ಬ್ಯಾಂಕ್‌ ಪ್ಲಾಟಿನಂ ಡೆಬಿಟ್‌ ಕಾರ್ಡ್‌

ಕಾರ್ಡ್ ಹೊಂದಿರುವವರು ಆಯ್ದ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಾಂಜ್‌ಗಳಿಗೆ ಪ್ರತಿ ತ್ರೈಮಾಸಿಕದಲ್ಲಿ ಗರಿಷ್ಠ ಎರಡು ಕಾಂಪ್ಲಿಮೆಂಟರಿ ಭೇಟಿಗಳಿಗೆ ಅರ್ಹರಾಗಿರುತ್ತಾರೆ. ಇದು 8 ಲಕ್ಷ ರೂ.ಗಳ ವಿಮಾನ ಅಪಘಾತ ವಿಮೆ ಮತ್ತು ಲಗೇಜ್ ವಿಮೆಯನ್ನು ಸಹ ಒದಗಿಸುತ್ತದೆ. ವ್ಯಾಪಾರಿ ಮಳಿಗೆಗಳ ಪಾಯಿಂಟ್-ಆಫ್-ಸೇಲ್ (ಪಿಒಎಸ್) ವಹಿವಾಟಿನ ಮಿತಿ 5 ಲಕ್ಷ ರೂ., ಪ್ರತಿದಿನ 1 ಲಕ್ಷ ರೂ. ವಿತ್‌ಡ್ರಾ ಮಾಡಬಹುದು.

ಇದನ್ನೂ ಓದಿ: Money Guide: ಫೊರೆಕ್ಸ್‌ ಕಾರ್ಡ್‌ V/S ಕ್ರೆಡಿಟ್‌ ಕಾರ್ಡ್‌: ವಿದೇಶ ಪ್ರವಾಸಕ್ಕೆ ಯಾವುದು ಸೂಕ್ತ?

Continue Reading
Advertisement
ದೇಶ9 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ18 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್41 mins ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ50 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ1 hour ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest1 hour ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ1 hour ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್1 hour ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ1 hour ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ50 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌