Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ - Vistara News

ಬೆಂಗಳೂರು

Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

Leopard attack: ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆಯನ್ನು ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ ಮಾಡಿದೆ. ಇತ್ತ ಬೈಕ್‌ನಲ್ಲಿ ತೆರಳಿದ್ದ ತಾಯಿ-ಮಗನಿಗೆ ಟಾಟಾ ಎಸ್‌ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತಾಯಿ ಮೃತಪಟ್ಟರೆ, ಮಗ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

Leopard attack bike rider and cab driver
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಚಿಕ್ಕೋಡಿ: ಬೈಕ್ ಸವಾರ ಹಾಗೂ ಕಾರು ಚಾಲಕನ ಮೇಲೆ ಚಿರತೆಯೊಂದು (Leopard attack) ದಾಳಿ ಮಾಡಿದೆ. ನಿನ್ನೆ ಶನಿವಾರ ರಾತ್ರಿ 8:30ರ ಸುಮಾರಿಗೆ ಮಾಗಡಿ ರಸ್ತೆಯ ಸಾವನದುರ್ಗದ ಬಳಿ ನಡೆದಿದೆ. ಬೈಕ್‌ಗೆ ಹಾಗೂ ಕಾರಿಗೆ ಮುಖಾಮುಖಿಯಾದ ಚಿರತೆಯು ರಸ್ತೆ ಬದಿ ಬಿದ್ದಿತ್ತು.

ಚಿರತೆ ಸತ್ತು ಹೋಗಿದೆ ಎಂದು ತಿಳಿದ ಬೈಕ್ ಸವಾರ ಹತ್ತಿರ ತೆರಳಿ ಮುಟ್ಟಲು ಹೋಗಿದ್ದ. ಈ ವೇಳೆ ಸತ್ತಂತೆ ಬಿದ್ದಿದ್ದ ಚಿರತೆ ಏಕಾಏಕಿ ದಾಳಿ ಮಾಡಿದೆ. ಬೈಕ್ ಹಾಗೂ ಕ್ಯಾಬ್ ಚಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೈಕ್‌ಗೆ ಟಾಟಾ ಎಸ್‌ ಡಿಕ್ಕಿ-ಮಹಿಳೆ ಸಾವು

ಬೈಕ್ ಗೆ ಟಾಟಾ ಎಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಎಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಎಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: Bike Wheeling: ಹೈವೇಯಲ್ಲಿ ಭಯಾನಕ ವ್ಹೀಲಿಂಗ್‌ ಜತೆಗೆ ಯುವತಿಗೆ ಕೀಟಲೆ ಮಾಡಿದ ಪುಂಡರು!

ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Bengaluru News: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಇದೇ ಜು.5 ರಂದು ಶುಕ್ರವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Satsang programme on 5th July in Bengaluru
Koo

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಜು.5ರಂದು ಶುಕ್ರವಾರ ಸಂಜೆ 5 ಗಂಟೆಗೆ ನಗರದ (Bengaluru News) ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್‌ಷನ್‌ ಹಾಲ್‌ನಲ್ಲಿ ಸತ್ಸಂಗ (ಸದ್ವಿಚಾರಗಳ ಸಂಪ್ರೋಕ್ಷಣೆ) ಕಾರ್ಯಕ್ರಮ ಏರ್ಪಡಿಸಲಾಗಿದೆ.

ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಸೌಮ್ಯನಾಥ ಸ್ವಾಮೀಜಿ ಉಪಸ್ಥಿತರಿರುವರು.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ಬ್ರಹ್ಮಚಾರಿ ಶ್ರೀ ಸಾಯಿ ಕೀರ್ತಿನಾಥ್‌ಜಿ ಮತ್ತು ತಂಡದವರಿಂದ ಭಜನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಕ್ರಮಣ ಗುರುವಂದನ ಬಳಗ ಕಾರ್ಯಕ್ರಮ ಆಯೋಜನೆ ಮತ್ತು ನಿರ್ವಹಿಸಲಿದ್ದಾರೆ.

Continue Reading

ಬೆಂಗಳೂರು

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

DK Suresh: ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು, ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

VISTARANEWS.COM


on

To complete pending railway projects in the state former MP DK Suresh appeals central government
Koo

ನವದೆಹಲಿ: ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಜೀವನ್‌ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh), ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿ, ಮನವಿ ಸಲ್ಲಿಸಿದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು, ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಅವರು ಕೋರಿದರು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಜಲ ಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳು ಆರು ತಿಂಗಳಿಂದ ಬಾಕಿ ಉಳಿದಿವೆ. ಅವುಗಳಿಗೆ ಮಂಜೂರಾತಿ ಕೊಡಿ ಎಂದು ಡಿ.ಕೆ. ಸುರೇಶ್ ಮನವಿ ಮಾಡಿದ್ದು, ಸಚಿವ ಸೋಮಣ್ಣ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

VISTARANEWS.COM


on

drivers protest
Koo

ಬೆಂಗಳೂರು: ರಾಜಧಾನಿಯ ಶಾಂತಿನಗರದಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರು (Auto Drivers, Cab Drivers) ಓಲಾ- ಉಬರ್‌ (Ola, Uber) ಮುಂತಾದ ಆನ್‌ಲೈನ್‌ ಟ್ಯಾಕ್ಸಿ ವ್ಯವಸ್ಥೆಗಳ ವಿರುದ್ಧ ಸಾರಿಗೆ ಇಲಾಖೆ (Transport department) ಮುಖ್ಯ ಕಚೇರಿಗೆ ಮುತ್ತಿಗೆ (Drivers Protest) ಹಾಕಿದರು. ಬಿಟಿಎಸ್ ರೋಡ್ ಬ್ಲಾಕ್ (Road Block) ಮಾಡಿ ಪ್ರತಿಭಟನೆ (Protest) ನಡೆಸಿದರು. ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಸಾವಿರಾರು ಆಟೋ, ಕ್ಯಾಬ್‌ಗಳನ್ನು ತಂದಿರುವ ಚಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಟೋ ಕ್ಯಾಬ್‌ಗಳನ್ನು ಎಲ್ಲೆಂದಲ್ಲಿ ನಿಲ್ಲಿಸಿದ್ದರಿಂದ ಬಿಟಿಎಸ್ ರೋಡ್‌ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ವಾಹನಗಳೆಲ್ಲ ರಸ್ತೆಯಲ್ಲೇ ನಿಂತವು.

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಪ್ರಯಾಣಿಕರಿಗೆ ತೊಂದರೆ ಆಗಬಾರದು, ಪ್ರಯಾಣಿಕರಿಂದ ದುಪ್ಪಟ್ಟು ದರ ತೆಗೆದುಕೊಳ್ಳಬಾರದು ಎಂದು ಆದೇಶ ನೀಡಿದೆ. ಆದರೆ ಓಲಾ- ಉಬರ್ ಸೇರಿದಂತೆ ಅಗ್ರಿಗೇಟರ್ ಲೈಸೆನ್ಸ್ ಪಡೆದ ಕಂಪನಿಗಳು ದುಪ್ಪಟ್ಟು ದರವನ್ನು ಪಡೆದುಕೊಳ್ಳುತ್ತಿವೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಇದರ ಲಾಭವನ್ನು ಚಾಲಕರಿಗೂ ಕೊಡ್ತಿಲ್ಲ. ಇದರಿಂದ ಲಕ್ಷಾಂತರ ರುಪಾಯಿ ಬಂಡವಾಳ ಹಾಕಿ ವಾಹನಗಳನ್ನು ಖರೀದಿ ಮಾಡಿರುವ ಚಾಲಕರಿಗೆ ತೊಂದರೆ ಆಗುತ್ತಿದೆ. ಕೂಡಲೇ ಈ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಂದು ಇನ್ನಷ್ಟು ದೊಡ್ಡ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಖಾಸಗಿ ಸಾರಿಗೆ (Private Transport) ಸಂಘಟನೆಗಳ ಅಧ್ಯಕ್ಷ ನಟರಾಜ್ ಶರ್ಮ ಹೇಳಿಕೆ ನೀಡಿದ್ದು, ಓಲಾ ಮತ್ತು ಉಬರ್ ಸಂಸ್ಥೆಗಳ ದರಗಳನ್ನು ನಿಯಂತ್ರಿಸಬೇಕು, ಅವುಗಳ ಲಾಭ ಚಾಲಕರಿಗೆ ನೀಡಬೇಕು, ಪೋರ್ಟರ್ ಕಂಪನಿಯನ್ನು ನಿರ್ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಅವರ ಹೇಳಿಕೆ ಹೀಗಿದೆ: ಸೆ.11, 2023ರಂದು ಖಾಸಗಿ ಸಾರಿಗೆ ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿದ್ದೆವು. ಬಸ್, ಆಟೋ, ಟ್ಯಾಕ್ಸಿ, ಗೂಡ್ಸ್, ಶಾಲಾ ವಾಹನಗಳು ಎಲ್ಲರೂ ಸೇರಿ ಸರ್ಕಾರದ ಮುಂದೆ 30 ಬೇಡಿಕೆಗಳನ್ನಿಟ್ಟು ಪ್ರತಿಭಟಿಸಿದೆವು. ಸಾರಿಗೆ ಸಚಿವರು 30 ಬೇಡಿಕೆಗಳಲ್ಲಿ‌ 28 ಬೇಡಿಕೆ ಈಡೇರಿಕೆ ಆಗುತ್ತದೆ ಎಂದಿದ್ದರು. ಅದರಲ್ಲಿ 26 ಬೇಡಿಕೆ ಈಡೇರಿಕೆ ಮಾಡಿದ್ದಾರೆ. ಪೋರ್ಟಲ್, ಬೈಕ್ ಟ್ಯಾಕ್ಸಿ ನಿಲ್ಲಿಸಿದ್ದಾರೆ. ʼಒಂದು ಸಿಟಿ ಒಂದು ದರʼ ಎಲ್ಲದಕ್ಕೂ ಸರ್ಕಾರದಿಂದ ನೋಟಿಫಿಕೇಶನ್ ಬಂದಿದೆ. ಆದರೆ ಸಾರಿಗೆ ಅಧಿಕಾರಿಗಳು ಅವುಗಳನ್ನು ಮಾರ್ಪಾಡು ಮಾಡದೇ ಕಸದ ಬುಟ್ಟಿಗೆ ಬಿಸಾಕಿದ್ದಾರೆ. ನಾವು ಕೇಳಿದರೆ ಕೋರ್ಟ್‌ನಲ್ಲಿ ಇದೆ ಅನ್ನುತ್ತಾರೆ.

ಅನಧಿಕೃತವಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಆಟೋ ಚಾಲಕರು ಕ್ರಮ ಕೈಗೊಳ್ಳಬಾರದು ಅಂತ ಹೇಳಿದ್ದಾರೆ. ನಾವು ಪ್ರಶ್ನೆ ಮಾಡಿದರೆ 10 ಸಾವಿರ, 20 ಸಾವಿರ ಫೈನ್ ಕಟ್ಟಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಪೋನ್ ಪೇ, ಗೂಗಲ್ ಪೇ ಮೂಲಕ ಹಣ ಪಡೆಯುತ್ತಿದ್ದಾರೆ. ಇವತ್ತು ಸರ್ಕಾರದಿಂದ ಕಾನೂನಿನ ಅಡಿಯಲ್ಲಿ ಎಲ್ಲ ರೂಲ್ಸ್‌ಗಳು ಬಂದಿವೆ. ಅದಕ್ಕೆ ಅಧಿಕಾರಿಗಳು ಸಹಿ ಹಾಕೋಕೆ ಹಿಂದೆ ಮುಂದೆ ನೋಡ್ತಿದ್ದಾರೆ. ಓಲಾ ಮತ್ತು ಉಬರ್ ಸಂಸ್ಥೆಗಳು ಚಾಲಕರಿಗೆ ಎಷ್ಟು ದುಡ್ಡು ಕೊಡ್ತಿದ್ದಾರೆ ಇದು ಹೊರಗಡೆ ಬರಬೇಕು. ಪೋರ್ಟರ್ ಅನ್ನುವ ವಾಹನದ ಜಾಹಿರಾತನ್ನು ಕಿತ್ತು ಎಸೆಯುವ ಕೆಲಸವನ್ನು ಪೊಲೀಸ್ ಮತ್ತು ಸಾರಿಗೆ ಇಲಾಖೆ ಮಾಡಬೇಕು. ಆನ್‌ಲೈನ್ ಸ್ಪೆಷಲ್ ಪರ್ಮೀಟ್ ಮಾಡಬೇಕು. ನಮ್ಮ ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 11ರಂದು ಮತ್ತೆ ಪ್ರತಿಭಟನೆ ಮಾಡುತ್ತೇವೆ. ಕಳೆದ ಬಾರಿ 90% ವಾಹನಗಳು ಮಾತ್ರ ರಸ್ತೆಗಿಳಿಸದೆ ಪ್ರತಿಭಟಿಸಿದ್ದೆವು. ಈ ಬಾರಿ ಒಂದು ವಾಹನವೂ ರಸ್ತೆಗಿಳಿಯುವುದಿಲ್ಲ. ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ನಟರಾಜ್‌ ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಮೌಲ್ಯ ಮತ್ತು ಸರ್ಕಾರ ನಿಗದಿಪಡಿಸಿದ ದರ ಹೀಗಿದೆ:

ಹತ್ತು ಲಕ್ಷಕ್ಕಿಂತ ಕಡಿಮೆ- ನಿಗದಿತ ದರ- ಕನಿಷ್ಠ 4 ಕಿಮೀ, 100 ರುಪಾಯಿ) ಪ್ರತಿ ಕಿಮೀಗೆ- 24 ರುಪಾಯಿ
10ರಿಂದ 15 ಲಕ್ಷದ ವಾಹನ- 115 ರುಪಾಯಿ- 28 ರುಪಾಯಿ
15 ಲಕ್ಷಕ್ಕಿಂತ ಹೆಚ್ಚು – 130 ರುಪಾಯಿ- 32 ರುಪಾಯಿ

ಚಾಲಕರ ಬೇಡಿಕೆಗಳು:

1) ಓನ್ ಸಿಟಿ ಓನ್ ಫೇರ್ ಜಾರಿಯಾಗಬೇಕು
2) ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಲ್ಲಬೇಕು
3) ಆರ್ಟಿಓ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಕಾರ್ಯಾಚರಣೆ ಮಾಡಬೇಕು
4) ಪೋರ್ಟರ್ ಕಂಪನಿಯನ್ನು ಬ್ಯಾನ್ ಮಾಡಬೇಕು
5) ಸ್ಕೂಲ್ ವಾಹನಗಳಿಗೆ ಪರ್ಮಿಟ್ ನೀಡಬೇಕು

ಇದನ್ನೂ ಓದಿ: Bangalore Water Parks : ಬೆಂಗಳೂರಿನಲ್ಲಿರುವ ಪ್ರಸಿದ್ಧ ವಾಟರ್‌ ಪಾರ್ಕ್‌ಗಳಿವು…

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain : ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮನೆ ಕುಸಿತ, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಗುಡ್ಡ ಕುಸಿತಕ್ಕೆ ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್ ಆಗಿದ್ದರಿಂದ ಇತ್ತ ಯಕ್ಷಗಾನ ಕಲಾವಿದನ ಮನೆಗೆ ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಕಾರವಾರ/ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ (Karnataka Rain) ಪ್ರಕರಣ ಹೆಚ್ಚಾಗುತ್ತಿದೆ. ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಆಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಏಕಾಏಕಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದಿದೆ. ಇದರಿಂದ ವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರಿ ಮಳೆಗೆ ಕುಸಿದು ಬಿದ್ದ ಯಕ್ಷಗಾನ ಕಲಾವಿದನ ಮನೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದಲ್ಲಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹೊನ್ನೆತಾಳು ಗ್ರಾಮದ ಯಕ್ಷಗಾನ ಕಲಾವಿದ ನಂದನ್‌ ಶೆಟ್ಟಿ ಅವರ ಮನೆ ಕುಸಿದು ಬಿದ್ದಿದೆ. ನಂದನ ಶೆಟ್ಟಿ‌ ಮಂದಾರ್ತಿ ಮೇಳದಲ್ಲಿ ಯಕ್ಷಗಾನ ಕಲಾವಿದರಾಗಿದ್ದಾರೆ. ಮನೆ ಕುಸಿಯುವಾಗ ಅದೃಷ್ಟ ವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕಳೆದುಕೊಂಡು ಕಂಗಲಾಗಿರುವ ಕಲಾವಿದನ ಕುಟುಂಬವು ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

karnataka Rain

ಕೊಡಗಿನಲ್ಲಿ ಇಲ್ಲೆಲ್ಲ ನಿಷೇಧ

ಮಹಾರಾಷ್ಟ್ರ ಫಾಲ್ಸ್ ದುರಂತದ ಬೆನ್ನೆಲ್ಲೆ ಪ್ರವಾಸಿ ತಾಣಗಳ ಬಗ್ಗೆ ಕೊಡಗು ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ಪ್ರವಾಸಿಗರು ಜಲಪಾತಗಳು, ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ನೀರಿನಲ್ಲಿ ಇಳಿದು ಕ್ರೀಡೆ, ಫೋಟೋ ತೆಗೆಯುವ ದುಸ್ಸಾಹಕ್ಕೆ ಕಡಿವಾಣ ಹಾಕಲಾಗಿದೆ. ಮಳೆಗಾಲದಲ್ಲಿ ಹೆಚ್ಚುತ್ತಿರುವ ಜಲ ಸಂಬಂಧಿ ಸಾವಿನ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. ನದಿಗಳಲ್ಲಿ ನಡೆಯುವ ರ‍್ಯಾಫ್ಟಿಂಗ್ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದಿದ್ದಾರೆ.

ಮನೆ ಮೇಲೆ ಬಿದ್ದ ರಸ್ತೆ ಬದಿಯ ತಡೆಗೋಡೆ; ಜೀಪ್ ಸಂಪೂರ್ಣ ಜಖಂ

ಚಿಕ್ಕಮಗಳೂರಿನಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮನೆಯ ಮೇಲೆ ರಸ್ತೆ ಬದಿಯ ತಡೆಗೋಡೆ ಬಿದ್ದು,
ಮನೆಯಂಗಳದಲ್ಲಿ ನಿಲ್ಲಿಸಿದ್ದ ಜೀಪ್ ಸಂಪೂರ್ಣ ಜಖಂಗೊಂಡಿದೆ. ಕಳಸ ತಾಲೂಕಿನ ಕಚ್ಚಿ ಗಾನೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರಂಗನಾಥ್ ಎಂಬುವರ ಮನೆಗೆ ಹಾನಿಯಾಗಿದ್ದು, ಧರೆ ಇನ್ನಷ್ಟು ಕುಸಿಯುವ ಆತಂಕ ಹೆಚ್ಚಿದೆ.
ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಈ ತಾಣಗಳಿಗೆ ಹೋಗಬೇಡಿ

ಮಂಗಳೂರು: ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ (Rain News) ಹೊಳೆ- ಹಳ್ಳಗಳು ತುಂಬಿಕೊಂಡಿದ್ದು, ಜಲಪಾತಗಳು (falls) ಭೋರ್ಗರೆಯುತ್ತಿವೆ. ಆದರೆ ಅಪಾಯವೂ ಇರುವುದರಿಂದಾಗಿ, ಜಲಪಾತಗಳತ್ತ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ (No Entry) ವಿಧಿಸಲಾಗಿದೆ. ಬೆಟ್ಟಗುಡ್ಡಗಳಿಗೆ ಟ್ರೆಕ್ಕಿಂಗ್‌ (Trekking) ಹೋಗುವವರಿಗೂ ಮುಂದಿನ ಸೂಚನೆ ಸಿಗುವವರೆಗೂ ಮುಂದುವರಿಯದಂತೆ ಸೂಚಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಹಲವು ಪ್ರವಾಸಿ ಸ್ಥಳಗಳಿಗೆ (tourist places) ಭೇಟಿ ನೀಡಲು ಅರಣ್ಯ ಇಲಾಖೆ (Forest Department) ನಿರ್ಬಂಧ ವಿಧಿಸಿದೆ. ವನ್ಯಜೀವಿ (Wildlife) ವಲಯದ ವ್ಯಾಪ್ತಿಗೆ ಬರುವ ಕಾಡುಗಳು, ಬೆಟ್ಟಗಳು- ಜಲಪಾತಗಳ ಪ್ರವೇಶ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ನರಸಿಂಹಗಡ (ಗಡಾಯಿಕಲ್ಲು) ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಜಲಪಾತಗಳತ್ತ ತೆರಳದಂತೆ ನಿರ್ಬಂಧಿಸಲು ಬೆಳ್ತಂಗಡಿ ಆರ್‌ಎಫ್‌ಓಗೆ ಕುದುರೆಮುಖ ಸಿಎಫ್ ಆದೇಶ ನೀಡಿದ್ದಾರೆ.

ಯಲ್ಲಾಪುರ ಫಾಲ್ಸ್‌ಗಳಿಗೆ ನಿರ್ಬಂಧ

ಕಾರವಾರ: ಯಲ್ಲಾಪುರ ತಾಲೂಕಿನಾದ್ಯಂತ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಧಾರಾಕಾರ ಮಳೆಗೆ ಜಲಪಾತ ಮೈದುಂಬಿ ಧುಮುಕುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಲವು ಜಲಪಾತಗಳಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಲ್ಲಾಪುರದ ಸಾತೊಡ್ಡಿ ಜಲಪಾತ ಇದರಲ್ಲಿ ಮುಖ್ಯವಾಗಿದ್ದು, ಮಳೆಗಾಲದಲ್ಲಿ ವಿವಿಧೆಡೆಗಳಿಂದ ಜಲಪಾತ ವೀಕ್ಷಣೆಗೆ ಇಲ್ಲಿ ಪ್ರವಾಸಿಗರು ಬರುತ್ತಾರೆ. ಜಲಪಾತ ಅಪಾಯಕಾರಿ ಮಟ್ಟದಲ್ಲಿ ತುಂಬಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಪ್ಪಿಸಲು ಸ್ಥಳೀಯ ಆಡಳಿತ ಕ್ರಮ ಕೈಗೊಂಡಿದೆ.

ಗಂಗಾವಳಿ ನದಿ ನೀರಿ‌ನ ಪ್ರಮಾಣ ಹೆಚ್ಚಳದಿಂದ ತಾಲೂಕಿನ ಹಲವು ಫಾಲ್ಸ್‌ಗಳಿಗೆ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹಾಕಲಾಗಿದೆ. ಯಲ್ಲಾಪುರದ ಶಿರಲೆ ಫಾಲ್ಸ್, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತಗಳಲ್ಲಿ ಅರಣ್ಯ ಇಲಾಖೆ, ಸ್ಥಳೀಯ ಗ್ರಾಮ ಅರಣ್ಯ ಸಮಿತಿಯಿಂದ ಪ್ರವೇಶ ನಿಷೇಧ ಮಾಡಲಾಗಿದೆ. ತಾಲೂಕಿನ ಪಣಸಗುಳಿ ಸೇತುವೆ ಮುಳುಗಡೆ ಹಾಗೂ ಗಂಗಾವಳಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನಲೆ ಸಂಚಾರ ನಿರ್ಬಂಧಿಸಲಾಗಿದೆ.

ಶೃಂಗೇರಿಯಲ್ಲಿ ತುಂಬಿಕೊಂಡ ತುಂಗೆ

ಚಿಕ್ಕಮಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಾಗಿ ತುಂಗಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದೆ. ತುಂಗಾ ನದಿ ಅಪಾಯದ ಅಂಚಿನಲ್ಲಿ ಹರಿಯುತ್ತಿದೆ. ಶೃಂಗೇರಿ ಶಾರದಾಂಬಾ ದೇವಾಲಯದ ದಡದವರೆಗೆ ತುಂಗೆಯ ನೀರು ಬಂದಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗಿವೆ.

ಶಾಲೆಗಳಿಗೆ ರಜೆ

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Satsang programme on 5th July in Bengaluru
ಬೆಂಗಳೂರು11 mins ago

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Hassan News Distribution of free notebook bag to government primary schools in Alur
ಹಾಸನ13 mins ago

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

To complete pending railway projects in the state former MP DK Suresh appeals central government
ಬೆಂಗಳೂರು15 mins ago

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ದೇಶ24 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ33 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್56 mins ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ1 hour ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest1 hour ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ1 hour ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌