Religion Conversion: 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ - Vistara News

ದೇಶ

Religion Conversion: 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ

Religion Conversion: ಖಜರಾನ ಗಣೇಶ ದೇವಸ್ಥಾನದಲ್ಲಿ ನಡೆದ ವೈದಿಕ ಸ್ತೋತ್ರ ಪಠಣ ಸೇರಿದಂತೆ ಹಿಂದೂ ಧಾರ್ಮಿಕ ವಿಧಿಗಳಲ್ಲಿ ಈ ವ್ಯಕ್ತಿಗಳು ಪಾಲ್ಗೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಜನರು ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021 ರ ಅಡಿಯಲ್ಲಿ ಜಿಲ್ಲಾಡಳಿತಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ, ಅವರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ಬದಲಾಯಿಸುತ್ತಿದ್ದಾರೆ ಎಂದು ಪಾವ್ರಿ ಹೇಳಿದರು.

VISTARANEWS.COM


on

Religion Conversion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಧೋರ್‌: ಬರೋಬ್ಬರಿ 30 ಮುಸಲ್ಮಾನರು ಹಿಂದೂ ಧರ್ಮಕ್ಕೆ ಮತಾಂತರ(Religion conversion)ಗೊಂಡಿರುವ ಘಟನೆ ಮಧ್ಯ ಪ್ರದೇಶ(Madhya Pradesh)ದ ಇಂಧೋರ್‌ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ. ಸ್ಥಳೀಯ ಸಂಘಟನೆ ಸಝಾ ಸಂಸ್ಕೃತಿ ಮಂಚ್‌ ಅಧ್ಯಕ್ಷ ಸ್ಯಾಮ್‌ ಪಾವ್ರಿ ಈ ಬಗ್ಗೆ ಮಾಹಿತಿ ನೀಡಿದ್ದು, ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ 2021ಯಡಿಯಲ್ಲಿ 14 ಮಹಿಳೆಯರು ಸೇರಿದಂತೆ 30 ಜನರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.

ಇಲ್ಲಿನ ಖಜರಾನ ಗಣೇಶ ದೇವಸ್ಥಾನದಲ್ಲಿ ನಡೆದ ವೈದಿಕ ಸ್ತೋತ್ರ ಪಠಣ ಸೇರಿದಂತೆ ಹಿಂದೂ ಧಾರ್ಮಿಕ ವಿಧಿಗಳಲ್ಲಿ ಈ ವ್ಯಕ್ತಿಗಳು ಪಾಲ್ಗೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಜನರು ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021 ರ ಅಡಿಯಲ್ಲಿ ಜಿಲ್ಲಾಡಳಿತಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ, ಅವರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ಬದಲಾಯಿಸುತ್ತಿದ್ದಾರೆ ಎಂದು ಪಾವ್ರಿ ಹೇಳಿದರು.

ಖಜರಾನ ಗಣೇಶ ದೇವಸ್ಥಾನದಲ್ಲಿ 30 ಮಂದಿ ಸ್ವಯಂ ಪ್ರೇರಿತವಾಗಿ ಧರ್ಮ ಬದಲಾವಣೆಗೆ ತೊಡಗಿರುವ ಬಗ್ಗೆ ನಮಗೆ ಮಾಹಿತಿ ಬಂದಿದ್ದು, ಯಾವುದೇ ಒತ್ತಡ, ಪ್ರಭಾವ, ದುರಾಸೆಗೆ ಒಳಗಾಗಿ ಧರ್ಮ ಬದಲಾಯಿಸಿರುವ ಬಗ್ಗೆ ಇದುವರೆಗೆ ಯಾವುದೇ ದೂರು ಬಂದಿಲ್ಲ, ದೂರು ಬಂದರೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಪೊಲೀಸ್ ಆಯುಕ್ತ ಅಭಿನಯ್ ವಿಶ್ವಕರ್ಮ ಪಿಟಿಐಗೆ ತಿಳಿಸಿದ್ದಾರೆ.

ಒತ್ತಾಯಪೂರ್ವಕವಾಗಿ ಅಥವಾ ವಂಚನೆ ಅಥವಾ ದುರಾಸೆಯ ಮೂಲಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸಲು ಮಧ್ಯಪ್ರದೇಶದ ಧರ್ಮ ಸ್ವಾತಂತ್ರ್ಯ ಕಾಯಿದೆ 2021 ಅನ್ನು ಜಾರಿಗೊಳಿಸಲಾಗಿದೆ ಮತ್ತು ಉಲ್ಲಂಘಿಸುವವರು 10 ವರ್ಷಗಳವರೆಗೆ ಜೈಲು ಮತ್ತು Rs1 ಲಕ್ಷ ದಂಡವನ್ನು ಎದುರಿಸಬೇಕಾಗುತ್ತದೆ.

ಕಳೆದ ವರ್ಷ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 250 ಹಿಂದುಗಳನ್ನು ಮಾತೃ ಧರ್ಮಕ್ಕೆ ವಾಪಸ್​ ಕರೆತರಲಾಗಿದ್ದು (Ghar Wapsi), ಅಖಿಲ ಭಾರತೀಯ ಘರ್​ ವಾಪ್ಸಿ ಸಮಿತಿಯ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿತ್ತು. ಕಳೆದ ವರ್ಷ ಫೆಬ್ರವರಿ 21ರಂದು ಇಲ್ಲಿನ ಚಿಕ್ನಿಪಲಿ ಎಂಬಲ್ಲಿ ಕಾರ್ಯಕ್ರಮ ಆಯೋಜಿಸಿ, ಗಂಗಾಜಲದಲ್ಲಿ ಪಾದ ತೊಳೆಯುವ ಮೂಲಕ ಮಾತೃ ಧರ್ಮಕ್ಕೆ ವಾಪಸ್​ ಕರೆತರಲಾಗಿದೆ. ಧರ್ಮ ಜಾಗರಣ್​ ಸಮನ್ವಯ ವಿಭಾಗ ಹಾಗೂ ಆರ್ಯ ಸಾಮ್​ ಸಂಸ್ಥೆಯೂ ಈ ಕಾರ್ಯಕ್ರಮದ ನೇತೃತ್ವ ವಹಿಸಿತ್ತು.

ಅಖಿಲ ಭಾರತೀಯ ಘರ್​ ವಾಪ್ಸಿ ಸಮಿತಿಯ ಪ್ರಬಲ್​ ಪ್ರತಾಪ್​ ಸಿಂಗ್​ ಜುದೇವ್​ ಅವರು ಕಾರ್ಯಕ್ರಮದ ಬಳಿಕ ಮಾತನಾಡಿ, ಕಾಂಗ್ರೆಸ್​ ಆಡಳಿತವಿರುವ ಛತ್ತೀಸ್​ಗಢದಲ್ಲಿ ಮತಾಂತರಕ್ಕೆ ಸರಕಾರದ ಆಶ್ರಯ ದೊರೆಯುತ್ತಿದೆ. ಈ ಮೂಲಕ ಹಿಂದು ಧರ್ಮವನ್ನು ದುರ್ಬಲಗೊಳಿಸುವ ತಂತ್ರ ಮಾಡಲಾಗುತ್ತಿದೆ. ಹಿಂದುಗಳು ಅದಕ್ಕೆ ಆಸ್ಪದ ಕೊಡಬಾರದು ಎಂಬುದಾಗಿ ಕರೆಕೊಟ್ಟರು.

ಜುದೇವ್​ ಹಾಗೂ ಅವರ ತಂಡ ಸುಮಾರು 20 ಸಾವಿರ ಮಂದಿಯನ್ನು ಹಿಂದು ಧರ್ಮಕ್ಕೆ ವಾಪಸ್​ ತರುವ ಕೆಲಸ ಮಾಡಿದ್ದಾರೆ. ಕಳೆದ ವರ್ಷ ಅಕ್ಟೋಬರ್​ನಲ್ಲಿ ಅವರು ಒಡಿಶಾದ ಸುಂದರ್​ಗಢ್​ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 171 ಕುಟುಂಬಗಳ 500ಕ್ಕೂ ಅಧಿಕ ಮಂದಿಯನ್ನು ಹಿಂದು ಧರ್ಮಕ್ಕೆ ವಾಪಸ್​ ಕರೆತಂದಿದ್ದರು. ಚತ್ತೀಸ್​ಗಢದಲ್ಲಿ 2021ರಲ್ಲಿ ನಡೆದ ಕಾರ್ಯಕ್ರಮದಲ್ಲಿ 1200 ಮಂದಿಯನ್ನು ಕ್ರೈಸ್ತ ಧರ್ಮದಿಂದ ಘರ್​ ವಾಪ್ಸಿ ಮಾಡಿದ್ದರು.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Om Birla: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು. ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

VISTARANEWS.COM


on

Om Birla
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ (Lok Sabha Speaker) ಓಂ ಬಿರ್ಲಾ (Om Birla) ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಈ ಬಾರಿ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಘೋಷಣೆ ಕೂಗಿದ್ದು ವಿವಾದದ ಕಿಡಿ ಹೊತ್ತಿಸಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು.

ಬಳಿಕ ಈ ವಿಚಾರ ವಿವಾದ ಎಬ್ಬಿಸಿತ್ತು. ದೇಶಾದ್ಯಂತ ಪರ-ವಿರೋಧ ಚರ್ಚೆ ನಡೆದಿದ್ದವು. ಇದರ ನಂತರ ಬಿರ್ಲಾ ಅವರು ಸದಸ್ಯರ ಪ್ರಮಾಣ ವಚನ ಸ್ವೀಕಾರ ಮತ್ತು ದೃಢೀಕರಣಕ್ಕಾಗಿ ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಿದ್ದರು. ಸಮಿತಿಯ ಶಿಫಾರಸ್ಸಿನಂತೆ ಇದೀಗ ಲೋಕಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಗಳ 389ನೇ ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಓಂ ಬಿರ್ಲಾ ಅವರು ಸ್ಪೀಕರ್ ನಿರ್ದೇಶನಗಳಿಗೆ ಹೊಸ ಷರತ್ತು ಸೇರಿಸಿದ್ದಾರೆ.

ಹೊಸ ನಿಯಮದಲ್ಲಿ ಏನಿದೆ?

ಹೊಸ ನಿಯಮದ ಪ್ರಕಾರ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮೊದಲು ಅಥವಾ ಬಳಿಕ ಯಾವುದೇ ಪದಗಳು ಅಥವಾ ಅಭಿವ್ಯಕ್ತಿಗಳನ್ನು ಬಳಸಬಾರದು. ಒಂದುವೇಳೆ ನಿಯಮ ಉಲ್ಲಂಘಿಸಿದರೆ ಸಂಸದರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ 18ನೇ ಲೋಕಸಭೆಯ ಮೊದಲ ಅಧಿವೇಶನದ ಕೊನೆಯಲ್ಲಿ ಮಾಹಿತಿ ನೀಡಿದರು.

ಏನಿದು ವಿವಾದ?

18ನೇ ಲೋಕಸಭೆಯ ಸದಸ್ಯರಾಗಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಸಾದುದ್ದೀನ್ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದರು. ಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದರು. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದರು. ಬಳಿಕ ಇದು ವ್ಯಾಪಕ ವಿವಾದ ಹುಟ್ಟು ಹಾಕಿತ್ತು.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Hathras Stampede: ಕಾಲ್ತುಳಿತದ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ. ಇದರ ಬೆನ್ನಲ್ಲೇ ಪೊಲೀಸರು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಲ್ತುಳಿತದ ಕುರಿತು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. “ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಸೇರಿದ್ದರು. ಸತ್ಸಂಗ ಮುಗಿದ ಬಳಿಕ ಇನ್ನೇನು ಭೋಲೆ ಬಾಬಾ ಹೊರಡುವವರಿದ್ದರು. ಇದೇ ವೇಳೆ ಲಕ್ಷಾಂತರ ಜನ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ, ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣವಾಗಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Continue Reading

ದೇಶ

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Agnipath Scheme: ರಾಹುಲ್‌ ಗಾಂಧಿ ಆರೋಪಕ್ಕೆ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಕರ್ತವ್ಯದಲ್ಲಿರುವಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹೇಳಿವೆ. ಒಟ್ಟಾರೆ ಮೊತ್ತದಲ್ಲಿ ಅಗ್ನಿವೀರ್ ಅಜಯ ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ ನೀಡಲಾಗಿದೆ.

VISTARANEWS.COM


on

Agnipath Scheme
Koo

ಹೊಸದಿಲ್ಲಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಅಗ್ನಿಪಥ್‌(Agnipath Scheme) ಬಗ್ಗೆ ಆರೋಪಗಳನ್ನು ಮಾಡಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi)ಗೆ ಭಾರತೀಯ ಸೇನೆ ತಿರುಗೇಟು ನೀಡಿದೆ. ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯ ವೇಳೆ ‘ಅಗ್ನಿವೀರರು ಯೂಸ್‌ ಅಂಡ್‌ ಥ್ರೋ ಕಾರ್ಮಿಕರಿದ್ದಂತೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದರು. ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟು, ಹುತಾತ್ಮ ಯೋಧರಿಗೆ ಕಿಂಚಿತ್ತೂ ಪರಿಹಾರ ನೀಡಿಲ್ಲ ಎಂದು ರಾಹುಲ್‌ ಕಿಡಿ ಕಾರಿದ್ದರು. ಇದಕ್ಕೆ ಉತ್ತರ ನೀಡಿರುವ ಭಾರತೀಯ ಸೇನೆ(Indian Army), ಕರ್ತವ್ಯದಲ್ಲಿದ್ದಾಗ ನಿಧನರಾದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರವಾಗಿ 98 ಲಕ್ಷ ರೂ ನೀಡಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

ಪರಿಹಾರ ನೀಡಿರುವ ಬಗ್ಗೆ ಸೇನೆ ಪೋಸ್ಟ್‌

ರಾಹುಲ್‌ ಗಾಂಧಿ ಆರೋಪಕ್ಕೆ ಸೇನೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡುವ ಮೂಲಕ ತಿರುಗೇಟು ಕೊಟ್ಟಿದೆ. ಕರ್ತವ್ಯದಲ್ಲಿರುವಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪೋಸ್ಟ್‌ಗಳು ಹೇಳಿವೆ. ಒಟ್ಟಾರೆ ಮೊತ್ತದಲ್ಲಿ ಅಗ್ನಿವೀರ್ ಅಜಯ ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ ನೀಡಲಾಗಿದೆ. ಅಗ್ನಿವೀರ್ ಯೋಜನೆಯ ನಿಯಮಗಳ ಅಡಿಯಲ್ಲಿ ಅನ್ವಯವಾಗುವಂತೆ ಅನುಗ್ರಹ ಪೂರ್ವಕವಾಗಿ ನೀಡಲಾಗುವ ಪರಿಹಾರ (ಎಕ್ಸ್‌- ಗ್ರೇಷಿಯಾ) ಮತ್ತು ಇತರೆ ಪ್ರಯೋಜನಗಳ ಅಂದಾಜು 67 ಲಕ್ಷ ರೂ ಮೊತ್ತವನ್ನು ಬಾಕಿ ಇರುವ ಪೊಲೀಸ್ ಪರಿಶೀಲನೆ ಬಳಿಕ ಕೂಡಲೇ ಅಂತಿಮ ಸೆಟ್ಲ್‌ಮೆಂಟ್ ಆಗಿ ಅವರ ಖಾತೆಗೆ ಜಮಾವಣೆ ಮಾಡಲಾಗುವುದು. ಒಟ್ಟಾರೆ ಮೊತ್ತವು ಅಂದಾಜು 1.65 ಕೋಟಿ ರೂ,ನಷ್ಟು ಹಣ ಅವರಿಗೆ ಸಿಗಲಿದೆ ಎಂದು ಸೇನೆ ತಿಳಿಸಿದೆ.

ಹುತಾತ್ಮ ಯೋಧನ ತಂದೆ ಜೊತೆ ರಾಹುಲ್‌ ಮಾತುಕತೆ

ಹುತಾತ್ಮ ಯೋಧ ಅಜಯ್‌ ಕುಮಾರ್‌ ಅವರ ತಂದೆ ಜೊತೆಮಾತುಕತೆ ನಡೆಸಿರುವ ವಿಡಿಯೋವನ್ನು ಎಕ್ಸ್‌ನಲ್ಲಿ ಹರಿಬಿಟ್ಟಿರುವ ರಾಹುಲ್‌ ಗಾಂಧಿ, ಸರ್ಕಾರದಿಂದ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಯಾವುದೇ ಆರ್ಥಿಕ ನೆರವು ಸಿಕ್ಕಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಸಾಲದೆನ್ನುವುದಕ್ಕೆ ಅಜಯ್‌ ಕುಮಾರ್‌ ಅವರ ತಂದೆ ಕೂಡ ಸೇನೆ ಹಾಗೂ ಸರ್ಕಾರದಿಂದ ಕಿಂಚಿತ್ತೂ ಪರಿಹಾರ ಸಿಕ್ಕಿಲ್ಲ ಎಂದು ದೂರಿದ್ದರು.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Continue Reading

ಸಿನಿಮಾ

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಕಲ್ಕಿ 2898ಎಡಿ (Kalki 2898 AD) ಚಿತ್ರ ಸಾಕಷ್ಟು ಪ್ರೇಕ್ಷಕರ ಮನ ಗೆದ್ದಿದೆ. ಪ್ರಭಾಸ್- ದೀಪಿಕಾ ಪಡುಕೋಣೆ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರ ಹಲವು ಕಾರಣಗಳಿಂದ ವಿಶೇಷ ಎಂದೆನಿಸಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಚಿತ್ರ ನೋಡುವ ಮುನ್ನವೇ ಮನಸ್ಸನ್ನು ಚಿತ್ರ ನೋಡಲು ಪ್ರೇರೇಪಿಸುವಂತೆ ಮಾಡುತ್ತದೆ. ಅದು ಯಾವುದು ಗೊತ್ತೇ?

VISTARANEWS.COM


on

By

Kalki 2898 AD
Koo

ವಿಶ್ವದಾದ್ಯಂತ (world) ಅದ್ಧೂರಿಯಾಗಿ ಜೂನ್ 27ರಂದು ತೆರೆ ಕಂಡಿರುವ ಕಲ್ಕಿ 2898 ಎಡಿ (Kalki 2898 AD) ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್​ನಲ್ಲಿ (box office) ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ (Indian cinema) ಮೂರನೇ ಅತೀ ದೊಡ್ಡ ಓಪನರ್ ಕಂಡ ಈ ಚಿತ್ರ ಹಲವಾರು ಕಾರಣಗಳಿಗಾಗಿ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ನೋಡದವರಿಗೂ ಈ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ನಾಗ್ ಅಶ್ವಿನ್ (Nag Ashwin) ನಿರ್ದೇಶಿಸಿರುವ ಈ ಚಿತ್ರ ಹಿಂದೂ (hindu) ಧರ್ಮಗ್ರಂಥಗಳಿಂದ ಪ್ರೇರಿತವಾಗಿದೆ. ಈಗಾಗಲೇ ಸಾಕಷ್ಟು ಮಂದಿಯ ಉತ್ಸಾಹವನ್ನು ಹೆಚ್ಚಿಸಿರುವ ಕಲ್ಕಿ 2898ಎಡಿ ಚಿತ್ರ ಪೌರಾಣಿಕ ಕಥೆಯ ಸಾರವನ್ನು ಒಳಗೊಂಡಿರುವ ವೈಜ್ಞಾನಿಕ ಚಿತ್ರ. ಈ ಚಿತ್ರವನ್ನು ವೀಕ್ಷಿಸಲು ಚಿತ್ರಮಂದಿರಗಳಿಗೆ ತೆರಳವಾ ಯೋಚನೆಯಲ್ಲಿದ್ದರೆ ನಿಮ್ಮ ಉತ್ಸಾಹವನ್ನು ಹೆಚ್ಚಿಸುವ ಚಿತ್ರದ ಹತ್ತು ಪ್ರಮುಖ ಸಂಗತಿಗಳು ಇಲ್ಲಿವೆ.


  1. 1. ಕಲ್ಕಿ 2898 ಎಡಿ ಚಿತ್ರವನ್ನು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಇದು ಈವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಲನಚಿತ್ರವಾಗಿದೆ.

2. ಚಿತ್ರವು ಭಗವಾನ್ ವಿಷ್ಣುವಿನ 10ನೇ ಮತ್ತು ಕೊನೆಯ ಅವತಾರದ ಬಗ್ಗೆ ಹೇಳುತ್ತದೆ. ಮಹಾಭಾರತ ಮತ್ತು ಕಲ್ಕಿ ಪುರಾಣದಿಂದ ಪ್ರೇರಿತವಾಗಿದೆ.

3. ಚಿತ್ರದ ಕಥೆಯು ಮಹಾಭಾರತದಿಂದ ಪ್ರಾರಂಭವಾಗುತ್ತದೆ. ಕಲ್ಕಿ 2898 ಎಡಿಯಲ್ಲಿ ವಿಷ್ಣು ಅವತಾರ ಭಗವಾನ್ ಕೃಷ್ಣ ಲೋಕದಿಂದ ನಿರ್ಗಮಿಸುವಾಗ ಕೊನೆಗೊಳ್ಳುತ್ತದೆ.


4. ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ 39 ವರ್ಷಗಳ ಅನಂತರ ಈ ಸಿನಿಮಾದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರು ಕೊನೆಯದಾಗಿ 1985ರ ಚಲನಚಿತ್ರ ಗಿರಫ್ತಾರ್ ನಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

5. ಕಲ್ಕಿ ಚಿತ್ರವನ್ನು ARRI ಅಲೆಕ್ಸಾ 65 ಕೆಮರಾದಲ್ಲಿ ಚಿತ್ರೀಕರಿಸಲಾಗಿದೆ. ಹೀಗಾಗಿ ಈ ತಂತ್ರಜ್ಞಾನವನ್ನು ಬಳಸಿದ ಮೊದಲ ಭಾರತೀಯ ಚಲನಚಿತ್ರ ಇದಾಗಿದೆ. ಅಲೆಕ್ಸಾ 65 ಕೆಮರಾವು A3ಎಕ್ಸ್ ಸಂವೇದಕವನ್ನು ಹೊಂದಿದೆ. ಇದು ಮೂರು ಲಂಬವಾಗಿ ಜೋಡಿಸಲಾದ ALEV III ಸಂವೇದಕಗಳಿಂದ ಮಾಡಲ್ಪಟ್ಟಿದೆ. ಗರಿಷ್ಠ ರೆಸಲ್ಯೂಶನ್ 6560×3100 ಅನ್ನು ಕೊಡುತ್ತದೆ. ಈ ಕೆಮರದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರ ಮಿಷನ್: ಇಂಪಾಸಿಬಲ್ – ರೋಗ್ ನೇಷನ್ (2015). ಇದನ್ನು ನೀರೊಳಗಿನ ದೃಶ್ಯಗಳನ್ನು ಸೆರೆಹಿಡಿಯಲು ಬಳಸಲಾಯಿತು. The Revenant (2015) ನ ಸರಿಸುಮಾರು 40 ಪ್ರತಿಶತವನ್ನು ಚಿತ್ರೀಕರಿಸಲು ಸಹ ಇದನ್ನು ಬಳಸಲಾಗಿದೆ.


6. ಭಾರೀ ಗಾತ್ರದ ಆರು-ಟನ್ ಎಐ ಚಾಲಿತ ರೋಬೋಟಿಕ್ ಮೂರು-ಚಕ್ರದ ಬುಜ್ಜಿ ಎಂಬ ವಾಹನವು ಮುಂದಿನ ಪೀಳಿಗೆಯ ವಾಹನವಾಗಿದ್ದು, ಇದನ್ನು ಕಲ್ಕಿ ಚಲನಚಿತ್ರಕ್ಕಾಗಿ ಪ್ರತ್ಯೇಕವಾಗಿ ಮಾಡಿಸಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಓಡಿಸುವ ವಾಹನವನ್ನು ಓಡಿಸಲು ನಿರ್ದೇಶಕ ನಾಗ್ ಅಶ್ವಿನ್ ಅವರು ಉದ್ಯಮಿ ಎಲಾನ್ ಮಸ್ಕ್ ಅವರನ್ನು ಆಹ್ವಾನಿಸಿದ್ದರು.

7. ಅಮಿತಾಭ್ ಬಚ್ಚನ್ ಅವರ ಪಾತ್ರವು ನಿಜ ಜೀವನದ ಅಶ್ವತ್ಥಾಮನಿಂದ ಪ್ರೇರಿತವಾಗಿದೆ. ಟ್ರೈಲರ್‌ನಲ್ಲಿ ಬಿಗ್ ಬಿ ಪಾತ್ರಗಳ ಹಣೆಯ ಮೇಲೆ ಕಾಣುವ ಮಣಿಯಂತಹ ವಸ್ತುವಿನ ಮಹತ್ವ ಮತ್ತು ಪ್ರಸ್ತುತತೆಯ ಬಗ್ಗೆಯೂ ಈ ಚಿತ್ರದಲ್ಲಿ ತಿಳಿಯಬಹುದು.

8. ಡ್ಯೂನ್, ಓಪನ್‌ಹೈಮರ್, ಇಂಟರ್‌ಸ್ಟೆಲ್ಲರ್, ಇನ್‌ಸೆಪ್ಶನ್, ಟೆನೆಟ್ ಮತ್ತು ಬ್ಲೇಡ್ ರನ್ನರ್ 2049ನಂತಹ ಕೆಲವು ಸಾಂಪ್ರದಾಯಿಕ ಹಾಲಿವುಡ್ ಚಲನಚಿತ್ರಗಳಲ್ಲಿ ಕೆಲಸ ಮಾಡಿದ ವಿಎಫ್ ಎಕ್ಸ್ ತಂಡವು ಕಲ್ಕಿ 2989 ಎಡಿಯಲ್ಲಿ ಕೆಲಸ ಮಾಡಿದೆ.


9. ಕಲ್ಕಿ ಚಿತ್ರದಲ್ಲಿ ಎಸ್‌.ಎಸ್. ರಾಜಮೌಳಿ, ರಾಮ್ ಗೋಪಾಲ್ ವರ್ಮಾ, ವಿಜಯ್ ದೇವರಕೊಂಡ, ನಾನಿ, ರಾಣಾ ದಗುಬಾಟಿ, ದುಲ್ಕರ್ ಸಲ್ಮಾನ್ ಮತ್ತು ಮೃಣಾಲ್ ಠಾಕೂರ್ ಅವರ ವಿಶೇಷ ಅತಿಥಿ ಪಾತ್ರಗಳಿವೆ.

ಇದನ್ನೂ ಓದಿ: Kalki 2898 AD: 1000 ಕೋಟಿ ರೂ. ಗಳಿಕೆಯತ್ತ ‘ಕಲ್ಕಿ 2898  ಎಡಿʼ; ಇಲ್ಲಿಯವರೆಗೆ ಕಲೆಕ್ಷನ್‌ ಮಾಡಿದ್ದೆಷ್ಟು?


10. ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಪಾತ್ರವನ್ನು ಚಿತ್ರದಲ್ಲಿ ಕೆಟ್ಟ ಉದ್ದೇಶಗಳನ್ನು ಹೊಂದಿರುವ ದುಷ್ಟ ಋಷಿ ಎಂದು ವಿವರಿಸಿದ್ದಾರೆ. ಇದು ಚಿತ್ರದ ಬಗ್ಗೆ ಸಾಕಷ್ಟು ಕುತೂಹಲವನ್ನು ಮೂಡಿಸುತ್ತದೆ.

Continue Reading
Advertisement
Kannada Serials TRP Gowri in trp puttakkana makkalu number 1
ಕಿರುತೆರೆ4 mins ago

Kannada Serials TRP: ಟ್ರ್ಯಾಕ್‌ಗೆ ಮರಳಿದ `ಶ್ರೀಗೌರಿ’; ಟಿಆರ್​ಪಿಯಲ್ಲಿ ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Arecanut Import
ಕೃಷಿ8 mins ago

Arecanut Import: ಅಕ್ರಮ ಅಡಿಕೆ ಆಮದು ರೋಗಕ್ಕೆ ಔಷಧವೇ ಇಲ್ಲವೇ?

Team India
ಕ್ರೀಡೆ17 mins ago

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಪ್ರಮುಖ ಸುದ್ದಿ21 mins ago

Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

Om Birla
ದೇಶ30 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ32 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ40 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ40 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest42 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್49 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ40 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ2 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ3 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌