Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ! - Vistara News

ಪ್ರಮುಖ ಸುದ್ದಿ

Suryakumar Yadav : ವಿಶ್ವ ಕಪ್​ ಟ್ರೋಫಿಯನ್ನು ಬೆಡ್​ ಮಧ್ಯದಲ್ಲಿಟ್ಟು ನಿದ್ದೆ ಮಾಡಿದ ಸೂರ್ಯಕುಮಾರ್ ದಂಪತಿ!

Suryakumar Yadav:

VISTARANEWS.COM


on

Suryakumar Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​​ನಲ್ಲಿ ಶನಿವಾರ ನಡೆದ ವಿಶ್ವ ಕಪ್​ 2024ರ (T20 World Cup 2024) ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಆಟಗಾರರ ಸಂತಸಕ್ಕೆ ಪಾರವೇ ಇಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಅಂತೆಯೇ ಪಂದ್ಯದ 19ನೇ ಓವರ್​ನಲ್ಲಿ ಅದ್ಬುತ ಕ್ಯಾಚ್​ ಹಿಡಿದು ಪಂದ್ಯಕ್ಕೆ ನಿರ್ಣಾಯ ತಿರುವು ಕೊಟ್ಟ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ರಾತ್ರಿಯಲ್ಲಿ ಟಿ 0 ವಿಶ್ವಕಪ್ ಟ್ರೋಫಿ ಬೆಡ್​ ಮೇಲೆ ಇಟ್ಟು ಮಲಗಿದ್ದಾರೆ. ಅದರ ವಿಡಿಯೊ ವೈರಲ್​ ಆಗಿದೆ.

ಅಂತಿಮ ಓವರ್​ನಲ್ಲಿ ಡೇವಿಡ್ ಮಿಲ್ಲರ್ ಅವರನ್ನು ಬೌಂಡರಿ ಲೈನ್​ನಲ್ಲಿ ಕ್ಯಾಚ್​ ಹಿಡಿದು ಔಟ್ ಮಾಡಿದ ಸೂರ್ಯ ಕುಮಾರ್​ ಯಾದವ್​ ಅತ್ಯಂತ ಸಂಭ್ರಮದಲ್ಲಿದ್ದರು. ತಂಡದ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಇದನ್ನು ಆಟದ ಗತಿ ಬದಲಾವಣೆ ಮಾಡಿದ ಕ್ಷಣ ಎಂದು ಕರೆದಿದ್ದಾರೆ. ಏಕೆಂದರೆ ವಿಜಯದ ನಂತರ ಸೂರ್ಯ ಭಾರತೀಯ ಡ್ರೆಸ್ಸಿಂಗ್ ಕೋಣೆಯಲ್ಲಿ ಅತ್ಯುತ್ತಮ ಫೀಲ್ಡರ್ ಪದಕ ಕೂಡ ಪಡೆದಿದ್ದಾರೆ.

ಅದಕ್ಕಿಂತ ಮೊದಲು ಕುಲದೀಪ್ ಯಾದವ್ ಕ್ವಿಂಟನ್ ಡಿ ಕಾಕ್ ಅವರ ಪ್ರಮುಖ ಕ್ಯಾಚ್ ಪಡೆದಿದ್ದರು. ಆದರೆ ಸೂರ್ಯಕಮಾರ್​ ಯಾದವ್ ಅವರ ಕ್ಯಾಚ್ ಇನ್ನೂ ಅತ್ಯುತ್ತಮವಾಗಿತ್ತು ಎಂದು ಟಿ ದಿಲೀಪ್ ಹೇಳಿದ್ದಾರೆ. ಆದ್ದರಿಂದ, ಅವರು ಟ್ರೋಫಿಯನ್ನು ಪಕ್ಕದಲ್ಲೇ ಇಟ್ಟುಕೊಂಡಿರುವುದು ಸರಿಯಾಗಿಯೇ ಇದೆ.

ಸೂರ್ಯ ಹಾಸಿಗೆ ಒಂದು ಬದಿಯಲ್ಲಿ ಮಲಗಿದ್ದರೆ ಪತ್ನಿ ಇನ್ನೊಂದು ಕಡೆಯಲ್ಲಿ ಮಲಗಿದ್ದರು. ಮಧ್ಯದಲ್ಲಿ ಅವರು ಟ್ರೋಫಿಯನ್ನು ಇಟ್ಟುಕೊಂಡಿದ್ದರು. ಈ ಫೋಟೊ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 7 ರನ್ ಗಳ ಜಯ ಸಾಧಿಸಿತು. 2007ರಲ್ಲಿ ಉದ್ಘಾಟನಾ ಆವೃತ್ತಿಯಲ್ಲಿ ಎಂ.ಎಸ್.ಧೋನಿ ಪಡೆ ಟ್ರೋಫಿ ಪಡೆದ ಬಳಿಕ ಇದು ಎರಡನೇ ಟಿ20 ವಿಶ್ವ ಕಪ್ ಟ್ರೋಫಿಯಾಗಿದೆ.

ಇದನ್ನೂ ಓದಿ: Hardik Pandya : ಭಾರತಕ್ಕೆ ಆಡುವುದೇ ಕನಸು; ಹಾರ್ದಿಕ್ ಪಾಂಡ್ಯನ ಹಳೆ ವಿಡಿಯೊ ವೈರಲ್​

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​​ಗೆ ವಿದಾಯ ಘೋಷಿಸಿದ್ದಾರೆ. ರೋಹಿತ್ ನಾಯಕನಾಗಿ 50 ಗೆಲುವುಗಳನ್ನು ದಾಖಲಿಸಿದ್ದಾರೆ. ಇದು ಟಿ 20 ಪಂದ್ಯಗಳಲ್ಲಿ ಯಾವುದೇ ನಾಯಕನಿಗೆ ಅತಿ ಹೆಚ್ಚು. ಗೆಲುವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

CM Siddaramaiah: ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ?’ ಎಂದು ಸಿಎಂ ಪ್ರಶ್ನಿಸಿದರು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ (MUDA) ಸೈಟ್‌ ಪ್ರಕರಣದ ಬಗ್ಗೆ ಬಿಜೆಪಿ (BJP) ನಡೆಸುತ್ತಿರುವ ಆರೋಪಗಳ ಸುರಿಮಳೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಸಚಿವ ಸಂಪುಟ (Cabinet) ಸಭೆಯಲ್ಲಿ ಸ್ಪಷ್ಟನೆ ನೀಡಿದರು. ಮುಡಾ ಹಗರಣದ ಕುರಿತು ಕೇಳಿಬರುತ್ತಿರುವ ಆರೋಪಗಳೆಲ್ಲ ಊಹಾಪೋಹಗಳು ಎಂದು ಸ್ಪಷ್ಟನೆ ನೀಡಿದರಲ್ಲದೆ, ʼನಾನು ಸಿಎಂ ಅನ್ನುವ ಕಾರಣಕ್ಕೆ ನನ್ನ ಸೈಟ್‌ ಬಿಡೋಕೆ ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಕಾನೂನಿನ ಅನ್ವಯ ಪರಿಹಾರ ರೂಪದ ನಿವೇಶನ ಪಡೆದಿರುವುದು ಸ್ಪಷ್ಟ. ಬಿಜೆಪಿ ಸರ್ಕಾರದ ಕಾಲದಲ್ಲೇ ಇದರ ನಡಾವಳಿ ಆಗಿದೆ, ಪರಿಹಾರಕ್ಕೆ ಒಪ್ಪಿಗೆ ಸಿಕ್ಕಿದೆ. ನಮ್ಮ ಸರ್ಕಾರ ಬಂದ ಮೇಲೆ ಅಂದರೆ 2023, ಅಕ್ಟೋಬರ್‌ನಲ್ಲೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದ್ದು, ಅದಕ್ಕೂ‌ ಮುನ್ನವೇ ಪರಿಹಾರ ರೂಪದ ನಿವೇಶನ ನೀಡಲಾಗಿದೆ. ಯಾವುದೇ ಕಾನೂನು ಮೀರಿಲ್ಲ. ನಮ್ಮ ಮೇಲೆ ಬರುತ್ತಿರುವ ಆರೋಪಗಳೆಲ್ಲವೂ ಸುಳ್ಳುʼ ಎಂದು ಕ್ಯಾಬಿನೆಟ್‌ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ನಂತರ ಅವರು ಮಾಧ್ಯಮಗಳ ಮುಂದೆ ಮಾತನಾಡಿದರು. ʼಬಿಜೆಪಿಯವರಿಗೆ ಏನೂ ವಿಷಯ ಇಲ್ಲ. ಅವರು ಆರ್. ಎಸ್.ಎಸ್ ಹೇಳಿದಂತೆ ಕೇಳ್ತಾರೆ. ಮುಡಾದಲ್ಲಿ ಏನು ವಿಷಯ ಇದೆ? ಬಿಜೆಪಿ ಅವರೇ ಕೊಟ್ಟು ಅವರೇ ಆರೋಪ ಮಾಡಿದರೆ, ಕಾನೂನು ಬಾಹಿರ ಎಂದು ಹೇಳಿದರೆ ಹೇಗೆ? ನಾನೇಕೆ ರಾಜೀನಾಮೆ ನೀಡಲಿ? ಎಂದು ಸಿಎಂ ಪ್ರಶ್ನಿಸಿದರು.

ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿದ್ದೇವಾ? ನಾವು ಇಂತಹ ಕಡೆ ಎಂದು ಕೇಳಿಲ್ಲ. ಅದು ಕೊಟ್ಟಿರುವುವರ ತಪ್ಪು. ಹಾಗಾದರೆ ಪರಿಹಾರ ಕೊಟ್ಟು ಬಿಡಲಿ. 62 ಸಾವಿರ ಕೋಟಿ ಬೆಲೆ ಬಾಳುವ ಜಮೀನು ಹೋಗಿದೆ. ನಮ್ಮ ಕೇಸ್ ಪ್ರತ್ಯೇಕ. ನನಗೆ ಕಡಿಮೆ ಸಿಕ್ಕಿದೆ. ನಾನು ಸಿಎಂ ಅಂತ ಸುಮ್ಮನೆ ಬಿಡಲು ಆಗುತ್ತಾ?ʼ ಎಂದು ಪ್ರಶ್ನಿಸಿದರು.

ʼಮುಡಾದವರು ನಮ್ಮ 3 ಎಕರೆ 16 ಗುಂಟೆ ಜಮೀನು ಒತ್ತುವರಿ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಒತ್ತುವರಿ ಮಾಡಿದ್ದಾರೆ ಅವರು. ನಮ್ಮ ಜಮೀನು ಸೈಟ್, ಪಾರ್ಕ್ ಮಾಡಿದ್ದಾರೆ. ಇದು ಮುಡಾದ ತಪ್ಪು. ಆ ತಪ್ಪನ್ನು ಮುಡಾದವರು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ನಾನು ಸಿಎಂ ಅಂತ ಬಿಡಲು ಆಗುತ್ತಾ? ನಾವು 50:50 ನಿಯಮ ಒಪ್ಪಿಕೊಂಡಿದ್ದೇವೆ. ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿಲ್ಲ. ನಾವೇನು ವಿಜಯನಗರದ 3-4ನೇ ಹಂತದಲ್ಲಿ ಕೊಡಿ ಎಂದು ಕೇಳಿಲ್ಲ. ಅಲ್ಲಿ ಜಾಗ ಇಲ್ಲ ಅಂತ ಇಲ್ಲಿ ಕೊಟ್ಟಿದ್ದಾರೆ. ಈಗ ಕೊಟ್ಟ ಸೈಟ್ ದರ ಎಷ್ಟಿದೆ ಎಂದು ಕೂಡ ನನಗೆ ಗೊತ್ತಿಲ್ಲ. ನಂತರ 50:50 ರದ್ದು ಮಾಡಿ ಎಂದು ಆದೇಶ ಮಾಡಿದ್ದಾರೆ. ಹಾಗಾದರೆ ಸೈಟ್ ವಾಪಸ್ ತೆಗೆದುಕೊಂಡು ಪರಿಹಾರ ನೀಡಲಿ. ನನಗೆ 62 ಕೋಟಿ ಪರಿಹಾರ ಕೊಟ್ಟು ಬಿಡಲಿ. ಒಂದು ಎಕರೆಗಿಂತ ಕಡಿಮೆ ಕೊಟ್ಟಿದ್ದಾರೆ. ಸಚಿವರು ಯಾವ ಫೈಲೂ ತಂದಿಲ್ಲ. ಇದೆಲ್ಲ ರಾಜಕೀಯ ಪ್ರೇರಿತ ಆರೋಪಗಳುʼ ಎಂದು ಸಿಎಂ ವಿವರಿಸಿದರು.

ಇದನ್ನೂ ಓದಿ: MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Continue Reading

ಪ್ರಮುಖ ಸುದ್ದಿ

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

VISTARANEWS.COM


on

drivers protest
Koo

ಬೆಂಗಳೂರು: ರಾಜಧಾನಿಯ ಶಾಂತಿನಗರದಲ್ಲಿ ಆಟೋ ಹಾಗೂ ಕ್ಯಾಬ್ ಚಾಲಕರು (Auto Drivers, Cab Drivers) ಓಲಾ- ಉಬರ್‌ (Ola, Uber) ಮುಂತಾದ ಆನ್‌ಲೈನ್‌ ಟ್ಯಾಕ್ಸಿ ವ್ಯವಸ್ಥೆಗಳ ವಿರುದ್ಧ ಸಾರಿಗೆ ಇಲಾಖೆ (Transport department) ಮುಖ್ಯ ಕಚೇರಿಗೆ ಮುತ್ತಿಗೆ (Drivers Protest) ಹಾಕಿದರು. ಬಿಟಿಎಸ್ ರೋಡ್ ಬ್ಲಾಕ್ (Road Block) ಮಾಡಿ ಪ್ರತಿಭಟನೆ (Protest) ನಡೆಸಿದರು. ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

ಸಾವಿರಾರು ಆಟೋ, ಕ್ಯಾಬ್‌ಗಳನ್ನು ತಂದಿರುವ ಚಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಟೋ ಕ್ಯಾಬ್‌ಗಳನ್ನು ಎಲ್ಲೆಂದಲ್ಲಿ ನಿಲ್ಲಿಸಿದ್ದರಿಂದ ಬಿಟಿಎಸ್ ರೋಡ್‌ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ವಾಹನಗಳೆಲ್ಲ ರಸ್ತೆಯಲ್ಲೇ ನಿಂತವು.

ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ʼಒನ್ ಸಿಟಿ ಒನ್‌ ರೇಟ್ʼ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಓಲಾ- ಉಬರ್‌ ಸೇರಿ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡ್ತಿಲ್ಲ. ಆರ್ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಪ್ರಯಾಣಿಕರಿಗೆ ತೊಂದರೆ ಆಗಬಾರದು, ಪ್ರಯಾಣಿಕರಿಂದ ದುಪ್ಪಟ್ಟು ದರ ತೆಗೆದುಕೊಳ್ಳಬಾರದು ಎಂದು ಆದೇಶ ನೀಡಿದೆ. ಆದರೆ ಓಲಾ- ಉಬರ್ ಸೇರಿದಂತೆ ಅಗ್ರಿಗೇಟರ್ ಲೈಸೆನ್ಸ್ ಪಡೆದ ಕಂಪನಿಗಳು ದುಪ್ಪಟ್ಟು ದರವನ್ನು ಪಡೆದುಕೊಳ್ಳುತ್ತಿವೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದೆ. ಇದರ ಲಾಭವನ್ನು ಚಾಲಕರಿಗೂ ಕೊಡ್ತಿಲ್ಲ. ಇದರಿಂದ ಲಕ್ಷಾಂತರ ರುಪಾಯಿ ಬಂಡವಾಳ ಹಾಕಿ ವಾಹನಗಳನ್ನು ಖರೀದಿ ಮಾಡಿರುವ ಚಾಲಕರಿಗೆ ತೊಂದರೆ ಆಗುತ್ತಿದೆ. ಕೂಡಲೇ ಈ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಂದು ಇನ್ನಷ್ಟು ದೊಡ್ಡ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಖಾಸಗಿ ಸಾರಿಗೆ (Private Transport) ಸಂಘಟನೆಗಳ ಅಧ್ಯಕ್ಷ ನಟರಾಜ್ ಶರ್ಮ ಹೇಳಿಕೆ ನೀಡಿದ್ದು, ಓಲಾ ಮತ್ತು ಉಬರ್ ಸಂಸ್ಥೆಗಳ ದರಗಳನ್ನು ನಿಯಂತ್ರಿಸಬೇಕು, ಅವುಗಳ ಲಾಭ ಚಾಲಕರಿಗೆ ನೀಡಬೇಕು, ಪೋರ್ಟರ್ ಕಂಪನಿಯನ್ನು ನಿರ್ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಅವರ ಹೇಳಿಕೆ ಹೀಗಿದೆ: ಸೆ.11, 2023ರಂದು ಖಾಸಗಿ ಸಾರಿಗೆ ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿದ್ದೆವು. ಬಸ್, ಆಟೋ, ಟ್ಯಾಕ್ಸಿ, ಗೂಡ್ಸ್, ಶಾಲಾ ವಾಹನಗಳು ಎಲ್ಲರೂ ಸೇರಿ ಸರ್ಕಾರದ ಮುಂದೆ 30 ಬೇಡಿಕೆಗಳನ್ನಿಟ್ಟು ಪ್ರತಿಭಟಿಸಿದೆವು. ಸಾರಿಗೆ ಸಚಿವರು 30 ಬೇಡಿಕೆಗಳಲ್ಲಿ‌ 28 ಬೇಡಿಕೆ ಈಡೇರಿಕೆ ಆಗುತ್ತದೆ ಎಂದಿದ್ದರು. ಅದರಲ್ಲಿ 26 ಬೇಡಿಕೆ ಈಡೇರಿಕೆ ಮಾಡಿದ್ದಾರೆ. ಪೋರ್ಟಲ್, ಬೈಕ್ ಟ್ಯಾಕ್ಸಿ ನಿಲ್ಲಿಸಿದ್ದಾರೆ. ʼಒಂದು ಸಿಟಿ ಒಂದು ದರʼ ಎಲ್ಲದಕ್ಕೂ ಸರ್ಕಾರದಿಂದ ನೋಟಿಫಿಕೇಶನ್ ಬಂದಿದೆ. ಆದರೆ ಸಾರಿಗೆ ಅಧಿಕಾರಿಗಳು ಅವುಗಳನ್ನು ಮಾರ್ಪಾಡು ಮಾಡದೇ ಕಸದ ಬುಟ್ಟಿಗೆ ಬಿಸಾಕಿದ್ದಾರೆ. ನಾವು ಕೇಳಿದರೆ ಕೋರ್ಟ್‌ನಲ್ಲಿ ಇದೆ ಅನ್ನುತ್ತಾರೆ.

ಅನಧಿಕೃತವಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಆಟೋ ಚಾಲಕರು ಕ್ರಮ ಕೈಗೊಳ್ಳಬಾರದು ಅಂತ ಹೇಳಿದ್ದಾರೆ. ನಾವು ಪ್ರಶ್ನೆ ಮಾಡಿದರೆ 10 ಸಾವಿರ, 20 ಸಾವಿರ ಫೈನ್ ಕಟ್ಟಿಸಿಕೊಳ್ಳುತ್ತಿದ್ದಾರೆ. ಅಧಿಕಾರಿಗಳು ಪೋನ್ ಪೇ, ಗೂಗಲ್ ಪೇ ಮೂಲಕ ಹಣ ಪಡೆಯುತ್ತಿದ್ದಾರೆ. ಇವತ್ತು ಸರ್ಕಾರದಿಂದ ಕಾನೂನಿನ ಅಡಿಯಲ್ಲಿ ಎಲ್ಲ ರೂಲ್ಸ್‌ಗಳು ಬಂದಿವೆ. ಅದಕ್ಕೆ ಅಧಿಕಾರಿಗಳು ಸಹಿ ಹಾಕೋಕೆ ಹಿಂದೆ ಮುಂದೆ ನೋಡ್ತಿದ್ದಾರೆ. ಓಲಾ ಮತ್ತು ಉಬರ್ ಸಂಸ್ಥೆಗಳು ಚಾಲಕರಿಗೆ ಎಷ್ಟು ದುಡ್ಡು ಕೊಡ್ತಿದ್ದಾರೆ ಇದು ಹೊರಗಡೆ ಬರಬೇಕು. ಪೋರ್ಟರ್ ಅನ್ನುವ ವಾಹನದ ಜಾಹಿರಾತನ್ನು ಕಿತ್ತು ಎಸೆಯುವ ಕೆಲಸವನ್ನು ಪೊಲೀಸ್ ಮತ್ತು ಸಾರಿಗೆ ಇಲಾಖೆ ಮಾಡಬೇಕು. ಆನ್‌ಲೈನ್ ಸ್ಪೆಷಲ್ ಪರ್ಮೀಟ್ ಮಾಡಬೇಕು. ನಮ್ಮ ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 11ರಂದು ಮತ್ತೆ ಪ್ರತಿಭಟನೆ ಮಾಡುತ್ತೇವೆ. ಕಳೆದ ಬಾರಿ 90% ವಾಹನಗಳು ಮಾತ್ರ ರಸ್ತೆಗಿಳಿಸದೆ ಪ್ರತಿಭಟಿಸಿದ್ದೆವು. ಈ ಬಾರಿ ಒಂದು ವಾಹನವೂ ರಸ್ತೆಗಿಳಿಯುವುದಿಲ್ಲ. ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ನಟರಾಜ್‌ ಎಚ್ಚರಿಕೆ ನೀಡಿದ್ದಾರೆ.

ವಾಹನಗಳ ಮೌಲ್ಯ ಮತ್ತು ಸರ್ಕಾರ ನಿಗದಿಪಡಿಸಿದ ದರ ಹೀಗಿದೆ:

ಹತ್ತು ಲಕ್ಷಕ್ಕಿಂತ ಕಡಿಮೆ- ನಿಗದಿತ ದರ- ಕನಿಷ್ಠ 4 ಕಿಮೀ, 100 ರುಪಾಯಿ) ಪ್ರತಿ ಕಿಮೀಗೆ- 24 ರುಪಾಯಿ
10ರಿಂದ 15 ಲಕ್ಷದ ವಾಹನ- 115 ರುಪಾಯಿ- 28 ರುಪಾಯಿ
15 ಲಕ್ಷಕ್ಕಿಂತ ಹೆಚ್ಚು – 130 ರುಪಾಯಿ- 32 ರುಪಾಯಿ

ಚಾಲಕರ ಬೇಡಿಕೆಗಳು:

1) ಓನ್ ಸಿಟಿ ಓನ್ ಫೇರ್ ಜಾರಿಯಾಗಬೇಕು
2) ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಲ್ಲಬೇಕು
3) ಆರ್ಟಿಓ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಕಾರ್ಯಾಚರಣೆ ಮಾಡಬೇಕು
4) ಪೋರ್ಟರ್ ಕಂಪನಿಯನ್ನು ಬ್ಯಾನ್ ಮಾಡಬೇಕು
5) ಸ್ಕೂಲ್ ವಾಹನಗಳಿಗೆ ಪರ್ಮಿಟ್ ನೀಡಬೇಕು

ಇದನ್ನೂ ಓದಿ: Bangalore Water Parks : ಬೆಂಗಳೂರಿನಲ್ಲಿರುವ ಪ್ರಸಿದ್ಧ ವಾಟರ್‌ ಪಾರ್ಕ್‌ಗಳಿವು…

Continue Reading

Latest

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Hathras Case: ಹತ್ರಾಸ್‌ನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ್ದಾರೆ. ಇದರ ನಡುವೆ ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ. ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Bhole Baba
Koo

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ (Hathras Case) ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 121 ಜನರು ಸಾವನ್ನಪ್ಪಿದ ಘಟನೆಯ ನಂತರ, ಈ ದುರಂತಕ್ಕೆ ಕಾರಣವಾಗಿದ್ದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಾಕರ್ ಹರಿ ಬಗ್ಗೆ ಹೆಚ್ಚಿನ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ.

ಬಾಬಾನ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣಗಳಿರುವ ಬಗ್ಗೆ ಬಹಿರಂಗವಾದ ಕೆಲವೇ ಗಂಟೆಗಳಲ್ಲಿ, ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮ ಸೇರಿದಂತೆ ಅವರ ಅಪಾರ ಸಂಪತ್ತಿನ ಬಗ್ಗೆ ವಿವರ ನೀಡುವಂತಹ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Bhole Baba

ಉತ್ತರ ಪ್ರದೇಶದ ಮೈನ್ಪುರಿಯಲ್ಲಿರುವ 13 ಎಕರೆ “ಪಂಚತಾರಾ” ಆಶ್ರಮದ ಜಮೀನಿನ ಮೌಲ್ಯ 4 ಕೋಟಿ ರೂ. ಎಂಬುದಾಗಿ ತಿಳಿದುಬಂದಿದೆ. ಇನ್ನು ಮೈನ್ಪುರಿ ಆಶ್ರಮವು ಪಂಚತಾರಾ ಹೋಟೆಲ್‌ನಲ್ಲಿರುವ ಸೌಲಭ್ಯಗಳನ್ನು ಹೊಂದಿವೆ ಎನ್ನಲಾಗಿದೆ. ಈ ಆಶ್ರಮದಲ್ಲಿ ವಾಸವಾಗಿದ್ದ, ದೇವತಾಮಾನ ಎಂದು ಕರೆಯುವ ಬಾಬಾರಿಗೆ ಈ ಆಶ್ರಮದಲ್ಲಿ ಆರು ಕೊಠಡಿಗಳನ್ನು ಮೀಸಲಿಡಲಾಗಿದೆ. ಇನ್ನೂ ಆರು ಕೊಠಡಿಗಳನ್ನು ಸಮಿತಿಯ ಸದಸ್ಯರು ಮತ್ತು ಅವರ ಸಂಸ್ಥೆಯ ಸ್ವಯಂಸೇವಕರಿಗೆ ಮೀಸಲಿಡಲಾಗಿದೆ. ಆಶ್ರಮವು ಖಾಸಗಿ ರಸ್ತೆಯನ್ನು ಮಾತ್ರವಲ್ಲದೆ ಅತ್ಯಾಧುನಿಕ ಕೆಫೆಟೇರಿಯಾವನ್ನು ಸಹ ಹೊಂದಿದೆ ಎನ್ನಲಾಗಿದೆ.

Bhole Baba

ಆಶ್ರಮಕ್ಕಾಗಿ ಭೂಮಿಯನ್ನು 3-4 ವರ್ಷಗಳ ಹಿಂದೆ ತನಗೆ ಉಡುಗೊರೆಯಾಗಿ ನೀಡಲಾಗಿದೆ ಎಂದು ಬಾಬಾ ಹೇಳಿದ್ದಾರೆ. ಆದರೆ ದಾಖಲೆಗಳು ಅವರು ಕೋಟಿಗಟ್ಟಲೆ ಮೌಲ್ಯದ ಹಲವಾರು ಆಸ್ತಿಗಳನ್ನು ಹೊಂದಿದ್ದಾರೆ ಎಂದು ಬಹಿರಂಗಪಡಿಸುತ್ತವೆ. ದೇಶದ ಇತರ ಸ್ಥಳಗಳಲ್ಲಿನ ಹೆಚ್ಚಿನ ಆಶ್ರಮಗಳು ಈ ಆಸ್ತಿಗಳ ವ್ಯಾಪ್ತಿಯಲ್ಲಿ ಬರುತ್ತದೆ ಎನ್ನಲಾಗಿದೆ.

Hathras Case

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಬಾಬಾ ಮತ್ತು ಅವರ ಸಂಸ್ಥೆ ಆಯೋಜಿಸಿದ್ದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ) ದಲ್ಲಿ ಕಾಲ್ತುಳಿತದಿಂದ ಕನಿಷ್ಠ ಏಳು ಮಕ್ಕಳು ಸೇರಿದಂತೆ 121 ಜನರ ಸಾವು ಸಂಭವಿಸಿದೆ. 80,000 ಜನರಿಗೆ ಅನುಮತಿ ನೀಡಲಾಗಿದ್ದು, 2.5 ಲಕ್ಷ ಜನರು ಕಾರ್ಯಕ್ರಮಕ್ಕೆ ಜಮಾಯಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಾಬಾ ತನ್ನ ಕಾರಿನಲ್ಲಿ ಹೊರಟಾಗ, ಜನಸಮೂಹವು ಅವರ ಆಶೀರ್ವಾದ ಪಡೆಯಲು ಅವರ ಹಿಂದೆ ಓಡಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಸ್ವಯಂಸೇವಕರು ಮತ್ತು ಬಾಬಾ ಅವರ ಭದ್ರತಾ ಪಡೆ ಜನರನ್ನು ಹಿಂದಕ್ಕೆ ತಳ್ಳಲು ಪ್ರಾರಂಭಿಸಿದರು. ಇದರಿಂದ ಹಲವಾರು ಭಕ್ತರು ಕೆಳೆಗೆ ಬಿದ್ದು ಕಾಲ್ತುಳಿತಕ್ಕೆ ಒಳಗಾದರು.
ಈ ಪ್ರಕರಣದ ಬಗ್ಗೆ ಮಾತನಾಡಿದ ಬಾಬಾ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದರು ಮತ್ತು ಈ ದುರಂತದ ಹಿಂದೆ ಸಮಾಜ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಹೇಳಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:  34 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ಕಾಶ್ಮೀರಿ ಪಂಡಿತ; ಪಾಳುಬಿದ್ದ ಮನೆ ನೋಡಿ ಭಾವುಕ

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹಾಗೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಗಾಯಾಳುಗಳು ಬೇಗನೆ ಗುಣಮುಖರಾಗುವಂತೆ ಹಾರೈಸಿದ್ದಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade: ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ.

VISTARANEWS.COM


on

Team India victory parade
Koo

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

https://twitter.com/BCCI/status/1808768308579348742

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Continue Reading
Advertisement
Sumalatha Ambareesh First Reaction To Darshan Arrest And Renuka Swamy Murder Case
ಸ್ಯಾಂಡಲ್ ವುಡ್18 seconds ago

Sumalatha Ambareesh: ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇರಲಿ ; ದರ್ಶನ್​ ಬಗ್ಗೆ ಸುಮಲತಾ ಅಂಬರೀಶ್‌​ ಮೊದಲ ಪ್ರತಿಕ್ರಿಯೆ

cm siddaramaiah MUDA scam
ಪ್ರಮುಖ ಸುದ್ದಿ1 min ago

CM Siddaramaiah: ʼಮುಡಾದ ತಪ್ಪು, ನಾನು ಸಿಎಂ ಅಂತ ಸೈಟ್‌ ಬಿಡೋಕೆ ಆಗುತ್ತಾ?ʼ ಸಿಎಂ ಸಿದ್ದರಾಮಯ್ಯ

Satsang programme on 5th July in Bengaluru
ಬೆಂಗಳೂರು19 mins ago

Bengaluru News: ಬೆಂಗಳೂರಿನಲ್ಲಿ ಜು.5ರಂದು ಸತ್ಸಂಗ ಕಾರ್ಯಕ್ರಮ

Hassan News Distribution of free notebook bag to government primary schools in Alur
ಹಾಸನ21 mins ago

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

To complete pending railway projects in the state former MP DK Suresh appeals central government
ಬೆಂಗಳೂರು23 mins ago

DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ದೇಶ32 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ41 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್1 hour ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ1 hour ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ1 hour ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ4 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌